The most-visited ಕನ್ನಡ Wikipedia articles, updated daily. Learn more...
ವಿಶ್ವದ ಬಹುತೇಕ ರಾಷ್ಟ್ರಗಳಲ್ಲಿ ಕಾರ್ಮಿಕ ಸಂಘಗಳು ಮತ್ತು ಸಮಾಜವಾದಿ ಪಕ್ಷಗಳ ಮುಖ್ಯವಾಗಿ ಆಚರಿಸುವ ಸಂಭ್ರಮದ ಸಾರ್ವಜನಿಕ ಉತ್ಸವ ದಿನ (ಲೇಬರ ಡೇ). ಮೇ ದಿನ ಅಥವಾ ‘ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಪ್ರತಿ ವರ್ಷದ ಮೇ ೧ನೇ ತಾರೀಖಿನಂದು ಪ್ರಪಂಚದ ಹಲವು ದೇಶಗಳಲ್ಲಿ ಆಚರಿಸಲಾಗುತ್ತದೆ. ಈ ದಿನದಂದು ಕಾರ್ಮಿಕ ಆಂದೋಲನದ ಸಾಮಾಜಿಕ ಮತ್ತು ಆರ್ಥಿಕ ಸಾಧನೆಗಳನ್ನು ಆಚರಿಸಲಾಗುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಸಾಮಾನ್ಯವಾಗಿ ಎಸ್ಎಸ್ಎಲ್ಸಿ ಎಂದು ಉಲ್ಲೇಖಿಸಲಾಗುತ್ತದೆ) ಭಾರತದಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ಅಧ್ಯಯನದ ಕೊನೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಯಿಂದ ಪಡೆಯುವ ಪ್ರಮಾಣೀಕರಣವಾಗಿದೆ. SSLC ಅನ್ನು 10 ನೇ ತರಗತಿಯ ಸಾರ್ವಜನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ಪಡೆಯಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಭಾರತದಲ್ಲಿ '10 ನೇ ತರಗತಿ ಬೋರ್ಡ್ ಪರೀಕ್ಷೆಗಳು' ಎಂದು ಕರೆಯಲಾಗುತ್ತದೆ. SSLC ಭಾರತದ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಕೇರಳ, ಕರ್ನಾಟಕ, ಮತ್ತು ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಸಾಮಾನ್ಯ ಅರ್ಹತಾ ಪರೀಕ್ಷೆಯಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಉಂಡವಲ್ಲಿ ಗುಹೆಗಳು ಭಾರತದ ವಾಸ್ತು, ಶಿಲ್ಪಕಲೆ ಏಕಶಿಲೆಗೆ ಉದಾಹರಣೆ. ಪ್ರಾಚೀನ ವೀಕ್ಷಣಾ ವರ್ಗದ ಅತ್ಯುತ್ತಮವಾದ, ಪ್ರಶಂಸಾಪಾತ್ರವಾದ ಉಂಡವಲ್ಲಿ ಗುಹೆಗಳು ಭಾರತದ ರಾಜ್ಯ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಉಂಡವಲ್ಲಿಯಲ್ಲಿದೆ.ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಿಂದ ೨೨ ಕಿ.ಮೀ, ಉತ್ತರ ಪೂರ್ವದ ವಿಜಯವಾಡದಿಂದ ೬ ಕಿ.ಮೀ ದೂರ.ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಕೇಂದ್ರ ಸಂರಕ್ಷಿತ ಸ್ಮಾರಕಗಳಲ್ಲಿ ಒಂದಾಗಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಎರಡನೇ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಸಚಿನ್ ರಮೇಶ್ ತೆಂಡೂಲ್ಕರ್ (ಜನನ: ೨೪-ಏಪ್ರಿಲ್-೧೯೭೩) ಭಾರತದ ಖ್ಯಾತ ಕ್ರಿಕೆಟ್ ಆಟಗಾರ . ಕ್ರಿಕೆಟ್ ಲೋಕದ ದೇವರು ಎಂದೇ ಹೆಸರು ಮಾಡಿರುವ ಸಚಿನ್, ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ ದಾಖಲೆಗಳ ಸರದಾರ ಎನಿಸಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಕ್ರಿಕೆಟ್ನಲಿ ಅತಿ ಹೆಚ್ಚು ಶತಕ ಹಾಗೂ ರನ್ಗಳನ್ನು ಭಾರಿಸಿರುವ ದಾಖಲೆ ಹೊಂದಿರುವ ಸಚಿನ್ ಅವರನ್ನು ಲಿಟಲ್ ಮಾಸ್ಟರ್ ಎಂದೂ ಕರೆಯಲಾಗುತ್ತದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಜರ್ಮನಿ (ಜರ್ಮನ್: ದೊಯಿಚ್ಲಂತ್), ಅಧಿಕೃತವಾಗಿ ಫೆಡರಲ್ ರಿಪಬ್ಲಿಕ್ ಆಫ್ ಜರ್ಮನಿ, ಕೇಂದ್ರ-ಪಶ್ಚಿಮ ಯುರೋಪ್ ನಲ್ಲಿ ಫೆಡರಲ್ ಸಂಸದೀಯ ಗಣತಂತ್ರ ದೇಶವಾಗಿದೆ.ಇದು 16 ಘಟಕ ರಾಜ್ಯಗಳನ್ನು ಒಳಗೊಂಡಿದೆ. 3,57,021 ಚದರ ಕಿಲೋಮೀಟರ್ (1,37,847 ಚದರ ಮೈಲಿ) ನಷ್ಟು ಪ್ರದೇಶವನ್ನು ಒಳಗೊಂಡಿದೆ ಮತ್ತು ಹೆಚ್ಚಾಗಿ ಸಮಶೀತೋಷ್ಣ ಕಾಲೋಚಿತ ಹವಾಮಾನವನ್ನು ಹೊಂದಿದೆ. 82 ದಶಲಕ್ಷ ನಿವಾಸಿಗಳನ್ನು ಹೊಂದಿರುವ ಜರ್ಮನಿ ಯುರೋಪಿನ ಅತ್ಯಂತ ಜನನಿಬಿಡ ಸದಸ್ಯ ದೇಶವಾಗಿದೆ.
ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕಕ್ರಿಯೆ. ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ವಿಕಿಪೀಡಿಯವು (ಇಂಗ್ಲಿಷ್: Wikipedia ) ಒಂದು ಅಂತರಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಯ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಭೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೋತ್ ದ್'ಇವಾರ್, (ಫ್ರೆಂಚ್ ಭಾಷೆಯಲ್ಲಿ: Côte d'Ivoire), ಅಧಿಕೃತವಾಗಿ ಕೋತ್ ದ್'ಇವಾರ್ ಗಣರಾಜ್ಯ, ಪಶ್ಚಿಮ ಆಫ್ರಿಕಾದ ಒಂದು ದೇಶ. ಇದರ ಪಶ್ಚಿಮಕ್ಕೆ ಲೈಬೀರಿಯ ಮತ್ತು ಗಿನಿ, ಉತ್ತರಕ್ಕೆ ಮಾಲಿ ಮತ್ತು ಬುರ್ಕೀನ ಫಾಸೊ, ಪೂರ್ವಕ್ಕೆ ಘಾನ ಮತ್ತು ದಕ್ಷಿಣಕ್ಕೆ ಗಿನಿ ಕೊಲ್ಲಿ ಇವೆ. ೧೮೯೩ರಲ್ಲಿ ಫ್ರಾನ್ಸ್ನ ವಸಾಹತು ಆದ ಈ ದೇಶ ಮುಂದೆ ೧೯೬೦ರಲ್ಲಿ ಸ್ವಾತಂತ್ರ್ಯ ಪಡೆಯಿತು.
