The most-visited ಕನ್ನಡ Wikipedia articles, updated daily. Learn more...
ಪ್ರತಿ ವರ್ಷ ಫೆಬ್ರವರಿ ೨೮ನೇ ದಿನಾಂಕವನ್ನು ರಾಷ್ಟ್ರೀಯ ವಿಜ್ಞಾನ ದಿನವನ್ನಾಗಿ ಆಚರಿಸಲಾಗುತ್ತದೆ. ವಿಜ್ಞಾನ ಹಾಗೂ ನಮ್ಮ ಜೀವನದಲ್ಲಿ ಅದರ ಮಹತ್ವದ ಬಗ್ಗೆ ಜನಸಾಮಾನ್ಯರಲ್ಲಿ ಅರಿವು ಮೂಡಿಸುವುದು "ರಾಷ್ಟ್ರೀಯ ವಿಜ್ಞಾನ ದಿನ"ದ ಆಚರಣೆಯ ಉದ್ದೇಶವಾಗಿದೆ. ಉಪನ್ಯಾಸಗಳು, ಚರ್ಚಾಸ್ಪರ್ಧೆಗಳು, ರಸಪ್ರಶ್ನೆ, ವಸ್ತುಪ್ರದರ್ಶನ - ಹೀಗೆ ಅನೇಕ ಚಟುವಟಿಕೆಗಳನ್ನು ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ದೇಶದ ವಿವಿಧೆಡೆ ಹಮ್ಮಿಕೊಳ್ಳಲಾಗುತ್ತದೆ.
ಸರ್ ಸಿ.ವಿ.ರಾಮನ್ (Sir C.V.Raman) ಎಂದು ಶಿಕ್ಷಣ ವಲಯದಲ್ಲಿ ಸುಪ್ರಸಿದ್ಧರಾಗಿದ್ದ, ಚಂದ್ರಶೇಖರ ವೆಂಕಟರಾಮನ್ ರವರು ನೋಬೆಲ್ ಪ್ರಶಸ್ತಿ ಗಳಿಸಿದ ಪ್ರಪ್ರಥಮ ಭಾರತೀಯ ವಿಜ್ಞಾನಿ. ಅಷ್ಟೇ ಏಕೆ, ಏಷ್ಯದಲ್ಲೇ ಮೊತ್ತಮೊದಲ ಬಾರಿಗೆ ನೊಬೆಲ್ ಪಾರಿತೋಷಿಕ ಪಡೆದ ಭಾರತೀಯ ವಿಜ್ಞಾನಿ. ಈ ಪ್ರಶಸ್ತಿಯನ್ನು ೧೯೩೦ ರಲ್ಲಿ ಅವರದೇ ಹೆಸರಿಂದ ಅಲಂಕೃತವಾದ "ರಾಮನ್ ಎಫೆಕ್ಟ್" ಎಂಬ ಶೋಧನೆಗಾಗಿ ಭೌತಶಾಸ್ತ್ರ ಕ್ಷೇತ್ರದಲ್ಲಿ ಪಡೆದರು.
ರಾಮನ್ ಪರಿಣಾಮ ಎಂದರೆ ಏಕವರ್ಣೀಯ ಬೆಳಕು (ಮಾನೊಕ್ರೊಮ್ಯಾಟಿಕ್ ಲೈಟ್) ಪಾರದರ್ಶಕ ಮಾಧ್ಯಮದ (ಟ್ರ್ಯಾನ್ಸ್ಪೆರೆಂಟ್ ಮೀಡಿಯಮ್) ಮೂಲಕ ಹಾದುಹೋಗುವಾಗ ಆ ಮಾಧ್ಯಮದ ಅಣುಗಳೊಂದಿಗೆ ಅಂತರವರ್ತಿಸಿ ಶಕ್ತಿಯನ್ನು ಕಳೆದುಕೊಳ್ಳುವುದರಿಂದ ಇಲ್ಲವೆ ಪಡೆಯುವುದರಿಂದ ಚದರಿದ ಬೆಳಕಿನ ಆವರ್ತಾಂಕದಲ್ಲಿ (ಫ್ರೀಕ್ವೆನ್ಸಿ) ಬದಲಾವಣೆಯಾಗಿ ಹೆಚ್ಚುವರಿ ರೋಹಿತ ರೇಖೆಗಳು ಕಾಣಿಸುವ ವಿದ್ಯಮಾನ (ರಾಮನ್ ಎಫೆಕ್ಟ್). ಯಾವುದೇ ಪಾರದರ್ಶಕ ರಾಸಾಯನಿಕ ವಸ್ತುವಿನ ಮೂಲಕ ಬೆಳಕನ್ನು ಹಾಯಿಸಿದಾಗ ಅದರಿಂದ ಹೊರಬರುವ ಕಿರಣಗಳು ಒಳಬರುವ ಕಿರಣಗಳಿಗಿಂತ ಭಿನ್ನವಾದ ದಿಕ್ಕಿನತ್ತ ಹೊರಳಿರುವುದನ್ನು ನೋಡಬಹುದು (ಗಾಜಿನ ಪಟ್ಟಕದ ಮೂಲಕ ಬೆಳಕನ್ನು ಹಾಯಿಸುವ ಉದಾಹರಣೆ ನೆನಪಿಸಿಕೊಳ್ಳಬಹುದು). ಹೀಗೆ ಚದುರಿದ ಬಹುಪಾಲು ಕಿರಣಗಳ ಸ್ವರೂಪ ಮೂಲ ಕಿರಣದಂತೆಯೇ ಇರುತ್ತದಾದರೂ ಒಂದಷ್ಟು ಭಾಗದ ಕಿರಣಗಳ ತರಂಗಾಂತರ ಮೂಲಕ್ಕಿಂತ ಬದಲಾಗಿರುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕುಂಭ ಮೇಳ (ದೇವನಾಗರಿ: कुम्भ मेला) ಹಿಂದೂಧರ್ಮದ ಒಂದು ಸಾಮೂಹಿಕ ತೀರ್ಥಯಾತ್ರೆ. ಕುಂಭ ಮೇಳವನ್ನು ನಾಲ್ಕು ವರ್ಷಗಳಿಗೊಮ್ಮೆ ಆಚರಿಸಲಾಗುತ್ತದೆ. ಅರ್ಧ ಕುಂಭ ಮೇಳವನ್ನು ಆರು ವರ್ಷಗಳಿಗೊಮ್ಮೆ ಹರಿದ್ವಾರ ಹಾಗು ಪ್ರಯಾಗದಲ್ಲಿ ಆಚರಿಸಲಾಗುತ್ತದೆ , ಪೂರ್ಣ ಕುಂಭ ಹನ್ನೆರಡು ವರ್ಷಗಳಿಗೊಮ್ಮೆ , ನಾಲ್ಕು (ಪ್ರಯಾಗ (ಅಲ್ಲಹಾಬಾದ್), ಹರಿದ್ವಾರ, ಉಜ್ಜಯಿನಿ ಹಾಗೂ ನಾಸಿಕ) ಸ್ಥಳಗಳಲ್ಲಿ ಆಚರಿಸಲಾಗುತ್ತದೆ.
ತಂತಿವಾದ್ಯಗಳು ಸಂಗೀತಗಾರನು ಯಾವುದೋ ರೀತಿಯಲ್ಲಿ ತಂತಿಗಳನ್ನು ನುಡಿಸಿದಾಗ ಅಥವಾ ಬಾಜಿಸಿದಾಗ, ಕಂಪಿಸುವ ತಂತಿಗಳಿಂದ ಶಬ್ದವನ್ನು ಉತ್ಪತ್ತಿಮಾಡುವ ಸಂಗೀತ ವಾದ್ಯಗಳು. ಸಂಗೀತಗಾರರು ತಂತಿಗಳನ್ನು ತಮ್ಮ ಬೆರಳುಗಳು ಅಥವಾ ಮೀಟು ದಂತದಿಂದ ಮೀಟುವ ಮೂಲಕ ಕೆಲವು ತಂತಿವಾದ್ಯಗಳನ್ನು ನುಡಿಸುತ್ತಾರೆ, ಮತ್ತು ಇತರ ತಂತಿವಾದ್ಯಗಳನ್ನು ತಂತಿಗಳನ್ನು ಒಂದು ಹಗುರವಾದ ಕಟ್ಟಿಗೆಯ ಸುತ್ತಿಗೆಯಿಂದ ಹೊಡೆದು ಅಥವಾ ತಂತಿಗಳನ್ನು ಕಮಾನಿನಿಂದ ಉಜ್ಜಿ ನುಡಿಸುತ್ತಾರೆ. ಹಾರ್ಪ್ಸಿಕಾರ್ಡ್ನಂತಹ ಕೆಲವು ಕೀಲಿಮಣೆ ವಾದ್ಯಗಳಲ್ಲಿ, ಸಂಗೀತಗಾರನು ಒಂದು ಕೀಲಿಯನ್ನು ಒತ್ತಿದಾಗ ಅದು ತಂತಿಯನ್ನು ಮೀಟುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
