The most-visited ಕನ್ನಡ Wikipedia articles, updated daily. Learn more...
ವಿಶ್ವ ಪರಿಸರ ದಿನವನ್ನು ( ಡಬ್ಲ್ಯೂಇಡಿ ) ವಾರ್ಷಿಕವಾಗಿ ಜೂನ್ 5 ರಂದು ಆಚರಿಸಲಾಗುತ್ತದೆ ಮತ್ತು ಪರಿಸರ ಸಂರಕ್ಷಣೆಗಾಗಿ ಜಾಗೃತಿ ಮತ್ತು ಕ್ರಮವನ್ನು ಉತ್ತೇಜಿಸುತ್ತದೆ. ಇದು ಅನೇಕ ಸರ್ಕಾರೇತರ ಸಂಸ್ಥೆಗಳು, ವ್ಯವಹಾರಗಳು, ಸರ್ಕಾರಿ ಘಟಕಗಳಿಂದ ಬೆಂಬಲಿತವಾಗಿದೆ ಮತ್ತು ಪರಿಸರವನ್ನು ಬೆಂಬಲಿಸುವ ಪ್ರಾಥಮಿಕ ವಿಶ್ವಸಂಸ್ಥೆಯ ಎಲ್ಲರಿಗೂ ತಲುಪುವ ಜಾಗೃತಿ ದಿನವನ್ನು ಪ್ರತಿನಿಧಿಸುತ್ತದೆ. ಮೊದಲ ಬಾರಿಗೆ 1973 ರಲ್ಲಿ ಆಯೋಜಿಸಲಾಯಿತು, ಇದು ಸಮುದ್ರ ಮಾಲಿನ್ಯ, ಅಧಿಕ ಜನಸಂಖ್ಯೆ, ಜಾಗತಿಕ ತಾಪಮಾನ ಏರಿಕೆ, ಸುಸ್ಥಿರ ಅಭಿವೃದ್ಧಿ ಮತ್ತು ವನ್ಯಜೀವಿ ಅಪರಾಧಗಳಂತಹ ಪರಿಸರ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶಕುನ ಎಂದರೆ ಹಲವುವೇಳೆ ಬದಲಾವಣೆಯ ಆಗಮನವನ್ನು ಸೂಚಿಸುವ, ಭವಿಷ್ಯವನ್ನು ನುಡಿಯುತ್ತದೆಂದು ನಂಬಲಾದ ಒಂದು ವಿದ್ಯಮಾನ. ಶಕುನಗಳು ತಮ್ಮ ದೇವತೆಗಳಿಂದ ದೈವಿಕ ಸಂದೇಶವನ್ನು ತರುತ್ತವೆ ಎಂದು ಪ್ರಾಚೀನ ಕಾಲದಲ್ಲಿ ಜನರು ನಂಬಿದ್ದರು. ಈ ಶಕುನಗಳಲ್ಲಿ ನೈಸರ್ಗಿಕ ವಿದ್ಯಮಾನಗಳು, ಉದಾಹರಣೆಗೆ ಗ್ರಹಣ, ಪ್ರಾಣಿಗಳು ಮತ್ತು ಮನುಷ್ಯರ ಅಸಹಜ ಜನನಗಳು ಮತ್ತು ಬಲಿಗೆ ಹೊರಟಿರುವ ಬಲಿಯ ಕುರಿಮರಿಯ ವರ್ತನೆ ಸೇರಿವೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ವಿಜಯದಾಸ(೧೬೮೨– ೧೭೫೫) ೧೮ ನೇ ಶತಮಾನದಲ್ಲಿ ಕರ್ನಾಟಕದ, ಹರಿದಾಸ ಸಂಪ್ರದಾಯದ ಪ್ರಮುಖ ಸಂತ ಮತ್ತು ದ್ವೈತ ತತ್ವಶಾಸ್ತ್ರದ ಸಂಪ್ರದಾಯದ ವಿದ್ವಾಂಸ. ಸಮಕಾಲೀನ ಹರಿದಾಸ ಸಂತರಾದ ಗೋಪಾಲ ದಾಸ, ಹೆಳವನಕಟ್ಟೆ ಗಿರಿಯಮ್ಮ, ಜಗನ್ನಾಥ ದಾಸ ಮತ್ತು ಪ್ರಸನ್ನ ವೆಂಕಟ ದಾಸರೊಂದಿಗೆ, ಅವರು ಕನ್ನಡ ಭಾಷೆಯಲ್ಲಿ ಬರೆದ ದೇವರನಾಮ ಎಂಬ ಭಕ್ತಿಗೀತೆಗಳ ಮೂಲಕ ದಕ್ಷಿಣ ಭಾರತದಾದ್ಯಂತ ಮಧ್ವಾಚಾರ್ಯರ ತತ್ವಶಾಸ್ತ್ರದ ಸದ್ಗುಣಗಳನ್ನು ಪ್ರಚಾರ ಮಾಡಿದರು.