The most-visited ಕನ್ನಡ Wikipedia articles, updated daily. Learn more...
ಬಿಗ್ ಬಾಸ್ ಕನ್ನಡ 12 ಒಂದು ಭಾರತೀಯ ಕನ್ನಡ ಭಾಷೆಯ ರಿಯಾಲಿಟಿ ಟೆಲಿವಿಷನ್ ಗೇಮ್ ಶೋ ನ ಸರಣಿ ಆಗಿದೆ. ಕಿಚ್ಚ ಸುದೀಪ್ ಸತತ ಹನ್ನೆರಡನೇ ಬಾರಿಗೆ ನಿರೂಪಕರಾಗಿ ಕಾರ್ಯನಿರ್ವಹಿಸುತ್ತಾ ಇದ್ದಾರೆ . ಎಕ್ಸ್ಪೆಟ್ ದ ಅನ್ ಎಕ್ಸ್ಪೆಕೆಟ್ಡ್ ಕಾರ್ಯಕ್ರಮವು ಬನಿಜಯ್ ಅವರ ನಿಯಂತ್ರಣದಲ್ಲಿ ಎಂಡೆಮೋಲ್ ಶೈನ್ ಇಂಡಿಯಾ ನಿರ್ಮಿಸುತ್ತಿರುವ ಈ ರಿಯಾಲಿಟಿ ಶೋ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರದ ಜೊತೆಗೆ ಜಿಯೋಹಾಟ್ಸ್ಟಾರ್ನಲ್ಲಿ 28 ಸೆಪ್ಟೆಂಬರ್ 2025ರಿಂದ ಪ್ರಸಾರವಾಗುತ್ತಿದೆ.
ಉಣ್ಣೆ ಒಂದು ಜವಳಿ ವರ್ಗದ ಫೈಬರ್ ಎಳೆಗಳನ್ನುಕುರಿ ಮತ್ತು ಕೆಲವು ನಿಶ್ಚಿತ ಪ್ರಾಣಿಗಳ, ಕೂದಲಿಂದ ಪಡೆಯುವ ದಿರಸಿನ ಉತ್ಪನ್ನವಾಗಿದೆ.ಇದರಲ್ಲಿ ಕಾಶ್ಮೀರಿ ಮೇಕೆಗಳು,ಮೊಹೆರ್ ಜಾತಿಯ ಮೇಕೆಗಳು ವಿಕುನಾಗಳು,ಅಲ್ಪಕಾ,ಎಂಬ ಜಾತಿಯ ತುಪ್ಪಳಿನ ಪ್ರಾಣಿ,ಅಲ್ಲದೇ ಒಂಟೆ ಅದರ ಕುಟುಂಬ ವರ್ಗಕ್ಕೆ ಸೇರಿದ ಪ್ರಾಣಿಗಳ ಒಳಗೊಂಡಿದೆ.ಅಂಗೊರಾ ಎಂಬ ಪ್ರಾಣಿಯು ಮೊಲಗಳ ಮೂಲ ಜಾತಿ ತಳಿಯ ಪ್ರಾಣಿಗಳನ್ನು ಉಣ್ಣೆಗಾಗಿ ಬಳಸಲಾಗುತ್ತದೆ. ಉಣ್ಣೆಯ ಗುಣಮಟ್ಟವನ್ನು ಅದು ದೊರೆಯುವ ವಿಭಿನ್ನ ಜಾತಿಗಳ ಪ್ರಾಣಿಗಳ ಕೂದಲು,ತುಪ್ಪಳವನ್ನು ಅವಲಂಬಿಸಿದೆ,ಅದು ಗುಂಗುರುಗುಂಗುರಾದ,ಸಮರೂಪದ ಸ್ಥಿತಿಸ್ಥಾಪಕತ್ವ ಹೊಂದುವ ಅಥವಾ ಮಡಿಕೆಯಾದ ಮತ್ತು ಕೊಂಡಿಯಾಕಾರದ ಗಡಸು (ಕುಚ್ಚು)ಕೂದಲಿನ ಉಣ್ಣೆ ಇದರಲ್ಲಿ ತೆಗೆಯಬಹುದಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕನ್ನಡ ಛಂದಸ್ಸು : ಕನ್ನಡ ಭಾಷೆಯ ಪದ್ಯಸಾಹಿತ್ಯದಲ್ಲಿ ಬಹಳ ಹಿಂದಿನಿಂದಲೂ ವಾಡಿಕೆಯಾಗಿ ಬಳಕೆಯಾಗುತ್ತ ಬಂದಿರುವ ಸಂಸ್ಕೃತ ಮತ್ತು ಪ್ರಾಕೃತ ಪ್ರಭಾವದ ಪದ್ಯಜಾತಿಗಳನ್ನೂ ವಿಶೇಷವಾಗಿ ಅಚ್ಚಕನ್ನಡ ಮಟ್ಟುಗಳೆನಿಸಿದ ತ್ರಿಪದಿ ಷಟ್ಪದಿ ಮೊದಲಾದ ಪದ್ಯಜಾತಿಗಳು ಮತ್ತು ಹೊಸಗನ್ನಡ ಕವಿತೆಯ ಮಟ್ಟುಗಳನ್ನೂ ಕನ್ನಡ ಛಂದಸ್ಸು ಎಂಬ ಮಾತು ಒಳಗೊಳ್ಳುತ್ತದೆ.