The most-visited ಕನ್ನಡ Wikipedia articles, updated daily. Learn more...
(ಡಿಸೆಂಬರ್ ೧೯೭೭ ೪ ಜನನ)ಇವರು ೨00 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದಾರೆ. ದೆಹಲಿ ಡೇರ್ಡೆವಿಲ್ಸ್ ಮತ್ತು ಐಪಿಎಲ್ನಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡದಲ್ಲಿ ಆಡಿದರು ಮತ್ತು ೨0೧೩ ರಲ್ಲಿ ತನ್ನ ೪0 ನೇ ರಣಜಿ ಟ್ರೋಫಿ ಪ್ರಶಸ್ತಿ ಮುಂಬಯಿ ತಂಡದ ನಾಯಕತ್ವರಾಗಿದ್ದರು ತನ್ನ ಟೆಸ್ಟ್ ಹಾಗೂ ಏಕದಿನ ೧೯೯೮ ರಲ್ಲಿ ಪ್ರಥಮ ಪ್ರದರ್ಶನಗಳು ಮತ್ತು ೨೦೦೬ ರಲ್ಲಿ ಟಿ -೨0 ಚೊಚ್ಚಲ ಅವರು ಮೂರನೇ ಅತಿ ಹೆಚ್ಚು ವಿಕೆಟ್ ಪಡೆದ ಸಾಧನೆ ಮಾಡಿದ ಏಕದಿನದಲ್ಲಿ ಭಾರತ ಮತ್ತು ಭಾರತ ಫೈನಲ್ ತಲುಪಿ ಆದರೆ ಅಜಿತ್ ಅಗರ್ಕರ್ ವಿಶ್ವಕಪ್ ೨00೭ ಕ್ರಿಕೆಟ್ ವಿಶ್ವ ಕಪ್ನಲ್ಲಿ ಪಂದ್ಯಗಳಲ್ಲಿ ಹಾಗು ೨೦೦೩ ಕ್ರಿಕೆಟ್ ವಿಶ್ವಕಪ್ ೧೯೯೯ ರ ಕ್ರಿಕೆಟ್ ವಿಶ್ವ ಕಪ್ನಲ್ಲಿ, ಭಾರತ ಪ್ರತಿನಿಧಿಸಿದ್ದರು.
ಬಸವಣ್ಣ (ಬಸವ,ಬಸವೇಶ್ವರ ) ಭಾರತದ 12 ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ, ಕಲಚೂರಿ ಅರಸ ಬಿಜ್ಜಳನ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣ ಲಿಂಗ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದುರ್ಗದ ಹುಲಿ ಮದಕರಿ ನಾಯಕ , ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಇಪ್ಪತ್ತನೇ ಶತಮಾನದ ಆದಿಯಲ್ಲಿ ಇಂಗ್ಲಿಷ್ ಸಾಹಿತ್ಯ ದ ಪ್ರಭಾವದಿಂದ ಕನ್ನಡ ಸಾಹಿತ್ಯವು ಹೊಸ ಹುಟ್ಟನ್ನು ಪಡೆದು ಹಳೆಗನ್ನಡ -ನಡುಗನ್ನಡ ಸಾಹಿತ್ಯಕ್ಕಿಂತ ಬೇರೆಯಾದ ನವೋದಯ ಸಾಹಿತ್ಯವೆಂದು ಹೊಸ ಸಾಹಿತ್ಯ ಪ್ರಕಾರ ದಲ್ಲಿ ಕಾಣಿಸಿಕೊಂಡಿತು. ಇದು ಕಾದಂಬರಿ, ನಾಟಕ, ಪ್ರಬಂಧ, ವಿಮರ್ಶೆ, ಕಾವ್ಯ, ಕವನ, ಭಾವಗೀತೆ, ಹೀಗೆ ವಿವಿಧ ಪ್ರಕಾರಗಳಲ್ಲಿ ಬಹುಬೇಗ ಅಭಿವೃದ್ಧಿ ಪಡೆದು ವಿಫುಲ ಸಾಹಿತ್ಯ ಬೆಳವಣಿಗೆಗೆ ಕಾರಣವಾಯಿತು. ಇದರಲ್ಲಿ ಮುಖ್ಯವಾದ ಕಾವ್ಯ ಪ್ರಕಾರಗಳಲ್ಲಿ, ಭಾವಗೀತೆ, ಕವನ, ಕಗ್ಗ, ವಚನದ ಲಕ್ಷಣದ ಮತ್ತು ರಗಳೆ ಛಂದಸ್ಸಿನ ಸಾನೆಟ್ ಮಾದರಿಯ ಪದ್ಯಗಳು ಮುಖ್ಯವಾದವು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಮರಾಠಾ ರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಪಂಡಿತ್ ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ಶ್ರೇಷ್ಠ ನಾಯಕನಾಗಿ ಹೊರಹೊಮ್ಮಿದರು 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಸಮಾಜವಾದ ತತ್ವದ, ಪ್ರಜಾಪ್ರಭುತ್ವ ಗಣರಾಜ್ಯದ ಮತ್ತು ಜಾತ್ಯತೀತತತ್ವದ ಸಾರ್ವಭೌಮ ಸ್ವತಂತ್ರ ಆಧುನಿಕ ಭಾರತದ ಶಿಲ್ಪಿ ಎಂದು ಅವರು ಪರಿಗಣಿಸಲ್ಪಟ್ಟಿದ್ದಾರೆ .
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಇಕ್ಷ್ವಾಕು ವಂಶದ ದೊರೆ ರಾಜ ಹರಿಶ್ಚಂದ್ರ ಸತ್ಯಪಾಲನೆಗಾಗಿ ಹೆಸರಾದವನು. ತಂದೆ ಸೂರ್ಯ ವಂಶದ ದೊರೆ ತ್ರಿಶಂಕು,ತಾಯಿ ಸತ್ಯವ್ರತೆಯ ಮಗ ಮುಂದೆ ಸತ್ಯ ಹರಿಶ್ಚಂದ್ರನೆಂದು ಪ್ರಸಿದ್ಧಿ ಪಡೆದನು. ಒಂದಾನೊಂದು ಕಾಲದಲ್ಲಿ ಹರಿಶ್ಚಂದ್ರನೆಂಬ ರಾಜನು ಆಯೋಧ್ಯ ಎಂಬ ರಾಜ್ಯವನು ಚಾಣಕ್ಷ್ಯತನದಿಂದ ರಾಜ್ಯವನು ಆಳುತ್ತಿದನು ಮತ್ತು ಅವನು ಸತ್ಯವನು ಬಿಟ್ಟು ಬೇರೆ ಏನನ್ನು ಹೇಳುತ್ತಿರಲಿಲ್ಲ ಯಾವಾಗಲು ಸಂತೋಷದಿಂದ ರಾಜ್ಯಭಾರ ಮಾಡುತ್ತಿದ್ದ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ , ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
೧೯೧೨ರ ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ಭಾರತದಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಲು ಕನಿಷ್ಟ ಸದಸ್ಯರ ಸಂಖ್ಯೆ ಹತ್ತು ಇರತಕ್ಕದ್ದು.ಇದನ್ನು ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ನೋಂದಾಯಿಸಲೇಬೇಕು.ಷೇರುಗಳನ್ನು ಸದಸ್ಯರಿಗೆ ನೀಡುವುದರ ಮುಖಾಂತರ ಬಂಡವಾಳವನ್ನು ಸಂಗ್ರಹಿಸುತ್ತದೆ. ವ್ಯಾಖ್ಯಾನಗಳು ಈ.ಹೆಚ್.ಕಲ್ವರ್ಟ್ ಅವರ ಪ್ರಕಾರ "ಸಹಕಾರವು ಒಂದು ಪ್ರಕಾರದ ವ್ಯವಹಾರಿ ಸಂಘಟನೆಯಾಗಿದ್ದು,ಅದರಲ್ಲಿರುವ ವ್ಯಕ್ತಿಗಳು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸಮಾನತೆಯ ದೃಷ್ಠಿಯಿಂದ ಮಾನವರಾಗಿ ಸ್ವಯಂ ಪ್ರೇರಣೆಯಿಂದ ಒಂದುಗೂಡಿದ ಸಂಸ್ಥೆಯಾಗಿದೆ". ಸಹಕಾರಿ ಸಂಘಗಳ ಲಕ್ಷಣಗಳೆಂದರೆ:- ೧.ಸ್ವಯಂ ಪ್ರೇರಣೆಯ ಸಂಘಟನೆ:- ಸಹಕಾರಿ ಸಂಘದ ಸದಸ್ಯತ್ವ ಐಚ್ಛಿಕವಾಗಿದೆ.ಸದಸ್ಯತ್ವವು ಮುಕ್ತವಾಗಿದ್ದು,ಯಾವುದೇ ಬೇದವಿಲ್ಲದೆ ಎಲ್ಲಾ ವಯಸ್ಕರಿಗೂ ಸದಸ್ಯರಾಗಲು ಅವಕಾಶವಿದೆ.ಸದಸ್ಯರು ತಮಗೆ ಬೇಡವೆನಿಸಿದಾಗ ಸಂಘವನ್ನು ಬಿಟ್ಟುಹೋಗಬಹುದು.
