The most-visited ಕನ್ನಡ Wikipedia articles, updated daily. Learn more...
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ ಮತ್ತು ಪಾಕಿಸ್ತಾನಗಳ ನಡುವೆ, ಹಿಮಾಲಯದಲ್ಲಿ ಹುಟ್ಟಿ ಭಾರತದ ಪ್ರದೇಶಗಳಲ್ಲಿ ಹರಿದು ಪಾಕಿಸ್ತಾನದ ಮೂಲಕ ಅರಬ್ಬಿ ಸಮುದ್ರ ಸೇರುವ ಸಿಂಧೂ ಮತ್ತು ಅದರ ಜಲಾನಯನದ ವ್ಯಾಪ್ತಿಗೆ ಸೇರಿದ ಝೇಲಂ, ಚೀನಾಬ್, ರಾವಿ, ಬಿಯಾಸ್, ಸಟ್ಲೇಜ್ ನದಿಗಳ ನೀರನ್ನು ಹಂಚಿಕೊಳ್ಳುವುದಕ್ಕೆ ಸಂಬಂಧಪಟ್ಟಂತೆ 1960 ರಲ್ಲಿ ಒಪ್ಪಂದವನ್ನು ಮಾಡಿಕೊಳ್ಳಲಾಗಿದೆ. ಸಿಂಧೂ ನದಿ ನೀರು ಒಪ್ಪಂದಕ್ಕೆ ವಿಶ್ವ ಬ್ಯಾಂಕ್ (ಆಗ ಪುನರ್ನಿರ್ಮಾಣ ಮತ್ತು ಅಭಿವೃದ್ಧಿಯ ಅಂತರರಾಷ್ಟ್ರೀಯ ಬ್ಯಾಂಕ್) ಮಧ್ಯವರ್ತಿಯಾಗಿ ಭಾರತ ಮತ್ತು ಪಾಕಿಸ್ತಾನ ನಡುವೆ ನೀರು ಹಂಚಿಕೆ ಒಪ್ಪಂದದ ಕರಾರು ಆಯಿತು. ಒಪ್ಪಂದದಲ್ಲಿ ಪಾಕಿಸ್ತಾನ ಅಧ್ಯಕ್ಷ ಆಯೂಬ್ ಖಾನ್ ಮತ್ತು ಭಾರತದ ಪ್ರಧಾನಿ ಜವಾಹರಲಾಲ್ ನೆಹರು ಅವರು, ಸೆಪ್ಟೆಂಬರ್ 19, 1960 ರಂದು ಕರಾಚಿಯಲ್ಲಿ ಸಹಿ ಮಾಡಿದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಹಣ್ಣು ಎಂಬ ಪದವು ಸಸ್ಯಶಾಸ್ತ್ರದಲ್ಲಿ ಮತ್ತು ಸಾಮಾನ್ಯ ಬಳಕೆಯಲ್ಲಿ ಸ್ವಲ್ಪ ವ್ಯತ್ಯಾಸ ಇರುವ ಅರ್ಥಗಳನ್ನು ಹೊಂದಿದೆ. ಸಸ್ಯಶಾಸ್ತ್ರದಲ್ಲಿ ಹೂಬಿಡುವ ಸಸ್ಯಗಳು ತಮ್ಮ ಬೀಜಗಳನ್ನು ಪಸರಿಸಲು ಬೆಳೆಸಿಕೊಳ್ಳುವ ಅಂಗಗಳು. ಸಾಮಾನ್ಯ ಬಳಕೆಯಲ್ಲಿ ಸಸ್ಯಶಾಸ್ತ್ರದ ಪ್ರಕಾರದ ಹಣ್ಣುಗಳಲ್ಲಿ ಕೇವಲ ಆಹಾರವಾಗಿ ಉಪಯೋಗಕ್ಕೆ ಬರುವ, ಸಿಹಿ ರುಚಿಯುಳ್ಳವನ್ನು ಹಣ್ಣುಗಳೆಂದು ಪರಿಗಣಿಸಲಾಗುತ್ತದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಭಾರತೀಯ ಸಂವಿಧಾನದ ೩೭೦ನೇ ವಿಧಿಯು ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ಸ್ವಾಯತ್ತ ಸ್ಥಾನಮಾನವನ್ನು ನೀಡುವ ವಿಧಿಯಾಗಿದೆ. ಈ ವಿಧಿಯನ್ನು ಸಂವಿಧಾನದ ಭಾಗ XXI ರಲ್ಲಿ ರಚಿಸಲಾಗಿದೆ: ತಾತ್ಕಾಲಿಕ, ಪರಿವರ್ತನಾ ಮತ್ತು ವಿಶೇಷ ನಿಬಂಧನೆಗಳು. ಜಮ್ಮು ಮತ್ತು ಕಾಶ್ಮೀರದ ಸಂವಿಧಾನ ಸಭೆಯು ಸ್ಥಾಪನೆಯಾದ ನಂತರ, ಭಾರತೀಯ ಸಂವಿಧಾನದ ವಿಧಿಗಳನ್ನು ರಾಜ್ಯಕ್ಕೆ ಅನ್ವಯಿಸಲು ಅಥವಾ ೩೭೦ನೇ ವಿಧಿಯನ್ನು ಸಂಪೂರ್ಣವಾಗಿ ರದ್ದುಗೊಳಿಸಲು ಶಿಫಾರಸು ಮಾಡಲು, ಅದಕ್ಕೆ ಅಧಿಕಾರ ನೀಡಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕನಿಷ್ಕ : ಉತ್ತರ ಭಾರತದಲ್ಲಿ ರಾಜ್ಯವಾಳಿದ ಕುಶಾಣ ರಾಜವಂಶದ ಚಕ್ರವರ್ತಿಗಳಲ್ಲಿ ಅತ್ಯಂತ ಶ್ರೇಷ್ಠ, ಪ್ರಸಿದ್ಧ. ಪ್ರಾಚೀನ ಭಾರತದ ಪ್ರದೇಶಗಳಾದ ಮಧ್ಯ ದೇಶ, ಉತ್ತರಾಪಥ ಮತ್ತು ಅಪರಾಂತಗಳು ಇವನ ಆಳ್ವಿಕೆಗೆ ಒಳಪಟ್ಟಿದ್ದುವು. ಪುರ್ವ-ಪಶ್ಚಿಮವಾಗಿ ಬಿಹಾರದಿಂದ ಖೊರಾಸಾನದವರೆಗೂ ಉತ್ತರ-ದಕ್ಷಿಣವಾಗಿ ಖೊತಾನದಿಂದ ಕೊಂಕಣದವರೆಗೂ ಈತನ ಚಕ್ರಾಧಿಪತ್ಯ ಹಬ್ಬಿತ್ತೆಂದು ಹೇಳಲಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಸಾಮಾನ್ಯವಾಗಿ ಎಸ್ಎಸ್ಎಲ್ಸಿ ಎಂದು ಉಲ್ಲೇಖಿಸಲಾಗುತ್ತದೆ) ಭಾರತದಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ಅಧ್ಯಯನದ ಕೊನೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಯಿಂದ ಪಡೆಯುವ ಪ್ರಮಾಣೀಕರಣವಾಗಿದೆ. SSLC ಅನ್ನು 10 ನೇ ತರಗತಿಯ ಸಾರ್ವಜನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ಪಡೆಯಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಭಾರತದಲ್ಲಿ '10 ನೇ ತರಗತಿ ಬೋರ್ಡ್ ಪರೀಕ್ಷೆಗಳು' ಎಂದು ಕರೆಯಲಾಗುತ್ತದೆ. SSLC ಭಾರತದ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಕೇರಳ, ಕರ್ನಾಟಕ, ಮತ್ತು ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಸಾಮಾನ್ಯ ಅರ್ಹತಾ ಪರೀಕ್ಷೆಯಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ
ಪ್ರತಿ ವರ್ಷದ ಎಪ್ರೀಲ್ ೨೩ರಂದು ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನ (ಇದನ್ನು ಅಂತರಾಷ್ಟ್ರೀಯ ಪುಸ್ತಕ ದಿನ ಎಂದೂ ಕರೆಯುತ್ತಾರೆ). ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಆಯೋಗ (ಯುನೆಸ್ಕೋ) 1995ರಲ್ಲಿ ಮೊದಲ ಬಾರಿಗೆ ಓದುವಿಕೆ, ಪ್ರಕಾಶನ ಮತ್ತು ಕೃತಿಸ್ವಾಮ್ಯಗಳ ಬಗ್ಗೆ ಅರಿವು ಮತ್ತು ಪ್ರಚಾರ ನೀಡಲು ಈ ಕಾರ್ಯಕ್ರಮ ಹಮ್ಮಿಕೊಂಡಿತು. ಈ ಕಾರ್ಯಕ್ರಮ ಹಮ್ಮಿಕೊಳ್ಳುವ ಮೂಲಕ ಯುನೇಸ್ಕೊ ಯುವಜನತೆಯಲ್ಲಿ ಪುಸ್ತಕ ಪ್ರೇಮ, ಓದಿನ ಖುಷಿ ಅಥವಾ ಗಮ್ಮತ್ತು ಹೆಚ್ಚಿಸುವ ಮತ್ತು ಉತ್ತಮ ಲೇಖಕನ್ನು ಗೌರವಿಸುವ ಹಂಬಲ ಹೊಂದಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕನ್ನಡ ರಂಗಭೂಮಿಯ ಪರಂಪರೆ ಅತಿ ಪ್ರಾಚೀನವಾದದ್ದೆಂಬುದರಲ್ಲಿ ಸಂದೇಹವಿಲ್ಲ. ಕನ್ನಡ ರಂಗಭೂಮಿಯ ಪ್ರಕಾರಗಳಲ್ಲಿ ಗೊಂಬೆಯಾಟ, ತೊಗಲು ಗೊಂಬೆಯಾಟ, ಬಯಲಾಟ ದಶಾವತಾರ ಎಂದು ಕರೆಯುವ ಯಕ್ಷಗಾನದ ಆಟಗಳು (ಅದರ ತೆಂಕು ಬಡಗು ಎಂಬ ಪ್ರಭೇದ), ದೊಡ್ಡಾಟ(ಮೂಡಲಪಾಯ ಎನ್ನುವುದು ಅಧ್ಯಯನಕ್ಕೆ ಇಟ್ಟ ಹೆಸರು), ಘಟ್ಟದಕೋರೆ, ಶನಿಕಥೆ ಆಟ, ಕೃಷ್ಣಪಾರಿಜಾತ ಎನ್ನುವ ದೊಡ್ಡಾಟದ ಪ್ರಕಾರಗಳು ಮತ್ತು ನಾಟಕಗಳು ಪ್ರಮುಖವಾಗಿವೆ. ಪಾರ್ತಿಸುಬ್ಬನ ರಾಮಾಯಣದ ಯಕ್ಷಗಾನದ ಪ್ರಸಂಗಗಳು (ಸೀತಾಪಹಾರ, ವಾಲೀ ವಧಾ, ರಾವಣಾ ವಧಾ) ಸುಮಾರು ೧೬ನೇ ಶತಮಾನದವು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.