The most-visited ಕನ್ನಡ Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತಿಯ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ
ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್ಎಚ್ಆರ್ ಸಿ ) ಭಾರತದ ಸ್ವಾಯತ್ತ ಸಾರ್ವಜನಿಕ ಆಡಳಿತ ಮಾನವ ಹಕ್ಕುಗಳ 28 ಸುಗ್ರೀವಾಜ್ಞೆಯ ಸೆಪ್ಟೆಂಬರ್ 1993 ರಕ್ಷಣೆಯ ಅಡಿಯಲ್ಲಿ ಅಕ್ಟೋಬರ್ 1993 ರ12 ರಂದು ರಚಿಸಲ್ಪಟ್ಟದೆ ಇದು ಮಾನವ ಹಕ್ಕು ಕಾಯಿದೆ 1993 (TPHRA) ರಕ್ಷಣೆಯಿಂದ ಒಂದು ಶಾಸನಬದ್ಧ ಆಧಾರವನ್ನು ನೀಡಿತು. ರಾಷ್ಟ್ರೀಯ ಮಾನವ ಹಕ್ಕುಗಳ ಆಯೊಗ ಮಾನವ ಹಕ್ಕುಗಳ ರಕ್ಷಣೆ ಮತ್ತು ಉತ್ತೇಜನಕ್ಕಾಗಿ ಜವಾಬ್ದಾರನಾಗಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ, ಕಾಯಿದೆ ವ್ಯಾಖ್ಯಾನಿಸಿರುವಂತೆ "ಜೀವನ, ಸ್ವಾತಂತ್ರ್ಯ, ಸಮಾನತೆ ಮತ್ತು ಸಂವಿಧಾನದ ಭರವಸೆಯ ವ್ಯಕ್ತಿಯ ಘನತೆಗೆ ಸಂಬಂಧಿಸಿದ ಹಕ್ಕುಗಳು ಅಥವಾ ಅಂತರಾಷ್ಟ್ರಿಯ ಕರಾರುಗಳು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಹೊಯ್ಸಳೇಶ್ವರ ದೇವಸ್ಥಾನವನ್ನು ಸರಳವಾಗಿ ಹಳೇಬೀಡು ದೇವಸ್ಥಾನ ಎಂದೂ ಕರೆಯುತ್ತಾರೆ, ಇದು 12 ನೇ ಶತಮಾನದ ಹಿಂದೂ ದೇವಾಲಯವಾಗಿದ್ದು ಅದು ಶಿವನಿಗೆ ಸಮರ್ಪಿತವಾಗಿದೆ. ಇದು ಹಳೆಬೀಡು, ಭಾರತದ ಕರ್ನಾಟಕ ರಾಜ್ಯದ ಪಟ್ಟಣ ಮತ್ತು ಹೊಯ್ಸಳ ಸಾಮ್ರಾಜ್ಯದ ಹಿಂದಿನ ರಾಜಧಾನಿಯಲ್ಲಿನ ಅತಿದೊಡ್ಡ ಸ್ಮಾರಕವಾಗಿದೆ. ಈ ದೇವಾಲಯವನ್ನು ದೊಡ್ಡ ಮಾನವ ನಿರ್ಮಿತ ಸರೋವರದ ದಡದಲ್ಲಿ ನಿರ್ಮಿಸಲಾಗಿದೆ ಮತ್ತು ಹೊಯ್ಸಳ ಸಾಮ್ರಾಜ್ಯದ ರಾಜ ವಿಷ್ಣುವರ್ಧನ ಪ್ರಾಯೋಜಿಸಿದ್ದಾನೆ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಕನ್ನಡ ಚಿತ್ರರಂಗದ ತಾರೆಯರಲ್ಲಿ ಸಿ.