The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕ್ಯಾಲಿಫೋರ್ನಿಯಾದ ಕ್ಯಲಾಬಸಸ್ನ ಇನ್ಕ್ಯುಬಸ್ ಒಂದು ಅಮೇರಿಕನ್ ರಾಕ್ ಬ್ಯಾಂಡ್. ಬ್ಯಾಂಡ್ನ್ನು 1991ರಲ್ಲಿ ಹಾಡುಗಾರ ಬ್ರಾಂಡನ್ ಬೊಯ್ಡ್, ಪ್ರಖ್ಯಾತ ಗಿಟಾರ್ ವಾದಕ ಮೈಕ್ ಈಂಜಿಗರ್, ಮತ್ತು ಡೋಲು ಬಾಜಕ ಹೂಸೆ ಪ್ಯಸಿಲ್ಲಸ್ರವರಿಂದ, ಅವರು ಪ್ರೌಢಶಾಲೆಯಲ್ಲಿ ಅಭ್ಯಾಸ ಮಾಡುತ್ತಿದ್ದ ಸಮಯದಲ್ಲಿ ರಚಿಸಲಾಯಿತು. ಬಾಸ್ ಗಿಟಾರ್ ವಾದಕ ಅಲೆಕ್ಸ್ "ಡರ್ಕ್ ಲ್ಯಾನ್ಸ್" ಕತುನಿಚ್, ಮತ್ತು ಗೇವಿನ್ "ಡಿಜೆ ಲೈಫ್" ಕೊಪ್ಪೆಲ್ರನ್ನು ಸೇರಿಸಿಕೊಳ್ಳಲು ಬ್ಯಾಂಡನ್ನು ವಿಸ್ತರಿಸಲಾಯಿತು, ಕೊನೆಗೆ ಇವರಿಬ್ಬರಿರ ಸ್ಥಾನವನ್ನು ಕ್ರಮವಾಗಿ ಬಾಸ್ ಗಿಟಾರ್ ವಾದಕ ಬೆನ್ ಕೆನ್ನೇ ಮತ್ತು ಡಿಜೆ ಕಿಲ್ಮೋರ್ರಿಂದ ಭರ್ತಿಮಾಡಲಾಯಿತು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಆಲಿಯಮ್ ಸ್ಯಾಟೀವಮ್, ಸಾಮಾನ್ಯವಾಗಿ ಬೆಳ್ಳುಳ್ಳಿ ಎಂದು ಪರಿಚಿತವಿರುವ ಈರುಳ್ಳಿ ಪಂಗಡ ಆಲಿಯಮ್ನಲ್ಲಿನ ಒಂದು ಜಾತಿ. ಅದರ ನಿಕಟ ಸಂಬಂಧಿಗಳು ಈರುಳ್ಳಿ, ಶ್ಯಾಲಟ್, ಲೀಕ್, ಚೈವ್ ಮತ್ತು ರ್ಯಾಕ್ಯೊವನ್ನು ಒಳಗೊಂಡಿವೆ. ೭,೦೦೦ ವರ್ಷಕ್ಕಿಂತ ಹೆಚ್ಚು ಮಾನವ ಬಳಕೆಯ ಇತಿಹಾಸವಿರುವ ಬೆಳ್ಳುಳ್ಳಿಯು ಮಧ್ಯ ಏಷ್ಯಾಕ್ಕೆ ಸ್ಥಳೀಯವಾಗಿದೆ ಮತ್ತು ಮೆಡಿಟರೇನಿಯನ್ ಪ್ರದೇಶದಲ್ಲಿ ಬಹಳ ಕಾಲದಿಂದ ಮುಖ್ಯ ಆಹಾರವಾಗಿದೆ, ಮತ್ತು ಏಷ್ಯಾ, ಆಫ಼್ರಿಕಾ, ಹಾಗು ಯೂರೋಪ್ನಲ್ಲಿ ಆಗಾಗ ಬಳಸುವ ರುಚಿಕಾರಕವಾಗಿದೆ.