ಕನ್ನಡ ವೈಷ್ಣವ ಭಕ್ತಿ ಸಾಹಿತ್ಯದ ಅವಿಭಾಜ್ಯ ಅಂಗವಾಗಿದ್ದು, ಹಿಂದೂ ದೇವರು ವಿಷ್ಣು ಮತ್ತು ಇತರ ದೇವತೆಗಳನ್ನು ಸ್ತುತಿಸುವ ಈ ಸಂಯೋಜನೆಗಳನ್ನು ದಾಸರ ಪದಗಳು (ದಾಸರ ಸಂಯೋಜನೆಗಳು) ಎಂದು ಕರೆಯಲಾಗುತ್ತದೆ. ಅವರು ತಮ್ಮ ಸಂಯೋಜನೆಗಳ ಮೂಲಕ ಕರ್ನಾಟಕ ಸಂಗೀತ ಮತ್ತು ಹಿಂದೂಸ್ತಾನಿ ಸಂಗೀತ ಎರಡನ್ನೂ ಪ್ರಭಾವಿಸಿದ್ದಾರೆ.
ಕೈಮೀರ ಗ್ರೀಕ್ ಪುರಾಣಗಳಲ್ಲಿ ಉಲ್ಲೇಖಿತವಾಗಿರುವ ಒಂದು ವಿಚಿತ್ರ ಕಾಲ್ಪನಿಕ ಹೆಣ್ಣು ಪ್ರಾಣಿ; ಸಿಂಹದ ತಲೆ, ಆಡಿನ ದೇಹ, ಹಾವಿನ ಬಾಲ ಮುಂತಾಗಿ ವಿಭಿನ್ನ ಪ್ರಾಣಿಗಳ ದೇಹಭಾಗಗಳನ್ನು ಒಟ್ಟಾಗಿಸಿ ಹೊಸೆದಿರುವ ಒಂದು ವಿಚಿತ್ರ ರೂಪವುಳ್ಳದ್ದು. ಇದು ನಿಃಶ್ವಸಿಸುವಾಗ ಬೆಂಕಿಯ ಜ್ವಾಲೆಯನ್ನೇ ಉಗುಳುತ್ತಿತ್ತಂತೆ. ಈ ಪ್ರಾಣಿ ಏಷ್ಯಮೈನರಿನ ಪ್ರಾಚೀನ ವಿಭಾಗಗಳಾದ ಲಿಶಿಯ ಹಾಗೂ ಕೇರಿಯಗಳನ್ನು ಧ್ವಂಸ ಮಾಡಿತೆಂದೂ ಗ್ರೀಕ್ ವೀರನಾದ ಬೆಲೆರೊಫಾನ್ ಇದನ್ನು ಸಂಹರಿಸಿದನೆಂದೂ ಕತೆ ಮುಂದುವರಿಯುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಹಿಂದೂ ಧರ್ಮ ದಲ್ಲಿ, ಸೂರ್ಯದೇವ (ದೇವನಾಗರಿ : सूर्य, ಸೂರ್ಯ ("ಅತ್ಯುಚ್ಚ ಬೆಳಕು "); Malay: [Suria] Error: {{Lang}}: text has italic markup (help); ಥಾಯ್:พระอาทิตย์ Suraya, Suriya or Phra Athit) ಮುಖ್ಯ ಸೂರ್ಯನ ದೇವತೆ , ಆದಿತ್ಯ ರಲ್ಲಿ ಒಬ್ಬ ಕಶ್ಯಪ ನ ಮಗ ಮತ್ತು ಅವನ ಹೆಂಡತಿಯರಲ್ಲಿ ಒಬ್ಬಳು, ಅದಿತಿ ; ಇಂದ್ರ ನ ಪತ್ನಿ ; ಅಥವಾ ದಯುಸ್ ಪಿತರ್ (ಅವತರಿಣಿಕೆಯ ಆಧಾರದನ್ವಯ ). ಸಾಮಾನ್ಯವಾಗಿ ಸೂರ್ಯ ನನ್ನು, ಸನ್ಎಂದು ಕರೆಯಲ್ಪಡುತ್ತಾರೆ. ಸೂರ್ಯನಿಗೆ ಕೂದಲುಗಳಿದ್ದು, ಚಿನ್ನ ದ ತೊಳುಗಳಿವೆ.
