The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಡೇವಿಡ್ ಕ್ರೇನ್ ಹಾಗೂ ಮಾರ್ಟಾ ಕಾಫ಼್ಮಾನ್ ರಿಂದ ತಯಾರಿತ ಫ಼್ರೆಂಡ್ಸ್, ಅಮೇರಿಕಾದ ಒಂದು ಧಾರಾವಾಹಿಯಾಗಿದೆ. ಸಾಂದರ್ಭಿಕ ಹಾಸ್ಯ ಧಾರಾವಾಹಿಯಾಗಿರುವ ಇದು ಎನ್.ಬಿ.ಸಿ ವಾಹಿನಿಯಲ್ಲಿ ಸೆಪ್ಟಂಬರ್ ೨೨, ೧೯೯೪ ರಿಂದ ಮೇ ೬, ೨೦೦೪ ರ ವರೆಗೆ ಪ್ರಸಾರಗೊಂಡಿತು. ಮೆನ್ಹಾಟನ್ ನ ಒಂದು ಸ್ನೇಹಿತರ ಬಳಗದ ಕಥೆಯ ಸುತ್ತ ತಿರುಗುವ ಈ ಸರಣಿಯು ವಾರ್ನರ್ಸ್ ಬ್ರದರ್ಸ್ ಟೆಲಿವಿಶನ್ ನ ಸಹಯೋಗದೊಂದಿಗೆ ಬ್ರೈಟ್/ಕಾಫ಼್ಮಾನ್/ಕ್ರೇನ್ ಪ್ರೊಡಕ್ಶನ್ಸ್ ನಿಂದ ನಿರ್ಮಿಸಲ್ಪಟ್ಟಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಭೌತಶಾಸ್ತ್ರವು (ಪುರಾತನ ಗ್ರೀಕ್: φυσική (ἐπιστήμη), ಭಾಷಾಂತರ: physikḗ (epistḗmē), lit. 'ನೈಸರ್ಗಿಕ ಜ್ಞಾನ', φύσις phýsis "ಪ್ರಕೃತಿ") ಪ್ರಕೃತಿಯ ಚಲನೆ, ನಡವಳಿಕೆಗಳನ್ನು ಹಾಗೂ ಬಾಹ್ಯಾಕಾಶ ಮತ್ತು ಕಾಲದ - (ಸಮಯದ) ಮೂಲಕ ಮತ್ತು ಶಕ್ತಿ ಮತ್ತು ಬಲಗಳ ಸಂಬಂಧಿತ ಘಟಕಗಳನ್ನು ಅಧ್ಯಯನ ಮಾಡುತ್ತದೆ. ಭೌತಶಾಸ್ತ್ರವು ಅತ್ಯಂತ ಮೂಲಭೂತ ವೈಜ್ಞಾನಿಕ ವಿಭಾಗಗಳಲ್ಲಿ ಒಂದಾಗಿದೆ ಮತ್ತು ಬ್ರಹ್ಮಾಂಡವು ಹೇಗೆ ವರ್ತಿಸುತ್ತದೆ ಎಂಬುದನ್ನು ಅರ್ಥಮಾಡಿಕೊಳ್ಳುವುದು ಅದರ ಪ್ರಮುಖ ಗುರಿಯಾಗಿದೆ.
೨೦೨೪ ಐಸಿಸಿ ಪುರುಷರ ಟಿ೨೦ ವಿಶ್ವಕಪ್
೨೦೨೪ ರ ಐಸಿಸಿ ಪುರುಷರ ಟಿ೨೦ ವಿಶ್ವಕಪ್ ಟಿ೨೦ ವಿಶ್ವಕಪ್ನ ಒಂಬತ್ತನೇ ಆವೃತ್ತಿಯಾಗಿದೆ, ಇದು ದ್ವೈವಾರ್ಷಿಕ ಟ್ವೆಂಟಿ 20 ಇಂಟರ್ನ್ಯಾಷನಲ್ (ಟಿ೨೦ಐ) ಪಂದ್ಯಾವಳಿಯಾಗಿದ್ದು, ಪುರುಷರ ರಾಷ್ಟ್ರೀಯ ತಂಡಗಳು ಸ್ಪರ್ಧಿಸುತ್ತವೆ ಹಾಗೂ ಈ ಒಂದು ಪಂದ್ಯಾವಳಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ICC) ಆಯೋಜಿಸುತ್ತದೆ. ಇದನ್ನು ವೆಸ್ಟ್ ಇಂಡೀಸ್ ಮತ್ತು ಯುನೈಟೆಡ್ ಸ್ಟೇಟ್ಸ್ ಸಹ-ಆತಿಥ್ಯ ವಹಿಸಲು ೧ ಜೂನ್ ನಿಂದ ೨೯ ಜೂನ್ ೨೦೨೪ ರವರೆಗೆ ನಿಗದಿಪಡಿಸಲಾಗಿತ್ತು ಇದು ಯುನೈಟೆಡ್ ಸ್ಟೇಟ್ಸ್ನಲ್ಲಿ ನಡೆಯುವ ಮೊದಲ ಐಸಿಸಿ ವಿಶ್ವಕಪ್ ಪಂದ್ಯಾವಳಿಯಾಗಿತ್ತು. ಹಿಂದಿನ ಆವೃತ್ತಿಯ ಫೈನಲ್ನಲ್ಲಿ ಪಾಕಿಸ್ತಾನವನ್ನು ಸೋಲಿಸಿದ ಇಂಗ್ಲೆಂಡ್ ಹಾಲಿ ಚಾಂಪಿಯನ್ ಆಗಿದ್ದರು.
