The most-visited ಕನ್ನಡ Wikipedia articles, updated daily. Learn more...
ಸಾವಿರ ಕಂಬದ ಬಸದಿ (ಅಥವಾ ತ್ರಿಭುವನ ತಿಲಕ ಚೂಡಮಾಣಿ ಬಸದಿ), ಭಾರತದ ಕರ್ನಾಟಕದ ಮಂಗಳೂರಿನಿಂದ 34 ಕಿ.ಮೀ ದೂರದಲ್ಲಿರುವ ಮೂಡಬಿದ್ರಿಯಲ್ಲಿರುವ 1000 ಕಂಬಗಳಿಗೆ ಹೆಸರುವಾಸಿಯಾದ ಬಸದಿ ಅಥವಾ ಜೈನ ದೇವಾಲಯವಾಗಿದೆ. ಈ ದೇವಾಲಯವು "ಚಂದ್ರನಾಥ ದೇವಾಲಯ" ಎಂದು ಸಹ ಕರೆಯಲ್ಪಡುತ್ತದೆ, ಏಕೆಂದರೆ ಇದು ತೀರ್ಥಂಕರ ಚಂದ್ರಪ್ರಭ ಅವರನ್ನು ಗೌರವಿಸುತ್ತದೆ, ಅವರ ಎಂಟು ಅಡಿ ವಿಗ್ರಹವನ್ನು ದೇವಾಲಯದಲ್ಲಿ ಪೂಜಿಸಲಾಗುತ್ತದೆ.
ತೆನಾಲಿ ರಾಮಕೃಷ್ಣ (ಕ್ರಿ.ಶ ೧೫೧೪-೧೫೭೫) (తెలుగు:తెనాలి రామకృష్ణ) ಗಾರ್ಲಪಾಡು ಎಂಬ ಹಳ್ಳಿಯಲ್ಲಿ ಜನಿಸಿದನು.http://yousigma.com/biographies/Tenali%20Ramakrishna.html ಮೂಲತಃ ಆಂಧ್ರಪ್ರದೇಶದವನು. ಈತನ ತಂದೆ ಗಾರ್ಲಪಾಟಿ ರಾಮಯ್ಯ ತಾಯಿ ಲಕ್ಷ್ಮಾಂಬ. ಇವನು ವಿಕಟಕವಿ ಎಂದೇ ಪ್ರಸಿದ್ಧಾ.ಇವನು ಬುದ್ಧಿವಂತ ಹಾಗೂ ಒಳ್ಳೆ ಮನೋಭಾವವುಳ್ಳವನಾಗಿದ್ದನು.ಇವನು ವಿಜಯನಗರ ಸಾಮ್ರಾಜ್ಯದ ಶ್ರೀಕೃಷ್ಣದೇವರಾಯರ ಆಸ್ಥಾನದಲ್ಲಿದ್ದ ಅಷ್ಟದಿಗ್ಗಜರಲ್ಲಿ ಒಬ್ಬನಾಗಿದ್ದನು.ತೆನಾಲಿ ರಾಮಕೃಷ್ಣನು ಹಿಂದುಧರ್ಮವನ್ನು ಕುರಿತು ಅನೇಕ ಪುಸ್ತಕಗಳನ್ನು ಬರೆದಿದ್ದಾನೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಲಿಯನಾರ್ಡೊ ಡ ವಿಂಚಿ (ಏಪ್ರಿಲ್ ೧೫, ೧೪೫೨-ಮೇ ೨, ೧೫೧೯) ಇಟ್ಯಾಲಿಯನ್ ನವೋದಯ ವಾಸ್ತುಶಿಲ್ಪಿ, ಸಂಗೀತಗಾರ, ಶರೀರ ರಚನಾ ಶಾಸ್ತ್ರಜ್ಞ, ಸಂಶೋಧಕ, ಶಿಲ್ಪಿ, ರೇಖಾಗಣಿತ ಶಾಸ್ತ್ರಜ್ಞ, ಯಂತ್ರಶಿಲ್ಪಿ ಮತ್ತು ವರ್ಣಚಿತ್ರಗಾರ. ಇವರನ್ನು ಆದರ್ಶ "ನವೋದಯ ಮನುಷ್ಯ" ಮತ್ತು ಹಲವಾರು ವಿಷಗಳಲ್ಲಿ ಇವರು ತೋರಿರುವ ಅಮಿತ ಕುತೂಹಲ, ಆಸಕ್ತಿ ಮತ್ತು ಸೃಜನಶೀಲತೆಯಿಂದಾಗಿ ಸಾರ್ವತ್ರಿಕವಾಗಿ ಮೇಧಾವಿ ಎಂದು ಪರಿಗಣಿಸಲಾಗಿದೆ. ಇವರನ್ನು ಈ ಜಗತ್ತು ಕಂಡ ಅತಿ ಶ್ರೇಷ್ಠ ವರ್ಣಚಿತ್ರಗಾರ ಎಂದು ಕೂಡ ಸಾಮಾನ್ಯವಾಗಿ ಪರಿಗಣಿಸಲಾಗುತ್ತದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ವಿಶ್ವಸಂಸ್ಥೆಯ ಅಂಗಸಂಸ್ಥೆಯಾದ ಅಂತರರಾಷ್ಟ್ರೀಯ ಹಣಕಾಸು ಸಂಸ್ಥೆ ಯು (IMF ) ಅಂತರರಾಷ್ಟ್ರೀಯ ಸಂಸ್ಥೆಯಾಗಿದ್ದು, ತನ್ನ ಸದಸ್ಯ ರಾಷ್ಟ್ರಗಳ ಬೃಹದಾರ್ಥಿಕ ಕಾರ್ಯನೀತಿಗಳು, ಅದರಲ್ಲಿಯೂ ಮುಖ್ಯವಾಗಿ ವಿನಿಮಯ ದರಗಳು ಹಾಗೂ ಬಾಕಿಇರುವ ಹಣಸಂದಾಯಗಳ ಮೇಲೆ ಪರಿಣಾಮ ಬೀರುವಂತಹ ಜಾಗತಿಕ ವಿತ್ತೀಯ ವ್ಯವಸ್ಥೆಯನ್ನು ನೋಡಿಕೊಳ್ಳುತ್ತದೆ. ಅಂತರರಾಷ್ಟ್ರೀಯ ವಿನಿಮಯ ದರಗಳನ್ನು ಸಬಲಗೊಳಿಸಿ ಅಭಿವೃದ್ಧಿಯನ್ನು ಮತ್ತಷ್ಟು ಸುಲಭ ಮಾಡುವ ಗುರಿಯನ್ನು ಗಮನದಲ್ಲಿ ಇಟ್ಟುಕೊಂಡು ಸ್ಥಾಪಿಸಲಾಗಿರುವ ಸಂಸ್ಥೆಯಾಗಿದೆ. ಹಲವು ಬಡ ರಾಷ್ಟಗಳಿಗೆ ಹೆಚ್ಚಿನ ಮಟ್ಟದ ಹತೋಟಿಯೊಂದಿಗೆ ಅಗತ್ಯ ಇರುವಷ್ಟು ಸಾಲವನ್ನು ನೀಡುತ್ತಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಭಾರತದ ಆರ್ಥಿಕ ವ್ಯವಸ್ಥೆಯನ್ನು ಅಭಿವೃದ್ಧಿಶೀಲ ಮಾರುಕಟ್ಟೆ ಅರ್ಥವ್ಯವಸ್ಥೆ ಎಂದು ವಿವರಿಸಲಾಗಿದೆ. ಪಿ.ಪಿ.ಪಿ.ವುಳ್ಳ (ಕೊಳ್ಳುವ ಶಕ್ತಿಯ ಸಾಮ್ಯತೆ) ಜಿ.ಡಿ.ಪಿ ಪ್ರಕಾರ ಭಾರತ ವಿಶ್ವದಲ್ಲೇ ಮೂರನೆಯ ಸ್ಥಾನದಲ್ಲಿದೆ ಮತ್ತು ಅಮೇರಿಕನ್ ಡಾಲರಿನಲ್ಲಿನ ಒಟ್ಟೂ ದೇಶಿಯ ಉತ್ಪನ್ನ(ಜಿ.ಡಿ.ಪಿ) ಪ್ರಕಾರ $೬೯೧.೮೭೬ ಕೋಟಿ ಹೊಂದಿ ವಿಶ್ವದಲ್ಲೇ ಐದನೆಯ ಸ್ಥಾನದಲ್ಲಿದೆ. ಐಎಂಎಫ್ ಪ್ರಕಾರ, ತಲಾವಾರು ಆದಾಯದ ಆಧಾರದಲ್ಲಿ, ೨೦೧೮ರಲ್ಲಿ ಭಾರತವು ಜಿಡಿಪಿ ಪ್ರಕಾರ ೧೩೯ನೇ (ನಾಮಮಾತ್ರದ) ಮತ್ತು ಜಿಡಿಪಿ ಪ್ರಕಾರ ೧೧೮ನೇ (ಪಿಪಿಪಿ) ಸ್ಥಾನ ಹೊಂದಿತ್ತು.
