The most-visited ಕನ್ನಡ Wikipedia articles, updated daily. Learn more...
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇದೇ ಹೆಸರಿನ ಕಾದಂಬರಿಯ ಬಗ್ಗೆ ಲೇಖನಕ್ಕಾಗಿ ಇಲ್ಲಿ ನೋಡಿ. ಗ್ರಹಣವು ಒಂದು ಬಾಹ್ಶಾಕಾಶದವಸ್ತುವು ಮತ್ತೊಂದರ ನೆರಳಿನಲ್ಲಿ ಚಲಿಸಿದಾಗ ಉಂಟಾಗುವ ಒಂದು ಖಗೋಳಶಾಸ್ತ್ರೀಯ ಘಟನೆ. ಸೌರಮಂಡಲದಂತಹ ಒಂದು ತಾರಾಮಂಡಲದಲ್ಲಿ ಗ್ರಹಣ ಉಂಟಾದಾಗ, ಒಂದು ಬಗೆಯ ಸಂಯೋಗದ (ಸರಳ ರೇಖೆಯಲ್ಲಿ ಒಂದೇ ಗುರುತ್ವಾಕರ್ಷಣ ವ್ಯವಸ್ಥೆಯಲ್ಲಿನ ಮೂರು ಅಥವಾ ಹೆಚ್ಚು ಬಾಹ್ಯಾಕಾಶ ಕಾಯಗಳ ಹೊಂದಿಕೆ) ರಚನೆಯಾಗುತ್ತದೆ.
ಉತ್ತರಾಖಂಡ (ಹಿಂದಿಯಲ್ಲಿ: उत्तराखण्ड ಅಥವಾ उत्तराखंड)( ಮೊದಲಿನ ಹೆಸರು ಉತ್ತರಾಂಚಲ ) ರಾಜ್ಯವನ್ನು ಭಾರತ ಗಣರಾಜ್ಯದ ೨೭ನೆಯ ರಾಜ್ಯವನ್ನಾಗಿ ೨೦೦೦ರ ನವೆಂಬರ್ ೯ ರಂದು ರಚಿಸಲಾಯಿತು. ಉತ್ತರಪ್ರದೇಶ ರಾಜ್ಯದ ಹಿಮಾಲಯಪರ್ವತ ಪ್ರಾಂತ್ಯವನ್ನು ಬೇರಾಗಿಸಿ ಉತ್ತರಾಖಂಡ ರಾಜ್ಯವನ್ನು ಅಸ್ತಿತ್ವಕ್ಕೆ ತರಲಾಗಿದೆ. ರಾಜ್ಯದ ಉತ್ತರಕ್ಕೆ ಟಿಬೆಟ್ , ಪೂರ್ವಕ್ಕೆ ನೇಪಾಲ , ದಕ್ಷಿಣ ಹಾಗೂ ಪಶ್ಚಿಮಕ್ಕೆ ಉತ್ತರಪ್ರದೇಶ ರಾಜ್ಯ ಇವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕೊರೋನಾ ವೈರಸ (ರೋಗಾಣು)ಗಳು ಮಾನವ ಮತ್ತು ಪಕ್ಷಿಗಳು ಸೇರಿದಂತೆ ಸಸ್ತನಿಗಳಲ್ಲಿ ರೋಗಗಳನ್ನು ಉಂಟುಮಾಡುವ ವೈರಸಗಳ ಒಂದು ಗುಂಪು. ಮಾನವರಲ್ಲಿ, ವೈರಸ್ ಉಸಿರಾಟದ ಸೋಂಕನ್ನು ಉಂಟುಮಾಡುತ್ತದೆ, ಅದು ಸಾಮಾನ್ಯವಾಗಿ ಸೌಮ್ಯವಾಗಿರುತ್ತದೆ, ಆದರೆ ವಿರಳವಾಗಿ ಮಾರಕವಾಗಬಹುದು. ಹಸುಗಳು ಮತ್ತು ಹಂದಿಗಳಲ್ಲಿ ಅವು ಅತಿಸಾರಕ್ಕೆ ಕಾರಣವಾಗಬಹುದು, ಆದರೆ ಕೋಳಿಗಳಲ್ಲಿ ಇದು ಮೇಲ್ಭಾಗದ ಶ್ವಾಸೇಂದ್ರಿಯ ಕಾಯಿಲೆಗೆ ಕಾರಣವಾಗಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೆ ಅನುಚ್ಛೇದದಲ್ಲಿ ಉಲ್ಲೇಖವಾಗಿರುವ ಭಾಷೆಗಳಲ್ಲಿ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಎರಡು ಅಥವಾ ಅನೇಕ ನಾಮಪದಗಳು ಸೇರಿ ಸಮಸ್ತ ಪದವಾದಾಗ ಬೇರೊಂದು ಪದದ (ಅನ್ಯ ಪದದ) ಅರ್ಥವು ಪ್ರಧಾನವಾಗಿ ಉಳ್ಳ ಸಮಾಸಕ್ಕೆ ಬಹುವ್ರೀಹಿ ಎಂಬ ಹೆಸರು. ಹಣೆಗಣ್ಣ , ಮುಕ್ಕಣ್ಣ , ನಿಡುಮೂಗ - ಈ ಪದಗಳನ್ನು ಬಿಡಿಸಿ ಬರೆದರೆ , ಹಣೆಯಲ್ಲಿ + ಕಣ್ಣು ಉಳ್ಳವನು ಯಾರೋ ಅವನು - ಹಣೆಗಣ್ಣ (ಶಿವ) ಮೂರು + ಕಣ್ಣು ಉಳ್ಳವನು ಯಾರೋ ಅವನು - ಮುಕ್ಕಣ್ಣ (ಶಿವ)ನಿಡಿದು + ಮೂಗನ್ನು ಉಳ್ಳವನು ಯಾರೋ ಅವನು - ನಿಡುಮೂಗಹಣೆಯಲ್ಲಿ + ಕಣ್ಣು ಉಳ್ಳವ - ಈ ಎರಡೂ ಪದಗಳ ಅರ್ಥ ಇಲ್ಲಿ ಮುಖ್ಯವಲ್ಲ . ಈ ಎರಡೂ ಪದಗಳ ಅರ್ಥದಿಂದ ಹೊಳೆಯುವ ಅನ್ಯ ಪದ ಶಿವ ಮುಖ್ಯ.
ಬಾಲ್ಯ ವಿವಾಹ ಎಂದರೆ ಚಿಕ್ಕ ವಯಸ್ಸಿನಲ್ಲಿ ಹುಡುಗ-ಹುಡುಗಿಯನ್ನು ಎರಡು ಕುಟುಂಬಗಳು ಒಪ್ಪಿ ಮದುವೆ ಮಾಡುವುದು. ದೇಶದಲ್ಲಿ ಬಾಲ್ಯ ವಿವಾಹವನ್ನು ನಿಷೇಧಿಸಲಾಗಿದ್ದರೂ ಸಂಪೂರ್ಣ ನಿಯಂತ್ರಣಕ್ಕೆ ತರಲು ಸಾಧ್ಯವಾಗಿಲ್ಲ. ಹುಡುಗಿಯರಿಗೆ 18 ಹಾಗೂ ಹುಡುಗರಿಗೆ 21 ವರ್ಷವೆಂದು ವಿವಾಹಕ್ಕೆ ವಯಸ್ಸನ್ನು ನಿಗದಿಪಡಿಸಲಾಗಿದ್ದರೂ ಬಾಲ್ಯ ವಿವಾಹಗಳು ನಡೆಯುತ್ತಿರುವ ಬಗ್ಗೆ ವರದಿಯಾಗುತ್ತಲೇ ಇದೆ.
ಮಳೆಬಿಲ್ಲು (ಅಥವಾ ಕಾಮನಬಿಲ್ಲು) ಎಂಬುದೊಂದು ದೃಗ್ವೈಜ್ಞಾನಿಕ ಮತ್ತು ಪವನಶಾಸ್ತ್ರದ ವಿದ್ಯಮಾನವಾಗಿದ್ದು, ಭೂಮಿಯ ವಾತಾವರಣದಲ್ಲಿನ ಸಣ್ಣಹನಿಗಳ ಮೇಲೆ ಸೂರ್ಯನು ಬೆಳಗಿದಾಗ ಆಕಾಶದಲ್ಲಿ ಬೆಳಕಿನ ಬಣ್ಣಗಳ ಪಟ್ಟಿಯೊಂದು ಕಾಣಿಸುವಂಥ ಪರಿಣಾಮವನ್ನು ಇದು ಉಂಟು ಮಾಡುತ್ತದೆ. ಒಂದು ಬಹುವರ್ಣದ ಬಿಲ್ಲಿನ ಸ್ವರೂಪವನ್ನು ತಳೆಯುವ ಇದು ತನ್ನ ಹೊರಗಿನ ಭಾಗದಲ್ಲಿ ಕೆಂಪು ಬಣ್ಣವನ್ನೂ ಒಳಗಿನ ವಿಭಾಗದಲ್ಲಿ ನೇರಿಳೆ ಬಣ್ಣವನ್ನೂ ಹೊಂದಿರುತ್ತದೆ. ಒಂದು ಅಖಂಡವಾಗಿರುವ ಬಣ್ಣಗಳ ರೋಹಿತವನ್ನು (ಬಣ್ಣಗಳ ಪಟ್ಟಿಯನ್ನು) ಒಂದು ಮಳೆಬಿಲ್ಲು ವ್ಯಾಪಿಸಿಕೊಳ್ಳುತ್ತದೆ; ಇದರ ವಿಶಿಷ್ಟ-ವಿಸ್ಪಷ್ಟ ಪಟ್ಟಿಗಳು ಮಾನವನ ವರ್ಣ ಕಲ್ಪನಾಚಿತ್ರದ ಒಂದು ಕಲಾಕೃತಿಯಂತೆ ಭಾಸವಾಗುತ್ತವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೆರೆ-ಕಟ್ಟೆ, ನದಿ, ಅಣೆಕಟ್ಟೆ, ಸರೋವರ ಮುಂತಾದ ಕಡೆ ಶೇಖರಣೆಯಾಗಿರುವ ನೀರು ರಭಸವಾಗಿ ಉಕ್ಕಿ ಹರಿದು ವಿಶಾಲವಾದ ಭೂ ಪ್ರದೇಶವನ್ನು ಮುಳುಗಿಸುವುದೇ ಪ್ರವಾಹ ಅಥವಾ ಜಲಪ್ರವಾಹ. "ಹರಿಯುವ ನೀರು" ಎಂಬ ಅರ್ಥದಲ್ಲಿ ಈ ಪದ ಅಲೆಗಳಗಳ ಒಳಹರಿವಿಗೂ ಅನ್ವಯಿಸಬಹುದು. ನದಿ, ಸರೊವರಗಳಂಥ ನೀರಿನ ಸಂಗ್ರಹಾಗಾರಗಳಲ್ಲಿ ಸಂಗ್ರಹವಾಗಿರುವ ನೀರಿನ ಪ್ರಮಾಣ ಜಾಸ್ತಿಯಾಗಿ ಅದು ಉಕ್ಕಿ ಹರಿದಾಗ ಪ್ರವಾಹಗಳುಂಟಾಗಬಹುದು.
ಸುಭಾಷ್ ಚಂದ್ರ ಬೋಸ್ ಜನನ: ಜನವರಿ ೨೩, ೧೮೯೭ — ಮರಣ (ಮಾಹಿತಿ ಇಲ್ಲ) ನೇತಾಜಿ ಎಂದೇ ಪ್ರಸಿದ್ಧರಾದ ಭಾರತದ ಸ್ವಾತಂತ್ರ್ಯ ಸಂಗ್ರಾಮದ ಪ್ರಮುಖ ಜನನಾಯಕರಲ್ಲಿ ಒಬ್ಬರು. ಸ್ವಾಮಿ ವಿವೇಕಾನಂದರ ವಿಚಾರಗಳಿಂದ ಪ್ರಭಾವಿತರಾದ ಇವರು ಭಾರತ ಸ್ವಾತಂತ್ರ ಹೋರಾಟದಲ್ಲಿ ಅತ್ಯಂತ ವಿಶಿಷ್ಟ ಪಾತ್ರವಹಿಸಿದವರು.ಅವರು ಭಾರತದ ಮಹಾನ್ ವ್ಯಕ್ತಿಯಾಗಿದ್ದರು. ಅವರು ಭಾರತೀಯ ಸ್ವಾತಂತ್ರ್ಯದ ಕಾರಣಕ್ಕಾಗಿಯೇ ಹೋರಾಡಿದ್ದರು.
