The most-visited ಕನ್ನಡ Wikipedia articles, updated daily. Learn more...
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಕ್ಷಯ ತೃತೀಯಾ (ಕನ್ನಡದಲ್ಲಿ: ಅಕ್ಷಯ ತದಿಗೆ) ಹಿಂದೂ ಮತ್ತು ಜೈನ ಧರ್ಮೀಯರಿಗೆ ಮಂಗಳಕರವಾದ ದಿನವಾಗಿದ್ದು, ವೈಶಾಖ ಮಾಸದ ಶುಕ್ಲ ಪಕ್ಷ ಮೂರನೆಯ ದಿನ(ತದಿಗೆ)ದಂದು ಅಕ್ಷಯ ತೃತೀಯಾವನ್ನು ಆಚರಿಸಲಾಗುತ್ತದೆ. ಈ ದಿನ ಖರೀದಿಸಿದ ಬಂಗಾರವು ಎಂದಿಗೂ ಅಕ್ಷಯವಾಗಿ ಉಳಿಯುತ್ತದೆ ಎಂಬ ನಂಬಿಕೆ ಹಿಂದೂ ಧರ್ಮದಲ್ಲಿ ಶಾಶ್ವತ ಇದೆ. ಶ್ರೇಷ್ಠವಾದ ಕೆಲಸಗಳನ್ನು ಈ ದಿನ ಕೈಗೊಂಡರೆ ಎಂದಿಗೂ ಮುಗಿಯದಂತಹ (ಅ-ಕ್ಷಯ) ಮಂಗಳಕರವಾದ ಸಿದ್ಧಿಗಳು ಉಂಟಾಗುವವು ಎಂಬ ನಂಬಿಕೆಯಿದೆ.
೧೨ನೇ ಶತಮಾನದಲ್ಲಿ ಸಾಮಾಜಿಕ ಕ್ರಾ೦ತಿಗೆ ಕಾರಣಾರಾದ ಮಹಾನ್ ವ್ಯಕ್ತಿಗಳಲ್ಲಿ ಜಗಜ್ಯೊತಿ ಬಸವಣ್ಣನವರು ಒಬ್ಬರು.ಬಸವಣ್ಣನವರು ಮಾದರಸ ಮತ್ತು ಮಾದಲಾಂಬಿಕೆಯ ಮಗನಾಗಿ ಬಾಗೇವಾಡಿಯಲ್ಲಿ ಜನಿಸಿದರು. ಬಸವಣ್ಣನವರು ಮತ್ತು ಶಿವಶರಣರು ಸ್ವೀಕರಿಸಿ, ಆಚರಿಸಿದ ಸಮಾನತೆ, ಸಾಮಾಜಿಕ ನ್ಯಾಯ, ಕಾಯಕ ಯೋಗ, ಮಹಿಳಾ ಸಬಲೀಕರಣ, ದಲಿತೋದ್ದಾರ ಮತ್ತು ಸಾಮಾಜಿಕ ಕ್ರಾಂತಿಯ ಸಂದೇಶವನ್ನು ಜನತೆಗೆ ನೀಡುವುದು ಶ್ರೀ ಬಸವೇಶ್ಡರ ಜಯಂತಿಯ ಮೂಲ ಉದ್ದೇಶವಾಗಿದೆ. ೧೨ನೇ ಶತಮಾನದಲ್ಲಿ ನಡೆದ ಕಲ್ಯಾಣ ಕ್ರಾಂತಿಯು ಇಂದು ನಾವು ಎದುರಿಸುತ್ತಿರುವ ಅನೇಕ ಸಾಮಾಜಿಕ ಸಮಸ್ಯೆಗಳಿಗೆ ಉತ್ತರ ನೀಡುತ್ತದೆ ಎಂದು ತಜ್ಞರು ಹೇಳುತ್ತಾರೆ.