ಪಿ.ಯೋಗಿಶ್ವರ್ ರವರು ಒಬ್ಬರು. ಮೊದಲು ಕನ್ನಡದಲ್ಲಿ ಹಲವಾರು ಚಿತ್ರಗಳಲ್ಲಿ ಸಹ ಕಲಾವಿದನಾಗಿ ನಟಿಸಿ ಉತ್ತರದೃವದಿಂ ದಕ್ಷಿಣ ದೃವಕ್ಕು , ಸೈನಿಕ, ಬದ್ರಿ, ಪ್ರೀತಿ ನೀ ಇಲ್ಲದೇ ನಾ ಹೇಗಿರಲಿ, ಪಾಂಚಾಲಿ, ಶಿವಪ್ಪನಾಯಕ ಚಿತ್ರಗಳಲ್ಲಿ ನಾಯಕನಾಗಿ ನಟಿಸಿ ಜನಪ್ರೀತಿ ಗಳಿಸಿ, ಚನ್ನಪಟ್ಟಣ ಕ್ಷೇತ್ರದಲ್ಲಿ ಸಾಧನೆಯ ಹ್ಯಾಟ್ರಿಕ್ ವಿಜಯ ಸಾಧಿಸಿ ಶಾಸಕರಾಗಿ ಕಾರ್ಯನಿರ್ವಯಿಸಿತ್ತಿದ್ದಾರೆ. ಜನನಾಯಕನಾಗಿ, ಯುವಜನರ ಮುಖಂಡನಾಗಿ ಮಿಂಚುತ್ತಿರುವ ಸೈನಿಕ ಯೋಗಿಶ್ವರ್ ಕನ್ನಡ ಚಿತ್ರರಂಗ ಮತ್ತು ಕರ್ನಾಟಕ ರಾಜಕೀಯದಲ್ಲಿ ತಮ್ಮ ಜೀವನ ತೊಡಗಿಸಿಕೊಂಡಿದ್ದಾರೆ.
ದುರ್ಗದ ಹುಲಿ ಮದಕರಿ ನಾಯಕ, ಭಾರತ ದೇಶದಲ್ಲಿದ್ದ ಹಲವು ಸಂಸ್ಥಾನಗಳಲ್ಲಿ ಒಂದಾದ ಚಿತ್ರದುರ್ಗದ ಕೊನೆಯ ಆರಸನಾಗಿದ್ದ. ಹೈದರ್ ಅಲಿಯ ಮೈಸೂರಿನ ಸೇನೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ನಾಯಕನನ್ನು ಮಾತುಕತೆಗೆಂದು ರಾಜಿಸಂಧಾನವೆಂದು ಕರೆಸಿ ಮೋಸದಿಂದ ಹೈದರ್ ಅಲಿ ಬಂಧಿಸಿ ಶ್ರೀರಂಗಪಟ್ಟಣದ ಸೆರೆಮನೆಯಲ್ಲಿಟ್ಟು ಮತಾಂತರವಾದರೆ ರಾಜ್ಯವನ್ನು ವಾಪಸ್ಸು ನೀಡಿ ಬಿಡುಗಡೆ ಮಾಡುವುದಾಗಿ ಹೇಳಲು ಮದಕರಿ ಜೀವ ನೀಡುತ್ತಾನೆ ಹೊರತು ಧರ್ಮದ್ರೋಹ ಮಾಡುವುದಿಲ್ಲ ಎಂದು ಕೆಚ್ಚೆದೆಯಿಂದ ಹೇಳುತ್ತಾನೆ. ನಂತರ ಹೈದರ್ ಅಲಿಯ ಪುತ್ರ ಟಿಪ್ಪುಸುಲ್ತಾನ್ ಮೈಸೂರಿನ ಮತ್ತು ಚಿತ್ರದುರ್ಗದ ಬೇಡರ ಪಡೆಗಳು ಒಂದಾಗಿ ದಾಳಿ ಮಾಡಬಹುದೆಂಬ ಹೆದರಿ ಸೈನಿಕ ದಂಗೆಯಾದರೆ ನಮಗೆ ಸೋಲು ಖಚಿತವೆಂದು ಭಾವಿಸಿ ಯುದ್ಧಭಯದಿಂದ ಮದಕರಿ ಊಟದಲ್ಲಿ ವಿಷವಿಟ್ಟು ಕೊಲೆ ಮಾಡುತ್ತಾನೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