ಪರಿಸರ ರಕ್ಷಣೆಯು ವ್ಯಕ್ತಿಗಳು, ಸಂಘಟನೆಗಳು ಮತ್ತು ಸರ್ಕಾರಗಳಿಂದ ನೈಸರ್ಗಿಕ ಪರಿಸರವನ್ನು ರಕ್ಷಿಸುವ ಅಭ್ಯಾಸವಾಗಿದೆ. ಅದರ ಉದ್ದೇಶಗಳು ನೈಸರ್ಗಿಕ ಸಂಪನ್ಮೂಲಗಳನ್ನು ಮತ್ತು ಅಸ್ತಿತ್ವದಲ್ಲಿರುವ ನೈಸರ್ಗಿಕ ಪರಿಸರವನ್ನು ಸಂರಕ್ಷಿಸುವುದಾಗಿದೆ ಮತ್ತು ಸಾಧ್ಯವಾದಲ್ಲಿ, ಹಾನಿ ಮತ್ತು ರಿವರ್ಸ್ ಪ್ರವೃತ್ತಿಯನ್ನು ಸರಿಪಡಿಸುವುದಾಗಿದೆ. ಅತಿಯಾದ ಅನುಭೊಗದ ಒತ್ತಡ, ಜನಸಂಖ್ಯಾ ಬೆಳವಣಿಗೆ ಮತ್ತು ತಂತ್ರಜ್ಞಾನದ ಕಾರಣದಿಂದ, ಜೈವಿಕ ಪರಿಸರವು ಕುಸಿಯುತ್ತಿದೆ ಕೆಲವೊಮ್ಮೆ ಶಾಶ್ವತವಾಗಿ ನಾಶವಾಗುತ್ತಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಶಿವ (ಮಂಗಳಕರನು) ಹಾಗೂ ಮಹಾದೇವ (ದೇವರುಗಳಿಗೆ ದೇವರು) ಶಿವನು ಹಿಂದೂ ಧರ್ಮದ ಪ್ರಮುಖ ದೇವರು.. ಶಿವನು ತ್ರಿಮೂರ್ತಿಗಳಲ್ಲಿ ಒಬ್ಬನ್ನು, ಇತರರು ಬ್ರಹ್ಮ ಮತ್ತು ವಿಷ್ಣು, ಶೈವ ಸಂಪ್ರದಾಯಲ್ಲಿ ಶಿವನೂ ಸರ್ವೋಚ್ಚನಾಗಿದ್ದಾನೆ, ಈತನು ಜಗತ್ತಿನ ಸೃಷ್ಟಿ, ರಕ್ಷಣೆ, ಮತ್ತು ಪರಿವರ್ತನೆಯ ದೈವ. , ಆದಿಶಕ್ತಿ ಕೇಂದ್ರಿತ ಶಕ್ತ ಸಂಪ್ರದಾಯದಲ್ಲಿ ಶಿವನು ದೇವಿಯ ಪತಿ ಮತ್ತು ಸರಿಸಮನನಾಗಿದ್ದಾನೆ., ಸ್ಮಾರ್ತ ಸಂಪ್ರದಾಯದ ಐದು ಪ್ರಮುಖ ದೇವರಲ್ಲಿ ಶಿವನು ಒಬ್ಬನು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
2014 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಲ್ಲಿ ಪ್ರಾರಂಭವಾದ ನಂತರ 2015 ರಿಂದ ವಾರ್ಷಿಕವಾಗಿ ಜೂನ್ 21 ರಂದು ವಿಶ್ವದಾದ್ಯಂತ ಯೋಗದ ಅಂತರರಾಷ್ಟ್ರೀಯ ದಿನವನ್ನು ಆಚರಿಸಲಾಗುತ್ತದೆ ಯೋಗವು ಪ್ರಾಚೀನ ಭಾರತದಲ್ಲಿ ಹುಟ್ಟಿಕೊಂಡ ದೈಹಿಕ, ಮಾನಸಿಕ ಮತ್ತು ಆಧ್ಯಾತ್ಮಿಕ ಅಭ್ಯಾಸವಾಗಿದೆ. ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು 2014 ರಲ್ಲಿ ತಮ್ಮ ಯುಎನ್ ಭಾಷಣದಲ್ಲಿ ಜೂನ್ 21 ರ ದಿನಾಂಕವನ್ನು ಸೂಚಿಸಿದ್ದರು. ಏಕೆಂದರೆ ಇದು ಉತ್ತರ ಗೋಳಾರ್ಧದಲ್ಲಿ ವರ್ಷದ ಅತಿ ಉದ್ದದ ದಿನವಾಗಿದೆ ಮತ್ತು ಪ್ರಪಂಚದ ಅನೇಕ ಭಾಗಗಳಲ್ಲಿ ವಿಶೇಷ ಪ್ರಾಮುಖ್ಯತೆಯನ್ನು ಹಂಚಿಕೊಳ್ಳುತ್ತದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಕರ್ನಾಟಕ ಲೋಕೋಪಯೋಗಿ ಇಲಾಖೆ (ಇದನ್ನು ಕರ್ನಾಟಕ ಲೋಕೋಪಯೋಗಿ, ಬಂದರುಗಳು ಮತ್ತು ಒಳನಾಡಿನ ಜಲ ಸಾರಿಗೆ ಇಲಾಖೆ ಅಥವಾ ಕೆಪಿಡಬ್ಲ್ಯುಡಿ ಎಂದೂ ಕರೆಯುತ್ತಾರೆ ) ಕರ್ನಾಟಕ ಸರ್ಕಾರಿ ಸಂಸ್ಥೆಯಾಗಿದ್ದು, ಭಾರತದ ಕರ್ನಾಟಕ ರಾಜ್ಯದಲ್ಲಿನ ಲೋಕೋಪಯೋಗಿ ಕಾರ್ಯಗಳ ಉಸ್ತುವಾರಿ ವಹಿಸಿಕೊಂಡಿದೆ. ಕರ್ನಾಟಕದ ಸರ್ಕಾರಿ ಇಲಾಖೆಗಳು ಮತ್ತು ಸಾರ್ವಜನಿಕ ಸಂಸ್ಥೆಗಳಿಗೆ ಕಟ್ಟಡಗಳ ನಿರ್ಮಾಣ ಮತ್ತು ನಿರ್ವಹಣೆಯ ಜವಾಬ್ದಾರಿಯನ್ನು ಮತ್ತು ರಾಷ್ಟ್ರೀಯ ಹೆದ್ದಾರಿಗಳು, ರಾಜ್ಯ ಹೆದ್ದಾರಿಗಳು ಮತ್ತು ಪ್ರಮುಖ ಜಿಲ್ಲಾ ರಸ್ತೆಗಳು ಸೇರಿದಂತೆ ರಸ್ತೆ ಕಾಮಗಾರಿಗಳ ನಿರ್ವಹಣೆಯನ್ನು ಇದು ವಹಿಸಿಕೊಂಡಿದೆ.
