The most-visited ಕನ್ನಡ Wikipedia articles, updated daily. Learn more...
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಪುಸ್ತಕದ ರಕ್ಷಾಕವಚ ಎಂದರೆ ಒಂದು ಪುಸ್ತಕದ ಪುಟಗಳನ್ನು ಒಟ್ಟಾಗಿ ಕಟ್ಟಲು ಬಳಸಲಾದ ಯಾವುದೇ ರಕ್ಷಣಾತ್ಮಕ ಹೊದಿಕೆ. ಗಟ್ಟಿರಟ್ಟುಗಳು ಮತ್ತು ಕಾಗದಕವಚಗಳ ನಡುವಿನ ಪರಿಚಿತ ವ್ಯತ್ಯಾಸವನ್ನು ಮೀರಿ, ಮತ್ತಷ್ಟು ಪರ್ಯಾಯಗಳು ಮತ್ತು ಸೇರ್ಪಡಿಕೆಗಳಿವೆ, ಉದಾಹರಣೆಗೆ ಧೂಳು ಹೊದಿಕೆಗಳು, ಉಂಗುರ ರಟ್ಟು ಮತ್ತು ಹತ್ತೊಂಭತ್ತನೇ ಶತಮಾನದ ಪೇಪರ್-ಬೋರ್ಡ್ ಹಾಗೂ ಕೈರಟ್ಟಿನ ಸಾಂಪ್ರದಾಯಿಕ ಪ್ರಕಾರಗಳಂತಹ ಹೆಚ್ಚು ಹಳೆಯ ರೂಪಗಳು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಒಂಟೆಯು ಅದರ ಬೆನ್ನ ಮೇಲೆ "ಡುಬ್ಬ"ಗಳೆಂದು ಕರೆಯಲಾಗುವ ವಿಶಿಷ್ಟ ಕೊಬ್ಬಿನ ಸಂಗ್ರಹವನ್ನು ಹೊಂದಿರುವ, ಕಮೇಲುಸ್ ಜಾತಿಯಲ್ಲಿನ ಒಂದು ಸಮ ಕಾಲ್ಬೆರಳುಗಳಿರುವ ಗೊರಸುಳ್ಳ ಪ್ರಾಣಿ. ಮಧ್ಯಪ್ರಾಚ್ಯ ಹಾಗು ಆಫ಼್ರಿಕಾದ ಕೊಂಬಿನಲ್ಲಿ ನೆಲೆಸಿರುವ ಡ್ರಮಿಡರಿ ಅಥವಾ ಒಂಟಿ ಡುಬ್ಬದ ಒಂಟೆ (ಕಮೇಲುಸ್ ಡ್ರೋಮೆಡೇರಿಯಸ್) ಮತ್ತು ಮಧ್ಯ ಏಷ್ಯಾದಲ್ಲಿ ನೆಲೆಸಿರುವ ಬ್ಯಾಕ್ಟ್ರಿಯನ್ ಅಥವಾ ಎರಡು ಡುಬ್ಬಗಳ ಒಂಟೆ (ಕಮೇಲುಸ್ ಬ್ಯಾಕ್ಟ್ರಿಯೇನಸ್) ಒಂಟೆಯ ಎರಡು ಜೀವಂತವಿರುವ ಪ್ರಜಾತಿಗಳಾಗಿವೆ. ಎರಡೂ ಪ್ರಜಾತಿಗಳನ್ನು ಪಳಗಿಸಲಾಗಿದೆ; ಅವು ಹಾಲು, ಮಾಂಸ, ಬಟ್ಟೆಗಳು ಅಥವಾ ಉಣ್ಣೆಬಟ್ಟೆ ಸಂಚಿಗಳಂತಹ ಸರಕುಗಳಿಗೆ ಕೂದಲನ್ನು ಒದಗಿಸುತ್ತವೆ, ಮತ್ತು ಅವು ಮಾನವ ಸಾರಿಗೆಯಿಂದ ಭಾರ ಹೊರುವವರೆಗೆ ವ್ಯಾಪಿಸುವ ಕಾರ್ಯಗಳಲ್ಲಿ ಕೆಲಸದ ಪ್ರಾಣಿಗಳಾಗಿವೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅರ್ಜುನನು ಹಿಂದು ಪುರಾಣಗಳಲ್ಲಿ ಒಂದಾದ ಮಹಾಭಾರತದ ನಾಯಕರಲ್ಲಿ ಸಾರಥಿಯೂ, ಆಪ್ತ ಮಿತ್ರನೂ ಆಗಿದ್ದ ಶ್ರೀಕೃಷ್ಣ ಪರಮಾತ್ಮನು ಮನವೂಲಿಸಿದನು. ಯುದ್ಧದಲ್ಲಿ ಅಡಕವಾಗಿರುವ ವಿಷಯಗಳು, ಧೈರ್ಯ, ಯೋಧನೋರ್ವನ ಕರ್ತವ್ಯ, ಮಾನವ ಜೀವನದ ಹಾಗೂ ಆತ್ಮದ ಸ್ವಭಾವ ಹಾಗೂ ದೇವರುಗಳ ಪಾತ್ರ ಇವೇ ಮುಂತಾದವುಗಳಿಂದ ಕೂಡಿದ್ದ ಇವರ ನಡುವಿನ ಸಂಭಾಷಣೆಯು ಮಹಾಭಾರತದ ಅತೀ ಪ್ರಮುಖ ಪ್ರಸಂಗಗಳಲ್ಲಿ ಒಂದಾದ ಭಗವದ್ಗೀತೆಯವಸ್ತುವಾಗಿದೆ. ಕಡೆಯಲ್ಲಿ ಈತನ ಪರಮ ಪ್ರತಿಸ್ಫರ್ಧಿಯಾದ ಕರ್ಣನನ್ನು ಕೊಲ್ಲುವುದರಲ್ಲಿ ಅರ್ಜುನನು ಪ್ರಮುಖ ಪಾತ್ರವನ್ನು ವಹಿಸಿದ್ದನು.
ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (12 ಜುಲೈ 1880 – 25 ಫೆಬ್ರವರಿ 1964) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ artificial intelligence ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾರತ ಬಿಟ್ಟು ತೊಲಗಿ ಚಳುವಳಿಯು ಒಂದು ಅಸಹಕಾರ ಚಳುವಳಿಯಾಗಿದ್ದು ಆಗಸ್ಟ್ ೧೯೪೨ರಲ್ಲಿ ಮಹಾತ್ಮಾ ಗಾಂಧಿಯವರ ಮುಂದಾಳತ್ವದಲ್ಲಿ ನಡೆಯಿತು. ಇದರ ಗುರಿ ಬ್ರಿಟಿಷ್ ಸರ್ಕಾರದಿಂದ ಭಾರತದ ಸ್ವಾತಂತ್ರ್ಯ ಪಡೆಯುವುದಾಗಿತ್ತು. ೮ ಆಗಸ್ಟ್ ರಂದು ಮುಂಬಯಿಯ ಗೊವಾಳಿಯ ಮೈದಾನ(ಇಂದಿನ ಹೆಸರು - ಆಗಸ್ಟ್ ಕ್ರಾಂತಿ ಮೈದಾನ)ದಲ್ಲಿ ಗಾಂಧೀಜಿಯವರ ಮಾಡು ಇಲ್ಲವೆ ಮಡಿ ಎಂಬ ಘೋಷಣೆಯೊಂದಿಗೆ ಪ್ರಾರಂಭವಾಯಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಅಮ್ಮ ಎಂಬುದು ಕನ್ನಡದಲ್ಲಿ ತಾಯಿಗೆ ಪರ್ಯಾಯ ಪದ.ಅಮ್ಮ ಎಂಬುದು ತಾಯಿಯನ್ನು ಸಂಬೋಧಿಸುವ ಪದ ಕೂಡಾ ಹೌದು.