ಬೌದ್ಧ ಧರ್ಮ ಎಂದರೆ ಪ್ರಪಂಚದ ಅನೇಕ ಧರ್ಮಗಳಲ್ಲಿ 4 ನೇ ಅತಿ ಹೆಚ್ಚು ಅನುಯಾಯಿಗಳನ್ನು ಹೊಂದಿರುವ ಸತ್ಯ ಮತ್ತು ವಿಜ್ಞಾನಕ್ಕೆ ಹತ್ತಿರವಾದ ಹಾಗೂ ಯಾರಿಗೂ ನಿಷ್ಠೂರವಾಗದ ವಾಸ್ತವ ವಾದವನ್ನು ಕ್ರಿ.ಪೂ. 566 ವರ್ಷಗಳ ಮುಂಚಿತವಾಗಿ ಭಾರತ ದಲ್ಲಿ ಜನನವಾಗಿ 98 ವರ್ಷಗಳ ಕಾಲ ಜೀವಿಸಿದ್ದ ಸಿದ್ದಾರ್ಥ ಗೌತಮ ಬುದ್ದನ ಬೋಧನೆಗಳ ಮೇಲೆ ಆಧಾರಿತವಾಗಿ ಬೆಳೆದು ಬಂದಿರುವ ಭಾರತೀಯ ಧರ್ಮ. ಸಾಖ್ಯರ ರಾಜಧಾನಿಯಾದ ಕಪಿಲವಸ್ತುವಿನ ರಾಜ ಶುದ್ದೋಧನ ಹಾಗೂ ಮಹಾಮಾಯೆ ಎನ್ನುವವರ ಮಗನಾದ ರಾಜಕುಮಾರ ಸಿದ್ಧಾರ್ಥ ನು ಕಠಿಣ ಪರಿಶ್ರಮ ಮೂಲಕ ಜ್ಞಾನ ವನ್ನು ಪಡೆದು ಬುದ್ಧನಾಗಿ 98 ವರ್ಷಗಳ ಕಾಲ ಧರ್ಮೋಪದೇಶ ಮಾಡುತ್ತಾ ನಿರ್ವಾಣ ಹೊಂದಿದ ಕಾರಣ ಗೌತಮ ಬುದ್ಧ ನೆಂಬ ಹೆಸರೂ ಇದೆ.
ಇಬ್ಬನಿ ತಬ್ಬಿದ ಇಳೆಯಲಿ (ಚಲನಚಿತ್ರ)
ಇಬ್ಬನಿ ತಬ್ಬಿದ ಇಳೆಯಲಿ ೨೦೨೪ರ ಕನ್ನಡ ಭಾಷೆಯ ರೊಮ್ಯಾಂಟಿಕ್ ಚಲನಚಿತ್ರವಾಗಿದ್ದು, ಚಂದ್ರಜಿತ್ ಬೆಳ್ಳಿಯಪ್ಪ ಬರೆದು ನಿರ್ದೇಶಿಸಿದ್ದಾರೆ. ಪರಂವಃ ಸ್ಟುಡಿಯೋಸ್ ಅಡಿಯಲ್ಲಿ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ಈ ಚಿತ್ರದಲ್ಲಿ ವಿಹಾನ್ ಗೌಡ, ಅಂಕಿತಾ ಅಮರ್, ಮಯೂರಿ ನಟರಾಜ ಮತ್ತು ಗಿರಿಜಾ ಶೆಟ್ಟರ್, ಶಂಕರ್ ಮೂರ್ತಿ ಎಸ್ಆರ್, ಸಲ್ಮಿನ್ ಶೆರಿಫ್, ರಕ್ಷಿತ್ ಕೌಪ್, ದವನ ಧನರಾಜ್, ಆದಿತ್ಯ ಬಿ ಪೂಜಾರ್, ಅನಿರುದ್ಧ್ ಭಟ್, ದಾಮಿನಿ ಧನರಾಜ್ ನಟಿಸಿದ್ದಾರೆ. ಚಿತ್ರದ ಛಾಯಾಗ್ರಹಣವನ್ನು ಶ್ರೀವತ್ಸನ್ ಸೆಲ್ವರಾಜನ್, ಸಂಕಲನವನ್ನು ರಕ್ಷಿತ್ ಕೌಪ್ ಮತ್ತು ಸಂಗೀತವನ್ನು ಗಗನ್ ಬಡೇರಿಯಾ ನಿರ್ವಹಿಸಿದ್ದಾರೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಸೂಕ್ಷ್ಮ ದರ್ಶಕವು (Greek: μικρός , ಮೈಕ್ರೋಸ್ , "ಸೂಕ್ಷ್ಮ" ಮತ್ತು σκοπεῖν, ಸ್ಕೋಪೆನ್ , "ವೀಕ್ಷಿಸು" ಅಥವಾ "ನೋಡು" ನಿಂದ) ಬರಿಯ ಕಣ್ಣಿಗೆ ಕಾಣಿಸದ ಸೂಕ್ಷ್ಮ ವಸ್ತುಗಳನ್ನು ನೋಡಲು ಬಳಸುವ ಉಪಕರಣವಾಗಿದೆ. ಈ ಉಪಕರಣವನ್ನು ಉಪಯೋಗಿಸಿ ಸಣ್ಣ ವಸ್ತುಗಳನ್ನು ಪರೀಕ್ಷಿಸುವ ವಿಜ್ಞಾನಕ್ಕೆ (ವಿಧಾನಕ್ಕೆ) ಸೂಕ್ಷ್ಮ ದರ್ಶನ (ಮೈಕ್ರೋಸ್ಕೋಪಿ) ಎಂದು ಕರೆಯಲಾಗುತ್ತದೆ. ಸೂಕ್ಷ್ಮದರ್ಶಕೀಯ (ಮೈಕ್ರೋಸ್ಕೋಪಿಕ್) ಎಂದರೆ ಸೂಕ್ಷ್ಮ ದರ್ಶಕದ ಸಹಾಯವಿಲ್ಲದೇ ಕಣ್ಣಿಗೆ ಕಾಣಿಸದಿರುವುದು.
ಕನ್ನಡ ರಾಜ್ಯೋತ್ಸವ ಅಥವಾ ಕರ್ನಾಟಕ ರಾಜ್ಯೋತ್ಸವ ಪ್ರತಿ ವರ್ಷದ ನವೆಂಬರ್ ೧ ರಂದು ಆಚರಿಸಲಾಗುತ್ತದೆ. ಮೈಸೂರು ರಾಜ್ಯವು(ಈಗಿನ ಕರ್ನಾಟಕ) ೧೯೫೬ರ ನವೆಂಬರ್ ೧ರಂದು ನಿರ್ಮಾಣವಾದುದರ ಸಂಕೇತವಾಗಿ ಈ ರಾಜ್ಯೋತ್ಸವವನ್ನು ಆಚರಿಸಲಾಗುತ್ತದೆ. ದಕ್ಷಿಣ ಭಾರತದ ಎಲ್ಲಾ ಕನ್ನಡ ಭಾಷೆ-ಮಾತನಾಡುವ ಪ್ರದೇಶಗಳನ್ನು ವಿಲೀನಗೊಳಿಸಿ ಒಂದು ರಾಜ್ಯವನ್ನು ಘೋಷಣೆ ಮಾಡಿದ ಈ ದಿನವನ್ನು ಕನ್ನಡಿಗರು ನಾಡಹಬ್ಬವನ್ನಾಗಿ ಆಚರಿಸುತ್ತಾರೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕೋಪನ್ ಹ್ಯಾಗನ್ English pronunciation: /ˈkoʊpənheɪɡən/; ಡೇನಿಷ್:Københavnpronounced [kʰøb̥ənˈhaʊ̯ˀn] ( ) ಡೆನ್ಮಾರ್ಕ್ ನ ಅತಿ ದೊಡ್ಡ ನಗರ ಹಾಗೂ ರಾಜಧಾನಿಯಾಗಿದ್ದು ನಗರದಲ್ಲಿ 1,181,239 (2010)ಜನಸಂಖ್ಯೆ ಮತ್ತು ಮೆಟ್ರೋಪಾಲಿಟನ್ ನಲ್ಲಿ 1,894,521 (2010)ಜನಸಂಖ್ಯೆಯನ್ನು ಹೊಂದಿದೆ. ಕೋಪನ್ ಹ್ಯಾಗನ್ ಝಿಯಾಲ್ಯಾಂಡ್ ಮತ್ತು ಅಮಾಜೆರ್ ದ್ವೀಪಗಳಲ್ಲಿರುವ ಸ್ಥಳವಾಗಿದೆ. 11ನೆಯ ಶತಮಾನದಲ್ಲಿ ಮೊದಲಬಾರಿಗೆ ದಾಖಲಾದ ಕೋಪನ್ ಹ್ಯಾಗನ್ 15ನೆಯ ಶತಮಾನದಲ್ಲಿ ಡೆನ್ಮಾರ್ಕ್ ನ ರಾಜಧಾನಿಯಾಯಿತು ಮತ್ತು 17ನೆಯ ಶತಮಾನದಲ್ಲಿ ಕ್ರಿಶ್ಚಿಯನ್ IV ರ ಆಳ್ವಿಕೆಯಲ್ಲಿ ಅದು ಪ್ರಾಂತ್ಯದ ಪ್ರಮುಖ ಕೇಂದ್ರವಾಯಿತು.
ಟಿವಿ9 ಭಾರತವರ್ಷ 24 ಗಂಟೆಯೂ ಪ್ರಸಾರವಾಗುವ ಭಾರತೀಯ ಹಿಂದಿ ಭಾಷೆಯ ಉಚಿತ ಸುದ್ದಿ ಚಾನೆಲ್. ಇದನ್ನು ಮಾರ್ಚ್ 31, 2004 ರಂದು ಪ್ರಾರಂಭಿಸಲಾಯಿತು ಮತ್ತು ಉತ್ತರ ಪ್ರದೇಶದ ನೋಯ್ಡಾದಿಂದ ಕಾರ್ಯನಿರ್ವಹಿಸುತ್ತದೆ. ಇದು ಅಸೋಸಿಯೇಟೆಡ್ ಬ್ರಾಡ್ಕಾಸ್ಟಿಂಗ್ ಕಂಪನಿ ಪ್ರೈವೇಟ್ ಲಿಮಿಟೆಡ್ನ ಒಡೆತನದಲ್ಲಿದೆ, ಇದು ಟಿವಿ9 ಗುಜರಾತಿ, ಟಿವಿ9 ಕನ್ನಡ, ಟಿವಿ 9 ತೆಲುಗು, ಟಿವಿ 9 ಮರಾಠಿ, ಜೈ ತೆಲಂಗಾಣ ಟಿವಿಯಂತಹ ಸುದ್ದಿ ವಾಹಿನಿಗಳನ್ನು ಸಹ ನಿರ್ವಹಿಸುತ್ತಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತ ಸರ್ಕಾರದಿಂದ ನಿಯೋಜನೆಗೊಳ್ಳುವ ಈ ಆಯೋಗವು ಕಾಲಕ್ಕನುಗುಣವಾಗಿ ಸರ್ಕಾರಿ ಕೆಲಸಗಾರರ ವೇತನ ಸ್ವರೂಪ ಬದಲಾವಣೆಗೆ ಶಿಫಾರಸ್ಸು ಮಾಡಲೆಂದೇ ರಚಿತವಾಗಿರುತ್ತದೆ. ಸ್ವತಂತ್ರ ಬಂದಾಗಿನಿಂದ ಇಲ್ಲಿಯವರೆವಿಗೂ ಏಳು ವೇತನ ಆಯೋಗಗಳನ್ನು ರಚಿಸಿ ಅವುಗಳಿಂದ ಸರ್ಕಾರಿ ಕೆಲಸಗಾರರ ವೇತನ ಕುರಿತಾಗಿ ಶಿಫಾರಸ್ಸು ಪಡೆಯಲಾಗಿದೆ. ಸರ್ಕಾರದ ನಾಗರೀಕ ಸೇವಾ ವಲಯಗಳು ಹಾಗು ದೇಶದ ಸೇನಾ ವಿಭಾಗಗಳಿಗೆ ವೇತನ ಆಯೋಗದ ಶಿಫಾರಸ್ಸು ಬಹು ಮುಖ್ಯವಾಗಿರುತ್ತದೆ.