ಪರೋಕ್ಷ ತೆರಿಗೆಯೆಂದರೆ, ಒಬ್ಬ ಮಧ್ಯವರ್ತಿ ತೆರಿಗೆಯ ಆರ್ಥಿಕ ಹೊರೆಯನ್ನು ಮೊದಲು ಹೊರೆಸಿ, ನಂತರ ತೆರಿಗೆ ರಿಟರ್ನ್ ಫೈಲ್ಗಳನ್ನು ಸರ್ಕಾರಕ್ಕೆ ಸಲ್ಲಿಸಿ ಆದಾಯಕ್ಕೆ ತೆರಿಗೆಯ ಮೊತ್ತವನ್ನು ಹಿಂದಿರುಗಿಸಿಕೊಳ್ಳುತ್ತಾನೆ. ಈ ಅರ್ಥದಲ್ಲಿ, ಪರೋಕ್ಷ ತೆರಿಗೆ ಎಂಬ ಶಬ್ದವು ನೇರ ತೆರಿಗೆ (ನೇರವಾಗಿ ವ್ಯಕ್ತಿಯಿಂದ ಸರ್ಕಾರ ಪಡೆಯುವ ತೆರಿಗೆ)ಯೊಂದಿಗೆ ವ್ಯತಿರಿಕ್ತವಾಗಿದೆ. ಪರೋಕ್ಷ ತೆರಿಗೆಯು, ಗ್ರಾಹಕರಿಗೆ ನೀಡುವ ಉತ್ಪನ್ನಗಳ ಬೆಲೆಯನ್ನು ಹೆಚ್ಚಿಸಲು ಪರೋಕ್ಷ ಸರಕುಗಳ ಬೆಲೆಯನ್ನು ಹೆಚ್ಚಿಸಬಹುದು.ಉದಾಹರಣೆಗಳು ಇಂಧನ, ಮದ್ಯ, ಮತ್ತು ಸಿಗರೆಟ್ ತೆರಿಗೆಗಳು.ಮೋಟಾರು ಕಾರುಗಳ ಮೇಲೆ ಅಬಕಾರಿ ಸುಂಕವನ್ನು ಕಾರುಗಳ ಉತ್ಪಾದಕರಿಂದ ಮೊದಲ ಬಾರಿಗೆ ಪಾವತಿಸಲಾಗುತ್ತದೆ;ಅಂತಿಮವಾಗಿ, ಉತ್ಪಾದಕನು ಈ ಕರ್ತವ್ಯದ ಹೊರೆವನ್ನು ಹೆಚ್ಚಿನ ಖರೀದಿಯ ರೂಪದಲ್ಲಿ ಕಾರನ್ನು ಕೊಳ್ಳುವವರಿಗೆ ವರ್ಗಾವಣೆ ಮಾಡುತ್ತಾನೆ.ಪರೋಕ್ಷ ತೆರಿಗೆಯನ್ನು ಬದಲಾಯಿಸಬಹುದು ಅಥವಾ ರವಾನಿಸಬಹುದು.
