The most-visited English Wikipedia articles, updated daily. Learn more...
"ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಪ್ರಹ್ಲಾದ ವೆಂಕಟೇಶ್ ಜೋಶಿ (ಜನನ 27 ನವೆಂಬರ್ 1962) ಅವರು ಕೇಂದ್ರ ಕಲ್ಲಿದ್ದಲು, ಗಣಿ ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿದ್ದಾರೆ, ಅವರು ಮೇ 30, 2019 ರಿಂದ ಲೋಕಸಭೆಯಲ್ಲಿ ಸಂಸತ್ ಸದಸ್ಯರಾಗಿದ್ದಾರೆ, 2004 ರಿಂದ, ಧಾರವಾಡ ಲೋಕಸಭಾ ಕ್ಷೇತ್ರವನ್ನು ಪ್ರತಿನಿಧಿಸುತ್ತಿದೆ. ಅವರು 2014 ರಿಂದ 2016 ರವರೆಗೆ ಕರ್ನಾಟಕದ ಭಾರತೀಯ ಜನತಾ ಪಕ್ಷದ (ಬಿಜೆಪಿ) ರಾಜ್ಯ ಅಧ್ಯಕ್ಷರಾಗಿದ್ದರು. ಲೋಕಸಭೆಯ (2014-2018) ಅಧ್ಯಕ್ಷರ ಸಮಿತಿಯಲ್ಲಿ ಸೇವೆ ಸಲ್ಲಿಸಿದರು.
ಕಾರ್ಗಿಲ್ ಸಂಘರ್ಷ ವೆಂದೇ ಹೆಸರಾದ ಕಾರ್ಗಿಲ್ ಯುದ್ಧವು ಭಾರತ ಮತ್ತು ಪಾಕಿಸ್ತಾನದ ಮಧ್ಯೆ ನಡೆದ ಸಶಸ್ತ್ರ ಸಂಘರ್ಷವಾಗಿದ್ದು, ಕಾಶ್ಮೀರದ ಕಾರ್ಗಿಲ್ ಜಿಲ್ಲೆ ಮತ್ತು ನಿಯಂತ್ರಣ ರೇಖೆ (LOC) ಇರುವ ಪ್ರದೇಶಗಳಲ್ಲಿ 1999ರ ಮೇ ಮತ್ತು ಜುಲೈ ನಡುವೆ ಸಂಭವಿಸಿತು. ಭಾರತದಲ್ಲಿ ಈ ಸಂಘರ್ಷವನ್ನು ಆಪರೇಷನ್ ವಿಜಯ್ ಎಂದೂ ಉಲ್ಲೇಖಿಸಲಾಗುತ್ತದೆ, ಇದು ಈ ಪ್ರದೇಶದಲ್ಲಿನ ಭಾರತೀಯ ಸೇನಾ ಕಾರ್ಯಾಚರಣೆಯ ಸಂಕೇತನಾಮವಾಗಿದೆ. ಭಾರತೀಯ ವಾಯುಪಡೆಯು ಭಾರತೀಯ ಸೇನೆಯೊಂದಿಗೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಪಾಕಿಸ್ತಾನ ಸೇನೆ ಮತ್ತು ಅರೆಸೇನಾ ಪಡೆಗಳನ್ನು ಗಡಿ ನಿಯಂತ್ರಣ ರೇಖೆಯ ಉದ್ದಕ್ಕೂ ಖಾಲಿಯಾದ ಭಾರತೀಯ ಸ್ಥಾನಗಳಿಂದ ಹೊರಹಾಕಿತು, ಇದನ್ನು ಆಪರೇಷನ್ ಸಫೇದ್ ಸಾಗರ್ (ಬಿಳಿ ಸಾಗರ) ಎಂದು ಹೆಸರಿಸಲಾಯಿತು.
ಏಕಾದಶ ಈ ಸಂಸ್ಕೃತ ಪದದ ಅರ್ಥ ಹನ್ನೊಂದು(೧೧).ಹಿಂದೂ ಪಂಚಾಂಗದ ೧೨ ಮಾಸಗಳ ಶುಕ್ಲ ಪಕ್ಷದ ಮತ್ತು ಕೃಷ್ಣ ಪಕ್ಷದ ಹನ್ನೊಂದನೆಯ ದಿನವನ್ನು ಏಕಾದಶಿ ಎನ್ನಲಾಗುತ್ತದೆ.ಒಂದು ಮಾಸದಲ್ಲಿ ಎರಡು ಏಕಾದಶಿಗಳಿರುತ್ತವೆ.ಈ ದಿನದಂದು ಯಾವ ಆಹಾರವನ್ನೂ ಸೇವಿಸದೆ,ಉಪವಾಸ ಮಾಡುವ ಸಂಪ್ರದಾಯವಿದೆ.ಈ ದಿನದಂದು ಕೆಲವರು ಅನ್ನವನ್ನು ಮಾತ್ರ ತ್ಯಜಿಸಿ ಉಪವಾಸ ಆಚರಿಸಿದರೆ,ಮತ್ತೆ ಕೆಲವರು ಹನಿ ನೀರನ್ನೂ ಕುಡಿಯದೆ,ನಿರಾಹಾರ ವ್ರತವನ್ನು ಆಚರಿಸುತ್ತಾರೆ.ಏಕಾದಶಿಯ ದಿನ ಉಪವಾಸವಿದ್ದು,ಮಾರನೆಯ ದಿನ ಅಂದರೆ ದ್ವಾದಶಿಯಂದು ಬೆಳಿಗ್ಗೆ ೯ ಘಂಟೆಯೊಳಗಾಗಿ ಪಾರಣೆ(ಊಟ)ಮಾಡುವ ಸಂಪ್ರದಾಯವಿದೆ. ಕೆಲವರು ಏಕಾದಶಿಯಂದು ಮೌನ ವ್ರತ ಸಹ ಆಚರಿಸುತ್ತಾರೆ. ವೈಕುಂಠ ಏಕಾದಶಿ ಏಕಾದಶಿಗಳಲ್ಲಿ ವಿಶೇಷ ದಿನ.ಚಾಂದ್ರಮಾನ ಪುಷ್ಯಮಾಸ ಶುಕ್ಲಪಕ್ಷದ ಏಕಾದಶಿಯೇ ಈ ವಿಶೇಷ ದಿನ.
ವಿಠ್ಠಲ ದೇವಸ್ಥಾನ, ಪಂಢರಪುರ ಇದು ಹಿಂದೂ ದೇವರಾದ ವಿಠ್ಠಲನ ಪೂಜಿಸುವ ಮುಖ್ಯ ಶ್ರದ್ಧಾ-ಭಕ್ತಿ ಕೇಂದ್ರ ಹಾಗು ಭಾರತದ ಸುಪ್ರಸಿದ್ಧ ತೀರ್ಥಕ್ಷೇತ್ರ.ಇಲ್ಲಿ ಶ್ರೀ ಕೃಷ್ಣ ಹಾಗು ಆತನ ಪತ್ನಿಯಾದ ರುಕ್ಮಿಣಿ ಶಿಲಾ ರೂಪದಲ್ಲಿ ನೆಲೆಸಿದ್ದಾರೆ ಎಂಬ ನಂಬಿಕೆ ಭಕ್ತ ಸಮೂಹದ್ದು. ಇದು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಭಕ್ತರು ಭೇಟಿ ನೀಡುವ ಪ್ರಮುಖ ದೇವಸ್ಥಾನಗಳಲ್ಲೊಂದು. ಭಕ್ತಾದಿಗಳು ತಮ್ಮ ಮನೆಗಳಿಂದ ಗುಂಪು ಗುಂಪಾಗಿ ಪಾದಯಾತ್ರೆ(ದಿಂಡಿಯಾತ್ರೆ) ಮಾಡಿ ಆಷಾಢ ಏಕಾದಶಿ ಹಾಗು ಕಾರ್ತಿಕ ಏಕಾದಶಿಗಳಂದು ವಿಶೇಷ ಪೂಜೆಗಳಿಗೆ ಹಾಗು ಹರಕೆಗಳಿಗೆ ಸೇರುತ್ತಾರೆ.