ಮಹಿಳಾ ಮೀಸಲಾತಿ ಮಸೂದೆ ಅಥವಾ ಸಂವಿಧಾನನ108 ನೇ ತಿದ್ದುಪಡಿ ಮಸೂದೆ 9 ಮಾರ್ಚ್ 2010ರಲ್ಲಿ ಭಾರತದ ಸಂಸತ್ತಿನಲ್ಲಿ ಅಂಗೀಕರಿಸಲ್ಪಟ್ಟ ಮಸೂದೆ. ಇದು ಭಾರತದ ಸಂಸತ್ತಿನ ಕೆಳಮನೆಯಲ್ಲಿ, ಲೋಕಸಭೆಯಲ್ಲಿ ಮತ್ತು ಎಲ್ಲಾ ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಕಾಯ್ದಿರಿಸಲು ಭಾರತದ ಸಂವಿಧಾನವನ್ನು ತಿದ್ದುಪಡಿ ಮಾಡುವಂತೆ ತಿಳಿಸುತ್ತದೆ.. ಈ ಸ್ಥಾನಗಳನ್ನು ಸರದಿ ಸಾಲಿನಲ್ಲಿ(ರೊಟೇಷನ್ ಬೇಸಿಸ್) ಕಾಯ್ದಿರಿಸಲು ಪ್ರಸ್ತಾಪಿಸಲಾಗಿತ್ತು ಮತ್ತು ಸತತ ಮೂರು ಸಾರ್ವತ್ರಿಕ ಚುನಾವಣೆಗಳಲ್ಲಿ ಒಂದು ಬಾರಿ ಮಾತ್ರ ಸ್ಥಾನವನ್ನು ಕಾಯ್ದಿರಿಸುವ ರೀತಿಯಲ್ಲಿ ಡ್ರಾ ಮೂಲಕ ನಿರ್ಧರಿಸಲಾಗುತ್ತಿತ್ತು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬ್ರಿಟೀಷರಿಂದ ಆರಂಭಿಸಲ್ಪಪಟ್ಟ ಹಿಂದೂ 'ವೈಯಕ್ತಿಕ ಕಾನೂನಿನ ಸುಧಾರಣೆ ಮತ್ತು ಕ್ರೂಢೀಕರಣ' ಪ್ರಕ್ರಿಯೆಯು,೧೯೪೭ರಲ್ಲಿ ಭಾರತ ಸ್ವಾತಂತ್ರವಾದ ಮೇಲೆ ವಸಾಹತುಶಾಹಿನಂತರದ ಸರ್ಕಾರದ ಪ್ರಧಾನ ಮಂತ್ರಿಯಾದ ಜವಹರಲಾಲ್ ನೆಹರು ನೇತ್ರುತ್ವದಲ್ಲಿ ಸಂಪೂರ್ಣಗೊಂಡಿತು.ಹಸ್ತಕ್ಷೇಪ ಮಾಡದಿರುವ ಬ್ರಿಟಿಷ್ ನೀತಿಯ ಪ್ರಕಾರ, ವೈಯಕ್ತಿಕ ಕಾನೂನಿನ ಸುಧಾರಣೆಯು ಹಿಂದೂ ಸಮುದಾಯದಲ್ಲಿ ಹುಟ್ಟಿದಂತಹ ಬೇಡಿಕೆಯಾಗಿತ್ತು.ಇದು ಆಗಿನ ಸಂಗತಿಯಾಗಿರಲಿಲ್ಲ,ಆ ವೇಳೆಗೆ ಮಹತ್ವವಾದ ವಿರೋಧವು ವಿವಿಧ ಹಿಂದೂ ರಾಜಕಾರಣಿಗಳು,ಸಂಘಟನೆಗಳು ಮತ್ತು ಧಮ೯ಭಕ್ತರುಗಳಿಂದ ವ್ಯಕ್ತವಾಗಿ,ಅನ್ಯಾಯಯುತವಾದದ್ದೆಂದು ಅವರು ಹಿಂದೂ ಸಮುದಾಯದಿಂದ ತಮ್ಮನ್ನು ತಾವು ಬೇಪ೯ಡಿಸಿಕೊಂಡರು ಆದ ಕಾರಣ ಕಾನೂನುಗಳ ಸುಧಾರಣೆಯಾಗಬೇಕಿತ್ತು.