ನೀರಿನ ಹಕ್ಕಿ, ಪರ್ಯಾಯವಾಗಿ ಜಲಪಕ್ಷಿ ಅಥವಾ ಜಲಚರ ಪಕ್ಷಿ, ನೀರಿನ ಮೇಲೆ ಅಥವಾ ಅದರ ಸುತ್ತಲೂ ವಾಸಿಸುವ ಪಕ್ಷಿಯಾಗಿದೆ. ಕೆಲವು ವ್ಯಾಖ್ಯಾನಗಳಲ್ಲಿ, ನೀರಿನ ಹಕ್ಕಿ ಎಂಬ ಪದವನ್ನು ವಿಶೇಷವಾಗಿ ಸಿಹಿನೀರಿನ ಪರಿಸರ ವ್ಯವಸ್ಥೆಗಳಲ್ಲಿ ಪಕ್ಷಿಗಳಿಗೆ ಅನ್ವಯಿಸಲಾಗುತ್ತದೆ, ಆದಾಗ್ಯೂ ಇತರರು ಸಮುದ್ರ ಪರಿಸರದಲ್ಲಿ ವಾಸಿಸುವ ಸಮುದ್ರ ಪಕ್ಷಿಗಳಿಂದ ಯಾವುದೇ ವ್ಯತ್ಯಾಸವನ್ನು ಹೊಂದಿಲ್ಲ. ಕೆಲವು ನೀರಿನ ಪಕ್ಷಿಗಳು (ಉದಾಹರಣೆಗೆ ಅಲೆದಾಡುವ ಹಕ್ಕಿಗಳು ) ಹೆಚ್ಚು ಭೂಜೀವಿಗಳಾಗಿದ್ದರೆ ಇತರವು (ಉದಾಹರಣೆಗೆ ಜಲಪಕ್ಷಿಗಳು ) ಹೆಚ್ಚು ಜಲಚರವಾಗಿರುತ್ತವೆ.
ಕೆಂಬೂತ, (ಕೆಂಬೂತ-ಘನ - Greater Coucal or Crow Pheasant) (ವೈಜ್ಞಾನಿಕ ಹೆಸರು : Centropus sinensis) ಕೆಂಬೂತ, ಕಾಗೆ ಗಾತ್ರದ ಕೋಗಿಲೆ ಗಣಕ್ಕೆ ಸೇರಿದ ಒಂದು ಹಕ್ಕಿ ಪ್ರಭೇದ. ಕೋಗಿಲೆ (cuckoo) ಗಣಕ್ಕೆ ಸೇರಿದ್ದರೂ, ಕೋಗಿಲೆಯಂತೆ ಬೇರೆ ಹಕ್ಕಿಗಳ ಗೂಡಿನಲ್ಲಿ ಮೊಟ್ಟೆ ಇಡುವುದಿಲ್ಲ, ಹಾಗಾಗಿ ಇದು ಪರಾವಲಂಬಿಯಲ್ಲ. ಏಷ್ಯಾದ ಬಹು ಭಾಗ, ಭಾರತ, ಚೀನಾ, ಇಂಡೋನೇಷ್ಯಾಗಳಲ್ಲಿ ಇದರ ಜಾತಿ, ಪ್ರಜಾತಿಗಳು ಹರಡಿವೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಿತ್ರರಂಗದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಈ ಲೇಖನದಲ್ಲಿ ನರ್ಮದಾ ನದಿಯ ದಕ್ಷಿಣ ಭಾಗದ ಭಾರತೀಯ ಪರ್ಯಾಯದ್ವೀಪದಲ್ಲಿರುವ ದಕ್ಷಿಣ ಭಾರತದಲ್ಲಿ ಕಂಡು ಬರುವ ಪಕ್ಷಿಗಳ ಹೆಸರನ್ನು ಪಟ್ಟಿ ಮಾಡಲಾಗಿದೆ. ಆಂಧ್ರಪ್ರದೇಶದ ರೋಲ್ಲಪಾಡು, ಕರ್ನಾಟಕದ ನಾಗರಹೊಳೆ (ರಾಜೀವ್ ಗಾಂಧಿ ರಾಷ್ಟ್ರೀಯ ಉದ್ಯಾನವನ) ಮತ್ತು ಬಂಡೀಪುರ, ಕೇರಳದ ರಾಜಾಮಲೈ (ಎರವೀಕುಲಮ್ ರಾಷ್ಟ್ರೀಯ ಉದ್ಯಾನವನ) ಮತ್ತು ಪೆರಿಯಾರ್ ರಾಷ್ಟ್ರೀಯ ಉದ್ಯಾನವನ, ಮಧುಮಲೈ ರಾಷ್ಟ್ರೀಯ ಉದ್ಯಾನವನ, ಉದಕಮಂಡಲಮ್, ಅಣ್ಣಾಮಲೈನ ಇಂದಿರಾಗಾಂಧಿ ವನ್ಯಮೃಗ ಸಂರಕ್ಷಣಾ ವನ, ತಮಿಳುನಾಡಿನ ವೇದಾಂತಂಗಳ್ ಮತ್ತು ಕೋಡಿಕ್ಕರೈ ಗಳು ದಕ್ಷಿಣ ಭಾರತದ ಪಕ್ಷಿವೀಕ್ಷಣಾ ಸ್ಥಳಗಳೆಂದು ಹೆಸರುವಾಸಿಯಾಗಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕೊಳೆ ಎಂದರೆ ಅಶುದ್ಧ ವಸ್ತು, ವಿಶೇಷವಾಗಿ ಒಬ್ಬ ವ್ಯಕ್ತಿಯ ಬಟ್ಟೆಗಳು, ಚರ್ಮ ಅಥವಾ ಸ್ವತ್ತುಗಳ ಸಂಪರ್ಕದಲ್ಲಿದ್ದಾಗ. ಅಂತಹ ಸಂದರ್ಭದಲ್ಲಿ ಅವು ಕೊಳೆಯಾಗಿವೆ ಎಂದು ಹೇಳಲಾಗುತ್ತದೆ. ಸಾಮಾನ್ಯ ಪ್ರಕಾರಗಳ ಕೊಳೆಗಳಲ್ಲಿ ಈ ಮುಂದಿನವು ಸೇರಿವೆ: ಮಣ್ಣು - ಆಧಾರಶಿಲೆಯ ಮೇಲಿರುವ ಜೇಡಿಮಣ್ಣು, ಮರಳು, ಮಣ್ಣುಗೊಬ್ಬರಗಳ ಮಿಶ್ರಣ; ಧೂಳು - ಸಾವಯವ ಅಥವಾ ಖನಿಜ ಪದಾರ್ಥದ ಸಾಮಾನ್ಯ ಪುಡಿ; ಹೊಲಸು - ಮಲದಂತಹ ದುರ್ವಾಸನೆಯ ವಸ್ತು; ಇಲ್ಲಣ - ಹೊಗೆಮಸಿಯಂತಹ ಗಟ್ಟಿಯಾಗಿ ಹತ್ತಿಕೊಂಡ ಕಪ್ಪನೆಯ ಧೂಳು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಅಥವಾ ಮಹಮದೀಯ ಮತ ಅಥವಾ ಮಹಮದೀಯ ಧರ್ಮವು ಎಂಬುದು ಏಕದೇವತಾವಾದದಲ್ಲಿ ಅಧಿಷ್ಠಿತವಾದ ಐಬ್ರಹೀಮಿಕ ಧರ್ಮವಾಗಿದ್ದು, ಖುರಾನ್ ಮತ್ತು ಮುಹಮ್ಮದ್ ಪೈಗಂಬರರ ಶಿಕ್ಷಣಗಳಲ್ಲಿ ಕೇಂದ್ರೀಕೃತವಾಗಿದೆ. ಇಸ್ಲಾಮ್ ಧರ್ಮದ ಅನುಯಾಯಿಗಳನ್ನು ಮುಸ್ಲಿಮರು ಅಥವಾ ಮುಸಲ್ಮಾನ (ದೇವರ ಇಚ್ಛೆಗೆ ಶರಣಾದವರು) ಅಥವಾ ಮಹಮ್ಮದೀಯ ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ಜಾಗತಿಕವಾಗಿ 190 ಕೋಟಿಗಿಂತಲೂ (2020ರ ಅಂದಾಜಿನ ಪ್ರಕಾರ) ಹೆಚ್ಚು ಅನುಯಾಯಿಗಳನ್ನು ಹೊಂದಿದ್ದು, ಜಗತ್ತಿನ ಒಟ್ಟು ಜನಸಂಖ್ಯೆಯ ಕಾಲು ಭಾಗವನ್ನು (25%) ಒಳಗೊಳ್ಳುತ್ತದೆ ಮತ್ತು ಜಗತ್ತಿನ ಎರಡನೆ ಅತಿದೊಡ್ಡ ಧರ್ಮವಾಗಿದೆ.
