The most-visited ಕನ್ನಡ Wikipedia articles, updated daily. Learn more...
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ನವೀನಶಿಲಾಯುಗದಲ್ಲಿ ಮಾನವ ಪ್ರಾರಂಭಿಕ ಶಿಲಾ ಪರಿರಕರಗಳನ್ನು ಒಂದು ಕಲ್ಲಿನಿಂದ ಇನ್ನೊಂದು ಕಲ್ಲಿಗೆ ಹೊಡೆದು ತಯಾರಿಸುತ್ತಿದ್ದು, ಶಿಲಾಪರಿಕರಗಳು ಗಡುಸು, ನಯವಲ್ಲದ ಮೇಲ್ಮೈ ಪಡೆದಿರುತ್ತಿದ್ದವು. ನಂತರದ ಹಂತದಲ್ಲಿಯೇ,ಒಂದು ಕಲ್ಲನು ಇನ್ನೊಂದು ಕಲ್ಲಿಗೆ ಉಜ್ಜುವ ಅಧವಾ ಗಡುಸು ಕಲ್ಲಿನ ಮೇಲೆ ಮೆದು ಕಲ್ಲನ್ನು ತಿರುಗಿಸುವ ಮೂಲಕ ನಯವಾದ ಮೇಲ್ಮೈನ ಪರಿಕರಗಳನ್ನು ಅಥವಾ ಉಪಕರಣಗಳನ್ನು ಮಾನವ ತಯಾರಿಸ ತೊಡಗಿದ. ಪರಿಣಾಮವಾಗಿ ಈ ಪರಿಕರಗಳು ನಯವಾದ ಮೇಲ್ಮೈ ಪಡೆದವು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಹಿಂದೂಧರ್ಮವನ್ನು ಬೋಧಿಸುವ ಮತ್ತು ಅರ್ಚಕರ ವರ್ಗಕ್ಕೆ ಸೇರಿದವರನ್ನು ಬ್ರಾಹ್ಮಿನ್ Brāhmaṇa (ಬ್ರಾಹ್ಮಣರು) ಎನ್ನುತ್ತಾರೆ.ब्राह्मण. ಬ್ರಾಹ್ಮಿನ್ ಎಂಬ ಇಂಗ್ಲಿಷ್ ಪದವು ಸಂಸ್ಕೃತ ಪದದ ಆಂಗ್ಲ ರೂಪವಾಗಿದೆBrāhman; (ಬ್ರಹ್ಮನ್ ಎಂದರೆ ಶ್ರೇಷ್ಠ ಆತ್ಮ ಎಂಬ ಅರ್ಥವೂ ಹಿಂದೂ ಧರ್ಮದಲ್ಲಿದೆ). ಬ್ರಾಹ್ಮಣರನ್ನು ವಿಪ್ರ "ಪ್ರೇರಣೆಗೊಂಡ" ಅಥವಾ ದ್ವಿಜ "ಎರಡು ಬಾರಿ ಹುಟ್ಟಿದವರು" ಎಂದೂ ಕರೆಯುತ್ತಾರೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಅರಿಸ್ಟಾಟಲ್ (Greek: Ἀριστοτέλης , ಅರಿಸ್ಟಾಟೆಲೆಸ್ ) (384 BC – 322 BC) ಒಬ್ಬ ಗ್ರೀಕ್ ದಾರ್ಶನಿಕ ಮಾತ್ರವಲ್ಲದೆ, ಪ್ಲೇಟೋನ ಓರ್ವ ವಿದ್ಯಾರ್ಥಿ ಹಾಗೂ ಅಲೆಕ್ಸಾಂಡರ್ನ ಗುರುವಾಗಿದ್ದ. ಭೌತಶಾಸ್ತ್ರ, ತತ್ತ್ವಮೀಮಾಂಸೆ, ಕವಿತೆ, ರಂಗಭೂಮಿ, ಸಂಗೀತ, ತರ್ಕಶಾಸ್ತ್ರ, ಭಾಷಣಶಾಸ್ತ್ರ, ರಾಜಕಾರಣ, ಸರ್ಕಾರ, ನೀತಿಶಾಸ್ತ್ರ, ಜೀವಶಾಸ್ತ್ರ, ಮತ್ತು ಪ್ರಾಣಿಶಾಸ್ತ್ರ ಇವೇ ಮೊದಲಾದವನ್ನು ಒಳಗೊಂಡಂತೆ ಅನೇಕ ವಿಷಯಗಳ ಕುರಿತು ಆತ ಬರೆದ. ಪ್ಲೇಟೋನ ಗುರುವಾದ ಸಾಕ್ರಟಿಸ್ ಮತ್ತು ಪ್ಲೇಟೋನ ಜೊತೆಜೊತೆಗೆ, ಪಾಶ್ಚಿಮಾತ್ಯ ತತ್ತ್ವಶಾಸ್ತ್ರದಲ್ಲಿನ ಅತಿ ಪ್ರಮುಖ ಪ್ರಸಿದ್ಧ ಸಂಸ್ಥಾಪಕರಲ್ಲಿ ಅರಿಸ್ಟಾಟಲ್ ಕೂಡಾ ಒಬ್ಬನಾಗಿದ್ದಾನೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಎಕ್ವಡಾರ್, ಅಧಿಕೃತವಾಗಿ ಎಕ್ವಡಾರ್ ಗಣರಾಜ್ಯ (República del Ecuador), ದಕ್ಷಿಣ ಅಮೇರಿಕದ ಒಂದು ಪ್ರಾತಿನಿಧಿತ್ವ ಪ್ರಜಾತಾಂತ್ರಿಕ ಗಣರಾಜ್ಯ. ಉತ್ತರಕ್ಕೆ ಕೊಲಂಬಿಯ, ಪೂರ್ವ ಮತ್ತು ದಕ್ಷಿಣಕ್ಕೆ ಪೆರು ಮತ್ತು ಪಶ್ಚಿಮಕ್ಕೆ ಶಾಂತ ಮಹಾಸಾಗರಗಳನ್ನು ಎಕ್ವಡಾರ್ ಹೊಂದಿದೆ. ಸಮಭಾಜ ರೇಖೆಯ (ಸ್ಪ್ಯಾನಿಷ್ ಭಾಷೆಯಲ್ಲಿ "ecuador") ಎರಡೂ ಬದಿಗಳಿಗಿರುವ ಈ ದೇಶವು ಅದಕ್ಕಾಗಿ ಹಾಗೆ ನೇಮಿತವಾಗಿದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಅಥವಾ ಮಹಮದೀಯ ಮತ ಅಥವಾ ಮಹಮದೀಯ ಧರ್ಮವು ಎಂಬುದು ಏಕದೇವತಾವಾದದಲ್ಲಿ ಅಧಿಷ್ಠಿತವಾದ ಐಬ್ರಹೀಮಿಕ ಧರ್ಮವಾಗಿದ್ದು, ಖುರಾನ್ ಮತ್ತು ಮುಹಮ್ಮದ್ ಪೈಗಂಬರರ ಶಿಕ್ಷಣಗಳಲ್ಲಿ ಕೇಂದ್ರೀಕೃತವಾಗಿದೆ. ಇಸ್ಲಾಮ್ ಧರ್ಮದ ಅನುಯಾಯಿಗಳನ್ನು ಮುಸ್ಲಿಮರು ಅಥವಾ ಮುಸಲ್ಮಾನ (ದೇವರ ಇಚ್ಛೆಗೆ ಶರಣಾದವರು) ಅಥವಾ ಮಹಮ್ಮದೀಯ ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ಜಾಗತಿಕವಾಗಿ 190 ಕೋಟಿಗಿಂತಲೂ (2020ರ ಅಂದಾಜಿನ ಪ್ರಕಾರ) ಹೆಚ್ಚು ಅನುಯಾಯಿಗಳನ್ನು ಹೊಂದಿದ್ದು, ಜಗತ್ತಿನ ಒಟ್ಟು ಜನಸಂಖ್ಯೆಯ ಕಾಲು ಭಾಗವನ್ನು (25%) ಒಳಗೊಳ್ಳುತ್ತದೆ ಮತ್ತು ಜಗತ್ತಿನ ಎರಡನೆ ಅತಿದೊಡ್ಡ ಧರ್ಮವಾಗಿದೆ.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಕಾವ್ಯಮೀಮಾಂಸೆ ಎಂದರೆ ಕವಿ ಮತ್ತು ಕಾವ್ಯದ ಲಕ್ಷಣಗಳು, ಕಾವ್ಯಪ್ರಭೇದಗಳು, ಕಾವ್ಯಗಳಲ್ಲಿ ಅಲಂಕಾರ, ರೀತಿ, ರಸ, ಧ್ವನಿ ಮೊದಲಾದುವುಗಳ ಸ್ಥಾನ, ಕಾವ್ಯದ ವಸ್ತು ಮತ್ತು ಆತ್ಮಗಳ ಪರಿಶೀಲನ--ಇತ್ಯಾದಿಯಾಗಿ ಕಾವ್ಯವಿದ್ಯೆಗೆ ಸಂಬಂಧಿಸಿದ ವಿಷಯಗಳ ಶಾಸ್ತ್ರೀಯ ನಿರೂಪಣೆ. ಸಂಸ್ಕೃತದಲ್ಲಿ ಕಾವ್ಯಮೀಮಾಂಸೆ ಕ್ರಿಸ್ತಶಕದ ಆರಂಭದ ವೇಳೆಗೆ ಸ್ವತಂತ್ರ ಶಾಸ್ತ್ರವೆನಿಸುತ್ತಿದ್ದುದನ್ನು ರುದ್ರದಾಮನ ಶಿಲಾಲೇಖ, ಪತಂಜಲಿಯ ಮಹಾಭಾಷ್ಯ ಭರತನ ನಾಟ್ಯಶಾಸ್ತ್ರ ಮುಂತಾದವು ಸೂಚಿಸುತ್ತವೆ. ಆದರೆ ಕ್ರಿ.ಶ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಔಷಧ ರೋಗ ಲಕ್ಷಣ ನಿರೂಪಣೆ, ಅದರ ಚಿಕಿತ್ಸೆ, ಉಪಚಾರ ಮತ್ತು ನಿರೋಧನೆಗಾಗಿ ಉಪಯೋಗಿಸಲ್ಪಡುವ ರಾಸಾಯನಿಕ ವಸ್ತು. ವೈದ್ಯಶಾಸ್ತ್ರವು ರೋಗಿಯ ಆರೈಕೆ ಮತ್ತು ಅವರ ಗಾಯ ಅಥವಾ ಕಾಯಿಲೆಯ ರೋಗನಿರ್ಣಯ, ಮುನ್ನರಿವು, ತಡೆಗಟ್ಟುವಿಕೆ, ಚಿಕಿತ್ಸೆ ಅಥವಾ ಉಪಶಮನವನ್ನು ನಿರ್ವಹಿಸುವ ವಿಜ್ಞಾನ ಮತ್ತು ಅಭ್ಯಾಸ ಅನ್ನು ಒಳಗೊಂಡಿರುತ್ತದೆ. ಔಷಧವು ಅನಾರೋಗ್ಯದ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯ ಮೂಲಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಪುನಃಸ್ಥಾಪಿಸಲು ವಿಕಸನಗೊಂಡ ವಿವಿಧ ಆರೋಗ್ಯ ರಕ್ಷಣೆಯ ಅಭ್ಯಾಸಗಳನ್ನು ಒಳಗೊಂಡಿದೆ.