ಹೇಗಾದರೂ,ಏಕರೂಪತೆ ಎಂಬುದು ಆದಶ೯ಪ್ರಾಯ ರಾಷ್ಟ್ರದ ಮೊದಲ ಹೆಜ್ಜೆ,ಹೀಗಾಗಿ 'ಕ್ರೂಢಿಕರಣವು' ಹಿಂದೂ ಸಮುದಾಯವನ್ನು ಒಗ್ಗೂಡಿಸುವ ಸಲುವಾಗಿ ಅಗತ್ಯವಾದದ್ದು ಎಂದು ನೆಹರು ಆಡಳಿತವು ಕಂಡುಕೊಂಡಿತು.೧೯೫೫-೫೬ರಲ್ಲಿ ಅವರು ನಾಲ್ಕು ಹಿಂದೂ ಕೋಡ್ ಬಿಲ್ಸ್ ಗಳನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾದರು.ಅವುಗಳೆಂದರೆ- (೧)ಹಿಂದೂ ವಿವಾಹ ಕಾಯ್ದೆ (೨)ಹಿಂದೂ ಅನುಪೂವಿ೯ ಅಥವಾ ಅನುಕ್ರಮ ಕಾಯ್ದೆ (೩)ಹಿಂದೂ ಅಲ್ಪಸಂಖ್ಯಾತ ಮತ್ತು ಗಾಡ್೯ನ್ ಶಿಫ್ ಕಾಯ್ದೆ (೪)ಹಿಂದೂ ದತ್ತು ಸ್ವೀಕಾರ ಮತ್ತು ಜೀವನಾಂಶಕಾಯ್ದೆ ಈ ಕಾಯ್ದೆಗಳು ಸ್ತ್ರೀಯರ,ಧಾಮಿ೯ಕ ಮತ್ತು ರಾಷ್ಟ್ರೀಯವಾದಿ ಗುಂಪುಗಳಿಗೆ ಸಂಬಂಧಿಸಿದಂತೆ ಇಂದಿಗೂ ಸಹ ವಿವಾದಾತ್ಮಕವಾಗಿವೆ. ಹಿನ್ನೆಲೆ ಹಿಂದೂಧಮ೯ದ ಜೀವನಸ್ವರೂಪದ ಬಗ್ಗೆ ಬಹಳ ವ್ಯಾಪಕವಾದ ಕೆಲವು ಶಾಶ್ವತವಾದ ನಿಧಿ೯ಷ್ಟ ಮೂಲಭೂತ ನಂಬಿಕೆಗಳು ಇರಬಹುದು.ಹೀಗಾಗಿ ಹಿಂದೂ ಕಾನೂನುಗಳು ಹೆಚ್ಚು ಏಕರೂಪವಾಗಿಲ್ಲದ್ದು.ವಿದ್ವಾಂಸರಾದ ಡೆರೆಟ್ ರವರ ಗ್ರಂಥವಾದ "ಹಿಂದೂ ಕಾನೂನು"ನಲ್ಲಿ ಉಲ್ಲೇಖಿತವಾಗಿದ್ದು-"ನಾವು ಹಿಂದೂಗಳನ್ನು ಗುರುತಿಸುವುದಾದರೆ,ಭೂಮಿಯ ಅಂತ್ಯಭಾಗದಿಂದ ಸಂಗ್ರಹಿಸಲ್ಪಟ್ಟಿರಬಹುದಾದ ಮನುಷ್ಯ ಜೀವಿಗಳ ವೈವಿಧ್ಯಮಯವಾದ ಜೀವನ ಕ್ರಮ,ಮನೋವಿಜ್ಞಾನ,ಹವ್ಯಾಸ,ಮತ್ತು ಕಸುಬು ಮುಂತಾದ ಮಾನವ ಸಮುದಾಯದ ವಿಭಿನ್ನ ಸ್ವರೂಪದ ಆಧಾರದ ಮೇಲೆ ಹಿಂದೂಗಳೆಂದು ವಿವರಿಸಿದ್ದಾರೆ.