The most-visited ಕನ್ನಡ Wikipedia articles, updated daily. Learn more...
ಹಿಂದೂ ಧರ್ಮದಲ್ಲಿ, ಸಮುದ್ರಮಂಥನ ಅಥವಾ ಕ್ಷೀರಸಮುದ್ರವನ್ನು ಕಡೆದ ಘಟನೆ ಪುರಾಣಗಳಲ್ಲಿ ಒಂದು ಅತ್ಯಂತ ಪ್ರಸಿದ್ದ ಪ್ರಸಂಗ ಹಾಗೂ ಇದನ್ನು ಅತ್ಯಂತ ವೈಭವದಿಂದ ೧೨ ವರ್ಷಗಳಿಗೊಮ್ಮೆ ಕುಂಭ ಮೇಳ ಎಂಬ ಹಬ್ಬವಾಗಿ ಆಚರಿಸಲಾಗುತ್ತದೆ. ಈ ಕಥೆಯು ಭಾಗವತ ಪುರಾಣ, ಮಹಾಭಾರತ ಹಾಗೂ ವಿಷ್ಣು ಪುರಾಣದಲ್ಲಿ ಕಂಡುಬರುತ್ತದೆ. ಹಾಗೂ ಇದನು ಪ್ರೀತಂ ಬಿ ಉ ಶಿಕಾರಿಪುರ ರವರು ಬರೆದಿದ್ದಾರೆ ಸಮುದ್ರಮಂಥನದ ಇತರ ಹೆಸರುಗಳು — ಸಮುದ್ರಮಂಥನಂ — ಮಂಥನಂ ಎಂದರೆ ಸಂಸ್ಕೃತದಲ್ಲಿ ಮಂಥನ ಅಥವಾ 'ಕಡೆಯುವುದು' ಎಂದರ್ಥ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸುನೀತಾ ವಿಲಿಯಮ್ಸ್ (ಜನನ ಸೆಪ್ಟೆಂಬರ್ 19, 1965) ಅವರು ಅಮೇರಿಕದಲ್ಲಿ ನೌಕಾದಳದಲ್ಲಿ ಅಧಿಕಾರಿ ಹಾಗೂ ನಾಸಾದಲ್ಲಿ ಗಗನಯಾತ್ರಿಯಾಗಿದ್ದಾರೆ. ಅವರನ್ನು ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಏರ್ಪಡಿಸಿದ್ದ ಎಕ್ಸ್ಪೆಡಿಷನ್ 14ರ ಯಾನದಲ್ಲಿಯ ಗಗನ ಯಾತ್ರಿಗಳಲ್ಲಿ ಒಬ್ಬರನ್ನಾಗಿ ಆಯ್ಕೆ ಮಾಡಲಾಗಿತ್ತು. ನಂತರ ಎಕ್ಪ್ಪೆಡಿಷನ್ 15ರಲ್ಲೂ ಕೂಡ ಅವರನ್ನು ಬಳಸಿಕೊಳ್ಳಲಾಯ್ತು.
