The most-visited ಕನ್ನಡ Wikipedia articles, updated daily. Learn more...
ಜನವರಿ ೩೦,೧೯೪೮ - ಭಾರತದೇಶದ ರಾಷ್ತ್ರಪಿತರೆನಿಸಿಕೊಂಡ ಮಹಾತ್ಮ ಗಾಂಧಿಯವರು ಮರಣ ಹೊಂದಿದ ದಿನ .ಈ ದಿನವನ್ನು ಅವರಿಗೆ ಶ್ರದ್ಧಾಂಜಲಿ ಅರ್ಪಿಸಲು ಹುತಾತ್ಮರ ದಿನವಾಗಿ ಆಚರಿಸಲಾಗುತ್ತದೆ. ಅಹಿಂಸೆ ಮತ್ತು ಶಾಂತಿ ಎಂಬ ಅಸ್ತ್ರದಿಂದಲೇ ಭಾರತಕ್ಕೆ ಸ್ವಾಂತಂತ್ರ್ಯ ತಂದುಕೊಡುವಲ್ಲಿ ಪ್ರಮುಖ ಪಾತ್ರ ವಹಿಸಿದ ಮಹಾತ್ಮಾ ಗಾಂಧಿಯವರ ಮರಣ ದಿನವನ್ನು ಭಾರತದಾದ್ಯಂತ ಈ ಹುತಾತ್ಮರ ದಿನ ಎಂದು ಆಚರಿಸಲಾಗುತ್ತದೆ. ತಮ್ಮ ಬದುಕೇ ತಮ್ಮ ಸಂದೇಶ ಎಂದು ಬದುಕಿನ ಪ್ರತಿ ಗಳಿಗೆಯನ್ನು ಮೌಲ್ಯದ ಜೊತೆಯಲ್ಲೇ ಬದುಕಿದ, ಸತ್ಯಕ್ಕಾಗಿ ತಮ್ಮ ಜೀವನವನ್ನೇ ಪ್ರಯೋಗಕ್ಕೊಡ್ಡಿಕೊಂಡ ರಾಷ್ಟ್ರಪಿತ, ಮೋಹನದಾಸ ಕರಮಚಂದ ಗಾಂಧಿ ಹುಟ್ಟಿದ್ದು ಗುಜರಾತಿನ ಪೋರಬಂದರಿನಲ್ಲಿ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ವಿಶ್ವವಿದ್ಯಾಲಯ ಧನಸಹಾಯ ಆಯೋಗ (ಯುಜಿಸಿ) ಭಾರತದಲ್ಲಿ ವಿಶ್ವವಿದ್ಯಾಲಯಗಳ ಸಮನ್ವಯತೆ ಮತ್ತು ಶಿಕ್ಷಣದ ಗುಣಮಟ್ಟ ನಿರ್ವಹಣೆಗಾಗಿ 1956ರಲ್ಲಿ ಕೇಂದ್ರ ಸರಕಾರದಿಂದ ಸ್ಥಾಪಿಸಲ್ಪಟ್ಟ ಒಂದು ಶಾಸನಬದ್ಧ ಸಂಸ್ಥೆಯಾಗಿದೆ. ಇದು ಭಾರತದಲ್ಲಿ ವಿಶ್ವವಿದ್ಯಾಲಯಗಳಿಗೆ ಮಾನ್ಯತೆ ನೀಡುತ್ತದೆ ಮತ್ತು ಅಂತಹ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಕಾಲೇಜುಗಳ ವಿಕಾಸಕ್ಕಾಗಿ ಧನ ಸಹಾಯ ಮಾಡುತ್ತದೆ. ಖ್ಯಾತ ಶಿಕ್ಷಣತಜ್ಞರಾದ ಪ್ರೊ.ವೇದ ಪ್ರಕಾಶ ವಿಶ್ವವಿದ್ಯಾಲಯ ಧನಸಹಾಯ ಆಯೋಗದ ಅದ್ಯಕ್ಷರಾಗಿ ೧೮ ಜನೇವರಿ ೨೦೧೩ರಂದು ನೇಮಕಗೊಂಡಿದ್ದಾರೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಲಾಲಾ ಲಜಪತ ರಾಯ್ (ಜನವರಿ ೨೮, ೧೮೬೫syed wasiqh- 29th 9 september ನವೆಂಬರ್ ೧೭, ೧೯೨೮) ಭಾರತಕ್ಕಾಗಿ ತಮ್ಮ ಪ್ರಾಣವನ್ನು