The most-visited ಕನ್ನಡ Wikipedia articles, updated daily. Learn more...
ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಿತು. "ಹೆಣ್ಣು ಮಗುವನ್ನು ಉಳಿಸಿ" ಪ್ರಚಾರ , ಮಕ್ಕಳ ಲಿಂಗ ಅನುಪಾತಗಳು ಮತ್ತು ಹೆಣ್ಣುಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವ ಕುರಿತು ಜಾಗೃತಿ ಅಭಿಯಾನಗಳನ್ನು ಒಳಗೊಂಡಂತೆ ಸಂಘಟಿತ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ವಿಪತ್ತು ವ್ಯಾಪಕ ಮಾನವ, ಸಾಮಗ್ರಿ, ಆರ್ಥಿಕ ಅಥವಾ ಪಾರಿಸರಿಕ ನಷ್ಟ ಮತ್ತು ಪರಿಣಾಮಗಳನ್ನು ಒಳಗೊಂಡ ಒಂದು ಸಮುದಾಯ ಅಥವಾ ಸಮಾಜದ ಕಾರ್ಯಚಟುವಟಿಕೆಗೆ ಗಂಭೀರ ಅಡೆತಡೆ. ಆದ ನಷ್ಟವು ತನ್ನ ಸ್ವಂತ ಸಂಪನ್ಮೂಲಗಳನ್ನು ಬಳಸಿ ನಿಭಾಯಿಸುವ ಬಾಧಿತ ಸಮುದಾಯ ಅಥವಾ ಸಮಾಜದ ಸಾಮರ್ಥ್ಯವನ್ನು ಮೀರುತ್ತದೆ. ಸಮಕಾಲೀನ ಶೈಕ್ಷಣಿಕ ಸಮುದಾಯದಲ್ಲಿ, ವಿಪತ್ತುಗಳನ್ನು ಅಸಮಂಜಸವಾಗಿ ನಿರ್ವಹಿಸಲಾದ ಅಪಾಯದ ಪರಿಣಾಮವೆಂದು ಕಾಣಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಖಾದಿ ಅಥವಾ ಖಡ್ಡರ್ ಹಸ್ತಪೂರಿತ, ಭಾರತ, ಬಾಂಗ್ಲಾದೇಶ ಮತ್ತು ಪಾಕಿಸ್ತಾನದಿಂದ ಕೈಯಿಂದ ನೇಯ್ದ ನೈಸರ್ಗಿಕ ನಾರು ಬಟ್ಟೆ ಮುಖ್ಯವಾಗಿ ಹತ್ತಿದಿಂದ ಮಾಡಲ್ಪಟ್ಟಿದೆ. ಈ ಬಟ್ಟೆಯನ್ನು ಸಾಮಾನ್ಯವಾಗಿ ಹತ್ತಿದಿಂದ ನೇಯಲಾಗುತ್ತದೆ ಮತ್ತು ರೇಷ್ಮೆ ಅಥವಾ ಉಣ್ಣೆಯನ್ನು ಕೂಡ ಒಳಗೊಂಡಿರುತ್ತದೆ, ಇವುಗಳು ನೂಲುವ ಚಕ್ರದಲ್ಲಿ ನೂಲು ಹೊಲಿಯುತ್ತವೆ.ಇದು ಬಹುಮುಖ ಬಟ್ಟೆ, ಬೇಸಿಗೆಯಲ್ಲಿ ತಂಪು ಮತ್ತು ಚಳಿಗಾಲದಲ್ಲಿ ಬೆಚ್ಚಗಿರುತ್ತದೆ.ನೋಟವನ್ನು ಸುಧಾರಿಸುವ ಸಲುವಾಗಿ, ಖಾದಿ / ಖಡ್ಡರ್ ಕೆಲವೊಮ್ಮೆ ಗಟ್ಟಿಯಾದ ಭಾವನೆಯನ್ನು ನೀಡಲು ನಕ್ಷತ್ರ ಹಾಕಲಾಗುತ್ತದೆ.ಇದನ್ನು ಫ್ಯಾಶನ್ ವಲಯಗಳಲ್ಲಿ ವ್ಯಾಪಕವಾಗಿ ಸ್ವೀಕರಿಸಲಾಗಿದೆ. ಖಾದಿ ಭಾರತದಲ್ಲಿ ಖಾದಿ ಮತ್ತು ಗ್ರಾಮೀಣ ಇಂಡಸ್ಟ್ರೀಸ್ ಕಮಿಷನ್, ಮೈಕ್ರೋ, ಸ್ಮಾಲ್ ಅಂಡ್ ಮೆಡಿಯಮ್ ಎಂಟರ್ಪ್ರೈಸಸ್ ಸಚಿವಾಲಯದಿಂದ ಪ್ರಚಾರ ಮಾಡಲಾಗುತ್ತಿದೆ..
