The most-visited ಕನ್ನಡ Wikipedia articles, updated daily. Learn more...
ಬಾಬು ಜಗಜೀವನ್ ರಾಮ್ (೫ ಏಪ್ರಿಲ್ ೧೯೦೮ - ೬ ಜುಲೈ ೧೯೮೬) ಇವರು ಜನಪ್ರಿಯವಾಗಿ ಬಾಬೂಜಿ ಎಂದು ಕರೆಯಲ್ಪಡುತ್ತಾರೆ ಹಾಗೂ ಇವರು ಭಾರತದ ಸ್ವಾತಂತ್ರ್ಯ ಹೋರಾಟಗಾರ ಮತ್ತು ಬಿಹಾರದ ರಾಜಕಾರಣಿಯಾಗಿದ್ದರು. ೧೯೩೫ ರಲ್ಲಿ, ದಲಿತರಿಗೆ ಸಮಾನತೆಯನ್ನು ಸಾಧಿಸಲು ಸಮರ್ಪಿತವಾದ ಅಖಿಲ ಭಾರತ ಶೋಷಿತ ವರ್ಗಗಳ ಲೀಗ್ ಅನ್ನು ಸ್ಥಾಪಿಸುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದರು ಮತ್ತು ೧೯೩೭ ರಲ್ಲಿ, ಬಿಹಾರ ವಿಧಾನಸಭೆಗೆ ಆಯ್ಕೆಯಾದರು. ನಂತರ, ಅವರು ಗ್ರಾಮೀಣ ಕಾರ್ಮಿಕ ಚಳವಳಿಯನ್ನು ಸಂಘಟಿಸಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಅರ್ಜಿಯು ಏನನ್ನಾದರೂ ಮಾಡಲು ಒಂದು ವಿನಂತಿ, ಮತ್ತು ಅತ್ಯಂತ ಸಾಮಾನ್ಯವಾಗಿ ಒಬ್ಬ ಸರ್ಕಾರಿ ಅಧಿಕಾರಿ ಅಥವಾ ಸಾರ್ವಜನಿಕ ಘಟಕಕ್ಕೆ ತಿಳಿಸಲಾಗುತ್ತದೆ. ಒಬ್ಬ ದೇವರಿಗೆ ಕೊಡುವ ಅರ್ಜಿಗಳು ಪ್ರಾರ್ಥನೆಯ ಒಂದು ರೂಪವಾಗಿವೆ ಮತ್ತು ಮೊರೆ ಎಂದು ಕರೆಯಲ್ಪಡುತ್ತವೆ. ಆಡುಮಾತಿನ ಅರ್ಥದಲ್ಲಿ, ಅರ್ಜಿಯು ಯಾರೋ ಅಧಿಕಾರಿಗೆ ಕೊಡಲಾದ ಮತ್ತು ಅಸಂಖ್ಯ ವ್ಯಕ್ತಿಗಳಿಂದ ಸಹಿಮಾಡಲಾದ ಒಂದು ದಸ್ತಾವೇಜು.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಒಂದು ರಾಜಕೀಯ ಪಕ್ಷ ವು ಸರ್ಕಾರದೊಳಗೆ, ಸಾಮಾನ್ಯವಾಗಿ ಮತದಾನ ಶಿಬಿರಗಳಲ್ಲಿ, ಶೈಕ್ಷಣಿಕ ವ್ಯಾಪ್ತಿಗಳಲ್ಲಿ ಅಥವಾ ವಿರೋಧ ಪ್ರಕ್ರಿಯೆಗಳಲ್ಲಿ ಭಾಗವಹಿಸುವುದರ ಮೂಲಕ, ವಿಶಿಷ್ಟವಾಗಿ ರಾಜಕೀಯ ಬಲವನ್ನು ಸಾಧಿಸುವ ಮತ್ತು ನಿರ್ವಹಿಸಿಕೊಂಡು ಹೋಗುವ ಒಂದು ರಾಜಕೀಯ ಸಂಘಟನೆಯಾಗಿದೆ. ಪಕ್ಷಗಳು ಅನೇಕ ವೇಳೆ ಬಹಿರಂಗಗೊಳಿಸಲ್ಪಟ್ಟ ವಿಚಾರಪರಂಪರೆ ಅಥವಾ ನಿರ್ದಿಷ್ಟ ಗುರಿಗಳ ಜೊತೆ ಒಂದು ಬರೆಯಲ್ಪಟ್ಟ ವೇದಿಕೆಯ ಮೂಲಕ ದೂರದೃಷ್ಟಿಯನ್ನು ಪ್ರೋತ್ಸಾಹಿಸುವ, ವಿಭಿನ್ನ ಆಸಕ್ತಿಗಳ ನಡುವೆ ಒಂದು ಸಮ್ಮಿಶ್ರಣವನ್ನು ಸ್ಥಾಪಿಸುವ ಅಭಿಪ್ರಾಯವನ್ನು ಸಮರ್ಥಿಸುತ್ತವೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಭಾರತದ ಕರ್ನಾಟಕ ರಾಜ್ಯದ ಪ್ರಸ್ತುತ ಬಾಗಲಕೋಟೆ ಜಿಲ್ಲೆಯಲ್ಲಿನ ಮಲಪ್ರಭಾ ನದಿ ತೀರದಲ್ಲಿ, ೫ ರಿಂದ ೮ನೇ ಶತಮಾನಗಳಲ್ಲಿ ಅಸ್ತಿತ್ವದಲ್ಲಿದ್ದ ಚಾಲುಕ್ಯರ ಆಡಳಿತಾವಧಿಯಲ್ಲಿ ಬದಾಮಿ ಚಾಲುಕ್ಯರ ವಾಸ್ತುಶಿಲ್ಪ ಎಂಬ ದೇಗುಲ ಕಟ್ಟಡ ವಿನ್ಯಾಸ ವಿಕಸನಗೊಂಡಿತು. ಈ ವಾಸ್ತು ಪ್ರಕಾರವನ್ನು ವೆಸರ ಶೈಲಿ ಮತ್ತು ಚಾಲುಕ್ಯ ಶೈಲಿ ಎಂದಾಗಿಯೂ ಕರೆಯಲಾಗುತ್ತದೆ. ಅದಾಗ್ಯೂ ಈ ಪದವು ೧೧ ಮತ್ತು ೧೨ ನೇ ಶತಮಾನಗಳ ನಂತರದ ಪಾಶ್ಚಾತ್ಯ ಚಾಲುಕ್ಯ ವಾಸ್ತುಶಿಲ್ಪವನ್ನೂ ಒಳಗೊಂಡಿದೆ.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ಜನಗಣತಿ ಎಂದರೆ, ನಿರ್ಧಿಷ್ಟ ಜನಸಂಖ್ಯೆಯ ಸದಸ್ಯರ ಮಾಹಿತಿಯನ್ನು ಉತ್ತಮ ಕಾರ್ಯವಿಧಾನ-ಪದ್ದತಿಗಳ ಅನುಸರಿಸಿ ದಾಖಲಿಸುವುದು. ಇದು ನಿಯಮಿತವಾಗಿ ನಡೆಯುವ ನಿರ್ಧಿಷ್ಟ ಜನಸಂಖ್ಯೆಯ ಅಧಿಕೃತ ಎಣಿಕೆಯ ವಿಧಾನವಾಗಿದೆ. ಈ ಪದವನ್ನು ಹೆಚ್ಚಾಗಿ ರಾಷ್ಟ್ರೀಯ ಜನಸಂಖ್ಯೆ ಮತ್ತು ಜನವಸತಿ ಗೃಹಗಳ ಎಣಿಕೆಗೆ ಬಳಸಲಾಗುತ್ತದೆ.ಇತರ ಗಣತಿಗಳೆಂದರೆ ಎಂದರೆ ಕೃಷಿ,ವಹಿವಾಟು ಮತ್ತು ಸಂಚಾರಿ ವಿಭಾಗದ ಅಂಕಿಅಂಶ ಸೇರಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಮಧ್ಯ ಏಷ್ಯಾದಿಂದ(ಮಂಗೋಲಿಯ ಸಾಮ್ರಾಜ್ಯದ ಉಜಬೇಕಿಸ್ತಾನದಿಂದ) ಬಂದ ಮುಸ್ಲಿಂಜಯಶಾಲಿ, ಜಹೀರ್ ಉದ್ -ದಿನ್ ಮಹಮ್ಮದ್ ಬಾಬರ್ (February 23 [O.S. February 14] 1483 — January 5 [O.S. December 26, 1530] 1531) ಹಲವಾರು