The most-visited ಕನ್ನಡ Wikipedia articles, updated daily. Learn more...
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆಯಿರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಉಭಯ ರಾಷ್ಟ್ರಗಳ ನಡುವಿನ de facto ಗಡಿಯಾಗಿರುವ ನಿಯಂತ್ರಣ ರೇಖೆಯಲ್ಲಿ(LOC)ರುವ ಭಾರತದ ನೆಲೆಗಳಿಗೆ ಪಾಕಿಸ್ತಾನದ ಸೈನಿಕರು ಮತ್ತು ಕಾಶ್ಮೀರಿ ಉಗ್ರಗಾಮಿಗಳು ನುಸುಳಿದ್ದೇ ಯುದ್ಧಕ್ಕೆ ಕಾರಣ. ಯುದ್ಧದ ಆರಂಭದ ಹಂತಗಳಲ್ಲಿ, ಕಾರ್ಗಿಲ್ ಕದನಕ್ಕೆ ಸ್ವತಂತ್ರ ಕಾಶ್ಮೀರಿ ಉಗ್ರಗಾಮಿಗಳ ಮೇಲೆ ಪಾಕಿಸ್ತಾನ ಗೂಬೆ ಕೂರಿಸಿತು, ಆದರೆ ಯುದ್ಧಾನಂತರದ ಸಾವು ನೋವುಗಳ ದಾಖಲೆಗಳು ಮತ್ತು ಆ ಬಳಿಕ ಪಾಕಿಸ್ತಾನದ ಪ್ರಧಾನ ಮಂತ್ರಿ ಮತ್ತು ಸೇನಾ ಸಿಬ್ಬಂದಿ ಮುಖ್ಯಸ್ಥರು ನೀಡಿದ ಹೇಳಿಕೆಗಳು, ಜನರಲ್ ಅಶ್ರಫ್ ರಷೀದ್ ನೇತೃತ್ವದ ಪಾಕಿಸ್ತಾನಿ ಅರೆಸೇನೆ ಪಡೆಗಳು ಈ ಯುದ್ಧದಲ್ಲಿ ಪಾಲ್ಗೊಂಡಿದ್ದನ್ನು ರುಜುವಾತು ಮಾಡಿತು.
ಅಕ್ಷೋಹಿಣಿ ಎಂಬುದು ಮಹಾಭಾರತದಲ್ಲಿ ನಡೆಯುವ ಕುರುಕ್ಷೇತ್ರದ ಮಹಾಯುದ್ಧದ ವಿವರಣೆಯಲ್ಲಿ ಬಳಸಲ್ಪಟ್ಟಿದೆ. ಅಕ್ಷೋಹಿಣಿ ಸೈನ್ಯ ಎಂಬುದು ಆಯಾ ಸೈನ್ಯದಲ್ಲಿರಬಹುದಾದ ಒಂದು ತುಕಡಿ ಅಥವಾ ಈಗಿನ ರೆಜಿಮೆಂಟ್ ಎಂದೂ ಭಾವಿಸಬಹುದಾಗಿದೆ. ನಿರ್ದಿಷ್ಟ ಸಂಖ್ಯೆಯ ಪದಾತಿದಳ,ಕುದುರೆಗಳು,ಆನೆಗಳು ಮತ್ತು ರಥಗಳು ಅಕ್ಷೋಹಿಣಿ ಸೈನ್ಯದಲ್ಲಿ ಸೇರಿಕೊಂಡಿರುತ್ತವೆ.ನಿರ್ದಿಷ್ಟವಾಗಿ ಹೇಳಬೇಕೆಂದರೆ, ಸೈನ್ಯದ ತುಕಡಿಯೊಂದರಲ್ಲಿ ೨೧,೮೭೦ ರಥಗಳು,೨೧,೮೭೦ ಆನೆಗಳು,೬೫,೬೧೦ ಕುದುರೆಗಳು ಮತ್ತು ೧,೦೯,೩೫೦ ರಷ್ಟು ಸಂಖ್ಯೆಯ ಪದಾತಿದಳವನ್ನು ಹೊಂದಿರುವ ತುಕಡಿಯನ್ನು ಒಂದು ಅಕ್ಷೋಹಿಣಿ ಸೈನ್ಯ ಎಂದು ಕರೆಯಬಹುದಾಗಿದೆ.೧ ರಥ,೧ ಆನೆ,೩ ಕುದುರೆಗಳು (ಯೋಧರೊಂದಿಗೆ) ಮತ್ತು ೫ ಪದಾತಿ ಸೈನಿಕರ ಅನುಪಾತದೊಂದಿಗೆ ಇಂಥದೊಂದು ತುಕಡಿಯನ್ನು ಕಟ್ಟಿರುವದನ್ನು ಗಮನಿಸಬಹುದು.
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮ್ಯಾಕ್ಸ್ಮುಲ್ಲರ್ (ದಿಸೆಂಬರ್ ೬,೧೮೨೩-ಅಕ್ಟೋಬರ್ ೨೮,೧೯೦೦)ಜರ್ಮನಿಯ ವಿದ್ವಾಂಸರು.ಇವರು ಬ್ರಿಟನ್ನಲ್ಲಿ ವಿಧ್ಯಾಭ್ಯಾಸ ಮಾಡಿದರು.ಸಂಸ್ಕೃತವನ್ನು ಕಲಿತು ಭಾರತದ ವೇದಗಳನ್ನು ಇಂಗ್ಲೀಷ್ ಬಾಷೆಗೆ ಅನುವಾದಿಸಿ ಪಾಶ್ವಾತ್ಯ ಜಗತ್ತಿಗೆ ಪರಿಚಯಿಸಿದರು.ರಾಮಕೃಷ್ಣ ಪರಮಹಂಸರಿಂದ ಪ್ರಭಾವಿತರಾಗಿದ್ದ ಇವರು ವೇದಾಂತದ ಪ್ರಮುಖ ಪ್ರತಿಪಾದಕರು.ಇವರ ಪುಸ್ತಕಗಳಲ್ಲಿ India, What can it Teach Us? (1883) ,Six Systems of Hindu Philosophy (1899) ಮುಂತಾದವುಗಳು ಪ್ರಮುಖವಾದವುಗಳು. ಇವರು ಎಸ್ಯದಲ್ಲಿರುವ ಭಾಷೆಗಳಿಗೆ ಉತ್ತೆಜನ ನೀಡಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(English : Kittur Chennamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವಳು, ಸ್ವಾತಂತ್ರಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಗ್ರೀಕ್ ἐνέργεια ಮೂಲ ಪದಗಳಾದ ಎನರ್ಜೀಯಾ ' (ಚಟುವಟಿಕೆ, ಕಾರ್ಯಾಚರಣೆ) ಮತ್ತು ἐνεργός ಎನರ್ಗೊಸ್' (ಸಕ್ರಿಯ, ಕಾರ್ಯನಿರತ) ಎಂಬ ಪದಗಳಿಂದ ಭೌತವಿಜ್ಞಾನದ ಶಕ್ತಿ ('ಎನರ್ಜಿ') (=ಇಂಧನ, ಬಲ) ಎಂಬ ಇಂಗ್ಲಿಷ್ ಪದವು ನಿಷ್ಪನ್ನವಾಗಿದೆ. 'ಶಕ್ತಿ' ಎಂಬುದು, ಬಲವು ನಿರ್ವಹಿಸಬಲ್ಲ ಕಾರ್ಯದ ಯಾವುದೇ ಭೌತಿಕ ಅದಿಶ ಪರಿಮಾಣವನ್ನು ಸೂಚಿಸುವುದಾಗಿದೆ. ಸಂರಕ್ಷಣಾ ನಿಯಮಕ್ಕೆ ಒಳಗಾಗುವ ವಸ್ತು ಮತ್ತು ವ್ಯವಸ್ಥೆಗಳ ಲಕ್ಷಣವೂ ಆಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಭೌತಶಾಸ್ತ್ರದಲ್ಲಿ ಯವುದೇ ಒಂದು ವಸ್ತುವಿನ ಚಲನಶಕ್ತಿಯು ಆ ವಸ್ತುವಿನ ಚಲನೆ ಅಥವಾ ಗತಿಯಿಂದ ಪಡೆಯುವಂತ ಶಕ್ತಿಯಾಗಿರುತ್ತದೆ. ಚಲನಶಕ್ತಿಯು ಒಂದು ವಸ್ತುವನ್ನು ನಿಶ್ಚಲ ಸ್ತಿತಿಯಿಂದ ಗೊತ್ತಾದ ವೇಗಕ್ಕೆ ವೇಗೋತ್ಕರ್ಷಗೊಳಿಸಲು