ಅಲ್ಲದೆ ಹಿರಿಯ ಹೆಂಗಸರನ್ನು ಸಂಬೋಧಿಸುವಾಗ ಮರ್ಯಾದೆ ಸೂಚಕ ಪದವಾಗಿ ಕೂಡಾ ಬಳಕೆಯಾಗುತ್ತದೆ.ಮಾತೃಸ್ವರೂಪಿಣಿಯಾದ ದೇವತೆಗೆ ಅಮ್ಮ ಎಂದು ಕರೆಯುವ ವಾಡಿಕೆ ಇದೆ.ಮೈಮೇಲೆ ಏಳುವ ದಡಾರ ಮುಂತಾದ ಗುಳ್ಳೆಗಳಿಗೆ "ಅಮ್ಮ ಎದ್ದಿದೆ" ಎಂದು ಹೇಳುವ ರೂಢಿ ಇದೆ. ಅಮ್ಮ ಹೆಸರಿನ ಕನ್ನಡ ಚಲನಚಿತ್ರದ ಬಗ್ಗೆ ಲೇಖನ ಈ ಪುಟದಲ್ಲಿ ಇದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಸ್ವಚ್ಛ ಭಾರತ ಅಭಿಯಾನ ಮಹಾತ್ಮ ಗಾಂಧೀಜಿಯವರ ಕಾಲದಲ್ಲೇ ೨೦೧೫-೨೦೧೬ನೇ ಸಾಲಿನಲ್ಲಿ ಪ್ರಾರಂಭವಾಗಿತ್ತು. ಈ ಅಭಿಯಾನವು ಅಧಿಕೃತವಾಗಿ ೨ ಅಕ್ಟೋಬರ್ ೨೦೧೪ರಂದು ನವದೆಹಲಿಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ರಾಜ್ ಘಾಟಿನಲ್ಲಿ ರಸ್ತೆಯೊಂದರನ್ನು ಗುಡಿಸುವುದರ ಮೂಲಕ ಆರಂಭಮಾಡಿದರು. ಸ್ವಚ್ಛ ಭಾರತ ಅಭಿಯಾನದ ಅಕ್ಟೋಬರ್ ೨ರ ಗಾಂಧಿ ಜಯಂತಿಯಂದು ದೇಶದ ಪ್ರಧಾನಿ ಸ್ವತಃ ಕೈಯಲ್ಲಿ ಪೊರಕೆ ಹಿಡಿದು, ಸ್ವಚ್ಛಗೊಳಿಸಿ, ಸ್ವಚ್ಛ ಭಾರತ ಅಭಿಯಾನ Archived 2021-11-12 ವೇಬ್ಯಾಕ್ ಮೆಷಿನ್ ನಲ್ಲಿ.ಕ್ಕೆ ಚಾಲನೆ ನೀಡುವ ಮೂಲಕ ದೇಶದ ಜನರಲ್ಲಿ ರೋಮಾಂಚನವುಂಟು ಮಾಡಿದ್ದಾರೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ದೆಹಲಿಯ ಅಥವಾ ದಿಲ್ಲಿ ಸುಲ್ತಾನತೆ ದೆಹಲಿಯಲ್ಲಿದ್ದ ಸುಲ್ತಾನತೆ (ಮುಸಲ್ಮಾನ ಸಾಮ್ರಾಜ್ಯ) ಆಗಿತ್ತು, ಇದು ಭಾರತ ಉಪಖಂಡದ ದೊಡ್ಡ ಭಾಗಗಳನ್ನು ೩೨೦ ವರ್ಷಗಳವರೆಗೆ (೧೨೦೬-೧೫೨೬) ವಿಸ್ತರಿಸಿತು. ಐದು ರಾಜವಂಶಗಳಾದ ದಿಲ್ಲಿ ಸುಲ್ತಾನತೆಯ ಅನುಕ್ರಮವಾಗಿ: ಗುಲಾಮ (ಮಾಮ್ಲುಕ್) ರಾಜವಂಶ (೧೨೦೬-೯೦), ಖಲಜಿ ರಾಜವಂಶ (೧೨೯೦-೧೩೨೦), ತುಘಲಕ್ ರಾಜವಂಶ (೧೩೨೦-೧೪೧೪), ಸಯ್ಯಿದ್ ರಾಜವಂಶ (೧೪೧೪- ೫೧), ಮತ್ತು ಲೋದಿ ರಾಜವಂಶ (೧೪೫೧-೧೫೨೬). ಮಂಗೋಲ್ ಸಾಮ್ರಾಜ್ಯದ ಆಕ್ರಮಣವನ್ನು ಹಿಮ್ಮೆಟ್ಟಿಸಲು ಕೆಲವು ರಾಜ್ಯಗಳಲ್ಲಿ ಒಂದಾಗಿರುವ ಸುಲ್ತಾನರು, ಮತ್ತು ೧೨೩೬ ರಿಂದ ೧೨೪೦ ರವರೆಗೆ ಆಳ್ವಿಕೆ ಮಾಡಿದ ಇಸ್ಲಾಮಿ ಇತಿಹಾಸದ ಕೆಲವು ಸ್ತ್ರೀ ಆಡಳಿತಗಾರರು ಆಳಿದ್ದಾರೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಜಲ ಚಕ್ರ ಅಥವಾ ಜಲವಿಜ್ಙಾನ ಚಕ್ರ ದ ಪರಿಕಲ್ಪನೆಯು ಭೂಮಿಯಲ್ಲಿರುವ ನೀರಿನ ಸಂಪತ್ತು, ಭೂ ಮೇಲ್ ಮೈಯ ಹೊರಗೆ (ವಾತಾವರಣದಲ್ಲಿ) ಮತ್ತು ಒಳಗೆ (ನೆಲದ ಕೆಳಗೆ) ಹಂತ ಹಂತವಾಗಿ ನಿರಂತರವಾಗಿ ನಡೆಯುವ ನೀರಿನ ಚಕ್ರೀಯ ಪರಿಚಲನೆಯನ್ನು ವಿವರಿಸುತ್ತದೆ. ಭೂಮಿಯ ಮೇಲೆ ಲಭ್ಯವಿರುವ ಒಟ್ಟು ನೀರಿನ ಪ್ರಮಾಣವು ಹೆಚ್ಚುಕಡಿಮೆ ನಿರ್ದಿಷ್ಟವಾಗಿದ್ದರೂ, ಜಲಚಕ್ರದ ವಿವಿಧ ಹಂತಗಳಲ್ಲಿ ಚಲಿಸುವ ನೀರು ವಿವಿಧ ಪ್ರಮಾಣಗಳಲ್ಲಿ ದ್ರವ, ಅನಿಲ ಅಥವಾ ಘನ (ಹಿಮ) ಸ್ಥಿತಿಗಳಿಗೆ, ಹಾಗೆಯೇ, ಸಿಹಿನೀರು, ಉಪ್ಪುನೀರು, ಹಿಮದಲ್ಲಿ ಅಡಕವಾದ ನೀರು, ವಾತಾವರಣದ ನೀರು ಇತ್ಯಾದಿ ವಿಭಿನ್ನ ರೂಪ-ಸ್ಥಿತಿಗಳಿಗೆ ಬದಲಾವಣೆಯಾಗಬಹುದು. ಜಲಚಕ್ರದ ನೀರು ಒಂದು ಜಲಸಂಗ್ರಹದಿಂದ ಇನ್ನೊಂದಕ್ಕೆ ಅಂದರೆ ನದಿಗಳಿಂದ ಸಮುದ್ರಕ್ಕೆ, ಸಮುದ್ರದಿಂದ ವಾತಾವರಣಕ್ಕೆ ವಾತಾವರಣದಿಂದ ಮತ್ತೆ ಭೂಮಿಗೆ ಚಲಿಸಲು, ಸಹಕರಿಸುವ ಭೌತಿಕ ಪ್ರಕ್ರಿಯೆಗಳೆಂದರೆ ಬಾಷ್ಪೀಕರಣ (evapotranspiration), ಸಾಂದ್ರೀಕರಣ(condensation), ವರ್ಷಾವತರಣ(precipitation), ಒಳಸೋಸುವಿಕೆ(infiltration), ಮೇಲಿನ ಹರಿವು(surface flow) ಮತ್ತು ನೆಲದಡಿಯ ಹರಿವು(subsurface flow).
