The most-visited English Wikipedia articles, updated daily. Learn more...
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಹಿಂದೂ ಪುರಾಣದ ಒಂದು ಪಾತ್ರವಾದ ದಮಯಂತಿ ವಿದರ್ಭ ರಾಜ್ಯದ ರಾಜಕುಮಾರಿಯಾಗಿದ್ದಳು, ಮತ್ತು ಇವಳು ನಿಷಾದ ರಾಜ್ಯದ ರಾಜ ನಳನನ್ನು ಮದುವೆಯಾಗಿದ್ದಳು, ಮತ್ತು ಇವರ ಕಥೆಯು ಮಹಾಭಾರತದಲ್ಲಿ ಹೇಳಲಾಗಿದೆ. ಅವಳು ಎಷ್ಟು ಸುಂದರಿ ಮತ್ತು ಮೋಹಕಳಾಗಿದ್ದಳೆಂದರೆ ದೇವತೆಗಳು ಕೂಡ ಅವಳನ್ನು ಮೆಚ್ಚಿದ್ದರು. ಅವಳು ನಳನನ್ನು ಕೇವಲ ಒಂದು ಸುವರ್ಣ ಹಂಸದಿಂದ ಅವನ ಸದ್ಗುಣಗಳು ಹಾಗು ಸಾಧನೆಗಳನ್ನು ಕೇಳಿ ಪ್ರೀತಿಸಿದಳು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಪಿಬಿಎಸ್ ಎಂದು ವ್ಯಾಪಕವಾಗಿ ಕರೆಯಲ್ಪಡುವ ಪ್ರತಿವಾದಿ ಭಯಂಕರ ಶ್ರೀನಿವಾಸ್(೨೨ ಸೆಪ್ಟೆಂಬರ್ ೧೯೨೮ - ೧೪ ಏಪ್ರಿಲ್ ೨೦೧೩)ರವರು ಭಾರತೀಯ ಹಿನ್ನೆಲೆ ಗಾಯಕ, ಸಂಯೋಜಕ, ಹಾರ್ಮೋನಿಯಂ ವಾದಕ, ಗೀತರಚನೆಕಾರ ಮತ್ತು ಕವಿ. ಇವರು ದಕ್ಷಿಣ ಚಿತ್ರರಂಗ ಮತ್ತು ಬಾಲಿವುಡ್ನಲ್ಲಿ ತಮ್ಮ ಕೃತಿಗಳಿಗೆ ಹೆಸರುವಾಸಿಯಾಗಿದ್ದಾರೆ. ಅವರ ಪ್ರಮುಖ ಕೃತಿಗಳು ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿವೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
೨೦೨೬ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ
ಪಶ್ಚಿಮ ಬಂಗಾಳ ವಿಧಾನಸಭೆಯ ಎಲ್ಲಾ 294 ಸದಸ್ಯರನ್ನು ಆಯ್ಕೆ ಮಾಡಲು ಚುನಾವಣೆಗಳು ನಡೆದವು. ಒಟ್ಟು ಎರಡು ಹಂತಗಳಲ್ಲಿ- ಅಂದರೆ ಏಪ್ರಿಲ್ 23 ಮತ್ತು 29, 2026 ರಂದು ಮತದಾನ ನಡೆಯಿತು. ಇವುಗಳಲ್ಲಿ 293 ಸ್ಥಾನಗಳ ಮತ ಎಣಿಕೆ ನಡೆದು ಫಲಿತಾಂಶವನ್ನು ಮೇ 4, 2026 ರಂದು ಬಿಡುಗಡೆ ಮಾಡಲಾಯಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವೃತ್ತಿಪರವಾಗಿ ಕಲಾ ಮಾಸ್ಟರ್ ಎಂದು ಕರೆಯಲ್ಪಡುವ ಕಲಾ ಭಾರತೀಯ ನೃತ್ಯ ಸಂಯೋಜಕಿ. ಅವರು ಭಾರತೀಯ ರಿಯಾಲಿಟಿ ಡ್ಯಾನ್ಸ್ ಟ್ಯಾಲೆಂಟ್ ಶೋ ಮಾನದ ಮಯಿಲಾಡಾದ ನಿರ್ದೇಶಕರಾಗಿದ್ದಾರೆ - ಅಲ್ಲಿ ಅವರು ಮೂವರು ತೀರ್ಪುಗಾರರಲ್ಲಿ ಒಬ್ಬರು. ಮಲಯಾಳಂ ಚಲನಚಿತ್ರ ಕೊಚ್ಚು ಕೊಚ್ಚು ಸಂತೋಷಂಗಲ್ನಲ್ಲಿನ ಜಾನಪದ ನೃತ್ಯದ ಅನುಕ್ರಮಕ್ಕಾಗಿ ೨೦೦೦ ರಲ್ಲಿ ಅತ್ಯುತ್ತಮ ನೃತ್ಯ ಸಂಯೋಜನೆಗಾಗಿ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯನ್ನು ಇವರಿಗೆ ನೀಡಲಾಯಿತು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಆಲೂರು ವೆಂಕಟ ರಾವ್ (ಕೆಲವೊಮ್ಮೆ ಆಲೂರು ವೆಂಕಟ ರಾಯ ಎಂದೂ ಕರೆಯುತ್ತಾರೆ) (೧೨ಜುಲೈ ೧೮೮೦ – ೨೫ಫೆಬ್ರವರಿ ೧೯೬೩) ಒಬ್ಬ ಭಾರತೀಯ ಇತಿಹಾಸಕಾರ, ಬರಹಗಾರ ಮತ್ತು ಪತ್ರಕರ್ತ. ಪ್ರತ್ಯೇಕ ಕರ್ನಾಟಕ ರಾಜ್ಯದ ಉದ್ದೇಶಕ್ಕಾಗಿ ಅವರು ನೀಡಿದ ಕೊಡುಗೆಗಾಗಿ ಅವರನ್ನು ಕರ್ನಾಟಕ ರಾಜ್ಯದಲ್ಲಿ ಕರ್ನಾಟಕ ಕುಲಪುರೋಹಿತ ( ಕನ್ನಡ ಕುಟುಂಬದ ಪ್ರಧಾನ ಅರ್ಚಕ ) ಎಂದು ಪೂಜಿಸುತ್ತಾರೆ. ಮೈಸೂರು, ಬಾಂಬೆ ಪ್ರೆಸಿಡೆನ್ಸಿ ಮತ್ತು ನಿಜಾಮರ ಹೈದರಾಬಾದ್ನ ಕನ್ನಡ ಮಾತನಾಡುವ ಜನರಿಗಾಗಿ ರಾಜ್ಯ ರಚನೆಗೆ ಬೆಂಬಲವಾಗಿ ಕರ್ನಾಟಕ ಏಕೀಕರಣ ಚಳುವಳಿಯನ್ನು ಕೈಗೊಂಡಿದ್ದಕ್ಕಾಗಿ ಅವರು ಪ್ರಸಿದ್ಧರಾದ್ದಾರೆ.
ಸಾಮಾಜಿಕ ಸಂಶೋಧನೆ ಅದರ ವಿಧಾನಗಳು ಮತ್ತು ತಂತ್ರಗಳು
ಸಾಮಾಜಿಕ ಸಂಶೊಧನೆಯಲ್ಲಿ ಸಂಶೊಧನಾ ಪ್ರಕ್ರಿಯೆಯು ಒಂದು. ವಿಚಾರಣೆಯು ಸಮಸ್ಯೆಯೆಂಬುವುದರಿಂದ ಪ್ರಾರಂಭವಾಗುತ್ತದೆ, ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳುವುದಕ್ಕಿಂತ ಕೆಲವೊಮ್ಮೆ ಸಮಸ್ಯೆಯನ್ನು ಕಂಡುಕೊಳ್ಳುವುದೇ ಕಷ್ಟದ ಕೆಲಸ. ಸಮಸ್ಯೆಯನ್ನು ರೂಪಿಸಲು ವಿಜ್ಞಾನಿ ಸಾಕಷ್ಟು ಯೊಚನೆ ಮಾಡಬೆಕಾಗುತ್ತದೆ.
ಮಾನಸಿಕ ಆರೋಗ್ಯ ವು ,ಆರೋಗ್ಯಕರವಾಗಿರುವ ಗ್ರಹಣಶಕ್ತಿಯ ಅಥವಾ ಭಾವನೆಯ ಮಟ್ಟವನ್ನು ಅಥವಾ ಮಾನಸಿಕ ಅಸ್ವಸ್ಥತೆ ಇಲ್ಲದಿರುವುದನ್ನು ವಿವರಿಸುತ್ತದೆ. ರಚನಾತ್ಮಕ ಮನೋವಿಜ್ಞಾನ ಅಥವಾ ಸಮಗ್ರತಾ ಸಿದ್ಧಾಂತ ವಿಭಾಗದ ದೃಷ್ಟಿಕೋನಗಳಿಂದ ಮಾನಸಿಕ ಆರೋಗ್ಯ, ಜೀವನವನ್ನು ಅನುಭವಿಸಬಲ್ಲ ವ್ಯಕ್ತಿಯ ಸಾಮರ್ಥ್ಯವನ್ನು ಹಾಗು ಜೀವನದ ಚಟುವಟಿಕೆಗಳು ಮತ್ತು ಮನೋವೈಜ್ಞಾನಿಕ ಸ್ಥಿತಿಸ್ಥಾಪಕತ್ವ ವನ್ನು ಸಾಧಿಸಲು ಮಾಡುವ ಪ್ರಯತ್ನದ ನಡುವೆ ಸಮತೋಲನೆ ಗಳಿಸುವುದನ್ನು ಒಳಗೊಂಡಿದೆ. ಮಾನಸಿಕ ಆರೋಗ್ಯವೆಂಬುದು ನಮ್ಮ ಭಾವನೆಗಳ ಅಭಿವ್ಯಕ್ತಿಯಾಗಿದ್ದು, ಬೇಡಿಕೆಗಳ ವ್ಯಾಪ್ತಿಗೆ ಯಶಸ್ವಿಯಾಗಿ ಹೊಂದಿಕೊಳ್ಳುವುದನ್ನು ಸೂಚಿಸುತ್ತದೆ.
ಶ್ರೀಪತಿ ಪಂಡಿತಾರಾಧ್ಯುಲ ಬಾಲಸುಬ್ರಹ್ಮಣ್ಯಂ(ಎಸ್ಪಿಬಿ) (೪ನೇ ಜೂನ್, ೧೯೪೬ - ೨೫ನೇ ಸೆಪ್ಟೆಂಬರ್ ೨೦೨೦) ಭಾರತದ ಖ್ಯಾತ ಹಿನ್ನೆಲೆ ಗಾಯಕರು. ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ. ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.
ಮಾರ್ಕೊ ಪೋಲೊ (English pronunciation: /ˈmɑrkoʊ ˈpoʊloʊ/ ( listen); Italian pronunciation: [ˈmarko ˈpɔːlo]) (c. 1254 – ಜನವರಿ 8, 1324) ಎಂಬುವವನು Il ಮಿಲಿಯೊನ್ ಎಂಬ ಪುಸ್ತಕವನ್ನು ಬರೆದ ವೆನೆಶಿಯನ್ ರಿಪಬ್ಲಿಕ್ನ ಒಬ್ಬ ವ್ಯಾಪಾರಿ, ಇದು ಯುರೋಪಿಯನ್ನರನ್ನು ಮಧ್ಯ ಏಶಿಯ ಮತ್ತು ಚೀನ ದೇಶಗಳಿಗೆ ಪರಿಚಯ ಮಾಡಿಕೊಟ್ಟಿತು. ಅವನು ವ್ಯವಹಾರವನ್ನು ಆ ಅವಧಿಯಲ್ಲಿ ತನ್ನ ತಂದೆ ಮತ್ತು ಚಿಕ್ಕಪ್ಪ, ನಿಕೊಲ್ಲೊ ಮತ್ತು ಮಾಫಿಯೊ ಅವರುಗಳಿಂದ ಕಲಿತನು, ಏಷಿಯಾದುದ್ದಕ್ಕೂ ಪ್ರಯಾಣಿಸಿ ಕುಬ್ಲಾಯಿ ಖಾನ್ನನ್ನು ಭೇಟಿ ಮಾಡಿದರು.
ಮದ್ರಾಸ್ ವಿಶ್ವವಿದ್ಯಾನಿಲಯವು (ತಮಿಳು:சென்னைப் பல்கலைக்கழகம்) ಭಾರತದ ಅತ್ಯಂತ ಹಳೆಯ ಮೂರು ವಿಶ್ವವಿದ್ಯಾನಿಲಯಗಳಲ್ಲಿ ಒಂದಾಗಿದೆ (ಯೂನಿವರ್ಸಿಟಿ ಆಫ್ ಕಲ್ಕತ್ತಾ ಮತ್ತು ಮುಂಬಯಿ ವಿಶ್ವವಿದ್ಯಾನಿಲಯ). ಮದ್ರಾಸ್ ವಿಶ್ವವಿದ್ಯಾನಿಲಯವನ್ನು ಲಂಡನ್ ವಿಶ್ವವಿದ್ಯಾನಿಲಯದ ಮಾದರಿಯನ್ನು ಅನುಸರಿಸಿ 5 ಸೆಪ್ಟೆಂಬರ್ 1857ರಲ್ಲಿ ಭಾರತದ ಶಾಸಕಾಂಗ ಸಭೆಯ ಕಾಯಿದೆಯಡಿ ಸ್ಥಾಪಿಸಲಾಯಿತು. ಭಾರತ ಸಂವಿಧಾನದಲ್ಲಿರುವ ಪಟ್ಟಿಯಲ್ಲಿ ’ಶಿಕ್ಷಣ’ವು ಇರುವಾಗಿನಿಂದ ವಿಶ್ವವಿದ್ಯಾನಿಲಯವು ಭಾರತ ಕೇಂದ್ರ ಸರ್ಕಾರದ ಯೂನಿವರ್ಸಿಟಿ ಗ್ರ್ಯಾಂಟ್ಸ್ ಕಮಿಷನ್ನಿಂದ ನಿಯಂತ್ರಿಸಲ್ಪಡುತ್ತಿದೆ.
ಆಮಿ ೨೦೧೮ ರ ಭಾರತೀಯ ಮಲಯಾಳಂ ಭಾಷೆಯ ಜೀವನ ಚರಿತ್ರೆಯ ಚಿತ್ರವಾಗಿದ್ದು , ಕವಿ-ಲೇಖಕಿ ಕಮಲಾ ದಾಸ್ ಅವರ ಜೀವನವನ್ನು ಆಧರಿಸಿದೆ . ಇದನ್ನು ಕಮಲ್ ಬರೆದು ನಿರ್ದೇಶಿಸಿದ್ದಾರೆ ಮತ್ತು ಮಂಜು ವಾರಿಯರ್ ಕಮಲಾ ಸೂರ್ಯ ಪಾತ್ರದಲ್ಲಿ ನಟಿಸಿದ್ದಾರೆ, ಜೊತೆಗೆ ಮುರಳಿ ಗೋಪಿ , ಟೋವಿನೋ ಥಾಮಸ್ , ಅನೂಪ್ ಮೆನನ್ ಮತ್ತು ಆನಂದ್ ಬಾಲ್ ನಟಿಸಿದ್ದಾರೆ . ಈ ಚಿತ್ರ ೨೦೧೮ ರ ಫೆಬ್ರವರಿ ೯ ರಂದು ಬಿಡುಗಡೆಯಾಯಿತು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಬುದ್ಧನು ಐತಿಹಾಸಿಕ ಘಟನೆಗಳ ಪ್ರಕಾರ ೫೬೩ಬಿಸಿಇ ನಲ್ಲಿ ಮತ್ತು ಬೌದ್ಧ ಸಂಪ್ರದಾಯದ ಪ್ರಕಾರ ೬೨೪ಬಿಸಿಇ ನಲ್ಲಿ ಲುಂಬಿನಿಯಲ್ಲಿ ಉದಾತ್ತ ಕುಟುಂಬದಲ್ಲಿ ಜನಿಸಿದನು. ಅವರನ್ನು ಬಾಲ್ಯದಲ್ಲಿ ಸಿದ್ಧಾರ್ಥ ಗೌತಮ ಎಂದು ಕರೆಯಲಾಗುತ್ತಿತ್ತು. ಅವನ ತಂದೆ ರಾಜ ಶುದ್ಧೋದನ, ಬೆಳೆಯುತ್ತಿರುವ ಕೋಸಲ ರಾಜ್ಯದಲ್ಲಿ ಶಾಕ್ಯ ಕುಲದ ಹೊಲಯ ಚಲವಾದಿ ಕುಲದ ನಾಯಕ, ಮತ್ತು ಅವನ ತಾಯಿ ರಾಣಿ ಮಾಯಾ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕರ್ನಾಟಕ ವಿಧಾನಸಭೆಯ ಕ್ಷೇತ್ರಗಳ ಪಟ್ಟಿ
ಕರ್ನಾಟಕ ವಿಧಾನಸಭೆಯು ಭಾರತದ ದೇಶದ ಕರ್ನಾಟಕ ರಾಜ್ಯದ ದ್ವಿಸದಸ್ಯೀಯ ಶಾಸಕಾಂಗ ಕೆಳಮನೆಯಾಗಿದೆ.ಕರ್ನಾಟಕವು ಭಾರತದ ಎರಡು ಸದನಗಳನ್ನು ಒಳಗೊಂಡ ಆರು ರಾಜ್ಯಗಳಲ್ಲಿ ಒಂದಾಗಿದೆ. ಈ ಎರಡು ಸದನಗಳೆಂದರೆ ವಿಧಾನ ಸಭಾ (ಕೆಳಮನೆ) ಮತ್ತು ವಿಧಾನ ಪರಿಷತ್ (ಮೇಲಿನ ಮನೆ). ಬೇಸಿಗೆಯಲ್ಲಿ, ವಿಧಾನಸಭೆಯು ರಾಜ್ಯದ ರಾಜಧಾನಿಯಾದ ಬೆಂಗಳೂರು, ಚಳಿಗಾಲದಲ್ಲಿ ರಾಜ್ಯದ ಉತ್ತರ ಭಾಗದಲ್ಲಿರುವ ಬೆಳಗಾವಿಯಲ್ಲಿ ನಡೆಯುತ್ತದೆ ಅವಧಿಗೆ ಮೊದಲು ವಿಸರ್ಜಿಸದಿದ್ದರೆ ವಿಧಾನಸಭೆಯ ಪೂರ್ಣಾವಧಿ ಐದು ವರ್ಷಗಳು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಎಚ್.ಎಸ್.ವೆಂಕಟೇಶಮೂರ್ತಿ (೨೩ ಜೂನ್ ೧೯೪೪ - ೩೦ ಮೇ ೨೦೨೫), ಇವರು ಕನ್ನಡದ ಕವಿ ಮತ್ತು ಬರಹಗಾರರು. ಕವಿತೆ, ನಾಟಕ, ಪ್ರಬಂಧ, ಕಾದಂಬರಿ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ, ಮೊದಲಾದ ಪ್ರಕಾರಗಳಲ್ಲಿ ತಮ್ಮ ಕೊಡುಗೆಯನ್ನು ಕೊಟ್ಟು ಕನ್ನಡ ಸಾಹಿತ್ಯ ಕ್ಷೇತ್ರವನ್ನು, ಹಳೆಯ ಸಂಪ್ರದಾಯದಲ್ಲಿ ಕೃಷಿಮಾಡಿ, ಆಧುನಿಕ ಸಾಹಿತ್ಯದ ಕೃತಿಗಳನ್ನು ಸಾಹಿತ್ಯ ಪ್ರಿಯರಿಗೆ ಕೊಟ್ಟ ಮಹತ್ವದ ಲೇಖಕರಲ್ಲೊಬ್ಬರು. ಇವರು ೮೫ನೇ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದವರು.