ಕರ್ಮಧಾರೆಯ ಸಮಾಸ:- "ಪೂರ್ವೋತ್ತರಪದಗಳು ಲಿಂಗ, ವಚನ, ವಿಭಕ್ತಿಗಳಿಂದ ಸಮಾನವಾಗಿದ್ದು, ವಿಶೇಷಣ ವಿಶೇಷ್ಯ ಸಂಬಂಧದಿಂದ ಕೂಡಿ ಆಗುವ ಸಮಾಸಕ್ಕೆ ಕರ್ಮಧಾರಯಸಮಾಸವೆನ್ನುವರು." ಇದರಲ್ಲೂ ಉತ್ತರಪದದ ಅರ್ಥವೇ ಪ್ರಧಾನವಾಗಿರುವುದು. ಉದಾಹರಣೆಗೆ:- (i) ಸಂಸ್ಕೃತ ಸಂಸ್ಕೃತ ಶಬ್ದಗಳು ಸೇರಿ ಸಮಾಸವಾಗಿರುವುದಕ್ಕೆ- ನೀಲವಾದ + ಉತ್ಪಲ = ನೀಲೋತ್ಪಲ[5] (ನೀಲಕಮಲ) ಶ್ವೇತವಾದ + ವಸ್ತ್ರ = ಶ್ವೇತವಸ್ತ್ರ (ಬಿಳಿಯವಸ್ತ್ರ) ಶ್ವೇತವಾದ + ಛತ್ರ = ಶ್ವೇತಛತ್ರ (ಬಿಳಿಯಕೊಡೆ) ಬೃಹತ್ತಾದ + ವೃಕ್ಷ = ಬೃಹದ್ವೃಕ್ಷ (ದೊಡ್ಡಗಿಡ) ನೀಲವಾದ + ಶರಧಿ = ನೀಲಶರಧಿ ನೀಲವಾದ + ಸಮುದ್ರ = ನೀಲಸಮುದ್ರ ಶ್ವೇತವಾದ + ವರ್ಣ = ಶ್ವೇತವರ್ಣ ಮತ್ತವಾದ + ವಾರಣ = ಮತ್ತವಾರಣ (ಮದ್ದಾನೆ) ಪೀತವಾದ + ವಸ್ತ್ರ = ಪೀತವಸ್ತ್ರ ಪೀತವಾದ + ಅಂಬರ = ಪೀತಾಂಬರ ದಿವ್ಯವಾದ + ಪ್ರಕಾಶ = ದಿವ್ಯಪ್ರಕಾಶ ಮೇಲಿನ ಕನ್ನಡ, ಸಂಸ್ಕೃತ ಸಮಾಸಗಳಲ್ಲೆಲ್ಲ ಪೂರ್ವಪದಗಳು ವಿಶೇಷಣಗಳಾಗಿದ್ದು ಉತ್ತರಪದಗಳು ವಿಶೇಷ್ಯಗಳಾಗಿವೆ. ಇವುಗಳಿಗೆ ವಿಶೇಷಣ ಪೂರ್ವಪದ ಕರ್ಮಧಾರಯ ಎಂದು ಸ್ಪಷ್ಟಪಡಿಸಿ ಹೇಳುವ ಪರಿಪಾಠವುಂಟು.
ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಭಾರತದ ತೆರಿಗೆ ವ್ಯವಸ್ಥೆಯಲ್ಲಿ ತೆರಿಗೆ ಸುಧಾರಣಾ ಕ್ರಮವಾಗಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯವಸ್ಥೆಯು ೦೧ ಜುಲೈ, ೨೦೧೭ ಮಧ್ಯರಾತ್ರಿಯಿಂದಲೇ ದೇಶದಾದ್ಯಂತ ಜಾರಿಗೆ ಬಂದಿದೆ. ಸಂಸತ್ತಿನ ಸೆಂಟ್ರಲ್ ಹಾಲ್ನಲ್ಲಿ ಮಧ್ಯರಾತ್ರಿ ೧೨ ಗಂಟೆಗೆ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರು ಗುಂಡಿ ಒತ್ತುವ ಮೂಲಕ ಹೊಸ ತೆರಿಗೆ ವ್ಯವಸ್ಥೆಗೆ ಚಾಲನೆ ನೀಡಿದರು. ಸರಕು ಮತ್ತು ಸೇವಾ ತೆರಿಗೆ ಬಿಲ್ ಅಥವಾ ಜಿ.ಎಸ್.ಟಿ ಮಸೂದೆ (ಬಿಲ್) (ಹಿಂದಿ: वस्तु एवं सेवा कर विधेयक), ಅಧಿಕೃತವಾಗಿ ಇದು ಸಂವಿಧಾನದ (ನೂರಾ ಇಪ್ಪತ್ತೆರಡನೇ ತಿದ್ದುಪಡಿ) ಮಸೂದೆ, ೨೦೧೪ ಎಂದು ಪ್ರಸ್ತಾಪಿಸಿದೆ.
ಈ ಪುಟದಲ್ಲಿ ಕಾಲ್ಪನಿಕ ಮತ್ತು ಆಧಾರಗಳಿಲ್ಲದ ವಿಷಯ ಮತ್ತು ನಿರೂಪಣೆಯ ಅನೇಕ ದೋಷಗಳಿವೆ. ಇದರ ಬದಲು ಮೈ.ವಿಕೋ.ದ ಲೇಖನವನ್ನು ಆದಿ ಶಂಕರ ಲೇಖನಕ್ಕೆ ಪೂರಕವಾಗಿ ಹಾಕಬಹುದು. ಮೈಸೂರು ವಿಶ್ವವಿದ್ಯಾನಿಲಯ ವಿಶ್ವಕೋಶ/ಆದಿಶಂಕರಾಚಾರ್ಯ ಭಾರತದ ಸಾಂಸ್ಕ್ರತಿಕ ಇತಿಹಾಸದಲ್ಲಿ ಧ್ರುವ ನಕ್ಷತ್ರದಂತೆ ಪ್ರಕಾಶಮಾನರಾಗಿರುವ ಮಹಾಪುರುಷರಲ್ಲಿ ಶಂಕರಾಚಾರ್ಯರು ಪ್ರಮುಖರು.ಭಾರತದಲ್ಲಿ ಮಾತ್ರವಲದೆ, ಜಗತಿನ ತತ್ವ ಶಾಸ್ತ್ರದ ಇತಿಹಾದಲ್ಲಿ ಎಂದೆಂದಿಗೂ ಶಾಶ್ವತವಾಗಿ ಉಳಿಯುವ ಹೆಸರು ಶ್ರೀ ಶಂಕರಚಾರ್ಯರದು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.
