The most-visited ಕನ್ನಡ Wikipedia articles, updated daily. Learn more...
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆಯ ಉದ್ದೇಶ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಹಿಮ ದಾಸ್ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ.ಫಿನ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ವಿಶ್ವ ಜೂನಿಯರ್ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಭಾರತದ ಅಥ್ಲೀಟ್ ಹಿಮದಾಸ್ ದಾಖಲೆ ನಿರ್ಮಾಣ ಮಾಡಿದ್ದು.ಕ್ರೀಡಾಕೂಟದಲ್ಲಿ ಭಾರತದ ಪರ ಮೊದಲ ಚಿನ್ನದ ಪದಕ ಗೆದ್ದ ಮೊದಲ ಅಥ್ಲೀಟ್ ಎಂಬ ಕೀರ್ತಿಗೆ ಭಾಜನರಾಗಿದ್ದಾರೆ. ಅಂಡರ್ 20 ಮಹಿಳೆಯರ 400 ಮೀಟರ್ ಓಟದ ಸ್ಪರ್ಧೆಯಲ್ಲಿ ಹಿಮದಾಸ್ ಚಿನ್ನದ ಪದಕ ಗೆಲ್ಲುವ ಮೂಲಕ ಈ ಸಾಧನೆ ಗೈದಿದ್ದಾರೆ. 18 ವರ್ಷದ ಹಿಮದಾಸ್ 400 ಮೀಟರ್ ಓಟವನ್ನು ಕೇವಲ 51.46 ಸೆಕೆಂಡ್ ಗಳಲ್ಲಿ ಪೂರ್ಣಗೊಳಿಸುವ ಮೂಲಕ ಅಗ್ರಸ್ಥಾನಗಳಿಸಿ ಚಿನ್ನದ ಪದಕಕ್ಕೆ ಮುತ್ತಿಟ್ಟಿದ್ದಾರೆ.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಹಿಂದೂ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
"ಕುಣಿಯೋಣು ಬಾರಾ ಕುಣಿಯೋಣು ಬಾ", "ಇಳಿದು ಬಾ ತಾಯಿ ಇಳಿದು ಬಾ", "ನಾನು ಬಡವಿ ಆತ ಬಡವ ಒಲವೆ ನಮ್ಮ ಬದುಕು", ಎಂದು ಆರಂಭವಾಗುವ ಕವಿತೆಗಳನ್ನು ಕೇಳದ ಕನ್ನಡಿಗನಿಲ್ಲ. ಉತ್ಸಾಹದ ಚಿಲುಮೆಯನ್ನುಕ್ಕಿಸಬಲ್ಲ, ನೊಂದ ಜೀವಕ್ಕೆ ಸಾಂತ್ವನ ನೀಡಬಲ್ಲ, ಪ್ರೀತಿ ಪ್ರೇಮಗಳನ್ನು ಮೂಡಿಸಬಲ್ಲ ಕವಿತೆಗಳನ್ನು ರಚಿಸಿಕೊಟ್ಟ ವರಕವಿ ಬೇಂದ್ರೆ. ರಸವೆ ಜನನ, ವಿರಸವೆ ಮರಣ, ಸಮರಸವೆ ಜೀವನ ಎಂದು ಜೀವನವನ್ನು ಕುರಿತು ಪರಿಣಾಮಕಾರಿಯಾಗಿ ಹೇಳಿದ ಧೀಮಂತ ಕವಿ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
೧೯೭೦ : ಭಾರತೀಯ ವಿಜ್ಞಾನಿ ಸರ್ ಚಂದ್ರಶೇಖರ ವೆಂಕಟ ರಾಮನ್ ರವರು ಸಣ್ಣ ಕಣದ ಮೂಲಕ ಬೆಳಕನ್ನು ಹಾಯಿಸಿದಾಗ ಅದರಲ್ಲಿ ಉಂಟಾಗುವ ವ್ಯತ್ಯಾಸವನ್ನು (ಚದುರುವಿಕೆ) ಕಂಡು ಹಿಡಿದರು. ಬೆಳಕಿನ ವರ್ತನೆ ಬಗ್ಗೆ ನಡೆಸಿದ ಸಂಶೋಧನೆಗಾಗಿ ೧೯೩೦ ರಲ್ಲಿ ಅವರು ಭೌತ ವಿಜ್ಞಾನಕ್ಕೆ ನೀಡಲಾಗುವ ನೊಬೆಲ್ ಪ್ರಶಸ್ತಿಯನ್ನು ಪಡೆದಿದ್ದರು.ನೊಬೆಲ್ ಪಾರಿತೋಷಕಕ್ಕೆ ಭಾಜನರಾದ ಪ್ರಪ್ರಥಮ ಭಾರತೀಯ ವಿಜ್ಞಾನಿ ರಾಮನ್ ಅವರ ಈ ಸಂಶೋಧನೆ `ರಾಮನ್ ಎಫೆಕ್ಟ್' ಎಂದೇ ಖ್ಯಾತಿ ಪಡೆದಿದೆ. ೧೯೮೭ ರಲ್ಲಿ, 'ರಾಮನ್ ಅವರ ಶತಮಾನೋತ್ಸವದ ಸಂದರ್ಭ'ದಲ್ಲಿ ಕೃತಜ್ಞತೆಯಿಂದ ಕೂಡಿದ ಭಾರತ, ಫೆಬ್ರುವರಿ, ೨೮ ನ್ನು 'ರಾಷ್ಟ್ರೀಯ ವಿಜ್ಞಾನ ದಿನ'ವೆಂದು ಘೋಷಿಸಿ, ಆ ದಿನವನ್ನು `ರಾಷ್ಟ್ರೀಯ ವಿಜ್ಞಾನ ದಿನ' ವಾಗಿ ಆಚರಿಸಲಾಗುತ್ತಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.
