The most-visited ಕನ್ನಡ Wikipedia articles, updated daily. Learn more...
ಮೂಗುತಿಯು ಮೂಗಿನ ಮೇಲೆ ಧರಿಸಲಾದ ಒಂದು ಆಭರಣ. ಪ್ರಾಚೀನ ಕಾಲದಿಂದ ಹೆಚ್ಚು ಸಾಮಾನ್ಯವಾಗಿ ಭಾರತೀಯ ಉಪಖಂಡದ ಮಹಿಳೆಯರೊಂದಿಗೆ ಸಂಬಂಧಿಸಲಾದ ಈ ಆಭರಣಗಳನ್ನು ಮೂಗಿನ ಹೊಳ್ಳೆಯ ಪಾರ್ಶ್ವದಲ್ಲಿನ ಒಂದು ಚುಚ್ಚುರಂಧ್ರದ ಮೂಲಕ ಲಗತ್ತಿಸಲಾಗುತ್ತದೆ. ಜಾಗತೀಕರಣ ಮತ್ತು ಭಾರತೀಯ ಫ಼್ಯಾಶನ್ ಹಾಗೂ ಸಂಸ್ಕೃತಿಯ ಹರಡುವಿಕೆಯ ಕಾರಣ, ಇತ್ತೀಚಿನ ದಶಕಗಳಲ್ಲಿ ಮೂಗಿನ ಹೊಳ್ಳೆಯನ್ನು ಚುಚ್ಚಿಸಿಕೊಳ್ಳುವುದು ವಿಶ್ವದಲ್ಲಿ ಜನಪ್ರಿಯವಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKSN, ಅನುವಾದ: ಪ್ರಧಾನಮಂತ್ರಿಗಳ ರೈತ ಗೌರವ ನಿಧಿ) ಭಾರತ ಸರ್ಕಾರದ ಉಪಕ್ರಮವಾಗಿದ್ದು, ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ ₹೬೦೦೦(₹೬,೩೦೦ ಅಥವಾ ೨೦೨೦ ರಲ್ಲಿ US$೭೯ ಗೆ ಸಮಾನ) ನೀಡುತ್ತದೆ. ೧ ಫೆಬ್ರವರಿ ೨೦೧೯ ರಂದು ಭಾರತದ ೨೦೧೯ರ ಮಧ್ಯಂತರ ಯೂನಿಯನ್ ಬಜೆಟ್ನಲ್ಲಿ ಪಿಯೂಷ್ ಗೋಯಲ್ ಅವರು ಈ ಉಪಕ್ರಮವನ್ನು ಘೋಷಿಸಿದರು . ಈ ಯೋಜನೆಗೆ ವಾರ್ಷಿಕ ₹೭೫,೦೦೦ ಕೋಟಿ (₹೭೯೦ ಶತಕೋಟಿ ಅಥವಾ ೨೦೨೦ ರಲ್ಲಿ US$೯.೯ ಶತಕೋಟಿಗೆ ಸಮಾನ) ವೆಚ್ಚವಾಗಿದೆ ಮತ್ತು ಡಿಸೆಂಬರ್ ೨೦೧೮ರಿಂದ ಜಾರಿಗೆ ಬಂದಿದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್) (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕೇವಲ ನಾಗರಿಕ ಸೇವೆಗಳ ಇಲಾಖೆ ಎಂದೂ ಕರೆಸಿಕೊಳ್ಳುವ ಭಾರತದ ನಾಗರಿಕ ಸೇವೆಗಳ ಇಲಾಖೆ ಯು ಭಾರತೀಯ ಗಣರಾಜ್ಯ ಸರ್ಕಾರದ ಒಂದು ನಾಗರಿಕ ಸೇವೆಗಳ ಶಾಶ್ವತ ಆಡಳಿತಶಾಹಿ ವ್ಯವಸ್ಥೆಯಾಗಿದೆ. ಭಾರತದ ಸಂಸತ್ತಿನ ಮೂಲಕ ಜಾರಿಗೊಳಿಸಲಾದ ಪ್ರಜಾಪ್ರಭುತ್ವದಲ್ಲಿ ಆಡಳಿತವನ್ನು ನಿರ್ವಹಿಸುವ ಸಂಪೂರ್ಣ ಹೊಣೆಗಾರಿಕೆಯು ಸಾರ್ವಜನಿಕರಿಂದ ಚುನಾಯಿತರಾದ ಆಯ್ಕೆಗೊಂಡ ಪ್ರಜಾಪ್ರತಿನಿಧಿಗಳಾದ ಸಚಿವರುಗಳ ಮೇಲಿರುತ್ತದೆ. ಇಂತಹಾ ಸಚಿವರುಗಳು ಸಾರ್ವತ್ರಿಕ ಪ್ರಬುದ್ಧರ ಚುನಾವಣೆಯ ಹಕ್ಕನ್ನು ಚಲಾಯಿಸುವ ಮೂಲಕ ಜನರಿಂದ ಚುನಾಯಿತವಾಗಿ ರೂಪುಗೊಂಡ ಶಾಸನಸಭೆಗಳಿಗೆ ಉತ್ತರದಾಯಿಯಾಗಿರುತ್ತಾರೆ.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು ಹಿಂದೂ ಧರ್ಮಶಾಸ್ತ್ರದ ಪ್ರಕಾರ, ಅವನು ಹರಿಹರ (ವಿಷ್ಣು ಮೋಹಿನಿ, ಮತ್ತು ಶಿವನ ಮಗ).