ವಾಯುಮಂಡಲಕ್ಕೆ ವಾತಾವರಣ, ಗಾಳಿಹೊದಿಕೆ, ಸುತ್ತಾವಿ ಎಂಬ ಅರ್ಥಗಳಿವೆ. ಸಾಕಷ್ಟು ಘನವನ್ನು ಹೊಂದಿರುವ ಅಂತರಿಕ್ಷ ಕಾಯಗಳು ತಮ್ಮ ಗುರುತ್ವಾಕರ್ಷಣ ಬಲದಿಂದ ಸುತ್ತಲು ಹಿಡಿದಿಟ್ಟುಕೊಳ್ಳುವ ವಾಯುವಿನ ಪದರವನ್ನು ವಾಯುಮಂಡಲವೆಂದು ಕರೆಯಬಹುದು. ಕೆಲವು ಅನಿಲರೂಪಿ ಗ್ರಹಗಳು ಹೆಚ್ಚಾಗಿ ಅನಿಲಗಳಿಂದಲೇ ನಿರ್ಮಿತವಾಗಿರುವುದರಿಂದ ಅವುಗಳ ವಾಯುಮಂಡಲ ಅತ್ಯಂತ ಬೃಹತ್ ಗಾತ್ರವನ್ನು ಹೊಂದಿರುತ್ತವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಜಾಹೀರಾತು ಎಂದರೆ ಯಾವುದೇ ಸಾಧನ ಅಥವಾ ಪ್ರಾತಿನಿಧ್ಯವನ್ನು ಯಾವುದೇ ರೀತಿಯಲ್ಲಿ ಘೋಷಣೆ, ಪದ, ಅಕ್ಷರ, ಮಾದರಿ, ಚಿತ್ರ, ನಿರ್ದೇಶನ ಅಥವಾ ಸಂಯೋಜನೆಯ ಮೂಲಕ ಪೋಸ್ಟರ್, ಹೋರ್ಡಿಂಗ್, ಬ್ಯಾನರ್ಗಳು, ತಾತ್ಕಾಲಿಕ ಕಮಾನುಗಳು, ಎಲೆಕ್ಟ್ರಾನಿಕ್ ಪ್ರದರ್ಶನ, ಹೆಸರು ಫಲಕಗಳು, ನಿರ್ದೇಶನ ಫಲಕಗಳು, ಆಕಾಶಬುಟ್ಟಿಗಳು ಅಥವಾ ಯಾವುದೇ ಇತರ ದೃಶ್ಯ ಅಥವಾ ಶ್ರವ್ಯ ಮಾಧ್ಯಮ ಇತ್ಯಾದಿಗಳನ್ನು ವಾಣಿಜ್ಯ ಅರ್ಥದಲ್ಲಿ ಉತ್ಪನ್ನ ಅಥವಾ ಸೇವೆಯನ್ನು ಉತ್ತೇಜಿಸಲು ಪ್ರದರ್ಶಿಸಲಾಗುತ್ತದೆ ಜಾಹೀರಾತು ವಿಶಿಷ್ಟವಾಗಿ ಸಂಭಾವ್ಯ ಗ್ರಾಹಕರನ್ನು ಖರೀದಿ ಮಾಡುವಂತೆ ಅಥವಾ ಒಂದು ನಿರ್ದಿಷ್ಟ ಗುರುತಿನ ಉತ್ಪನ್ನ ಅಥವಾ ಸೇವೆಯನ್ನು ಹೆಚ್ಚು ಬಳಸುವಂತೆ ಒಲಿಸಲು ಪ್ರಯತ್ನಿಸುವ ಒಂದು ಪ್ರಸಾರ ಸಾಧನ. ಬಹಳ ಜಾಹೀ ರಾತುಗಳು "ಗುರುತಿನ ಪ್ರತಿ ಅಭಿಪ್ರಾಯ" (ಬ್ರ್ಯಾಂಡ್ ಇಮೇಜ್) ಮತ್ತು "ಗುರುತಿನ ಪ್ರತಿ ನಿಷ್ಠೆ"ಯ (ಬ್ರ್ಯಾಂಡ್ ಲಾಯಲ್ಟಿ) ನಿರ್ಮಾಣ ಮತ್ತು ಬಲವರ್ಧನೆ ಮೂಲಕ ಆ ಉತ್ಪನ್ನಗಳ ಮತ್ತು ಸೇವೆಗಳ ಬಳಕೆ ಹೆಚ್ಚಾಗುವಂತೆ ರೂಪಿಸಲ್ಪಡುತ್ತವೆ. ಈ ಉದ್ದೇಶಗಳಿಗಾಗಿ, ಜಾಹೀರಾತು ಗಳು ಕೆಲವು ಸಲ ವಾಸ್ತವವಾದ ಮಾಹಿತಿಯ ಜೊತೆಗೆ ತಮ್ಮ ಪ್ರೇರಿಸುವ ಸಂದೇಶವನ್ನು ಹುದುಗಿಸುತ್ತವೆ.