The most-visited ಕನ್ನಡ Wikipedia articles, updated daily. Learn more...
ಬಾದಾಮಿ ಗುಹಾದೇವಾಲಯಗಳು :ಭಾರತದ ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಬಾದಾಮಿಯಲ್ಲಿರುವ ಹಿಂದೂ ಮತ್ತು ಜೈನ ಗುಹಾ ದೇವಾಲಯಗಳ ಸಂಕೀರ್ಣವಾಗಿದ್ದು.ಈ ಗುಹೆಗಳು ಬಂಡೆಕಲ್ಲುಗಳಿಂದ ಕೊರೆದು ಮಾಡಿರುವುದರಿಂದ ಭಾರತದಲ್ಲಿನ ವಾಸ್ತುಶಿಲ್ಪದ, ವಿಶೇಷವಾಗಿ ಬಾದಾಮಿ ಚಾಲುಕ್ಯ ವಾಸ್ತುಶಿಲ್ಪದ ಪ್ರಮುಖ ಉದಾಹರಣೆಗಳಾಗಿವೆ. ಅವುಗಳಲ್ಲಿ ಕೆಲವು ೬ನೇ (6 ನೇ) ಶತಮಾನದ್ದಾಗಿವೆ. ಬಾದಾಮಿಯನ್ನು ಹಿಂದೆ ವಾತಾಪಿ(ಇವಾಗಿನ ಬಾದಾಮಿ) ಎಂದು ಕರೆಯಲಾಗುತ್ತಿತ್ತು, ಇದು ೬ನೇ(6ನೇ) ಶತಮಾನದಿಂದ ೮ನೇ(8ನೇ) ಶತಮಾನದವರೆಗೆ ಕರ್ನಾಟಕದ ಬಹುಭಾಗವನ್ನು ಆಳಿದ ಚಾಲುಕ್ಯ ರಾಜವಂಶದ ರಾಜಧಾನಿಯಾಗಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬೇಲೂರು - ಹಾಸನ ಜಿಲ್ಲೆಯ ಪ್ರಮುಖ ಪ್ರವಾಸಿ ಸ್ಥಳಗಳಲ್ಲೊಂದು. ಶಿಲಾಬಾಲಿಕೆಯರ ಬೇಲೂರು ಎಂದು ಪ್ರಸಿದ್ಧವಾಗಿರುವ ಬೇಲೂರು, ಶಿಲ್ಪಕಲೆಗೆ ಖ್ಯಾತಿ ಪಡೆದಿದೆ. ಹಳೇಬೀಡು, ಸೋಮನಾಥಪುರದ ಜೊತೆಗೆ ಬೇಲೂರು, ಹೊಯ್ಸಳ ಸಾಮ್ರಾಜ್ಯದ ಶಿಲ್ಪಕಲೆಯ ದೇವಾಲಯಗಳೆಂದು ಪ್ರಸಿದ್ಧವಾಗಿವೆ.ಬೇಲೂರಿನ ಶ್ರೀ ಚೆನ್ನಕೇಶವ ದೇವಾಲಯವು ಸಹಸ್ರಾರು ಪ್ರವಾಸಿಗರನ್ನು ತನ್ನೆಡೆಗೆ ತನ್ನ ಶಿಲ್ಪಕಲೆಗಳ ಮೂಲಕ ಸೆಳೆಯುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಹಿಂದೂ ಧರ್ಮದಲ್ಲಿ, ಸಂಪ್ರದಾಯ ಶಬ್ದವನ್ನು ಆಧ್ಯಾತ್ಮಿಕ ವಂಶಾವಳಿ, ಧಾರ್ಮಿಕ ವ್ಯವಸ್ಥೆ ಎಂದು ಹೇಳಬಹುದು. ಇದು ಸರಿಸುಮಾರು ಆಂಗ್ಲದ ಟ್ರೆಡಿಷನ್ ಶಬ್ದಕ್ಕೆ ಸಮಾನಾರ್ಥಕವಾಗಿದೆ. ಇದು ಗುರುಗಳು ಮತ್ತು ಶಿಷ್ಯರ ಉತ್ತರಾಧಿಕಾರಕ್ಕೆ ಸಂಬಂಧಿಸಿದೆ, ಮತ್ತು ಆಧ್ಯಾತ್ಮಿಕ ಸಂಪರ್ಕದಾರಿಯಾಗಿ ಕಾರ್ಯನಿರ್ವಹಿಸುತ್ತದೆ, ಮತ್ತು ಒಂದು ಧಾರ್ಮಿಕ ಗುರುತಿಗೆ ಸ್ಥಿರತೆಯನ್ನು ನೀಡುವ ಸಂಬಂಧಗಳ ಸೂಕ್ಷ್ಮ ಜಾಲವನ್ನು ಒದಗಿಸುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ತಲಕಾಡಿನಲ್ಲಿ ಸುಮಾರು ದೇವಸ್ಥಾನಗಳ ಸಮೂಹವಿದೆ. ಭಾರತದ ಕರ್ನಾಟಕ ರಾಜ್ಯದಲ್ಲಿ ಸಾಂಸ್ಕೃತಿಕವಾಗಿ ಪ್ರಮುಖವಾದ ಮೈಸೂರು ನಗರದ ಆಗ್ನೇಯಕ್ಕೆ ೪೫ಕಿಮೀ ದಕ್ಷಿಣ ಭಾರತದ ಅನೇಕ ರಾಜವಂಶಗಳು ನಿರ್ಮಿಸಿದ ಪ್ರಾಚೀನ ಹಿಂದೂ ದೇವಾಲಯಗಳಾಗಿವೆ. ತಲಕಾಡಿನ ಮರಳು ದಿಬ್ಬಗಳ ಪುರಾತತ್ವ ಶಾಸ್ತ್ರದ ಉತ್ಖನನಗಳು ಪಶ್ಚಿಮ ಗಂಗಾ ರಾಜವಂಶದ (ಸಿ.೩೪೫-೯೯೯) ಆಳ್ವಿಕೆಯಲ್ಲಿ ನಿರ್ಮಿಸಲಾದ ಹಲವಾರು ಪಾಳುಬಿದ್ದ ದೇವಾಲಯಗಳ ಅಸ್ತಿತ್ವವನ್ನು ತೋರಿಸಿವೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಸಾವಿರ ಕಂಬದ ಬಸದಿ (ಅಥವಾ ತ್ರಿಭುವನ ತಿಲಕ ಚೂಡಮಾಣಿ ಬಸದಿ), ಭಾರತದ ಕರ್ನಾಟಕದ ಮಂಗಳೂರಿನಿಂದ 34 ಕಿ.ಮೀ ದೂರದಲ್ಲಿರುವ ಮೂಡಬಿದ್ರಿಯಲ್ಲಿರುವ 1000 ಕಂಬಗಳಿಗೆ ಹೆಸರುವಾಸಿಯಾದ ಬಸದಿ ಅಥವಾ ಜೈನ ದೇವಾಲಯವಾಗಿದೆ. ಈ ದೇವಾಲಯವು "ಚಂದ್ರನಾಥ ದೇವಾಲಯ" ಎಂದು ಸಹ ಕರೆಯಲ್ಪಡುತ್ತದೆ, ಏಕೆಂದರೆ ಇದು ತೀರ್ಥಂಕರ ಚಂದ್ರಪ್ರಭ ಅವರನ್ನು ಗೌರವಿಸುತ್ತದೆ, ಅವರ ಎಂಟು ಅಡಿ ವಿಗ್ರಹವನ್ನು ದೇವಾಲಯದಲ್ಲಿ ಪೂಜಿಸಲಾಗುತ್ತದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತದ ಇತಿಹಾಸದಲ್ಲಿ ಅತ್ಯಂತ ಪ್ರಮುಖವಾದವು. ಎಲ್ಲರಿಗೂ ಅರ್ಥವಾಗುವಂತೆ ಅತಿ ಸರಳವಾದ ಭಾಷೆಯಲ್ಲಿ ಧರ್ಮೋಪದೇಶವನ್ನು ಕಲ್ಲುಬಂಡೆಗಳ ಮೇಲೂ ಶಿಲಾಸ್ತಂಭಗಳ ಮೇಲೂ ಗವಿಗಳ ಗೋಡೆಯ ಮೇಲೂ ಆತ ಕೆತ್ತಿಸಿದ್ದಾನೆ. ಈ ಶಾಸನಗಳು ಅಶೋಕ ಚಕ್ರವರ್ತಿಯ ಸ್ವಂತ ಮಾತುಗಳಾಗಿ ಪಾಲಿ ಭಾಷೆಯಲ್ಲಿ, ಅತಿ ಪ್ರಧಾನವಾದ ಮತ್ತು ಜನರ ಕಣ್ಣಿಗೆ ಸುಲಭವಾಗಿ ಗೋಚರಿಸುವ ಪ್ರದೇಶಗಳಲ್ಲಿ ಕೆತ್ತಲ್ಪಟ್ಟಿವೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಚೆನ್ನಕೇಶವ ದೇವಾಲಯವನ್ನು, ಕೇಶವ ಅಥವಾ ಬೇಲೂರಿನ ವಿಜಯನಾರಾಯಣ ದೇವಾಲಯ ಎಂದೂ ಕರೆಯಲಾಗುತ್ತದೆ. ಇದು ಭಾರತದ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ೧೨ ನೇ ಶತಮಾನದ ಹಿಂದೂ ದೇವಾಲಯವಾಗಿದೆ. ಇದು ೧೧೧೭ ಸಿ ಇ ನಲ್ಲಿ ರಾಜ ವಿಷ್ಣುವರ್ಧನನಿಂದ ನಿಯೋಜಿಸಲ್ಪಟ್ಟಿತು, ಬೇಲೂರಿನಲ್ಲಿ ಯಗಚಿ ನದಿಯ ದಡದಲ್ಲಿ ವೇಲಾಪುರ ಎಂದೂ ಕರೆಯಲ್ಪಡುತ್ತದೆ, ಇದು ಆರಂಭಿಕ ಹೊಯ್ಸಳ ಸಾಮ್ರಾಜ್ಯದ ರಾಜಧಾನಿಯಾಗಿದೆ.
ಬೆಳೆಯ ಆವರ್ತನೆ, ಹಸಿರು- ಗೊಬ್ಬರ, ಮಿಶ್ರಗೊಬ್ಬರ, ಜೈವಿಕವಾಗಿ ಕೀಟಗಳ ನಿಯಂತ್ರಣವನ್ನು ಅವಲಂಬಿಸಿರುವ ಸಾವಯವ ಬೇಸಾಯವು ಮಣ್ಣಿನ ತಯಾರಿಕೆಯ ಸಾಮರ್ಥ್ಯವನ್ನು ಸರಿದೂಗಿಸುವಲ್ಲಿ ಮತ್ತು ಕೀಟಗಳನ್ನು ನಿಯಂತ್ರಿಸಲು, ಹಾಗೂ ಯಾಂತ್ರಿಕ ಬೇಸಾಯಕ್ಕಾಗಿ ರಾಸಾಯನಿಕ ಗೊಬ್ಬರಗಳು ಮತ್ತು ರಾಸಾಯನಿಕ ಕೀಟನಾಶಕಗಳು, ಗಿಡ ಬೆಳವಣಿಗೆ ನಿಯಂತ್ರಣಗಳು, ಜಾನುವಾರು ಮೇವು ಸೇರ್ಪಡೆಗಳು, ಮತ್ತು ತಳಿವಿಜ್ಞಾನ ಪ್ರಕಾರವಾಗಿ ಮಾರ್ಪಡಿಸಿದ ಸಾವಯವಗಳನ್ನು ಹೊರತುಪಡಿಸಿ ಅಥವಾ ಕಟ್ಟುನಿಟ್ಟಾಗಿ ನಿಯಮಿತಗೊಳಿಸುವ ವ್ಯವಸಾಯದ ಒಂದು ಭಾಗವಾಗಿದೆ. ೧೯೯೦ ರಿಂದ, ಸಾವಯವ ಉತ್ಪನ್ನಗಳಿಗಾಗಿನ ಮಾರುಕಟ್ಟೆಯು ೨೦೦೭ ರಲ್ಲಿ $46 ಬಿಲಿಯನ್ ತಲುಪಲು ತೀವ್ರಗತಿಯಲ್ಲಿ ಏರಿಕೆ ಕಂಡಿತು. ಸುವ್ಯವಸ್ಥಿತವಾಗಿ ನಿರ್ವಹಿಸುವ ಒಕ್ಕಲುಭೂಮಿಯಲ್ಲಿ ಈ ಬೇಡಿಕೆಯು ಸಜಾತೀಯ ವರ್ಧನೆಯನ್ನು ನಡೆಸುತ್ತದೆ.