The most-visited ಕನ್ನಡ Wikipedia articles, updated daily. Learn more...
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್ಡಿ, ಎಮ್ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಯೋಗ (ಸಂಸ್ಕೃತ, ಪಾಳಿ ಭಾಷೆ ಎಂದರೆ ಭಾರತದಲ್ಲಿ ಆರಂಭವಾದ ಸಾಂಪ್ರದಾಯಿಕ ದೈಹಿಕ ಹಾಗೂ ಮಾನಸಿಕ ಆಚರಣೆಗಳ ಬೋಧನಶಾಖೆ. ಪಾಲಿಗ್ರಂಥಗಳಲ್ಲಿನ ಪದ ಬಳಕೆಗಾಗಿ, ನೋಡಿ ಥಾಮಸ್ ವಿಲಿಯಂ ರಿಸ್ ಡೇವಿಡ್ಸ್, ವಿಲಿಯಂ ಸ್ಟೆಡೆ, ಪಾಲಿ-ಆಂಗ್ಲ ನಿಘಂಟು. ಹಿಂದೂ ಧರ್ಮ, ಬೌದ್ಧ ಧರ್ಮ ಮತ್ತು ಜೈನ ಧರ್ಮಗಳಲ್ಲಿ ಈ ಪದವನ್ನು ಧ್ಯಾನದ ಆಚರಣೆಗಳೊಂದಿಗೆ ಬಳಸಲಾಗುತ್ತದೆ.ಡೆನಿಸ್ ಲಾರ್ಡನರ್ ಕಾರ್ಮಡಿ , ಜಾನ್ ಕಾರ್ಮಡಿ, ಸೆರೆನೆ ಕಂಪ್ಯಾಷನ್.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಟೆಂಪ್ಲೇಟು:History Of The Cold War ಶೀತಲ ಸಮರ ವು (1945–1991) ಎರಡನೇ ವಿಶ್ವಯುದ್ಧದ(1939–1945) ನಂತರ, ಮುಖ್ಯವಾಗಿ ಯು.ಎಸ್.ಎಸ್.ಆರ್ ಮತ್ತು ಅದರ ಆಶ್ರಿತ ದೇಶಗಳು, ಹಾಗೂ ಯುನೈಟೆಡ್ ಸ್ಟೇಟ್ಸ್ನ್ನು ಒಳಗೊಂಡಂತೆ ಪಾಶ್ಚಾತ್ಯ ವಿಶ್ವಶಕ್ತಿಗಳ ನಡುವಣ ಎಂದೂ ನಿಲ್ಲದೆ ಮುಂದುವರೆಯುತ್ತಲೇ ಬಂದ ರಾಜಕೀಯ ಘರ್ಷಣೆ, ಮಿಲಿಟರಿ ಉದ್ವಿಗ್ನತೆ, ಮತ್ತು ಆರ್ಥಿಕ ಪೈಪೋಟಿಗಳಿಗೆ ನೀಡಿದ ಹೆಸರಾಗಿದೆ. ಈ ಸಮರದಲ್ಲಿ ಪಾಲ್ಗೊಂಡ ಪ್ರಮುಖ ದೇಶಗಳ ಮಿಲಿಟರಿ ಶಕ್ತಿಗಳು ಎಂದೂ ಅಧಿಕೃತವಾಗಿ ನೇರ ಯುದ್ಧಕ್ಕಿಳಿಯದಿದ್ದರೂ, ಮಿಲಿಟರಿ ಮೈತ್ರಿಗಳು, ಆಯಕಟ್ಟಿನ ಜಾಗಗಳಲ್ಲಿ ಸಾಂಪ್ರದಾಯಿಕವಾಗಿ ಸೈನ್ಯವನ್ನು ಇರಿಸುವುದು, ಪರಮಾಣು ಅಸ್ತ್ರ ಪೈಪೋಟಿ, ಗೂಢಚರ್ಯೆ, ಹುಸಿ ಯುದ್ಧಗಳು, ಪ್ರಚಾರಕಾರ್ಯಗಳು, ಮತ್ತು ಅಂತರಿಕ್ಷ ಪೈಪೋಟಿಯೇ ಮೊದಲಾದ ತಂತ್ರಜ್ಞಾನ ಸ್ಪರ್ಧೆಗಳ ಮೂಲಕ ಈ ಘರ್ಷಣೆಯನ್ನು ವ್ಯಕ್ತಪಡಿಸಲಾಯಿತು. ಆಕ್ಸಿಸ್ ಶಕ್ತಿಗಳ ವಿರುದ್ಧದ ಮೈತ್ರಿಕೂಟದಲ್ಲಿದ್ದು ಅತ್ಯಂತ ಶಕ್ತಿಶಾಲಿಗಳಾಗಿದ್ದರೂ, ಯು.