ಆಲ್ಕೆಮಿ ಎಂಬ ಪದವನ್ನು, ಅರೇಬಿಕ್ ಪದ ಅಲ್-ಕಿಮಿಯಾ (الكيمياء)ದಿಂದ ವ್ಯುತ್ಪನ್ನವಾದದ್ದಾಗಿದ್ದು, ಬೆರಕೆ/ಕೀಳು ಲೋಹಗಳನ್ನು ಚಿನ್ನ/ಸ್ವರ್ಣವನ್ನಾಗಿ ಪರಿವರ್ತಿಸುವ ವಿಧಾನಗಳ ಬಗ್ಗೆ, "ದೀರ್ಘಾಯಸ್ಸಿನ ಸಿದ್ಧರಸ"ದ ತಯಾರಿಕೆಯ ಬಗ್ಗೆ ಸಂಶೋಧನೆ, ಸರ್ವೋತ್ಕೃಷ್ಠ ಜ್ಞಾನ ಪಡೆಯುವ ಯತ್ನ ರಸವಾದಿ/ರಸಸಿದ್ಧಾಂತಿಯ ಅಭಿವೃದ್ಧಿಯನ್ನೂ ಒಳಗೊಂಡು ಇನ್ನಿತರ ಅಸಾಧಾರಣ ಗುಣಲಕ್ಷಣಗಳನ್ನು ಹೊಂದಿರುವಂತಹಾ ವಸ್ತುಗಳ ರಚನೆಗಳ ಬಗ್ಗೆ ಕೇಂದ್ರೀಕೃತವಾದ ಸಿದ್ಧಾಂತ ಹಾಗೂ ಒಂದು ಪ್ರಾಚೀನ ಪದ್ಧತಿಯಾಗಿದೆ. ರಸವಿದ್ಯೆಯ ಪ್ರಾಯೋಗಿಕ ಅಂಶಗಳು ಆಧುನಿಕ ಅಜೈವಿಕ ರಸಾಯನಶಾಸ್ತ್ರದ ಮೂಲಭೂತ ಅಂಶಗಳ ತಿಳುವಳಿಕೆ ನೀಡಿದ್ದು, ಸಂಬಂಧಪಟ್ಟ ಪ್ರಕ್ರಿಯೆಗಳು, ಉಪಕರಣಗಳು ಹಾಗೂ ಈಗಿನ ಅನೇಕ ವಸ್ತುಗಳ ಗುರುತಿಸುವಿಕೆ ಹಾಗೂ ಬಳಕೆಯ ಬಗ್ಗೆ ತಿಳಿದುಬರಲು ಕಾರಣವಾಗಿವೆ. ಪ್ರಾಚೀನ ಈಜಿಪ್ಟ್, ಮೆಸೊಪೊಟೇಮಿಯಾ (ಆಧುನಿಕ ಇರಾಕ್), ಭಾರತ (ಆಧುನಿಕ ಭಾರತೀಯ ಉಪಖಂಡ), ಪರ್ಷಿಯ (ಆಧುನಿಕ ಇರಾನ್), ಚೀನಾ, ಜಪಾನ್, ಕೊರಿಯಾ, ಪ್ರಾಚೀನ ಗ್ರೀಕ್-ರೋಮನ್ ವಿಶ್ವ, ಮಧ್ಯಯುಗೀಯ ಮಹಮ್ಮದೀಯ ವಿಶ್ವ, ಹಾಗೂ ಆಗಿನ ಮಧ್ಯಯುಗೀಯ ಯೂರೋಪ್ಗಳಲ್ಲಿ 20ನೇ ಶತಮಾನದವರೆಗೆ ಕನಿಷ್ಠ 2,500 ವರ್ಷಗಳ ಕಾಲ ವ್ಯಾಪಿಸಿದ ಶಾಲೆಗಳು ಹಾಗೂ ಸಿದ್ಧಾಂತೀಯ ವ್ಯವಸ್ಥೆಗಳ ಸಂಕೀರ್ಣ ಜಾಲಗಳಲ್ಲಿ ರಸವಿದ್ಯೆಯು ಬಳಕೆಯಲ್ಲಿತ್ತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಮಹೇಂದ್ರ ಸಿಂಗ್ ಧೋನಿಯವರನ್ನು ಎಮ್ ಎಸ್ ಧೋನಿ ಎಂದೂ ಸಂಕ್ಷ್ತಿಪ್ತ ರೂಪದಲ್ಲಿ ಕರೆಯಲಾಗುತ್ತದೆ. ಜನನ ಬಿಹಾರದ ರಾಂಚಿಯಲ್ಲಿ ೭ ಜುಲೈ ೧೯೮೧ರಂದು (ಈಗಿನ ಜಾರ್ಖಂಡ್) ಇವರು ಭಾರತದ ಕ್ರಿಕೆಟಿಗ ಮತ್ತು ಭಾರತ ಕ್ರಿಕೆಟ್ ತಂಡದ ಮಾಜಿ ನಾಯಕರು. ಆರಂಭದಲ್ಲಿ ಅತಿ ಅಬ್ಬರದ ಮತ್ತು ಆಕ್ರಮಣಕಾರಿ ಬ್ಯಾಟ್ಸ್ಮ್ಯಾನ್ ಎಂದು ಗುರುತಿಸಿಕೊಂಡರೂ, ನಂತರ ಧೋನಿಯವರು ಭಾರತದ ಏಕದಿನ (ODI) ತಂಡದ ಶಾಂತ ಸ್ವಭಾವದ ನಾಯಕರಲ್ಲಿ ಒಬ್ಬರಂತೆ ಗುರ್ತಿಸಲ್ಪಡುತ್ತಾರೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕ್ರಿಕೆಟ್ ಎಂಬುದು ದಾಂಡು ಮತ್ತು ಚೆಂಡುಗಳ ಆಟ. ಬ್ಯಾಟ್ ಮತ್ತು ಚೆಂಡುಗಳಿಗೆ ಸಂಬಂಧಪಟ್ಟ ಪಂಗಡದ ಆಟವೆಂದೂ ಹಾಗೂ ೧೬ನೇ ಶತಮಾನದಲ್ಲಿ ದಕ್ಷಿಣ ಇಂಗ್ಲೆಂಡಿನಲ್ಲಿ ಆಡಲ್ಪಟ್ಟಿದ್ದು ಎಂಬ ಬಗ್ಗೆ ಆಧಾರವಿದೆ.೧೮ನೇಯ ಶತಮಾನದ ಅಂತ್ಯದ ಸಮಯದಲ್ಲಿ ಕ್ರಿಕೆಟ್ ಇಂಗ್ಲೆಂಡಿನ ರಾಷ್ಟ್ರೀಯ ಕ್ರೀಡೆಯಾಗಿ ಅಭಿವೃದ್ಧಿ ಹೊಂದಿತ್ತು. ಬ್ರಿಟೀಷ್ ಸಾಮ್ರಾಜ್ಯದ ವಿಸ್ತರಣೆಯು ಸಮುದ್ರದಾಚೆಗಿನ ದೇಶಗಳೊಡನೆ ಕ್ರಿಕೆಟ್ ಅಡಲು ಅನುವು ಮಾಡಿಕೊಟ್ಟಿತು ಮತ್ತು ಹತ್ತೊಂಬತ್ತನೆಯ ಶತಮಾನದ ಮಧ್ಯಭಾಗದಲ್ಲಿ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ನಡೆಸಲಾಗಿತ್ತು.ಇಂದು ಆಟಗಳ ಆಡಳಿತಾತ್ಮಕ ಅಂಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು ೧೦೪ ಸದಸ್ಯ ರಾಷ್ಟ್ರಗಳನ್ನು ಒಳಗೊಂಡಿದೆ.
ಜಾಗತಿಕ ತಾಪಮಾನ ನಿಯಂತ್ರಣ ಜಾಗತಿಕ ತಾಪಮಾನ ಏರಿಕೆ ಯೆಂದರೆ 20 ನೇ ಶತಮಾನದ ಮಧ್ಯಭಾಗದಲ್ಲಿ ಭೂಮಿಯ ಮೇಲ್ಮೈ-ಸಮೀಪದಲ್ಲಿರುವ ವಾಯು ಮತ್ತು ಸಾಗರ ಪ್ರದೇಶಗಳಲ್ಲಿ ಆದ ಸರಾಸರಿ ತಾಪಮಾನದ ಏರಿಕೆ ಹಾಗೂ ಅದರ ಪ್ರಕ್ಷೇಪಿತ ಮುಂದುವರಿಕೆ. ಜಾಗತಿಕ ಮೇಲ್ಮೈ ಉಷ್ಣತೆಯು ಕಳೆದ ಶತಮಾನದಲ್ಲಿ 0.74 ± 0.18 °C (1.33 ± 0.32 °F)ರಷ್ಟು ಹೆಚ್ಚಿದೆ. ಹವಾಮಾನ ಬದಲಾವಣೆಯ ಕುರಿತಾದ ಅಂತರ-ಸರಕಾರಿ ಮಂಡಳಿಯು (IPCC) ಅಗೆದು ತೆಗೆದ ಇಂಧನಗಳು ಮತ್ತು ಅರಣ್ಯನಾಶಗಳಂತಹಾ ಮಾನವ ಚಟುವಟಿಕೆಗಳಿಂದಾದ ಹಸಿರುಮನೆ ಅನಿಲಗಳ ಸಂಗ್ರಹದ ಹೆಚ್ಚಳವು 20ನೇ ಶತಮಾನ ದ ಮಧ್ಯಕಾಲದ ನಂತರದ ತಾಪಮಾನ ಏರಿಕೆಗೆ ಕಾರಣವೆಂದು ತೀರ್ಮಾನಕ್ಕೆ ಬಂದಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಬೆಂಗಳೂರಿನ ಶ್ರೀ ಕೃಷ್ಣರಾಜ ಪರಿಷನ್ಮಂದಿರದಲ್ಲಿ ೧೯೧೫ ಸುಮಾರಿಗೆ ಕರ್ನಾಟಕ ಸಾಹಿತ್ಯ ಪರಿಷತ್ತು ಸ್ಥಾಪನೆಯಾಯಿತು.ಆಗ ಮೈಸೂರು ಅರಸರಾಗಿದ್ದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರು ಪರಿಷತ್ತಿನ ಸ್ಥಾಪನೆಗೆ ಚಾಲನೆ ನೀಡಿದರು. ಮುಂದೆ ೧೯೩೫ರಲ್ಲಿ ಈ ಹೆಸರನ್ನು ಕನ್ನಡ ಸಾಹಿತ್ಯ ಪರಿಷತ್ತು ಎಂದು ಬದಲಾಯಿಸಿದರು.ಇದು ಕನ್ನಡ ಪುಸ್ತಕ ಪ್ರಕಟಣೆ, ಕನ್ನಡ ನಾಡು-ನುಡಿಯ ಸಂರಕ್ಷಣೆ ಮತ್ತು ಕನ್ನಡ ಭಾಷೆಗಾಗಿ ಶ್ರಮಿಸಲು ಕಟ್ಟಲಾಗಿರುವ ಸಂಸ್ಥೆ. ಈ ಸಂಸ್ಥೆ ಕರ್ನಾಟಕದಾದ್ಯಂತ ಕನ್ನಡ ಸಾಹಿತ್ಯ ಸಮ್ಮೇಳನಗಳನ್ನು ಏರ್ಪಡಿಸುತ್ತದೆ.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಮನುಷ್ಯರಿಗೆ ಅಥವಾ ಇತರ ಜೀವಿಗಳಿಗೆ ಹಾನಿ ಅಥವಾ ತೊಂದರೆಯುಂಟುಮಾಡುವ, ಸ್ವಾಭಾವಿಕ ಪರಿಸರಕ್ಕೆ ಹಾನಿಯನ್ನುಂಟುಮಾಡುವ ರಾಸಾಯನಿಕಗಳು (Chemicals), ಸೂಕ್ಷ್ಮ ಕಣಗಳ ವಸ್ತು, ಅಥವಾ ಜೈವಿಕ ಸಾಮಗ್ರಿಗಳು ಭೂಮಿಯ ವಾತಾವರಣಕ್ಕೆ ಸೇರಿಕೊಳ್ಳುವುದಕ್ಕೆ ವಾಯು ಮಾಲಿನ್ಯ ಎಂದು ಹೆಸರು. ವಾತಾವರಣದಲ್ಲಿನ ವ್ಯವಸ್ಥೆಯೂ ಒಂದು ಸಂಕೀರ್ಣ ಚಲನಶೀಲ ಸ್ವಾಭಾವಿಕ ಅನಿಲರೂಪದ್ದಾಗಿದೆ,ಭೂಮಿಯ ಮೇಲಿನ ಜೀವಜಾಲಕ್ಕೆ ಇದು ಮಹತ್ವದ್ದಾಗಿದೆ. ವಾಯು ಮಾಲಿನ್ಯದ ದುಷ್ಪರೀಣಾಮದಿಂದ ಓಜೋನ ಪದರವು ಕ್ಷೀಣಿಸುತ್ತಿದೆ., ಮಾನವನ ಆರೋಗ್ಯವಷ್ಟೇ ಅಲ್ಲದೇ ಭೂಮಿಯ ಪರಿಸರ ವ್ಯವಸ್ಥೆಗಳು ಒಂದು ಅಪಾಯವಾಗಿ ಪರಿಣಮಿಸುತ್ತದೆ ಎಂಬುದನ್ನು ಬಹಳ ಹಿಂದೆಯೇ ಗುರುತಿಸಲಾಗಿದೆ.