ಹಾಗೆಯೇ ಧಮ೯ಶಾಸ್ತ್ರವು ಕೆಲೊವೊಂದು ಗ್ರಾಂಥಿಕ ವಿಷಯಗಳ ಮೇಲೆ ಹಿಡಿತವನ್ನು ಹೊಂದಿದೆ ಅವುಗಳಂದರೆ ವಿವಾಹ,ದತ್ತುಸ್ವೀಕಾರ,ಅಲ್ಪಸಂಖ್ಯಾತರು,ಅನುಕ್ರಮ ಹಕ್ಕುದಾರಿಕೆ,ಧಾಮಿ೯ಕ ದತ್ತಿಗಳು ಮತ್ತು ಜಾತಿ ಸವಲತ್ತುಗಳು ಮುಂತಾದ ಖಾಸಗಿ ಕಾನೂನುಗಳಲ್ಲಿ ಹಿಂದೂ ಧಮ೯ ವಿಚಾರಗಳನ್ನು ಕಾಣಬಹುದು.ಹೇಗಾದರೂ,ಹಿಂದೂ ಕಾನೂಗಳ ಅಸಮಂಜಸ ನಿಯಮಗಳನ್ನು ಹೆಸರಿಸುವುದು ಮತ್ತು ವಣಿ೯ಸುವುದು ಕಷ್ಟಸಾಧ್ಯವಾಗಿದ್ದು,ಬೇರೆ ವಿಚಾರಗಳಿಗೆ ಸಂಬಂಧಿಸಿದಂತೆ ಹಿಂದೂ ಕಾನೂನುಗಳು ಕಲಬೆರಕೆಗಳಿಂದಾದ ನಿಯಮಗಳು,ಸಾಮರಸ್ಯವಿಲ್ಲದೆ ಅಪೈಪೋಟಿಯುತವಾಗಿವೆ.ಹೀಗಾಗಿ ಹಿಂದೂ ಕಾನೂಗಳ ಏಕಪ್ರಕಾರತೆಯಲ್ಲಿ ಕೊರತೆಯನ್ನು ಕಾಣಬಹುದು. ಹಿಂದೂ ಕಾನೂನುಗಳ ವಿಷಯ ಮತ್ತು ರಚನೆಯು ಅಂತಿಮವಾಗಿ ಬ್ರಿಟೀಷರ ಆಡಳಿತ ಕಾಲದಲ್ಲಿ ರಕ್ಷಣೆಗೆ ಬಂದು,ಅವರ ಬಹಳಷ್ಟು ಗಮನ ಹಿಂದೂ ಧಾಮಿ೯ಕ ಕಾನೂನು ಗ್ರಂಥಗಳ ಮೇಲಾಗಿ ಏಕಕಾಲದಲ್ಲಿ ಇಂಗ್ಲಿಷ್ ಕಾಯ೯ವಿಧಾನವನ್ನು ಉರಿದುಂಬಿಸಿದರು ಮತ್ತು ಇದ್ದ ಅಂತರವನ್ನು ಆಂಗ್ಲ ಕಾನೂನಿನಿಂದ ಪೂಣ೯ ಮಾಡಿದರು.ನಂತರದ ಅಭಿಪ್ರಾಯಗಳು ಒಂದಕ್ಕೊಂದು ಭಿನ್ನವಾಗಿದ್ದು ವಿಸ್ತಾರವಾದ ವ್ಯತ್ಯಾಸವನ್ನು ಪ್ರಚಲಿತ ಕಾನೂನು ಮತ್ತು ಸಾವ೯ಜನಿಕ ಅವಶ್ಯಕತೆ ಮಧ್ಯೆ ಕಂಡುಕೊಂಡರು,ಹಾಗೂ ಇದನ್ನು ಹೆಚ್ಚು ಜನರು ಒಪ್ಪಿ ಗಣನೀಯವಾದ ಅಸಂಗತೆ ಮತ್ತು ಅಸಾಮರಸ್ಯ ಹುಟ್ಟಿಕೊಳ್ಳುತ್ತದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.ಬ್ರಿಟೀಷರ ವಸಾಹತುಶಾಹಿ ಸಕಾ೯ರ ಆಡಳಿತ ವ್ಯವಸ್ಥೆಯಲ್ಲಿ ಪಸರಿಸಿದ್ದ ವ್ಯಾಪಕವಾದ ಹಸ್ತಕ್ಷೇಪರಹಿತ ನೀತಿಯಲ್ಲಿ,ನಾಗರೀಕ ವಿಷಯಗಳನ್ನು ಆಯಾ ಧಾಮಿ೯ಕ ಸಮುದಾಯಗಳ ಮೂಲಕ ವ್ಯವಹರಿಸಬೇಕು.