The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ನವರತ್ನಗಳು ಹಿಂದೂ ಜ್ಯೋತಿಷ್ಯ ಶಾಸ್ತ್ರದಲ್ಲಿ ನವ ಗ್ರಹಗಳನ್ನು ಪ್ರತಿನಿಧಿಸುವ ೯ ರತ್ನಗಳು. ಇವು, ಹವಳ ಮುತ್ತು ವಜ್ರ ವೈಢೂರ್ಯ ಗೋಮೇಧಿಕ ಮರಕತ ಮಾಣಿಕ್ಯ ಪಚ್ಚೆ ನೀಲ ಗುಪ್ತರ ಸಾಮ್ರಾಟ ಎರಡನೇಯ ಚಂದ್ರಗುಪ್ತನ ಆಸ್ಥಾನದಲ್ಲಿದ್ದ ಸುಪ್ರಸಿದ್ಧ ೯ವಿದ್ವಾಂಸರಿಗೂ ನವರತ್ನಗಳೆಂದು ಕರೆಯುತ್ತಿದ್ದರು. ಅವರೆಂದರೆ ೧ - ಕಾಳಿದಾಸ, ೨ - ವರರುಚಿ, ೩ - ವೇತಾಲ ಭಟ್ಟ , ೪ - ವರಾಹಮಿಹಿರ, ೫ - ಶಂಕು, ೬- ಧನ್ವಂತ್ರಿ, ೭ - ಬ್ರಹ್ಮ ಗುಪ್ತ, ೮ - ಕ್ಷಪಣಕ, ೯- ಅಮರಸಿಂಹ ನವರತ್ನ (ಸಂಸ್ಕೃತ: नवरत्न) ಸಂಸ್ಕೃತದ ಸಂಯೋಜನಾ ಪದದ ಅರ್ಥ "ಒಂಬತ್ತು ರತ್ನಗಳು" ಎಂದು ಆಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್
ಸೆಕೆಂಡರಿ ಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಸಾಮಾನ್ಯವಾಗಿ ಎಸ್ಎಸ್ಎಲ್ಸಿ ಎಂದು ಉಲ್ಲೇಖಿಸಲಾಗುತ್ತದೆ) ಭಾರತದಲ್ಲಿ ಮಾಧ್ಯಮಿಕ ಶಾಲಾ ಹಂತದಲ್ಲಿ ಅಧ್ಯಯನದ ಕೊನೆಯಲ್ಲಿ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ವಿದ್ಯಾರ್ಥಿಯಿಂದ ಪಡೆಯುವ ಪ್ರಮಾಣೀಕರಣವಾಗಿದೆ. SSLC ಅನ್ನು 10 ನೇ ತರಗತಿಯ ಸಾರ್ವಜನಿಕ ಪರೀಕ್ಷೆಯಲ್ಲಿ ಉತ್ತೀರ್ಣರಾದ ಮೇಲೆ ಪಡೆಯಲಾಗುತ್ತದೆ, ಇದನ್ನು ಸಾಮಾನ್ಯವಾಗಿ ಭಾರತದಲ್ಲಿ '10 ನೇ ತರಗತಿ ಬೋರ್ಡ್ ಪರೀಕ್ಷೆಗಳು' ಎಂದು ಕರೆಯಲಾಗುತ್ತದೆ. SSLC ಭಾರತದ ಹಲವು ರಾಜ್ಯಗಳಲ್ಲಿ ವಿಶೇಷವಾಗಿ ಕೇರಳ, ಕರ್ನಾಟಕ, ಮತ್ತು ತಮಿಳುನಾಡಿನಲ್ಲಿ ಜನಪ್ರಿಯವಾಗಿರುವ ಸಾಮಾನ್ಯ ಅರ್ಹತಾ ಪರೀಕ್ಷೆಯಾಗಿದೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸ್ವರ್ಗ - ಹಿಂದೂ ದರ್ಮದ ಪ್ರಕಾರ ಪುಣ್ಯ ಕೆಲಸಗಳನ್ನು ಮಾಡಿದವರು ತಮ್ಮ ಪುಣ್ಯಫಲಗಳನ್ನು ಅನುಭವಿಸಲು ಸ್ವರ್ಗಲೋಕಕ್ಕೆ ತೆರಳುತ್ತಾರೆ.ಪುನರ್ಜನ್ಮವನ್ನು ಎತ್ತುವ ಮುನ್ನ ತಾತ್ಕಾಲಿಕವಾಗಿ ವಾಸಿಸುವರು ಎಂಬ ಪ್ರತೀತಿ ಇರುವ ಸ್ಥಳ. ಸ್ವರ್ಗಲೋಕದ ಒಡೆಯ ಇಂದ್ರ ಅಥವಾ ದೇವೇಂದ್ರ.