ಪ್ರೀತಿ ಸುಶೀಲ್ ಪಟೇಲ್ (ಜನನ ೨೯ ಮಾರ್ಚ್ ೧೯೭೨) ಇವರು ಬ್ರಿಟಿಷ್ ರಾಜಕಾರಣಿಯಾಗಿದ್ದು, ಇವರು ಜುಲೈ ೨೪ ೨೦೧೯ ರಲ್ಲಿ ಗೃಹ ಇಲಾಖೆಯ ರಾಜ್ಯ ಕಾರ್ಯದರ್ಶಿಯಾಗಿದ್ದಾರೆ ಮತ್ತು ೨೦೧೦ ರಲ್ಲಿ ಎಸೆಕ್ಸ್ನ ವಿಥಮ್ಗೆ ಸಂಸತ್ ಸದಸ್ಯರಾಗಿದ್ದಾರೆ (ಸಂಸದ). ಇವರು ೨೦೧೬ ರಿಂದ ೨೦೧೭ ರವರೆಗೆ ಅಂತರಾಷ್ಟ್ರೀಯ ಅಭಿವೃದ್ಧಿ ಕಾರ್ಯದರ್ಶಿಯಾಗಿದ್ದರು. ಇಸ್ರೇಲ್ ಸರ್ಕಾರದೊಂದಿಗಿನ ಅನಧಿಕೃತ ಸಭೆಗಳನ್ನು ಬಹಿರಂಗಪಡಿಸುವಿಕೆಯಿಂದಾಗಿ ಕ್ಯಾಬಿನೆಟ್ ಮಂತ್ರಿಯಾಗಿ ಇವರ ಅಧಿಕಾರಾವಧಿಯು ಕೊನೆಗೊಂಡಿತು.
ಮಂಜುನಾಥ್ ನಾಯಕರ್ (ಇಂಗ್ಲೀಷ್:Master Manjunath) ರವರು ಭಾರತೀಯ ನಟ ಮತ್ತು ಪಬ್ಲಿಕ್ ರಿಲೇಷನ್ಶಿಪ್ ವೃತ್ತಿಪರರು. ಪರದೆಯ ಹೆಸರು ಮಾಸ್ಟರ್ ಮಂಜುನಾಥ್ ಎಂಬ ಹೆಸರಿನಿಂದ ಅತಿ ಹೆಚ್ಚು ಗುರುತಿಸಲ್ಪಡುತ್ತಾರೆ. ಇವರು ಶಂಕರ್ ನಾಗ್ ನಿರ್ದೇಶನದ ಮಾಲ್ಗುಡಿ ಡೇಸ್ (೧೯೮೭) ಎಂಬ ಜನಪ್ರಿಯ ದೂರದರ್ಶನದ ಸರಣಿಯಲ್ಲಿನ "ಸ್ವಾಮಿ ಆಂಡ್ ಫ್ರೆಂಡ್ಸ್" ಸಂಚಿಕೆಗಳಲ್ಲಿ ಕಾಣಲು ಸಿಗುವ "ಸ್ವಾಮಿ" ಎಂಬ ಪ್ರಮುಖ ಪಾತ್ರದಿಂದ ಪ್ರಖ್ಯಾತರಾಗಿದ್ದಾರೆ.
