The most-visited ಕನ್ನಡ Wikipedia articles, updated daily. Learn more...
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ೦೧ ಜುಲೈ, ೨೦೧೭ ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ ೧೨ ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ. ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಬಿಗ್ ಬಾಸ್ ಕನ್ನಡ 12 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ನ ಸರಣಿ ಆಗಿದೆ. ಕಿಚ್ಚ ಸುದೀಪ್ ಸತತ ಹನ್ನೆರಡನೇ ಬಾರಿಗೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ . ಎಕ್ಸ್ಪೆಟ್ ದ ಅನ್ ಎಕ್ಸ್ಪೆಕೆಟ್ಡ್ - [Expect The Unexpected’' ಅನುವಾದ : ಅನಿರೀಕ್ಷಿತವನ್ನು ನಿರೀಕ್ಷಿಸಿ] ಎನ್ನುವುದು ಈ ಸೀಸನ್ ನ ಟ್ಯಾಗ್ಲೈನ್ ಮತ್ತು ಥೀಮ್ ಆಗಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ವರಮಾನದ ಲೆಕ್ಕಾಚಾರ ವಿಧಾನಗಳುಯಾವುದೇ ರಾಷ್ಟ್ರದ ಜನತೆಯ ಕಲ್ಯಾಣವು ಆ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಪ್ರಮಾಣ,ಅವುಗಳ ಸಂಯೋಜನ ಮತ್ತು ಅವುಗಳ ಹಂಚಿಕೆಗಳನ್ನು ಅವಲಂಬಿಸಿರುತ್ತದೆ.ಒಂದು ವರ್ಷದಲ್ಲಿ ರಾಷ್ಟ್ರವು ಉತ್ಪಾದಿಸುವ ಸರಕು ಸೇವೆಗಳ ಒಟ್ಟು ಮೌಲ್ಯವೇ ಆ ರಾಷ್ಟ್ರದ ರಾಷ್ಟ್ರೀಯ ವರಮಾನವಾಗಿದೆ.ಇತರ ಸ್ಥಿತಿ-ಗತಿಳೆಲ್ಲವೂ ಸ್ಥಿರವಾಗಿದ್ದು,ರಾಷ್ಟ್ರೀಯ ವರಮಾನವು ಅಧಿಕವಾಗುತ್ತಿದ್ದರೆ,ಜನತೆಯ ಕಲ್ಯಾಣವು ಅಧಿಕವಾಗುತ್ತಿರುತ್ತದೆ.