ಕಿತ್ತೂರು ರಾಣಿ ಚನ್ನಮ್ಮ (೧೭೭೮-೧೮೨೯)(Kittur Queen Channamma) ಕನ್ನಡನಾಡಿನ ವೀರಮಹಿಳೆಯರಲ್ಲಿ ಅಗ್ರಪಂಕ್ತಿಗೆ ಸೇರಿರುವವರು, ಸ್ವಾತಂತ್ರ-ಸ್ವಾಭಿಮಾನಗಳ ಸಾಕಾರಮೂರ್ತಿ ಕಿತ್ತೂರಿನ ರಾಣಿ. ಕಿತ್ತೂರಿನ ದೇಸಾಯಿಗಳಲ್ಲಿ ಪ್ರಸಿದ್ಧನಾದ ಮಲ್ಲಸರ್ಜನ ಕಿರಿಯ ಹೆಂಡತಿ. ತನ್ನ ಪುಟ್ಟ ರಾಜ್ಯದ ಸ್ವಾತಂತ್ರ ರಕ್ಷಣೆಗಾಗಿ ಬ್ರಿಟಿಷರ ದೊಡ್ಡ ಸೈನ್ಯದ ವಿರುದ್ಧ ಸೆಟೆದು ನಿಂತು ನಡೆಸಿದ ಹೋರಾಟ, ಅಲ್ಲಿ ತೋರಿಸಿದ ಧೈರ್ಯ, ಸಾಹಸ, ಕೆಚ್ಚುಗಳು ಚನ್ನಮ್ಮ ನನ್ನು ಅಜರಾಮರವಾದ ಕೀರ್ತಿ ಶಿಖರಕ್ಕೇರಿಸಿವೆ.
ಭಾರತ ಅಥವಾ ಇಂಡಿಯಾ ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶದ ಅಧಿಕೃತ ಹೆಸರು ಭಾರತ ಗಣರಾಜ್ಯ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದೆ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಶೂದ್ರದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊ೦ದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
==ವ್ಯಾಖ್ಯೆ ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜ ಕೇಶೀರಾಜನ ಶಬ್ದಮಣಿದರ್ಪಣ (ಕ್ರಿ.ಶ. ೧೨೬೦) ದ ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
[ಗೌತಮ ಬುದ್ಧ] (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ.. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವು ಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಶವಗುತ್ತಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ.ಈ ಅಭಿಯಾನವು ಅಧಿ ಕೃತವಾಗಿ ೨ ಅಕ್ಟೋಬರ್ ೨೦೧೪ ನವದೆಹಲಿಯಲ್ಲಿ ಪ್ರಧಾನಮಂತ್ರಿ [ನರೇಂದ್ರ ಮೋದಿ|ನರೇಂದ್ರ ಮೋದಿಯವರು] ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭವಾಗಿತ್ತು ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ನರೇಂದ್ರ ಮೋದಿಯವರು ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ. ಹೆಚ್ಚಿನ ಸಾರ್ವಜನಿಕ ಪ್ರದೇಶಗಳಲ್ಲಿ ಕೊಳೆ, ಕಸಗಳನ್ನು ನೋಡಿ ತಾವೇನೂ ಮಾಡಲಾಗದೇ, ಅವುಗಳಿಗೆ ಅನಿವಾರ್ಯವಾಗಿ ಹೊಂದಿಕೊಂಡಂತಿದ್ದ ಬಹಳಷ್ಟು ಜನರಲ್ಲಿ ಆಶಾಭಾವನೆಗಳು ಚಿಗುರೊಡೆದಿವೆ. ಮೋದಿಯವರು ಸಾರ್ವಜನಿಕರಿಗೆ ತಮ್ಮ ಪ್ರದೇಶಗಳನ್ನು ಸ್ವಚ್ಛವಾಗಿಟ್ಟುಕೊಳ್ಳಲು ಕರೆ ಜೊತೆ ಅಂಬಾನಿ, ಸಚಿನ್ ತೆಂಡೂಲ್ಕರ್ರಂತಹ ಪ್ರಭಾವಿ ವ್ಯಕ್ತಿಗಳಿಗೆ ಒಂದು ಪ್ರದೇಶವನ್ನು ಸ್ವಚ್ಛಗೊಳಿಸುವುದು ಹಾಗೂ ಇನ್ನಿತರರಿಗೂ ಅದೇ ರೀತಿ ಮಾಡುವಂತೆ ಕರೆ ನೀಡುವ ಮೂಲಕ ಅಭಿಯಾನಕ್ಕೆ ಕೈಜೋಡಿಸಲು ಆಹ್ವಾನಿಸಿದ್ದು, ಇದಕ್ಕೆ ಹಲವು ದಿಗ್ಗಜರ ಬೆಂಬಲ ಹಾಗೂ ಪೂರಕ ಸ್ಪಂದನೆಗಳಿಂದ ಈ ಅಭಿಯಾನವು ಇನ್ನಷ್ಟು ಚುರುಕುಗೊಂಡಿದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣವು ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ ವ್ಯವಸ್ಥೆಯಾಗಿದ್ದು, ಭೂಮಿಯ ಮೇಲಿನ ಜೀವಜಾಲಕ್ಕೆ ಪೂರಕವಾಗಿ ನಿಲ್ಲಲು ಅದು ಅತ್ಯಂತ ಅಗತ್ಯವಾಗಿರುತ್ತದೆ. ವಾಯು ಮಾಲಿನ್ಯದ ಕಾರಣದಿಂದ ಉಂಟಾಗುವ ವಾಯುಮಂಡಲ ಓಝೋನ್ ಬರಿದಾಗುವಿಕೆಯು, ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತರ ಪಟ್ಟಿ ಕನ್ನಡ ಭಾಷೆ
ಕೇಂದ್ರ ಸರ್ಕಾರವು ೧೯೫೫ ರಲ್ಲಿ ಸಾಹಿತ್ಯ ಅಕಾಡೆಮಿಯನ್ನು ಸ್ಠಾಪಿಸತು. ಇದುವರೆಗೆ ೬೧ ಕನ್ನಡದ ಲೇಖಕರಿಗೆ ಈ ಪ್ರಶಸ್ತಿ ಲಬಿಸಿದೆ. ೧೯೫೭ ಹಾಗೂ ೧೯೬೩ ರಲ್ಲಿ ಪ್ರಶಸ್ತಿಯನ್ನು ಕೊಡಲಾಗಿಲ್ಲ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಗೌತಮ ಬುದ್ಧ ವಿಷ್ಣುವಿನ ಅವತಾರಗಳಲೊಂದು (ಕ್ರಿ.ಪೂ ೫೫೭-೪೪೭) ಬೌದ್ಧಧರ್ಮದ ಸಂಸ್ಥಾಪಕ. ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ.
