The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ತಂತಿವಾದ್ಯಗಳು ಸಂಗೀತಗಾರನು ಯಾವುದೋ ರೀತಿಯಲ್ಲಿ ತಂತಿಗಳನ್ನು ನುಡಿಸಿದಾಗ ಅಥವಾ ಬಾಜಿಸಿದಾಗ, ಕಂಪಿಸುವ ತಂತಿಗಳಿಂದ ಶಬ್ದವನ್ನು ಉತ್ಪತ್ತಿಮಾಡುವ ಸಂಗೀತ ವಾದ್ಯಗಳು. ಸಂಗೀತಗಾರರು ತಂತಿಗಳನ್ನು ತಮ್ಮ ಬೆರಳುಗಳು ಅಥವಾ ಮೀಟು ದಂತದಿಂದ ಮೀಟುವ ಮೂಲಕ ಕೆಲವು ತಂತಿವಾದ್ಯಗಳನ್ನು ನುಡಿಸುತ್ತಾರೆ, ಮತ್ತು ಇತರ ತಂತಿವಾದ್ಯಗಳನ್ನು ತಂತಿಗಳನ್ನು ಒಂದು ಹಗುರವಾದ ಕಟ್ಟಿಗೆಯ ಸುತ್ತಿಗೆಯಿಂದ ಹೊಡೆದು ಅಥವಾ ತಂತಿಗಳನ್ನು ಕಮಾನಿನಿಂದ ಉಜ್ಜಿ ನುಡಿಸುತ್ತಾರೆ. ಹಾರ್ಪ್ಸಿಕಾರ್ಡ್ನಂತಹ ಕೆಲವು ಕೀಲಿಮಣೆ ವಾದ್ಯಗಳಲ್ಲಿ, ಸಂಗೀತಗಾರನು ಒಂದು ಕೀಲಿಯನ್ನು ಒತ್ತಿದಾಗ ಅದು ತಂತಿಯನ್ನು ಮೀಟುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೃಷಿ (ವ್ಯವಸಾಯ) ಎಂಬುದು ಬೇಸಾಯ ಮತ್ತು ಅರಣ್ಯಕಲೆಯ ಮೂಲಕ ಆಹಾರ ಮತ್ತು ಸರಕುಗಳನ್ನು ಉತ್ಪಾದಿಸುವ ಒಂದು ವಿಧಾನ. ಅಂದರೆ ಆಹಾರ, ನಾರು, ಜೈವಿಕ ಇಂಧನ, ಔಷಧಗಳು ಮತ್ತು ಮಾನವ ಜೀವನವನ್ನು ಪೋಷಿಸಲು ಹಾಗೂ ವರ್ಧಿಸಲು ಬಳಸಲಾಗುವ ಇತರ ಉತ್ಪನ್ನಗಳಿಗಾಗಿ ಪ್ರಾಣಿಗಳು, ಸಸ್ಯಗಳು, ಶಿಲೀಂಧ್ರಗಳು, ಮತ್ತು ಇತರ ಜೀವಿಗಳ ಸಾಗುವಳಿ. ವ್ಯವಸಾಯವು ಮಾನವನ ಪುರಾತನ ವೃತ್ತಿಗಳಲ್ಲೊಂದಾಗಿದೆ.
