The most-visited English Wikipedia articles, updated daily. Learn more...
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಗೂಗಲ್ ಡೂಡಲ್ ಎಂಬುದು ರಜಾದಿನಗಳು, ಘಟನೆಗಳು, ಸಾಧನೆಗಳು ಮತ್ತು ಜನರ ಬಗೆಗಿನ ವಿಚಾರಗಳನ್ನು ಆಧರಿಸಿ ಆಚರಿಸಲು ಉದ್ದೇಶಿಸಿರುವ ಗೂಗಲ್ನ ಮುಖಪುಟ. ಇದನ್ನು ಗಮನಿಸಿಕೊಂಡು ಗೂಗಲ್ ಲೋಗೋದ ವಿಶೇಷತೆಯನ್ನು, ತಾತ್ಕಾಲಿಕ ಬದಲಾವಣೆಗಳನ್ನು ಮಾಹಿತಿಯಾಗಿ ತಯಾರಿಸುವುದು. ಕೆಲವು ಸಂದರ್ಭಗಳಲ್ಲಿ ಸರ್ವರ್ಗಳು ಕುಸಿದಲ್ಲಿ ಅದರ ಅನುಪಸ್ಥಿತಿಯಲ್ಲಿ ಬಳಕೆದಾರರಿಗೆ ತಿಳಿಸಲು ಲ್ಯಾರಿ ಪೇಜ್ ಮತ್ತು ಸರ್ಜೆ ಬ್ರಿನ್ ಈ ವ್ಯವಸ್ಥೆಯನ್ನು ವಿನ್ಯಾಸಗೊಳಿಸಿದರು.
ಹಕ್ಕುಗಳು ಸ್ವಾತಂತ್ರ್ಯ ಅಥವಾ ಅರ್ಹತೆಯ ಕಾನೂನಾತ್ಮಕ, ಸಾಮಾಜಿಕ, ಅಥವಾ ನೈತಿಕ ತತ್ವಗಳು; ಅಂದರೆ, ಹಕ್ಕುಗಳು ಯಾವುದಾದರೂ ಕಾನೂನು ವ್ಯವಸ್ಥೆ, ಸಾಮಾಜಿಕ ಸಂಪ್ರದಾಯ, ಅಥವಾ ನೈತಿಕ ಸಿದ್ದಾಂತದ ಪ್ರಕಾರ, ಜನರಿಗೆ ಏನು ಅವಕಾಶವಿದೆ ಎಂಬುವುದರ ಬಗ್ಗೆ ಮೂಲಭೂತ ಪ್ರಮಾಣಕ ನಿಯಮಗಳು. ಕಾನೂನು ಮತ್ತು ನೀತಿಶಾಸ್ತ್ರದಂತಹ ವಿಭಾಗಗಳಲ್ಲಿ, ಹಕ್ಕುಗಳು ಅತ್ಯಗತ್ಯ ಪ್ರಾಮುಖ್ಯತೆ ಇರುವಂಥವು, ವಿಶೇಷವಾಗಿ ನ್ಯಾಯ ಮತ್ತು ಕರ್ತವ್ಯಶಾಸ್ತ್ರದ ಸಿದ್ಧಾಂತಗಳಲ್ಲಿ. ಹಕ್ಕುಗಳು ಹಲವುವೇಳೆ ನಾಗರಿಕತೆಗೆ ಮೂಲಭೂತವಾಗಿರುವಂಥವು ಎಂದು ಪರಿಗಣಿತವಾಗಿವೆ, ಮತ್ತು ಸಮಾಜ ಹಾಗೂ ಸಂಸ್ಕೃತಿಯ ಸ್ಥಾಪಿತ ಆಧಾರಸ್ತಂಭಗಳು ಎಂದು ಪರಿಗಣಿತವಾಗಿವೆ, ಮತ್ತು ಸಾಮಾಜಿಕ ಸಂಘರ್ಷಗಳ ಇತಿಹಾಸವನ್ನು ಪ್ರತಿಯೊಂದು ಹಕ್ಕು ಮತ್ತು ಅದರ ಬೆಳವಣಿಗೆಯ ಇತಿಹಾಸದಲ್ಲಿ ಕಂಡುಕೊಳ್ಳಬಹುದು.
