The most-visited ಕನ್ನಡ Wikipedia articles, updated daily. Learn more...
ಅಟ್ಲಾಂಟಿಕ್ ಮಹಾಸಾಗರ ಭೂಮಿಯ ಮಹಾಸಾಗರಗಳಲ್ಲಿ ಎರಡನೇ ದೊಡ್ಡದಾಗಿದ್ದು ಭೂಮಿಯ ಐದನೇ ಒಂದು ಭಾಗವನ್ನು ಆವರಿಸಿದೆ. ಅಮೆರಿಕಾ ಭೂಖಂಡಗಳ ಮತ್ತು ಯೂರೋಪ್ ಹಾಗೂ ಆಫ್ರಿಕಾ ಖಂಡಗಳ ನಡುವೆ ವ್ಯಾಪಿಸಿರುವ ಈ ಮಹಾಸಾಗರವು ಕೆಲವೊಮ್ಮೆ ಉತ್ತರ ಹಾಗೂ ದಕ್ಷಿಣ ಅಟ್ಲಾಂಟಿಕ್ ಸಾಗರಗಳೆಂದು ಬೇರೆಬೇರೆಯಾಗಿ ಕರೆಯಲ್ಪಡುವುದು. ಈ ಮಹಾಸಾಗರವು ಎಲ್ಲ ಸಾಗರಗಳ ಪೈಕಿ ಅತಿ ಹೆಚ್ಚಿನ ಪ್ರಕ್ಷುಬ್ಧತೆಯುಳ್ಳದ್ದಾಗಿದೆ.
ಪೆಸಿಫಿಕ್ ಮಹಾಸಾಗರ ಭೂಮಿಯ ಅತ್ಯಂತ ದೊಡ್ಡ ಮಹಾಸಾಗರ. ಲ್ಯಾಟಿನ್ ಭಾಷೆಯಲ್ಲಿ "ಶಾಂತ ಸಾಗರ" ಎಂಬ ಅರ್ಥದ ಈ ಹೆಸರಿನ್ನಿಟ್ಟವನು ಪೋರ್ಚುಗೀಯ ನಾವಿಕ ಫರ್ಡಿನ್ಯಾಂಡ್ ಮೆಗೆಲನ್. ಅಮೆರಿಕಾ ಭೂಖಂಡಗಳ ಪಶ್ಚಿಮಕ್ಕೆ ಹಾಗೂ ಏಷ್ಯಾ ಮತ್ತು ಆಸ್ಟ್ರೇಲಿಯಾ ಭೂಖಂಡಗಳ ಪೂರ್ವದ ಪ್ರದೇಶವನ್ನು ವ್ಯಾಪಿಸಿಕೊಂಡಿರುವ ಈ ಅಗಾಧ ಜಲರಾಶಿಯು ಭೂಮಿಯ ಒಟ್ಟು ವಿಸ್ತೀರ್ಣದ ೩೫.೨೫% ಪ್ರದೇಶವನ್ನು ಆವರಿಸಿಕೊಂಡಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ರಾಜಕೀಯ ಅಸ್ತಿತ್ವವುಳ್ಳ ವ್ಯಕ್ತಿಗಳ ಸಮೂಹದ ಒಂದು ದೃಢ ಗುರುತಿಸುವುಕೆಯನ್ನು ರಾಷ್ಟ್ರೀಯತೆ ಯು ಒಳಗೊಂಡಿದೆ, ಇದನ್ನು ರಾಷ್ಟ್ರೀಯತೆಯ ವಿಧಾನಗಳಲ್ಲಿ ಒಂದು ರಾಷ್ಟ್ರ ಎಂದು ವ್ಯಾಖ್ಯಾನಿಸಲಾಗಿದೆ. ಹಲವು ಬಾರಿ, ಒಂದು ಜನಾಂಗೀಯ ಗುಂಪಿಗೆ ರಾಜ್ಯತ್ವದ ಅಧಿಕಾರವಿದೆ ಎಂಬ ನಂಬಿಕೆ ಇದೆ, ಅಥವಾ ಒಂದು ರಾಜ್ಯದ ಪೌರತ್ವ ಬರಿ ಒಂದೇ ಜನಾಂಗೀಯ ಗುಂಪಿಗೆ ಸೀಮಿತವಾಗಿರಬೇಕೆಂದು, ಅಥವಾ ಒಂದೇ ರಾಜ್ಯದಲ್ಲಿ ಇರಬಹುದಾದ ಬಹುರಾಷ್ಟ್ರೀಯತೆಯು ಅವಶ್ಯವಾಗಿ ವ್ಯಕ್ತಪಡಿಸುವ ಹಕ್ಕನ್ನು ಒಳಗೊಂಡಿರಬೇಕು ಮತ್ತು ಅಲ್ಪಸಂಖ್ಯಾತರುಗಳಿಂದ ಕೂಡ ರಾಷ್ಟ್ರದ ಗುರುತಿಸುವಿಕೆಯನ್ನು ಕಾರ್ಯಗತ ಮಾಡಬಹುದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ಮರಾಠಾ ಚಕ್ರವರ್ತಿ ಮತ್ತು ಛತ್ರಪತಿ ಶಿವಾಜಿ ಮಹಾರಾಜರ ಉತ್ತರಾಧಿಕಾರಿ ಛತ್ರಪತಿ ಸಂಭಾಜಿ ರಾಜೇ (ಛತ್ರಪತಿ ಸಂಭಾಜಿ ರಾಜೇ ಭೋಸ್ಲೆ) ಅಥವಾ ಶಂಭಬ್ಬಾರಿ (೧೬೫೭-೧೬೮೯). ಆ ಸಮಯದಲ್ಲಿ, ಅವರು ಮರಾಠರ ಶತ್ರುಗಳಾದ, ಮುಘಲ್ ಚಕ್ರವರ್ತಿ ಔರಂಗಜೇಬ್, ಬಿಜಾಪುರ ಸುಲ್ತಾನರ ಅತ್ಯಂತ ಶಕ್ತಿಶಾಲಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಪ್ರಮುಖ ಪಾತ್ರ ವಹಿಸಿದರು. ಸಂಭಾಜಿ ಅವರು ಧೈರ್ಯಕ್ಕಾಗಿ ಪ್ರಸಿದ್ಧರಾಗಿದ್ದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು . ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ , ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮಾನವ ಜಾತಿಯ ಉತ್ಪತ್ತಿಯನ್ನು ವಿವರಿಸುವ ಜೀವ ವಿಕಾಸದ ಭಾಗವೇ ಮಾನವನ ವಿಕಾಸ. ಹಲವಾರು ಶತಮಾನಗಳಿಂದ ಹಲವಾರು ಮಾನವ ಮತ್ತಿತರ ವಾನರ ಜಾತಿಗಳಲ್ಲಿನ ಹೋಲಿಕೆಗಳನ್ನು ಗಮನಿಸಿದ್ದು ಹಾಗೂ ಜೀವ ವಿಕಾಸದ ಬಗ್ಗೆ ಯೋಚಿಸಿದ್ದಾದರೂ ಈ ವಾದವನ್ನು ನಿಶ್ಚಿತವಾಗಿ ಹಾಗೂ ವಿಸ್ತಾರವಾಗಿ ೧೮೫೯ರಲ್ಲಿ ಬಣ್ಣಿಸಿದವರು ಚಾರ್ಲ್ಸ್ ಡಾರ್ವಿನ್ರವರು. ಇದರನಂತರ ಮಾನವನ ಪೂರ್ವಜರ ಪರಿಶೋಧನೆಗೆ ಹೆಚ್ಚು ಒತ್ತು ಸಿಕ್ಕಿತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಲಿಪ್ತ ಚಳುವಳಿ (Non Aligned Movement (ನ್ಯಾಮ್)(ಎನ್ಎಎಂ)), ಅಮೇರಿಕಾ ಹಾಗು ಹಿಂದಿನ ಸೊವಿಯತ್ ಸಂಘದ ನಡುವಿನ ಶೀತಲ ಸಮರದ ಕಾಲದಲ್ಲಿ, ಎರಡೂ ಶಕ್ತಿ ಕೇಂದ್ರಗಳಿಂದ ದೂರವುಳಿದು ಈ ಸಂಘಟನೆಯ ಮುಖ್ಯ ದ್ಯೇಯವಾಗಿತ್ತು. ಇದು ಯುನೈಟೆಡ್ ಸೈಟ್ಸ್ ಮತ್ತು ಸೋವಿಯತ್ ಒಕ್ಕೂಟದ ಯಾವುದೇ ಪ್ರಮುಖ ರಾಜಕೀಯ ಶಕ್ತಿಯೊಂದಿಗೆ ಔಪಚಾರಿಕವಾಗಿ ಅಥವಾ ವಿರುದ್ಧವಾಗಿ ನಿಲ್ಲುವುದಿಲ್ಲ. ವಿಶ್ವಸಂಸ್ಥೆಯ ನಂತರ, ಇದು ವಿಶ್ವದಾದ್ಯಂತ ರಾಜ್ಯಗಳ ಅತಿದೊಡ್ಡ ಗುಂಪು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮಾಂಗ್ಟೆ ಚುಂಗ್ನೀಜಾಂಗ್ ಮೇರಿ ಕೋಮ್ OLY (ಜನನ 24 ನವೆಂಬರ್ 1982) ಒಬ್ಬ ಭಾರತೀಯ ಹವ್ಯಾಸಿ ಬಾಕ್ಸರ್, ರಾಜಕಾರಣಿ ಮತ್ತು ಹಾಲಿ ಸಂಸತ್ತಿನ ಸದಸ್ಯ, ರಾಜ್ಯಸಭೆ. ಆರು ಬಾರಿ ವಿಶ್ವ ಅಮೆಚೂರ್ ಬಾಕ್ಸಿಂಗ್ ಚಾಂಪಿಯನ್ಶಿಪ್ ಗೆದ್ದ ಏಕೈಕ ಮಹಿಳೆ, ಮೊದಲ ಏಳು ವಿಶ್ವ ಚಾಂಪಿಯನ್ಶಿಪ್ಗಳಲ್ಲಿ ಪ್ರತಿಯೊಂದರಲ್ಲಿ ಪದಕ ಗೆದ್ದ ಏಕೈಕ ಮಹಿಳಾ ಬಾಕ್ಸರ್ ಮತ್ತು ಎಂಟು ವಿಶ್ವ ಚಾಂಪಿಯನ್ಶಿಪ್ ಪದಕಗಳನ್ನು ಗೆದ್ದ ಏಕೈಕ ಬಾಕ್ಸರ್ (ಪುರುಷ ಅಥವಾ ಮಹಿಳೆ). ಮ್ಯಾಗ್ನಿಫಿಸೆಂಟ್ ಮೇರಿ ಎಂಬ ಅಡ್ಡಹೆಸರು ಹೊಂದಿರುವ ಅವರು 2012 ರ ಬೇಸಿಗೆ ಒಲಿಂಪಿಕ್ಸ್ಗೆ ಅರ್ಹತೆ ಪಡೆದ ಏಕೈಕ ಭಾರತೀಯ ಮಹಿಳಾ ಬಾಕ್ಸರ್, ಫ್ಲೈವೇಟ್ (51 ಕೆಜಿ) ಸ್ಪರ್ಧಿಸಿ ಕಂಚಿನ ಪದಕವನ್ನು ಗೆದ್ದಿದ್ದಾರೆ.
ಗಿರೀಶ್ ಕಾಸರವಳ್ಳಿ,ಭಾರತದ ಅತ್ಯಂತ ಪ್ರತಿಭಾನ್ವಿತ ಚಲನಚಿತ್ರ ನಿರ್ದೇಶಕರಲ್ಲೊಬ್ಬರು.ಮಲೆನಾಡಿನ ಕರ್ನಾಟಕ ರಾಜ್ಯದ ಶಿವಮೊಗ್ಗ ಜಿಲ್ಲೆಯ ತೀರ್ಥ ಹಳ್ಳಿ ತಾಲೂಕಿನ ಕೆಸಲೂರಿನಲ್ಲಿ ೧೯೫೦ರಲ್ಲಿ ಜನಿಸಿದ ಇವರು ಮಣಿಪಾಲದಲ್ಲಿ ಬಿ,ಫಾರ್ಮ್ ಪದವಿ ಮುಗಿಸಿ ಪುಣೆಯ ರಾಷ್ಟ್ರೀಯ ಚಲನಚಿತ್ರ ತರಬೇತಿ ಸಂಸ್ಥೆ ಯಲ್ಲಿ ನಿರ್ದೇಶನ ವಿಭಾಗದಲ್ಲಿ ಡಿಪ್ಲೊಮಾ ಪದವಿ ಗಳಿಸಿದರು. ಗಿರೀಶ್ ಕಾಸರವಳ್ಳಿಯವರು ತಮ್ಮ ೨೭ ವರ್ಷಗಳ ವೃತ್ತಿ ಜೀವನದಲ್ಲಿ ಕೇವಲ ೧೪ ಕನ್ನಡ ಚಿತ್ರಗಳನ್ನು ಮಾತ್ರ ನಿರ್ದೇಶಿಸಿದರೂ, ಹಲವಾರು ರಾಷ್ಟ್ರೀಯ ಹಾಗು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿದ್ದಾರೆ. ಇವರ ಚಿತ್ರಗಳು ಅನೇಕ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿಯೂ ಸಹ ಪ್ರದರ್ಶಿತವಾಗಿದೆ.
