The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ಬ್ಲಾಗ್ (ವೆಬ್ಲಾಗ್ ಎಂಬುದರ ಹ್ರಸ್ವ ರೂಪ)ಅಂತರ್ಜಾಲದ ಒಂದು ವಿಧವಾಗಿದ್ದು, ಸಾಮಾನ್ಯವಾಗಿ ಪ್ರತ್ಯೇಕ ಖಾಸಗಿ ವ್ಯಕ್ತಿಗಳಿಂದ ನಿರ್ವಹಿಸಲ್ಪಡುವ ತಾಣವಾಗಿರುತ್ತದೆ. ಇದರಲ್ಲಿ ಪ್ರತಿಕ್ರಿಯಾತ್ಮಕ ಲೇಖನಗಳು, ಕಾರ್ಯಕ್ರಮಗಳ ವಿವರಣೆ, ಗ್ರಾಫಿಕ್ಸ್, ವಿಡಿಯೋ ಮೊದಲಾದವುಗಳನ್ನು ನಿರಂತರವಾಗಿ ದಾಖಲಿಸಲಾಗುತ್ತದೆ. ಹೀಗೆ ದಾಖಲಿಸಲಾಗುವ ಲೇಖನಗಳು ಸಾಮಾನ್ಯವಾಗಿ ಹಿಮ್ಮುಖ ಕ್ರಮಾಂಕದಲ್ಲಿ ಪ್ರದರ್ಶನಗೊಳ್ಳುತ್ತವೆ.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಖಗೋಳ ವಿಜ್ಞಾನ ಮತ್ತು ದಿಶಾದರ್ಶನದಲ್ಲಿ, ಖಗೋಳವು ಭೂಮಿಗೆ ಏಕಕೇಂದ್ರಿತ ಮತ್ತು ಸಹಾಕ್ಷವಾಗಿರುವ "ದೈತ್ಯಾಕಾರದ ಅರ್ಧವ್ಯಾಸದ" ಒಂದು ಕಾಲ್ಪನಿಕ ಆವರ್ತಿಸುವ ಗೋಳ. ಆಕಾಶದ ಎಲ್ಲ ಭೌತಿಕವಸ್ತುಗಳು ಈ ಗೋಳದ ಮೇಲೆ ನೆಲೆಸಿರುವವೆಂದು ಭಾವಿಸಬಹುದು. ಬಾಹ್ಯಾಕಾಶ ವಿಷುವದ್ರೇಖೆ ಮತ್ತು ಬಾಹ್ಯಾಕಾಶ ಧ್ರುವಗಳು ಅವುಗಳ ಸರಿಹೊಂದುವ ಭೌಗೋಳಿಕ ಪರಿಕಲ್ಪನೆಗಳಿಂದ ಕಲ್ಪಿಸಲಾದ ಸಮಾನ ಪರಿಕಲ್ಪನೆಗಳಾಗಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಕಸದ ಸಂಗ್ರಹ, ಸಾಗಣೆ, ಸಂಸ್ಕರಣೆ, ಮರುಬಳಕೆ ಅಥವಾ ವಿಲೆವಾರಿ ಹಾಗು ತ್ಯಾಜ್ಯ ವಸ್ತುಗಳ ನಿರ್ವಹಣೆಯನ್ನು ತಾಜ್ಯ ನಿರ್ವಹಣೆ ಎನ್ನುತ್ತೇವೆ.ಮಾನವನು ಬಳಸಿದ ವಸ್ತುಗಳ ಉಳಿದ ಭಾಗವನ್ನು ತ್ಯಾಜ್ಯದ ಉಗಮ ಎಂದು ಹೇಳಬಹುದು. ಈ ವ್ಯರ್ಥ ವಸ್ತುಗಳು ಮನುಷ್ಯನ ಆರೋಗ್ಯ, ಪರಿಸರ ಸೌಂದರ್ಯದ ಮೇಲೆ ಕೆಟ್ಟ ಪ್ರಭಾವ ಬೀರುತ್ತವೆ. ಇದರ ಜೊತೆಯಲ್ಲಿ ಕಸದೊಳಗಿನ ರಸ ತೆಗೆಯಲು ಕೂಡಾ ಇವು ಸಂಪನ್ಮೂಲಗಳಾಗಿ ಬಹುಮುಖ್ಯ ಪಾತ್ರ ನಿರ್ವಹಿಸುತ್ತವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜನಪದ ಕ್ರೀಡೆಗಳು ಗ್ರಾಮೀಣ ಜನರಿಂದ ಮನೋರಂಜನೆಗಾಗಿ, ದೈಹಿಕ ವ್ಯಾಯಾಮಕ್ಕಾಗಿ ರಚಿಸಲ್ಪಟ್ಟ ಆಟಗಳು. ಇವುಗಳಲ್ಲಿ ಕಂಡು ಬರುವ ಸಾಮಾನ್ಯ ಅಂಶವೆಂದರೆ ಇವು ಅತೀ ಕಡಿಮೆ ಹಾಗೂ ಸುಲಭದಲ್ಲಿ ದೊರಕುವ ಸಾಮಗ್ರಿಗಳನ್ನು ಬಳಸಿ ಕೊಂಡುಆಟವಾಡಿ ನೆರೆದವರನ್ನು ರಂಜಿಸುವುದು. ಲಗೋರಿ, ಕುಂಟೇ ಬಿಲ್ಲೆ, ಮರಕೋತಿಯಾಟ, ಚಿನ್ನಿದಾಂಡು, ಬುಗುರಿ, ಕಣ್ಣು ಮುಚ್ಚಾಲೆ, ಅಳ್ಳುಮನೆ, ಆಣೆಕಲ್ಲು, ಹಗ್ಗಜಗ್ಗಾಟ ಮುಂತಾದುವು ಜನಪದ ಕ್ರೀಡೆಗಳಾಗಿವೆ.