The most-visited ಕನ್ನಡ Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ)
ಸರಕು ಮತ್ತು ಸೇವಾ ತೆರಿಗೆ(ಜಿಎಸ್ ಟಿ:GST) 2016:(Goods and Services Tax Bill or GST Bill 2016) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ದಿ.1 ಜುಲೈ, 2017 ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ 12 ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. |} ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಕಾಂತಾರ: ಅಧ್ಯಾಯ ೧ ಮುಂಬರುವ ಭಾರತೀಯ ಕನ್ನಡ ಭಾಷೆಯ ಪೌರಾಣಿಕ ಆಕ್ಷನ್ ಥ್ರಿಲ್ಲರ್ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ೨೦೨೨ ರ ಚಲನಚಿತ್ರ ಕಾಂತಾರ ದ ಪೂರ್ವಭಾವಿಯಾಗಿ, ಕಥೆಯು ಮೊದಲ ಚಿತ್ರದಲ್ಲಿ ಪರಿಚಯಿಸಲಾದ ದೈವಿಕ ಸಂಪ್ರದಾಯ ಮತ್ತು ಪೂರ್ವಜರ ಸಂಘರ್ಷದ ಮೂಲಗಳನ್ನು ಆಳವಾಗಿ ಪ್ರಸ್ತುತಪಡಿಸುತ್ತದೆ. ಚಿತ್ರೀಕರಣ ನವೆಂಬರ್ ೨೦೨೩ ರಲ್ಲಿ ಪ್ರಾರಂಭವಾಯಿತು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕಾಂತಾರ: ಒಂದು ದಂತಕಥೆ ಅಥವಾ ಕಾಂತಾರ (ಅನುವಾದ. "ನಿಗೂಢವಾದ ಕಾಡು") ಸೆಪ್ಟೆಂಬರ್ ೩೦, ೨೦೨೨ರಲ್ಲಿ ಬಿಡುಗಡೆಯಾದ ಕನ್ನಡ ಭಾಷೆಯ ಚಲನಚಿತ್ರವಾಗಿದೆ. ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ಈ ಚಿತ್ರದಲ್ಲಿ, ಶೆಟ್ಟಿ, ಭೂತಕೋಲ ಕಲಾವಿದ ಮತ್ತು ಕಂಬಳ ಚಾಂಪಿಯನ್ ಆಗಿ ನಟಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ವಿಜಯದಶಮಿ, ದಸರಾ, ದಸರಾ ಅಥವಾ ದಶೈನ್ ಎಂದೂ ಕರೆಯುತ್ತಾರೆ, ಇದು ಪ್ರತಿ ವರ್ಷ ನವರಾತ್ರಿಯ ಕೊನೆಯಲ್ಲಿ ಆಚರಿಸಲಾಗುವ ಪ್ರಮುಖ ಹಿಂದೂ ಹಬ್ಬವಾಗಿದೆ. ಹಿಂದೂ ಲೂನಿ-ಸೌರ ಕ್ಯಾಲೆಂಡರ್ನ ಏಳನೇ ತಿಂಗಳಾದ ಅಶ್ವಿನ್ನ ಹಿಂದೂ ಕ್ಯಾಲೆಂಡರ್ ತಿಂಗಳ ಹತ್ತನೇ ದಿನದಂದು ಇದನ್ನು ಆಚರಿಸಲಾಗುತ್ತದೆ, ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ. ವಿಜಯದಶಮಿಯನ್ನು ವಿವಿಧ ಕಾರಣಗಳಿಗಾಗಿ ಆಚರಿಸಲಾಗುತ್ತದೆ ಮತ್ತು ಭಾರತೀಯ ಉಪಖಂಡದ ವಿವಿಧ ಭಾಗಗಳಲ್ಲಿ ವಿಭಿನ್ನವಾಗಿ ಆಚರಿಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ. ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಕನ್ನಡ ಸಾಹಿತ್ಯ ಸಮ್ಮೇಳನ ಕನ್ನಡ ಸಾಹಿತ್ಯ ಪರಿಷತ್ತಿನಿಂದ ೧೯೧೫ರಿಂದ ನಡೆಸಿಕೊಂಡು ಬರುತ್ತಿರುವ ದೊಡ್ಡ ಪ್ರಮಾಣದ ಕನ್ನಡ ಸಮ್ಮೇಳನ. ಕರ್ನಾಟಕದ ಏಕೀಕರಣವನ್ನು ಸಾಧಿಸುವುದು ಮತ್ತು ಕನ್ನಡನಾಡಿನ ಬದುಕಿನಲ್ಲಿ ಕನ್ನಡವು ಸಾರ್ವಭೌಮ ಸ್ಥಾನವನ್ನು ಪಡೆದುಕೊಳ್ಳಲಗತ್ಯವಾದ ಜನಜಾಗೃತಿಯನ್ನೂ ಸಂಕಲ್ಪವನ್ನೂ ಹುಟ್ಟಿಸುವುದು ಈ ಸಮ್ಮೇಳನಗಳ ಉದ್ದೇಶ ಕನ್ನಡ ಸಾಹಿತ್ಯಕ್ಕೆ ಅವಿರತ ದುಡಿದ ಸಾಹಿತಿಗಳನ್ನು ಇದರ ಅಧ್ಯಕ್ಷತೆ ವಹಿಸಲು ಕೋರಿ ಗೌರವಿಸಲಾಗುತ್ತದೆ. ಈ ಹಿಂದೆ ಕನ್ನಡ ಸಾಹಿತ್ಯದ ಅನೇಕ ಗಣ್ಯರು, ಮಹಾಪುರುಷರು ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದಾರೆ.