The most-visited ಕನ್ನಡ Wikipedia articles, updated daily. Learn more...
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಉತ್ತರೀಯ ಎಂದರೆ ಭಾರತದ ಒಂದು ಕೊರಳವಸ್ತ್ರದಂತಹ ಬಟ್ಟೆಯ ತುಂಡು. ಇದು ಒಂದು ಶಾಲಿನಂತೆ ಇರುತ್ತದೆ ಮತ್ತು ಎರಡೂ ತೋಳುಗಳ ಸುತ್ತ ಸುತ್ತಿಕೊಳ್ಳುವಂತೆ ಕುತ್ತಿಗೆಯ ಹಿಂಭಾಗದಿಂದ ಇಳಿಯುತ್ತದೆ, ಮತ್ತು ದೇಹದ ಮೇಲ್ಭಾಗವನ್ನು ಹೊದಿಸಲು ಇದನ್ನು ಬಳಸಬಹುದು. ಇದನ್ನು ಸಾಮಾನ್ಯವಾಗಿ ನವುರಾದ ಹತ್ತಿ ಅಥವಾ ರೇಷ್ಮೆಯಿಂದ ತಯಾರಿಸಲಾಗುತ್ತಿತ್ತು, ಆದರೆ ನವುರಾದ ಚಕ್ಕಳದಿಂದಲೂ ತಯಾರಿಸಬಹುದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಅನ್ವಿತಾ ಸಾಗರ್ ಅಲಿಯಾಸ್ ಪಾರ್ವತಿ(ಜನನ:20 ಫೆಬ್ರವರಿ 1992) ಇವರು ಭಾರತೀಯ ದೂರದರ್ಶನ ನಟಿ ಹಾಗೂ ಮಾಡೆಲ್.ಇವರು ಕನ್ನಡ ಮತ್ತು ತುಳು ಸಿನಿಮಾದಲ್ಲಿ ನಟಿಸಿದ್ದಾರೆ.ಇವರು ತುಳುಚಿತ್ರರಂಗ ನಟ ಅನೂಪ್ ಸಾಗರ್ ರವರ ತಂಗಿ.ಕನ್ನಡ ಸಿನಿಮಾಗಳಾದ ಬಣ್ಣ ಬಣ್ಣದ ಬದುಕು , ಸ್ನೇಹಚಕ್ರ , ಮಾಯಾಕನ್ನಡಿ, ಜೀವನ ಯಜ್ಞ ಹಾಗೂ ತುಳು ಸಿನಿಮಾಗಳಾದ ದಂಡ್, ಪೆಟ್ಕಮ್ಮಿ, ಬಲೆ ಪುದರ್ ದೀಕ ಈ ಪ್ರೀತಿಗ್ ಎಂಬ ಸಿನಿಮಾಗಳಲ್ಲಿ ಪಾತ್ರವಹಿಸಿ ನಟಿಸಿದ್ದಾರೆ. ಪ್ರಸ್ತುತವಾಗಿ ಇವರು ಉದಯ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ 'ಅಣ್ಣ ತಂಗಿ' ಎಂಬ ಧಾರವಾಹಿಯಲ್ಲಿ 'ಜ್ಯೋತಿ' ಎಂಬ ಪಾತ್ರದಲ್ಲಿ; ಜೀ ಕನ್ನಡ ದಲ್ಲಿ ಪ್ರಸಾರವಾಗುತ್ತಿರುವ ಗಟ್ಟಿಮೇಳ ಎಂಬ ಧಾರವಾಹಿಯಲ್ಲಿ 'ಆಧ್ಯಾ' ಎಂಬ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಮಳೆಬಿಲ್ಲು (ಅಥವಾ ಕಾಮನಬಿಲ್ಲು) ಎಂಬುದೊಂದು ದೃಗ್ವೈಜ್ಞಾನಿಕ ಮತ್ತು ಪವನಶಾಸ್ತ್ರದ ವಿದ್ಯಮಾನವಾಗಿದ್ದು, ಭೂಮಿಯ ವಾತಾವರಣದಲ್ಲಿನ ಸಣ್ಣಹನಿಗಳ ಮೇಲೆ ಸೂರ್ಯನು