ಆಂಧ್ರ ಪ್ರದೇಶ (ತೆಲುಗು:ఆంధ్ర ప్రదేశ్) (, ಭಾಷಾಂತರ: ಆಂಧ್ರದ ಪ್ರಾಂತ್ಯ, ಸಂಕ್ಷಿಪ್ತವಾಗಿ ಎ.ಪಿ. ಎಂದು ಕರೆಯಲ್ಪಡುವ ರಾಜ್ಯವಾಗಿದ್ದು ಇದುಭಾರತದ ಆಗ್ನೇಯ ಕರಾವಳಿ ಭಾಗದಲ್ಲಿದೆ. ಭಾರತದಲ್ಲಿ ಇದು ವಿಸ್ತೀರ್ಣದ ಆಧಾರದಲ್ಲಿ ಭಾರತದ ರಾಜ್ಯಗಳ ವಿಸ್ತೀರ್ಣದಲ್ಲಿ ಎಂಟನೇ ಅತಿದೊಡ್ಡ ರಾಜ್ಯವಾಗಿದೆ ಮತ್ತು ಜನಸಂಖ್ಯೆಯ ಆಧಾರದಲ್ಲಿ ಭಾರತದ ರಾಜ್ಯಗಳ ಜನಸಂಖ್ಯೆಯಲ್ಲಿ ಹತ್ತನೇ ಅತಿ ದೊಡ್ಡ ರಾಜ್ಯವಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸ್ಥಳೀಯ ಆರ್ಥಿಕತೆ, ಸಮಾಜ ಮತ್ತು ಸಾಂಸ್ಕೃತಿಕತೆಯು ಜಗದ ಜಾಲದ ವಿನಿಮಯದಲ್ಲಿ ಒಳಪಡುವಿಕೆಯು 'ಜಾಗತೀಕರಣ' ವನ್ನು ವಿವರಿಸುತ್ತದೆ. ಜಾಗತೀಕರಣವನ್ನು ಕೆಲವು ಬಾರಿ ಆರ್ಥಿಕ ಜಾಗತೀಕರಣ ಈ ಮುಂದಿನ ವಿಚಾರಗಳನ್ನು ಕುರಿತು ಬಳಸಲಾಗುತ್ತದೆ : ವ್ಯಾಪಾರ, ವಿದೇಶೀ ನೇರ ಬಂಡವಾಳ, ಬಂಡವಾಳ ಹರಿವು, ವಲಸೆ, ತಾಂತ್ರಿಕತೆಯ ವಿಸ್ತರಣೆಯ ಮೂಲಕ ರಾಷ್ಟ್ರೀಯ ಆರ್ಥಿಕತೆಯ ಜೊತೆ ಅಂತರರಾಷ್ಟ್ರೀಯ ಆರ್ಥಿಕತೆಯ ಸಮನ್ವಯತೆ.. ಏನೇ ಆದರೂ ಜಾಗತೀಕರಣವನ್ನು ಸಾಮಾನ್ಯವಾಗಿ ಆರ್ಥಿಕ, ತಾಂತ್ರಿಕ, ರಾಜಕೀಯ ಮತ್ತು ಜೈವಿಕ ವಿಚಾರಗಳ ಸಂಯೋಗವೆಂದು ಪರಿಗಣಿಸಲಾಗುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಹೆಣ್ಣು ಪ್ರಾಣಿಗಳಲ್ಲಿ ದೇಹದ ಹೊರಭಾಗದಿಂದ /ತೊಡೆಗಳ ಮಧ್ಯದಿಂದ ಗರ್ಭಕೋಶಕ್ಕೆ ಹೋಗುವ ಸ್ನಾಯುವಿನ ನಾಳವೇ/ತೂತು ಯೋನಿ ಮುಂದುವರಿದ ಪ್ರಾಣಿಗಳಲ್ಲಿ ಕಂಡುಬರುತ್ತದೆ. ಇದು ಸಂಭೋಗ, ಮಗುವಿನ ಜನನ ಹಾಗೂ ಮುಟ್ಟಿನ ಸ್ರಾವ ಹೊರಹೋಗಲು ಸಹಾಯಕಾರಿ. ವಯಸ್ಸಿನ ಮಹಿಳೆಯೊಬ್ಬಳು ಯೋನಿಯ ಉದ್ದ ಆದಾಗ್ಯೂ ಮುಂಭಾಗದ ಗೋಡೆಯ (ಮುಂದೆ) ಅಡ್ಡಲಾಗಿ ಸುಮಾರು ೬ ೭.೫ ಸೆಂ (೨.೫ ೩), ಹಾಗೂ ೯ ಸೆಂ (ರಲ್ಲಿ ೩.೫) ಉದ್ದ ಬದಿಯಲ್ಲಿರುವ ಹಿಂಭಾಗದ ಗೋಡೆ (ಹಿಂದಿನ).