ಶ್ರೀಮತಿ ಎ.ಪಿ.ಮಾಲತಿ ಅವರು ಕಳೆದ ಆರು ದಶಕಗಳಿಂದ ಕನ್ನಡ ಸಾಹಿತ್ಯರಂಗದಲ್ಲಿ ಸಣ್ಣ ಕಥೆ, ಕಾದಂಬರಿ, ಜೀವನ ಚರಿತ್ರ, ವಿಚಾರ ಸಾಹಿತ್ಯ ಕೃತಿಗಳಿಂದ ಕ್ರಿಯಾಶೀಲರಾದವರು. ಅರ್ಧಾಂಗಿ ಆಘಾತ, ಅನಿಶ್ಚಯ, ಅತೃಪ್ತೆ, ದೇವ, ತಿರುಗಿದ ಚಕ್ರ, ಮಂದಾರ, ಹಸಿರು ಚಿಗುರು, ಬದಲಾಗದವರು, ಕಾಡು ಕರೆಯಿತು, ವಕ್ರರೇಖೆ, ಅಲೋಕ ಮುಂತಾದ- ಇಪ್ಪತ್ತು ಕಾದಂಬರಿಗಳು-, ಸಂಜೆಬಿಸಿಲು ಮತ್ತು ವಸಂತದ ಹೂವುಗಳು - ಸಣ್ಣ ಕಥಾಸಂಕಲನ, ಸುಖದಹಾದಿ, ದಿವ್ಯಪಥ, ಸಂತೋಷದ ಹುಡುಕಾಟ, ಮಹಿಳೆ-ಪರಿವರ್ತನೆಯ ಹಾದಿಯಲ್ಲಿ, ಮಕ್ಕಳ ಪಾಲನೆ ಮುಂತಾದ - ಒಂಬತ್ತು ಲೇಖನ ಪುಸ್ತಕಗಳು, ಕಾರುಣ್ಯನಿಧಿ ಶ್ರೀಮಾತಾ ಶ್ರೀ ಶಾರದಾ ದೇವಿ, ಅನನ್ಯ ಅನುವಾದಕ ಅಹೋಬಲ ಶಂಕರ ಜೀವನಚರಿತ್ರೆಗಳು,- “ಕಾದಂಬರಿ ರಚನೆಯಲ್ಲಿ ಸ್ಟ್ರಕ್ಚರಲ್ ಮೆಥೆಡ್”-ಡಿಪ್ಲೋಮಾ ಪ್ರಬಂಧ, ಅಂಜನ ಕಾದಂಬರಿ-ಸಂಸ್ಕೃತಕ್ಕೆ ಅನುವಾದ, ಸ್ಮೃತಿಯಾನ ಆತ್ಮಚರಿತ್ರೆ ಇವರ ಪ್ರಮುಖ ಕೃತಿಗಳು. ಮಂದಾರ ಈ.ಟಿ.ವಿ ಯಲ್ಲಿ ಧಾರಾವಾಹಿಯಾಗಿ ಪ್ರಸಾರವಾಗಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅರ್ನಾಲ್ಡ್ ಅಲೋಯಿಸ್ ಶ್ವಾರ್ಜಿನೆಗ್ಗರ್ (English pronunciation: /ˈʃwɔrtsənɛɡər/German: [ˈaɐnɔlt ˈaloʏs ˈʃvaɐtsənˌʔɛɡɐ]ಜುಲೈ ೩೦, ೧೯೪೭ರಲ್ಲಿ ಜನನ); ಆಸ್ಟ್ರಿಯಾ ಅಮೇರಿಕದ ದೇಹಧಾಡ್ಯಪಟು, ನಟ, ಉದ್ಯಮಿ ಮತ್ತು ರಾಜಕಾರಣಿ ಆಗಿದ್ದು, ಪ್ರಸ್ತುತ ಕ್ಯಾಲಿಪೋರ್ನಿಯಾದ ೩೮ನೇ ರಾಜ್ಯಪಾಲರಾಗಿ ಸೇವೆ ಸಲ್ಲಿಸುತ್ತಲಿದ್ದಾರೆ. ತನ್ನ ಹದಿನೈದರ ಹರಯದಿಂದಲೇ ಶ್ವಾರ್ಜಿನೆಗ್ಗರ್ ದೈಹಿಕ ಕಸರತ್ತುಗಳನ್ನು ಆರಂಭಿಸಿದರು. ೨೨ನೇ ವಯಸ್ಸಿನಲ್ಲಿಯೇ ಮಿ.ಯುನಿವರ್ಸ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡರು ಮತ್ತು ಮಿ.ಒಲಂಪಿಯಾ ಸ್ಪರ್ಧೆಯಲ್ಲಿ ಸತತವಾಗಿ ಏಳು ಬಾರಿ ವಿಜೇತರಾದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಿಗ್ ಬಾಸ್ ಕನ್ನಡ ಸೀಸನ್ 11 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ಆಗಿದೆ. ಬಿಗ್ ಬಾಸ್ ಕನ್ನಡದ ಹನ್ನೋಂದನೇ ಸೀಸನ್ 29 ಸೆಪ್ಟಂಬರ್ 2024 ರಂದು ಸಂಜೆ 6 ಗಂಟೆಗೆ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಥಮ ಪ್ರದರ್ಶನ ಕಂಡಿತು. ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಸಿನಿಮಾದಲ್ಲಿ ಪ್ರಸಾರವಾಗುತ್ತಿತ್ತು .