ಬೆಳಗಿದಾಗ ಆಕಾಶದಲ್ಲಿ ಬೆಳಕಿನ ಬಣ್ಣಗಳ ಪಟ್ಟಿಯೊಂದು ಕಾಣಿಸುವಂಥ ಪರಿಣಾಮವನ್ನು ಇದು ಉಂಟು ಮಾಡುತ್ತದೆ. ಒಂದು ಬಹುವರ್ಣದ ಬಿಲ್ಲಿನ ಸ್ವರೂಪವನ್ನು ತಳೆಯುವ ಇದು ತನ್ನ ಹೊರಗಿನ ಭಾಗದಲ್ಲಿ ಕೆಂಪು ಬಣ್ಣವನ್ನೂ ಒಳಗಿನ ವಿಭಾಗದಲ್ಲಿ ನೇರಿಳೆ ಬಣ್ಣವನ್ನೂ ಹೊಂದಿರುತ್ತದೆ. ಒಂದು ಅಖಂಡವಾಗಿರುವ ಬಣ್ಣಗಳ ರೋಹಿತವನ್ನು (ಬಣ್ಣಗಳ ಪಟ್ಟಿಯನ್ನು) ಒಂದು ಮಳೆಬಿಲ್ಲು ವ್ಯಾಪಿಸಿಕೊಳ್ಳುತ್ತದೆ; ಇದರ ವಿಶಿಷ್ಟ-ವಿಸ್ಪಷ್ಟ ಪಟ್ಟಿಗಳು ಮಾನವನ ವರ್ಣ ಕಲ್ಪನಾಚಿತ್ರದ ಒಂದು ಕಲಾಕೃತಿಯಂತೆ ಭಾಸವಾಗುತ್ತವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಮಹಾತ್ಮ ಜ್ಯೋತಿಬಾ ಫುಲೆ (೧೮೨೭ - ೧೮೯೦) ಅವರು ಆಧುನಿಕ ಮಹಾರಾಷ್ಟ್ರದ ಸಾಮಾಜಿಕ ಕ್ರಾಂತಿಯ ಮೂಲಪುರುಷರಲ್ಲಿ ಪ್ರಮುಖರು. ಸಮಾಜ ಸುಧಾರಕರಾಗಿ, ಸಮಾನತೆಯ ಹರಿಕಾರರಾಗಿ ದೀನ, ದಲಿತ ಹಿಂದುಳಿದ ವರ್ಗಗಳ ಏಳಿಗೆಗೆ ಅವಿರತವಾಗಿ ಶ್ರಮಿಸಿದವರು. ಇವರು ಜನಸಾಮಾನ್ಯರು ಡಾಂಭಿಕ ಧರ್ಮ, ಪಂಥ, ಸಂಪ್ರದಾಯ ಮುಂತಾದ ಸಂಕುಚಿತ ಭಾವನೆಗಳಿಗೆ ಮರುಳಾಗದೆ, ಮಾನವ ಧರ್ಮವನ್ನು ಅಂಗೀಕರಿಸಬೇಕೆಂದು ಅಪೇಕ್ಷೆ ಪಟ್ಟವರು.ಮಹಾತ್ಮ ಜ್ಯೋತಿಬಾ ಫುಲೆ ಅವರ ಬಗ್ಗೆ ಕನ್ನಡದಲ್ಲಿರುವ ಬಹುತೇಕ ಕೃತಿಗಳಲ್ಲಿ "ಜ್ಯೋತಿಬಾ ಫುಲೆ" ಎಂಬ ಹೆಸರೆ ಬಳಕೆಯಲ್ಲಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಲಕ್ಷ್ಮೀ ನಿವಾಸ (ಕನ್ನಡ ಧಾರಾವಾಹಿ)
ಲಕ್ಷ್ಮೀ ನಿವಾಸ ಪ್ರಸ್ತುತ ಝೀ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಭಾರತೀಯ ಕನ್ನಡ ಭಾಷೆಯ ದೈನಂದಿನ ಧಾರಾವಾಹಿಯಾಗಿದೆ. ಈ ಧಾರಾವಾಹಿಯು 2024ರ ಜನವರಿ 16 ರಂದು ಝೀ ಕನ್ನಡದಲ್ಲಿ ಪ್ರಥಮ ಪ್ರದರ್ಶನಗೊಂಡಿತು. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 8 ಗಂಟೆಗೆ ಪ್ರಸಾರವಾಗುತ್ತಿದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ನೈಸರ್ಗಿಕ ಸಂಪನ್ಮೂಲಗಳು ಭೂಮಿ ಅಥವಾ ಕಚ್ಛಾ ವಸ್ತುಗಳನ್ನು ) ಆರ್ಥಿಕಮಾನದಂಡ ಎಂದು ಉಲ್ಲೇಖಿಸಲಾಗಿದೆ) ಪರಿಸರದಲ್ಲಿ ಮಾನವರಿಂದ ಸ್ಥಾನಪಲ್ಲಟಕ್ಕೆ ಈಡಾಗದೇ ಇರುವಾಗ ಅವುಪ್ರಾಕೃತಿಕ ರೂಪದಲ್ಲಿ ಇರುತ್ತವೆ. ನೈಸರ್ಗಿಕ ಸಂಪನ್ಮೂಲವನ್ನು ವಿವಿಧ ಪರಿಸರ ವ್ಯವಸ್ಥೆಯಲ್ಲಿ ಅಸ್ತಿತ್ವದಲ್ಲಿರುವ ಜೀವವೈವಿಧ್ಯತೆಯ ಆಧಾರದ ಮೇಲೆ ವಿಂಗಡಿಸಲಾಗಿದೆ. ನೈಸರ್ಗಿಕ ಸಂಪನ್ಮೂಲಗಳೆಲ್ಲವೂಪರಿಸರ ಜನ್ಯ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಗಂಜಿ ರುಬ್ಬಿದ, ಜಜ್ಜಿದ ಅಥವಾ ಕತ್ತರಿಸಿದ ಪಿಷ್ಟ ಹೊಂದಿದ ಸಸ್ಯಗಳನ್ನು - ಸಾಮಾನ್ಯವಾಗಿ ಧಾನ್ಯಗಳನ್ನು ನೀರು ಅಥವಾ ಹಾಲಿನಲ್ಲಿ ಬೇಯಿಸಿ ತಯಾರಿಸಲಾದ ಒಂದು ಖಾದ್ಯ. ಅದನ್ನು ಹಲವುವೇಳೆ ಸಿಹಿ ಖಾದ್ಯ ತಯಾರಿಸಲು ಸಕ್ಕರೆ, ಜೇನು ಇತ್ಯಾದಿಗಳಂತಹ ರುಚಿಕಾರಕಗಳೊಂದಿಗೆ, ಅಥವಾ ಉಪ್ಪುಖಾರದ ಖಾದ್ಯ ತಯಾರಿಸಲು ಸಂಬಾರ ಪದಾರ್ಥಗಳು, ತರಕಾರಿಗಳು ಇತ್ಯಾದಿಗಳೊಂದಿಗೆ ಬೆರೆಸಿ ಬೇಯಿಸಲಾಗುತ್ತದೆ ಅಥವಾ ಬಡಿಸಲಾಗುತ್ತದೆ. ಅದನ್ನು ಸಾಮಾನ್ಯವಾಗಿ ಬೋಗುಣಿಯಲ್ಲಿ ಬಿಸಿಯಾಗಿ ಬಡಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಎರಡನೆಯ ಮಹಾಯುದ್ಧ ೧೯೩೯ರಿಂದ ೧೯೪೫ರವರೆಗೆ ನಡೆದ, ಜಗತ್ತಿನ ಅನೇಕ ದೇಶಗಳನ್ನೊಳಗೊಂಡ ಯುದ್ಧ. ಪ್ರಧಾನವಾಗಿ ಯೂರೋಪ್ ಮತ್ತು ಏಷಿಯಾ ಖಂಡದಲ್ಲಿ ನಡೆಯಲ್ಪಟ್ಟ ಈ ಯುದ್ಧದಲ್ಲಿ ಮಿತ್ರ ರಾಷ್ಟ್ರ ( ಫ್ರಾನ್ಸ್, ರಶಿಯಾ, ಇಂಗ್ಲೆಂಡ್ ಮತ್ತು ಅಮೆರಿಕಾ) ಮತ್ತು ಅಕ್ಷ ರಾಷ್ಟ್ರ (ಜರ್ಮನಿ, ಇಟಲಿ ಮತ್ತು ಜಪಾನ್) ಎಂಬ ಎರಡು ಬಣಗಳಿದ್ದವು. ಒಟ್ಟಿನಲ್ಲಿ ೭೦ ರಾಷ್ಟ್ರಗಳ ಸೈನ್ಯಗಳು ಭಾಗವಹಿಸಿದ ಈ ಯುದ್ಧದಲ್ಲಿ ಆರು ಕೋಟಿಗೂ ಹೆಚ್ಚು ಜನ ಪ್ರಾಣ ಕಳೆದುಕೊಂಡಿರಬಹುದು ಎಂದು ಅಂದಾಜಿಸಲಾಗಿದೆ.