ಸಮರ್ಪಿಸಿದ ಸ್ವಾತಂತ್ರ್ಯ ಹೋರಾಟಗಾರರಾಗಿಯೂ, ಶ್ರೇಷ್ಠ ಬರಹಗಾರರಾಗಿಯೂ ಭಾರತೀಯ ಇತಿಹಾಸದಲ್ಲಿ ಪ್ರಸಿದ್ಧರಾಗಿದ್ದಾರೆ. ಲಾಲಾ ಲಜಪತ ರಾಯ್ ಅವರು ದೇಶದ ಪ್ರಖ್ಯಾತ ತ್ರಿಮೂರ್ತಿಗಳಾದ ‘ಲಾಲ್ – ಬಾಲ್ – ಪಾಲ್’ ಇವರಲ್ಲಿ ಒಬ್ಬರು. ಮತ್ತಿಬ್ಬರು ಬಾಲ ಗಂಗಾಧರ ತಿಲಕ್ ಮತ್ತು ಬಿಪಿನ್ ಚಂದ್ರ ಪಾಲರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಊಳಿಗಮಾನ ಪದ್ಧತಿ ಅನ್ನುವುದು ಶ್ರೀಮಂತರ(ಒಡೆಯ ಅಥವಾ ಧಣಿ), ಮತ್ತು ಹಿಡುವಳಿದಾರರ (ರೈತ) ನಡುವಿನ ಆಳ್ವಿಕೆಯ ಮತ್ತು ಮಿಲಿಟರಿ ಪದ್ಧತಿ. ಊಳಿಗಮಾನ ಪದ್ಧತಿಯು ಒಂಬತ್ತನೆಯ ಶತಮಾನದಿಂದ ಹದಿನೈದನೆಯ ಶತಮಾನದವರೆಗೂ ಪ್ರವರ್ಧ ಮಾನದಲ್ಲಿತ್ತು. ಇದರ ಅತ್ಯಂತ ಉನ್ನತ ಅರ್ಥದಲ್ಲಿ, ಊಳಿಗಮಾನ ಪದ್ಧತಿಯನ್ನು ಮಧ್ಯಯುಗದ ಯುರೋಪಿನ ಆಳ್ವಿಕೆಯ ಪದ್ದತಿಗೆ ಸೂಚಿಸಲಾಗಿದ್ದು ಪರಸ್ಪರ ಕಾನೂನು ಬದ್ದ ಮತ್ತು ಸೈನಿಕ ಉದಾತ್ತಗುಣದ ನಡುವಿನ ಮಿಲಿಟರಿ ಜವಾಬ್ದಾರಿಗಳಿಂದ ರಚಿಸಲ್ಪಟ್ಟು, ಮೂರು ಪ್ರಮುಖ ಪರಿಕಲ್ಪನೆಗಳಾದ ಒಡೆಯರ, ಹಿಡುವಳಿದಾರರ, ಮತ್ತು ಉಂಬಳಿಗಳ ಸುತ್ತ ಸುತ್ತುತ್ತದೆ.
ಮಧ್ಯಕಾಲೀನ ಭಾರತವು "ಪ್ರಾಚೀನ ಅವಧಿ" ಮತ್ತು "ಆಧುನಿಕ ಅವಧಿ" ನಡುವಿನ ಭಾರತೀಯ ಉಪಖಂಡದ ನಂತರದ ಶಾಸ್ತ್ರೀಯ ಇತಿಹಾಸದ ದೀರ್ಘ ಅವಧಿಯನ್ನು ಉಲ್ಲೇಖಿಸುತ್ತದೆ. ಇದನ್ನು ಸಾಮಾನ್ಯವಾಗಿ 6 ನೇ ಶತಮಾನದ CE ಯಲ್ಲಿ ಗುಪ್ತ ಸಾಮ್ರಾಜ್ಯದ ವಿಘಟನೆಯಿಂದ ಮತ್ತು 1526 ರಲ್ಲಿ ಮೊಘಲ್ ಸಾಮ್ರಾಜ್ಯದ ಪ್ರಾರಂಭದೊಂದಿಗೆ ಆರಂಭಿಕ ಆಧುನಿಕ ಅವಧಿಯ ಪ್ರಾರಂಭದಿಂದ ಸರಿಸುಮಾರು ಚಾಲನೆಯಲ್ಲಿದೆ ಎಂದು ಪರಿಗಣಿಸಲಾಗುತ್ತದೆ, ಆದರೂ ಕೆಲವು ಇತಿಹಾಸಕಾರರು ಇದನ್ನು ಈ ಹಂತಗಳಿಗಿಂತ ನಂತರ ಪ್ರಾರಂಭ ಮತ್ತು ಮುಕ್ತಾಯವೆಂದು ಪರಿಗಣಿಸುತ್ತಾರೆ. . ಮಧ್ಯಯುಗೀನ ಅವಧಿಯು ಸ್ವತಃ ಆರಂಭಿಕ ಮಧ್ಯಯುಗ ಮತ್ತು ಮಧ್ಯಕಾಲೀನ ಯುಗಗಳ ಉಪವಿಭಾಗವಾಗಿದೆ.