ಬನ್ನೇರುಘಟ್ಟ ಜೈವಿಕ ಉದ್ಯಾನವನವು ಆರಂಭದಲ್ಲಿ ಒಂದು ಸಣ್ಣ ಮೃಗಾಲಯವಾಗಿತ್ತು ಮತ್ತು ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ (ಬಿ ಎನ್ ಪಿ) ೧೯೭೪ ರಲ್ಲಿ ಪ್ರಾರಂಭವಾದ ಪಿಕ್ನಿಕ್ ಮೂಲೆಯಾಗಿದೆ. ಜೈವಿಕ ಉದ್ಯಾನವನ ಮತ್ತು ರಾಷ್ಟ್ರೀಯ ಉದ್ಯಾನವನದ ಇಬ್ಭಾಗವು ೨೦೦೨ ರಲ್ಲಿ ನಡೆಯಿತು. ಬನ್ನೇರುಘಟ್ಟ ಜೈವಿಕ ಉದ್ಯಾನವನವು ಒಟ್ಟು ೭೩೧.೮೮ ಹೆಕ್ಟೇರ್ ಪ್ರದೇಶವನ್ನು ಹೊಂದಿದೆ ಮತ್ತು ಮೃಗಾಲಯ, ಸಫಾರಿ ಪಾರ್ಕ್, ಚಿಟ್ಟೆ ಪಾರ್ಕ್ ಮತ್ತು ಪಾರುಗಾಣಿಕಾ ಕೇಂದ್ರವನ್ನು ಒಳಗೊಂಡಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
'ಸ್ಟಾಕ್ ಮಾರುಕಟ್ಟೆ ಅಥವಾ ಷೇರು ಮಾರುಕಟ್ಟೆ ಷೇರುಗಳು (ಷೇರುಗಳನ್ನು) ಕೊಳ್ಳುವವರು ಮತ್ತು ಮಾರುವವರು ಸಮೂಹದ (ಆರ್ಥಿಕ ವ್ಯವಹಾರಗಳ ಸಡಿಲ ನೆಟ್ವರ್ಕ್, ಒಂದು ಭೌತಿಕ ಸೌಲಭ್ಯ ಅಥವಾ ಪ್ರತ್ಯೇಕವಾದ ಘಟಕದ) ಆಗಿದೆ;ಈ ಒಂದು ಶೇರು ವಿನಿಮಯ ಕೇಂದ್ರದಲ್ಲಿ ಪಟ್ಟಿ ಭದ್ರತಾ ಪತ್ರಗಳ ಹಾಗೂ ಮಾತ್ರ ಖಾಸಗಿಯಾಗಿ ವ್ಯಾಪಾರ ಹೊಂದಿರುತ್ತವೆ. ವಿಶ್ವದ ಸ್ಟಾಕ್ ಮಾರುಕಟ್ಟೆ ಗಾತ್ರ ಅಕ್ಟೋಬರ್ 2008 ಆರಂಭದಲ್ಲಿ ಸುಮಾರು $ 36.6 ಟ್ರಿಲಿಯನ್ ಎಂದು ಅಂದಾಜಿಸಲಾಗಿತ್ತು.ಒಟ್ಟು ವಿಶ್ವದ ಉತ್ಪನ್ನ ಮಾರುಕಟ್ಟೆಯಲ್ಲಿ ಸುಮಾರು $ 791 ಟ್ರಿಲಿಯನ್ ಮುಖ ಅಥವಾ ಮುಖಬೆಲೆ ಎಂದು ಅಂದಾಜಿಸಲಾಗಿದೆ.ಇದು ಇಡೀ ವಿಶ್ವದ ಆರ್ಥಿಕತೆಯ 11 ಬಾರಿ ಗಾತ್ರ ಪ್ರಮುಖ ವಿನಿಮಯ ಕೇಂದ್ರಗಳು, ಆಂಸ್ಟರ್ಡ್ಯಾಮ್ ಸ್ಟಾಕ್ ಎಕ್ಸ್ಚೇಂಜ್, ಲಂಡನ್ ಸ್ಟಾಕ್ ಎಕ್ಸ್ಚೇಂಜ್, ನ್ಯೂಯಾರ್ಕ್ ಸ್ಟಾಕ್ ಎಕ್ಸ್ಚೇಂಜ್, ಪ್ಯಾರಿಸ್ ಬರ್ಸ್, ಡಾಯ್ಚಿ ಬೋರ್ಸ್ಗೆ (ಫ್ರಾಂಕ್ಫರ್ಟ್ ವಿನಿಮಯ), ಟೊರೊಂಟೊ ಸ್ಟಾಕ್ ಎಕ್ಸ್ಚೇಂಜ್, ಫಿಲಿಫೈನ್ ಸ್ಟಾಕ್ ಎಕ್ಸ್ಚೇಂಜ್, ಸಿಂಗಾಪುರ್ ಎಕ್ಸ್ಚೇಂಜ್, ಟೋಕಿಯೋ ಸ್ಟಾಕ್ ಎಕ್ಸ್ಚೇಂಜ್ ಹಾಂಗ್ ಕಾಂಗ್ ಸ್ಟಾಕ್ ಎಕ್ಸ್ಚೇಂಜ್, ಶಾಂಘಾಯ್ ಸ್ಟಾಕ್ ಎಕ್ಸ್ಚೇಂಜ್, ಬಾಂಬೆ ಸ್ಟಾಕ್ ಎಕ್ಸ್ಚೇಂಜ್ ನೈಜೀರಿಯನ್ ಸ್ಟಾಕ್ ಎಕ್ಸ್ಚೇಂಜ್, JSE ಲಿಮಿಟೆಡ್. ಲ್ಯಾಟಿನ್ ಅಮೆರಿಕದಲ್ಲಿ, BM & F ಬೊವೆಸ್ಪಾ ಮತ್ತು ವೆ ಮುಂತಾದ ವಿನಿಮಯ ಇವೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಕ್ಯೋಟೋ ಶಿಷ್ಟಾಚಾರ ಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
೧೯೭೭ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರ ನಾಗರಹೊಳೆ ಮಾಹಿತಿಗೆ ಈ ಲೇಖನ ನೋಡಿ. ನಾಗರಹೊಳೆ ರಾಷ್ಟ್ರೀಯ ಉದ್ಯಾನವನ (ರಾಜೀವ್ ಗಾಂಧಿ ನ್ಯಾಷನಲ್ ಪಾರ್ಕ್ ಎಂದು ಕರೆಯಲಾಗುತ್ತದೆ), ದಕ್ಷಿಣ ಭಾರತದ ಕರ್ನಾಟಕ ರಾಜ್ಯದಲ್ಲಿ ಕೊಡಗು ಜಿಲ್ಲೆ ಮತ್ತು ಮೈಸೂರು ಜಿಲ್ಲೆಯಲ್ಲಿ ರಾಷ್ಟ್ರೀಯ ಉದ್ಯಾನವನ ಸ್ಥಾಪಿತವಾಗಿದೆ.ಈ ಉದ್ಯಾನವನವನ್ನು ೧೯೯೯ ರಲ್ಲಿ ಇದೊಂದು ನೀಲಗಿರಿ ಜೀವಗೋಳ ಮೀಸಲು ಪ್ರದೇಶದ ಭಾಗವಾಗಿ ಮೂವತ್ತೇಳನೆ ಪ್ರಾಜೆಕ್ಟ್ ಟೈಗರ್ ಹುಲಿ ಮೀಸಲು ಅರಣ್ಯ ಪ್ರದೇಶ ಎಂದು ಘೋಷಿಸಲಾಯಿತು. ೬,೦೦೦ ಕಿಮೀ ೨ ಪಶ್ಚಿಮ ಘಟ್ಟಗಳ ನೀಲಗಿರಿ ಉಪ ಕ್ಲಸ್ಟರ್ (೨,೩೦೦ ಚ ಮೈಲಿ), ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಸೇರಿದಂತೆ, ವಿಶ್ವ ಪರಂಪರೆ ತಾಣದ ಆಯ್ಕೆಗೆ ಸಂಬಂಧಿಸಿದಂತೆ UNESCO ವಿಶ್ವ ಪರಂಪರೆ ಸಮಿತಿಯ ಪರಿಗಣನೆಯ ಅಡಿಯಲ್ಲಿದೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಆರ್ಥಿಕತೆಯ ಎಲ್ಲ ವಲಯಗಳನ್ನು ಮೂರು ಭಾಗಗಳಾಗಿ ವರ್ಗೀಕರಿಸಿದಾಗ ಕೈಗಾರಿಕೆಗಳು 'ದ್ವಿತೀಯ' ವಲಯ (Secondary Sector) ಎನ್ನಿಸಿಕೊಂಡಿದೆ. ಕೈಗಾರಿಕೆಗಳು ಒಂದು ದೇಶದ ಮೂಳೆಗಳಿದ್ದಂತೆ. ಮಾನವ ದೇಹಕ್ಕೆ ಪೂರ್ಣ ಚೈತನ್ಯವನ್ನು ಒದಗಿಸಲು ಮೂಳೆಗಳು ಹೇಗೆ ಅವಶ್ಯಕವೋ ಹಾಗೆಯೇ ಆರ್ಥಿಕತೆಗೆ ಚೇತನ ನೀಡಿ ದೀರ್ಘಕಾಲೀನ ಅಭಿವೃದ್ಢಿ ಸಾಧನೆಗೆ ನೆರವಾಗಲು ಕೈಗಾರಿಕೆಗಳು ಅತ್ಯಂತ ಆವಶ್ಯಕ.