ಒಂದು ಜೀವಿಯ ದೇಹ-ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಬಹುದು. ವಿಶ್ವ ಆರೋಗ್ಯ ಸಂಸ್ಥೆಯ ೧೯೪೫ರ ಹೇಳಿಕೆಯ ಪ್ರಕಾರ "ಆರೋಗ್ಯವೆಂದರೆ ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ - ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ"ಆರೋಗ್ಯವೇ ಭಾಗ್ಯ.. ಮಾನವನಿಗೆ ಪರಿಸ್ಥಿತಿಗೆ ಹೊಂದಿಕೊಳ್ಳುವ ಮತ್ತು ದೈಹಿಕ, ಮಾನಸಿಕ ಅಥವಾ ಸಾಮಾಜಿಕ ಸವಾಲುಗಳನ್ನು ಎದುರಿಸುವಾಗ ಸ್ವಯಂ ನಿರ್ವಹಿಸುವ ಸಾಮರ್ಥ್ಯ ಇದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಒಕ್ಕೂಟ ಪ್ರಾಂತ್ಯಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
thumb|Chipko Movement|ಚಿಪ್ಕೊ ಚಳುವಳಿ ಚಿಪ್ಕೋ ಚಳುವಳಿ ಅಥವಾ ಚಿಪ್ಕೋ ಆಂದೋಲನ ಎಂಬುದು ಮಹಾತ್ಮ ಗಾಂಧಿಯವರ ಮೂಲಮಂತ್ರಗಳಾದ ಸತ್ಯಾಗ್ರಹ ಮತ್ತು ಅಹಿಂಸೆಗಳ ಮೂಲಕ ಮರಗಳನ್ನು ಅಪ್ಪಿಕೊಳ್ಳುವುದರ ಮೂಲಕ ಮರ ಕಡಿಯುವುದರ ಬಗ್ಗೆ ಅಸಹಕಾರ ತೋರಿಸಿದ ಪ್ರಮುಖ ಚಳುವಳಿಯಾಗಿದೆ. ಚಿಪ್ಕೋ ಚಳುವಳಿಯು ಮೊದಲಿಗೆ ೧೯೭೦ರಲ್ಲಿ ಉತ್ತರಖಂಡದ ಗರ್ವಾಲಹಿಮಾಲಯ ಹಾಗೂ ಉತ್ತರಪ್ರದೇಶದಲ್ಲಿ ಅತಿಯಾಗಿ ನಡೆಯುತ್ತಿದ್ದ ಅರಣ್ಯನಾಶದ ಬಗ್ಗೆ ಅರಿವು ಮೂಡಿಸುವುದರ ಮೂಲಕ ಆರಂಭವಾಯಿತು. ಮಾರ್ಚ್ ೨೬ ೧೯೭೪ರಲ್ಲಿ ಉತ್ತರಖಂಡ ರಾಜ್ಯದ ಚಮೋಲಿ ಜಿಲ್ಲೆಯ ರೇನಿಹಳ್ಳಿ ಮತ್ತು ಹೇಮ ವಾಲ್ಘಂಟೆಯಲ್ಲಿ ಕೆಲವು ಮಹಿಳೆಯರು ಭಯಬೀತರಾಗಿ ತಮ್ಮ ಕಾಡಿನ ಸಾಂಪ್ರದಾಯಿಕ ಹಕ್ಕನ್ನು ವಾಪಸ್ಸು ಪಡೆಯುವ ಸಲುವಾಗಿ ಇವರು ಮರಕಡಿಯುವುದನ್ನು ವಿರೋಧಿಸಿ ಹೋರಾಟ ನಡೆಸಿದರು.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 December 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ , ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಕನ್ನಡ ಕವಿಗಳು ಅಂದರೆ ಕನ್ನಡ ನುಡಿಯಲ್ಲಿ ಕಾವ್ಯ /ಸಾಹಿತ್ಯ ರಚನೆ ಮಾಡಿದವರು ಹಾಗೂ ಕನ್ನಡ ನಾಡು ನುಡಿ ಚರಿತ್ರೆಯನ್ನು ಬರೆದು ಸಾಹಿತ್ಯದ ಕಥೆ, ಕವನ,ಹಾಡು,ಹರಟೆ, ಪ್ರಬಂಧ, ಪ್ರವಾಸ ಕಥನ ಇತರೆ ಎಲ್ಲಾ ಪ್ರಕಾರಗಳಲ್ಲಿ ರಚಿಸುವರನ್ನು ಕವಿಗಳು ಎಂದು ಕರೆಯಲಾಗಿದೆ. ಕನ್ನಡ ಸಾಹಿತ್ಯದ ಹುಟ್ಟಿಯಿಂದಲೂ ಬೆಳೆದು ಬದುಕಿರುವ ಇಲ್ಲಿಯವರೆಗೆ ಅಂದರೆ ದುರ್ವಿನೀತ, ಶ್ರೀವಿಜಯ, ಪಂಪನಿಂದ ಹಿಡಿದು ಇಂದಿನವರೆಗೆ ನೂರಾರು ಕನ್ನಡ ಕವಿಗಳು ಕನ್ನಡ ಸಾಹಿತ್ಯಕ್ಕೆ ಭವ್ಯ ಮೆರಗು ಕೊಡುಗೆಗಳನ್ನು ನೀಡಿದ್ದಾರೆ. ಅವರ ಪರಿಚಯ ಮಾಡಿಕೊಡುವ ಸಣ್ಣ ಪ್ರಯತ್ನ ಈ ಬರಹದು.