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೆಂಗೇರಿ: ಬೆಂಗಳೂರು ಜಿಲ್ಲೆಯ ಕೆಂಗೇರಿ ತಾಲ್ಲೂಕಿನ ಒಂದು ಪಟ್ಟಣ ಪ್ರದೇಶ ಇದು ಕಸಬಾ ಹೋಬಳಿಯ ಕೇಂದ್ರ ಕಚೇರಿ. ಇದು ಮೈಸೂರು ರಸ್ತೆಯ ಪಶ್ಚಿಮದಲ್ಲಿದೆ.ಬೆಂಗಳೂರುನಿಂದ 16 ಕಿ.ಮೀ ದೂರದಲ್ಲಿದೆ. ಮೊದಲು ಬೆಂಗಳೂರು ದಕ್ಷಿಣ ತಾಲೂಕು ಆಗಿದ್ದು ನಂತರ ಕೆಂಗೇರಿಯಲ್ಲಿ ತಾಲೂಕು ಕೇಂದ್ರ ಕಚೇರಿ ರಚನೆ ಮಾಡಿ ಕೆಂಗೇರಿ ತಾಲೂಕು ರಚನೆ ಮಾಡಲಾಗಿದೆ, ಕೆಂಗೇರಿ ತಾಲೂಕು 540 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ರಸಾಯನಶಾಸ್ತ್ರದಲ್ಲಿ, ಮಿಶ್ರಣ ಎಂದರೆ ಭೌತಿಕವಾಗಿ ಸೇರಿಸಲಾದ ಎರಡು ಅಥವಾ ಹೆಚ್ಚು ಭಿನ್ನ ವಸ್ತುಗಳಿಂದ ತಯಾರಾದ ವಸ್ತು. ಮಿಶ್ರಣವು ಎರಡು ಅಥವಾ ಹೆಚ್ಚು ವಸ್ತುಗಳ ಭೌತಿಕ ಸಂಯೋಜನೆಯಾಗಿದ್ದು, ಸ್ವಸ್ವರೂಪಗಳು ಹಾಗೆಯೇ ಉಳಿದಿರುತ್ತವೆ ಮತ್ತು ವಸ್ತುಗಳನ್ನು ದ್ರಾವಣಗಳು, ತೇಲಣ ಹಾಗೂ ಕಲಿಲಗಳ ರೂಪದಲ್ಲಿ ಬೆರೆಸಲಾಗುತ್ತದೆ. ಮಿಶ್ರಣಗಳು ಮೂಲಧಾತುಗಳು ಹಾಗೂ ಸಂಯುಕ್ತಗಳಂತಹ ರಾಸಾಯನಿಕ ವಸ್ತುಗಳ ಯಾಂತ್ರಿಕ ಬೆರಕೆ ಅಥವಾ ಮಿಶ್ರಮಾಡುವಿಕೆಯ ಒಂದು ಉತ್ಪನ್ನವಾಗಿರುತ್ತವೆ, ಆದರೆ ರಾಸಾಯನಿಕ ಬಂಧ ಅಥವಾ ರಾಸಯನಿಕ ಬದಲಾವಣೆ ಇರುವುದಿಲ್ಲ, ಮತ್ತು ಹಾಗಾಗಿ ಪ್ರತಿಯೊಂದು ಘಟಕಾಂಶ ವಸ್ತುವು ತನ್ನ ಸ್ವಂತದ ರಾಸಾಯನಿಕ ಗುಣಗಳು ಹಾಗೂ ರಚನೆಯನ್ನು ಉಳಿಸಿಕೊಂಡಿರುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಕನ್ನಡದಲ್ಲಿ ಮಹಿಳಾ ವಿಮಾಂಸೆ ಸಾಹಿತ್ಯದ ಸಾವಿರದೈನೂರು ವರ್ಷಗಳ ಕನ್ನಡ ಸಾಹಿತ್ಯ ಚರಿತ್ರೆಯನ್ನು ಗಮನಿಸಿದರೆ ೨೦ನೆಯ ಶತಮಾನಕ್ಕೆ ಕಾಲಿರಿಸುವವರೆಗೆ ಮಹಿಳೆಯರೇ ರಚಿಸಿದ ಸಾಹಿತ್ಯ, ಮಹಿಳಾ ಸಾಹಿತ್ಯವೆಂಬ ಹೆಸರಿನಲ್ಲಿ ಗುರುತಿಸಬಹುದಾದಂಥದ್ದು ಹೆಚ್ಚು ಕಂಡುಬರುವುದಿಲ್ಲ. ಸ್ತ್ರೀಯರು ವಿದ್ಯೆಯಿಂದ ವಂಚಿತರಾದದ್ದು, ಪುರುಷ ಪ್ರಧಾನ ಸಾಮಾಜಿಕ ವ್ಯವಸ್ಥೆಯಲ್ಲಿ ಸಾರ್ವಜನಿಕ ಜೀವನದಲ್ಲಿ ಭಾಗಿಯಾಗುವ ಹೆಚ್ಚಿನ ಅವಕಾಶಗಳು ಸೃಷ್ಟಿಯಾಗದೇ ಹೋದದ್ದು, ಸ್ವಾತಂತ್ರ್ಯವಿರದ ಅವಲಂಬನೆಯ ಜೀವನವೇ ಪ್ರಧಾನವಾದದ್ದು - ಇಂಥ ಅನೇಕ ಕಾರಣಗಳಿಂದಾಗಿ ಮಹಿಳೆ ಕನ್ನಡ ಸಾಹಿತ್ಯದ ಮುಖ್ಯವಾಹಿನಿಯಲ್ಲಿ ಬಹುಕಾಲದವರೆಗೆ ಅನನ್ಯತೆಯನ್ನು ಕಂಡುಕೊಳ್ಳಲು ಸಾಧ್ಯವಾಗಲಿಲ್ಲ. ಇದಕ್ಕೆ ಅಲ್ಲೊಂದು ಇಲ್ಲೊಂದು ಅಪವಾದಗಳಿರಬಹುದು.
ಜೆನ್ನಾ ಜೇಮ್ಸನ್, (ಜೆನ್ನಾ ಮೇರಿ ಮಸ್ಸೊಲಿ ಜನನ; ಎಪ್ರಿಲ್ 9, 1974) ಅಮೆರಿಕಾದ ಉದ್ಯಮಿ ಮತ್ತು ಮಾಜಿ ಕಾಮಪ್ರಚೋದಕ ಚಿತ್ರಗಳ ನಟಿ, ಅವರನ್ನು ವಿಶ್ವದ ಪೋರ್ನ್ ಚಿತ್ರಗಳ ಅತ್ಯಂತ ಪ್ರಸಿದ್ಧ ನಟಿ ಮತ್ತು "ಪೋರ್ನ್ ಚಿತ್ರಗಳ ರಾಣಿ" ಎಂದು ಕರೆಯಲಾಗಿದೆ. ಬತ್ತಲೆ ನರ್ತಕಿ ಮತ್ತು ಗ್ಲಾಮರ್ ರೂಪದರ್ಶಿಯಾಗಿ ಆರಂಭದಲ್ಲಿ ಕೆಲಸ ಮಾಡಿದ್ದ ಅವರು, ನಂತರ 1993ರಲ್ಲಿ ಕಾಮಪ್ರಚೋದಕ ಚಿತ್ರಗಳಲ್ಲಿ ನಟಿಸಲು ಆರಂಭಿಸಿದರು. 1996ರ ಹೊತ್ತಿಗೆ, ಮೂರು ಪ್ರಮುಖ ಕಾಮಪ್ರಚೋದಕ ಚಿತ್ರ ನಿರ್ಮಾಣ ಸಂಸ್ಥೆಗಳಿಂದ ಪ್ರತ್ಯೇಕವಾಗಿ 'ಅಗ್ರ ಹೊಸ ಮುಖ' ಪ್ರಶಸ್ತಿ ಪಡೆದಿದ್ದರು.