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ರೈತನು ರೈತನು ಬೇಸಾಯಮಾಡುವ ಜಮೀನಿನ ಮಾಲೀಕನಾಗಿರಬಹುದು ಅಥವಾ ಇತರರು ಒಡೆಯರಾಗಿರುವ ಜಮೀನಿನಲ್ಲಿ ಕಾರ್ಮಿಕನಾಗಿ ಕೆಲಸ ಮಾಡಬಹುದು, ಆದರೆ ಮುಂದುವರಿದ ಅರ್ಥವ್ಯವಸ್ಥೆಗಳಲ್ಲಿ, ರೈತನು ಸಾಮಾನ್ಯವಾಗಿ ಜಮೀನಿನ ಒಡೆಯನಾಗಿರುತ್ತಾನೆ, ಮತ್ತು ಜಮೀನಿನ ಉದ್ಯೋಗಿಗಳನ್ನು ಜಮೀನು ಕಾರ್ಮಿಕರು, ಅಥವಾ ಆರಂಬದಾಳುಗಳೆಂದು ಕರೆಯಲಾಗುತ್ತದೆ. ಆದರೆ, ಸ್ವಲ್ಪ ಕಾಲದ ಹಿಂದಿನವರೆಗೂ, ರೈತನು ಪರಿಶ್ರಮ ಮತ್ತು ಗಮನದಿಂದ ಸಸ್ಯ, ಬೆಳೆ ಇತ್ಯಾದಿಗಳ ಬೆಳವಣಿಗೆಯನ್ನು ಉತ್ತೇಜಿಸುವ ಅಥವಾ ಸುಧಾರಿಸುವ ಅಥವಾ ಪ್ರಾಣಿಗಳನ್ನು (ಜಾನುವಾರು ಅಥವಾ ಮೀನು) ಬೆಳೆಸುವ ವ್ಯಕ್ತಿಯಾಗಿದ್ದನು. ಕೃಷಿಯ ಕಾಲಮಾನ ನವಶಿಲಾಯುಗದಷ್ಟು ಹಿಂದಿನದ್ದು ಎಂದು ನಿರ್ಧರಿಸಲಾಗಿದೆ.
} ಕರ್ನಾಟಕ ಸಶಸ್ತ್ರ ಬಂಡಾಯ ಭಾರತದ ರಾಜಕೀಯ ಸ್ವಾತಂತ್ರ್ಯದ ಸಂಘರ್ಷ ಹಲವು ದೃಷ್ಟಿಕೋನಗಳಿಂದ ವೈಶಿಷ್ಟ್ಯಮಯವಾದುದು. ಜಗತ್ತಿನಾದ್ಯಂತ ಶತಮಾನಗಳುದ್ದಕ್ಕೂ ಬಹಳಷ್ಟು ಸ್ವಾತಂತ್ರ್ಯ ಆಂದೋಳನಗಳು ನಡೆದಿವೆ. ಇದರಲ್ಲಿಯೂ ಹಲವಷ್ಟು ಸಂಗ್ರಾಮಗಳು ಬೇರೆ ಬೇರೆ ಕಾರಣಗಳಿಗಾಗಿ, ಅಂದರೆ ಸ್ವಾತಂತ್ರ್ಯ, ಸಮಾನತೆಗಳಂತಹ ಮಾನವಹಕ್ಕುಗಳ ಈಡೇರಿಕೆಗೆ ಹೊರತಾಗಿಯೂ ನಡೆದುದ್ದನ್ನು ಚರಿತ್ರೆ ದಾಖಲಿಸುತ್ತದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಸಾಲುಮರದ ತಿಮ್ಮಕ್ಕ - ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿರುವ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ ಅಲ್ಲದೆ ಈಕೆ ಮುಂದಿನ ಪೀಳಿಗೆಯ ಒಳಿತಿಗಾಗಿ ಮರಗಳಿಗೆ ನೀರುಣಿಸಿ ಬೆಳೆಸಿದ್ದಾಳೆ.
