The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಯಕೃತ್ತು ಕಶೇರುಕಗಳಲ್ಲಿ ಮತ್ತು ಇತರ ಕೆಲವು ಪ್ರಾಣಿಗಳಲ್ಲಿ ಕಂಡುಬರುವ ಒಂದು ಜೀವಧಾರಕ ಅಂಗ. ವಿಷದ ಅಂಶವನ್ನು ತೆಗೆದುಹಾಕುವುದು, ಪ್ರೋಟೀನ್ ಸಂಶ್ಲೇಷಣೆ ಮತ್ತು ಜೀರ್ಣಕ್ರಿಯೆಗೆ ಬೇಕಾಗುವ ಜೀವರಾಸಾಯನಿಕ ವಸ್ತುಗಳನ್ನು ಉತ್ಪತ್ತಿ ಮಾಡುವುದು ಇವೇ ಮೊದಲಾದ ಹಲವಾರು ಕಾರ್ಯಗಳನ್ನು ಇದು ಮಾಡುತ್ತದೆ. ಜೀವದ ಉಳಿವಿಗಾಗಿ ಯಕೃತ್ತು ಅತೀ ಅವಶ್ಯಕ; ಯಕೃತ್ತು ಕಾರ್ಯವನ್ನು ಮಾಡದಿದ್ದರೆ ಅದನ್ನು ಸರಿದೂಗಿಸುವಂತಹ ಬೇರೆ ಯಾವುದೇ ಮಾರ್ಗಗಳು ಪ್ರಸ್ತುತದಲ್ಲಿಲ್ಲ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಈದ್ ಅಲ್-ಅಧಾ ( ಅರೇಬಿಕ್: عيد الأضحى ʿĪd al-ʾAḍḥā [ˈʕiːd æl ˈʔɑdˤħæː], "ತ್ಯಾಗದ ಹಬ್ಬ") ಅಥವಾ ತ್ಯಾಗದ ಹಬ್ಬವು ಇಸ್ಲಾಂನಲ್ಲಿ ಎರಡನೆಯದು ಮತ್ತು ದೊಡ್ಡದಾದ ರಜಾದಿನಗಳಲ್ಲಿ ಆಚರಿಸಲಾಗುವ ಪ್ರಮುಖ ಹಬ್ಬ. (ಇನ್ನೊಂದು ಈದ್ ಅಲ್-ಫಿತರ್ ). ಅಬ್ರಹಾಂ (ಇಬ್ರಾಹಿಂ) ತನ್ನ ಮಗನಾದ ಇಸ್ಮಾಯಿಲ್ (ಇಸ್ಮಾಯಿಲ್) ನನ್ನು ದೇವರ ಆಜ್ಞೆಗೆ ವಿಧೇಯತೆಗಾಗಿ ತ್ಯಾಗಮಾಡಲು ಇಚ್ಛೆಯನ್ನು ವ್ಯಕ್ತಪಡಿಸುತ್ತಾನೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು(ಸಾಮಾನ್ಯವಾಗಿ ಆರ್ ಸಿ ಬಿ ಎಂದು ಸಂಕ್ಷಿಪ್ತಗೊಳಿಸಲಾಗಿದೆ) ಕರ್ನಾಟಕ, ಬೆಂಗಳೂರು ಮೂಲದ ವೃತ್ತಿಪರ ಫ್ರಾಂಚೈಸ್ ಕ್ರಿಕೆಟ್ ತಂಡವಾಗಿದ್ದು, ಇದು ಇಂಡಿಯನ್ ಪ್ರೀಮಿಯರ್ ಲೀಗ್ನಲ್ಲಿ ಆಡುತ್ತದೆ. ಫ್ರ್ಯಾಂಚೈಸ್ ಅನ್ನು 2008 ರಲ್ಲಿ ಯುನೈಟೆಡ್ ಸ್ಪಿರಿಟ್ಸ್ ಸ್ಥಾಪಿಸಿತು ಮತ್ತು ಅದರ ಮದ್ಯದ ಬ್ರ್ಯಾಂಡ್ ರಾಯಲ್ ಚಾಲೆಂಜ್ ನಂತರ ಹೆಸರಿಸಲಾಯಿತು. ರಾಯಲ್ ಚಾಲೆಂಜರ್ಸ್ ತಮ್ಮ ತವರಿನ ಪಂದ್ಯಗಳನ್ನು 32,000 ಸಾಮರ್ಥ್ಯದ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಡುತ್ತಾರೆ.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ
ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(PMKSN, ಅನುವಾದ: ಪ್ರಧಾನಮಂತ್ರಿಗಳ ರೈತ ಗೌರವ ನಿಧಿ) ಭಾರತ ಸರ್ಕಾರದ ಉಪಕ್ರಮವಾಗಿದ್ದು, ರೈತರಿಗೆ ಕನಿಷ್ಠ ಆದಾಯ ಬೆಂಬಲವಾಗಿ ವರ್ಷಕ್ಕೆ ₹೬೦೦೦(₹೬,೩೦೦ ಅಥವಾ ೨೦೨೦ ರಲ್ಲಿ US$೭೯ ಗೆ ಸಮಾನ) ನೀಡುತ್ತದೆ. ೧ ಫೆಬ್ರವರಿ ೨೦೧೯ ರಂದು ಭಾರತದ ೨೦೧೯ರ ಮಧ್ಯಂತರ ಯೂನಿಯನ್ ಬಜೆಟ್ನಲ್ಲಿ ಪಿಯೂಷ್ ಗೋಯಲ್ ಅವರು ಈ ಉಪಕ್ರಮವನ್ನು ಘೋಷಿಸಿದರು . ಈ ಯೋಜನೆಗೆ ವಾರ್ಷಿಕ ₹೭೫,೦೦೦ ಕೋಟಿ (₹೭೯೦ ಶತಕೋಟಿ ಅಥವಾ ೨೦೨೦ ರಲ್ಲಿ US$೯.೯ ಶತಕೋಟಿಗೆ ಸಮಾನ) ವೆಚ್ಚವಾಗಿದೆ ಮತ್ತು ಡಿಸೆಂಬರ್ ೨೦೧೮ರಿಂದ ಜಾರಿಗೆ ಬಂದಿದೆ.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ವಿಜಯ್ ವಿಟ್ಟಲ್ ಮಲ್ಯ (ಜನನ 18 ಡಿಸೆಂಬರ್ 1955) ಒಬ್ಬ ಭಾರತೀಯ ಪಲಯನಗೈದ ಮಾಜಿ ಉದ್ಯಮಿ ಮತ್ತು ರಾಜಕಾರಣಿ. ಭಾರತದಲ್ಲಿನ ಆರ್ಥಿಕ ಅಪರಾಧಗಳ ಆರೋಪಗಳನ್ನು ಎದುರಿಸಲು ಯುಕೆಯಿಂದ ಹಿಂದಿರುಗಿಸಲು, ಭಾರತ ಸರ್ಕಾರವು ಹಸ್ತಾಂತರ ಮಾಡುವ ಪ್ರಯತ್ನದ ವಿಷಯವಾಗಿದ್ದಾರೆ. ಮಾದಕ ಪಾನೀಯಗಳ ವ್ಯವಹಾರದಲ್ಲಿದ್ದ ಒಬ್ಬ ಉದ್ಯಮಿಯ ಮಗ, ಮಲ್ಯ ಭಾರತದ ಅತಿದೊಡ್ಡ ಸ್ಪಿರಿಟ್ಸ್ ಕಂಪನಿಯಾದ ಯುನೈಟೆಡ್ ಸ್ಪಿರಿಟ್ಸ್ ನ ಮಾಜಿ ಅಧ್ಯಕ್ಷರಾಗಿದ್ದಾರೆ ಮತ್ತು ಯುನೈಟೆಡ್ ಬ್ರೂವರೀಸ್ನ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಲೈಂಗಿಕ ಸಂಭೋಗ ಎಂಬುದು ಗಂಡಿನ ಶಿಶ್ನವನ್ನು ಹೆಣ್ಣಿನ ಯೋನಿಯೊಳಕ್ಕೆ ತುರುಕಿಸುವ ಮತ್ತು ಹಿಂತೆಗೆದುಕೊಳ್ಳುವ ದೈಹಿಕ ಕ್ರಿಯೆ. ಸಾಮಾನ್ಯವಾಗಿ ಲೈಂಗಿಕ ಆನಂದಕ್ಕಾಗಿ ಸಂಭೋಗ ನಡೆಸುವುದಿದೆ ಮತ್ತು ಸಂತಾನೋತ್ಪತ್ತಿಗಾಗಿಯೂ ಸಂಭೋಗ ನಡೆಸಲಾಗುತ್ತದೆ. ನಿಜವಾಗಿ ನೋಡಿದರೆ ಗಂಡು ಮತ್ತು ಹೆಣ್ಣು ಕೂಡಿ ಸೃಷ್ಟಿಕಾರ್ಯದಲ್ಲಿ ತೊಡಗುವುದು ಲೈಂಗಿಕ ಕ್ರಿಯೆಯ ಮೂಲಕವೇ ಮತ್ತು ಮಗುವಿಗೆ ಜನ್ಮ ಕೊಡಲು ಸಾಧ್ಯವಾಗುವುದು ಲೈಂಗಿಕ ಕ್ರಿಯೆ ನಡೆಸಿದರೆ ಮಾತ್ರ.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಕಾಲೇಜಿನಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಕೊಲೆಸ್ಟರಾಲ್ ಅಥವಾ ಕೊಬ್ಬು ಎನ್ನುವುದು ಎಲ್ಲ ಪ್ರಾಣಿಗಳ ಜೀವಕೋಶಗಳ ಪದರುಗಳಲ್ಲಿರುವ ಜೀವರಾಸಾಯನಿಕ ಕ್ರಿಯೆಯಿಂದ ಉತ್ಪನ್ನವಾದ ಮೇಣದಂತಹ ಜೈವಿಕವಸ್ತುವಾಗಿದ್ದು, ಇದು ರಕ್ತದೊಳಗಿನ ಜೀವದ್ರವ್ಯದಲ್ಲಿ ಸಾಗಿಸಲ್ಪಡುತ್ತದೆ. ಇದು ಸಸ್ತನಿ ಜಾತಿಯ ಪ್ರಾಣಿಗಳಲ್ಲಿ ಅತ್ಯವಶ್ಯಕವಾಗಿ ಬೇಕಾಗುವ ದೈಹಿಕ ರಚನಾತ್ಮಕ ಅಂಶವಾಗಿದ್ದು, ಇದು ಒಳಚರ್ಮದ ಭೇದ್ಯತೆಗೆ ಮತ್ತು ಸ್ರಾವತೆಯನ್ನು ಸರಿಯಾಗಿ ಕಾರ್ಯಗೊಳಿಸಲು ಅಗತ್ಯವಾಗಿದೆ. ಇದರೊಂದಿಗೆ ಕೊಲೆಸ್ಟರಾಲ್ ಪಿತ್ತರಸ ಆಮ್ಲ, ಸ್ಟೆರಾಯ್ಡ್ ಹಾರ್ಮೋನ್ ಮತ್ತು ಹಲವು ಕೊಬ್ಬಿನಲ್ಲಿ ಕರಗುವ ವಿಟಾಮಿನ್ ತಯಾರಿಕೆಯಲ್ಲಿ ಪ್ರಮುಖ ಅಂಶವಾಗಿ ಬಳಸಲ್ಪಡುತ್ತದೆ.
ಇಮ್ಮಡಿ ಪುಲಿಕೇಶಿ ಮಹಾರಾಜರು, ಚಾಲುಕ್ಯ ವಂಶದ ಪ್ರಸಿದ್ಧ ದೊರೆ.(ಕ್ರಿ.ಶ ೬೧೦-೬೪೨) ಇವರ ಕಾಲದಲ್ಲಿ ಬಾದಾಮಿ ಚಾಲುಕ್ಯರ ಸಾಮ್ರಾಜ್ಯವು ದಖನ್ ಪ್ರಸ್ಥಭೂಮಿಯ ಹೆಚ್ಚಿನ ಪ್ರದೇಶವನ್ನು ಆವರಿಸಿತು. ಬಾದಾಮಿಯ ಚಾಳುಕ್ಯರೆಂದು ಪ್ರಸಿದ್ಧರಾದ ಈ ವಂಶಜರು ಸುಮಾರು ೨೦೦ ವರ್ಷಗಳ ಕಾಲ ತಮ್ಮ ರಾಜ್ಯಭಾರವನ್ನು ಸ್ಥಾಪಿಸಿದ್ದರು."ಇವರು ಮೂಲತಃ ಬನವಾಸಿಯಿಂದ ಬಂದ ಕನ್ನಡದ ಜನಾಂಗದವರು.ಮುಂದೆ ಜೈನ ಸಂಪ್ರದಾಯ ಪಾಲಿಸಿದರು. ಕ್ರಿ.ಶ.ಸು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಎಚ್.ಎಸ್.ವೆಂಕಟೇಶಮೂರ್ತಿ (೨೩ ಜೂನ್ ೧೯೪೪ - ೩೦ ಮೇ ೨೦೨೫), ಇವರು ಕನ್ನಡದ ಕವಿ ಮತ್ತು ಬರಹಗಾರರು. ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.
