The most-visited English Wikipedia articles, updated daily. Learn more...
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ರೋಶನ್ ಕುಮಾರಿ ಫಕೀರ್ ಮೊಹಮ್ಮದ್ ಅವರು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ, ನಟಿ ಮತ್ತು ನೃತ್ಯ ಸಂಯೋಜಕಿ. ಕಥಕ್ನ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರದ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರೆಂದು ಇವರನ್ನು ಪರಿಗಣಿಸಲಾಗಿದೆ. ಅವರು ಜೈಪುರದ ಘರಾನಾವನ್ನು ಅನುಸರಿಸುತ್ತಾರೆ ಮತ್ತು ಕಥಕ್ಅನ್ನು ಉತ್ತೇಜಿಸುವ ಅಕಾಡೆಮಿಯಾದ ಮುಂಬೈನ ನೃತ್ಯ ಕಲಾ ಕೇಂದ್ರದ ಸಂಸ್ಥಾಪಕರಾಗಿದ್ದಾರೆ.
ಮೊಸಳೆಗಳು (ಉಪಕುಟುಂಬ ಕ್ರೊಕೊಡೈಲಿನಿ) ಆಫ್ರಿಕಾ, ಏಷ್ಯಾ, ಅಮೆರಿಕ ಮತ್ತು ಆಸ್ಟ್ರೇಲಿಯಾದಲ್ಲಿನ ಉಷ್ಣವಲಯದಾದ್ಯಂತ ವಾಸಿಸುವ ದೊಡ್ಡ ಜಲ ಸರೀಸೃಪಗಳು. ಕ್ರೊಕೊಡೈಲಿನಿಯನ್ನು ಜೈವಿಕ ಉಪಕುಟುಂಬ ಎಂದು ವರ್ಗೀಕರಿಸಲಾಗಿದೆ. ಕೆಲವೊಮ್ಮೆ ಮೊಸಳೆ ಪದವನ್ನು ಸಡಿಲವಾಗಿ ಟೋಮಿಸ್ಟೋಮಾ, ಅಲಿಗೇಟರ್ ಹಾಗೂ ಕೇಯ್ಮನ್ಗಳು (ಕುಟುಂಬ ಅಲಿಗೇಟರಿಡೀ), ಘರಿಯಾಲ್ಗಳು (ಕುಟುಂಬ ಗೇವಿಯಾಲಿಡೀ) ಸೇರಿದಂತೆ ಕ್ರೊಕೊಡೈಲಿಯಾ ಗಣದಲ್ಲಿರುವ ಎಲ್ಲ ಅಸ್ತಿತ್ವದಲ್ಲಿರುವ ಸದಸ್ಯರನ್ನು, ಮತ್ತು ಎಲ್ಲ ಇತರ ಜೀವಂತ ಹಾಗೂ ಪಳೆಯುಳಿಕೆ ಕ್ರೊಕೊಡೈಲೋಮಾರ್ಫ಼ಾವನ್ನು ಒಳಗೊಳ್ಳುವಂತೆ ಬಳಸಲಾಗುತ್ತದೆ.ಇವುಗಳು ಅನುಭವವಿಲ್ಲದ ಕಣ್ಣಿಗೆ ಹೋಲುವಂತೆ ಕಂಡುಬಂದರೂ, ಮೊಸಳೆಗಳು, ಅಲಿಗೇಟರ್ಗಳು ಮತ್ತು ಘರಿಯಾಲ್ ಪ್ರತ್ಯೇಕ ಜೈವಿಕ ಕುಟುಂಬಗಳಿಗೆ ಸೇರಿವೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಗುಜರಾತ್ ರಾಜ್ಯದಲ್ಲಿದೆ ಕಚ್ ಕೊಲ್ಲಿ ಸಾಗರ ರಾಷ್ಟ್ರೀಯ ಉದ್ಯಾನವನವು ಭಾರತದ ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಒಂದು ಸಾಗರ ಉದ್ಯಾನವನವಾಗಿದೆ . ಇದನ್ನು 1980 ರಲ್ಲಿ ಸಮುದ್ರ ಅಭಯಾರಣ್ಯವೆಂದು ಘೋಷಿಸಲಾಯಿತು, ಇದು ಓಖಾದಿಂದ ಜೋಡಿಯಾವರೆಗಿನ ಸುಮಾರು 270 ಚದರ ಕಿಲೋಮೀಟರ್ (100 ಚದರ ಮೈಲಿ) ಪ್ರದೇಶವನ್ನು ಒಳಗೊಂಡಿದೆ. ನಂತರ, 1982 ರಲ್ಲಿ, ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ನಿಬಂಧನೆಗಳ ಅಡಿಯಲ್ಲಿ 110 ಕಿಮೀ (68 ಚದರ ಮೈಲಿ) ಕೇಂದ್ರ ಪ್ರದೇಶವನ್ನು ಸಮುದ್ರ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು .
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪತ್ನಿಯು ಮದುವೆಯಲ್ಲಿನ ಒಬ್ಬ ಸ್ತ್ರೀ ಸಹಭಾಗಿ. ತನ್ನ ಪತಿ ಮತ್ತು ಇತರರ ಸಂಬಂಧವಾಗಿ, ಪತ್ನಿಯ ಹಕ್ಕುಗಳು ಮತ್ತು ಜವಾಬ್ದಾರಿಗಳು, ಮತ್ತು ಸಮುದಾಯ ಹಾಗೂ ಕಾನೂನಿನಲ್ಲಿ ಅವಳ ಸ್ಥಾನಮಾನ, ಸಂಸ್ಕೃತಿಗಳ ನಡುವೆ ಬದಲಾಗುತ್ತದೆ ಮತ್ತು ಕಾಲಾನುಸಾರ ಬದಲಾಗಿದೆ. "ಪತ್ನಿ" ಪದವು ವಧು ಪದಕ್ಕೆ ಹತ್ತಿರವಾಗಿದೆಯೆಂದು ಕಾಣುತ್ತದೆ, ವಧುವು ಮದುವೆ ಸಮಾರಂಭದಲ್ಲಿ ಒಬ್ಬ ಸ್ತ್ರೀ ಸಹಭಾಗಿಯಾದರೆ, ಮದುವೆಯ ನಂತರ ವಿವಾಹಿತ ಮಹಿಳೆಯು ಪತ್ನಿಯೆಂದು ಕರೆಯಲ್ಪಡುತ್ತಾಳೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.
ಉಮಾಶ್ರೀ (ಮೇ ೧೦, ೧೯೫೭) ಕನ್ನಡ ರಂಗಭೂಮಿ ಮತ್ತು ಚಲನಚಿತ್ರರಂಗದ ಪ್ರತಿಭಾನ್ವಿತ ಅಭಿನೇತ್ರಿ. ರಂಗಭೂಮಿಯ ತಾಜಾ ಪ್ರತಿಭೆಯಾದುದರಿಂದ, ಭಾವುಕತೆಯಲ್ಲಾಗಲಿ, ಹಾವ ಭಾವಗಳಲ್ಲಾಗಲಿ, ಅಭಿವ್ಯಕ್ತಿಯಲ್ಲಾಗಲಿ ಅವರ ಸಮಕ್ಕೆ ಇರುವ ಕಲಾವಿದರು ಅಪರೂಪವೆಂಬುದು ಕನ್ನಡ ಚಲನಚಿತ್ರಾಸಕ್ತರ ಒಕ್ಕೊರಲಿನ ಅಭಿಪ್ರಾಯ. ಕೆಲವೊಂದು ವೈಶಿಷ್ಟ್ಯಪೂರ್ಣ ಪಾತ್ರಗಳಲ್ಲಿ ಆಕೆ ತನ್ನ ಕಂಗಳಲ್ಲೇ ತುಂಬಿ ಕೊಡುವ ನಟನೆಯ ಪೂರ್ಣತ್ವ ಅಪ್ರತಿಮವಾದದ್ದು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಮಿನುಗುತಾರೆ ಕಲ್ಪನ (18 ಜುಲೈ 1943 – 12 ಮೇ 1979) ಎಂದೇ ಪ್ರಖ್ಯಾತರಾಗಿ, ಚಿತ್ರ ರಸಿಕರ ಮನಸ್ಸಿನಲ್ಲಿ ಅಚ್ಚಳಿಯದ ಪಾತ್ರಗಳನ್ನು ನಿರ್ವಹಿಸಿ ಜನಪ್ರಿಯತೆಯ ಉತ್ತುಂಗಕ್ಕೇರಿದ ನಟಿ ಕಲ್ಪನ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನವರು. ಚಿತ್ರರಂಗವನ್ನು ಪ್ರವೇಶಿಸುವ ಮೊದಲು ಅವರ ಹೆಸರು 'ಶರತ್ ಲತಾ'. 