ಕನ್ನಡ ಕಾವ್ಯಕ್ಕೆ ಛಂದಸ್ಸಿನ ಅವಶ್ಯಕತೆ ಬಹಳಷ್ಟಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಶ್ರೀ ಸಿದ್ದೇಶ್ವರ ಮಹಾಸ್ವಾಮಿಜಿಗಳು ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಬಿಜ್ಜರಗಿ ಗ್ರಾಮದಲ್ಲಿ ಜನಸಿ ಎರಡನೇ ವಿವೇಕಾನಂದ ಎನಿಸಿದ್ದಾರೆ. ನಡೆದಾಡುವ ದೇವರು, ಜೇಬಿಲ್ಲದ ಅಂಗಿಯ ರಾಷ್ಟ್ರ ಸಂತ ಎಂಬ ಹತ್ತು ಹಲವಾರು ನಾಮಾವಳಿಗಳಿಂದ ಜಗಪ್ರಸಿದ್ದರಾಗಿದ್ದರು, ಹಾಗೂ ಅಪಾರ ಭಕ್ತ ಸಾಗರವನ್ನು ಹೊಂದಿದ್ದರು. ಜೈನ ಧರ್ಮದಂತೆ ಆಹಾರ ಮತ್ತು ಜಲವನ್ನು ತ್ಯಾಗ ಮಾಡಿ ವೈಕುಂಠ ಏಕಾದಶಿಯಂದು ಇಚ್ಛಾಮರಣ ಹೊಂದಿದ್ದರು.
ಭಾರತೀಯ ಉಪಖಂಡದ ಇತಿಹಾಸದಲ್ಲಿ, ಸಾಮಂತ ಎನ್ನುವುದು ರಾಜರ ಸೇನೆಯ ಜನರಿಗಾಗಿ ಬಳಸಲಾಗುತ್ತಿದ್ದ ಪದವಿ ಮತ್ತು ಸ್ಥಾನವಾಗಿತ್ತು. ಸಾಮಂತ ಸಂಪ್ರದಾಯವನ್ನು ೬ನೇ ಶತಮಾನದ್ದೆಂದು ಕಾಲನಿರ್ಧಾರ ಮಾಡಲಾದ ಉತ್ತರ ಭಾರತದ ಶಾಸನಲಿಪಿಗಳಲ್ಲಿ ಮೊದಲ ಬಾರಿಗೆ ಉಲ್ಲೇಖಿಸಲಾಗಿದೆ. ಈ ಸಂಪ್ರದಾಯವು ಭಾರತದಲ್ಲಿ ಊಳಿಗಮಾನ ಪದ್ಧತಿಯ ಹುಟ್ಟು ಮತ್ತು ಬೆಳವಣಿಗೆಯೊಂದಿಗೆ ನಿಕಟವಾಗಿ ಸಂಬಂಧಿಸಿದೆ ಎಂದು ಪರಿಗಣಿಸಲಾಗಿದೆ.
ಕನ್ನಡ ರಂಗಭೂಮಿಯ ಪರಂಪರೆ ಅತಿ ಪ್ರಾಚೀನವಾದದ್ದೆಂಬುದರಲ್ಲಿ ಸಂದೇಹವಿಲ್ಲ. ಕನ್ನಡ ರಂಗಭೂಮಿಯ ಪ್ರಕಾರಗಳಲ್ಲಿ ಗೊಂಬೆಯಾಟ, ತೊಗಲು ಗೊಂಬೆಯಾಟ, ಬಯಲಾಟ ದಶಾವತಾರ ಎಂದು ಕರೆಯುವ ಯಕ್ಷಗಾನದ ಆಟಗಳು (ಅದರ ತೆಂಕು ಬಡಗು ಎಂಬ ಪ್ರಭೇದ), ದೊಡ್ಡಾಟ(ಮೂಡಲಪಾಯ ಎನ್ನುವುದು ಅಧ್ಯಯನಕ್ಕೆ ಇಟ್ಟ ಹೆಸರು), ಘಟ್ಟದಕೋರೆ, ಶನಿಕಥೆ ಆಟ, ಕೃಷ್ಣಪಾರಿಜಾತ ಎನ್ನುವ ದೊಡ್ಡಾಟದ ಪ್ರಕಾರಗಳು ಮತ್ತು ನಾಟಕಗಳು ಪ್ರಮುಖವಾಗಿವೆ. ಪಾರ್ತಿಸುಬ್ಬನ ರಾಮಾಯಣದ ಯಕ್ಷಗಾನದ ಪ್ರಸಂಗಗಳು (ಸೀತಾಪಹಾರ, ವಾಲೀ ವಧಾ, ರಾವಣಾ ವಧಾ) ಸುಮಾರು ೧೬ನೇ ಶತಮಾನದವು.