ಜಪಾನೀ ಜಾನಪದ - ಜಪಾನಿನ ಆಚಾರ ವಿಚಾರಗಳಲ್ಲಿ ಚೀನ, ಕೊರಿಯ, ಭಾರತಗಳ ಪ್ರಭಾವವಿದ್ದರೂ ಅದು ತನ್ನದೇ ಆದ ಸಂಸ್ಕೃತಿಯನ್ನು ರೂಪಿಸಿಕೊಳ್ಳುವುದರಲ್ಲಿ ಯಶಸ್ವಿಯಾಗಿದೆ. ಅಲ್ಲಿ ದೊರೆಯುವ ಪುರಾಣಗಳು, ನೃತ್ಯಗಳು, ಗೀತೆ, ಕಥೆ, ನಂಬಿಕೆ, ಗಾದೆ ಮತ್ತು ಇನ್ನೂ ಅನೇಕ ಸಾಂಪ್ರದಾಯಿಕ ಪದ್ಧತಿಗಳ ಅಧ್ಯಯನದಿಂದ ಅಲ್ಲಿನ ಜಾನಪದ ಸಂಪತ್ತಿನ ವೈಶಿಷ್ಟ್ಯಗಳನ್ನು ಗುರುತಿಸಬಹುದಾಗಿದೆ. ವಿಶ್ವದ ಹಾಗೂ ದೈವಗಳ ಹುಟ್ಟಿನ ಬಗ್ಗೆ ಅನೇಕ ಪುರಾಣಗಳು, ಜಪಾನಿನ ಷಿಂಟೋ ಮತ್ತು ಬೌದ್ಧಧರ್ಮಗಳಲ್ಲಿ ದೊರೆಯುತ್ತವೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಎಲ್ಲಿಸ್ ಅಲೆಕ್ಸಾಂಡ್ರಾ ಪೆರ್ರಿ (ಜನನ 3 ನವೆಂಬರ್ 1990) ಆಸ್ಟ್ರೇಲಿಯಾದ ಕ್ರೀಡಾಪಟುವಾಗಿದ್ದು, ಅವರು ಕ್ರಿಕೆಟ್ ಮತ್ತು ಫುಟ್ಬಾಲ್ ಕ್ರೀಡೆಯಲ್ಲಿ ತಮ್ಮ ದೇಶವನ್ನು ಪ್ರತಿನಿಧಿಸಿದ್ದಾರೆ. 16 ನೇ ವಯಸ್ಸಿನಲ್ಲಿ ರಾಷ್ಟ್ರೀಯ ಕ್ರಿಕೆಟ್ ತಂಡ ಮತ್ತು ರಾಷ್ಟ್ರೀಯ ಸಾಕರ್ ತಂಡ ಎರಡಕ್ಕೂ ಪಾದಾರ್ಪಣೆ ಮಾಡಿದ ಅವರು, ಅಂತರರಾಷ್ಟ್ರೀಯ ಕ್ರಿಕೆಟ್ ಆಡಿದ ಅತ್ಯಂತ ಕಿರಿಯ ಆಸ್ಟ್ರೇಲಿಯಾದ ಆಟಗಾರ್ತಿ. ಮತ್ತು ಐಸಿಸಿ ಮತ್ತು ಫಿಫಾ ವಿಶ್ವಕಪ್ಗಳಲ್ಲಿ ಕಾಣಿಸಿಕೊಂಡ ಮೊದಲ ಆಟಗಾರ್ತಿ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಮಂಗಳಮುಖಿ ಎಂದರೆ ಹೆಣ್ಣು ಅಲ್ಲದ ಗಂಡು ಅಲ್ಲದ ಒಂದು ವ್ಯಕ್ತಿಯ ಮನಃಸ್ಥಿತಿ. 'ತೃತೀಯ ಲಿಂಗ' ಅಥವಾ 'ಮಂಗಳಮುಖಿ' ಎನ್ನುವ ಪರಿಭಾಷೆಗಳು ಇತ್ತೀಚೆಗೆ ಅಧಿಕೃತವಾಗಿ ಮತ್ತು ಹೆಚ್ಚಾಗಿ ಬಳಕೆಯಾಗುತ್ತಿವೆ. ಈ ಪದಗಳ ಬಳಕೆಗಿಂತ ಮುಂಚೆ ಇಂತಹ ವರನ್ನು ನಪುಂಸಕ, ಚಕ್ಕ, ಕೋಜಾ, ಹಿಜ್ರಾ, ಚನ್ನಪಟ್ಟಣ, ದ್ವಿಲಿಂಗಿ, ಶಿಖಂಡಿ ಮುಂತಾದ ಪದಗಳು ಬಳಕೆಯಾಗುತ್ತಿದ್ದವು.ಇದು ಇಂದಿನ ದಿನಗಳಲ್ಲಿ ಆಕ್ಷೇಪಾರ್ಹ ಪದಗಳು.