ಮಧ್ಯಕಾಲೀನ ಭಾರತವು "ಪ್ರಾಚೀನ ಅವಧಿ" ಮತ್ತು "ಆಧುನಿಕ ಅವಧಿ" ನಡುವಿನ ಭಾರತೀಯ ಉಪಖಂಡದ ನಂತರದ ಶಾಸ್ತ್ರೀಯ ಇತಿಹಾಸದ ದೀರ್ಘ ಅವಧಿಯನ್ನು ಉಲ್ಲೇಖಿಸುತ್ತದೆ. ಇದನ್ನು ಸಾಮಾನ್ಯವಾಗಿ 6 ನೇ ಶತಮಾನದ CE ಯಲ್ಲಿ ಗುಪ್ತ ಸಾಮ್ರಾಜ್ಯದ ವಿಘಟನೆಯಿಂದ ಮತ್ತು 1526 ರಲ್ಲಿ ಮೊಘಲ್ ಸಾಮ್ರಾಜ್ಯದ ಪ್ರಾರಂಭದೊಂದಿಗೆ ಆರಂಭಿಕ ಆಧುನಿಕ ಅವಧಿಯ ಪ್ರಾರಂಭದಿಂದ ಸರಿಸುಮಾರು ಚಾಲನೆಯಲ್ಲಿದೆ ಎಂದು ಪರಿಗಣಿಸಲಾಗುತ್ತದೆ, ಆದರೂ ಕೆಲವು ಇತಿಹಾಸಕಾರರು ಇದನ್ನು ಈ ಹಂತಗಳಿಗಿಂತ ನಂತರ ಪ್ರಾರಂಭ ಮತ್ತು ಮುಕ್ತಾಯವೆಂದು ಪರಿಗಣಿಸುತ್ತಾರೆ. . ಮಧ್ಯಯುಗೀನ ಅವಧಿಯು ಸ್ವತಃ ಆರಂಭಿಕ ಮಧ್ಯಯುಗ ಮತ್ತು ಮಧ್ಯಕಾಲೀನ ಯುಗಗಳ ಉಪವಿಭಾಗವಾಗಿದೆ.
ಪುಲಕೇಶಿ ( IAST : Pulakeśin, rc 540–567) ವಾತಾಪಿಯ (ಆಧುನಿಕ ಬಾದಾಮಿ) ಚಾಲುಕ್ಯ ರಾಜವಂಶದ ಮೊದಲ ಸಾರ್ವಭೌಮ ಆಡಳಿತಗಾರ. ಅವನು ಭಾರತದ ಪಶ್ಚಿಮ ಮತ್ತು ಮಧ್ಯ ಡೆಕ್ಕನ್ ಪ್ರದೇಶದಲ್ಲಿ ಇಂದಿನ ಕರ್ನಾಟಕ, ಮಹಾರಾಷ್ಟ್ರ, ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳ ಭಾಗಗಳನ್ನು ಆಳಿದನು. ಪುಲಕೇಶಿನ ವಾತಾಪಿ ನಗರವನ್ನು ಸ್ಥಾಪಿಸಿದನು ಮತ್ತು ತನ್ನ ಸಾರ್ವಭೌಮ ಸ್ಥಾನಮಾನವನ್ನು ಪ್ರತಿಪಾದಿಸಲು ಅಶ್ವಮೇಧ ಯಾಗವನ್ನು ಮಾಡಿದನು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.