ಬಾಡಿಗೆಗೆ ತೆಗೆದುಕೊಳ್ಳುವುದು ಎಂದರೆ ಮತ್ತೊಬ್ಬರ ಒಡೆತನದಲ್ಲಿರುವ ಒಂದು ಸರಕು, ಸೇವೆ, ಅಥವಾ ಆಸ್ತಿಯ ತಾತ್ಕಾಲಿಕ ಬಳಕೆಗೆ ಪಾವತಿ ಮಾಡಲಾಗುವಂಥ ಒಂದು ಒಪ್ಪಂದ ಮಾಡಿಕೊಳ್ಳುವುದು ಎಂದರ್ಥ. ಒಟ್ಟಾರೆ ಭೋಗ್ಯವೆಂದರೆ ಹಿಡುವಳಿದಾರನು ಸಂಪೂರ್ಣ ಬಾಡಿಗೆ ಮೊತ್ತವನ್ನು ಪಾವತಿಸುತ್ತಾನೆ ಮತ್ತು ಜಮೀನಿನ ಒಡೆಯನು ಒಡೆತನದಲ್ಲಿ ನಿಯತವಾಗಿ ಉಂಟಾಗುವ ಎಲ್ಲ ಆಸ್ತಿ ಶುಲ್ಕಗಳನ್ನು ಪಾವತಿಸುತ್ತಾನೆ. ಖರೀದಿ ಮಾಡುವ ಬದಲು ಬಾಡಿಗೆ ತೆಗೆದುಕೊಳ್ಳುವುದಕ್ಕೆ ಅನೇಕ ಸಂಭಾವ್ಯ ಕಾರಣಗಳಿವೆ, ಉದಾಹರಣೆಗೆ: 1) ಅನೇಕ ಕಾನೂನುವ್ಯಾಪ್ತಿಗಳಲ್ಲಿ (ಭಾರತ, ಸ್ಪೇನ್, ಆಸ್ಟ್ರೇಲಿಯಾ, ಯುನೈಟಡ್ ಕಿಂಗ್ಡಂ, ಅಮೇರಿಕ ಸೇರಿದಂತೆ) ವ್ಯಾಪಾರ ಅಥವಾ ವ್ಯವಹಾರದಲ್ಲಿ ಬಳಸಲಾದ ಬಾಡಿಗೆಗೆ ತೆರಿಗೆ ವಿನಾಯಿತಿ ಸಿಗುತ್ತದೆ, ಬಹುತೇಕ ಕಾನೂನುವ್ಯಾಪ್ತಿಗಳಲ್ಲಿ ಮನೆ ಮೇಲಿನ ಬಾಡಿಗೆಗೆ ತೆರಿಗೆ ವಿನಾಯಿತಿ ಸಿಗುವುದಿಲ್ಲ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಭಾರತದಲ್ಲಿನ ಟ್ವೆಂಟಿ 20 ಕ್ರಿಕೆಟ್ ಪಂದ್ಯಾವಳಿಗಳ ಒಂದು ವೃತ್ತಿಪರ ಲೀಗ್ ಆಗಿದೆ. ಇದನ್ನು ಭಾರತದ ಕ್ರಿಕೆಟ್ (ಬಿಸಿಸಿಐ) ನಿಯಂತ್ರಣ ಮಂಡಳಿ ಆರಂಭಿಸಿದೆ.ಇದು ಮುಂಬಯಿ, ಮಹಾರಾಷ್ಟ್ರ ಪ್ರಧಾನ ಕಚೇರಿಯನ್ನು ಹೊಂದಿದೆ. ಲೀಗ್ ನ ಅಧ್ಯಕ್ಷ ಮತ್ತು ಆಯುಕ್ತರಾಗಿ ಬಿಸಿಸಿಐ ಉಪಾಧ್ಯಕ್ಷ ರಾಜೀವ್ ಶುಕ್ಲಾ ಕಾರ್ಯನಿರ್ವಹಿಸುತ್ತಿದ್ದಾರೆ.ಇದರಲ್ಲಿ ಕ್ರಿಕೆಟ್ ಜಗತ್ತಿನ ಹಲವು ದೇಶಗಳ ಆಟಗಾರರನ್ನು ಹೊಂದಿರುವ, ಎಂಟು ತಂಡಗಳು ಸ್ಪರ್ಧಿಸುತ್ತವೆ.