ಒಂದು ಪರಪೋಷಕ ಎಂದರೆ( hetero "ಮತ್ತೊಂದು", ವಿವಿಧ ಮತ್ತು trophe-ಪೋಷಣೆ)ತನ್ನ ಆಹಾರ ಪಡೆಯಲು ಬೇರೊಂದು ಜೀವಿಯನ್ನು ಅವಲಂಬಿಸಿರುವ ಪ್ರಾಣಿ.ಇಂಗಾಲ ಸರಿಪಡಿಸಲು ಮತ್ತು ಬೆಳವಣಿಗೆಗಾಗಿ ಸಾವಯವ ಕಾರ್ಬನ್ ಬಳಸುವ ಜೀವಿಯಾಗಿದೆ.ಅವು ಪಡೆಯುವ ಆಹಾರದ ಮೇಲೆ ಮತ್ತಷ್ಟು ವಿಧಗಳಲ್ಲಿ ವಿಂಗಡಿಸಬಹುದು. ಶಕ್ತಿಯನ್ನು ಪಡೆಯಲು ಬೆಳಕನ್ನು ಬಳಸಿದರೆ photoheterotroph ಎಂದು ಮತ್ತು ರಸಾಯನಿಕ ಶಕ್ತಿಯನ್ನು ಬಳಸಿದರೆchemoheterotroph ಎಂದು ಪರಿಗಣಿಸಲಾಗಿದೆ. ಹೆಟರೊಟ್ರೊಫ್ಸ್ಗಳನ್ನು ಅಕಾರ್ಬನಿಕ ಇಂಗಾಲದ ಡೈಆಕ್ಸೈಡ್ ನಿಂದ ಕಾರ್ಬೋಹೈಡ್ರೇಟ್ಗಳು, ಕೊಬ್ಬು, ಮತ್ತು ಪ್ರೋಟಿನ್ಗಳ ಸಾವಯವ ಸಂಯುಕ್ತಗಳು ಉತ್ಪಾದನೆ ಸಸ್ಯಗಳು ಮತ್ತು ಪಾಚಿ ಸೂರ್ಯನ ಬೆಳಕಿನಿಂದ ಬಳಸಿಕೊಳ್ಳುವಂತೆ (photoautotrophs) ಅಥವಾ ಅಜೈವಿಕ ಮಿಶ್ರಣಗಳ (lithoautotrophs) ಎಂದು ಆಟೋಟ್ರೋಪ್ಗಳನ್ನು, ವ್ಯತಿರಿಕ್ತವಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಇಸ್ರೇಲ್ (יִשְׂרָאֵל, ಯಿಸ್ರೆಇಲ್), ಅಧಿಕೃತವಾಗಿ ಇಸ್ರೇಲ್ ರಾಜ್ಯ (מְדִינַת יִשְׂרָאֵל, ಮೆದೀನತ್ ಯಿಸ್ರೇಎಲ್; دَوْلَةْ إِسْرَائِيل, ದವ್ಲತ್ ಇಸ್ರೇಇಲ್), ಮೆಡಿಟೆರೇನಿಯ ಸಮುದ್ರದ ಆಗ್ನೇಯಕ್ಕೆ ಇರುವ ಪಶ್ಚಿಮ ಏಷ್ಯಾದ ಒಂದು ದೇಶ. ಉತ್ತರಕ್ಕೆ ಲೆಬನನ್, ಪೂರ್ವಕ್ಕೆ ಸಿರಿಯ ಮತ್ತು ಜಾರ್ಡನ್, ನೈರುತ್ಯಕ್ಕೆ ಸಂಯುಕ್ತ ಅರಬ್ ಗಣರಾಜ್ಯ ಈಜಿಪ್ಟ್ ದೇಶಗಳೊಂದಿಗೆ ಗಡಿಯನ್ನು ಇಸ್ರೇಲ್ ಹೊಂದಿದೆ. ಪ್ಯಾಲೆಸ್ತೈನ್ ರಾಷ್ಟ್ರೀಯ ಪ್ರಾಧಿಕಾರ ಆಡಳಿತ ನಡೆಸುವ ಪಶ್ಚಿಮ ದಂಡೆ ಮತ್ತು ಗಾಜಾ ಪಟ್ಟಿ ಕೂಡ ಪಕ್ಕದಲ್ಲಿ ಇವೆ.