The most-visited ಕನ್ನಡ Wikipedia articles, updated daily. Learn more...
ಎಕ್ಸ್ ಬಾಕ್ಸ್ ಮೈಕ್ರೋಸಾಫ್ಟ್ ನವರು ತಯಾರಿಸಿದ ಆರನೆಯ ತಲೆಮಾರಿನ ವಿಡಿಯೋ ಕ್ರೀಡಾ ಕನ್ಸೋಲ್(ಉಪಕರಣ ವ್ಯವಸ್ಥೆ). ಇದನ್ನು ಉತ್ತರ ಅಮೆರಿಕದಲ್ಲಿ ನವೆಂಬರ್ 15, 2001ರಂದು, ಜಪಾನ್ ನಲ್ಲಿ ಫೆಬ್ರವರಿ 22, 2002ರಂದು, ಮತ್ತು ಆಸ್ಟ್ರೇಲಿಯಾ ಹಾಗ ಯೂರೋಪ್ ಗಳಲ್ಲಿ ಮಾರ್ಚ್ 14, 2002ರಂದು ಬಿಡುಗಡೆ ಮಾಡಲಾಗಿದ್ದು, ಇದು ಎಕ್ಸ್ ಬಾಕ್ಸ್ 360ರ ಹಿಂದಿನ ಅವತರಣಿಕೆಯಾಗಿದೆ. ಇದರ ಮೂಲಕ ವಿಡಿಯೋ ಕ್ರೀಡಾ ಕನ್ಸೋಲ್ ಗಳ ಮಾರುಕಟ್ಟೆಗೆ ಮೈಕ್ರೋಸಾಫ್ಟ್ ಪಾದಾರ್ಪಣ ಮಾಡಿತು ಮತ್ತು ಸೋನಿಯ ಪ್ಲೇಸ್ಟೇಷನ್, ಸೀಗಾದ ಡ್ರೀಂಕ್ಯಾಸ್ಟ್, ಮತ್ತು ನಿಂಟೆಂಡೋದ ಗೇಮ್ ಕ್ಯೂಬ್ ಗಳಿಗೆ ಸೆಡ್ಡು ಹೊಡೆಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ರೈತನು ಕೃಷಿಯಲ್ಲಿ, ಅಥವಾ ಆಹಾರ ಅಥವಾ ಕಚ್ಚಾವಸ್ತುಗಳಿಗಾಗಿ ಸಾವಯವಗಳನ್ನು ಬೆಳೆಸುವಲ್ಲಿ ತೊಡಗಿರುವ ವ್ಯಕ್ತಿ. ಈ ಪದವು ಸಾಮಾನ್ಯವಾಗಿ ಜಮೀನು ಬೆಳೆಗಳು, ಹಣ್ಣಿನ ತೋಟಗಳು, ದ್ರಾಕ್ಷಿತೋಟಗಳು, ಕೋಳಿಗಳು, ಅಥವಾ ಇತರ ಜಾನುವಾರುಗಳನ್ನು ಬೆಳೆಸುವ ಸ್ವಲ್ಪ ಸಂಯೋಜನೆಯನ್ನು ಮಾಡುವ ಜನರಿಗೆ ಅನ್ವಯಿಸುತ್ತದೆ. ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು ಜನಿಸಿದವ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸೌರವ್ ಚಂದಿದಾಸ್ ಗಂಗೂಲಿ (ಜನನ: ಜುಲೈ ೮, ೧೯೭೨) - ಭಾರತ ಕ್ರಿಕೆಟ್ ತಂಡದ ಆಟಗಾರರೊಲ್ಲಬ್ಬರು ಮತ್ತು ತಂಡದ ಮಾಜಿ ನಾಯಕ. ಟೆಸ್ಟ್ ಕ್ರಿಕೆಟ್ ನಲ್ಲಿ ಇವರು ಭಾರತದ ಅತ್ಯಂತ ಸಫಲ ನಾಯಕ, ಭಾರತ ಕ್ರಿಕೆಟ್ ತಂಡವು ಇವರು ನಯಕತ್ವ ವಹಿಸಿದ್ದ ೪೯ ಟೆಸ್ಟ್ ಪಂದ್ಯಗಳಲ್ಲಿ ೨೧ ಪಂದ್ಯಗಳನ್ನು ಜಯಿಸಿದೆ.ಸೌರವ್ ನಾಯಕತ್ವದಲ್ಲಿ ಭಾರತ ೨೦೦೩ರ ವಿಶ್ವ ಕಪ್ ಫೈನಲ್ ತಲುಪಿತ್ತು.ಎದಗೈ ಆಟಗಾರರಾದ ಸೌರವ್, ೧೦,೦೦೦ಕ್ಕೂ ಹೆಚ್ಚು ರನ್ನುಗಳನ್ನು ಅಂತರರಾಷ್ಟ್ರೀಯ ಓಂದು ದಿನದ ಕ್ರಿಕೆಟ್ ನಲ್ಲಿ ಗಳಿಸಿರುವ ಇವರನ್ನು, ಇವರ ಸಹ ಆಟಗಾರರು ಪ್ರೀತಿಯಿಂದ 'ದಾದಾ'ಯೆಂದು ಕರೆಯುತ್ತಾರೆ. ಸೌರವ್ ಗಂಗೂಲಿ ಭಾರತೀಯ ಪ್ರಿಮಿಯರ್ ಲೀಗ್ ನ, ಕೊಲ್ಕತ್ತ ನೈಟ್ ರೈಡರ್ಸ್ ತಂಡದ ನಾಯಕರು ಮತ್ತು 'ಐಕಾನ್ ಆಟಗಾರ'.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ರಾಧಿಕಾ, ರಾಧಾರಾಣಿ ಮತ್ತು ರಾಧಿಕಾ ರಾಣಿ ಎಂದೂ ಕರೆಯಲ್ಪಡುವ ರಾಧೆಯನ್ನು ಬಹುತೇಕ ಯಾವಾಗಲೂ ಕೃಷ್ಣನ ಪಕ್ಕದಲ್ಲಿ ಚಿತ್ರಿಸಲಾಗುತ್ತದೆ ಮತ್ತು ಪ್ರಮುಖವಾಗಿ ರಾಧೆಯನ್ನು ಮೂಲ ದೇವತೆ ಅಥವಾ ಶಕ್ತಿಯೆಂದು ಪರಿಗಣಿಸುವ ಇಂದಿನ ವಲ್ಲಭ ಹಾಗೂ ಗೌಡೀಯ ವೈಷ್ಣವ ಪಂಥಗಳ ದೇವತಾಶಾಸ್ತ್ರದಲ್ಲಿ ಚಿತ್ರಿಸಲಾಗಿದೆ. ನಿಂಬಾರ್ಕ ಸಂಪ್ರದಾಯದಲ್ಲಿ ರಾಧೆಯು ಪ್ರಧಾನ ಪೂಜಾ ದೇವತೆ ಕೂಡ ಆಗಿದ್ದಾಳೆ, ಏಕೆಂದರೆ ಈ ಸಂಪ್ರದಾಯದ ಸ್ಥಾಪಕ ನಿಂಬಾರ್ಕನು ರಾಧೆ ಹಾಗೂ ಕೃಷ್ಣ ಒಟ್ಟಾಗಿ ಪರಮ ಸತ್ಯವನ್ನು ನಿರ್ಮಿಸುತ್ತಾರೆ ಎಂದು ಘೋಷಿಸಿದನು. ರಾಧೆಯನ್ನು ಭಾಗವತ ಪುರಾಣ, ವಿಷ್ಣು ಪುರಾಣ, ಹರಿವಂಶ ಅಥವಾ ಮಹಾಭಾರತದಂತಹ ಪುಸ್ತಕಗಳಲ್ಲಿ ಎಲ್ಲೂ ಉಲ್ಲೇಖಿಸಿಲ್ಲ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಪಾಂಡವರು ಮಹಾಭಾರತದಲ್ಲಿ ಕಂಡುಬರುವ ಪಾತ್ರಗಳು - ಪಾಂಡು ಹಾಗೂ ಕುಂತಿ-ಮಾದ್ರಿಯರ ಮಕ್ಕಳು.