ಗವಿ ಗಂಗಾಧರೇಶ್ವರ ದೇವಾಲಯ, ಬೆಂಗಳೂರು
ಗವಿ ಗಂಗಾಧರೇಶ್ವರ ದೇವಾಲಯ ಅಥವಾ ಶ್ರೀ ಗಂಗಾಧರೇಶ್ವರ, ಭಾರತೀಯ ರಾಕ್-ಕಟ್ ವಾಸ್ತುಶಿಲ್ಪದ ಉದಾಹರಣೆಯಾದ ಗವಿಪುರ ಗುಹಾ ದೇವಾಲಯವು ಭಾರತದ ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ ನೆಲೆಗೊಂಡಿದೆ. ಈ ದೇವಾಲಯವು ಮುಂಭಾಗದಲ್ಲಿರುವ ನಿಗೂಢ ಕಲ್ಲಿನ ಡಿಸ್ಕ್ಗಳಿಗೆ ಹೆಸರುವಾಸಿಯಾಗಿದೆ ಮತ್ತು ವರ್ಷದ ಕೆಲವು ಸಮಯದಲ್ಲಿ ದೇವಾಲಯದ ಮೇಲೆ ಸೂರ್ಯನನ್ನು ಪ್ರಕಾಶಿಸಲು ಅನುವು ಮಾಡಿಕೊಡುವ ನಿಖರವಾದ ಯೋಜನೆಯಾಗಿದೆ. ಇದನ್ನು ೧೬ ನೇ ಶತಮಾನದಲ್ಲಿ ನಗರದ ಸ್ಥಾಪಕರಾದ ಒಂದನೇ ಕೆಂಪೇಗೌಡರು ನಿರ್ಮಿಸಿದರು.
ಹಿಂದೂ ಧರ್ಮದಲ್ಲಿ, ಪಂಡಿತನು ಜ್ಞಾನದ ಯಾವುದೇ ಕ್ಷೇತ್ರದ ಒಬ್ಬ ವಿದ್ವಾಂಸ ಅಥವಾ ಶಿಕ್ಷಕ, ವಿಶೇಷವಾಗಿ ವೈದಿಕ ಗ್ರಂಥಗಳು, ಧರ್ಮ, ಹಿಂದೂ ತತ್ವಶಾಸ್ತ್ರ, ಅಥವಾ ಸಂಗೀತದಂತಹ ಜಾತ್ಯತೀತ ವಿಷಯಗಳಲ್ಲಿ. ಅವನು ಗುರುಕುಲದಲ್ಲಿರುವ ಒಬ್ಬ ಗುರುವಾಗಿರಬಹುದು. ಸಂಸ್ಕೃತದಲ್ಲಿ, ಪಂಡಿತ ಪದವು ಸಾಮಾನ್ಯವಾಗಿ ಯಾವನಾದರೂ "ಬುದ್ಧಿವಂತ, ವಿದ್ಯಾವಂತ ಅಥವಾ ಕಲಿತ ವ್ಯಕ್ತಿ"ಯನ್ನು ಸೂಚಿಸುತ್ತದೆಂದು ಮೊನಿಯರ್ ವಿಲಿಯಮ್ಸ್ ಹೇಳುತ್ತಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.