The most-visited ಕನ್ನಡ Wikipedia articles, updated daily. Learn more...
"ಕಾರ್ಮಿಕ ಕಾನೂನು (ಅಥವಾ"ಲೇಬೊರ್", ಅಥವಾ"ಉದ್ಯೋಗ" ಕಾನೂನು) ಇದನ್ನು ಕಾನೂನಿನ ರಚನೆಗಳು ಎನ್ನಲಾಗುತ್ತದೆ.ಅಲ್ಲದೇ ಆಡಳಿತಾತ್ಮಕ ನಿಯಮಗಳು,ಅದಲ್ಲದೇ ಕಾನೂನು ಹಕ್ಕುಗಳ ವಿವರಣೆ ಮಾಡುವ,ನಿಬಂಧನೆಗಳುಕಾರ್ಯನಿರತ ಜನರು ಅಲ್ಲದೇ ಅವರ ಸಂಘಟನೆಗಳ ವಿವರವನ್ನೊಳಗೊಂಡಿದೆ. ಇದು ಟ್ರೇಡ್ ಯುನಿಯನ್,ಕಾರ್ಮಿಕ ಸಂಘಟನೆಗಳ ಸಂಬಂಧಿಸಿದ ಹಲವಾರು ಅಂಶಗಳನ್ನು,ಉದ್ಯೋಗದಾತರು ಮತ್ತು ಕಾರ್ಮಿಕರು ಇವರ ಬಗ್ಗೆ ವಿವರಗಳನ್ನು ತಿಳಿಸುತ್ತದೆ. ಕೆನಡಾದಲ್ಲಿ ಉದ್ಯೋಗಕ್ಕೆ ಸಂಬಂಧಿಸಿದ ಕಾನೂನುಗಳು ಒಟ್ಟುಗೂಡಿದ ಕೆಲಸದ ತಾಣಗಳ ಬಗ್ಗೆ ಹೇಳುತ್ತವೆಯೇ ವಿನಹ ವ್ಯಕ್ತಿಗಳ ವಿಷಯವನ್ನಲ್ಲ.
ಗೋಧಿ ಮೀಡಿಯಾ (Hindi pronunciation: [ˈɡoːd̪iː] ' ಮಡಿಲಲ್ಲಿ ಕುಳಿತ ಮಾಧ್ಯಮ ' ; ಭಾಷಾವೈಶಿಷ್ಟ್ಯದ ಸಮಾನಾರ್ಥಕ : 'ಲ್ಯಾಪ್ಡಾಗ್ ಮಾಧ್ಯಮ') ಎಂಬುದು ಹಿರಿಯ ಭಾರತೀಯ ಪತ್ರಕರ್ತ ರವೀಶ್ ಕುಮಾರ್ ಅವರು 2014 ರಿಂದ ಆಡಳಿತಾರೂಢ ಭಾರತೀಯ ಜನತಾ ಪಕ್ಷದ ಸರ್ಕಾರವನ್ನು ಬಹಿರಂಗವಾಗಿ ಬೆಂಬಲಿಸುತ್ತಿರುವ ಪಕ್ಷಪಾತದ ಭಾರತೀಯ ಮುದ್ರಣ ಮತ್ತು ಟಿವಿ ಸುದ್ದಿ ಮಾಧ್ಯಮವನ್ನು ವಿವರಿಸಲು ಸೃಷ್ಟಿಸಿದ ಮತ್ತು ಜನಪ್ರಿಯಗೊಳಿಸಿದ ಪದವಾಗಿದೆ. ಈ ಪದವು ಭಾರತದ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನ ಮೇಲಿನ ಶ್ಲೇಷೆಯಾಗಿದ್ದು, "ಆಡಳಿತ ಪಕ್ಷದ (ಅಂದರೆ ಬಿಜೆಪಿ) ಮುಖವಾಣಿಗಳು" ಎಂದು ಗ್ರಹಿಸಲಾದ ದೂರದರ್ಶನ ಮತ್ತು ಇತರ ಮಾಧ್ಯಮಗಳನ್ನು ಉಲ್ಲೇಖಿಸಲು ಸಾಮಾನ್ಯ ಮಾರ್ಗವಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಗ್ರಂಥ ಸಂಪಾದನೆ ಎಂದರೆ ಉಪಲಬ್ಧವಿರುವ ಪ್ರತಿಗಳ ಆಧಾರದ ಮೇಲೆ ಗ್ರಂಥದ ಮೂಲಪಾಠವೇನಿದ್ದಿರಬಹುದೆಂಬುದನ್ನು ಗುರುತಿಸುವ ಹಾಗೂ ಸಮಗ್ರ ಗ್ರಂಥದ ಬಗ್ಗೆ ವಿಮರ್ಶೆಯನ್ನು ನೀಡುವ ಕೆಲಸ (ಟೆಕ್ಸ್ಚುಅಲ್ ಕ್ರಿಟಿಸಿಸóಂ). ಕೈಬರೆಹದಲ್ಲಿ ಉಳಿದಿರುವ ಕೃತಿಗಳ ಸಂಪಾದನೆಯಲ್ಲೇ ಹೆಚ್ಚಿನ ಕ್ಲೇಶಗಳು ಕಂಡುಬರುತ್ತವಾಗಿ ಅವನ್ನೇ ಗಮನದಲ್ಲಿಟ್ಟುಕೊಂಡು ವಿಷವನ್ನಿಲ್ಲಿ ವಿಮರ್ಶಿಸಲಾಗಿದೆ. ಹಿಂದಿನ ಕಾಲದಲ್ಲಿ ಕವಿಗಳು, ಜ್ಞಾನಿಗಳು, ಸಂತರು ತಾವು ಲೋಕಕ್ಕೆ ಹೇಳಬಯಸಿದ ವಿಚಾರಗಳನ್ನು ಭೂರ್ಜಪತ್ರಗಳ ಮೇಲೂ ತಾಳೆಗರಿಗಳ ಮೇಲೂ ಬರೆದಿಡುತ್ತಿದ್ದರು.
ಡಾ. ಕಿಷನ್ ಬಾಬುರಾವ್ ಹಜಾರೆ, ಜನಪ್ರಿಯವಾಗಿ ಅಣ್ಣಾ ಹಜಾರೆ (ಜನನ: ಜೂನ್ ೧೫, ೧೯೩೮), ಭಾರತದ ಮಹಾರಾಷ್ಟ್ರ ರಾಜ್ಯದ ಅಹ್ಮದ್ನಗರ ಜಿಲ್ಲೆಯ ರಾಲೇಗನ್ ಸಿದ್ಧಿ ಎಂಬ ಹಳ್ಳಿಯ ಅಭಿವೃದ್ಧಿಗಾಗಿ ನೀಡಿರುವ ಕಾಣಿಕೆಗಳಿಗಾಗಿ ಮತ್ತು ಅದನ್ನು ಒಂದು ಮಾದರಿ ಹಳ್ಳಿಯಾಗಿ ಗುರುತಿಸಲು ಮಾಡಿರುವ ಪ್ರಯತ್ನಕ್ಕಾಗಿ ೧೯೯೨ರಲ್ಲಿ ಭಾರತ ಸರ್ಕಾರದಿಂದ ಪದ್ಮ ಭೂಷಣ ಪ್ರಶಸ್ತಿ ಗಳಿಸಿರುವ ಒಬ್ಬ ಭಾರತೀಯ ಸಾಮಾಜಿಕ ಕಾರ್ಯಕರ್ತ. ಸಾರ್ವಜನಿಕ ಕಛೇರಿಗಳಲ್ಲಿನ ಭ್ರಷ್ಟಾಚಾರ ತಡೆಗಾಗಿ ಲೋಕಪಾಲ ಕಾಯ್ದೆಯನ್ನು ಜಾರಿಗೊಳಿಸುವ ಕುರಿತು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಲು ೨೦೧೧ರ ಎಪ್ರಿಲ್ ೫ರಿಂದ ಅವರು ಆಮರಣಾಂತ ಉಪವಾಸ ಕೈಗೊಂಡರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ನಾ. ಡಿಸೋಜ (೬ನೇ ಜೂನ್ ೧೯೩೭ - ೫ನೇ ಜನವರಿ ೨೦೨೫) ಪರಿಸರ ಕಾಳಜಿಯುಳ್ಳ ಮಹತ್ವದ ಕಥೆಗಾರರೆನಿಸಿದ್ದು ಕನ್ನಡ ಸಾಹಿತ್ಯ ಲೋಕದಲ್ಲಿ ಮಕ್ಕಳ ಸಾಹಿತ್ಯವನ್ನು ಒಳಗೊಂಡಂತೆ ಅಪಾರವಾದ ಕೃಷಿ ನಡೆಸಿದ್ದಾರೆ.ತಮ್ಮೆಲ್ಲ ಕಥೆ, ಕಾದಂಬರಿಗಳ ಮೂಲಕ ಪರಿಸರ ಸಂರಕ್ಷಣೆಯ ಬಗ್ಗೆ ಎಚ್ಚರಿಸುತ್ತ ಬಂದಿದ್ದು, ಪರಿಸರ ನಾಶವೇ ಮಾನವ ಜನಾಂಗದ ವಿನಾಶದ ಮೂಲ, ಪರಿಸರವನ್ನುಳಿಸಿಕೊಂಡು ಬಾಳಿದರೆ ಮಾನವನ ಬಾಳೂ ಸಂತುಷ್ಟ ಎಂಬುದನ್ನು ಮತ್ತೆ ಮತ್ತೆ ಪ್ರಸ್ತಾಪಿಸುತ್ತಾರೆ, ಸುಮಾರು ಐದು ದಶಕಗಳಿಂದಲೂ ಕನ್ನಡ ಸಾಹಿತ್ಯದ ಎಲ್ಲ ಪ್ರಕಾರಗಳಲ್ಲಿಯೂ ಕೃತಿ ರಚಿಸುತ್ತ ಬಂದಿರುವ ನಾರ್ಬರ್ಟ್ ಡಿಸೋಜ.
ಅವಗೆಂಪು ವಿಕಿರಣಗಳನ್ನು ಹೀರಿಕೊಳ್ಳುವ ಮತ್ತು ಅದನ್ನು ಹೊರಹಾಕುವ ವಿವಿಧ ಅನಿಲಗಳು ವಾತಾವರಣವೊಂದರಲ್ಲಿ ಸಂಗ್ರಹವಾಗುವ ಕಾರಣದಿಂದ ಗ್ರಹ ಅಥವಾ ಉಪಗ್ರಹವೊಂದರ ಮೇಲ್ಮೈ ಬಿಸಿಯಾಗುವುದನ್ನು ಹಸಿರುಮನೆ ಪರಿಣಾಮ ಎಂದು ಕರೆಯುತ್ತಾರೆ. ಈ ರೀತಿಯಾಗಿ ಹಸಿರುಮನೆ ಅನಿಲಗಳು ಬಿಸಿಯನ್ನು ಮೇಲ್ಮೈ,-ವಾಯುಮಂಡಲ ವ್ಯವಸ್ಥೆಯೊಳಗಡೆ ಬಂಧಿಸಿಡುತ್ತವೆ. ಈ ಕಾರ್ಯವಿಧಾನವು ವಾಸ್ತವಿಕ ಹಸಿರುಮನೆಯೊಂದರದ್ದಕ್ಕಿಂತ ಮೂಲಭೂತವಾಗಿ ಭಿನ್ನವಾಗಿದ್ದು, ಅದು ಬಿಸಿ ಗಾಳಿಯನ್ನು ವ್ಯವಸ್ಥೆಯನ್ನು ಒಳಗೇ ಪ್ರತ್ಯೇಕಿಸುವ ಮೂಲಕ ಕಾರ್ಯನಿರ್ವಹಿಸುವುದರಿಂದ, ಲಂಬಗಮನದಿಂದ ತಾಪವು ನಷ್ಟವಾಗುವುದಿಲ್ಲ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ತೋಡೂರ್ ಮಡಾಬುಸಿ ಕೃಷ್ಣ (ಜನನ 22 ಜನವರಿ 1976) ಕರ್ನಾಟಕ ಗಾಯಕ, ಬರಹಗಾರ, ಸಾಮಾಜಿಕ ಕಾರ್ಯಕರ್ತ ಮತ್ತು ಲೇಖಕ. ಗಾಯಕನಾಗಿ, ಅವರು ತಮ್ಮ ಸಂಗೀತ ಕಚೇರಿಗಳ ಶೈಲಿ ಮತ್ತು ವಸ್ತು ಎರಡರಲ್ಲೂ ಆವಿಷ್ಕಾರಗಳನ್ನು ಮಾಡಿದ್ದಾರೆ,. ಸಾಮಾಜಿಕ ಕಾರ್ಯಕರ್ತರಾಗಿ, ಅವರು ಪರಿಸರ, ಜಾತಿ ವ್ಯವಸ್ಥೆ, ಕೋಮುವಾದ, ಧಾರ್ಮಿಕ ಸುಧಾರಣೆ, ಸಾಮಾಜಿಕ ಆಚರಣೆಗಳ ಸುಧಾರಣೆ ಮತ್ತು ಮುಂತಾದ ಹಲವಾರು ಕಾರಣಗಳನ್ನು ಸಾಧಿಸಿದ್ದಾರೆ.
ಶ್ಯಾಮ್ ಪ್ರಸಾದ್ ಮುಖರ್ಜಿ (ಜುಲೈ ೬, ೧೯೦೧ - ಜೂನ್ ೨೩, ೧೯೫೩) ಭಾರತೀಯ ಜನಸಂಘ ರಾಜಕೀಯ ಪಕ್ಷದ ಸ್ಥಾಪಕ. ಶ್ಯಾಮ ಪ್ರಸಾದ್ ಮುಖರ್ಜಿ (6 ಜುಲೈ 1901 - 23 ಜೂನ್ 1953) ಒಬ್ಬ ಭಾರತೀಯ ರಾಜಕಾರಣಿ, ನ್ಯಾಯವಾದಿ ಮತ್ತು ಶಿಕ್ಷಣತಜ್ಞರಾಗಿದ್ದರು, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರ ಸಚಿವ ಸಂಪುಟದಲ್ಲಿ "ಕೈಗಾರಿಕೋದ್ಯಮ ಮತ್ತು ಸರಬರಾಜು(ವಾಣಿಜ್ಯೋದ್ಯಮ) ಸಚಿವರಾಗಿ ಕಾರ್ಯನಿರ್ವಹಿಸಿದರು. ಅವರು ಕಾಂಗ್ರೆಸ್ ಪಕ್ಷವಲ್ಲದಿದ್ದರೂ, ಅವರ ಪ್ರತಿಭೆಯನ್ನು ಪರಿಗಣಿಸಿ, ಅವರನ್ನು ನೆಹರು ಮಂತ್ರಿಮಂಡಲಕ್ಕೆ ಸೇರಿಸಿಕೊಂಡಿದ್ದರು.
ಟೆಂಪ್ಲೇಟು:Launching/Proton (Khrunichev) ಗ್ಲೋನಾಸ್ (Russian: ГЛОНАСС, IPA: [ɡlɐˈnas]) ರೇಡಿಯೊ ಆಧಾರಿತಉಪಗ್ರಹ ಸಂಚಾರ ನಿರ್ದೇಶಿಸುವ ವ್ಯವಸ್ಥೆಯಾಗಿದ್ದು,ರಷ್ಯಾದ ಬಾಹ್ಯಾಕಾಶ ಶಕ್ತಿಗಳಿಂದ ರಷ್ಯನ್ ಸರ್ಕಾರಕ್ಕೆ ನಿರ್ವಹಿಸಲಾಗುತ್ತದೆ. ಅಮೆರಿಕದ ಜಾಗತಿಕ ಸ್ಥಾನಿಕವ್ಯವಸ್ಥೆ, ಚೀನಾದ ಕಂಪ್ಯಾಸ್ ಸಂಚಾರ ನಿರ್ದೇಶನ ವ್ಯವಸ್ಥೆ ಮತ್ತು ಐರೋಪ್ಯ ಒಕ್ಕೂಟದ ಯೋಜಿತ ಗೆಲಿಲಿಯೊ ಸ್ಥಾನಿಕ ವ್ಯವಸ್ಥೆ ಮತ್ತು ಭಾರತದ ಪ್ರಾದೇಶಿಕ ಸಂಚಾರ ನಿರ್ದೇಶನ ಉಪಗ್ರಹ ವ್ಯವಸ್ಥೆಗೆ ಪರ್ಯಾಯ ಮತ್ತು ಪೂರಕವಾಗಿದೆ. ಗ್ಲೋನಾಸ್ ಕುರಿತ ಅಭಿವೃದ್ಧಿಯು ೧೯೭೬ರಲ್ಲಿ ಸೋವಿಯಟ್ ಒಕ್ಕೂಟದಲ್ಲಿ ಆರಂಭವಾಯಿತು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
"'ಕನ್ನಡ ಕಾವ್ಯ"' : - ಭಾರತದ ದ್ರಾವಿಡ ಭಾಷೆಗಳಲ್ಲಿ ಒಂದಾದ, ಗತ ವೈಭವದ ಇತಿಹಾಸವುಳ್ಳ ಭಾಷೆಯಾದ ಕನ್ನಡ ಭಾಷೆ ಭಾರತೀಯ ಸಾಹಿತ್ಯ ಲೋಕಕ್ಕೆ ಬಹಳ ಹಿಂದಿನಿಂದಲೂ ಸರ್ವ ಶ್ರೇಷ್ಠವಾದ ಅನೇಕ ಕೊಡುಗೆಗಳನ್ನು ನೀಡುತ್ತಾ ಬಂದಿದೆ. ಆಧುನಿಕ ಸಾಹಿತ್ಯ ಕಾಲ ಘಟ್ಟದಲ್ಲಿಯೂ ಭಾರತದ ಸಾಹಿತ್ಯ ಲೋಕದ ಮಹೋನ್ನತ ಪ್ರಶಸ್ತಿಯಾದ 'ಜ್ಞಾನಪೀಠ' ಪ್ರಶಸ್ತಿಯನ್ನು ಅತೀ ಹೆಚ್ಚಿನ ಸಂಖ್ಯೆಯಲ್ಲಿ ಪಡೆದುಕೊಂಡ ಒಂದು ರಾಜ್ಯದ ಭಾಷೆಯಾಗಿದೆ ಕನ್ನಡ. ತನ್ನ ಕಾವ್ಯಗಳಲ್ಲಿ 'ಕನ್ನಡ ಭೂಮಿಯಲ್ಲಿ ಮತ್ತೆ ಕನಿಷ್ಠ ಮರಿ ದುಂಬಿಯಾಗಿಯಾದರೂ ಹುಟ್ಟಬೇಕು' ಎಂದು ಹಾಡಿದ ಆದಿಕವಿ ಪಂಪನ ಕಾಲದಿಂದ ಹಿಡಿದು ಆಧುನಿಕ ಕನ್ನಡ ಕವಿಗಳಾದ ರಸಋಷಿ ಕುವೆಂಪು, ದ.ರಾ.ಬೇಂದ್ರೆಯವರ ವರೆಗೂ ಕನ್ನಡ ಕಾವ್ಯವು ಅನೇಕ ಘಟ್ಟಗಳನ್ನು ಕಾಣುತ್ತ ಹಾಗು ಅವುಗಳನ್ನು ತನ್ನೊಳಗೆ ಸಮ್ಮಿಳಿಸಿಕೊಳ್ಳುತ್ತಾ ಬೆಳೆದು ನಿಂತ ಬಗೆಯೇ ಸಂತೋಷದಾಯಕವಾಗಿದೆ.