ಪಾಂಡುವಿನ ಮಕ್ಕಳಾದ್ದರಿಂದ ಪಾಂಡವರೆಂದು ಕರೆಯಲ್ಪಟ್ಟರು.ಪಾಂಡವರು ಐದು ಜನ.ಐದು ಜನಕ್ಕೂ ಒಬ್ಬಳೇ ಪತ್ನಿ ದ್ರೌಪದಿ. ಕುಂತಿಯ ಮಕ್ಕಳು:-ಯುಧಿಷ್ಠಿರ (ಯಮನಿಂದ) ಭೀಮ (ವಾಯುವಿನಿಂದ) ಅರ್ಜುನ (ಇಂದ್ರನಿಂದ)ಮಾದ್ರಿಯ ಮಕ್ಕಳು:- (ಅವಳಿಗಳು)ನಕುಲ (ಅಶ್ವಿನಿ ದೇವತೆಗಳಿಂದ) ಸಹದೇವ (ಅಶ್ವಿನಿ ದೇವತೆಗಳಿಂದ) ಪಾಂಡವರ ಪತ್ನಿ ದ್ರೌಪದಿ.ಮಹಾಭಾರತದ ಕಥೆಯಂತೆ, ಪಾಂಡವರು ಮತ್ತು ಅವರ ದಾಯಾದಿಗಳಾದ ಕೌರವರ ನಡುವೆ ಹಸ್ತಿನಾಪುರದ ಸಿಂಹಾಸನದ ಬಗೆಗಿನ ವಿವಾದ ಏಳುತ್ತದೆ. ಪಗಡೆಯಾಟವೊಂದರಲ್ಲಿ ಸೋತ ನಂತರ ಪಾಂಡವರು ಹನ್ನೆರಡು ವರ್ಷ ವನವಾಸ ಮತ್ತು ಒಂದು ವರ್ಷ ಅಜ್ಞಾತವಾಸ ಅನುಭವಿಸುತ್ತಾರೆ.ಇದರ ನಂತರ ರಾಜ್ಯದ ತಮ್ಮ ಹಕ್ಕನ್ನು ಪಡೆಯಲು ಕುರುಕ್ಷೇತ್ರ ಯುದ್ಧ ಆರಂಭವಾಗಿ ಕೊನೆಗೆ ಕೃಷ್ಣನ ಸಹಾಯದಿಂದ ಪಾಂಡವರು ಗೆಲ್ಲುತ್ತಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಪರಿಸರವನ್ನು ಕಲುಷಿತಗೊಳಿಸುವ,(environmental pollution) ಅಸ್ಥಿರಗೊಳಿಸುವ,ಮಲಿನಕಾರಕಗಳನ್ನು ವಾತಾವಾರಣಕ್ಕೆ ಸೇರ್ಪಡಿಸುವ, ಪರಿಸರ ವ್ಯವಸ್ಥೆಗೆ ಹಾನಿಯುಂಟುಮಾಡುವ ಅಂದರೆ ಭೌತಿಕ ವ್ಯವಸ್ಥೆ ಅಥವಾ ಜೀವಿಗಳಿಗೆ ಹಾನಿಯುಂಟು ಮಾಡುವ ಕ್ರಿಯೆಯನ್ನು ಮಾಲಿನ್ಯ ಎನ್ನಬಹುದು. ಮಾಲಿನ್ಯವು ರಾಸಾಯನಿಕ ವಸ್ತುಗಳು