The most-visited ಕನ್ನಡ Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಕಾಂತಾರ: ಒಂದು ದಂತಕಥೆ ಅಥವಾ ಕಾಂತಾರ (ಅನುವಾದ. "ನಿಗೂಢವಾದ ಕಾಡು") ಸೆಪ್ಟೆಂಬರ್ ೩೦, ೨೦೨೨ರಲ್ಲಿ ಬಿಡುಗಡೆಯಾದ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ, ಶೆಟ್ಟಿ, ಭೂತಕೋಲ ಕಲಾವಿದ ಮತ್ತು ಕಂಬಳ ಚಾಂಪಿಯನ್ ಆಗಿ ನಟಿಸಿದ್ದಾರೆ.
ಕಾಂತಾರ: ಅಧ್ಯಾಯ ೧ ಮುಂಬರುವ ಭಾರತೀಯ ಕನ್ನಡ ಭಾಷೆಯ ಪೌರಾಣಿಕ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ೨೦೨೨ ರ ಚಲನಚಿತ್ರ ಕಾಂತಾರ ದ ಪೂರ್ವಭಾವಿಯಾಗಿ, ಕಥೆಯು ಮೊದಲ ಚಿತ್ರದಲ್ಲಿ ಪರಿಚಯಿಸಲಾದ ದೈವಿಕ ಸಂಪ್ರದಾಯ ಮತ್ತು ಪೂರ್ವಜರ ಸಂಘರ್ಷದ ಮೂಲಗಳನ್ನು ಆಳವಾಗಿ ಪ್ರಸ್ತುತಪಡಿಸುತ್ತದೆ. ಚಿತ್ರೀಕರಣ ನವೆಂಬರ್ ೨೦೨೩ ರಲ್ಲಿ ಪ್ರಾರಂಭವಾಯಿತು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ವಿಜಯದಶಮಿ, ದಸರಾ, ದಸರಾ ಅಥವಾ ದಶೈನ್ ಎಂದೂ ಕರೆಯುತ್ತಾರೆ, ಇದು ಪ್ರತಿ ವರ್ಷ ನವರಾತ್ರಿಯ ಕೊನೆಯಲ್ಲಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಹಿಂದೂ ಲೂನಿ-ಸೌರ ಕ್ಯಾಲೆಂಡರ್ನ ಏಳನೇ ತಿಂಗಳಾದ ಅಶ್ವಿನ್ನ ಹಿಂದೂ ಕ್ಯಾಲೆಂಡರ್ ತಿಂಗಳ ಹತ್ತನೇ ದಿನದಂದು ಇದನ್ನು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ. ವಿಜಯದಶಮಿಯನ್ನು ವಿವಿಧ ಕಾರಣಗಳಿಗಾಗಿ ಆಚರಿಸಲಾಗುತ್ತದೆ ಮತ್ತು ಭಾರತೀಯ ಉಪಖಂಡದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ. ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.