ನೆಗಡಿ ಯು [ಮೇಲ್ಭಾಗದ ಶ್ವಾಸೇಂದ್ರಿಯದ ಪ್ರದೇಶದ ವೈರಾಣುವಿನ ಸೋಂಕು (VURTI ), ಮೂಗು-ಗಂಟಲು ಕುಹರಗಳ ವೈರಾಣುವಿನ ತೀವ್ರವಾದ ಉರಿಯೂತ , ಮೂಗಿನಲ್ಲಿನ ತೀವ್ರವಾದ ಸುರಿಯುವಿಕೆ , ಅಥವಾ ಶೀತ ] ಮೇಲ್ಭಾಗದ ಉಸಿರಾಟದ ವ್ಯವಸ್ಥೆಯ ಒಂದು ಸಾಂಕ್ರಾಮಿಕವಾದ, ವೈರಾಣುವಿನ ಸೋಂಕು ಹರಡುವ ಕಾಯಿಲೆಯಾಗಿದ್ದು, ಮೂಗಿನ ವೈರಾಣುಗಳು (ರೈನೋವೈರಸ್ಗಳು) ಮತ್ತು ಮುಕುಟ ವೈರಾಣುಗಳಿಂದ (ಕರೋನಾ ವೈರಸ್ಗಳು) ಅದು ಪ್ರಧಾನವಾಗಿ ಉಂಟಾಗುತ್ತದೆ. ಒಂದು ಕೆಮ್ಮು, ನೋಯುತ್ತಿರುವ ಗಂಟಲು, ಸ್ರವಿಸುವ ಮೂಗು, ಮತ್ತು ಜ್ವರ ಇವುಗಳು ಸಾಮಾನ್ಯ ರೋಗಲಕ್ಷಣಗಳಲ್ಲಿ ಸೇರಿಕೊಂಡಿವೆ. ಇದಕ್ಕೆ ಸದ್ಯಕ್ಕೆ ಯಾವುದೇ ತಿಳಿದ ಔಷಧಿಯಿಲ್ಲ; ಆದಾಗ್ಯೂ, ರೋಗಲಕ್ಷಣಗಳು ಸಾಮಾನ್ಯವಾಗಿ 7ರಿಂದ 10 ದಿನಗಳಲ್ಲಿ ಅಪ್ರಯತ್ನಿತವಾಗಿ ಪರಿಹರಿಸಲ್ಪಟ್ಟರೆ, ಕೆಲವೊಂದು ರೋಗಲಕ್ಷಣಗಳು ಪ್ರಾಯಶಃ ಮೂರು ವಾರಗಳವರೆಗೂ ಉಳಿದುಕೊಂಡಿರುತ್ತವೆ.ನೆಗಡಿಯು ಮಾನವರಲ್ಲಿ ಹೆಚ್ಚು ಬಾರಿ ಪುನರಾವರ್ತಿಸುವ ಸೋಂಕಿನ ಕಾಯಿಲೆಯಾಗಿದ್ದು, ವರ್ಷವೊಂದರಲ್ಲಿ ವಯಸ್ಕರಲ್ಲಿ ಸರಾಸರಿಯಾಗಿ ಎರಡರಿಂದ ನಾಲ್ಕು ಬಾರಿ ಕಂಡುಬಂದರೆ, ಮಕ್ಕಳಲ್ಲಿ 6ರಿಂದ 12 ಬಾರಿ ಕಂಡುಬರುತ್ತದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakaran) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
[[ ಕೃಷಿ ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಕೃಷಿಯು ಮಾನವ ನಾಗರಿಕತೆಯ ಉಗಮಕ್ಕೆ ಕಾರಣವಾದ ಪ್ರಮುಖ ಬೆಳವಣಿಗೆಯಾಗಿತ್ತು. ಅಷ್ಟೇ ಅಲ್ಲ, ಪಳಗಿಸಿದ ಪ್ರಾಣಿಗಳು ಮತ್ತು ಸಸ್ಯಗಳ (ಅಂದರೆ, ಬೆಳೆಗಳ) ಸಂಗೋಪನೆಯಿಂದಾಗಿ ಆಹಾರದ ಮಿಗುತಾಯಗಳು ಸೃಷ್ಟಿಯಾಗುವುದರಿಂದ ಅದು ಹೆಚ್ಚು ಜನಭರಿತವಾದ ಮತ್ತು ಶ್ರೇಣೀಕೃತವಾದ ಸಮಾಜಗಳ ಬೆಳವಣಿಗೆಗೆ ಕಾರಣವಾಯಿತು.
