The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗೀಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌಧರಿ ಅವರ ಪ್ರಕಾರ ಇದನ್ನು 'ಮೂಲಭೂತ' ಹಕ್ಕುಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ III (ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ.ಸಂವಿಧಾನದಲ್ಲಿ ೬ ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ತಂತಿವಾದ್ಯಗಳು ಸಂಗೀತಗಾರನು ಯಾವುದೋ ರೀತಿಯಲ್ಲಿ ತಂತಿಗಳನ್ನು ನುಡಿಸಿದಾಗ ಅಥವಾ ಬಾಜಿಸಿದಾಗ, ಕಂಪಿಸುವ ತಂತಿಗಳಿಂದ ಶಬ್ದವನ್ನು ಉತ್ಪತ್ತಿಮಾಡುವ ಸಂಗೀತ ವಾದ್ಯಗಳು. ಸಂಗೀತಗಾರರು ತಂತಿಗಳನ್ನು ತಮ್ಮ ಬೆರಳುಗಳು ಅಥವಾ ಮೀಟು ದಂತದಿಂದ ಮೀಟುವ ಮೂಲಕ ಕೆಲವು ತಂತಿವಾದ್ಯಗಳನ್ನು ನುಡಿಸುತ್ತಾರೆ, ಮತ್ತು ಇತರ ತಂತಿವಾದ್ಯಗಳನ್ನು ತಂತಿಗಳನ್ನು ಒಂದು ಹಗುರವಾದ ಕಟ್ಟಿಗೆಯ ಸುತ್ತಿಗೆಯಿಂದ ಹೊಡೆದು ಅಥವಾ ತಂತಿಗಳನ್ನು ಕಮಾನಿನಿಂದ ಉಜ್ಜಿ ನುಡಿಸುತ್ತಾರೆ. ಹಾರ್ಪ್ಸಿಕಾರ್ಡ್ನಂತಹ ಕೆಲವು ಕೀಲಿಮಣೆ ವಾದ್ಯಗಳಲ್ಲಿ, ಸಂಗೀತಗಾರನು ಒಂದು ಕೀಲಿಯನ್ನು ಒತ್ತಿದಾಗ ಅದು ತಂತಿಯನ್ನು ಮೀಟುತ್ತದೆ.
ಈ ಲೇಖನವು ಆತಿಥ್ಯ/ಅತಿಥಿ ಸತ್ಕಾರದ ಅರ್ಥ ನಿರೂಪಣೆಗೆ ಸಂಬಂಧಿಸಿದುದಾಗಿದೆ. ಹೋಟೆಲ್ ನಿರ್ವಹಣೆಯ ಶೈಕ್ಷಣಿಕ ಅಧ್ಯಯನಗಳಿಗಾಗಿ, ನೋಡಿ ಆತಿಥ್ಯ/ಅತಿಥಿ ಸತ್ಕಾರ ನಿರ್ವಹಣಾ ಅಧ್ಯಯನಗಳು ಹಾಗೂ ಆತಿಥ್ಯ/ಅತಿಥಿ ಸತ್ಕಾರ ಉದ್ಯಮ. ಆತಿಥ್ಯ/ಅತಿಥಿ ಸತ್ಕಾರ ವು ಓರ್ವ ಅತಿಥಿ ಹಾಗೂ ಆತಿಥೇಯರ ನಡುವಿನ ಒಂದು