ಉಪ್ಪಿನ ಕಾಯಿ ಉಪ್ಪು, ಹುಳಿ(ಆಮ್ಲ), ಕಾರ, ಕಾಡಿ (ವಿನೇಗರ್), ಎಣ್ಣೆ, ಸಕ್ಕರೆ ಇಲ್ಲವೇ ಇವುಗಳ ಮಿಶ್ರಣದಲ್ಲೆ ಊರಿಟ್ಟ ಹಸಿಯ ಹುಳಿಗಾಯಿ, ತರಕಾರಿ ತೆರನ ವಸ್ತುಗಳೇ ಉಪ್ಪಿನಕಾಯಿ (ಪಿಕಲ್). ಬಹುಬೇಗ ಕೆಟ್ಟುಹೋಗುವ ಇಂಥ ಪದಾರ್ಥಗಳನ್ನು ಬಹುದಿನ ಕೆಡದಂತಿರಿಸಲು ಈ ವಿಧಾನವನ್ನು ಬಳಸುತ್ತಾರೆ. ಅಂದರೆ ರುಚಿಗೆ ತಕ್ಕಂತೆ ಉಪ್ಪಿನಕಾಯಿಯಲ್ಲಿ ಸಿಹಿ, ಹುಳಿ, ಎಂಬ ಎರಡು ಬಗೆಯವಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಪುರಾತನ ಇತಿಹಾಸ, ಅನನ್ಯ ಭೌಗೋಳಿಕ ರಚನೆ, ವೈವಿಧ್ಯಮಯ ಜನ ಸಮುದಾಯ, ವಿಭಿನ್ನ ಸಂಪ್ರದಾಯಗಳು ಮತ್ತು ಆಚರಣೆಗಳು, ಪ್ರಾಚೀನ ಪರಂಪರೆ ಹಾಗೂ ನೆರೆಹೊರೆ ರಾಷ್ಟ್ರಗಳ ಪ್ರಭಾವಗಳು ಭಾರತೀಯ ಸಂಸ್ಕೃತಿ ಯನ್ನು ರೂಪಿಸಿವೆ. ಸಿಂಧೂ ಕಣಿವೆ ನಾಗರಿಕತೆ ಯಿಂದ ಆರಂಭಗೊಂಡ ಭಾರತೀಯ ಸಂಸ್ಕೃತಿ ವೇದಗಳ ಕಾಲದಲ್ಲಿ ಅಸಾಧಾರಣ ವಿಕಸನ ಕಂಡಿತು. ಇದಾದ ನಂತರ ಬೌದ್ಧ ಧರ್ಮದ ಉನ್ನತಿ ಮತ್ತು ಅವನತಿ, ಸುವರ್ಣ ಯುಗ, ಮುಸ್ಲಿಂ ಆಳ್ವಿಕೆಗೆ ಭಾರತ ಅಧೀನವಾದದ್ದು ಹಾಗೂ ಯುರೋಪಿಯನ್ನರ ವಸಾಹತು ಆಳ್ವಿಕೆ ಸಂದರ್ಭದಲ್ಲಿ ಈ ವಿಕಸನ ಮತ್ತಷ್ಟು ವೈವಿಧ್ಯಮಯವಾಯಿತು.
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ
ಸಾಗರಜೀವಿರಾಷ್ಟ್ರೀಯ ಉದ್ಯಾನ, ಕಚ್ಛ್ ಕೊಲ್ಲಿ ರಾಷ್ಟ್ರೀಯ ಉದ್ಯಾನವು ಭಾರತದ ಗುಜರಾತ್ ರಾಜ್ಯದಲ್ಲಿದೆ ಕಚ್ ಕೊಲ್ಲಿ ಸಾಗರ ರಾಷ್ಟ್ರೀಯ ಉದ್ಯಾನವನವು ಭಾರತದ ಗುಜರಾತ್ ರಾಜ್ಯದ ದೇವಭೂಮಿ ದ್ವಾರಕಾ ಜಿಲ್ಲೆಯ ಕಚ್ ಕೊಲ್ಲಿಯ ದಕ್ಷಿಣ ತೀರದಲ್ಲಿರುವ ಒಂದು ಸಾಗರ ಉದ್ಯಾನವನವಾಗಿದೆ . ಇದನ್ನು 1980 ರಲ್ಲಿ ಸಮುದ್ರ ಅಭಯಾರಣ್ಯವೆಂದು ಘೋಷಿಸಲಾಯಿತು, ಇದು ಓಖಾದಿಂದ ಜೋಡಿಯಾವರೆಗಿನ ಸುಮಾರು 270 ಚದರ ಕಿಲೋಮೀಟರ್ (100 ಚದರ ಮೈಲಿ) ಪ್ರದೇಶವನ್ನು ಒಳಗೊಂಡಿದೆ. ನಂತರ, 1982 ರಲ್ಲಿ, ಭಾರತದ ವನ್ಯಜೀವಿ ಸಂರಕ್ಷಣಾ ಕಾಯ್ದೆ, 1972 ರ ನಿಬಂಧನೆಗಳ ಅಡಿಯಲ್ಲಿ 110 ಕಿಮೀ (68 ಚದರ ಮೈಲಿ) ಕೇಂದ್ರ ಪ್ರದೇಶವನ್ನು ಸಮುದ್ರ ರಾಷ್ಟ್ರೀಯ ಉದ್ಯಾನವನವೆಂದು ಘೋಷಿಸಲಾಯಿತು .