ಶ್ಯಾಮ್ ಪ್ರಸಾದ್ ಮುಖರ್ಜಿ (ಜುಲೈ ೬, ೧೯೦೧ - ಜೂನ್ ೨೩, ೧೯೫೩) ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ. ಶ್ಯಾಮ ಪ್ರಸಾದ್ ಮುಖರ್ಜಿ (6 ಜುಲೈ 1901 - 23 ಜೂನ್ 1953) ಒಬ್ಬ ಭಾರತೀಯ ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದರು, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಚಿವ ಸಂಪುಟದಲ್ಲಿ "ಕೈಗಾರಿಕೋದ್ಯಮ ಮತ್ತು ಸರಬರಾಜು(ವಾಣಿಜ್ಯೋದ್ಯಮ) ಸಚಿವರಾಗಿ ಕಾರ್ಯನಿರ್ವಹಿಸಿದರು. ಅವರು ಕಾಂಗ್ರೆಸ್ ಪಕ್ಷವಲ್ಲದಿದ್ದರೂ, ಅವರ ಪ್ರತಿಭೆಯನ್ನು ಪರಿಗಣಿಸಿ, ಅವರನ್ನು ನೆಹರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿದ್ದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಹೃದಯ ಸ್ನಾಯುವಿನ ಊತಕ ಸಾವು (MI ) ಅಥವಾ ತೀವ್ರತರದ ಹೃದಯ ಸ್ನಾಯುವಿನ ಊತಕ ಸಾವು (AMI) ಎಂದರೆ ಹೃದಯದ ಒಂದು ಭಾಗಕ್ಕೆ ರಕ್ತ ಪೂರೈಕೆಯಲ್ಲಿ ಅಡ್ಡಿಯುಂಟಾಗಿ ಅಲ್ಲಿನ ಜೀವಕೋಶಗಳು ಸಾಯುವುದು ಎಂದರ್ಥ, ಇದನ್ನು ಸಾಮಾನ್ಯವಾಗಿ ಹೃದಯಾಘಾತ ಎಂದು ಕರೆಯುತ್ತಾರೆ. ಇದಕ್ಕೆ ಮುಖ್ಯ ಕಾರಣ ಸುಲಭವಾಗಿ ಘಾಸಿಗೊಳಗಾಗುವ ಅಪಧಮನಿಯ-ಕಾಠಿಣ್ಯದ ಶೇಖರಣೆ (ತಂತುಯುಕ್ತವಾದ ಊತಕದ ಶೇಖರಣೆ)ಯ ಛಿದ್ರವಾಗುವುದರಿಂದ ಉಂಟಾಗುವ ಪರಿಧಮನಿಯ ಮುಚ್ಚಿಕೊಳ್ಳುವಿಕೆ (ತಡೆಗಟ್ಟುವಿಕೆ). ಈ ಶೇಖರಣೆಯು ಅಪಧಮನಿಯ ಗೋಡೆಯಲ್ಲಿ ಲಿಪಿಡ್ಗಳು (ಕೊಬ್ಬಿನಾಮ್ಲಗಳು) ಮತ್ತು ಬಿಳಿರಕ್ತಕಣಗಳ (ವಿಶೇಷವಾಗಿ ಬೃಹತ್ಕಣಗಳು) ಅಸ್ಥಿರ ಸಂಗ್ರಹವಾಗಿದೆ.