ಬಾನು ಮುಷ್ತಾಕ್ (1948 ರಲ್ಲಿ ಜನನ) ಭಾರತದ ದಕ್ಷಿಣ ರಾಜ್ಯವಾದ ಕರ್ನಾಟಕದ ಒಬ್ಬ ಕಾರ್ಯಕರ್ತೆ, ವಕೀಲೆ ಮತ್ತು ಬರಹಗಾರ್ತಿ. ಇವರು ಕನ್ನಡ ಭಾಷೆಯಲ್ಲಿ ಬರೆಯುತ್ತಾರೆ ಮತ್ತು ಅವರ ಕೃತಿಗಳು ಉರ್ದು, ಹಿಂದಿ, ತಮಿಳು, ಮಲಯಾಳಂ ಮತ್ತು ಇತ್ತೀಚೆಗೆ ಆಂಗ್ಲ ಭಾಷೆಗಳಲ್ಲಿಯೂ ಪ್ರಕಟವಾಗಿವೆ. ೨೦೨೫ ರಲ್ಲಿ, ದೀಪಾ ಭಸ್ತಿ ಅವರಿಂದ ಆಂಗ್ಲ ಭಾಷೆಗೆ ಅನುವಾದಿಸಲ್ಪಟ್ಟ ಸಣ್ಣ ಕಥಾಸಂಕಲನ, ಹಾರ್ಟ್ ಲ್ಯಾಂಪ್, ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಗೆದ್ದುಕೊಂಡಿತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸಂಶೋಧನೆ ಎಂಬುದನ್ನು ಜ್ಞಾನದ ಸಲುವಾಗಿ ನಡೆಸುವ ಹುಡುಕಾಟ ಎಂದು ವ್ಯಾಖ್ಯಾನಿಸಬಹುದು,ಅಥವಾ ಮುಕ್ತ ಮನಸ್ಸಿನಿಂದ ಯಾವುದೇ ಶಿಸ್ತುಬದ್ದ ಶೋಧನೆ,ತನಿಖೆ ಮೂಲಕ ನವೀನ ಸಂಗತಿಗಳ ಹುಟ್ಟುಹಾಕಿ ಹೊಸ ಅಥವಾ ಅಸ್ತಿತ್ವದಲ್ಲಿರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದು.ಒಂದು ವೈಜ್ಞಾನಿಕ ಪದ್ದತಿಯಂತೆ ಹೊಸ ಸಿದ್ದಾಂತಗಳ ಅಭಿವೃದ್ಧಿಪಡಿಸುವಿಕೆಯೇ ಸಂಶೋಧನೆಯಾಗಿದೆ. ಮೂಲಭೂತ ಸಂಶೋಧನೆಯ ಪ್ರಾಥಮಿಕ ಉದ್ದೇಶವೆಂದರೆ, (ಅದನ್ನು ಅನ್ವಯಿಕ ಸಂಶೋಧನೆಗೆ ವಿರೋಧವೆನ್ನಲಾಗುತ್ತದೆ.)ಆವಿಷ್ಕಾರಗೊಳಿಸುವಿಕೆ,ವಿವರವಾಗಿ ಅರ್ಥೈಸುವಿಕೆ ಮತ್ತು ಅಭಿವೃದ್ಧಿ ಮೂಲಕ ಮನುಷ್ಯನ ಜ್ಞಾನವನ್ನು ನಿರ್ಧಿಷ್ಟ ಪದ್ದತಿ ಮತ್ತು ಶಿಸ್ತುಗಳಿಗೆ ಅಳವಡಿಸುವುದೇ ಆಗಿದೆ.ನಮ್ಮ ಜಗತ್ತು ಮತ್ತು ಬ್ರಹ್ಮಾಂಡದಲ್ಲಿನ ವೈಜ್ಞಾನಿಕ ಭೌತಿಕ ವಸ್ತುಗಳ ಮೇಲೆ ವಿಸ್ತಾರವಾದ ತಿಳಿವಳಿಕೆ ಪಡೆಯುವುದು. ವೈಜ್ಞಾನಿಕ ಸಂಶೋಧನೆ ಯು ವೈಜ್ಞಾನಿಕ ಪದ್ದತಿಯ ಅಳವಡಿಕೆಯನ್ನು ಅವಲಂಬಿಸಿದೆ.ಈ ಮೂಲಕ ಅದು ಕುತೂಹಲವನ್ನು ಬಡಿದೆಬ್ಬಿಸಿ ಫಲಿತಾಂಶಕ್ಕಾಗಿ ಸಜ್ಜುಗೊಳಿಸುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.