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ರೋಶನ್ ಕುಮಾರಿ ಫಕೀರ್ ಮೊಹಮ್ಮದ್ ಅವರು ಭಾರತೀಯ ಶಾಸ್ತ್ರೀಯ ನೃತ್ಯಗಾರ್ತಿ, ನಟಿ ಮತ್ತು ನೃತ್ಯ ಸಂಯೋಜಕಿ. ಕಥಕ್ನ ಭಾರತೀಯ ಶಾಸ್ತ್ರೀಯ ನೃತ್ಯ ಪ್ರಕಾರದ ಪ್ರಮುಖ ಪ್ರತಿಪಾದಕರಲ್ಲಿ ಒಬ್ಬರೆಂದು ಇವರನ್ನು ಪರಿಗಣಿಸಲಾಗಿದೆ. ಅವರು ಜೈಪುರದ ಘರಾನಾವನ್ನು ಅನುಸರಿಸುತ್ತಾರೆ ಮತ್ತು ಕಥಕ್ಅನ್ನು ಉತ್ತೇಜಿಸುವ ಅಕಾಡೆಮಿಯಾದ ಮುಂಬೈನ ನೃತ್ಯ ಕಲಾ ಕೇಂದ್ರದ ಸಂಸ್ಥಾಪಕರಾಗಿದ್ದಾರೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಕಯ್ಯಾರ ಕಿಞ್ಞಣ್ಣ ರೈ (ಜೂನ್ ೮,೧೯೧೫ - ಆಗಸ್ಟ್ ೯,೨೦೧೫) ಅಖಿಲ ಕರ್ನಾಟಕದ ಮಹಾಕವಿಯಾಗಿ, ಹಿರಿಯ ಸಾಹಿತಿಯಾಗಿ,ಬಹುಭಾಷಾ ವಿದ್ವಾಂಸರಾಗಿ, ಸ್ವಾತಂತ್ರ್ಯ ಹೋರಾಟಗಾರರಾಗಿ,ಕರ್ನಾಟಕ ಏಕೀಕರಣ ಚಳುವಳಿಯಲ್ಲಿ ಮುಂಚೂಣಿಯ ನಾಯಕರಾಗಿ, ಕಾಸರಗೋಡು ವಿಲೀನೀಕರಣ ಕ್ರಿಯಾಸಮಿತಿಯ ಪ್ರಧಾನ ಸಂಚಾರಕರಾಗಿ,ನಿರಂತರವಾಗಿ ದುಡಿದವರು. ನಾಡೋಜ ಡಾ.ಕಯ್ಯಾರ ಕಿಞ್ಞಣ್ಣ ರೈರವರು, ಅಖಿಲಭಾರತ ಮಟ್ಟದಲ್ಲಿ ಜರುಗಿದ ೬೬ ನೆಯ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆ ವಹಿಸಿದ್ದರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕರ್ನಾಟಕದಲ್ಲಿ ಕನ್ನಡೇತರ ಭಾಷೆಗಳು ಮತ್ತು ಸಾಹಿತ್ಯ
ಕನ್ನಡೇತರ ಭಾಷೆಗಳು ಮತ್ತು ಸಾಹಿತ್ಯ ಕರ್ನಾಟಕದಲ್ಲಿ ಕನ್ನಡ ವಲ್ಲದೆ ಇತರ 165 ಭಾಷೆಗಳು ಪ್ರಚಲಿತವಾಗಿವೆ. ಆದರೆ ಇವುಗಳಲ್ಲಿ ಹೆಚ್ಚಿನವು (ಉದಾ:ಆರ್ಮೇನಿಯನ್,ಇಂಡೊನೇಷ್ಯನ್) ಉದ್ಯೋಗ ಇತ್ಯಾದಿಗಳಿಗಾಗಿ ಬೇರೆ ದೇಶಗಳಿಂದ ಬಂದು ನೆಲಸಿದ ಕೆಲವೇ ವ್ಯಕ್ತಿ ಅಥವಾ ಕುಟುಂಬಗಳಿಗಷ್ಟೇ ಸೀಮಿತವಾಗಿವೆ. ಹೆಚ್ಚಿನ ಜನರ ಮಾತೃಭಾಷೆಯಾಗುಳ್ಳ ಕನ್ನಡೇತರ ಭಾಷೆಗಳಿವು:ತುಳು,ತಮಿಳು, ಕೊಂಕಣಿ, ಮಲಯಾಳಂ, ತಿಗಳಾರಿ, ಅರವು, ಲಂಬಾಣಿ, ಹಿಂದೀ, ಉರ್ದು, ಕೊಡವ, ಬಂಜಾರಿ, ಗುಜಕ್ಷತ್ರಿಯ, ಇಂಗ್ಲಿಷ್, ಮಾರ್ವಾರಿ, ಎರವ, ತಿಬೆಟನ್, ಸಿಂಧಿ, ಬಂಗಾಲಿ, ಪಂಜಾಬಿ, ಅರಬ್ಬೀ, ಹಿಂದುಸ್ಥಾನೀ, ರಾಜಸ್ತಾನೀ, ಕುರುಂಬ, ಕೊರಚ, ವಡರಿ, ಕೊರವ, ಕೊಂಗರ್, ವ್ರಜಭಾಷಾ, ನೇಪಾಲಿ.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಮಹದೇಶ್ವರ ಬೆಟ್ಟ ಕರ್ನಾಟಕದ ದಕ್ಷಿಣ ತುದಿಯ ಗಡಿಜಿಲ್ಲೆ ಚಾಮರಾಜನಗರದ ಹನೂರು ತಾಲೂಕಿನ ಮುಖ್ಯ ಶ್ರದ್ಧಾಭಕ್ತಿ ಕೇಂದ್ರ. ದೇವಸ್ಥಾನವು ಬೆಟ್ಟಗಳಿಂದ ಸುತ್ತುವರಿದಿರುವ ಕಾರಣ ಮಹದೇಶ್ವರ ಬೆಟ್ಟವೆಂದು ಕರೆಯಲಾಗುತ್ತದೆ. ಪಶ್ಚಿಮಘಟ್ಟಗಳ ಭಾಗದಿಂದ ಆರಂಭವಾಗಿ ಪೂರ್ವಘಟ್ಟಗಳ ಕಡೆಗೆ ಹರಡಿಕೊಂಡಿರುವ ಬೆಟ್ಟ ಸಾಲುಗಳಲ್ಲಿ ಕರ್ನಾಟಕ-ತಮಿಳುನಾಡು ಗಡಿಯಲ್ಲಿ ಹಬ್ಬಿರುವ ಮಹದೇಶ್ವರ ಬೆಟ್ಟ ದಖನ್ ಪ್ರಸ್ಥಭೂಮಿಯ ಬಹುಮುಖ್ಯ ಭಾಗವೂ ಕೂಡ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಬಾವಲಿಗಳು ಮುಂಗಾಲುಗಳು ಜಾಲ ರೆಕ್ಕೆಗಳನ್ನು ರಚಿಸುವ, ಮತ್ತು ಇದರಿಂದ ಇವು ಸಹಜವಾಗಿ ನಿಜವಾದ ಮತ್ತು ಅವಿಶ್ರಾಂತವಾದ ಹಾರಾಟವನ್ನು ನಡೆಸಬಲ್ಲ ಏಕೈಕ ಸಸ್ತನಿಯಾಗಿರುವ ಕೈರಾಪ್ಟರಾ ಗಣದ ಸಸ್ತನಿಗಳು. ತದ್ವಿರುದ್ಧವಾಗಿ, ಹಾರುವಳಿಲುಗಳು, ತೇಲುವ ಪಾಸಮ್ಗಳು, ಮತ್ತು ಕಲೂಗೊಗಳಂತಹ, ಹಾರುತ್ತವೆ ಎಂದು ಹೇಳಲಾಗುವ ಇತರ ಸಸ್ತನಿಗಳು, ಕೇವಲ ಅಲ್ಪ ದೂರದವರೆಗೆ ತೇಲಬಲ್ಲವು. ಬಾವಲಿಗಳು ಪಕ್ಷಿಗಳಂತೆ ತಮ್ಮ ಇಡಿ ಮುಂಗಾಲುಗಳನ್ನು ಬಡಿಯುವುದಿಲ್ಲ, ಬದಲಾಗಿ ತಮ್ಮ ಹೊರ ಹರಡಿಕೊಂಡ, ಅತಿ ಉದ್ದನೆಯ ಮತ್ತು ತೆಳು ಪೊರೆಯಿಂದ ಅಥವಾ ಪಟೇಜಿಯಮ್ನಿಂದ ಆವೃತವಾಗಿರುವ ಬೆರಳುಗಳನ್ನು ಬಡಿಯುತ್ತವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.