ನುಡಿಗಟ್ಟು ಒಂದು ಭಾಷೆಯನ್ನಾಡುವ ಜನ ತಮ್ಮ ನಿತ್ಯೋಪಯೋಗದಲ್ಲಿ ಹಿಂದೆ ತಾವು ಹೇಳಿರದ, ಇನ್ನೊಬ್ಬ ಹೇಳಿದುದನ್ನು ಕೇಳಿರದ ಎಷ್ಟೋ ಹೊಸ ಮಾತುಗಳನ್ನು ಪ್ರಯೋಗಿಸಲು ಶಕ್ತರು. ಆದರೂ, ಆ ಮಾತುಗಳು ಕೇಳುವವನಿಗೆ ಅರ್ಥವಾಗುತ್ತದೆ. ಆ ಮಾತಿನ ಸಂದರ್ಭ ಮತ್ತು ಆ ಭಾಷೆಯ ಮೂಲಭೂತವಾದ ಕೆಲವು ಸಾಮಾನ್ಯ ನಿಯಮ, ಇದರ ಮೂಲಕ ಮಾತಾಡುವವನಿಗೂ ಕೇಳುವವನಿಗೂ ಇರುವ ಅನುಭವ ಸಾಮ್ಯದಿಂದ-ಹಿಂದೆ ಹೇಳದ, ಕೇಳದ ಮಾತುಗಳ ಅರ್ಥ ವೇದ್ಯವಾಗುತ್ತದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಲೋಕ ಸಭೆ ಚುನಾವಣಾ ಕ್ಷೇತ್ರಗಳ ಪಟ್ಟಿ
ಭಾರತದ ಸಂಸತ್ತು ೫೪೩ ಲೋಕಸಭಾ ಕ್ಷೇತ್ರಗಳನ್ನು ಹೊಂದಿದೆ. ಇದನ್ನು ಜನಸಂಖ್ಯೆಯ ಪ್ರಕಾರ ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ವಿಂಗಡಿಸಲಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
೧೯೧೨ರ ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ಭಾರತದಲ್ಲಿ ಸಹಕಾರ ಸಂಘವನ್ನು ಸ್ಥಾಪಿಸಲು ಕನಿಷ್ಟ ಸದಸ್ಯರ ಸಂಖ್ಯೆ ಹತ್ತು ಇರತಕ್ಕದ್ದು.ಇದನ್ನು ಸಹಕಾರಿ ಸಂಘಗಳ ಕಾಯ್ದೆಯ ಪ್ರಕಾರ ನೋಂದಾಯಿಸಬೇಕು.ಷೇರುಗಳನ್ನು ಸದಸ್ಯರಿಗೆ ನೀಡುವುದರ ಮುಖಾಂತರ ಬಂಡವಾಳವನ್ನು ಸಂಗ್ರಹಿಸುತ್ತದೆ. ವ್ಯಾಖ್ಯಾನಗಳು ಈ.ಹೆಚ್.