(ಸೂಚನೆ : ನಮ್ಮ ನುಡಿಯಲ್ಲಿ ಜ್ವಾಲಾಮುಖಿ ಮತ್ತು ಅಗ್ನಿಪರ್ವತ ಈ ಎರಡೂ ಪದಗಳು ಸಮಾನಾರ್ಥಕವಾಗಿ ಬಳಸಲ್ಪಡುತ್ತವೆ. ಈ ಲೇಖನದಲ್ಲಿ ಎರಡೂ ಪದಗಳನ್ನು ಬಳಸಲಾಗಿದೆ) ಉರಿಬೆಟ್ಟ (ಜ್ವಾಲಾಮುಖಿ) ಭೂಮಿಯ ಮೇಲ್ಮೈ ಅಥವಾ ಚಿಪ್ಪಿನಲ್ಲಿರುವ ಒಂದು ಬಿರುಕು. ಇಂತಹ ಬಿರುಕಿನ ಮೂಲಕ ಭೂಗರ್ಭದಿಂದ ಕುದಿಯುವ ದ್ರವರೂಪದಲ್ಲಿನ ಕಲ್ಲುಗಳು, ಬೂದಿ ಮತ್ತು ಇತರ ಅನಿಲಗಳು ಹೊರಗೆ ಚಿಮ್ಮುತ್ತವೆ.
ವಿಜ್ಞಾನವು ಬ್ರಹ್ಮಾಂಡದ ಬಗ್ಗೆ ಪರೀಕ್ಷಣೀಯ ವಿವರಣೆಗಳು ಮತ್ತು ಭವಿಷ್ಯವಾಣಿಗಳ ರೂಪದಲ್ಲಿ ಜ್ಞಾನವನ್ನು ನಿರ್ಮಿಸುವ ಮತ್ತು ಸಂಘಟಿಸುವ ಒಂದು ವ್ಯವಸ್ಥಿತ ಯೋಜನೆ. ಮಾನವನಿಂದ ತಿಳಿಯಬಲ್ಲ ವಿಶ್ವದ ಬಗೆಗಿನ ಜ್ಞಾನದ ಸಮೂಹವೆ ವಿಜ್ಞಾನ. ಒಂದು ಹಳೆಯ ಮತ್ತು ನಿಕಟವಾಗಿ ಸಂಬಂಧಿತ ಅರ್ಥದಲ್ಲಿ, "ವಿಜ್ಞಾನ"ವು, ತಾರ್ಕಿಕವಾಗಿ ವಿವರಿಸಬಲ್ಲ ಮತ್ತು ವಿಶ್ವಾಸಾರ್ಹವಾಗಿ ಅನ್ವಯಿಸಬಲ್ಲ ಪ್ರಕಾರದ, ಜ್ಞಾನದ ಮಂಡಲವನ್ನೇ ನಿರ್ದೇಶಿಸುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: Sow the seeds to get ripen fruits.) ಹಾವೂ ಸಾಯ್ಬಾರದು, ಕೋಲೂ ಮುರೀಬಾರ್ದು We want to kill the snake in a stick but the stick do not break ಮಣ್ಣಿನಿಂದ ಮಣ್ಣಿಗೆ (English: from mud to the mud) ಅರ್ಥ: ಭೂತಾಯಿಯ ಮಡಿಲಲ್ಲಿ ಹುಟ್ಟಿದ ನಾವೆಲ್ಲರೂ ಕಡೆಗೆ ಭೂತಾಯಿಯ ಮಡಿಲಿಗೆ ಸೇರುತ್ತೇವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಭಾಜಿ (ಶಂಭುರಾಜೆ ಅಥವಾ ಸಂಭಾಜಿ ರಾಜೇ ಶಿವಾಜಿರಾಜೇ ಭೋಸ್ಲೆ) (೧೬೫೭-೧೬೮೯) ಒಬ್ಬ, ಮರಾಠಾ ಸಾಮ್ರಾಜ್ಯದ ಎರಡನೆಯ ಛತ್ರಪತಿ ಅಥವಾ ಅರಸ ಮತ್ತು ಶಿವಾಜಿಯ ಮೂರನೆಯ ಪುತ್ರ. ಆ ಸಮಯದಲ್ಲಿ, ಅವರು ಮರಾಠರ ಶತ್ರುಗಳಾದ, ಮುಘಲ್ ಚಕ್ರವರ್ತಿ ಔರಂಗಜೇಬ್, ಬಿಜಾಪುರ ಸುಲ್ತಾನರ ಅತ್ಯಂತ ಶಕ್ತಿಶಾಲಿ ಆಳ್ವಿಕೆಯನ್ನು ಅಂತ್ಯಗೊಳಿಸಲು ಪ್ರಮುಖ ಪಾತ್ರ ವಹಿಸಿದರು. ಸಂಭಾಜಿ ಅವರು ಧೈರ್ಯಕ್ಕಾಗಿ ಪ್ರಸಿದ್ಧರಾಗಿದ್ದರು.