೧೯೧೨ರ ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ಭಾರತದಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಲು ಕನಿಷ್ಟ ಸದಸ್ಯರ ಸಂಖ್ಯೆ ಹತ್ತು ಇರತಕ್ಕದ್ದು.ಇದನ್ನು ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ನೋಂದಾಯಿಸಬೇಕು.ಷೇರುಗಳನ್ನು ಸದಸ್ಯರಿಗೆ ನೀಡುವುದರ ಮುಖಾಂತರ ಬಂಡವಾಳವನ್ನು ಸಂಗ್ರಹಿಸುತ್ತದೆ. ವ್ಯಾಖ್ಯಾನಗಳು ಈ.ಹೆಚ್.ಕಲ್ವರ್ಟ್ ಅವರ ಪ್ರಕಾರ "ಸಹಕಾರವು ಒಂದು ಪ್ರಕಾರದ ವ್ಯವಹಾರಿ ಸಂಘಟನೆಯಾಗಿದ್ದು,ಅದರಲ್ಲಿರುವ ವ್ಯಕ್ತಿಗಳು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸಮಾನತೆಯ ದೃಷ್ಠಿಯಿಂದ ಮಾನವರಾಗಿ ಸ್ವಯಂ ಪ್ರೇರಣೆಯಿಂದ ಒಂದುಗೂಡಿದ ಸಂಸ್ಥೆಯಾಗಿದೆ". ಸಹಕಾರಿ ಸಂಘಗಳ ಲಕ್ಷಣಗಳೆಂದರೆ:- ೧.ಸ್ವಯಂ ಪ್ರೇರಣೆಯ ಸಂಘಟನೆ:- ಸಹಕಾರಿ ಸಂಘದ ಸದಸ್ಯತ್ವ ಐಚ್ಛಿಕವಾಗಿದೆ.ಸದಸ್ಯತ್ವವು ಮುಕ್ತವಾಗಿದ್ದು,ಯಾವುದೇ ಬೇದವಿಲ್ಲದೆ ಎಲ್ಲಾ ವಯಸ್ಕರಿಗೂ ಸದಸ್ಯರಾಗಲು ಅವಕಾಶವಿದೆ.ಸದಸ್ಯರು ತಮಗೆ ಬೇಡವೆನಿಸಿದಾಗ ಸಂಘವನ್ನು ಬಿಟ್ಟುಹೋಗಬಹುದು.
ಬ್ರೈಲ್ ( /b r eɪ l / BRAYL, French: [bʁɑj] ) ದೃಷ್ಟಿಹೀನತೆ ಹೊಂದಿರುವ ಜನರು ಬಳಸುವ ಸ್ಪರ್ಶ ಬರವಣಿಗೆ ವ್ಯವಸ್ಥೆಯಾಗಿದ್ದು, ವಿಶೇಷ ಚೇತನರು ಅಥವಾ ಕಡಿಮೆ ದೃಷ್ಟಿ ಹೊಂದಿರುವ ಜನರು ಸೇರಿದಂತೆ, ಇದನ್ನು ಉಬ್ಬು ಕಾಗದದ ಮೇಲೆ ಅಥವಾ ಕಂಪ್ಯೂಟರ್ಗಳು ಮತ್ತು ಸ್ಮಾರ್ಟ್ಫೋನ್ ಸಾಧನಗಳಿಗೆ ಸಂಪರ್ಕಿಸುವ ರಿಫ್ರೆಶ್ ಮಾಡಬಹುದಾದ ಬ್ರೈಲ್ ಡಿಸ್ಪ್ಲೇಗಳನ್ನು ಬಳಸುವ ಮೂಲಕ ಓದಬಹುದು. ಬ್ರೈಲ್ ಅನ್ನು ಸ್ಲೇಟ್ ಮತ್ತು ಸ್ಟೈಲಸ್, ಬ್ರೈಲ್ ರೈಟರ್, ಎಲೆಕ್ಟ್ರಾನಿಕ್ ಬ್ರೈಲ್ ನೋಟ್ ಟೇಕರ್ ಅಥವಾ ಬ್ರೈಲ್ ಎಂಬೋಸರ್ ಗೆ ಸಂಪರ್ಕಗೊಂಡಿರುವ ಕಂಪ್ಯೂಟರ್ ಬಳಸಿ ಬರೆಯಬಹುದು. ಬಾಲ್ಯದ ಅಪಘಾತದ ಪರಿಣಾಮವಾಗಿ ತನ್ನ ದೃಷ್ಟಿಯನ್ನು ಕಳೆದುಕೊಂಡ ಫ್ರೆಂಚ್ನ ಸೃಷ್ಟಿಕರ್ತ ಲೂಯಿಸ್ ಬ್ರೈಲ್ ಹೆಸರನ್ನು ಬ್ರೈಲ್ ಎಂದು ಹೆಸರಿಸಲಾಗಿದೆ.