ಹೀಗಾಗಿ ಈ ಸಮುದಾಯಗಳ ವ್ಯಾಪ್ತಿಗೆ ಬಿದ್ದಿದ್ದ ವಿಷಯಗಳನ್ನು ವೈಯಕ್ತಿಕ ಕಾನೂನುಗಳೆಂದು ಕರೆಯಲಾಯಿತು.ಭಾರತೀಯ ರಾಜಕೀಯ ವ್ಯವಸ್ಥೆಯನ್ನು ಸಂಘಟಿಸುವಲ್ಲಿ,೧೯೪೦ರ ವೇಳೆಯ ಮೊದಲೇ ಬ್ರಿಟೀಷರಿಂದ ಆರಂಭವಾದ ವೈಯಕ್ತಿಕ ಹಿಂದೂ ಕಾನೂನುಗಳ ಕ್ರೂಢೀಕರಣ ಪ್ರಕ್ರಿಯೆಯು ಬಹಳ ಪ್ರಮುಖವಾದದ್ದು ಆಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಬಸವಣ್ಣನವರು ಸಾಮಾಜಿಕವಾಗಿ ಕ್ರಾಂತಿಕಾರಕ ಬದಲಾವಣೆ ತಂದು 'ಅನುಭವ ಮಂಟಪ'ವನ್ನು ಸ್ಥಾಪಿಸಿದರು. ಅನುಭವ ಮಂಟಪ ೧೨ನೇ ಶತಮಾನದಲ್ಲಿ ಎಲ್ಲಾ ಧರ್ಮದ ಶರಣರು, ಕವಿಗಳು ಮತ್ತು ತತ್ವಜ್ಞಾನಿಗಳು ಸೇರುತ್ತಿದ್ದ ಒಂದು ಸಾಮಾಜಿಕ-ಧಾರ್ಮಿಕ ಸಂಸತ್ತು. ಇದರಲ್ಲಿ ಎಲ್ಲಾ ಜಾತಿಯ ಎಲ್ಲಾ ವೃತ್ತಿಯ ಸಾಮಾನ್ಯ ಜನರು ಭಾಗವಹಿಸಿ ತಮ್ಮ ಸಮಸ್ಯೆಗಳನ್ನು ಚರ್ಚಿಸುತ್ತಿದ್ದರು ಹಾಗೂ ತಮ್ಮ ಅನುಭವವನ್ನು ಎಲ್ಲರೊಂದಿಗೆ ಹಂಚಿಕೊಳ್ಳುತ್ತಿದ್ದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೈಸೂರು ದಸರವು ಭಾರತದ ಕರ್ನಾಟಕ ರಾಜ್ಯದ ನಾಡಹಬ್ಬ (ರಾಜ್ಯ ಉತ್ಸವ) ಆಗಿದೆ. ಇದು ಮಹಾಲಯ ಅಮವಾಸ್ಯೆ ನಂತರದ ೧೦ ದಿನಗಳ ಹಬ್ಬವಾಗಿದ್ದು, ನವರಾತ್ರಿ ಎಂದು ಕರೆಯಲ್ಪಡುವ ಒಂಬತ್ತು ರಾತ್ರಿಗಳಿಂದ ಪ್ರಾರಂಭವಾಗುತ್ತದೆ ಮತ್ತು ಕೊನೆಯ ದಿನವನ್ನು ವಿಜಯದಶಮಿ ಎಂದು ಹೇಳುವ ಸಂದರ್ಭದಲ್ಲಿ ಅರ್ಜುನ ಆಚರಿಸಲಾಗುತ್ತದೆ. ಇದು ಸಾಮಾನ್ಯವಾಗಿ ಸೆಪ್ಟೆಂಬರ್ ಮತ್ತು ಅಕ್ಟೋಬರ್ನ ಗ್ರೆಗೋರಿಯನ್ ತಿಂಗಳುಗಳಲ್ಲಿ ಬರುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮಡಿವಾಳ ಮಾಚಿದೇವ.. ೧೨ ನೆಯ ಶತಮಾನದಲ್ಲಿ ದುರ್ಬಲರ ಶೋಷಣೆ, ಜಾತೀಯತೆ, ಮೇಲು -ಕೀಳು ತಾರತಮ್ಯ, ಅಸ್ಪ್ರುಶ್ಯತೆ, ಮೂಢ ನಂಬಿಕೆಗಳ ಸೃಷ್ಟಿ, ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವುಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು, ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಚಿತ್ರದುರ್ಗವು ಭಾರತ ದೇಶದ ಕರ್ನಾಟಕ ರಾಜ್ಯದ ಒಂದು ಬಯಲುಸೀಮೆಯ ಪ್ರದೇಶವಾಗಿದೆ.ಚಿತ್ರದುರ್ಗದವು ಮಧ್ಯೆ ಕರ್ನಾಟಕದ ಜಿಲ್ಲಾ ಕೇಂದ್ರ''.ಚಿತ್ರದುರ್ಗವು ರಾಜಧಾನಿ ಬೆಂಗಳೂರಿನಿಂದ ೨೦೦ ಕಿ.ಮೀ ದೂರದಲ್ಲಿದೆ.ಮೊದಲು ಚಿತ್ರದುರ್ಗವನ್ನು ಚಿತ್ರದುರ್ಗ್,ಚಿತ್ತಾಲ್ ದುರ್ಗ್ ಎಂದು ಕರೆಯಲಾಗುತ್ತಿತ್ತು.ಬ್ರಿಟೀಷರ ಆಳ್ವಿಕೆಯ ಸಮಯದಲ್ಲಿ ಚಿತ್ತಾಲ್ ದುರ್ಗ್ ಎಂದು ಕರೆಯುತ್ತಿದ್ದರು. ಇಲ್ಲಿನ ಪ್ರವಾಸ ಸ್ಥಳಗಳು.ಚಿತ್ರದುರ್ಗದ ಕೋಟೆ, ವಾಣಿ ವಿಲಾಸ ಸಾಗರ ಅಣೆಕಟ್ಟು ಇದನ್ನು ಸ್ಥಳೀಯರು ಮಾರಿ ಕಣಿವೆ ಡ್ಯಾಮ್ ಎಂದು ಕೂಡ ಕರೆಯುತ್ತಾರೆ. ಚಂದ್ರವಳ್ಳಿ ತೋಟ, ಹಿರಿಯೂರು, ಜೋಗಿಮಟ್ಟಿ,ಕಲ್ಲಿನಕೋಟೆ,ಗಾಯತ್ರಿ ಜಲಾಶಯ, ಇತ್ಯಾದಿ..ಚಿತ್ರದುರ್ಗದ ಕೋಟೆಯು ಹದಿನೆಂಟನೇ ಶತಮಾನಕ್ಕೆ ಸೇರಿದೆ.ಈ ಕೋಟೆಯನ್ನು ಕಟ್ಟಿದವರು ಚಿತ್ರದುರ್ಗದ ನಾಯಕರು.ಗ್ರಾನೇಟ್ ಅಥವ ಖನಿಜ ಕಲ್ಲಿನ ಸಹಾಯದಿಂದ ಈ ಕೋಟೆಯನ್ನು ಕಟ್ಟಿದ್ದಾರೆ.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.