ಮಾಡಬೇಕಾಗುವ ಕೆಲಸ ಎಂದು ವ್ಯಾಖ್ಯಾನಿಸಲಾಗಿದೆ. ವೇಗೋತ್ಕರ್ಷಗೊಂಡಾಗ ಪಡೆದಿರುವಂತಹ ಶಕ್ತಿಯನ್ನು, ಆ ವಸ್ತುವು ತನ್ನ ವೇಗ ಬದಾಲಯಿಸುವವರೆಗೂ ಉಳಸಿಕೊಂಡಿರುತ್ತದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಅಂತರರಾಷ್ಟ್ರೀಯ ಏಕಮಾನ ವ್ಯವಸ್ಥೆ – (ಇಂಗ್ಲೀಶ್ International System of Units ಅಥವಾ SI- ಎಸ್ಐ) ಒಂದು ಅಳೆಯುವ ಏಕಮಾನ ವ್ಯವಸ್ಥೆಯಾಗಿದ್ದು ಮೆಟ್ರಿಕ್ ವ್ಯವಸ್ಥೆಯ ಆಧುನಿಕ ರೂಪ. ಈ ವ್ಯವಸ್ಥೆಯಲ್ಲಿ ದಶಾಂಶಗಳನ್ನು ಅಥವಾ ಹತ್ತರ ಗುಣಕಗಳನ್ನು (ಮಲ್ಟಿಪಲ್) ಬಳಸಲಾಗಿದೆ ಮತ್ತು ಹತ್ತರ ಘಾತಗಳಲ್ಲಿ ಅಂದರೆ 102, 103, 104 ಮುಂತಾದ ಸಂಖ್ಯೆಗಳಿಂದ ಮೀಟರ್, ಗ್ರಾಂ ಮುಂತಾದ ಏಕಮಾನಕವನ್ನು ಗುಣಿಸಲಾಗುತ್ತದೆ ಅಥವಾ ವಿಭಜಿಸಲಾಗುತ್ತದೆ. ಈ ಮೂಲಕ ಈ ವ್ಯವಸ್ಥೆ ತೀರ ದೊಡ್ಡ ಅಥವಾ ತೀರ ಸಣ್ಣ ಸಂಖ್ಯೆಗಳನ್ನು ಸುಲಭವಾಗಿ ತೋರಿಸಲು ಅವಕಾಶ ಒದಗಿಸಿಕೊಡುತ್ತದೆ.
ಅರಣ್ಯನಾಶ ಎಂದರೆ ನೈಸರ್ಗಿಕವಾಗಿ ಕಾಣಿಸುವ ಅರಣ್ಯಗಳನ್ನು ಮಾನವ ಚಟುವಟಿಕೆಗಳಾದ ಕತ್ತರಿಸುವಿಕೆ ಹಾಗೂ/ಅಥವಾ ಬೆಂಕಿಯಿಂದ ಅರಣ್ಯ ಪ್ರದೇಶದ ಮರಗಿಡಗಳನ್ನು ನಾಶಕ್ಕೊಳಪಡುವ ಕ್ರಿಯೆಯಾಗಿದೆ. ಅರಣ್ಯನಾಶಕ್ಕೆ ಹಲವಾರು ಕಾರಣಗಳಿವೆ: ಮರಗಳು ಅಥವಾ ಅವುಗಳಿಂದ ದೊರಕುವ ಇದ್ದಿಲನ್ನು ಇಂಧನಕ್ಕಾಗಿ ಅಥವಾ ಮಾನವರಿಂದ ಬಳಕೆಯಾಗಲ್ಪಡುವ ಉತ್ಪನ್ನಗಳನ್ನಾಗಿ ಮಾರಾಟ ಮಾಡಲಾಗುತ್ತದೆ, ಇದರ ಜೊತೆಗೆ ತೆರವುಗೊಂಡ ಭೂಮಿಯನ್ನು ಮಾನವರು ಜಾನುವಾರುಗಳ ಮೇವಿಗಾಗಿ, ವಾಣಿಜ್ಯ ಉತ್ಪನ್ನಗಳನ್ನು ಪಡೆಯಲು, ಹಾಗೂ ವಾಸಯೋಗ್ಯ ಸ್ಥಳಗಳಿಗಾಗಿ ಬಳಕೆ ಮಾಡಲಾಗುತ್ತದೆ. ಸಾಕಷ್ಟು ಪ್ರಮಾಣದಲ್ಲಿ ಅರಣ್ಯ ಪುನರ್ ನಿರ್ಮಾಣ ಮಾಡದೇ ಜನರು ಮರಗಳನ್ನು ಕಡಿದುಹಾಕುತ್ತಿದ್ದಾರೆ, ಇದರಿಂದಾಗಿ ವಾಸಸ್ಥಾನಗಳಿಗೆ ಆದ ಹಾನಿಯಿಂದಾಗಿ ಜೀವ ವೈವಿಧ್ಯತೆ ನಾಶವಾಗಿದ್ದು ವಾತಾವರಣದಲ್ಲಿ ಶುಷ್ಕತೆ ಹೆಚ್ಚುತ್ತಿದೆ.