ಸಿದ್ಧಯ್ಯ ಪುರಾಣಿಕ (ಜೂನ್ ೧೮, ೧೯೧೮ - ಸೆಪ್ಟೆಂಬರ್ ೫, ೧೯೯೪) ಕನ್ನಡ ನಾಡು ಕಂಡ ಶ್ರೇಷ್ಠ ಅಧಿಕಾರಿಗಳು ಮತ್ತು ಸಾಹಿತಿಗಳಲ್ಲಿ ಒಬ್ಬರೆನಿಸಿದ್ದಾರೆ. ಉನ್ನತ ಅಧಿಕಾರಗಳಲ್ಲಿದ್ದು ಕನ್ನಡದಲ್ಲಿ ಶ್ರೇಷ್ಠ ಕೆಲಸ ಮಾಡಿದ ಮಾಸ್ತಿ ವೆಂಕಟೇಶ ಅಯ್ಯಂಗಾರ್, ನವರತ್ನ ರಾಮರಾವ್ ಅಂಥಹ ಮಹನೀಯರ ಸಾಲಿನಲ್ಲಿ ನಿರಂತರ ರಾರಾಜಿಸುವವರು ‘ವಚನೋದ್ಯಾನದ ಅನುಭಾವಿ’ ಬಿರುದಾಂಕಿತ, ‘ಕಾವ್ಯಾನಂದ’ ಕಾವ್ಯನಾಮಾಂಕಿತ, ‘ಐಎಎಸ್’ ಸ್ಥಾನಾಲಂಕೃತ, ಸಹೃದಯತೆಯ ಶ್ರೇಷ್ಠ ಔನ್ನತ್ಯರಾದ ಕನ್ನಡ ನಾಡಿನ ಅಗ್ರಗಣ್ಯ ಶ್ರೇಯಾಂಕಿತ ಮಹನೀಯ ಡಾ. ಸಿದ್ಧಯ ಪುರಾಣಿಕರು.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ. ಕಲೆ, ಸಾಹಿತ್ಯ, ನೃತ್ಯ (ಡೊಳ್ಳು ಕುಣಿತ, ಕಂಸಾಳೆ, ಕರಡಿ ಮಜಲು, ವೀರಗಾಸೆ, ನಂದಿಕೋಲು ಕುಣಿತ, ಇತ್ಯಾದಿ), ನಾಟಕ (ಬಯಲಾಟ, ದೊಡ್ಡಾಟ, ಶ್ರೀ ಕೃಷ್ಣಪಾರಿಜಾತ, ಯಕ್ಷಗಾನ) ಮುಂತಾದ ವಿವಿಧ ಪ್ರಕಾರಗಳನ್ನು ನಮ್ಮ ಕನ್ನಡ ಜಾನಪದ ಸಂಸ್ಕೃತಿಯಲ್ಲಿ ಕಾಣಬಹುದು. ಕನ್ನಡ ಜಾನಪದ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಗೀತೆಗಳು ಅತ್ಯಂತ ವೈವಿಧ್ಯಮಯವಾಗಿ ಕನ್ನಡನಾಡಿನ ವಿವಿಧ ಪ್ರದೇಶಗಳ ಪ್ರಾದೇಶಿಕ ಸೊಗಡುಗಳನ್ನು ನಮ್ಮ ಮುಂದಿನ ಪೀಳಿಗೆಗೆ ಜೋಪಾನ ಮಾಡಿವೆ ಎಂದರೆ ತಪ್ಪಲ್ಲ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಪುಸ್ತಕದ ರಕ್ಷಾಕವಚ ಎಂದರೆ ಒಂದು ಪುಸ್ತಕದ ಪುಟಗಳನ್ನು ಒಟ್ಟಾಗಿ ಕಟ್ಟಲು ಬಳಸಲಾದ ಯಾವುದೇ ರಕ್ಷಣಾತ್ಮಕ ಹೊದಿಕೆ. ಗಟ್ಟಿರಟ್ಟುಗಳು ಮತ್ತು ಕಾಗದಕವಚಗಳ ನಡುವಿನ ಪರಿಚಿತ ವ್ಯತ್ಯಾಸವನ್ನು ಮೀರಿ, ಮತ್ತಷ್ಟು ಪರ್ಯಾಯಗಳು ಮತ್ತು ಸೇರ್ಪಡಿಕೆಗಳಿವೆ, ಉದಾಹರಣೆಗೆ ಧೂಳು ಹೊದಿಕೆಗಳು, ಉಂಗುರ ರಟ್ಟು ಮತ್ತು ಹತ್ತೊಂಭತ್ತನೇ ಶತಮಾನದ ಪೇಪರ್-ಬೋರ್ಡ್ ಹಾಗೂ ಕೈರಟ್ಟಿನ ಸಾಂಪ್ರದಾಯಿಕ ಪ್ರಕಾರಗಳಂತಹ ಹೆಚ್ಚು ಹಳೆಯ ರೂಪಗಳು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.