ಸಾಗರ ಅಥವಾ ಇನ್ನಿತರ ಜಲರಾಶಿಯಲ್ಲಿ ಅಗಾಧ ಪ್ರಮಾಣದ ಚಲನೆಯುಂಟಾದಾಗ ಜನಿಸುವ ಸಾಗರದ ತರಂಗಗಳ ಸರಣಿಗೆ ಸುನಾಮಿ (ತ್ಸುನಾಮಿ) ಎಂದು ಕರೆಯಲಾಗುತ್ತದೆ. ಭೂಕಂಪ, ಜ್ವಾಲಾಮುಖಿ, ಬಾಹ್ಯಾಕಾಶದ ಬೃಹತ್ ಗಾತ್ರದ ವಸ್ತುವಿನ ಅಪ್ಪಳಿಕೆ ಇತ್ಯಾದಿ ಸುನಾಮಿ ಅಲೆಗಳನ್ನು ಹುಟ್ಟುಹಾಕುವ ಸಾಮರ್ಥ್ಯ ಪಡೆದಿವೆ. ಸುನಾಮಿಯು, ಗಮನಕ್ಕೆ ಬಾರದಷ್ಟು ಸಣ್ಣ ಪ್ರಮಾಣದಿಂದ ಹಿಡಿದು ಅತ್ಯಂತ ಹಾನಿಕರವಾದ ನೈಸರ್ಗಿಕ ವಿಕೋಪದವರೆಗೂ ತನ್ನ ಪ್ರಭಾವ ಬೀರಬಲ್ಲುದಾಗಿದೆ.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ.ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದ ಈಕೆ ಓರ್ವ ಅನಕ್ಷರಸ್ಥೆಯಾಗಿದ್ದುಕೊಂಡು ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದದ್ದಾಳೆ. ಅವರ ಈ ಕೆಲಸವನ್ನು ಭಾರತದ ರಾಷ್ಟ್ರೀಯ ಪೌರ ಪ್ರಶಸ್ತಿಯಿತ್ತು ಸನ್ಮಾನಿಸಲಾಗಿದೆ. ಅಮೇರಿಕ ಸಂಯುಕ್ತ ಸಂಸ್ಥಾನದ ಲಾಸ್ ಏಂಜಲೀಸ್ ಮತ್ತು ಓಕ್ಲ್ಯಾಂಡ್, ಕ್ಯಾಲಿಫೋರ್ನಿಯಗಳಲ್ಲಿ ಸ್ಥಿತವಾಗಿರುವ ಪರಿಸರ ಶಿಕ್ಷಣಕ್ಕಾಗಿ ತಿಮ್ಮಕ್ಕರವರ ಸಂಪನ್ಮೂಲಗಳು ಎಂಬ ಪರಿಸರವಾದಿ ಸಂಘಟನೆಯ ಹೆಸರನ್ನು ತಿಮ್ಮಕ್ಕ ಅವರನ್ನು ಆಧರಿಸಿ ಇಡಲಾಗಿದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ.ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್. ಆಕ್ಸ್ಫರ್ಡ್ ವಿಶ್ವವಿದ್ಯಾಲಯ ಮುದ್ರಣಾಲಯ ಯು.ಎಸ್, ೧೯೯೬,.ಸ್ಟುವರ್ಟ್ ರೇ ಸರ್ಬ್ಯಾಕರ್, ಸಮಾಧಿ: ದ ನ್ಯೂಮಿನಸ್ ಅಂಡ್ ಸೆಸ್ಸೇಟಿವ್ ಇನ್ ಇಂಡೋ-ಟಿಬೆಟನ್ ಯೋಗ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಗುಣ ಸಂಧಿ ಎಂಬ ಸಂಸ್ಕೃತ ಸಂಧಿಯು ಪ್ರಮುಖವಾಗಿ ಮೂರು ಸಂದರ್ಭಗಳಲ್ಲಿ ಕಂಡು ಬರುತ್ತದೆ. ಅ ಆ ಕಾರಗಳ ಮುಂದೆ ಇ ಈ ಕಾರವು ಬಂದಾಗ 'ಏ' ಕಾರವು ಉ ಊ ಕಾರವು ಬಂದಾಗ 'ಓ' ಕಾರವೂ ಋ ಕಾರವು ಬಂದಾಗ 'ಆರ್' ಕಾರವೂ ಆದೇಶವಾಗಿ ಬಂದರೆ ಗುಣಸಂಧಿ ಎನಿಸುವುದು.ಅಥವ ಅ,ಆ ಕಾರಗಳಿಗೆ ಇ,ಈ ಕಾರಗಳು ಪರವಾದರೆ, ಓ ಕಾರವು ಋ ಕಾರವು ಪರವಾದರೆ ಅರ್ ಕಾರವು ಬರುತ್ತದೆ ಇದನ್ನ ಗುಣ ಸಂದಿ ಎನ್ನುವರು. ಅ,ಆ + ಇ,ಈ ಸ್ವರಗಳು ಸಂಧಿಯಾಗಿ, 'ಏ' ಸ್ವರವಾಗಿ ಉಳಿಯುತ್ತದೆ.