The most-visited ಕನ್ನಡ Wikipedia articles, updated daily. Learn more...
ಮಹಾರಾಜ ದಶರಥ, ಅವನಾಳಿದ ರಾಜ್ಯದ ಹೆಸರು ಅಯೋಧ್ಯೆ, ಇದು ಸರಯೂ ನದಿತೀರದಲ್ಲಿದೆ. ಮಾನವೇಂದ್ರನಾದ ಮನುವಿನಿಂದ ನಿರ್ಮಿತವಾದ ರಾಜ್ಯ. ಮನುನಾ "ಮಾನವೇಂದ್ರೇಣ ಯಾ ಪುರೀ ನಿರ್ಮಿತಾ" ಸ್ವಯಂ (ವಾಲ್ಮೀಕಿ ರಾಮಾಯಣ, ಬಾಲಕಾಂಡ, ೫ನೆ ಸರ್ಗ) ಸಮೃದ್ಧವಾದ ರಾಜ್ಯ, ಸಮರ್ಥ ಮಂತ್ರಿಗಳು, ವಸಿಷ್ಠ ವಾಮದೇವರು ತಪಸ್ವಿಗಳಾದ ಗುರುಗಳು, ಪುರೋಹಿತರು, ಮನಮೆಚ್ಚಿದ ಮೂವರು ಮಡದಿಯರು, ಕೌಸಲ್ಯಾ, ಸುಮಿತ್ರಾ, ಕೈಕೇಯಿ.
ಐ.ಎನ್.ಎಸ್. ಅರಿಹಂತ್ (ಐ.ಎನ್.ಎಸ್.- ಇಂಡಿಯನ್ ನೇವಲ್ ಶಿಪ್/ಇಂಡಿಯನ್ ನೇವಲ್ ಸಬ್-ಮೆರೈನ್ - ಭಾರತೀಯ ನೌಕಾ ಹಡಗು/ಭಾರತೀಯ ನೌಕಾ ಜಲಾಂತರ್ಗಾಮಿ ಹಡಗು) ಭಾರತದ ಅಣು ಶಕ್ತಿ ಚಾಲಿತ ಜಲಾಂತರ್ಗಾಮಿ ನೌಕೆಗಳ ಅರಿಹಂತ್ ವರ್ಗದ ಪ್ರಮುಖ ನೌಕೆಯಾಗಿದೆ. ೬,೦೦೦ ಟನ್ನುಗಳಷ್ಟು ತೂಗುವ ಈ ನೌಕೆಯನ್ನು ಅಡ್ವಾನ್ಸ್ಡ್ ಟೆಕ್ನಾಲಜಿ ವೆಸಲ್ (ಸುಧಾರಿತ ತಂತ್ರಜ್ಞಾನ ನೌಕೆ) ಎಂಬ ಯೋಜನೆಯ ಸಮನ್ವಯ ಸುಮಾರು ೨.೯ ಬಿಲಿಯನ್ ಯು.ಎಸ್.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಸಂಜಯ ಮೆಮೋರಿಯಲ್ ಪಾಲಿಟೆಕ್ನಿಕ್(ಸಂಮೇಪಾ), 'ಎಸ್ಸೆಂಪಿ' ಎಂದು ಚಿಕ್ಕದಾಗಿ ಇಂಗ್ಲೀಷ್ ಬಾಷೆಯಲ್ಲಿ ಕರೆಯಲ್ಪಡುವ, ತಾಂತ್ರಿಕ ಶಿಕ್ಷಣದಲ್ಲಿ ಮೂರು ವರ್ಷದ ಡಿಪ್ಲಮೋವನ್ನು ನೀಡುವ ಮತ್ತು ಸಹವಿದ್ಯಾಬ್ಯಾಸದ ಒಂದು ಖಾಸಗಿ ವಿದ್ಯಾಲಯವಾಗಿದೆ. ಸಂಮೇಪಾ ನವದೆಹಲಿಯ ಅಖಿಲ ಭಾರತೀಯ ತಾಂತ್ರಿಕ ಶಿಕ್ಷಣ ಪರಿಷತ್ ಜೊತೆಗೆ ಸಂಯೋಜನೆ ಆಗಿರುವುದಲ್ಲದೆ, ಕರ್ನಾಟಕ ರಾಜ್ಯ ಸರ್ಕಾರದಿಂದ ಐದರಲ್ಲಿ ನಾಲ್ಕು ವಿಭಾಗಗಳು ವೇತಾನುದಾನವನ್ನು ಕೂಡ ಪಡೆಯುತ್ತಲಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಸಾಮಾನ್ಯವಾಗಿ ಆರ್ ಸಿ ಬಿ ಎಂದು ಸಂಕ್ಷಿಪ್ತಗೊಳಿಸಲಾಗಿದೆ) ಕರ್ನಾಟಕ, ಬೆಂಗಳೂರು ಮೂಲದ ವೃತ್ತಿಪರ ಫ್ರಾಂಚೈಸ್ ಕ್ರಿಕೆಟ್ ತಂಡವಾಗಿದ್ದು, ಇದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತದೆ. ಫ್ರ್ಯಾಂಚೈಸ್ ಅನ್ನು 2008 ರಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಥಾಪಿಸಿತು ಮತ್ತು ಅದರ ಮದ್ಯದ ಬ್ರ್ಯಾಂಡ್ ರಾಯಲ್ ಚಾಲೆಂಜ್ ನಂತರ ಹೆಸರಿಸಲಾಯಿತು. ರಾಯಲ್ ಚಾಲೆಂಜರ್ಸ್ ತಮ್ಮ ತವರಿನ ಪಂದ್ಯಗಳನ್ನು 32,000 ಸಾಮರ್ಥ್ಯದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾರೆ.
ಪಾಂಡವರು ಮಹಾಭಾರತದ ಮಹಾಕಾವ್ಯದ ಪ್ರಮುಖ ಪಾತ್ರಗಳಾದ ಯುಧಿಷ್ಠಿರ, ಭೀಮ, ಅರ್ಜುನ, ನಕುಲ ಮತ್ತು ಸಹದೇವ ಎಂಬ ಐದು ಸಹೋದರರನ್ನು ಉಲ್ಲೇಖಿಸಲಾಗಿದೆ. ಅವರನ್ನು ಕುರು ರಾಜ ಪಾಂಡುವಿನ ಪುತ್ರರೆಂದು ಪರಿಗಣಿಸಲಾಗುತ್ತಿತ್ತು, ಆದರೆ ಪಾಂಡುವಿನ ಮಕ್ಕಳನ್ನು ಹೊಂದಲು ಅಸಮರ್ಥತೆಯಿಂದಾಗಿ ಕುಂತಿ-ಮಾದ್ರಿಯರು ಬೇರೆ ಬೇರೆ ದೇವರುಗಳಿಂದ ಪಾಂಡವರನ್ನು ಪಡೆದರು. ಪಾಂಡವರು ದ್ರೌಪದಿ ಎಂಬ ಹೆಂಡತಿಯನ್ನು ಹಂಚಿಕೊಂಡರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಿತ್ರರಂಗದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.