ಸರ್ ಜಗದೀಶ್ಚಂದ್ರ ಬೋಸ್, ಸಿಎಸ್ಐ, ಸಿಐಈ, ಎಫ್ಆರ್ಎಸ್ (ನವೆಂಬರ್ ೩೦, ೧೮೫೮ – ನವೆಂಬರ್ ೨೩, ೧೯೩೭) ಒಬ್ಬ ಬಹುಮುಖ ಪ್ರತಿಭೆಯ ಬಂಗಾಲಿ ಮೂಲದ ಭೌತಶಾಸ್ತ್ರ ಹಾಗು ಜೀವಶಾಸ್ತ್ರ ವಿಜ್ಞಾನಿ. ರೇಡಿಯೊ, ದೂರಸಂಪರ್ಕ, ಪ್ರಕಾಶ ಶಾಸ್ತ್ರ, ಸಸ್ಯ ಜೀವಶಾಸ್ತ್ರ ಹೀಗೆ ಅನೇಕ ವಿಜ್ಞಾನದ ವಿಭಾಗದಲ್ಲಿ ಸಂಶೋಧನೆ ನಡೆಸಿದ್ದ ಬೋಸರು ಅವರ ಕಾಲದ ಶ್ರೇಷ್ಠ ವಿಜ್ಞಾನಿಗಳಲ್ಲೊಬ್ಬರಾಗಿದ್ದರು. ಬೋಸರು ಸಸ್ಯಗಳು ಸಹ ಪ್ರಾಣಿಗಳ ಹಾಗೆ ಹೊರ ಪ್ರಭಾವಗಳಿಗೆ ಸ್ಪಂದಿಸುತ್ತವೆಂದು ಜಗತ್ತಿಗೆ ಸಾಬೀತು ಮಾಡಿ ತೊರಿಸಿದವರು.
ಸರ್ ಐಸಾಕ್ ನ್ಯೂಟನ್ FRS (4 ಜನವರಿ 1643– 31 ಮಾರ್ಚ್ 1727 [OS: 25 ಡಿಸೆಂಬರ್ 1642– 20 March 1727]) ರವರು ಓರ್ವ ಆಂಗ್ಲ ಭೌತವಿಜ್ಞಾನಿ, ಗಣಿತಜ್ಞ, ಖಗೋಳಶಾಸ್ತ್ರಜ್ಞ, ಸ್ವಾಭಾವಿಕ ತತ್ವಜ್ಞಾನಿ, ರಸಸಿದ್ಧಾಂತಿ, ಹಾಗೂ ಬ್ರಹ್ಮಜ್ಞಾನಿಯಾಗಿದ್ದರು. ಗಮನಾರ್ಹ ಪ್ರಮಾಣದ ತಜ್ಞರು ಹಾಗೂ ಸಾರ್ವಜನಿಕರು ಅವರ ಬಗ್ಗೆ ಇತಿಹಾಸದ ಬಹುಪ್ರಭಾವಿ ವ್ಯಕ್ತಿ ಎಂದು ತಿಳಿದು ಭಾವಿಸಿಕೊಂಡಿದ್ದಾರೆ. 1687ರಲ್ಲಿ ಪ್ರಕಟಿಸಿದ ಅವರ ಫಿಲಾಸೊಫೀಸ್ ನ್ಯಾಚ್ಯುರಲಿಸ್ ಪ್ರಿನ್ಸಿಪಿಯಾ ಮ್ಯಾಥೆಮೆಟಿಕಾ (ಸಾಮಾನ್ಯವಾಗಿ ಪ್ರಿನ್ಸಿಪಿಯಾ ಎಂದು ಕರೆಯಲ್ಪಡುವ) ಪುಸ್ತಕವು ವಿಜ್ಞಾನದ ಇತಿಹಾಸದಲ್ಲೇ ಬಹು ಪ್ರಭಾವೀ ಪುಸ್ತಕಗಳಲ್ಲಿ ಒಂದಾಗಿದ್ದು ಅಭಿಜಾತ ಯಂತ್ರಶಾಸ್ತ್ರಕ್ಕೆ ಉತ್ತಮ ತಳಪಾಯ ಒದಗಿಸಿಕೊಟ್ಟ ಕೃತಿಯೆಂಬ ಹೆಗ್ಗಳಿಕೆ ಹೊಂದಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಸಾಯನ ವಿಜ್ಞಾನಕ್ಕೆ ಭಾರತೀಯ ವಿಜ್ಞಾನಿಗಳ ಕೊಡುಗೆ