[ಗೌತಮ ಬುದ್ಧ] (ಕ್ರಿ.ಪೂ ೫೬೩-೪೮೩) ಬೌದ್ಧಧರ್ಮದ ಸಂಸ್ಥಾಪಕ ಮಾತ್ರವಲ್ಲ, ಚತುರಾರ್ಯ ಸತ್ಯಗಳಾದ ದುಃಖ, ದುಃಖದ ಹುಟ್ಟು, ದುಃಖದ ಅಡಗುವಿಕೆ, ಮತ್ತು ದುಃಖ ನಿವಾರಣೆಗೆ ಒಯ್ಯುವ ಅಷ್ಟಾಂಗಿಕ ಮಾರ್ಗವನ್ನು ಕಂಡು ಹಿಡಿದ ದಾರ್ಶನಿಕ. ಭಗವಾನ್ ಗೌತಮ ಬುದ್ಧನು ಕಂಡು ಹಿಡಿದ ವಿಪಶ್ಶನ[೨] ಧ್ಯಾನ ಮಾರ್ಗವು ದುಃಖ ಮತ್ತು ಪಾಪಕರ್ಮಗಳಿಂದ ಮುಕ್ತವಾಗಲು ಸಹಾಯ ಮಾಡುತ್ತದೆ. ಇಡೀ ಜಗತ್ತಿಗೆ ಜ್ಞಾನದ ಹಿರಿಮೆಯನ್ನು ತುಂಬಲು jhaನಿಸಿದವ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
'ಕದಂಬ' ವಂಶವು ಕನ್ನಡದ ಮೊಟ್ಟ ಮೊದಲ ರಾಜ ವಂಶ. ಕನ್ನಡದಲ್ಲಿ ದೊರೆತಿರುವ ಮೊಟ್ಟಮೊದಲ ಶಾಸನವಾದ ಹಲ್ಮಿಡಿ ಶಾಸನವು ಕದಂಬರ ಆಳ್ವಿಕೆಯ ಕಾಲಕ್ಕೆ ಸೇರಿದ್ದಾಗಿದೆ.ಕದಂಬರು (ಕ್ರಿ.ಶ.೩೪೫-೫೨೫) ಇಂದಿನ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯಿಂದ ಆಳುತ್ತಿದ್ದ ಕರ್ನಾಟಕದ ಒಂದು ಪುರಾತನ ರಾಜವಂಶ. ಮುಂದೆ ಚಾಲುಕ್ಯ ಮತ್ತು ರಾಷ್ಟ್ರಕೂಟ ಸಾಮ್ರಾಜ್ಯಗಳ ಸಾಮಂತರಾಗಿ ಆಳ್ವಿಕೆ ಮುಂದುವರಿಸಿದ ಕದಂಬರರ ರಾಜ್ಯ ಗೋವಾ ಮತ್ತುಹಾನಗಲ್ ಗಳಲ್ಲಿ ಶಾಖೆಗಳನ್ನು ಹೊಂದಿತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.