ಅಥವಾ ಶಕ್ತಿ ಆಕರಗಳು, ಗಲಾಟೆ, ಉಷ್ಣ ಅಥವಾ ಬೆಳಕಿನಿಂದ ಕೂಡ ಆಗಬಹುದಾಗಿದೆ. ಮಲಿನಕಾರಕಗಳು, ಮಾಲಿನ್ಯಕ್ಕೆ ಕಾರಣವಾಗುವ ವಸ್ತುಗಳು ಹೊರಗಿನ ವಸ್ತುಗಳಿಂದ ಆಗಬಹುದು ಅಥವಾ ಶಕ್ತಿ ಮೂಲಗಳಿಂದ ಅಥವಾ ನೈಸರ್ಗಿಕ ಕಾರಣಗಳಿಂದ; ಸಾಮಾನ್ಯವಾಗಿ ಪರಿಸರದಲ್ಲಿರುವ ಮಟ್ಟಕ್ಕಿಂತ ಹೆಚ್ಚಿಗೆ ಯಾವುದೇ ವಸ್ತು ಅಥವಾ ರಾಸಾಯನಿಕಗಳು ಹೆಚ್ಚಾದಾಗ ನೈಸರ್ಗಿಕ ಕಾರಣಗಳಿಂದ ಮಾಲಿನ್ಯ ಉಂಟಾಗುತ್ತದೆ ಎನ್ನಬಹುದು.
ಒಂದು ಅಥವಾ ಹೆಚ್ಚು ಸಂತತಿಯು ಮಹಿಳೆಯ ಒಳಗೆ ಅಭಿವೃದ್ಧಿಯಾಗುವ ಸಮಯವನ್ನು ಗರ್ಭಧಾರಣೆ ಎಂದು ಕರೆಯಲ್ಪಡುತ್ತದೆ..ಬಹು ಗರ್ಭಧಾರಣೆ(multiple pregnancy) ಒಂದಕ್ಕಿಂತ ಹೆಚ್ಚು ಸಂತಾನವನ್ನು ಒಳಗೊಂಡಿರುತ್ತದೆ. ಇದಕ್ಕೆ ಉದಾಹರಣೆ ಅವಳಿ ಮಕ್ಕಳು..ಪ್ರೆಗ್ನೆನ್ಸಿ ಲೈಂಗಿಕ ಸಂಭೋಗ (ಅಂಡಾಣು ಮತ್ತು ವೀರ್ಯಾಣುಗಳ ಮಿಲನ) ಅಥವಾ ಅಸಿಸ್ಟೆಡ್ ರಿಪ್ರೊಡಕ್ಟಿವ್ ಟೆಕ್ನಾಲಜಿಯಿಂದ ಉಂಟಾಗಬಹುದು.ಇದು ಸಾಮಾನ್ಯವಾಗಿ ಹಿಂದಿನ ಋತುಚಕ್ರದಿಂದ ಸುಮಾರು 40 ವಾರಗಳ ಕಾಲ ಇದ್ದು ಹೆರಿಗೆಯಲ್ಲಿ ಕೊನೆಗೊಳ್ಳುತ್ತದೆ. ಪ್ರತಿ ತಿಂಗಳು ಸುಮಾರು 29½ ದಿನಗಳನ್ನು ಹೊಂದಿದ್ದು ಸುಮಾರು ಒಂಬತ್ತು ಚಾಂದ್ರಮಾನ ತಿಂಗಳುಗಳಿಗೆ ಸಮವಾಗುತ್ತದೆ.
ಭಾರತೀಯ ಸಶಸ್ತ್ರ ದಳದ ಅತಿ ದೊಡ್ಡ ವಿಭಾಗವಾಗಿರುವ ಭಾರತೀಯ ಭೂಸೇನೆಯು ನೆಲದ ಮೇಲಿನ ಸೈನಿಕ ಕಾರ್ಯಾಚರಣೆಗಳನ್ನು ನಿರ್ವಹಿಸುತ್ತದೆ. ರಾಷ್ಟ್ರೀಯ ಭದ್ರತೆ, ಬಾಹ್ಯ ಆಕ್ರಮಣ ಹಾಗೂ ಅಪಾಯಗಳಿಂದ ಭಾರತದ ರಕ್ಷಣೆ ಹಾಗೂ ತನ್ನ ಸರಹದ್ದಿನ ಒಳಗೆ ಶಾಂತಿ ಹಾಗೂ ಭದ್ರತೆಯನ್ನು