ವಿಜ್ಞಾನದ ಒಂದು ಭಾಗವಾದ ರಸಾಯನ ವಿಜ್ಞಾನ ಇಂದು ಅತ್ಯಂತ ವಿಸ್ತಾರವಾಗಿ ಬೆಳೆದಿದೆ. ಇದರಲ್ಲಿ ಸಾವಯವ, ನಿರವಯವ ರಸಾಯನ ವಿಜ್ಞಾನಗಳಲ್ಲದೆ ಅನೇಕ ಹೊಸ ಶಾಖೆಗಳು, ಉದಾಹರಣೆಗೆ ಜೀವರಸಾಯನ ವಿಜ್ಞಾನ, ಪಾಲಿಮರ್ ವಿಜ್ಞಾನ ಮುಂತಾದವು ಹುಟ್ಟಿಕೊಂಡಿವೆ. ರಸಾಯನ ವಿಜ್ಞಾನ ಬೆಳೆಯಲು ಈ ವಿಜ್ಞಾನದ ಅತಿ ಸಾರ್ವತ್ರಿಕ ಆನ್ವಯಿಕತೆ ಮತ್ತು ಅಗತ್ಯತೆಗಳೇ ಕಾರಣ.
ಸೂಕ್ಷ್ಮ ದರ್ಶಕವು (Greek: μικρός , ಮೈಕ್ರೋಸ್ , "ಸೂಕ್ಷ್ಮ" ಮತ್ತು σκοπεῖν, ಸ್ಕೋಪೆನ್ , "ವೀಕ್ಷಿಸು" ಅಥವಾ "ನೋಡು" ನಿಂದ) ಬರಿಯ ಕಣ್ಣಿಗೆ ಕಾಣಿಸದ ಸೂಕ್ಷ್ಮ ವಸ್ತುಗಳನ್ನು ನೋಡಲು ಬಳಸುವ ಉಪಕರಣವಾಗಿದೆ. ಈ ಉಪಕರಣವನ್ನು ಉಪಯೋಗಿಸಿ ಸಣ್ಣ ವಸ್ತುಗಳನ್ನು ಪರೀಕ್ಷಿಸುವ ವಿಜ್ಞಾನಕ್ಕೆ (ವಿಧಾನಕ್ಕೆ) ಸೂಕ್ಷ್ಮ ದರ್ಶನ (ಮೈಕ್ರೋಸ್ಕೋಪಿ) ಎಂದು ಕರೆಯಲಾಗುತ್ತದೆ. ಸೂಕ್ಷ್ಮದರ್ಶಕೀಯ (ಮೈಕ್ರೋಸ್ಕೋಪಿಕ್) ಎಂದರೆ ಸೂಕ್ಷ್ಮ ದರ್ಶಕದ ಸಹಾಯವಿಲ್ಲದೇ ಕಣ್ಣಿಗೆ ಕಾಣಿಸದಿರುವುದು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಶ್ರೀನಿವಾಸ ರಾಮಾನುಜನ್ (ಪೂರ್ಣ ಹೆಸರು - ಶ್ರೀನಿವಾಸ ರಾಮಾನುಜನ್ ಅಯ್ಯಂಗಾರ್) (ಡಿಸೆಂಬರ್ ೨೨, ೧೮೮೭ - ಏಪ್ರಿಲ್ ೨೬, ೧೯೨೦) ವಿಶ್ವದಲ್ಲಿ ಶ್ರೇಷ್ಠ ಭಾರತೀಯ ಗಣಿತಜ್ಞರೆಂದು ಪ್ರಖ್ಯಾತರಾಗಿದ್ದಾರೆ. “ಪ್ರತಿ ಧನಪೂರ್ಣಾಂಶವೂ ರಾಮಾನುಜನ್ನರ ವೈಯಕ್ತಿಕ ಮಿತ್ರರುಗಳಲ್ಲೊಂದು” ಎಂಬುದು ಲೋಕದಲ್ಲಿ ವಿಖ್ಯಾತ ನುಡಿ. ಅವರಿಗೆ “ಸಂಖ್ಯೆಗಳ ವೈಲಕ್ಷಣಗಳನ್ನು ನಂಬಲಸಾಧ್ಯವಾದಂಥ ರೀತಿಯಲ್ಲಿ ನೆನಪಿಡುವ’ ಅಪೂರ್ವ ಸಾಮರ್ಥ್ಯವಿತ್ತು.