ಬಾಂಧವ್ಯ/ಸಂಬಂಧ, ಅಥವಾ ಅತಿಥಿ ಸತ್ಕಾರದ ನಡೆ ಅಥವಾ ಪ್ರವೃತ್ತಿಯಾಗಿರುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಆಲ್ಕೆಮಿ ಎಂಬ ಪದವನ್ನು, ಅರೇಬಿಕ್ ಪದ ಅಲ್-ಕಿಮಿಯಾ (الكيمياء)ದಿಂದ ವ್ಯುತ್ಪನ್ನವಾದದ್ದಾಗಿದ್ದು, ಬೆರಕೆ/ಕೀಳು ಲೋಹಗಳನ್ನು ಚಿನ್ನ/ಸ್ವರ್ಣವನ್ನಾಗಿ ಪರಿವರ್ತಿಸುವ ವಿಧಾನಗಳ ಬಗ್ಗೆ, "ದೀರ್ಘಾಯಸ್ಸಿನ ಸಿದ್ಧರಸ"ದ ತಯಾರಿಕೆಯ ಬಗ್ಗೆ ಸಂಶೋಧನೆ, ಸರ್ವೋತ್ಕೃಷ್ಠ ಜ್ಞಾನ ಪಡೆಯುವ ಯತ್ನ ರಸವಾದಿ/ರಸಸಿದ್ಧಾಂತಿಯ ಅಭಿವೃದ್ಧಿಯನ್ನೂ ಒಳಗೊಂಡು ಇನ್ನಿತರ ಅಸಾಧಾರಣ ಗುಣಲಕ್ಷಣಗಳನ್ನು ಹೊಂದಿರುವಂತಹಾ ವಸ್ತುಗಳ ರಚನೆಗಳ ಬಗ್ಗೆ ಕೇಂದ್ರೀಕೃತವಾದ ಸಿದ್ಧಾಂತ ಹಾಗೂ ಒಂದು ಪ್ರಾಚೀನ ಪದ್ಧತಿಯಾಗಿದೆ. ರಸವಿದ್ಯೆಯ ಪ್ರಾಯೋಗಿಕ ಅಂಶಗಳು ಆಧುನಿಕ ಅಜೈವಿಕ ರಸಾಯನಶಾಸ್ತ್ರದ ಮೂಲಭೂತ ಅಂಶಗಳ ತಿಳುವಳಿಕೆ ನೀಡಿದ್ದು, ಸಂಬಂಧಪಟ್ಟ ಪ್ರಕ್ರಿಯೆಗಳು, ಉಪಕರಣಗಳು ಹಾಗೂ ಈಗಿನ ಅನೇಕ ವಸ್ತುಗಳ ಗುರುತಿಸುವಿಕೆ ಹಾಗೂ ಬಳಕೆಯ ಬಗ್ಗೆ ತಿಳಿದುಬರಲು ಕಾರಣವಾಗಿವೆ. ಪ್ರಾಚೀನ ಈಜಿಪ್ಟ್, ಮೆಸೊಪೊಟೇಮಿಯಾ (ಆಧುನಿಕ ಇರಾಕ್), ಭಾರತ (ಆಧುನಿಕ ಭಾರತೀಯ ಉಪಖಂಡ), ಪರ್ಷಿಯ (ಆಧುನಿಕ ಇರಾನ್), ಚೀನಾ, ಜಪಾನ್, ಕೊರಿಯಾ, ಪ್ರಾಚೀನ ಗ್ರೀಕ್-ರೋಮನ್ ವಿಶ್ವ, ಮಧ್ಯಯುಗೀಯ ಮಹಮ್ಮದೀಯ ವಿಶ್ವ, ಹಾಗೂ ಆಗಿನ ಮಧ್ಯಯುಗೀಯ ಯೂರೋಪ್ಗಳಲ್ಲಿ 20ನೇ ಶತಮಾನದವರೆಗೆ ಕನಿಷ್ಠ 2,500 ವರ್ಷಗಳ ಕಾಲ ವ್ಯಾಪಿಸಿದ ಶಾಲೆಗಳು ಹಾಗೂ ಸಿದ್ಧಾಂತೀಯ ವ್ಯವಸ್ಥೆಗಳ ಸಂಕೀರ್ಣ ಜಾಲಗಳಲ್ಲಿ ರಸವಿದ್ಯೆಯು ಬಳಕೆಯಲ್ಲಿತ್ತು.
ಖ್ಯಾತ ವಿಮರ್ಶಕ, ಕವಿ, ಸಾಹಿತಿ ಡಾ || ಜಿ.ಎಸ್. ಸಿದ್ದಲಿಂಗಯ್ಯನವರು ೧೯೮೯ ರಿಂದ ೧೯೯೨ ರವರೆಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಸರಾಗಿ ಸೇವೆ ಸಲ್ಲಿಸಿ ತುಂಬಾ ಕೊಡುಗೆಯನ್ನು ನೀಡಿದ್ದಾರೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾಗಿ ಅದರ ಚಟುವಟಿಕೆಗಳನ್ನು ತಾಲ್ಲೂಕು ಮಟ್ಟದವರೆಗೂ ಕೊಂಡೊಯ್ದ ಸಿದ್ಧಲಿಂಗಯ್ಯ ಅವರು ಪರಿಷತ್ತಿನ ಹಣಕಾಸಿನ ವ್ಯವಹಾರದ ಬಗ್ಗೆ ಕೈಗೊಂಡ ನಿರ್ಣಯಗಳು ಮಹತ್ವದ್ದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇಮ್ಮಡಿ ಪುಲಿಕೇಶಿ, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವನ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಉಂಡವಲ್ಲಿ ಗುಹೆಗಳು ಭಾರತದ ವಾಸ್ತು, ಶಿಲ್ಪಕಲೆ ಏಕಶಿಲೆಗೆ ಉದಾಹರಣೆ. ಪ್ರಾಚೀನ ವೀಕ್ಷಣಾ ವರ್ಗದ ಅತ್ಯುತ್ತಮವಾದ, ಪ್ರಶಂಸಾಪಾತ್ರವಾದ ಉಂಡವಲ್ಲಿ ಗುಹೆಗಳು ಭಾರತದ ರಾಜ್ಯ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ಉಂಡವಲ್ಲಿಯಲ್ಲಿದೆ.ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಿಂದ ೨೨ ಕಿ.ಮೀ, ಉತ್ತರ ಪೂರ್ವದ ವಿಜಯವಾಡದಿಂದ ೬ ಕಿ.ಮೀ ದೂರ.ಇದು ರಾಷ್ಟ್ರೀಯ ಪ್ರಾಮುಖ್ಯತೆಯ ಕೇಂದ್ರ ಸಂರಕ್ಷಿತ ಸ್ಮಾರಕಗಳಲ್ಲಿ ಒಂದಾಗಿದೆ.
ಸ್ವಿಟ್ಜರ್ಲೆಂಡ್ (German: [die Schweiz] Error: {{Lang}}: text has italic markup (help) French: la Suisse, ಇಟಾಲಿಯನ್:Svizzera, Romansh: [Svizra] Error: {{Lang}}: text has italic markup (help)), ಅಧಿಕೃತವಾಗಿ ಸ್ವಿಸ್ ಒಕ್ಕೂಟ (ಲ್ಯಾಟಿನ್ನಲ್ಲಿ ಕಾನ್ಪೊಡೆರೇಷ್ಯೋ ಹೆಲ್ವೆಟಿಕಾ, ಆದ್ದರಿಂದ ಇದರ ISO ರಾಷ್ಟ್ರ ಸಂಕೇತಗಳಾಗಿ CH ಮತ್ತು CHEಯನ್ನು ನಿಗದಿಪಡಿಸಲಾಗಿದೆ), ಸುತ್ತಲೂ ಭೂಪ್ರದೇಶದಿಂದ ಆವೃತವಾದ ಪರ್ವತ ಪ್ರದೇಶ ಸುಮಾರು 7.7 ದಶಲಕ್ಷ ಜನಸಂಖ್ಯೆ(2009ರಲ್ಲಿ)ಯನ್ನು ಹೊಂದಿರುವ 41,285 km²ನಷ್ಟು ವಿಸ್ತೀರ್ಣವಿರುವ ಪಶ್ಚಿಮ ಯೂರೋಪ್ನ ರಾಷ್ಟ್ರವಾಗಿದೆ. ಸ್ವಿಟ್ಜರ್ಲೆಂಡ್ ಕ್ಯಾಂಟನ್ಗಳೆಂದು ಕರೆಯಲಾಗುವ 26 ರಾಜ್ಯಗಳನ್ನು ಹೊಂದಿರುವ ಸಂಯುಕ್ತ ಗಣರಾಜ್ಯವಾಗಿದೆ. ಬರ್ನ್ ರಾಜ್ಯಾಡಳಿತದ ಅಧಿಕಾರ ಕೇಂದ್ರವಾಗಿದ್ದರೆ, ಇದರ ಎರಡು ಜಾಗತಿಕ ಮಹಾನಗರಗಳಾದ ಜಿನೀವಾ ಮತ್ತು ಜ್ಯೂರಿಚ್ಗಳು ರಾಷ್ಟ್ರದ ಆರ್ಥಿಕ ಕೇಂದ್ರಗಳಾಗಿವೆ.