ಎಸ್.ಎಸ್.ಆರ್ ಮತ್ತು ಯು.ಎಸ್ಗಳು ವಿಶ್ವಯುದ್ಧಾನಂತರದ ಸಂರಚನೆಯ ಬಗ್ಗೆ ಯುರೋಪ್ನ ಹೆಚ್ಚಿನ ಭಾಗವನ್ನು ಸ್ವಾಧೀನಪಡಿಸಿಕೊಳ್ಳುವ ಸಂದರ್ಭದಲ್ಲಿ ಪರಸ್ಪರ ವಿರೋಧ ವ್ಯಕ್ತಪಡಿಸಿದವು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ತಾಜ್ ಮಹಲ್ (pronounced /tɑdʒ məˈhɑl/; ಹಿಂದಿ: ताज महल ; ಪರ್ಷಿಯನ್/ಉರ್ದು: تاج محل ) ಭಾರತದ ಆಗ್ರಾದಲ್ಲಿರುವ ಭವ್ಯ ಸಮಾಧಿಯಾಗಿದೆ. ಇದನ್ನು ಮೊಘಲ್ ಚಕ್ರವರ್ತಿ ಷಹ ಜಹಾನ್ ತನ್ನ ಮೆಚ್ಚಿನ ಪತ್ನಿ ಮಮ್ತಾಜ್ ಮಹಲ್ಳ ನೆನಪಿಗಾಗಿ ಕಟ್ಟಿಸಿದನು. ಪರ್ಷಿಯನ್, ಭಾರತೀಯ ಮತ್ತು ಮುಸ್ಲಿಂ ವಾಸ್ತುಶೈಲಿಗಳ ಸಮ್ಮಿಶ್ರಣವಾದ ಮೊಘಲ್ ವಾಸ್ತುಶೈಲಿಗೆ ತಾಜ್ ಮಹಲ್ ("ತಾಜ್" ಎಂದೂ ಕರೆಯಲ್ಪಡುತ್ತದೆ) ಅತ್ಯುತ್ತಮ ಉದಾಹರಣೆಯೆಂದು ಪರಿಗಣಿಸಲಾಗಿದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ನಾ. ಡಿಸೋಜ (೬ನೇ ಜೂನ್ ೧೯೩೭ - ೫ನೇ ಜನವರಿ ೨೦೨೫) ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ನೋಡಿ:ವಾಯುಗುಣ ಬದಲಾವಣೆ ಹವಾಮಾನವು ವಾತಾವರಣದ ಸ್ಥಿತಿ, ಬಿಸಿ ಅಥವಾ ಶೀತಲ, ತೇವ ಅಥವಾ ಶುಷ್ಕ, ಶಾಂತ ಅಥವಾ ಬಿರುಗಾಳಿಯಿಂದ ಕೂಡಿದ, ನಿಚ್ಚಳ ಅಥವಾ ಮೋಡಕವಿದ ಅನ್ನುವಷ್ಟರ ಮಟ್ಟಿಗೆ. ಬಹುತೇಕ ಹವಾಮಾನ ವಿದ್ಯಮಾನಗಳು ಪರಿವರ್ತನ ಗೋಳದಲ್ಲಿ ಸಂಭವಿಸುತ್ತವೆ, ಸಮಗೋಳದ ಸ್ವಲ್ಪ ಕೆಳಗೆ. ಹವಾಮಾನವು ಸಾಮಾನ್ಯವಾಗಿ ದಿನನಿತ್ಯದ ಉಷ್ಣಾಂಶ ಮತ್ತು ಮಳೆ ಪ್ರಮಾಣವನ್ನು ನಿರ್ದೇಶಿಸಿದರೆ, ವಾಯುಗುಣವು ಸಮಯದ ದೀರ್ಘಾವಧಿಯಲ್ಲಿ ಸರಾಸರಿ ವಾತಾವರಣ ಸ್ಥಿತಿಗಳಿಗಾಗಿ ಬಳಸಲಾಗುವ ಪದ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಬಿ.ಆರ್.ಲಕ್ಷ್ಮಣರಾವ್, ಅವರು ಕನ್ನಡದ ಪ್ರೇಮಕವಿ, ನವೋದಯ, ನವ್ಯ, ಬಂಡಾಯ ಮೊದಲಾದ ಯಾವ ಗುಂಪಿಗೂ ಸೇರದ ಕವಿ, ಭಾವಗೀತೆಗಳ ಕವಿ. ಲಕ್ಷ್ಮಣರಾಯರ 'ಅಮ್ಮ, ನಿನ್ನ ಎದೆಯಾಳದಲ್ಲಿ',‘ಸುಬ್ಭಾಭಟ್ಟರ ಮಗಳೇ’,‘ನಾ ಚಿಕ್ಕವನಾಗಿದ್ದಾಗ ಅಪ್ಪ ಹೇಳುತ್ತಿದ್ದರು',' ಜಾಲಿಬಾರಿನಲ್ಲಿ ಕೂತ ಪೋಲಿ ಗೆಳೆಯರು' ಮುಂತಾದ ಕವಿತೆಗಳು ಜನಪ್ರಿಯವಾಗಿವೆ. ಈ ಪದ್ಯಗಳು, ಹಲವು ವೇಳೆ ಕೆ.ಎಸ್.ನ ಅವರ ‘ಶ್ಯಾನುಭೋಗರ ಮಗಳು’, ‘ರಾಯರು ಬಂದರು ಮಾವನ ಮನೆಗೆ’ ಪದ್ಯಗಳಿಗೆ ಸರಿಹೋಲಿಕೆಯಂತಿವೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಮೈಸೂರು ರಾಜ್ಯವು, ಅಥವಾ ಆಡುಮಾತಿನಲ್ಲಿ ಹಳೆಯ ಮೈಸೂರು, ೧೯೪೭ರಿಂದ ಭಾರತ ಪ್ರಭುತ್ವದಲ್ಲಿನ ಮತ್ತು ೧೯೫೬ರವರೆಗೆ ತದನಂತರದ ಭಾರತ ಗಣರಾಜ್ಯದಲ್ಲಿನ ರಾಜ್ಯವೊಂದು ಆಗಿ ಇದ್ದಿತು. ಮೈಸೂರು ಮಹಾಸಂಸ್ಥಾನವನ್ನು ನಾಮಕರಿಸಿ ಮೈಸೂರು ರಾಜ್ಯವನ್ನು ಸೃಷ್ಟಿಸಲಾಯಿತು; ಅದರೊಂದಿಗೆ ಮೈಸೂರಿನಿಂದ ಬೆಂಗಳೂರಿಗೆ ರಾಜಧಾನಿಯನ್ನು ಸ್ಥಳಾಂತರಿಸಲಾಯಿತು. ಭಾರತದ ಸಂಸತ್ತು ೧೯೫೬ರ ಭಾಷಾಶಾಸ್ತ್ರೀಯ ಆಧಾರದ ಮೇಲೆ ರಾಜ್ಯಗಳ ಮರುಸಂಘಟನೆ ಕಾಯಿದೆಯನ್ನು ಹೊರಡಿಸುವುದರೊಂದಿಗೆ ಭಾರತ ಗಣರಾಜ್ಯದಲ್ಲಿನ ಆಂಧ್ರ ರಾಜ್ಯ, ಬಾಂಬೆ ರಾಜ್ಯ, ಕೊಡಗು ರಾಜ್ಯ, ಹೈದರಾಬಾದ್ ರಾಜ್ಯ, ಮಡ್ರಾಸ್ ರಾಜ್ಯ, ಮತ್ತು ಹಲವು ಕ್ಷುಲ್ಲಕ ಪ್ರಾಂತ್ಯಗಳ ಸೀಮಾ ಪ್ರದೇಶಕೆಲವನ್ನು ಮೈಸೂರು ರಾಜ್ಯದೊಂದಿಗೆ ಸಂಯೋಜಿಸುವುದರೊಂದಿಗೆ ಮೈಸೂರು ರಾಜ್ಯವು ಏಕರೂಪ ಕನ್ನಡ ಭಾಷೆಯ ನಾಡಾಗಿ ಗಣನೀಯವಾಗಿ ವಿಸ್ತ್ರತಗೊಂಡಿತು.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.