(ಸಂಸ್ಕೃತ: धर्म ಧರ್ಮ(ಪಾಲಿ: ಧಮ್ಮ) ಇದು ವಿಭಿನ್ನ ಪದಗಳನ್ನು ಭಾರತೀಯ ತತ್ವಶಾಸ್ತ್ರ ಮತ್ತು ಧರ್ಮಗಳಲ್ಲಿ ಬಳಸಿಕೊಂಡು ತನ್ನ ವ್ಯಾಪ್ತಿಯ ಮಹತ್ವದ ವಿಶಾಲತೆಗೆ ಹೆಸರಾಗಿದೆ. ಇದನ್ನು ಹಿಂದುತ್ವ,ದ ದೃಷ್ಟಿಯಲ್ಲಿ ಇದರ ಆಚರಣೆಯು ಪ್ರತಿಯೊಬ್ಬರ ನ್ಯಾಯಯುತ ಕರ್ತವ್ಯವಾಗಿದೆ. ಅದಲ್ಲದೇ ಹಿಂದುಒಬ್ಬನ ಧರ್ಮವು ವ್ಯಕ್ತಿಯ ವಯಸ್ಸು,ವರ್ಗ,ಶ್ರೇಣಿ,ವೃತ್ತಿ ಮತ್ತು ಲಿಂಗ ಇತ್ಯಾದಿ ಅಂಶಗಳ ಮೇಲೆ ಧಾರ್ಮಿಕ ಆಚರಣೆಗಳು ನಿಂತಿವೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಕನ್ನಡ ರಂಗಭೂಮಿಯ ಪರಂಪರೆ ಅತಿ ಪ್ರಾಚೀನವಾದದ್ದೆಂಬುದರಲ್ಲಿ ಸಂದೇಹವಿಲ್ಲ. ಕನ್ನಡ ರಂಗಭೂಮಿಯ ಪ್ರಕಾರಗಳಲ್ಲಿ ಗೊಂಬೆಯಾಟ, ತೊಗಲು ಗೊಂಬೆಯಾಟ, ಬಯಲಾಟ ದಶಾವತಾರ ಎಂದು ಕರೆಯುವ ಯಕ್ಷಗಾನದ ಆಟಗಳು (ಅದರ ತೆಂಕು ಬಡಗು ಎಂಬ ಪ್ರಭೇದ), ದೊಡ್ಡಾಟ(ಮೂಡಲಪಾಯ ಎನ್ನುವುದು ಅಧ್ಯಯನಕ್ಕೆ ಇಟ್ಟ ಹೆಸರು), ಘಟ್ಟದಕೋರೆ, ಶನಿಕಥೆ ಆಟ, ಕೃಷ್ಣಪಾರಿಜಾತ ಎನ್ನುವ ದೊಡ್ಡಾಟದ ಪ್ರಕಾರಗಳು ಮತ್ತು ನಾಟಕಗಳು ಪ್ರಮುಖವಾಗಿವೆ. ಪಾರ್ತಿಸುಬ್ಬನ ರಾಮಾಯಣದ ಯಕ್ಷಗಾನದ ಪ್ರಸಂಗಗಳು (ಸೀತಾಪಹಾರ, ವಾಲೀ ವಧಾ, ರಾವಣಾ ವಧಾ) ಸುಮಾರು ೧೬ನೇ ಶತಮಾನದವು.
ವಿಕಿಪೀಡಿಯವು (ಇಂಗ್ಲಿಷ್: Wikipedia ) ಒಂದು ಅಂತರಜಾಲ-ಆಧಾರಿತ ಬಹುಭಾಷೀಯ ವಿಶ್ವಕೋಶವಾಗಿದೆ. ಹಾಗೆಯೇ ಇದು ಒಂದು ವಿಶ್ವಕೋಶೀಯ ಜಾಲತಾಣವು ಸಹ ಆಗಿದೆ. ಇದು ಪ್ರಸ್ತುತ ವಿಕಿಮೀಡಿಯ ಫೌ಼ಂಡೇಷನ್ (wikimedia foundation) ಎಂಬ ಅಮೆರಿಕದ ಸ್ಯಾನ್ಫ್ರ್ಯಾ಼ನ್ಸಿಸ್ಕೊ ನಗರದಲ್ಲಿ ತನ್ನ ಕೇಂದ್ರಕಾರ್ಯಲಯವನ್ನು ಹೊಂದಿರುವ ಒಂದು ಲಾಭೋದ್ದೇಶರಹಿತ ಹಾಗೂ ದಾನಶೀಲ ಸಂಘಟನೆಯ ಮೇಲ್ವಿಚಾರಣೆಗೆ ಒಳಪಟ್ಟಿದೆ.