ಕಾಪಾಡುವುದು ಇದರ ಪ್ರಾಥಮಿಕ ಗುರಿಯಾಗಿದೆ. ಇಬ್ಬರು ಅಧಿಕಾರಿಗಳಿಗೆ ಪಂಚತಾರಾ ದರ್ಜೆಯಾದ ಫೀಲ್ಡ್ ಮಾರ್ಷಲ್ ದರ್ಜೆಯನ್ನು ಪ್ರದಾನ ಮಾಡಲಾಗಿದೆ, ಇದೊಂದು ಶ್ರೇಷ್ಠ ಗೌರವದ ವಿಧ್ಯುಕ್ತ ಸ್ಥಾನವಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ (ಆಂಗ್ಲ: ISRO - Indian Space Research Organisation). ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತ.ನಾ), ಹಾಸನ(ಕರ್ನಾಟಕ) ಮತ್ತು ಶ್ರಿಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಭಾಷಾಶಾಸ್ತ್ರದಲ್ಲಿ, ಒಂದು ನಾಮಪದ ವು ಒಂದು ದೊಡ್ಡ, ಮುಕ್ತ ನಿಘಂಟಿನ ವರ್ಗದ ಒಂದು ಸದಸ್ಯನಾಗಿದ್ದು, ಸದರಿ ನಿಘಂಟಿನ ವರ್ಗದ ಸದಸ್ಯರು ವಾಕ್ಯಾಂಶವೊಂದರ ಕರ್ತೃಪದ, ಕ್ರಿಯಾಪದವೊಂದರ ಕರ್ಮ, ಅಥವಾ ಉಪಸರ್ಗವೊಂದರ ಕರ್ಮದಲ್ಲಿನ ಮುಖ್ಯ ಪದವಾಗಿ ಸಂಭವಿಸಲು ಸಾಧ್ಯವಿದೆ.ನಿಘಂಟಿನ ವರ್ಗಗಳ ಸದಸ್ಯರು, ಅಭಿವ್ಯಕ್ತಿಗಳ ಇತರ ಬಗೆಗಳೊಂದಿಗೆ ಹೇಗೆ ಬೆರೆಯುತ್ತವೆ ಎಂಬುದರ ಪರಿಭಾಷೆಯಲ್ಲಿ ನಿಘಂಟಿನ ವರ್ಗಗಳು ವ್ಯಾಖ್ಯಾನಿಸಲ್ಪಡುತ್ತವೆ. ನಾಮಪದಗಳಿಗೆ ಸಂಬಂಧಿಸಿದ ವಾಕ್ಯರಚನೆಯ ನಿಯಮಗಳು ಭಾಷೆಯಿಂದ ಭಾಷೆಗೆ ಬದಲಾಗುತ್ತವೆ. ಇಂಗ್ಲಿಷ್ ಭಾಷೆಯಲ್ಲಿ, ನಾಮಪದಗಳನ್ನು ವ್ಯಾಖ್ಯಾನಿಸುವಾಗ, ಗುಣವಾಚಿಗಳು ಹಾಗೂ ಗುಣವನ್ನು ಸೂಚಿಸುವ ಗುಣವಾಚಕಗಳೊಂದಿಗೆ ಸಂಭವಿಸಬಲ್ಲ ಮತ್ತು ನಾಮಪದದ ವಾಕ್ಯಾಂಗವೊಂದರ ಪ್ರಧಾನಭಾಗವಾಗಿ ಕಾರ್ಯನಿರ್ವಹಿಸಬಲ್ಲ ಪದಗಳಾಗಿ ನಾಮಪದಗಳು ವಿವರಿಸಲ್ಪಡುತ್ತವೆ.