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕಾಂತಾರ: ಅಧ್ಯಾಯ ೧ ಮುಂಬರುವ ಭಾರತೀಯ ಕನ್ನಡ ಭಾಷೆಯ ಸಾಹಸಭರಿತ, ದೈವಶಕ್ತಿಯನ್ನು ಹಿನ್ನೆಲೆಯಾಗುಳ್ಳ ಚಿತ್ರವಾಗಿದ್ದು, ಇದನ್ನು ರಿಷಬ್ ಶೆಟ್ಟಿ ಬರೆದು ನಿರ್ದೇಶಿಸಿದ್ದಾರೆ ಮತ್ತು ಹೊಂಬಾಳೆ ಫಿಲ್ಮ್ಸ್ ಅಡಿಯಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿದ್ದಾರೆ. ೨೦೨೨ ರ ಚಲನಚಿತ್ರ ಕಾಂತಾರ ದ ಪೂರ್ವಭಾವಿಯಾಗಿ, ಕಥೆಯು ಮೊದಲ ಚಿತ್ರದಲ್ಲಿ ಪರಿಚಯಿಸಲಾದ ದೈವಿಕ ಸಂಪ್ರದಾಯ ಮತ್ತು ಪೂರ್ವಜರ ಸಂಘರ್ಷದ ಮೂಲಗಳನ್ನು ಆಳವಾಗಿ ಪ್ರಸ್ತುತಪಡಿಸುತ್ತದೆ. ಚಿತ್ರೀಕರಣ ನವೆಂಬರ್ ೨೦೨೩ ರಲ್ಲಿ ಪ್ರಾರಂಭವಾಯಿತು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಗಿಡೋ ವ್ಯಾನ್ ರೋಸಮ್ ( Dutch: [ˈɣido vɑn ˈrɔsʏm, -səm ] ; ಜನನ 31 ಜನವರಿ 1956) ಒಬ್ಬ ಪ್ರೋಗ್ರಾಮರ್, ಪೈಥಾನ್ ಪ್ರೋಗ್ರಾಮಿಂಗ್ ಭಾಷೆಯ ಸೃಷ್ಟಿಕರ್ತ ಎಂದು ಪ್ರಸಿದ್ಧರಾಗಿದ್ದಾರೆ, ಇದಕ್ಕಾಗಿ ಅವರು 12 ಜುಲೈ 2018 ರಂದು ಸ್ಥಾನದಿಂದ ಕೆಳಗಿಳಿಯುವವರೆಗೂ " ಜೀವನಕ್ಕಾಗಿ ಪರೋಪಕಾರಿ ಸರ್ವಾಧಿಕಾರಿ " (BDFL) ಆಗಿದ್ದರು ಅವರು 2019 ರವರೆಗೂ ಪೈಥಾನ್ ಸ್ಟೀರಿಂಗ್ ಕೌನ್ಸಿಲ್ನ ಸದಸ್ಯರಾಗಿ ಉಳಿದರು ಮತ್ತು 2020 ರ ಚುನಾವಣೆಗೆ ನಾಮನಿರ್ದೇಶನಗಳಿಂದ ಹಿಂದೆ ಸರಿದರು. ವ್ಯಾನ್ ರೋಸಮ್ ನೆದರ್ಲ್ಯಾಂಡ್ಸ್ನಲ್ಲಿ ಹುಟ್ಟಿ ಬೆಳೆದರು, ಅಲ್ಲಿ ಅವರು 1982 ರಲ್ಲಿ ಆಮ್ಸ್ಟರ್ಡ್ಯಾಮ್ ವಿಶ್ವವಿದ್ಯಾಲಯದಿಂದ ಗಣಿತ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದರು. ಅವರು 1974 ರಲ್ಲಿ ಅಂತರರಾಷ್ಟ್ರೀಯ ಗಣಿತ ಒಲಂಪಿಯಾಡ್ನಲ್ಲಿ ಕಂಚಿನ ಪದಕವನ್ನು ಪಡೆದರು.