ಇಟಲಿ ಅಥವಾ ಇತಾಲಿಯ (ಇಟಾಲಿಯನ್: ಇತಾಲಿಯ), ಅಧಿಕೃತವಾಗಿ ಇಟಾಲಿಯನ್ ಗಣರಾಜ್ಯ ಅಥವಾ ಇತಾಲಿಯದ ಗಣರಾಜ್ಯ, ಇದು ಪಾಶ್ಚಾತ್ಯ ಮತ್ತು ದಕ್ಷಿಣ ಯೂರೋಪಿನ ಒಂದು ದೇಶ. ಖ್ಯಾತ ರೋಮಕ ಸಾಮ್ರಾಜ್ಯ ಮಾತೃಸ್ಥಾನವಾದ ಇಟಲಿ ಮೆದಿತೆರನೀಯ ಸಾಗರದಲ್ಲಿ ಚಾಚಿ ನಿಂತಿರುವ ಬಹು ಸಣ್ಣ ಪರ್ಯಾಯದ್ವೀಪವಾಗಿದೆ. ಗಾತ್ರದಲ್ಲಿ ಚಿಕ್ಕದಾದರೂ ಹಿಂದಿನ ಕಾಲದಲ್ಲಿ ಇದು ಹೊಂದಿದ್ದ ವ್ಯಾಪ್ತಿ ಅಚ್ಚರಿಗೊಳಿಸುವಂಥದು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಅಂಕಗಣಿತ(Aritmetic)ವು ಸಂಖ್ಯೆಗಳ ಕೆಲವು ಪರಿಕ್ರಿಯೆ(Operations)ಗಳ ಲಕ್ಷಣಗಳನ್ನು ತಿಳಿಸುವ ಗಣಿತದ ಒಂದು ವಿಭಾಗ.ಇದು ನಮಗೆ 'ಎಷ್ಟು?', 'ಎಷ್ಟು ದೂರ?', 'ಎಷ್ಟು ಉದ್ದ?' ಮುಂತಾದ ಪ್ರಶ್ನೆಗಳಿಗೆ ಉತ್ತರವನ್ನು ನೀಡುತ್ತದೆ.ಅಂಕಗಣಿತವನ್ನು ಕೆಲವೊಮ್ಮೆ ಸಂಖ್ಯೆಗಳ ವಿಜ್ಞಾನ ಎಂದೂ ಕರೆಯುತ್ತಾರೆ. ನಾಗರಿಕತೆಯ ಬೆಳೆವಣಿಗೆಗೆ ಅನಾದಿಕಾಲದಿಂದಲೂ ಅಂಕಗಣಿತ ಅತ್ಯಾವಶ್ಯಕವಾಗಿದ್ದಿತೆಂಬುದು ¸ಸ್ಪಷ್ಟವಾಗಿಯೇ ಇದೆ. ಎಲ್ಲಾ ಜನಾಂಗಗಳ ಪೂರ್ವಿಕರು ಇದಕ್ಕಾಗಿ ಬಹಳ ಶ್ರಮಿಸಿರಬೇಕು.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಸಿಂಧೂರವು ಭಾರತೀಯ ಉಪಖಂಡದ ಒಂದು ಸಾಂಪ್ರದಾಯಿಕ ಇಂಗಲೀಕ ಕೆಂಪು ಬಣ್ಣದ ಅಥವಾ ಕೇಸರಿಕೆಂಪು ಬಣ್ಣದ ಸೌಂದರ್ಯವರ್ಧಕ ಪುಡಿ. ಸಾಮಾನ್ಯವಾಗಿ ಇದನ್ನು ಮದುವೆಯಾದ ಸ್ತ್ರೀಯರು ತಮ್ಮ ಕೂದಲಿನ ಮಧ್ಯದಲ್ಲಿ ಹಚ್ಚಿಕೊಳ್ಳುತ್ತಾರೆ. ಹಿಂದೂ ಸಮುದಾಯಗಳಲ್ಲಿ ಸಿಂಧೂರದ ಬಳಕೆಯು ಮಹಿಳೆಯು ವಿವಾಹಿತೆ ಎಂದು ಮತ್ತು ಸಾಮಾನ್ಯವಾಗಿ ಅದನ್ನು ಹಚ್ಚಿಕೊಳ್ಳದಿರುವುದು ವೈಧವ್ಯವನ್ನು ಸೂಚಿಸುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತ-ಪಾಕಿಸ್ತಾನ ಯುದ್ಧಗಳು ಮತ್ತು ಸಂಘರ್ಷಗಳು
1947 ರಲ್ಲಿ ಬ್ರಿಟಿಷರು ಭಾರತವನ್ನು ವಿಭಜಿಸಿದ ನಂತರ ಮತ್ತು ಭಾರತ ಮತ್ತು ಪಾಕಿಸ್ತಾನದ ರಾಷ್ಟ್ರಗಳು ರಚನೆಯಾದ ನಂತರ, ಈ ಎರಡು ದೇಶಗಳು ಹಲವಾರು ಯುದ್ಧಗಳು, ಘರ್ಷಣೆಗಳು ಮತ್ತು ಸೇನೆ ಬಿಕ್ಕಟ್ಟುಗಳುಂಟಾಗಿವೆ. 1971 ರಲ್ಲಿ ಭಾರತ & ಪಾಕಿಸ್ತಾನ ನೇರ ಯುದ್ಧ ಮಾಡಿದ್ದನ್ನು ಹೊರತುಪಡಿಸಿದರೆ(ಇದು ಬಾಂಗ್ಲಾದೇಶ ವಿಮೋಚನಾ ಯುದ್ಧದಿಂದ ಉಂಟಾದ ಯುದ್ಧದ ನೇರ ಪರಿಣಾಮ), ಮಿಕ್ಕೇಲ್ಲವೂ ಕಾಶ್ಮೀರ ಮತ್ತು ಅದರ ಗಡಿಯಾಚೆಗಿನ ಭಯೋತ್ಪಾದನೆಯ ಕುರಿತು ದೀರ್ಘಕಾಲದ ವಿವಾದಗಳಿಂದಾದವು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆ
ಅಂತರರಾಷ್ಟ್ರೀಯ ರೆಡ್ ಕ್ರಾಸ್ ಸಂಸ್ಥೆಯು ಸ್ವಿಟ್ಜರ್ಲ್ಯಾಂಡ್ ದೇಶದ ಜಿನೀವ ನಗರದಲ್ಲಿ ಸ್ಥಿತವಾಗಿರುವ ಒಂದು ಜನಸೇವಾಪರ ಸಂಸ್ಥೆ. ಜಿನೀವ ಒಪ್ಪಂದಗಳಲ್ಲಿ ಭಾಗಿಯಾಗಿರುವ ದೇಶಗಳು ಯುದ್ಧ ಕಾಲದಲ್ಲಿ ಈ ಸಂಸ್ಥೆಗೆ ಯುದ್ಧದಿಂದ ಪ್ರಭಾವಿತರಾಗಿರುವವರನ್ನು ಚಿಕಿತ್ಸೆ ನೀಡುವ ಹಕ್ಕನ್ನು ನೀಡಿವೆ. ೧೮೬೪ರಲ್ಲಿ ಹೆನ್ರಿ ಡುನಾಂಟ್ ಅವರಿಂದ ಸ್ಥಾಪಿತವಾದ ಈ ಸಂಸ್ಥೆಗೆ ೧೯೧೭, ೧೯೪೪ ಮತ್ತು ೧೯೬೩ರ ನೊಬೆಲ್ ಶಾಂತಿ ಪುರಸ್ಕಾರಗಳು ದೊರಕಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಡಾ.ಎಚ್.ಆರ್.ಚಂದ್ರಶೇಖರ್, ಅಮೆರಿಕದ ಕೊಲಂಬಿಯ ರಾಜ್ಯದ ಮಿಸ್ಸೂರಿ ವಿಶ್ವವಿದ್ಯಾಲಯದಲ್ಲಿ ಭೌತಶಾಸ್ತ್ರ ಇಲಾಖೆಯ ಅಧ್ಯಕ್ಷರಾಗಿ ಕೆಲಸಮಾಡುತ್ತಿದ್ದಾರೆ. ಬಾಲ್ಯದಿಂದಲೂ ಕನ್ನಡ ಭಾಷೆಯಲ್ಲಿ ಕಥೆ, ಕವನ, ಕಾದಂಬರಿ,ಪುರಾಣ,ಮಹಾಕಾವ್ಯಗಳನ್ನು ಅಭ್ಯಯಿಸಿ ಹಲವಾರು ಪತ್ರಿಕೆಗಳಲ್ಲಿ ಕನ್ನಡ ಮತ್ತು ಇಂಗ್ಲೀಷ್ ಭಾಷೆಗಳಲ್ಲಿ ಪ್ರಕಟಿಸುತ್ತಾ ಬಂದಿದ್ದಾರೆ. ೧೨ ನೇ, ಏಪ್ರಿಲ್ ೨೦೦೮ ರಂದು, ಅಮೆರಿಕದ, ’ಹೂಸ್ಟನ್ ಕನ್ನಡವೃಂದ,’ ದಲ್ಲಿ ತಾವು ಸಂಪಾದಿಸಿ ಪ್ರಕಟಿಸಿದ ಕರ್ಣಾಟಕ ಭಾಗವತ,ದ ಬೃಹತ್ ಕೃತಿಯ ೨ ಸಂಪುಟಗಳನ್ನು ಬಿಡುಗಡೆಮಾಡಿದರು.
ಫೇಸ್ಬುಕ್ ಒಂದು ವಿಶ್ವವ್ಯಾಪಕವಾದ ಸಾಮಾಜಿಕ ಸಂಪರ್ಕದ ಜಾಲತಾಣ, ಇದರ ಕಾರ್ಯಾಚರಣೆ ನಿರ್ವಹಿಸುವ ಮತ್ತು ಖಾಸಗಿಯಾಗಿ ಮಾಲಿಕತ್ವ ಹೊಂದಿರುವ ಕಂಪನಿ Facebook, Inc. ಬಳಕೆದಾರರು ತಮ್ಮ ಮಿತ್ರರನ್ನು ಇಲ್ಲಿ ಸೇರಿಸಬಹುದು ಮತ್ತು ಅವರಿಗೆ ಸಂದೇಶಗಳನ್ನು ಕಳುಹಿಸಬಹುದು, ಮತ್ತು ತಮ್ಮ ವೈಯುಕ್ತಿಕ ವ್ಯಕ್ತಿಚಿತ್ರವನ್ನು ಸಹ ನವೀಕರಿಸಿ ಮಿತ್ರರಿಗೆ ತಮ್ಮ ಬಗ್ಗೆ ಪ್ರಕಟಿಸಬಹುದು. ಇದರ ಜೊತೆಗೆ, ಬಳಕೆದಾರರು ಊರು, ಕಾರ್ಯಾಲಯ, ಶಾಲೆ, ಮತ್ತು ಪ್ರದೇಶದವರು ಸಂಘಟಿಸಿದ ಸಂಪರ್ಕಜಾಲದಲ್ಲಿ ಸೇರಬಹುದು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.