The most-visited ಕನ್ನಡ Wikipedia articles, updated daily. Learn more...
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ ಮಾನವೇಂದ್ರೇಣ ಯಾ ಪುರೀ ನಿರ್ಮಿತಾ ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ವೇಷ ಲೇಖನಕ್ಕಾಗಿ ಇಲ್ಲಿ ನೋಡಿ. ಹಿಂದೂ ಧರ್ಮದಲ್ಲಿ, ಅವತಾರ (ಸಂಸ್ಕೃತದಲ್ಲಿ "ಅವರೋಹಣ" [ಎಂದರೆ., ಸ್ವರ್ಗದಿಂದ ಭೂಮಿಗೆ]) ದೇವರ ಉದ್ದೇಶಪೂರ್ವಕವಾದ ಅವರೋಹಣವನ್ನು ಉಲ್ಲೇಖಿಸುತ್ತದೆ (ದೇವರು ಸ್ವರ್ಗದಿಂದ ಭೂಮಿಗೆ ಒಂದು ಪುನರ್ಜನ್ಮ , ಅಥವಾ ಅವರೋಹಣ (ವೈಷ್ಣವರಿಗೆ ವಿಷ್ಣು) ಈ ಪದವನ್ನು ಹೆಚ್ಚಾಗಿ ವಿಷ್ಣುವಿನೊಂದಿಗೆ ಬಳಸಲಾಗುತ್ತದೆ. ಆದರೂ ಬೇರೆ ದೇವತೆಗಳಿಗೂ ಕೆಲವೊಮ್ಮೆ ಬಳಸಲಾಗುತ್ತದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಊಟಿ ಯು, ( உதகமண்டலம் ) pronunciation ಊಟಕಮಂಡ್ ಗಿರುವ pronunciation ಸಣ್ಣ ಹೆಸರು, (ಅಧಿಕೃತವಾಗಿ ಉದಗಮಂಡಲಂ (ತಮಿಳು:உதகமண்டலம்) ಕೆಲವೊಮ್ಮೆ ಸಂಕ್ಷಿಪ್ತವಾಗಿ ಉಧಗೈ ತಮಿಳು: உதகை ಎಂದೂ ಕರೆಯಲಾಗುತ್ತದೆ) ಒಂದು ನಗರ, ಮುನ್ಸಿಪಾಲಿಟಿ ಮತ್ತು ಭಾರತದ ತಮಿಳುನಾಡು ರಾಜ್ಯದ ನೀಲಗಿರಿ ಜಿಲ್ಲೆಯ ಜಿಲ್ಲಾ ರಾಜಧಾನಿಯಾಗಿದೆ. ಊಟಕಮಂಡ್ ನೀಲಗಿರಿ ಬೆಟ್ಟಗಳಲ್ಲಿರುವ ಒಂದು ಪ್ರಸಿದ್ಧ ಗಿರಿಧಾಮವಾಗಿದೆ. ಉದಗಮಂಡಲಂ ಎಂಬುದು ಈ ನಗರಕ್ಕಿರುವ ಅಧಿಕೃತ ತಮಿಳು ಹೆಸರಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡದಲ್ಲಿ ಶಾಸ್ತ್ರ ಸಾಹಿತ್ಯ :- ಸಂಸ್ಕೃತ ಆಲಂಕಾರಿಕ ರಾಜಶೇಖರ ಕಾವ್ಯಕವಿ, ಶಾಸ್ತ್ರಕವಿ, ಉಭಯಕವಿ ಎಂಬ ಮೂರು ಬಗೆಯ ಕೃತಿಕಾರರನ್ನು ಗುರುತಿಸುತ್ತಾನೆ: ಕಾವ್ಯಕವಿ ರಮಣೀಯವಾಗಿ ಬರೆಯಬಲ್ಲನೇ ಹೊರತು ಖಚಿತತೆ ಪ್ರಧಾನ ಲಕ್ಷಣವಾದ ಶಾಸ್ತ್ರಭಾಗಗಳನ್ನು ಬರೆಯುವಲ್ಲಿ ಅವನು ಸೋತುಬಿಡಬಹುದು. ಶಾಸ್ತ್ರಕವಿ ಶಾಸ್ತ್ರಭಾಗಗಳನ್ನು ತರ್ಕಬದ್ಧವಾಗಿ ನಿರೂಪಿಸಬಲ್ಲವನಾದರೂ ಕಾವ್ಯಭಾಗಗಳನ್ನು ಬರೆಯುವಾಗ ನೀರಸವಾಗಿ ಬಿಡಬಹುದು. ಉಭಯಕವಿ ಮಾತ್ರ ಕಾವ್ಯ ಶಾಸ್ತ್ರಗಳೆರಡನ್ನೂ ಅವುಗಳಿಗೆ ಅಪಚಾರ ವೆಸಗದಂತೆ ಬರೆಯುವ ಸಮರ್ಥ ಎಂದು ರಾಜಶೇಖರ ಅಂಥವನನ್ನು ಹೊಗಳಿದ್ದಾನೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಇಂದಿರಾ ಪ್ರಿಯದರ್ಶಿನಿ ಗಾಂಧಿಇಂದಿರಾ ಪ್ರಿಯದರ್ಶಿನಿ ಗಾಂಧಿ; ನಿ: ನೆಹರು; (೧೯ ನವೆಂಬರ್ ೧೯೧೭ – ೩೧ ಅಕ್ಟೋಬರ್ ೧೯೮೪) ೧೯೬೬ರಿಂದ ೧೯೭೭ರವೆಗೆ ಸತತ ಮೂರು ಬಾರಿ ಭಾರತ ಗಣತಂತ್ರ ದ ಪ್ರಧಾನ ಮಂತ್ರಿಯಾಗಿದ್ದರು ಮತ್ತು ನಾಲ್ಕನೇ ಬಾರಿ ೧೯೮೦ರಿಂದ ೧೯೮೪ರಲ್ಲಿ ನಡೆದ ಅವರ ಹತ್ಯೆಯವರೆಗೆ, ಒಟ್ಟು ಹದಿನೈದು ವರ್ಷಗಳ ಕಾಲ, ಪ್ರಧಾನ ಮಂತ್ರಿಯಾಗಿ ಅಧಿಕಾರದಲ್ಲಿದ್ದರು. ಅವರು ಭಾರತದ ಮೊದಲ ಮಹಿಳಾ ಪ್ರಧಾನ ಮಂತ್ರಿ. ಇಂದಿನವರೆಗೆ ಆ ಸ್ಥಾನ ಅವರ ಪಾಲಿನದ್ದೇ ಆಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ವಿಜಯನಗರ ಸಾಮ್ರಾಜ್ಯ:( 1336-1646) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. 13ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (1290 ಕ್ರಿ.ಶ - 1320 ಕ್ರಿ.ಶ.) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.