ಕೃಷ್ಣ ಬೈರೆ ಗೌಡ (ಜನನ 4 ಏಪ್ರಿಲ್ 1973) ಒಬ್ಬ ಭಾರತೀಯ ರಾಜಕಾರಣಿಯಾಗಿದ್ದು, ಅವರು ಎಚ್.ಡಿ. ಕುಮಾರಸ್ವಾಮಿ ಅವರ ಕ್ಯಾಬಿನೆಟ್ನಲ್ಲಿ ಗ್ರಾಮೀಣಾಭಿವೃದ್ಧಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದರು ಮತ್ತು ಜೂನ್ 2008 ರಿಂದ ಅಧಿಕಾರದಲ್ಲಿದ್ದ ಬ್ಯಾಟರಾಯನಪುರ ಕ್ಷೇತ್ರದ ವಿಧಾನಸಭೆಯ ಸದಸ್ಯರಾಗಿದ್ದರು. ಬೆಂಗಳೂರಿನಲ್ಲಿ ಜನಿಸಿದ ಕೃಷ್ಣ ವಾಷಿಂಗ್ಟನ್ನ ಅಮೇರಿಕನ್ ವಿಶ್ವವಿದ್ಯಾಲಯ ಮತ್ತು ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಇತಿಹಾಸ ಎಂದರೆ ನಮ್ಮ ಭೂತಕಾಲದ ಬಗೆಗಿನ ಮಾಹಿತಿ ಎಂದರ್ಥ (ಸಂಸ್ಕೃತದಲ್ಲಿ ಇತಿ=ಹೀಗೆ ಮತ್ತು ಹಾಸ=ಆದದ್ದು ಎಂಬ ವಿವರಣೆ ಇದೆ). ಸಂಬಂಧಪಟ್ಟ ವಿಷಯಗಳಿಗೆ ಈ ಪದವನ್ನು ನಾಮಪದವನ್ನಾಗಿ ಉಪಯೋಗಿಸಿದಾಗ ಇತಿಹಾಸವು ಮಾನವ, ಕುಟುಂಬ, ಮತ್ತು ಸಮಾಜದ ಮತ್ತು ಜೈವಿಕ ಬದುಕಿನ ಆಗುಹೋಗುಗಳ ದಾಖಲೆಗಳ ವೈಚಾರಿಕ ಚಿಂತನೆಗೆ ಪರಿಭಾಷೆಯಾಗಿ ಬಳಸಲ್ಪಡುತ್ತದೆ. ಬಹುಮಟ್ಟಿನ ಇತಿಹಾಸಕಾರರು ತಮ್ಮ ಅಧ್ಯಯನಗಳಿಗೆ ಬರವಣಿಗೆಯಲ್ಲಿ ದಾಖಲಾಗಿರುವ ಮೂಲಗಳನ್ನು ಆಧಾರವಾಗಿಟ್ಟುಕೊಳ್ಳುತ್ತಾರೆ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ನಿರ್ಮಲಾ ಸೀತಾರಾಮನ್ ಭಾರತೀಯ ರಾಜಕಾರಣಿ, ಅವರು ಪ್ರಸ್ತುತ ಭಾರತದ ಹಣಕಾಸು ಮಂತ್ರಿಯಾಗಿ ಸೇವೆ ಸಲ್ಲಿಸುತಿದ್ದಾರೆ. ಸೀತಾರಾಮನ್ ಅವರು ಹಣಕಾಸು ಮತ್ತು ಮಿನಿಸ್ಟ್ರಿ ಆಫ್ ಫೈನಾನ್ಸ್ ಮತ್ತು ವಾಣಿಜ್ಯ ಮತ್ತು ಕೈಗಾರಿಕಾ ಮಂತ್ರಿಯ ಅಡಿಯಲ್ಲಿ ಸ್ವತಂತ್ರ ಹೊಂದಿರುವ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾಗಿ ಸೇವೆ ಸಲ್ಲಿಸಿದ್ದಾರೆ. ಅದಕ್ಕೆ ಮೊದಲು ಅವರು ಭಾರತೀಯ ಜನತಾ ಪಕ್ಷದ ರಾಷ್ಟ್ರೀಯ ವಕ್ತಾರರಾಗಿದ್ದರು.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.