ಅಯ್ಯಪ್ಪನನ್ನು ಧರ್ಮಶಾಸ್ತಾ ಮತ್ತು ಮಣಿಕಂಠ ಎಂದೂ ಕರೆಯುತ್ತಾರೆ, ದಕ್ಷಿಣ ಭಾರತದಲ್ಲಿ ಜನಪ್ರಿಯವಾಗಿರುವ ಹಿಂದೂ ದೇವತೆ, ಅವನನ್ನು ಸಾಕಾರವಾಗಿ ಪರಿಗಣಿಸಲಾಗಿದೆ. ಧರ್ಮ, ಸತ್ಯ ಮತ್ತು ಸದಾಚಾರ ಮತ್ತು ಕೆಟ್ಟದ್ದನ್ನು ತೊಡೆದುಹಾಕಲು ಆಗಾಗ್ಗೆ ಕರೆಯುತ್ತಾರೆ. ಅಯ್ಯಪ್ಪನ ಮೇಲಿನ ಭಕ್ತಿಯು ದಕ್ಷಿಣ ಭಾರತದಲ್ಲಿ ಮೊದಲು ಪ್ರಚಲಿತದಲ್ಲಿದ್ದರೂ, ಅವನ ಜನಪ್ರಿಯತೆಯು ೨೦ ನೇ ಶತಮಾನದ ಉತ್ತರಾರ್ಧದಲ್ಲಿ ಮಾತ್ರ ಹೆಚ್ಚಾಯಿತು ಹಿಂದೂ ಧರ್ಮಶಾಸ್ತ್ರದ ಪ್ರಕಾರ, ಅವನು ಹರಿಹರ (ವಿಷ್ಣು ಮೋಹಿನಿ, ಮತ್ತು ಶಿವನ ಮಗ).
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಡೆಪ್ಯೂಟಿ ಚನ್ನಬಸಪ್ಪ (ಜನನ - ನವೆಂಬರ ೧ ೧೮೩೩, ಮರಣ - ಜನವರಿ ೪ ೧೮೮೦) ಚನ್ನಬಸಪ್ಪ ಹುಟ್ಟಿದ್ದು ೧ ನವೆಂಬರ್ ೧೮೩೩ರಲ್ಲಿ ಬೆಳಗಾವಿ ಜಿಲ್ಲೆಯ ಗೋಕಾಕದಲ್ಲಿ. ತಂದೆ ಬಸಲಿಂಗಪ್ಪ ಅಪ್ಪಯ್ಯಪ್ಪ ಧಾರವಾಡ ವೃತ್ತಿಯಿಂದ ವ್ಯಾಪಾರಸ್ಥರು, ತಾಯಿ ತಿಪ್ಪವ್ವ ಶರಣ ಸಂಪ್ರದಾಯದ ಗರತಿ. ೧೯ ನೆಯ ಶತಮಾನದ ಉತ್ತರಾರ್ಧವು ಮುಂಬೈ ಕರ್ನಾಟಕದಲ್ಲಿ ಮರಾಠಿಯ ಪ್ರಾಬಲ್ಯದ ಹಾಗೂ ಇಂಗ್ಲೀಷಿನ ಪ್ರಾರಂಭದ ಕಾಲ ಆಗ ಕನ್ನಡ ಭಾಷೆ, ಶಿಕ್ಷಣ, ಸಾಹಿತ್ಯ ಮತ್ತು ಸಂಸ್ಕೃತಿಗಳನ್ನು ಉಳಿಸಿ ಬೆಳೆಸುವ ಮಹಾ ಕಾರ್ಯಕ್ಕೆ ನಾಂದಿ ಹಾಡಿದವರು ಚನ್ನಬಸಪ್ಪನವರು.