ಮೊಘಲ್ ಸಾಮ್ರಾಜ್ಯ (ಉರ್ದು:: مغل باد شاہ) ಭಾರತೀಯ ಉಪಖಂಡದ ಉತ್ತರ ಭಾಗಗಳನ್ನು ೧೫೨೬ ರಿಂದ ಆಳಿದ ಮುಖ್ಯ ಸಾಮ್ರಾಜ್ಯಗಳಲ್ಲಿ ಒಂದು. ಮೊಘಲ್ ಸಾಮ್ರಾಜ್ಯದ ಸ್ಥಾಪನೆ ೧೫೨೬ ರಲ್ಲಿ ಬಾಬರ್ ನಿಂದ ನಡೆಯಿತು - ಮೊದಲ ಪಾಣಿಪಟ್ ಯುದ್ಧದಲ್ಲಿ ಇಬ್ರಾಹಿಮ್ ಲೋದಿಯನ್ನು ಸೋಲಿಸಿದ ನಂತರ. ಹುಮಾಯೂನ್ ನ ಕಾಲದಲ್ಲಿ ಶೇರ್ ಷಾ ಮೊಘಲ್ ಸಾಮ್ರಾಜ್ಯವನ್ನು ಸೋಲಿಸಿದರೂ, ನಂತರ ಅಕ್ಬರ್ ನ ಕೆಳಗೆ ಮೇಲೇರಲಾರಂಭಿಸಿದ ಮೊಘಲ್ ಸಾಮ್ರಾಜ್ಯ ಔರಂಗಜೇಬನ ಕಾಲದ ವರೆಗೂ ಬೆಳೆಯಿತು.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಸಂಸ್ಕಾರಗಳು ಹಿಂದೂ ಧರ್ಮ (ವೈದಿಕ), ಜೈನಧರ್ಮ ಮತ್ತು ಬೌದ್ಧಧರ್ಮದಲ್ಲಿನ ಕೆಲವು ತತ್ವ,ಸಿದ್ಧಾಂತದ ಧಾರ್ಮಿಕ ಅನುಯಾಯಿಗಳಲ್ಲಿ ಬದಲಾಗುವ ಸ್ವೀಕೃತಿಯನ್ನು ಪಡೆಯುವ ಸರಿಯುವಿಕೆಯ ವಿಧಿಗಳು. ಆಧುನಿಕ ನುಡಿಯಲ್ಲಿ ಸಂಸ್ಕಾರವು ಸಾಂಸ್ಕೃತಿಕ ಪರಂಪರೆ ಮತ್ತು ಲಾಲನೆ-ಪಾಲನೆಯನ್ನು ಸೂಚಿಸುತ್ತದೆ. ಸಂಸ್ಕಾರಗಳು ಪವಿತ್ರ ವಿಧಿಗಳು, ತ್ಯಾಗಗಳು ಮತ್ತು ಧಾರ್ಮಿಕ ಕ್ರಿಯಾವಿಧಿಗಳ ಒಂದು ಸರಣಿ ಮತ್ತು ಮಾನವ ಜೀವನದ ವಿವಿಧ ಘಟ್ಟಗಳನ್ನು ಗುರುತುಮಾಡುತ್ತವೆ ಮತ್ತು ಒಂದು ನಿರ್ದಿಷ್ಟ ಆಶ್ರಮಕ್ಕೆ ಪ್ರವೇಶವನ್ನು ಸೂಚಿಸುತ್ತವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.