ಮಣ್ಣು ಒಂದು ಸ್ವಾಭಾವಿಕ ವಸ್ತು. ಇದರಲ್ಲಿ ಖನಿಜಾಂಶವುಳ್ಳ ವಿವಿಧ ಗಾತ್ರದ ಅನೇಕ ಪದರುಗಳಿವೆ(ಸಾಯಿಲ್ ಹಾರಿಜಾನ್ಸ್), ಇದು ತನ್ನ ಮೂಲ ವಸ್ತುವಿಗಿಂತ ಮೇಲ್ಮೈಯಲ್ಲಿ ಭೌತಿಕವಾಗಿ, ರಾಸಾಯನಿಕವಾಗಿ, ಮತ್ತು ಖನಿಜಾಂಶಗಳ ಇರುವಿಕೆಯಲ್ಲಿ ವ್ಯತ್ಯಾಸ ತೋರುತ್ತದೆ. ಇದು ರಾಸಾಯನಿಕವಾಗಿ ಹಾಗು ಪರಿಸರದ ಕ್ರಿಯೆಗಳಿಂದಾಗಿ ಮುರಿದ ಬಂಡೆಗಳಿಂದ ಅಥವಾ ಕೊಚ್ಚಿಹೋದ ಅನೇಕ ಮಾರ್ಪಾಡುಗಳನ್ನೊಳಗೊಂಡ, ಹವಾ ಪರಿಣಾಮಗಳಿಂದ ,ಮತ್ತು ಭೂಸವೆತಗಳಿಂದ ರೂಪುಗೊಂಡಿದೆ .
ಅಕೇಶಿಯಾ ಫೆರುಜಿನಿಯಾ ಎಂಬ ವೈಜ್ಞಾನಿಕ ಹೆಸರನ್ನು ಹೊಂದಿರುವ ಶಮಿ ಮರಕ್ಕೆ ಪ್ರೋಸೋಪಿಸ್ ಸಿನೇರಿಯಾ ಎಂದು ಕರೆಯಲಾಗುತ್ತದೆ. ಇದು ಪೀಬಾ ಕುಟುಂಬದ ಫ್ಯಾಬಾಸಯೆಯಲ್ಲಿನ ಹೂಬಿಡುವ ಮರವಾಗಿದೆ. ಇಂದು ಪಶ್ಚಿಮ ಏಷ್ಯಾದ ಶುಷ್ಕ ಭಾಗಗಳು ಮತ್ತು ಅಫ್ಘಾನಿಸ್ತಾನ, ಬಹ್ರೇನ್, ಇರಾನ್, ಭಾರತ, ಒಮನ್, ಪಾಕಿಸ್ತಾನ, ಸೌದಿ ಅರೇಬಿಯಾ ಸೇರಿದಂತೆ ಆಗ್ನೇಯ ಏಷ್ಯಾದ ಭಾಗಗಳಲ್ಲಿ ಪ್ರಮುಖವಾಗಿ ನೆಲೆಯಾಗಿದೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.