ಸತತ ಸೋಲಿನಿಂದ,ಎದೆಗುಂದದೆ ಅಂತಿಮವಾಗಿ ಭಾರತದಲ್ಲಿ ಮುಘಲ್ ಸಾಮ್ರಾಜ್ಯ ಸ್ಥಾಪಿಸಿದನು .https://www.britannica.com/biography/Babur ತನ್ನ ತಂದೆಯ ಮೂಲಕ ತೈಮೂರುವಂಶದ ನೇರಸ್ಥಾನಾಗಿ, ಗೆನ್ಗೀಸ್ ಖಾನ್ ನ ವಂಶಸ್ಥನಾದದ್ದು, ತಾಯಿಯ ಮೂಲಕ. ಬಾಬರ್ ತನ್ನ ವಂಶ ಪರಂಪರೆಯನ್ನು ಟಿಮುರಿಡ್ ಮತ್ತು ಚಾಘತಯ್ -ಟರ್ಕಿಕ್ ಎಂದು ಗುರುತಿಸಿಕೊಂಡಿದ್ದು,ತನ್ನ ಹುಟ್ಟು,ವಾತಾವರಣ, ತರಭೇತಿ ಮತ್ತು ಸಂಸ್ಕೃತಿಗಳು ಪೆರ್ಸಿಯನ್ ಸಂಸ್ಕೃತಿ ಯಿಂದ ಬಂದವುಗಳೆಂದು,ಆದುದರಿಂದ ತನ್ನ ವಂಶದವರಿಂದ ಬಂದ ಇವುಗಳನ್ನು ತನ್ನ ಜವಾಬ್ದಾರಿಯಿಂದ ಪೋಷಿಸಬೇಕೆಂದು, ಪೆರ್ಸಿಯನ್ ಸಂಸ್ಕೃತಿಯ ಪ್ರಭಾವ ವನ್ನು ಭಾರತದ ಉಪಖಂಡ ದಲ್ಲಿ ವಿಸ್ತರಿಸಿ, ಬುದ್ಧಿವಂತಿಕೆಯ ಸಾಹಿತ್ಯ, ಕಲೆ, ಮತ್ತು ಚಾರಿತ್ರಿಕ ಫಲಿತಾಂಶದ ಮೂಲಕ ಪರಿಚಯಿಸಲು ಉದ್ಯುಕ್ತನಾದನು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಇಪ್ಪತನೆಯ ಶತಮಾನದ ಮೊದಲ ಭಾಗದಲ್ಲಿ ಅಂದರೆ 1914 ರಿಂದ 1918 ರವರೆಗೆ ಸಂಭವಿಸಿದ ಮೊದಲನೇ ವಿಶ್ವಯುದ್ದ ಮಾನವನ ಇತಿಹಾಸದಲ್ಲೇ ಒಂದು ಪ್ರಮುಖ ಘಟನೆಯಾಗಿದೆ. ಇದು ಮೂಲತಃ ಯುರೋಪಿನಲ್ಲೆ ಸಂಭವಿಸಿದರೂ ಕೂಡ ಕ್ರಮೇಣ ಇಡೀ ವಿಶ್ವವ್ಯಾಪಿಯಾಗಿ ಆಸ್ಫೋಟಿಸಿತು. ಇದು ಜರ್ಮನಿ ಮುಖಂಡತ್ವದ ಶತ್ರು ಪಕ್ಷ ಮತ್ತು ಇಂಗ್ಲಂಡ್ ನೇತೃತ್ವದ ಮಿತ್ರ ಪಕ್ಷಗಳ ನಡುವೆ ಸುಮಾರು 4 ವರ್ಷಗಳು ಸಂಭವಿಸಿ ಜರ್ಮನಿಯ ಸೋಲಿನೊಂದಿಗೆ 1918ರಲ್ಲಿ ಮುಕ್ತಾಯಗೊಂಡಿತು.ಈ ಯುದ್ಧದಲ್ಲಿ ಹಿಂದೆಂದೂ ಕಂಡರಿಯದ ಹೊಸ ಶಸ್ತ್ರಾಸ್ತ್ರಗಳು, ಯುದ್ಧ ವಿಮಾನಗಳು, ನವೀನ ಯುದ್ಧ ನೌಕೆಗಳು, ಟ್ಯಾಂಕರ್ಗಳು, ಜಲಾಂತರ್ಗಾಮಿಗಳು, ಸ್ಪೋಟಕಗಳು, ವಿಷಾನಿಲಗಳು ಬಳಕೆಯಾದವು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.