ಶ್ರೀ ವ್ಯಾಸರಾಯರು (ಕ್ರಿ.ಶ.೧೪೪೭ -೧೫೪೮) 'ಕನ್ನಡ ಭಾಷೆಯಲ್ಲಿ ದೇವರ ನಾಮಗಳನ್ನು ಬರೆದು ಬರೆಯಿಸಿ ತನ್ನ ಗುರು ಶ್ರೀಪಾದರಾಯರ ಹೊಸ ಸಂಪ್ರದಾಯವನ್ನು ಶ್ರದ್ಧೆಯಿಂದ ಅವರು ಮುಂದುವರೆಸಿದರು.ದೇವರಿಗೆ ಕನ್ನಡ ಅರ್ಥವಾಗುತ್ತೆ ಎಂದು ಪಂಡಿತರಿಗೆ ಮನದಟ್ಟು ಮಾಡಿದರು'. ಕನ್ನಡನಾಡಿನ ಭವ್ಯ ಸಂಸ್ಕೃತಿಯನ್ನು ವಿಜಯ ನಗರ ಆಳರಸರ ಕಾಲದಲ್ಲಿ ರಾಜ ಗುರುಗಳಾಗಿ ರಕ್ಷಿಸಿದ್ದಾರೆ.ಇವರು ತಮ್ಮ ಕೀರ್ತನೆಗಳ ಮೂಲಕ ಸಾಮಾನ್ಯ ಜನರಲ್ಲಿ ಹರಿ ಭಗವದ್ಭಕ್ತಿಯನ್ನು ನೀಡಿದ್ದಾರೆ.ಈ ಅಂಶವನ್ನು ಸಂಗೀತ ಶಾಸ್ತ್ರಜ್ಞ ತುಳಜಾಜಿ ಮಹಾರಾಜರು ತನ್ನ ಕೃತಿ ಸಂಗೀತ ಸಾರಮೃತದಲ್ಲಿ ವ್ಯಾಸರಾಯರನ್ನು ಸಂಗೀತ ವಿದ್ಯಾ ಸಂಪ್ರದಾಯದ ಪ್ರವರ್ತಕರೆಂದು ಕರೆದು ಗೌರವಿಸಿದ್ದಾರೆ.ಅವರು ಕನ್ನಡ ಪದ್ಯಗಳನ್ನು ತಮ್ಮ ವ್ಯಾಸಪೀಠದಲ್ಲಿಟ್ಟು ಪಂಡಿತರ ಬಾಯಿಕಟ್ಟಿ ಅದಕ್ಕೆ ಪುರಂದರೋಪನಿಷತ್ತು ಎಂಬ ಮನ್ನಣೆ ನೀಡಿದ ಮಹೋನ್ನತ ಗುರುಗಳಿವರು.
ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಅಟಲ್ ಬಿಹಾರಿ ವಾಜಪೇಯಿ( 25 ಡಿಸೆಂಬರ್ 1924 - 16 ಆಗಸ್ಟ್ 2018)ಯವರು ಭಾರತದ ಮಾಜಿ ಪ್ರಧಾನಮಂತ್ರಿ, ರಾಜಕಾರಣಿ, ಶ್ರೇಷ್ಠ ಸಂಸದೀಯ ಪಟು, ವಾಗ್ಮಿ, ಕವಿ, ನೇತಾರ ಹಾಗೂ ಜನನಾಯಕ. ಮೂರು ಬಾರಿ ಭಾರತದ ಪ್ರಧಾನಮಂತ್ರಿಯಾಗಿ ಇದಕ್ಕೂ ಮುಂಚೆ ವಿದೇಶಾಂಗ ಸಚಿವರಾಗಿ, ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿದ್ದಾರೆ. ಇವರು ತಮ್ಮ ಸಭ್ಯತೆ, ಹಾಸ್ಯಪ್ರಜ್ಞೆ, ಉದಾರ ವ್ಯಕ್ತಿತ್ವ ಮತ್ತು ನಡವಳಿಕೆಗಳಿಂದ ಅತ್ಯಂತ ಜನಪ್ರಿಯ ನಾಯಕರಾಗಿದ್ದರು.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.