The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಲತಾ ಮಂಗೇಶ್ಕರ್ (೨೮ ಸೆಪ್ಟೆಂಬರ್ ೧೯೨೯ - ೬ ಫೆಬ್ರವರಿ ೨೦೨೨) ಭಾರತದ ಪ್ರಸಿದ್ಧ ಗಾಯಕಿಯರಲ್ಲಿ ಒಬ್ಬರು. ಹಿಂದಿ ಚಿತ್ರರಂಗದಲ್ಲಿ ಬಹಳ ಹಾಡುಗಳನ್ನು ಹಾಡಿರುವುದಲ್ಲದೆ ಹಲವಾರು ಭಾರತೀಯ ಭಾಷೆಗಳಲ್ಲಿಯೂ ಹಾಡಿದ್ದಾರೆ. ೧೯೬೭ರಲ್ಲಿ ಬಿಡುಗಡೆಯಾದ "ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ" ಕನ್ನಡ ಚಲನಚಿತ್ರದಲ್ಲಿನ "ಬೆಳ್ಳನೆ ಬೆಳಗಾಯಿತು" ಮತ್ತು "ಎಲ್ಲಾರೆ ಇರತೀರೋ ಎಂದಾರೆ ಬರತೀರೋ" ಹಾಡುಗಳನ್ನು ಹಾಡಿದ್ದಾರೆ.
ಒಂದು ಆಸ್ಪತ್ರೆ ಎಂದರೆ ಇದೊಂದು ರೋಗಿಗಳಿಗೆ ಆರೋಗ್ಯ ರಕ್ಷಣೆ, ಗುಣಮಾಡುವ ಚಿಕಿತ್ಸೆ ಒದಗಿಸುವ ತಾಣವಾಗಿದೆ.ಇದಕ್ಕಾಗಿ ವಿಶೇಷ ವೈದ್ಯಕೀಯ ಸಿಬ್ಬಂದಿಯು ಮೇಲಿಂದ ಮೇಲೆ ರೋಗಿಗಳ ಸ್ಥಿತಿಗತಿಯನ್ನು ನಿಗಾವಹಿಸುತ್ತದೆ.ಬಹುಕಾಲದ ಕಾಯಿಲೆಗಳಿಗೆ ಅಲ್ಲಿಯೇ ಔಷಧೋಪಚಾರವನ್ನು ಒದಗಿಸುತ್ತದೆ. ಇಂದು ಆಸ್ಪತ್ರೆಗಳು ಬಹುತೇಕವಾಗಿ ಖಾಸಗಿಯವರಿಂದ ಹಣಕಾಸಿನ ನೆರವಿನಡಿಯಲ್ಲಿ ನಡೆಯುತ್ತಿವೆ,ಲಾಭಕ್ಕಾಗಿ ಇಲ್ಲವೆ ಲಾಭರಹಿತ ಆರೋಗ್ಯ ಸಂಘಟನೆಗಳ ಮೂಲಕ ಆರೋಗ್ಯ ವಿಮೆ ಕಂಪನಿಗಳು ಅಥವಾ ದತ್ತಿಸಂಸ್ಥೆಗಳು ಅಲ್ಲದೇ ನೇರವಾದ ದತ್ತಿ ನಿಧಿ ಕೊಡುಗೆಗಳಿಂದ ನಡೆಸಲ್ಪಡುತ್ತವೆ. ಇತಿಹಾಸದುದ್ದಕ್ಕೂ ಆಸ್ಪತ್ರೆಗಳನ್ನು ಧಾರ್ಮಿಕಸಂಸ್ಥೆಗಳು ಹಣಕಾಸು ನೀಡುವುದು ಅದರ ಸ್ಥಾಪನೆ ಮಾಡುವುದು ಮತ್ತುಅದನ್ನು ರಕ್ಷಿಸಿ ಸಾರ್ವಜನಿಕರಿಗೆ ಸೌಕರ್ಯಕ್ಕಾಗಿ ಅವರಲ್ಲದೇ ವ್ಯಕ್ತಿಗಳ ಸಹಾಯದ ಮೂಲಕ ನಡೆಸುತ್ತಾರೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಜಲಿಯನ್ವಾಲಾ ಬಾಗ್ ಹತ್ಯಾಕಾಂಡ (ಅಥವಾ ಅಮೃತಸರ ಹತ್ಯಾಕಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಭಾಗ್ಯಲಕ್ಷ್ಮೀ ಪ್ರಸ್ತುತ ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿ ಆಗಿದೆ. ಅಕ್ಟೋಬರ್ ೧೦, ೨೦೨೨ ರಿಂದ ಆರಂಭವಾದ ಈ ಧಾರಾವಾಹಿಯು ಸೋಮವಾರದಿಂದ ಶನಿವಾರದವರೆಗೆ ರಾತ್ರಿ ೭:೦೦ ಗಂಟೆಗೆ ಪ್ರಸಾರವಾಗುತ್ತಿದೆ. ಹಲವಾರು ಯಶಸ್ವಿ ಧಾರಾವಾಹಿಗಳನ್ನು ನಿರ್ಮಾಣ ಮಾಡಿರುವ ಜೈ ಮಾತಾ ಕಂಬೈನ್ಸ್ ಈ ಧಾರಾವಾಹಿಯನ್ನು ನಿರ್ಮಾಣ ಮಾಡುತ್ತಿದ್ದಾರೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶೈಕ್ಷಣಿಕ ತಂತ್ರಜ್ಞಾನವು "ಸೂಕ್ತ ತಾಂತ್ರಿಕ ಪ್ರಕ್ರಿಯೆಗಳನ್ನು ಮತ್ತು ಸಂಪನ್ಮೂಲಗಳನ್ನು ರಚಿಸುವುದು, ಬಳಸುವುದು ಮತ್ತು ನಿರ್ವಹಿಸುವ ಮೂಲಕ ಕಲಿಕೆ ಮತ್ತು ಕಾರ್ಯಕ್ಷಮತೆಯನ್ನು ಸುಧಾರಿಸುವ ಅಧ್ಯಯನ ಮತ್ತು ನೈತಿಕ ಅಭ್ಯಾಸ". ಶೈಕ್ಷಣಿಕ ತಂತ್ರಜ್ಞಾನವು ದೈಹಿಕ ಯಂತ್ರಾಂಶ ಮತ್ತು ಶೈಕ್ಷಣಿಕ ಸಿದ್ಧಾಂತದ ಬಳಕೆಯಾಗಿದೆ. ಇದು ಕಲಿಕೆಯ ಸಿದ್ಧಾಂತ , ಕಂಪ್ಯೂಟರ್-ಆಧಾರಿತ ತರಬೇತಿ, ಆನ್ಲೈನ್ ಕಲಿಕೆ, ಮತ್ತು ಮೊಬೈಲ್ ತಂತ್ರಜ್ಞಾನಗಳನ್ನು ಎಲ್ಲಿ ಬಳಸಿಕೊಳ್ಳುತ್ತದೆ, ಎಮ್-ಕಲಿಕೆ ಸೇರಿದಂತೆ ಹಲವಾರು ವಲಯಗಳನ್ನು ಒಳಗೊಳ್ಳುತ್ತದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ನಾಟಕವು ನಟರು ಅಭಿನಯಿಸಬಹುದಾದ ರೀತಿಯಲ್ಲಿ ರಚಿಸಲ್ಪಡುವ ಒಂದು ಸಾಹಿತ್ಯ ಪ್ರಕಾರ. ನಾಟಕದ ಅಭಿನಯವು ಒಂದು ರಂಗಕಲೆಯ ವಿಧ. ನಾಟಕವು ಪ್ರದರ್ಶನದಲ್ಲಿ ಪ್ರತಿನಿಧಿಸುವ ನಿರ್ದಿಷ್ಟ ಕಾಲ್ಪನಿಕ ವಿಧಾನವಾಗಿದೆ: ನಾಟಕ, ಒಪೆರಾ, ಮೈಮ್, ಬ್ಯಾಲೆ, ಇತ್ಯಾದಿಗಳನ್ನು ರಂಗಮಂದಿರದಲ್ಲಿ ಅಥವಾ ರೇಡಿಯೋ ಅಥವಾ ದೂರದರ್ಶನದಲ್ಲಿ ಪ್ರದರ್ಶಿಸಲಾಗುತ್ತದೆ.[1] ಸಾಮಾನ್ಯವಾಗಿ ಕಾವ್ಯದ ಪ್ರಕಾರವಾಗಿ ಪರಿಗಣಿಸಲ್ಪಟ್ಟಿರುವ, ನಾಟಕೀಯ ವಿಧಾನವು ನಾಟಕೀಯ ಸಿದ್ಧಾಂತದ ಆರಂಭಿಕ ಕೃತಿಯಾದ ಅರಿಸ್ಟಾಟಲ್ನ ಪೊಯೆಟಿಕ್ಸ್ (c.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.