ಕಲ್ವರ್ಟ್ ಅವರ ಪ್ರಕಾರ "ಸಹಕಾರವು ಒಂದು ಪ್ರಕಾರದ ವ್ಯವಹಾರಿ ಸಂಘಟನೆಯಾಗಿದ್ದು,ಅದರಲ್ಲಿರುವ ವ್ಯಕ್ತಿಗಳು ತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು ಸಮಾನತೆಯ ದೃಷ್ಠಿಯಿಂದ ಮಾನವರಾಗಿ ಸ್ವಯಂ ಪ್ರೇರಣೆಯಿಂದ ಒಂದುಗೂಡಿದ ಸಂಸ್ಥೆಯಾಗಿದೆ". ಸಹಕಾರಿ ಸಂಘಗಳ ಲಕ್ಷಣಗಳೆಂದರೆ:- ೧.ಸ್ವಯಂ ಪ್ರೇರಣೆಯ ಸಂಘಟನೆ:- ಸಹಕಾರಿ ಸಂಘದ ಸದಸ್ಯತ್ವ ಐಚ್ಛಿಕವಾಗಿದೆ.ಸದಸ್ಯತ್ವವು ಮುಕ್ತವಾಗಿದ್ದು,ಯಾವುದೇ ಬೇದವಿಲ್ಲದೆ ಎಲ್ಲಾ ವಯಸ್ಕರಿಗೂ ಸದಸ್ಯರಾಗಲು ಅವಕಾಶವಿದೆ.ಸದಸ್ಯರು ತಮಗೆ ಬೇಡವೆನಿಸಿದಾಗ ಸಂಘವನ್ನು ಬಿಟ್ಟುಹೋಗಬಹುದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
'ಸ್ವರಾಜ್ ಭಾರತೀಯ ಐತಿಹಾಸಿಕ ಟಿವಿ ಧಾರಾವಾಹಿಯಾಗಿದ್ದು, ಇದು 14 ಆಗಸ್ಟ್ 2022 ರಿಂದ ಪ್ರತಿ ಭಾನುವಾರ ರಾತ್ರಿ 9 ಗಂಟೆಗೆ ಡಿಡಿ ನ್ಯಾಷನಲ್ನಲ್ಲಿ ಪ್ರಸಾರವಾಗುತ್ತದೆ. ಡಿಡಿ ನ್ಯಾಷನಲ್ನಲ್ಲಿ ಪ್ರಸಾರವಾದ ನಂತರ ಮುಂದಿನವಾರ ಶನಿವಾರ ಇದರ ಅನುವಾದಿತ ಪ್ರಸಂಗವು ರಾತ್ರಿ 8 ಗಂಟೆಗೆ ಡಿಡಿ ಚಂದನದಲ್ಲಿ ಕನ್ನಡದಲ್ಲಿ ಪ್ರಸಾರವಾಗುತ್ತದೆ. ಈ ಧಾರಾವಾಹಿಯ ಮೂಲಕ ದೂರದರ್ಶನ ಮತ್ತೊಮ್ಮೆ 550 ಕ್ಕೂ ಹೆಚ್ಚು ಸ್ವಾತಂತ್ರ್ಯ ಹೋರಾಟಗಾರರ ಸಾಹಸಗಾಥೆಗಳನ್ನು ಜೀವಂತಗೊಳಿಸುವ ಪ್ರಯತ್ನ ಮಾಡಿದೆ.
ನೋಕಿಯಾ ಕಾರ್ಪೊರೇಷನ್ (pronounced /ˌnoʊˈkiːə/; Finnish pronunciation: [ˈnɔkiɑ]) (OMX: NOK1V, NYSE: NOK, FWB: NOA3) ಒಂದು ಫಿನ್ಲೆಂಡ್ ಮೂಲದ ಬಹುರಾಷ್ಟ್ರೀಯ ಸಂಪರ್ಕ ಕಾರ್ಪೊರೇಶನ್ ಆಗಿದ್ದು ಇದರ ಪ್ರಧಾನ ಕಚೇರಿಯು ಫಿನ್ಲಂಡಿನ ರಾಜಧಾನಿಯಾದ ಹೆಲ್ಸಿಂಕಿಯ ನೆರೆಯಲ್ಲಿರುವ ಕೀಲನೀಮೀ, ಎಸ್ಪೂನಲ್ಲಿದೆ. Nokiaವು ಮೊಬೈಲ್ ಸಾಧನಗಳನ್ನು ತಯಾರಿಸುವುದು ಮತ್ತು ಇಂಟರ್ನೆಟ್ ಹಾಗೂ ಸಂಪರ್ಕ ಉದ್ಯಮಗಳನ್ನು ತಳುಕು ಹಾಕಿರುವುದು ಮಾತ್ರವಲ್ಲದೆ 120 ದೇಶಗಳ 128,445 ಜನರಷ್ಟು ಸಿಬ್ಬಂದಿವರ್ಗವನ್ನು ಹೊಂದಿದ್ದು 150ಕ್ಕೂ ಹೆಚ್ಚಿನ ರಾಷ್ಟ್ರಗಳಲ್ಲ್ಲಿ ಮಾರುಕಟ್ಟೆ ಹೊಂದಿರುವುದಲ್ಲದೆ EUR 50.7 ಬಿಲಿಯನ್ನಷ್ಟು ಜಾಗತಿಕ ವಾರ್ಷಿಕ ಆದಾಯವನ್ನು ಗಳಿಸುತ್ತಿದೆ ಮತ್ತು 2008ರ ಅಂಕಿ ಅಂಶಗಳ ಪ್ರಕಾರ 5.0 ಬಿಲಿಯನ್ನಷ್ಟು ಲಾಭ ಗಳಿಸಿದೆ. ಇದು ಪ್ರಪಂಚದ ಮೊಬೈಲ್ ಫೋನುಗಳ ಅತಿ ದೊಡ್ಡ ತಯಾರಕನೆನಿಸಿಕೊಂಡಿದೆ: Q3 2008 ಮತ್ತು Q2 2009ರಲ್ಲ್ಲಿಜಾಗತಿಕವಾಗಿ ಅದರ ಸಾಧನಗಳ ಮಾರುಕಟ್ಟೆ ಶೇರುಹೆಚ್ಚೂಕಡಿಮೆ 38%ನಷ್ಟಿದ್ದಿತು.
ಗವರ್ನರ್ ಜನರಲ್ ಆಫ್ ಇಂಡಿಯಾ (ಅಥವಾ, ೧೮೫೮ ರಿಂದ ೧೯೪೭ ವರೆಗೆ, ವೈಸ್ರಾಯ್ ಮತ್ತು ಗವರ್ನರ್ ಜನರಲ್ ಆಫ್ ಇಂಡಿಯಾ ) ಅವರು ಭಾರತದಲ್ಲಿ ಬ್ರಿಟಿಷ್ ಆಡಳಿತದ ಮುಖ್ಯಸ್ಥರಾಗಿದ್ದರು ಮತ್ತು ನಂತರದಲ್ಲಿ ಭಾರತದ ಸ್ವಾತಂತ್ರ್ಯದ ಬಳಿಕ ರಾಜ ಮತ್ತು ದೇಶದ ಡಿ ಫ್ಯಾಕ್ಟೋ ದ ಪ್ರತಿನಿಧಿಗಳಾಗಿದ್ದರು. ಈ ಹುದ್ದೆಯನ್ನು ೧೭೭೩ ರಲ್ಲಿ ಫೋರ್ಟ್ ವಿಲಿಯಮ್ ನ ಪ್ರೆಸಿಡೆನ್ಸಿಯ ಗವರ್ನರ್ ಜನರಲ್ ಎಂಬ ನಾಮಧೇಯದೊಂದಿಗೆ ರಚಿಸಲಾಯಿತು.