ವಾಯುಭಾರಮಾಪಕವು ಭೂಮಿಯನ್ನು ಆವರಿಸಿರುವ ವಾಯುಮಂಡಲ (ಅಟ್ಮಾಸ್ಫಿಯರ್) ಪ್ರಯುಕ್ತಿಸುವ ಸಂಮರ್ದವನ್ನು (ಪ್ರೆಷರ್) ಅಳೆಯುವ ನಿರಪೇಕ್ಷ ಮಾಪಕ (ಬ್ಯಾರೊಮೀಟರ್). ವಾಯುವಿಗೆ ತೂಕ (ವೇಟ್) ಇರುವುದರಿಂದ ಈ ಸಂಮರ್ದ ಉದ್ಭವಿಸುತ್ತದೆ, ಇದನ್ನು ಮೊತ್ತಮೊದಲು ಪ್ರಾಯೋಗಿಕವಾಗಿ ಸ್ಥಿರೀಕರಿಸಿದಾತ (1643) ಇಟಲಿಯ ಭೌತವಿಜ್ಞಾನಿ ಇವ್ಯಾಂಜಲಿಸ್ಟ್ ಟೋರಿಚೆಲ್ಲಿ (1608-47). ಜರ್ಮನಿಯ ಭೌತವಿಜ್ಞಾನಿ ಆಟೋ ಫಾನ್ ಗ್ಯುರೆಕ್ (1602-86) ಕೂಡ ಈ ಬಗ್ಗೆ ಪ್ರಯೋಗಗಳನ್ನು ನಡೆಸಿ (1650) ಟೋರಿಚೆಲ್ಲಿಯ ಅಭಿಪ್ರಾಯವನ್ನು ಪುಷ್ಟೀಕರಿಸಿದ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಭಾರತೀಯ ಜಾತಿ ಪದ್ದತಿ ಯು ಸಾಮಾಜಿಕ ಶ್ರೇಣೀಕರಣವನ್ನು ವಿವರಿಸುತ್ತದೆ.ಅದಲ್ಲದೇ ಸಾಮಾಜಿಕ ನಿರ್ಭಂಧಗಳಡಿ ಭಾರತ ಉಪಖಂಡದ ಸಾವಿರಾರು ಪಂಗಡದ ಪ್ರವರ್ಗಗಳನ್ನು, ವಂಶವಾಹಿನಿಗಳ ಸಮೂಹವನ್ನು ವ್ಯಾಖ್ಯಾನಿಸುತ್ತದೆ.ಇದನ್ನೇ ಜಾತಿ ಗಳು ಅಥವಾ ಕೋಮು ಗಳೆಂದು ಹೇಳಲಾಗುತ್ತದೆ. ಈ ಜಾತಿಯಲ್ಲಿಯೇ ಅನ್ಯಗೋತ್ರ ಗುಂಪುಗಳ ಅಸ್ತಿತ್ವ ಇದೆ,ಇದನ್ನು ಗೋತ್ರಗಳು,ವಂಶವಾಹಿನಿ ಅಥವಾ ಕುಟುಂಬದ ಕುಲಗೋತ್ರವನ್ನು ವೈಯಕ್ತಿಕ ನೆಲೆಯಲ್ಲಿ ಗುರುತಿಸಲಾಗುತ್ತದೆ. ಹಲವಾರು ಉಪ-ಜಾತಿಗಳಲ್ಲಿ ಶಾಕಾದ್ವಿಪಿ,ಕೂಡಾ ಒಂದು,ಒಂದೇ ಗೋತ್ರದಲ್ಲಿ ವಿವಾಹ ಅನುಮತಿಸಿದ್ದರೂ ಅದನ್ನು ಪರ್ಯಾಯ ನಿರ್ಭಂದಿತ ಸಗೋತ್ರ ವಿವಾಹಕ್ಕೆ ಪರಿಗಣಿಸಲಾಗುತ್ತದೆ.