1943 ಜುಲೈ 18ರ ಮಧ್ಯಾಹ್ನ 3ಗಂಟೆಗೆ ಶ್ರೀಯುತ ಎನ್.ಎಸ್.ಕೃಷ್ಣಮೂರ್ತಿ ಮತ್ತು ಎಂ.ಜಾನಕಮ್ಮನವರ ಪುತ್ರಿಯಾಗಿ ಮಂಗಳೂರಿನ ವೆನ್ ಲ್ಯಾಕ್ ಸರಕಾರಿ ಆಸ್ಪತ್ರೆಯಲ್ಲಿ ಜನಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸಮುದ್ರವಾಸಿ ಅಥವಾ ನದೀಮುಖದಲ್ಲಿರುವ ಮೊಸಳೆ ಯು (ಕ್ರಾಕಡೈಲಸ್ ಪೋರೋಸಸ್ ) ಎಲ್ಲಾ ಜೀವಂತ ಸರೀಸೃಪಗಳ ಪೈಕಿ ಅತಿದೊಡ್ಡದು ಎನಿಸಿಕೊಂಡಿದೆ. ಆಸ್ಟ್ರೇಲಿಯಾದ ಉತ್ತರಭಾಗ, ಭಾರತದ ಪೂರ್ವಭಾಗದ ಕರಾವಳಿ ಮತ್ತು ಆಗ್ನೇಯ ಏಷ್ಯಾದ ಭಾಗಗಳಲ್ಲಿನ ತನಗೆ ಸರಿಹೊಂದುವ ಆವಾಸಸ್ಥಾನಗಳಲ್ಲಿ ಇದು ಕಂಡುಬರುತ್ತದೆ. ತಾನು ವಾಸಿಸುವಪ್ರದೇಶಗಳ ಸುತ್ತ ಮುತ್ತ ವಾಸಿಸುವ ಮನುಷ್ಯರ ಪಾಲಿಗೆ ಸಮುದ್ರವಾಸಿ ಮೊಸಳೆ ಅತ್ಯಂತ ಅಪಾಯಕಾರಿ ಎನ್ನಲಾಗಿದೆ.
ಅಲಿಪ್ತ ಚಳುವಳಿ (Non Aligned Movement (ನ್ಯಾಮ್)(ಎನ್ಎಎಂ)), ಅಮೇರಿಕಾ ಹಾಗು ಹಿಂದಿನ ಸೊವಿಯತ್ ಸಂಘದ ನಡುವಿನ ಶೀತಲ ಸಮರದ ಕಾಲದಲ್ಲಿ, ಎರಡೂ ಶಕ್ತಿ ಕೇಂದ್ರಗಳಿಂದ ದೂರವುಳಿದು ಈ ಸಂಘಟನೆಯ ಮುಖ್ಯ ದ್ಯೇಯವಾಗಿತ್ತು. ಇದು ಯುನೈಟೆಡ್ ಸೈಟ್ಸ್ ಮತ್ತು ಸೋವಿಯತ್ ಒಕ್ಕೂಟದ ಯಾವುದೇ ಪ್ರಮುಖ ರಾಜಕೀಯ ಶಕ್ತಿಯೊಂದಿಗೆ ಔಪಚಾರಿಕವಾಗಿ ಅಥವಾ ವಿರುದ್ಧವಾಗಿ ನಿಲ್ಲುವುದಿಲ್ಲ. ವಿಶ್ವಸಂಸ್ಥೆಯ ನಂತರ, ಇದು ವಿಶ್ವದಾದ್ಯಂತ ರಾಜ್ಯಗಳ ಅತಿದೊಡ್ಡ ಗುಂಪು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದಲ್ಲಿ ಆರ್ಥಿಕವಾಗಿ ಹಿಂದುಳಿದ ವರ್ಗವು (ಇಡಬ್ಲ್ಯೂಎಸ್) ಸಾಮಾನ್ಯ ವರ್ಗಕ್ಕೆ ಸೇರಿದ ಜನರ ಉಪವರ್ಗವಾಗಿದ್ದು, ವಾರ್ಷಿಕ ಕುಟುಂಬ ಆದಾಯ ೮ ಲಕ್ಷಕ್ಕಿಂತ ಕಡಿಮೆ ಮತ್ತು ಎಸ್ಸಿ / ಎಸ್ಟಿ / ಒಬಿಸಿ (ಕೇಂದ್ರ ಪಟ್ಟಿ) ಯಂತಹ ಯಾವುದೇ ಕಾಯ್ದಿರಿಸಿದ ವರ್ಗಕ್ಕೆ ಸೇರದವರಾಗಿರುತ್ತಾರೆ. ಇಡಬ್ಲ್ಯೂಎಸ್ ಅಭ್ಯರ್ಥಿಯ ವಾರ್ಷಿಕ ಕುಟುಂಬ ಆದಾಯವು ನಿಗದಿತ ಮಿತಿಗಿಂತ ಹೆಚ್ಚಿದ್ದರೆ, ಅವನು / ಅವಳು ಸಾಮಾನ್ಯ ವರ್ಗದ ಅಭ್ಯರ್ಥಿಯಾಗಿ ಗುರುತಿಸಲ್ಪಡುತ್ತಾರೆ ಹೊರತು ಇಡಬ್ಲ್ಯೂಎಸ್ ವರ್ಗದಿಂದಲ್ಲ. ಕೇಂದ್ರ ಸರ್ಕಾರವು ಭಾರತ ಸಂವಿಧಾನ (೧೨೪ನೇ ತಿದ್ದುಪಡಿ) ಮಸೂದೆಯನ್ನು ೨೦೧೯ರಲ್ಲಿ ಈ ವರ್ಗದ ಬಗ್ಗೆ ಮಂಡಿಸಿದೆ.
ಶೇರು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿ ಇರುವ ಯಾವುದೇ ಒಂದು ಒಂದು ಶೇರಿನ ಮುಖಬೆಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಮುಖಬೆಲೆ ಸೀಳಿಕೆ (ಆಂಗ್ಲ ಭಾಷೆಯಲ್ಲಿ-Stock split) ಎಂದು ಕರೆಯಲಾಗುತ್ತದೆ. ಮುಖಬೆಲೆ ವಿಭಜನೆ ಮಾಡುವುದರಿಂದ, ಮಾರುಕಟ್ಟೆಯಲ್ಲಿ ಆ ಶೇರಿನ ದ್ರವ್ಯತೆ(ಕೊಳ್ಳುವ ಮತ್ತು ಮಾರುವ ಪ್ರಮಾಣ) ಹೆಚ್ಚುತ್ತದೆ. ಶೇರಿನ ಮುಖಬೆಲೆಯನ್ನು ವಿಭಜಿಸುವುದರಿಂದ ಆ ಸಂಸ್ಥೆಯ ಶೇರಿನ ಬೆಲೆಯಲ್ಲಿ ವ್ಯತ್ಯಾಸವಾಗಬಹುದು ಹೊರತಾಗಿ, ಸಂಸ್ಥೆಯ ಮಾರುಕಟ್ಟೆ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಕರ್ನಾಟಕ ಲೋಕಾಯುಕ್ತ ಭಾರತದ ಕರ್ನಾಟಕ ರಾಜ್ಯದ ತನಿಖಾ ಸಂಸ್ಥೆಯಾಗಿದೆ. ಕರ್ನಾಟಕ ಸರ್ಕಾರದಲ್ಲಿನ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲು ಮತ್ತು ವರದಿ ಮಾಡಲು ಮತ್ತು ರಾಜ್ಯ ಸರ್ಕಾರಿ ನೌಕರರಿಗೆ ಸಂಬಂಧಿಸಿದ ಸಾರ್ವಜನಿಕ ಕುಂದುಕೊರತೆಗಳನ್ನು ಪರಿಹರಿಸಲು ಇದನ್ನು 1984 ರಲ್ಲಿ ಸ್ಥಾಪಿಸಲಾಯಿತು. ಒಂದು ಕಾಲದಲ್ಲಿ ದೇಶದ ಅತ್ಯಂತ ಶಕ್ತಿಶಾಲಿ ಸಂಸ್ಥೆ ಎಂದು ಪರಿಗಣಿಸಲ್ಪಟ್ಟು ಈ ಲೋಕಾಯುಕ್ತ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.