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಇಮ್ಮಡಿ ಪುಲಿಕೇಶಿ ಮಹಾರಾಜರು, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವರ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಶ್ಯಾಮನೂರ್ ಶಿವಶಂಕರಪ್ಪರವರು ೧೬ ಜೂನ್ ೧೯೩೧ರಂದು ಕರ್ನಾಟಕ ರಾಜ್ಯದ ದಾವಣಗೆರೆ ಜಿಲ್ಲೆಯಲ್ಲಿ ಜನಿಸಿದರು. ಇವರ ಹೆಂಡತಿ ಎಸ್ ಎಸ್ ಪಾರ್ವತಮ್ಮ, ಶಿವಶಂಕರಪ್ಪನವರು ದಾವಣಗೆರೆ ಜಿಲ್ಲೆಯ ದಕ್ಶಿಣ ಭಾಗದಿಂದ ಚುನಾವಣೆಯಲ್ಲಿ ಕಳೆದ ಸುಮಾರು ೧೦ ವರ್ಷಗಳಿಂದ ಸ್ಪರ್ಧಿಸುತ್ತಿದ್ದಾರೆ. ಶಿವಶಂಕರಪ್ಪನವರು ಕಳೆದ ೩ ದಶಕಗಳಿಂದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮೈತಿಯ ಖಜಾಂಚಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
ಸ್ವಪೋಷಕಗಳು ಅದರ ಸುತ್ತಮುತ್ತಲಿನ ಸರಳ ವಸ್ತುಗಳಿಂದ ಸಂಕೀರ್ಣ ಸಾವಯವ ಸಂಯುಕ್ತಳಾದ ಕಾರ್ಬೋಹೈಡ್ರೇಟ್ಗಳು, ಕೊಬ್ಬುಗಳು , ಮತ್ತು ಪ್ರೋಟಿನ್ಗಳನ್ನು ಉತ್ಪಾದಿಸುತ್ತವೆ. ಇವು ಸಾಮಾನ್ಯವಾಗಿ ಬೆಳಕಿನ (ದ್ಯುತಿಸಂಶ್ಲೇಷಣೆ) ಶಕ್ತಿಯನ್ನು ಅಥವಾ ಅಜೈವಿಕ ರಾಸಾಯನಿಕ ಕ್ರಿಯೆಗಳನ್ನು ( ರಾಸಾಯನಿಕ ಸಂಶ್ಲೇಷಣೆ ಕ್ರಿಯೆಯಿಂದ ) ಬಳಸಿ ಸಂಕೀರ್ಣ ಸಾವಯವ ಸಂಯುಕ್ತಗಳನ್ನು ಉತ್ಪಾದಿಸುತ್ತವೆ. ಆಹಾರ ಸರಪಳಿಯಲ್ಲಿ ಸ್ವಪೋಷಕಗಳು ಉತ್ಪಾದಕರು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಹಣ್ಣು ಮತ್ತು ಸಿಪ್ಪೆಯನ್ನು ಹೊಂದಿರುವ ಅಥವಾ ಹೊಂದದೆ ಇರುವ ಸಣ್ಣ, ಗಟ್ಟಿಯಾದ ಏಕದಳ ಸಸ್ಯಗಳ ಬೀಜವನ್ನು ಧಾನ್ಯವೆಂದು ಕರೆಯುತ್ತಾರೆ. ಅಕ್ಕಿ, ಗೋಧಿ, ಜೋಳ, ರಾಗಿ, ನವಣೆ, ಸಜ್ಜೆ ಮತ್ತು ಇತ್ಯಾದಿಗಳು ಧಾನ್ಯಗಳಿಗೆ ಉದಾಹರಣೆಗಳಾಗಿವೆ. ಧಾನ್ಯವು ಸಣ್ಣ, ಗಟ್ಟಿಯಾದ, ಒಣ ಬೀಜವಾಗಿದ್ದು, ಲಗತ್ತಿಸಲಾದ ಹಲ್ ಅಥವಾ ಫ್ರುಟ್ ಲೇಯರ್ ನೊಂದಿಗೆ ಅಥವಾ ಇಲ್ಲದೆ, ಮಾನವ ಅಥವಾ ಪ್ರಾಣಿಗಳ ಬಳಕೆಗಾಗಿ ಕೊಯ್ಲು ಮಾಡಲಾಗುತ್ತದೆ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ. ನಿಜವಾಗಿ ನೋಡಿದರೆ ಗಂಡು ಮತ್ತು ಹೆಣ್ಣು ಕೂಡಿ ಸೃಷ್ಟಿಕಾರ್ಯದಲ್ಲಿ ತೊಡಗುವುದು ಲೈಂಗಿಕ ಕ್ರಿಯೆಯ ಮೂಲಕವೇ ಮತ್ತು ಮಗುವಿಗೆ ಜನ್ಮ ಕೊಡಲು