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭತ್ತದ ಪದವು ಸಸ್ಯಕ್ಕೂ ಹಾಗೂ ಸಸ್ಯದ ಕಾಳಿಗೂ ಅನ್ವಯಿಸುತ್ತದೆ. ಭತ್ತಕ್ಕೆ ಕನ್ನಡದಲ್ಲಿ ನೆಲ್ಲು ಎಂದು ಸಹ ಇಂಗ್ಲೀಶ್ನಲ್ಲಿ ಪ್ಯಾಡಿ ಬಳಕೆಯಲ್ಲಿದ್ದಾಗ್ಯೂ ರೈಸ್ ಎನ್ನುವ ಪದವನ್ನು ಭತ್ತ (ಕೆಲವೊಮ್ಮೆ ಅನ್ಮಿಲ್ಡ್ ರೈಸ್), ಅಕ್ಕಿ ಹಾಗೂ ಅನ್ನಕ್ಕೂ ಬಳಸಲಾಗುತ್ತದೆ. ಏಷಿಯಾದ ಭತ್ತದ ವೈಜ್ಞಾನಿಕ ಹೆಸರು ಒರಿಜ ಸಟಿವ ಮತ್ತು ಆಫ್ರಿಕಾದ ಬತ್ತದ ವೈಜ್ಞಾನಿಕ ಹೆಸರು ಒರಿಜ ಗ್ಲಾಬಿರ್ರಿಮ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಶರದ್ಚಂದ್ರ ಗೋವಿಂದರಾವ್ ಪವಾರ್ (ಮರಾಠಿ:शरदचंद्र गोविंदराव पवार) (ಜನನ ಡಿಸೆಂಬರ್ ೧೨, ೧೯೪೦) ಅವರು ಜನಪ್ರಿಯವಾಗಿ ಶರದ್ ಪವಾರ್ ಎಂದು ಹೆಸರಾಗಿದ್ದಾರೆ. ಪವಾರ್ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ನಿಂದ ೧೯೯೯ ರಲ್ಲಿ ಪ್ರತ್ಯೇಕಗೊಂಡು ರೂಪಿತವಾದ ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರು ಈ ಹಿಂದೆ ರಕ್ಷಣಾ ಮಂತ್ರಿ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಯ ಸ್ಥಾನವನ್ನು ಅಲಂಕರಿಸಿದ್ದರು ಮತ್ತು ಪ್ರಸ್ತುತ ಭಾರತ ಸರ್ಕಾರದ ಕೃಷಿ ಮತ್ತು ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯ ಸಚಿವರಾಗಿ ಸೇವೆ ಸಲ್ಲಿಸುತ್ತಿದ್ದಾರೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಐರೋಪ್ಯ ಶೈಕ್ಷಣಿಕ ಸಂಪ್ರದಾಯಗಳಲ್ಲಿ, ಲಲಿತಕಲೆ ಎಂದರೆ ಮುಖ್ಯವಾಗಿ ಸೌಂದರ್ಯಕ್ಕಾಗಿ ಬೆಳೆಸಲಾದ ಕಲೆ. ಹೀಗೆ ಇದು ಅಲಂಕಾರಿಕ ಕಲೆ ಅಥವಾ ಅನ್ವಯಿಕ ಕಲೆಯಿಂದ ಭಿನ್ನವಾಗಿದೆ, ಏಕೆಂದರೆ ಇವು ಯಾವುದಾದರೂ ವ್ಯಾವಹಾರಿಕ ಕಾರ್ಯವನ್ನು ಕೂಡ ಸಾಧಿಸಬೇಕು, ಉದಾಹರಣೆಗೆ ಕುಂಬಾರಿಕೆ ಅಥವಾ ಬಹುತೇಕ ಲೋಹಗೆಲಸ. ಇಟ್ಯಾಲಿಯನ್ ನವೋದಯ ಕಾಲದಲ್ಲಿ ಅಭಿವೃದ್ಧಿಪಡಿಸಲಾದ ಸೌಂದರ್ಯಶಾಸ್ತ್ರದ ಸಿದ್ಧಾಂತಗಳಲ್ಲಿ, ಅತ್ಯುನ್ನತ ಕಲೆಯೆಂದರೆ ಕಲಾವಿದನ ಕಲ್ಪನೆಯ ಸಂಪೂರ್ಣ ಅಭಿವ್ಯಕ್ತಿ ಹಾಗೂ ಪ್ರದರ್ಶನಕ್ಕೆ ಅವಕಾಶ ನೀಡುವಂಥದ್ದಾಗಿತ್ತು, ಮತ್ತು ಯಾವುದೇ ವ್ಯಾವಹಾರಿಕ ಪರಿಶೀಲನೆಗಳಿಂದ ಅನಿರ್ಬಂಧಿತವಾಗಿರುತ್ತಿತ್ತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಮಂಗಮಾನವ ಎಂದರೆ ಆಧುನಿಕ ಮಾನವನಿಗೂ ಬಾಲವಿಲ್ಲದ ಮಂಗಗಳಿಗೂ ನಡುವಣ ಹಂತದ ಲಕ್ಷಣಗಳಿರುವ ಪ್ರಾಣಿ (ಏಪ್ ಮ್ಯಾನ್). ಪ್ರೈಮೇಟ್ ಗಣದ ಆಂತ್ರಪಾಯ್ಡಿಯ ಗುಂಪಿಗೆ ಸೇರಿದ ಇದನ್ನು ಮಂಗ (ವಾನರ), ಮಾನವನಾಗಿ ಪರಿವರ್ತನೆಹೊಂದುವ ಹಂತಕ್ಕೆ ಸೇರಿಸಲಾಗಿದೆ. ಆಯುಧಗಳ ನಿರ್ಮಾಣ ಮತ್ತು ಬಳಕೆ ಗೊತ್ತಿದ್ದು ನೇರವಾದ ನಿಲವುಳ್ಳ ಲಕ್ಷಣಗಳಿದ್ದರೂ ಈತನ ಕಪಾಲ ಒಳಪಿಡಿ (ಕ್ರೇನಿಯಲ್ ಕೆಪಾಸಿಟಿ) ಕಿರಿದಾಗಿದ್ದುದರಿಂದ (ಸುಮಾರು 900 ಸಿ ಸಿ), ಈತ ಮಾನವ ವರ್ಗಕ್ಕೆ ಸೇರುವುದಿಲ್ಲವೆಂದು ಹಲವರ ವಾದ.
ಅಭಿಮನ್ಯು ಮಹಾಭಾರತದಲ್ಲಿ ಅರ್ಜುನ ಮತ್ತು ಸುಭದ್ರೆಯರ ಮಗ. ಮಹಾಭಾರತ ಯುದ್ಧದಲ್ಲಿ ದ್ರೋಣಾಚಾರ್ಯರು ರಚಿಸಿದ ಚಕ್ರವ್ಯೂಹವನ್ನು ಭೇದಿಸಿ (ಅದರಿಂದ ಹೊರಗೆ ಬರುವುದು ಗೊತ್ತಿರದಿದ್ದರೂ), ಒಳಗೆ ನುಗ್ಗಿ ಅನೇಕ ವೀರಾಧಿ-ವೀರರನ್ನು ಕೊಂದು, ದ್ರೋಣ, ಕರ್ಣ, ದುರ್ಯೋಧನ, ದುಃಶಾಸನ ಮುಂತಾದ ಅತಿರಥ-ಮಹಾರಥರಿಗೆ ಸಮನಾಗಿ ಹೋರಾಡಿ ನಂತರ, ವಂಚನೆಗೊಳಗಾಗಿ ಚಕ್ರವ್ಯೂಹದಿಂದ ಹೊರಬರಲಾಗದೆ ವೀರಮರಣವನ್ನು ಹೊಂದಿದನು. ಅಭಿಮನ್ಯುವಿಗೆ ಸೌಭದ್ರ ಎಂಬ ಇನ್ನೊಂದು ಹೆಸರಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮಾನವ ಜಾತಿಯ ಉತ್ಪತ್ತಿಯನ್ನು ವಿವರಿಸುವ ಜೀವ ವಿಕಾಸದ ಭಾಗವೇ ಮಾನವನ ವಿಕಾಸ. ಹಲವಾರು ಶತಮಾನಗಳಿಂದ ಹಲವಾರು ಮಾನವ ಮತ್ತಿತರ ವಾನರ ಜಾತಿಗಳಲ್ಲಿನ ಹೋಲಿಕೆಗಳನ್ನು ಗಮನಿಸಿದ್ದು ಹಾಗೂ ಜೀವ ವಿಕಾಸದ ಬಗ್ಗೆ ಯೋಚಿಸಿದ್ದಾದರೂ ಈ ವಾದವನ್ನು ನಿಶ್ಚಿತವಾಗಿ ಹಾಗೂ ವಿಸ್ತಾರವಾಗಿ ೧೮೫೯ರಲ್ಲಿ ಬಣ್ಣಿಸಿದವರು ಚಾರ್ಲ್ಸ್ ಡಾರ್ವಿನ್ರವರು. ಇದರನಂತರ ಮಾನವನ ಪೂರ್ವಜರ ಪರಿಶೋಧನೆಗೆ ಹೆಚ್ಚು ಒತ್ತು ಸಿಕ್ಕಿತು.
ಭಾರತದಲ್ಲಿ ಪ್ರತಿ ವರ್ಷ ಜನವರಿ 24 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ. ಇದನ್ನು 2008 ರಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಮತ್ತು ಭಾರತ ಸರ್ಕಾರವು ಭಾರತೀಯ ಸಮಾಜದಲ್ಲಿ ಹುಡುಗಿಯರು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕ ಜಾಗೃತಿ ಮೂಡಿಸಲು ಪ್ರಾರಂಭಿಸಿತು. "ಹೆಣ್ಣು ಮಗುವನ್ನು ಉಳಿಸಿ" ಪ್ರಚಾರ , ಮಕ್ಕಳ ಲಿಂಗ ಅನುಪಾತಗಳು ಮತ್ತು ಹೆಣ್ಣುಮಕ್ಕಳಿಗೆ ಆರೋಗ್ಯಕರ ಮತ್ತು ಸುರಕ್ಷಿತ ವಾತಾವರಣವನ್ನು ನಿರ್ಮಿಸುವ ಕುರಿತು ಜಾಗೃತಿ ಅಭಿಯಾನಗಳನ್ನು ಒಳಗೊಂಡಂತೆ ಸಂಘಟಿತ ಕಾರ್ಯಕ್ರಮಗಳೊಂದಿಗೆ ದಿನವನ್ನು ಆಚರಿಸಲಾಗುತ್ತದೆ.
ಕ್ಯೋಟೋ ಶಿಷ್ಟಾಚಾರ ಇಂದು ವಿಶ್ವವು ಎದುರಿಸುತ್ತಿರುವ ದೊಡ್ಡ ಸಮಸ್ಯೆ ಎಂದರೆ ಜಾಗತಿಕ ತಾಪಮಾನ ಹೊಂದಿದೆ. ಅನೇಕ ವಿಜ್ಞಾನಿಗಳು ಇಂಗಾಲದ ಡೈಆಕ್ಸೈಡ್ ಮತ್ತು ಇತರ ಹಸಿರುಮನೆ ಅನಿಲಗಳನ್ನು ನಮ್ಮ ಉತ್ಪಾದನೆ ವಾತಾವರಣ ಮೇಲೆ ಬಿಸಿ ಪರಿಣಾಮವನ್ನು ಹೊಂದಿದೆ, ಮತ್ತು ಈ ಮಾನವ ಜೀವನದ ತುಂಬಾ ಅಪಾಯಕಾರಿ ಎಂದು ನಂಬುತ್ತಾರೆ. ಈ ಪ್ರಬಂಧ ಜಾಗತಿಕ ತಾಪಮಾನ ಏರಿಕೆಯ ಸಮಸ್ಯೆಯನ್ನು ಪರಿಶೀಲಿಸಿ ಸಮಸ್ಯೆಯನ್ನು ಪರಿಹರಿಸುವ ಕೆಲವು ರೀತಿಯಲ್ಲಿ ಸೂಚಿಸುತ್ತದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.