ಚಂದ್ರಯಾನ-೩ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೊ) ಯ ಯೋಜಿತ ಮೂರನೇ ಚಂದ್ರನ ಪರಿಶೋಧನಾ ಕಾರ್ಯಾಚರಣೆಯಾಗಿದೆ. ಚಂದ್ರಯಾನ-೨ ರಲ್ಲಿ, ಸಾಫ್ಟ್ ಲ್ಯಾಂಡಿಂಗ್ ಮಾರ್ಗದರ್ಶನ ಸಾಫ್ಟ್ವೇರ್ನಲ್ಲಿ ಉಂಟಾದ ಕೊನೆಯ ನಿಮಿಷದ ದೋಷವು ಲ್ಯಾಂಡರ್ನ ಸಾಫ್ಟ್ ಲ್ಯಾಂಡಿಂಗ್ ಪ್ರಯತ್ನದ ವಿಫಲತೆಗೆ ಕಾರಣವಾಯಿತು, ಸಾಫ್ಟ್ ಲ್ಯಾಂಡಿಂಗ್ ಅನ್ನು ಪ್ರದರ್ಶಿಸಲು ಮತ್ತೊಂದು ಚಂದ್ರನ ಕಾರ್ಯಾಚರಣೆಯನ್ನು ಪ್ರಸ್ತಾಪಿಸಲಾಯಿತು. ಚಂದ್ರಯಾನ-೩ ಚಂದ್ರಯಾನ-೨ರ ಮಿಷನ್ ಪುನರಾವರ್ತನೆ ಆದರೆ ಚಂದ್ರಯಾನ-೨ರಂತೆಯೇ ಲ್ಯಾಂಡರ್ ಮತ್ತು ರೋವರ್ ಅನ್ನು ಮಾತ್ರ ಒಳಗೊಂಡಿರುತ್ತದೆ.
ಮಳೆನೀರು ಕೊಯ್ಲು ಎಂಬುದು ಮಳೆನೀರನ್ನು ಒಟ್ಟುಗೂಡಿಸುವ, ಅಥವಾ ಸಂಚಯನ ಮಾಡುವ ಮತ್ತು ಶೇಖರಿಸಿಟ್ಟುಕೊಳ್ಳುವ ವಿಧಾನಕ್ಕಿರುವ ಹೆಸರು. ಕುಡಿಯುವ ನೀರನ್ನು ಒದಗಿಸಲು ಜಾನುವಾರುಗಳಿಗೆ ನೀರುಣಿಸಲು ನೀರಾವರಿಗಾಗಿ ನೀರಿನ ವ್ಯವಸ್ಥೆ ಮಾಡಲು ಅಥವಾ ಅಂತರ್ಜಲ ಪುನರ್ಭರ್ತಿಕಾರ್ಯ ಎಂದು ಕರೆಯಲಾಗುವ ಪ್ರಕ್ರಿಯೆಯೊಂದರಲ್ಲಿ ನೀರುಪೊಟರೆಯನ್ನು ಪುನಃ ತುಂಬಿಸಲು ಮಳೆನೀರು ಕೊಯ್ಲು ಪದ್ಧತಿಯನ್ನು ಬಳಸಿಕೊಂಡು ಬರಲಾಗಿದೆ. ಮನೆಗಳು, ಗುಡಾರಗಳು ಮತ್ತು ಸ್ಥಳೀಯ ಸಾರ್ವಜನಿಕ ಕಟ್ಟಡಗಳ ಛಾವಣಿಗಳಿಂದ ಅಥವಾ ವಿಶೇಷವಾಗಿ ಸಿದ್ಧಗೊಳಿಸಲಾದ ನೆಲದ ಪ್ರದೇಶಗಳಿಂದ ಸಂಗ್ರಹಿಸಲಾದ ಮಳೆನೀರು, ಕುಡಿಯುವ ನೀರಿಗೆ ತನ್ನದೇ ಆದ ಪ್ರಮುಖ ಕೊಡುಗೆಯನ್ನು ನೀಡಬಲ್ಲದು.
ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ, ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆಗಳೆಂದರೆ ಬಾಷ್ಪೀಕರಣ (evapotranspiration), ಸಾಂದ್ರೀಕರಣ(condensation), ವರ್ಷಾವತರಣ(precipitation), ಒಳಸೋಸುವಿಕೆ(infiltration), ಮೇಲಿನ ಹರಿವು(surface flow) ಮತ್ತು ನೆಲದಡಿಯ ಹರಿವು(subsurface flow).
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ತೋಳ (Indian Wolf) ಇದು ಮೂಲತಃ ' ಇರಾನಿ ತೋಳ'ದ ಒಂದು ಪ್ರಭೇದವಾಗಿ ಪರಿಗಣಿತವಾಗಿದೆ.ಭಾರತದಲ್ಲಿ ಇದು ಮುಖ್ಯವಾಗಿ ಉತ್ತರ,ಮಧ್ಯ ಹಾಗೂ ದಕ್ಷಿಣ ಭಾರತ ಹಲವೆಡೆ ತೆರೆದ ಬಯಲು ಕಾಡುಗಳಲ್ಲಿ ಕಂಡುಬರುತ್ತವೆ.ಇದು ನಾಯಿಜಾತಿಗೆ ಸೇರಿದ ಪ್ರಾಣಿ.ನಸುಕಂದು ಬಣ್ಣ ಹೊಂದಿದ್ದು,ದೊಡ್ಡ ಬುರುಡೆ ಹಾಗೂ ಹಲ್ಲುಗಳಿಂದ ಗುರುತಿಸಲು ಸುಲಭ.ಇದರ ಆಹಾರ ಜಿಂಕೆ,ಮೊಲ,ನರಿ,ಹಕ್ಕಿ ಇತ್ಯಾದಿ.ಹಲವೊಮ್ಮೆ ದನಕರುಗಳನ್ನೂ ತಿನ್ನಬಹುದು. ಒಮ್ಮೆಗೆ ೩ ರಿಂದ ೯ ಮರಿಗಳ ವರೆಗೆ ಹಾಕುತ್ತದೆ.ಆಯುಃಪ್ರಮಾಣ ೧೨ ರಿಂದ ೧೫ ವರ್ಷಗಳು.ಈ ತೋಳಗಳು ತಮ್ಮ ವಿಚಿತ್ರವಾದ ಹಾಗು ಭಯಂಕರವಾದ ಕೂಗಿಗೆ ಪ್ರಸಿದ್ದ.ಎವು ಸಾಮಾನ್ಯವಾಗಿ ರಾತ್ರಿವೇಳೆ ಬೇಟೆಯಾಡುತ್ತವೆ.
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು
ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗಗಳು ಹಿಂದುಳಿದ ವರ್ಗಗಳೆಂದು ಪರಿಗಣಿತವಾದ ಜಾತಿಗಳು ಮತ್ತು ಸಮುದಾಯಗಳ ಉನ್ನತಿಗಾಗಿ ಕರ್ನಾಟಕ ಸರ್ಕಾರ ಕಾಲದಿಂದ ಕಾಲಕ್ಕೆ ಅನೇಕ ಆಯೋಗಗಳನ್ನು ರಚಿಸಿದೆ. ಹತ್ತೊಂಬತ್ತನೆಯ ಶತಮಾನದ ಉತ್ತರಾರ್ಧದಲ್ಲಿ ಹಿಂದುಳಿದ ವರ್ಗಗಳೆಂಬ ಪರಿಕಲ್ಪನೆ ಸಾರ್ವಜನಿಕ ವಲಯದಲ್ಲಿ ಕೇಳಿ ಬಂತು. ಅದುವರೆಗೂ ಬ್ರಿಟಿಷರ ನೇರ ಅಧೀನದ ಪ್ರಾಂತಗಳಲ್ಲಿ ಮತ್ತು ಸಂಸ್ಥಾನಗಳಲ್ಲಿ ಸರ್ಕಾರಿ ನೌಕರಿಗಳನ್ನು ವಿವೇಚನೆಯ ಮತ್ತು ಅರ್ಹತೆಯ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿತ್ತು.