(ಉದಾಹರಣೆಗೆ ಅಡ್ಡಹೆಸರುಗಳು ಒಂದೇ ಆಗಿದ್ದರೆ ಅಲ್ಲಿ ವಿವಾಹ ನಿಷಿದ್ದದ ನಿಯಮ ಉಂಟು) ಹಿಂದುತ್ವದೊಂದಿಗೆ ಗುರುತಿಸಿಕೊಂಡಿರುವ ಇತರ ಮುಸ್ಲಿಮರ ಕೆಲವು ಗುಂಪುಗಳು ಮತ್ತು ಕ್ರಿಶ್ಚನ್ ರು ಕೂಡಾ ಇದೇ ತೆರನಾದ ಗುಂಪು ಪ್ರಭೇದವನ್ನು ಹೊಂದಿರುವುದು ಭಾರತದ ಉಪಖಂಡದಲ್ಲಿ ಕಾಣುತ್ತದೆ.
ವೈಯಕ್ತಿಕ ಮಾಹಿತಿ ಜನನ ದುರ್ಗಿ ಟುಡು (1958-06-20) 20 June 1958ಉಪರ್ಬೇಡಾ, ಒಡಿಶಾ, ಭಾರತ ರಾಜಕೀಯ ಪಕ್ಷ ಭಾರತೀಯ ಜನತಾ ಪಕ್ಷ ಸಂಗಾತಿ(ಗಳು) ಮಕ್ಕಳು * ಲಕ್ಷ್ಮಣ್ ಮುರ್ಮು (ಮರಣ: 2009) ಸಿಪುನ್ ಮುರ್ಮು (ಮರಣ: 2012) ಇತಿಶ್ರೀ ಮುರ್ಮು ವಾಸಸ್ಥಾನ ಟೆಂಪ್ಲೇಟು:Bulletedlist ಅಭ್ಯಸಿಸಿದ ವಿದ್ಯಾಪೀಠ ರಾಮಾ ದೇವಿ ಮಹಿಳಾ ವಿಶ್ವವಿದ್ಯಾಲಯ (ಬಿಎ) ವೃತ್ತಿ ರಾಜಕಾರಣಿ ಉದ್ಯೋಗ ಶಿಕ್ಷಕಿ ಸಹಿ ಜಾಲತಾಣ presidentofindia.nic.in ಮಿಲಿಟರಿ ಸೇವೆ ಪ್ರಶಸ್ತಿಗಳು ಕೆಳಗೆ ನೋಡಿ ದ್ರೌಪದಿ ಮುರ್ಮು (ಜನನ ೨೦ ಜೂನ್ ೧೯೫೮) ಒಬ್ಬ ಭಾರತೀಯ ರಾಜಕಾರಣಿ, ಇವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾಗಿದ್ದಾರೆ. ಅವರು ಭಾರತೀಯ ಜನತಾ ಪಕ್ಷದ (ಬಿಜೆಪಿ) ಸದಸ್ಯರಾಗಿದ್ದರು. ಅವರು ಭಾರತದ ರಾಷ್ಟ್ರಪತಿಯಾಗಿ ಆಯ್ಕೆಯಾದ ಸ್ಥಳೀಯ, ಪರಿಶಿಷ್ಟ ಬುಡಕಟ್ಟು ಸಮುದಾಯಕ್ಕೆ ಸೇರಿದ ಮೊದಲ ವ್ಯಕ್ತಿ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್ಡಿ, ಎಮ್ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.