ಸಾಧ್ಯವಾಗುವುದು ಲೈಂಗಿಕ ಕ್ರಿಯೆ ನಡೆಸಿದರೆ ಮಾತ್ರ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಜಲ ಮಾಲಿನ್ಯ ವು ನೀರು ಮೂಲಗಳಾದ ಸರೋವರ, ನದಿ, ಸಮುದ್ರಗಳು, ಅಂತರ್ಜಲ ಕಶ್ಮಲೀಕರಣವನ್ನು ಒಳಗೊಂಡಿದೆ. ಎಲ್ಲ ಜಲ ಮಾಲಿನ್ಯದ ಪರಿಣಾಮಗಳೂ ನೀರಿನ ಮೂಲಗಳನ್ನು ಅವಲಂಬಿಸಿರುವ ಲೋಹರೂಪದ ನಾಣ್ಯಗಳು ಮತ್ತು ಜನರಿಗೆ ಹಾಗೂ ಬಯೊಸಿನೊಸಿಸ್ ಪರಿಣಾಮ ಬೀರುತ್ತವೆ. ಸೂಕ್ತ ಜಲ ಚಿಕಿತ್ಸೆ ಇಲ್ಲದೇ ಮಲಿನಕಾರಿ ಮತ್ತು ಹಾನಿಕಾರಕಗಳನ್ನು ನೀರಿನ ಮೂಲಗಳಿಗೆ ವಿಸರ್ಜಿಸಿದಾಗ ಮಾಲಿನ್ಯ ಉಂಟಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಏಕದೇವತಾವಾದಿ ಧರ್ಮವಾಗಿದ್ದು, ಇದರ ಅನುಯಾಯಿಗಳು ಅಲ್ಲಾಹನಲ್ಲದೆ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನಂಬುತ್ತಾರೆ. ಅವರನ್ನು ಮುಸ್ಲಿಮರು ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ದೇವರು (ಅಲ್ಲಾಹು) ಕರುಣಾಮಯಿ, ಸರ್ವಶಕ್ತ ಮತ್ತು ಏಕೈಕನು ಎಂದು ಬೋಧಿಸುತ್ತದೆ ಮತ್ತು ಅವನು ಪ್ರವಾದಿಗಳು, ಸಂದೇಶವಾಹಕರು ಮತ್ತು ಪವಿತ್ರ ಗ್ರಂಥಗಳ ಮೂಲಕ ಮಾನವಕುಲಕ್ಕೆ ಮಾರ್ಗದರ್ಶನ ನೀಡಿದ್ದಾನೆ ಎಂದು ಹೇಳುತ್ತದೆ.
ಭಾರತದ ಸಂಸತ್ತು ಭಾರತದ ಗಣರಾಜ್ಯದ ಒಕ್ಕೂಟ ಸರ್ಕಾರದ ಎರಡು ಶಾಸನಸಭೆಗಳುಳ್ಳ (ಉಭಯ ಸದನಿಕ) ಸರ್ವೋಚ್ಚ ವಿಧಾಯಕ ಘಟಕವಾಗಿದೆ. ಭಾರತದ ರಾಷ್ಟ್ರಪತಿಯವರ ಕಚೇರಿ, "ರಾಜ್ಯಸಭಾ" ಎಂದು ಕರೆಯಲ್ಪಡುವ ರಾಜ್ಯಗಳ ಪರಿಷತ್ತು ಆಗಿರುವ ಒಂದು ಮೇಲ್ಮನೆ, ಮತ್ತು "ಲೋಕಸಭಾ" ಎಂದು ಕರೆಯಲ್ಪಡುವ ಪ್ರಜಾಪ್ರತಿನಿಧಿಗಳ ಸಭೆಯಾಗಿರುವ ಒಂದು ಕೆಳಮನೆಯನ್ನು ಇದು ಒಳಗೊಂಡಿದೆ. ನವದೆಹಲಿಯಲ್ಲಿನ ಸಂಸದ್ ಭವನದಲ್ಲಿರುವ (ಇದನ್ನು ಸಾಮಾನ್ಯವಾಗಿ ಸಂಸದ್ ಮಾರ್ಗ ಎಂದು ಕರೆಯಲಾಗುತ್ತದೆ) ಪ್ರತ್ಯೇಕ ಶಾಸನಸಭೆಗಳಲ್ಲಿ ಎರಡೂ ಸದನಗಳು ಸಭೆ ಸೇರುತ್ತವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.