ಶ್ವಾಸಕೋಶವು ಬಹುತೇಕ ಚತುಷ್ಪದಿಗಳು, ಕೆಲವು ಮೀನುಗಳು ಮತ್ತು ಕೆಲವು ಶಂಬುಕಗಳನ್ನು ಒಳಗೊಂಡಂತೆ, ಅನೇಕ ಗಾಳಿಯನ್ನು ಉಸಿರಾಡುವ ಪ್ರಾಣಿಗಳಲ್ಲಿ ಅಗತ್ಯ ಉಸಿರಾಟದ ಅಂಗ. ಸಸ್ತನಿಗಳು ಮತ್ತು ಹೆಚ್ಚು ಸಂಕೀರ್ಣ ಜೀವರೂಪಗಳಲ್ಲಿ, ಎರಡು ಶ್ವಾಸಕೋಶಗಳು ಹೃದಯದ ಎರಡೂ ಬದಿಯಲ್ಲಿ ಬೆನ್ನೆಲುಬಿನ ಹತ್ತಿರ ನೆಲೆಸಿರುತ್ತವೆ. ವಾತಾವರಣದಿಂದ ರಕ್ತಪ್ರವಾಹದೊಳಗೆ ಆಮ್ಲಜನಕವನ್ನು ಸಾಗಿಸುವುದು, ಮತ್ತು ರಕ್ತಪ್ರವಾಹದಿಂದ ವಾತಾವರಣಕ್ಕೆ ಇಂಗಾಲದ ಡೈಆಕ್ಸೈಡ್ಅನ್ನು ಬಿಡುವುದು ಅವುಗಳ ಪ್ರಧಾನ ಕಾರ್ಯವಾಗಿದೆ.
ಜಲಶುದ್ಧೀಕರಣ ವೆಂಬುದು, ಮೂಲ ಸ್ಥಿತಿಯ ನೀರಿನಲ್ಲಿರುವ ಬೇಡವಾದ ರಾಸಾಯನಿಕಗಳನ್ನು, ವಸ್ತುಗಳನ್ನು ಮತ್ತು ಜೈವಿಕ ಕಶ್ಮಲಗಳನ್ನು ತೆಗೆಯುವ ಕ್ರಿಯೆಯಾಗಿದೆ. ನಿರ್ದಿಷ್ಟ ಉದ್ದೇಶಕ್ಕೆ ಹೊಂದಿಕೊಳ್ಳುವ ನೀರನ್ನು ಉತ್ಪಾದಿಸುವುದು ಇದರ ಗುರಿಯಾಗಿದೆ. ಮಾನವರ ಬಳಕೆಗಾಗಿ ಬಹುಪಾಲು ನೀರನ್ನು ಶುದ್ಧೀಕರಿಸಲಾಗುತ್ತದೆ (ಕುಡಿಯುವ ನೀರು), ಆದರೆ ಜಲಶುದ್ಧೀಕರಣವನ್ನು ವೈದ್ಯಕೀಯ, ಔಷಧ ವಿಜ್ಞಾನ, ರಾಸಾಯನಿಕ ಮತ್ತು ಕೈಗಾರಿಕಾ ಬಳಕೆಗಳ ಬೇಡಿಕೆಗಳನ್ನು ಈಡೇರಿಸುವುದು ಒಳಗೊಂಡಂತೆ ವಿವಿಧ ಉದ್ದೇಶಗಳಿಗಾಗಿ ಮಾಡಬಹುದಾಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಹೃದಯವು 3553 ಬೆನ್ನೆಲುಬುಳ್ಳ ಪ್ರಾಣಿಗಳಲ್ಲಿ ರಕ್ತದ ಸಂಚಲನೆಯನ್ನು ಕ್ರಮವಾಗಿ ಉಂಟುಮಾಡುವ ಒಂದು ಸ್ನಾಯು ವಿಧದ ಅಂಗ. ತೀರ ಪ್ರಾಥಮಿಕ ದರ್ಜೆಯ ಪ್ರಾಣಿಗಳನ್ನು (ಉದಾಹರಣೆಗೆ ಏಕಾಣು ಜೀವಿಗಳು) ಬಿಟ್ಟು ಇತರ ಇಲ್ಲ ಪ್ರಾಣಿಗಳಿಗೂ, ಎರೆಹುಳುಗಳನ್ನೂ ಒಳಗೊಂಡಂತೆ ಅಕಶೇರುಕಗಳಿಗೆ ಸಹ ಹೃದಯ ಉಂಟು, ಪ್ರಾಣಿ ದೇಹದಲ್ಲಿ ರಕ್ತಪರಿಚಲನೆಯ ನಿರಂತರತೆಯನ್ನು ಕೂಡಿಟ್ಟುಕೊಳ್ಳುವುದೇ ಇದು ನಿರ್ವಹಿಸುವ ಕ್ರಿಯೆ. ಇದು ಎದೆಯ ಮಧ್ಯದಲ್ಲಿ ಸ್ವಲ್ಪ ಹಿಂದಕ್ಕೆ ಇದೆ.