ಅಣ್ಣಾಮಲೈಯಾರ್ ದೇವಸ್ಥಾನ ( ಅರುಣಾಚಲೇಶ್ವರ ದೇವಸ್ಥಾನ ಎಂದೂ ಕರೆಯುತ್ತಾರೆ) ಭಾರತದ ತಮಿಳುನಾಡಿನ ತಿರುವಣ್ಣಾಮಲೈ ಪಟ್ಟಣದಲ್ಲಿರುವ ಅರುಣಾಚಲ ಬೆಟ್ಟದ ತಳದಲ್ಲಿರುವ ಶಿವ ದೇವರಿಗೆ ಅರ್ಪಿತವಾದ ಹಿಂದೂ ದೇವಾಲಯವಾಗಿದೆ. ಪಂಚ ಭೂತ ಸ್ಥಲಗಳು ಮತ್ತು ನಿರ್ದಿಷ್ಟವಾಗಿ ಬೆಂಕಿಯ ಅಂಶ ಅಥವಾ ಅಗ್ನಿಯ ಅಂಶಗಳಿಗೆ ಸಂಬಂಧಿಸಿದ ದೇವಾಲಯಗಳಲ್ಲಿ ಒಂದಾದ ಶೈವ ಧರ್ಮದ ಹಿಂದೂ ಪಂಥಕ್ಕೆ ಇದು ಮಹತ್ವದ್ದಾಗಿದೆ. ಶಿವನನ್ನು ಅರುಣಾಚಲೇಶ್ವರ ಅಥವಾ ಅಣ್ಣಾಮಲೈಯರ್ ಎಂದು ಪೂಜಿಸಲಾಗುತ್ತದೆ ಮತ್ತು ಲಿಂಗದಿಂದ ಪ್ರತಿನಿಧಿಸಲಾಗುತ್ತದೆ, ಅವನ ವಿಗ್ರಹವನ್ನು ಅಗ್ನಿ ಲಿಂಗ ಎಂದು ಕರೆಯಲಾಗುತ್ತದೆ.
ಹಿಂದು ಧರ್ಮ ಎಂದರೆ ಅದು ಮಾನವ ಧರ್ಮ, ಅನಂತ ಸತ್ಯ ಧರ್ಮ, ವಿಶ್ವದ ಪುರಾತನ ಧರ್ಮವಾಗಿದೆ. ಹಿಂದೂ ಧರ್ಮವು ಭಾರತೀಯ ಉಪಖಂಡದ ಪ್ರಧಾನ ಧರ್ಮ ಹಿಂದೂ ಧರ್ಮವು ಅದರ ಅನುಯಾಯಿಗಳಿಂದ ಹಲವುವೇಳೆ, "ಶಾಶ್ವತ ಧರ್ಮ" ಎಂಬ ಅರ್ಥವನ್ನು ಕೊಡುವ ಒಂದು ಸಂಸ್ಕೃತ ಪದಗುಚ್ಛವಾದ, ಸನಾತನ ಧರ್ಮವೆಂದು ನಿರ್ದೇಶಿಸಲ್ಪಡುತ್ತದೆ. ಸಂಕೀರ್ಣ ದೃಷ್ಟಿಗಳ ವೈವಿಧ್ಯಕ್ಕೆ ಸ್ಥಳಮಾಡಿಕೊಡಲು ಪ್ರಯತ್ನಿಸುವ ಹಿಂದೂ ಧರ್ಮದ ಜಾತಿ ವಿಶಿಷ್ಟವಾದ "ಪ್ರಕಾರಗಳು", ಜಾನಪದ ಮತ್ತು ವೈದಿಕ ಹಿಂದೂ ಧರ್ಮದಿಂದ ವೈಷ್ಣವ ಪಂಥದಲ್ಲಿರುವ ಭಕ್ತಿ ಸಂಪ್ರದಾಯದವರೆಗೆ ವ್ಯಾಪಿಸುತ್ತವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಆಭರಣಗಳು ಮನುಷ್ಯನ ಅಲಂಕರಣ ಸಾಧನಗಳಲ್ಲಿ ಒಂದು (ತೊಡುಗೆ); ಅಂಗರಾಗಗಳು (ನೋಡಿ- ಅಂಗರಾಗಗಳು,-ಅಂಗರಾಗಶಾಸ್ತ್ರ) ಮತ್ತು ಉಡುಗೆ ಉಳಿದ ಎರಡು ಸಾಧನಗಳು. ಇವು ವೈಯಕ್ತಿಕ ಶೃಂಗಾರಕ್ಕೆ ಧರಿಸಲಾಗುವ ಬ್ರೋಚುಗಳು, ಉಂಗುರಗಳು, ಕಂಠಹಾರಗಳು, ಕಿವಿಯೋಲೆಗಳು, ಲೋಲಕಗಳು ಮತ್ತು ಕಂಕಣಗಳಂತಹ ಸಣ್ಣ ಅಲಂಕಾರಿಕ ವಸ್ತುಗಳನ್ನು ಒಳಗೊಂಡಿರುತ್ತವೆ. ರತ್ನಾಭರಣಗಳನ್ನು ಮೈ ಮೇಲೆ ಧರಿಸಬಹುದು ಅಥವಾ ಬಟ್ಟೆಗಳಿಗೆ ಲಗತ್ತಿಸಬಹುದು, ಮತ್ತು ಈ ಪದವು ಬಾಳಿಕೆ ಬರುವ ವಸ್ತುಗಳಿಗೆ ಸೀಮಿತವಾಗಿದೆ.
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.