ಸ್ಪರ್ಶಮಣಿಯು (ಸ್ಪರ್ಶವೇದಿ, ಪರುಷ) ಪಾದರಸದಂತಹ ಕ್ಷುದ್ರಲೋಹಗಳನ್ನು ಚಿನ್ನ ಅಥವಾ ಬೆಳ್ಳಿಯಾಗಿ ಬದಲಿಸುವ ಸಾಮರ್ಥ್ಯವಿದ್ದ ಒಂದು ಪೌರಾಣಿಕ ರಸವಿದ್ಯಾ ವಸ್ತು. ಇದನ್ನು ಸಿದ್ಧರಸವೆಂದು ಕೂಡ ಕರೆಯಲಾಗುತ್ತದೆ, ಮತ್ತು ನವಯೌವನಕ್ಕೆ ಮತ್ತು ಅಮರತ್ವವನ್ನು ಸಾಧಿಸಲು ಉಪಯುಕ್ತವಾಗಿತ್ತು; ಅನೇಕ ಶತಮಾನಗಳವರೆಗೆ, ರಸವಿದ್ಯೆಯಲ್ಲಿ ಇದು ಅತ್ಯಂತ ಅರಸಲಾದ ಗುರಿಯಾಗಿತ್ತು. ಸ್ಪರ್ಶಮಣಿಯು ರಸವಿದ್ಯೆಯ ಅತೀಂದ್ರಿಯ ಪರಿಭಾಷೆಯ ಕೇಂದ್ರ ಸಂಕೇತವಾಗಿತ್ತು, ಮತ್ತು ಶ್ರೇಷ್ಠತಮ ಮಟ್ಟದಲ್ಲಿ ಪರಿಪೂರ್ಣತೆ, ಜ್ಞಾನೋದಯ, ಮತ್ತು ಸ್ವರ್ಗಸುಖವನ್ನು ಸಂಕೇತಿಸುತ್ತಿತ್ತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
'ವರ್ಡ್ಪ್ರೆಸ್ ಎಂಬುದು ಒಂದು ಮುಕ್ತ ಮೂಲದ ಪಠ್ಯವಿಷಯ ನಿರ್ವಹಣಾ ವ್ಯವಸ್ಥೆಯಾಗಿದ್ದು (ಕಂಟೆಂಟ್ ಮ್ಯಾನೇಜ್ಮೆಂಟ್ ಸಿಸ್ಟಂ-CMS), PHP ಮತ್ತು MySQLನಿಂದ ಚಾಲಿಸಲ್ಪಡುವ ಒಂದು ಬ್ಲಾಗ್ ಪ್ರಕಟಣಾ ಅನ್ವಯಿಕೆಯಾಗಿ ಇದು ಅನೇಕವೇಳೆ ಬಳಸಲ್ಪಡುತ್ತದೆ. ಒಂದು ಪ್ಲಗ್-ಇನ್ ವಿನ್ಯಾಸ ಮತ್ತು ಒಂದು ಪಡಿಯಚ್ಚು ವ್ಯವಸ್ಥೆಯನ್ನು ಒಳಗೊಂಡಂತೆ ಇದು ಅನೇಕ ವೈಶಿಷ್ಟ್ಯಪೂರ್ಣ ಲಕ್ಷಣಗಳನ್ನು ಹೊಂದಿದೆ. ೧,೦೦೦,೦೦೦ದಷ್ಟಿರುವ ಅತಿದೊಡ್ಡ ವೆಬ್ಸೈಟ್ಗಳ ಪೈಕಿ ೧೩%ಗೂ ಹೆಚ್ಚಿನವುಗಳಿಂದ ವರ್ಡ್ಪ್ರೆಸ್ ಬಳಸಲ್ಪಡುತ್ತದೆ.
ಮುಮ್ಮಡಿ ಕೃಷ್ಣರಾಜ ಒಡೆಯರು (೧೭೯೪ - ಮಾರ್ಚ್ ೨೭, ೧೮೬೮) ಮುಮ್ಮಡಿ ಕೃಷ್ಣರಾಜ ಒಡೆಯರು ಮೈಸೂರು ಸಂಸ್ಥಾನದ ಮಹಾರಾಜರಾಗಿದ್ದವರು. ಮೈಸೂರು ರಾಜ್ಯದ ಇತಿಹಾಸದಲ್ಲಿ ತುಂಬಾ ಕಷ್ಟಕರ ಸಂದರ್ಭದಲ್ಲಿ ಅಧಿಕಾರಕ್ಕೆ ಬಂದವರು ಮುಮ್ಮಡಿ ಕೃಷ್ಣರಾಜ ಒಡೆಯರು. ಬ್ರಿಟಿಷರೊಡನೆ ೧೭೯೯ರ ಎರಡನೇ ಮೈಸೂರು ಯುದ್ಧದಲ್ಲಿ ಟಿಪ್ಪೂವಿನ ಮರಣಾನಂತರ, ಮೈಸೂರು ರಾಜ್ಯದ ಆಡಳಿತವನ್ನು ಪುನಃ ಮೈಸೂರು ಅರಸು ಮನೆತನಕ್ಕೆ ವಹಿಸಬೇಕೆಂಬ ಒಪ್ಪಂದವಾಯಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.