ಇವನು ಭೂಮಿಯಲ್ಲಿ ೧೦೦ ಯಜ್ಞಗಳನ್ನು ಮಾಡಿ,ಅದರ ಪ್ರತಿಫಲವಾಗಿ ಈ ಪದವಿಯನ್ನು ಪಡೆದಿದ್ದಾನೆ ಎಂಬ ನಂಬಿಕೆ ಇದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಪುಸ್ತಕದ ರಕ್ಷಾಕವಚ ಎಂದರೆ ಒಂದು ಪುಸ್ತಕದ ಪುಟಗಳನ್ನು ಒಟ್ಟಾಗಿ ಕಟ್ಟಲು ಬಳಸಲಾದ ಯಾವುದೇ ರಕ್ಷಣಾತ್ಮಕ ಹೊದಿಕೆ. ಗಟ್ಟಿರಟ್ಟುಗಳು ಮತ್ತು ಕಾಗದಕವಚಗಳ ನಡುವಿನ ಪರಿಚಿತ ವ್ಯತ್ಯಾಸವನ್ನು ಮೀರಿ, ಮತ್ತಷ್ಟು ಪರ್ಯಾಯಗಳು ಮತ್ತು ಸೇರ್ಪಡಿಕೆಗಳಿವೆ, ಉದಾಹರಣೆಗೆ ಧೂಳು ಹೊದಿಕೆಗಳು, ಉಂಗುರ ರಟ್ಟು ಮತ್ತು ಹತ್ತೊಂಭತ್ತನೇ ಶತಮಾನದ ಪೇಪರ್-ಬೋರ್ಡ್ ಹಾಗೂ ಕೈರಟ್ಟಿನ ಸಾಂಪ್ರದಾಯಿಕ ಪ್ರಕಾರಗಳಂತಹ ಹೆಚ್ಚು ಹಳೆಯ ರೂಪಗಳು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ವಿವಿಧ ರೀತಿಯ ವಸ್ತುಗಳ ತಯಾರಿಕೆಯಲ್ಲಿ ಮತ್ತು ವಿವಿಧ ಕ್ಷೇತ್ರಗಳ ಇಂಜಿನಿಯರಿಂಗ್ ಕೆಲಸಗಳಿಗಾಗಿ ಬಳಕೆಗೆ ತಕ್ಕಂತಹ ಗುಣಲಕ್ಷಣಗಳನ್ನು ಹೊಂದಿರುವ ಲೋಹಗಳ ಆಯ್ಕೆ ಮುಖ್ಯವಾದುದು. ಲೋಹಗಳ ಮೂಲಭೂತ ರಚನೆ, ವಿವಿಧ ಪರಿಸ್ಥಿತಿಗಳಲ್ಲಿ ಅವುಗಳ ಪ್ರತಿಕ್ರಿಯೆ ಮತ್ತು ಅವುಗಳ ಪ್ರತಿಭಟನಾ ಶಕ್ತಿ ಮುಂತಾದವುಗಳ ಆಧಾರದ ಮೇಲೆ ಲೋಹ ಗುಣಲಕ್ಷಣಗಳನ್ನು ಗುರುತಿಸಲಾಗುತ್ತದೆ. ಅಂತಹ ಗುಣಲಕ್ಷಣಗಳನ್ನು ಮೂರು ವರ್ಗಗಳಾಗಿ ವಿಂಗಡಿಸಬಹುದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ಸ್ವಪೋಷಕಗಳು ಅದರ ಸುತ್ತಮುತ್ತಲಿನ ಸರಳ ವಸ್ತುಗಳಿಂದ ಸಂಕೀರ್ಣ ಸಾವಯವ ಸಂಯುಕ್ತಳಾದ ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು , ಮತ್ತು ಪ್ರೋಟಿನ್ಗಳನ್ನು ಉತ್ಪಾದಿಸುತ್ತವೆ. ಇವು ಸಾಮಾನ್ಯವಾಗಿ ಬೆಳಕಿನ (ದ್ಯುತಿಸಂಶ್ಲೇಷಣೆ) ಶಕ್ತಿಯನ್ನು ಅಥವಾ ಅಜೈವಿಕ ರಾಸಾಯನಿಕ ಕ್ರಿಯೆಗಳನ್ನು ( ರಾಸಾಯನಿಕ ಸಂಶ್ಲೇಷಣೆ ಕ್ರಿಯೆಯಿಂದ ) ಬಳಸಿ ಸಂಕೀರ್ಣ ಸಾವಯವ ಸಂಯುಕ್ತಗಳನ್ನು ಉತ್ಪಾದಿಸುತ್ತವೆ. ಆಹಾರ ಸರಪಳಿಯಲ್ಲಿ ಸ್ವಪೋಷಕಗಳು ಉತ್ಪಾದಕರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.
ಎಚ್.ಎಸ್.ವೆಂಕಟೇಶಮೂರ್ತಿ (೨೩ ಜೂನ್ ೧೯೪೪ - ೩೦ ಮೇ ೨೦೨೫), ಇವರು ಕನ್ನಡದ ಕವಿ ಮತ್ತು ಬರಹಗಾರರು. ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ, ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆಗಳೆಂದರೆ ಬಾಷ್ಪೀಕರಣ (evapotranspiration), ಸಾಂದ್ರೀಕರಣ(condensation), ವರ್ಷಾವತರಣ(precipitation), ಒಳಸೋಸುವಿಕೆ(infiltration), ಮೇಲಿನ ಹರಿವು(surface flow) ಮತ್ತು ನೆಲದಡಿಯ ಹರಿವು(subsurface flow).