The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಉಡುಗೆ: ಮಾನವ ಶರೀರವನ್ನು ಮುಚ್ಚುವ ಸಾಧನ; ಉಡುಪು, ಶರೀರವನ್ನು ಮುಚ್ಚುವುದರೊಂದಿಗೆ ರಕ್ಷಿಸುತ್ತದೆ ಮತ್ತು ಅಲಂಕರಿಸುತ್ತದೆ. ಮಾನವರಿಗೂ ಪ್ರಾಣಿಗಳಿಗೂ ಇರುವ ಒಂದು ಮುಖ್ಯ ವ್ಯತ್ಯಾಸವೆಂದರೆ ಅವರು ಧರಿಸುವ ಉಡುಪು. ಮಾನವರು ಉಡುಪನ್ನೇಕೆ ಧರಿಸುವರೆಂಬುದರ ವಿಚಾರವಾಗಿ ತತ್ತ್ವಜ್ಞರೂ ಸಾಹಿತಿಗಳೂ, ಮಾನವಶಾಸ್ತ್ರಜ್ಞರೂ ಮನಶ್ಶಾಸ್ತ್ರಜ್ಞರೂ ಹೀಗೆ ಎಲ್ಲ ಬಗೆಯ ಚಿಂತಕರೂ ವಿಭಿನ್ನ ಚಿಂತನೆಗಳನ್ನು ನಡೆಸಿದ್ದಾರೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಚಿರತೆಯು (ಪಾಂತೇರಾ ಪಾರ್ದೂಸ್) ಆಫ಼್ರಿಕಾ ಹಾಗು ಉಷ್ಣವಲಯ ಏಷ್ಯಾದ ಕೆಲವು ಭಾಗಗಳು, ಸೈಬೀರಿಯಾ, ದಕ್ಷಿಣ ಹಾಗು ಪಶ್ಚಿಮ ಏಷ್ಯಾದಿಂದ ಆಫ಼್ರಿಕಾದ ಉಪ ಸಹಾರಾ ಪ್ರದೇಶಗಳ ಬಹುಪಾಲು ಉದ್ದಗಲದವರೆಗಿನ ವ್ಯಾಪಕ ವ್ಯಾಪ್ತಿಯ ಫ಼ೆಲಿಡೈ ಕುಟುಂಬದ ಒಂದು ಸದಸ್ಯ. ಅವಾಸಸ್ಥಾನದ ನಷ್ಟ ಹಾಗು ಛಿದ್ರೀಕರಣ, ಮತ್ತು ವ್ಯಾಪಾರ ಹಾಗು ಕೀಟ ನಿಯಂತ್ರಣಕ್ಕಾಗಿ ಬೇಟೆಯ ಕಾರಣ ಅದು ಅದರ ವ್ಯಾಪ್ತಿಕ್ಷೇತ್ರದ ಹೆಚ್ಚಿನ ಭಾಗಗಳಲ್ಲಿ ಇಳಿಮುಖವಾಗುತ್ತಿರುವುದರಿಂದ ಅದನ್ನು ಐಯುಸಿಎನ್ ಕೆಂಪು ಪಟ್ಟಿಯಲ್ಲಿ ಬೆದರಿಕೆ ಹತ್ತಿರ ಎಂದು ಪಟ್ಟಿಮಾಡಲಾಗಿದೆ. ಹಾಂಗ್ ಕಾಂಗ್, ಸಿಂಗಪೋರ್, ಕುವೇಟ್, ಸಿರಿಯಾದ ಅರಬ್ ಗಣರಾಜ್ಯ, ಲಿಬ್ಯಾ ಮತ್ತು ಟುನೀಶದಲ್ಲಿ ಅದು ಪ್ರಾದೇಶಿಕವಾಗಿ ನಿರ್ನಾಮವಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
೨೦೧೮ರ ಭೀಮಾ ಕೋರೆಗಾಂವ್ ಹಿಂಸಾಚಾರ ಭೀಮಾ ಕೋರೆಗಾಂವ್ ಕದನದ ೨೦೦ನೇ ವಾರ್ಷಿಕೋತ್ಸವವನ್ನು ಆಚರಿಸಲು ೧ ನೇ ಜನವರಿ ೨೦೧೮ ರಂದು ಭೀಮಾ ಕೋರೆಗಾಂವ್ನಲ್ಲಿ ಸಂಭ್ರಮಾಚರಣೆಯನ್ನು ಮಾಡುತ್ತಿರುವ ಸಂದರ್ಭದಲ್ಲಿ ಹಿಂಸಾಚಾರ ನಡೆಯಿತು. ಈ ಸಭೆಯ ಮೇಲೆ ಕಲ್ಲು ತೂರಾಟ ನಡೆದಾಗ ಜನಸಂದಣಿಯಿಂದ ಹಿಂಸಾಚಾರ ಉಂಟಾಗಿ ೨೮ ವರ್ಷದ ಯುವಕ ಸ್ಥಳದಲ್ಲಿ ಅಸುನೀಗಿದರು ಮತ್ತು ಇತರ ಐವರಿಗೆ ಗಂಭೀರ ಗಾಯಗಳಾಗುತ್ತವೆ. ವಾರ್ಷಿಕವಾಗಿ ಆಚರಣೆ ಮಾಡುವ ಈ ಸಮಾವೇಶವನ್ನು ಎಲ್ಗರ್ ಪರಿಷತ್ ಸಮಾವೇಶ ಎಂದೂ ಕರೆಯಲಾಗುತ್ತದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ. ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗಪ್ರಸಿದ್ದರಾಗಿದ್ದರು, ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು. ಜೈನ ಧರ್ಮದಂತೆ ಆಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿಯಂದು ಇಚ್ಛಾಮರಣ ಹೊಂದಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬಿಸಿಲು ಎಂದರೆ ಸೂರ್ಯನು ಹೊರಸೂಸಿದ ವಿದ್ಯುತ್ಕಾಂತೀಯ ವಿಕಿರಣದ ಒಂದು ಭಾಗ, ವಿಶೇಷವಾಗಿ ಅತಿಗೆಂಪು, ಗೋಚರ ಮತ್ತು ನೇರಳಾತೀತ ಬೆಳಕು. ಭೂಮಿಯ ಮೇಲೆ, ಬಿಸಿಲು ವಾತಾವರಣದ ಮೂಲಕ ಸೋಸಲ್ಪಡುತ್ತದೆ, ಮತ್ತು ಸೂರ್ಯನು ದಿಗಂತದ ಮೇಲಿದ್ದಾಗ ಸೂರ್ಯಪ್ರಕಾಶವಾಗಿ ಪ್ರಕಟವಾಗುತ್ತದೆ. ನೇರ ಸೌರ ವಿಕಿರಣವು ಮೋಡಗಳಿಂದ ಪ್ರತಿಬಂಧಗೊಳ್ಳದಿದ್ದಾಗ, ಅದು ಬಿಸಿಲಾಗಿ ಅನುಭವಿಸಲ್ಪಡುತ್ತದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಶ್ರೀ ವ್ಯಾಸರಾಯರು (ಕ್ರಿ.ಶ.೧೪೪೭ -೧೫೪೮) 'ಕನ್ನಡ ಭಾಷೆಯಲ್ಲಿ ದೇವರ ನಾಮಗಳನ್ನು ಬರೆದು ಬರೆಯಿಸಿ ತನ್ನ ಗುರು ಶ್ರೀಪಾದರಾಯರ ಹೊಸ ಸಂಪ್ರದಾಯವನ್ನು ಶ್ರದ್ಧೆಯಿಂದ ಅವರು ಮುಂದುವರೆಸಿದರು.ದೇವರಿಗೆ ಕನ್ನಡ ಅರ್ಥವಾಗುತ್ತೆ ಎಂದು ಪಂಡಿತರಿಗೆ ಮನದಟ್ಟು ಮಾಡಿದರು'. ಕನ್ನಡನಾಡಿನ ಭವ್ಯ ಸಂಸ್ಕೃತಿಯನ್ನು ವಿಜಯ ನಗರ ಆಳರಸರ ಕಾಲದಲ್ಲಿ ರಾಜ ಗುರುಗಳಾಗಿ ರಕ್ಷಿಸಿದ್ದಾರೆ.ಇವರು ತಮ್ಮ ಕೀರ್ತನೆಗಳ ಮೂಲಕ ಸಾಮಾನ್ಯ ಜನರಲ್ಲಿ ಹರಿ ಭಗವದ್ಭಕ್ತಿಯನ್ನು ನೀಡಿದ್ದಾರೆ.ಈ ಅಂಶವನ್ನು ಸಂಗೀತ ಶಾಸ್ತ್ರಜ್ಞ ತುಳಜಾಜಿ ಮಹಾರಾಜರು ತನ್ನ ಕೃತಿ ಸಂಗೀತ ಸಾರಮೃತದಲ್ಲಿ ವ್ಯಾಸರಾಯರನ್ನು ಸಂಗೀತ ವಿದ್ಯಾ ಸಂಪ್ರದಾಯದ ಪ್ರವರ್ತಕರೆಂದು ಕರೆದು ಗೌರವಿಸಿದ್ದಾರೆ.ಅವರು ಕನ್ನಡ ಪದ್ಯಗಳನ್ನು ತಮ್ಮ ವ್ಯಾಸಪೀಠದಲ್ಲಿಟ್ಟು ಪಂಡಿತರ ಬಾಯಿಕಟ್ಟಿ ಅದಕ್ಕೆ ಪುರಂದರೋಪನಿಷತ್ತು ಎಂಬ ಮನ್ನಣೆ ನೀಡಿದ ಮಹೋನ್ನತ ಗುರುಗಳಿವರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.