ವಿಠ್ಠಲ, ವಿಠೋಬಾ ಮತ್ತು ಪಾಂಡುರಂಗ ಎಂದೂ ಪರಿಚಿತನಿರುವ, ಮುಖ್ಯವಾಗಿ ಭಾರತದ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಆಂಧ್ರ ಪ್ರದೇಶಗಳಲ್ಲಿ ಆರಾಧಿಸಲಾಗುವ ಒಬ್ಬ ಹಿಂದೂ ದೇವರು. ಅವನನ್ನು ಸಾಮಾನ್ಯವಾಗಿ ಹಿಂದೂ ವಿಷ್ಣು ಅಥವಾ ಅವನ ಅವತಾರನಾದ ಕೃಷ್ಣ ಅಥವಾ, ಪ್ರಾಸಂಗಿಕವಾಗಿ, ಅವನ ಅವತಾರ ಬುದ್ಧನ ಒಂದು ಸ್ವರೂಪವೆಂದು ಪರಿಗಣಿಸಲಾಗುತ್ತದೆ. ಕೆಲವೊಮ್ಮೆ ಅವನನ್ನು ಶಿವನೊಂದಿಗೂ ಸಂಬಂಧಿಸಲಾಗುತ್ತದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಪುರಿಯ ಶ್ರೀ ಜಗನ್ನಾಥ ದೇವಾಲಯವು ಭಾರತದ ಪೂರ್ವ ಕರಾವಳಿಯ ಒಡಿಶಾ ರಾಜ್ಯದ ಪುರಿಯಲ್ಲಿ ವಿಷ್ಣುವಿನ ಒಂದು ರೂಪವಾದ ಜಗನ್ನಾಥನಿಗೆ ಸಮರ್ಪಿತವಾದ ಪ್ರಮುಖ ಹಿಂದೂ ದೇವಾಲಯವಾಗಿದೆ. ಪ್ರಸ್ತುತ ದೇವಾಲಯವನ್ನು 10 ನೇ ಶತಮಾನದಿಂದ ಹಿಂದಿನ ದೇವಾಲಯದ ಸ್ಥಳದಲ್ಲಿ ಪುನರ್ನಿರ್ಮಿಸಲಾಯಿತು ಮತ್ತು ಪೂರ್ವ ಗಂಗಾ ರಾಜವಂಶದ ಮೊದಲನೆಯ ರಾಜ ಅನಂತವರ್ಮನ್ ಚೋಡಗಂಗ ದೇವನಿಂದ ಪ್ರಾರಂಭಿಸಲಾಯಿತು. ಪುರಿ ದೇವಾಲಯವು ವಾರ್ಷಿಕ ರಥಯಾತ್ರೆ ಅಥವಾ ರಥ ಉತ್ಸವಕ್ಕೆ ಹೆಸರುವಾಸಿಯಾಗಿದೆ, ಇದರಲ್ಲಿ ಮೂರು ಪ್ರಮುಖ ದೇವತೆಗಳನ್ನು ಬೃಹತ್ ಮತ್ತು ವಿಸ್ತಾರವಾಗಿ ಅಲಂಕರಿಸಿದ ದೇವಾಲಯದ ರಥಗಳ ಮೇಲೆ ಎಳೆಯಲಾಗುತ್ತದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಭಾರತದ ಚುನಾವಣಾ ಆಯೋಗವು ಭಾರತದಲ್ಲಿ ಚುನಾವಣಾ ಪ್ರಕ್ರಿಯೆಗಳನ್ನು ನಿರ್ವಹಿಸುವ ಜವಾಬ್ದಾರಿಯನ್ನು ಹೊಂದಿರುವ ಸ್ವಾಯತ್ತ ಸಾಂವಿಧಾನಿಕ ಸಂಸ್ಥೆಯಾಗಿದೆ. ದೇಶದ ಸ್ಥಳೀಯ ಸಂಸ್ಥೆ ಸೇರಿದಂತೆ ಲೋಕಸಭೆ, ರಾಜ್ಯಸಭೆಗೆ, ರಾಜ್ಯದಲ್ಲಿ ರಾಜ್ಯ ವಿಧಾನಸಭೆಗಳಿಗೆ ಮತ್ತು ರಾಷ್ಟ್ರಪತಿ ಮತ್ತು ಉಪಾಧ್ಯಕ್ಷರ ಕಚೇರಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸುತ್ತದೆ.ಚುನಾವಣಾ ಆಯೋಗವು ಆರ್ಟಿಕಲ್ 324 ರ ಪ್ರಕಾರ ಸಂವಿಧಾನದ ಅಧಿಕಾರದಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ತರುವಾಯ ಪೀಪಲ್ಸ್ ಕಾಯ್ದೆಯ ಪ್ರಾತಿನಿಧ್ಯವನ್ನು ಜಾರಿಗೊಳಿಸಿತು. ಆಯೋಗವು ಸಂವಿಧಾನದ ಅಡಿಯಲ್ಲಿ ಸನ್ನಿವೇಶವನ್ನು ನಿಭಾಯಿಸಲು ಕೆಲವು ಅಧಿಕಾರವನ್ನು ಹೊಂದಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಪಂಢರಪುರ (ಮರಾಠಿ: पंढरपूर) ಮಹಾರಾಷ್ಟ್ರ ರಾಜ್ಯದ ಸೊಲ್ಲಾಪುರ ಜಿಲ್ಲೆಯಲ್ಲಿ ಭೀಮಾ ನದಿಯ ತಟದಲ್ಲಿರುವ ಒಂದು ಪ್ರಮುಖ ಹಿಂದೂ ಪವಿತ್ರ ಸ್ಥಾನ. ಪಂಢರಪುರದಲ್ಲಿ ಭೀಮಾ ನದಿಯು ಅರ್ಧಚಂದ್ರಾಕಾರದಲ್ಲಿ ಹರಿಯುವುದರಿಂದ ಅದನ್ನು ಚಂದ್ರಭಾಗಾ ನದಿ ಎಂದೂ ಕರೆಯುತ್ತಾರೆ. ಇಲ್ಲಿರುವ ವಿಠ್ಠಲನ ದೇವಾಲಯ ಆಶಾಢ ಮಾಸದಲ್ಲಿ ನಡೆಯುವ ಯಾತ್ರೆಯಲ್ಲಿ ಸುಮಾರು ೫ ಲಕ್ಷಕ್ಕೂ ಹೆಚ್ಚು ಯಾತ್ರಾರ್ಥಿಗಳನ್ನು ಸೆಳೆಯುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ಗಡಿಗಳು ಮತ್ತು ನರೆ ರಾಜ್ಯಗಳು
ಭಾರತವು 1947ರಲ್ಲಿ ಸ್ವತಂತ್ರ ರಾಷ್ಟ್ರವಾದ ನಂತರ ಅದರ ನೆರೆಹೊರೆಯ ಸಾರ್ವಭೌಮ ರಾಷ್ಟ್ರಗಳಾದ ಅಫ್ಘಾನಿಸ್ತಾನ್, ಬಾಂಗ್ಲಾದೇಶ, ಭೂತಾನ್, ಚೀನಾ, ಮ್ಯಾನ್ಮಾರ್, ನೇಪಾಳ, ಪಾಕಿಸ್ತಾನಗಳೊಂದಿಗೆ ಅಂತರರಾಷ್ಟ್ರೀಯ ಭೂ ಗಡಿಗಳನ್ನು ಹೊಂದಿದೆ. ಕಾಶ್ಮೀರ ವಿವಾದದ ಪರಿಣಾಮ ಪಾಕಿಸ್ತಾನದೊಂದಿಗೆ ಗಡಿ ನಿಯಂತ್ರಣ ನಿಯಂತ್ರಣ (ಎಲ್ಒಸಿ) ರೇಖೆಯನ್ನು ಹೊಂದಿದೆ. ಈ ಎಲ್ಲಾ ಗಡಿ ಮತ್ತು ನಿಯಂತ್ರಣ (ಎಲ್ಒಸಿ) ರೇಖೆಯ ರಕ್ಷಣೆಯ ಹೊಣೆಯನ್ನೂ ಹೊಂದಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ
ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಅಥವಾ ನೀಟ್ ಸರ್ಕಾರಿ ಅಥವಾ ಖಾಸಗಿ ವೈದ್ಯಕೀಯ ಕಾಲೇಜ್ಗಳಲ್ಲಿ ಯಾವುದೇ ಪದವಿ ವೈದ್ಯಕೀಯ ಕೋರ್ಸ್ (ಎಮ್ಬಿಬಿಎಸ್/ ದಂತವೈದ್ಯಕೀಯ ಕೋರ್ಸ್ - ಬಿಡಿಎಸ್) ಅಥವಾ ಸ್ನಾತಕೋತ್ತರ ಕೋರ್ಸ್ (ಎಮ್ಡಿ, ಎಮ್ಎಸ್) ಅಭ್ಯಸಿಸಲು ಬಯಸುವ ವಿದ್ಯಾರ್ಥಿಗಳಿಗೆ ಭಾರತದಲ್ಲಿನ ಒಂದು ಪ್ರವೇಶ ಪರೀಕ್ಷೆ. ಎಮ್ಬಿಬಿಎಸ್ ಮತ್ತು ಬಿಡಿಎಸ್ ಕೋರ್ಸ್ ಗಳಿಗಾಗಿ ನೀಟ್-ಯುಜಿ (ಪದವಿಪೂರ್ವ) ಯನ್ನು ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ (ಸಿಬಿಎಸ್ಸಿ) ನಡೆಸಿಕೊಡುತ್ತದೆ. ಅಖಿಲ ಭಾರತ ಪ್ರಿ ಮೆಡಿಕಲ್ ಟೆಸ್ಟ್ (ಎಐಪಿಎಮ್ಟಿ) ಮತ್ತು ರಾಜ್ಯಗಳು ಅಥವಾ ಕಾಲೇಜ್ಗಳು ನಡೆಸಿಕೊಡುವ ಎಲ್ಲ ಪ್ರತ್ಯೇಕ ಎಮ್ಬಿಬಿಎಸ್ ಪರೀಕ್ಷೆಗಳ ಬದಲಾಗಿ ನೀಟ್-ಯುಜಿ ೨೦೧೩ರಲ್ಲಿ ಬಂದಿತು.
ನೀತಿ ಆಯೋಗ ಅಥವಾ ಭಾರತದ ಬದಲಾವಣೆಗಾಗಿನ ರಾಷ್ಟ್ರೀಯ ಸಂಸ್ಥೆ (ನ್ಯಾಷನಲ್ ಇನ್ಸ್ಟಿಟ್ಯೂಟಷನ್ ಫಾರ್ ಟ್ರಾನ್ಸ್ ಫಾರ್ಮಿಂಗ್ ಇಂಡಿಯಾ:NITI=National Institution for Transforming India)ವನ್ನು ಭಾರತದ ಯೋಜನಾ ಆಯೋಗದ ಬದಲಿಗೆ ಜನವರಿ ೨,೨೦೧೫ರಲ್ಲಿ ಸ್ಥಾಪಿಸಲಾಗಿದೆ.. ಇದು ಮುಖ್ಯವಾಗಿ ಭಾರತದ ಆರ್ಥಿಕ ಬೆಳವಣಿಗೆಗೆ ಸಹಕಾರಿಯಾಗಿ ಕೇಂದ್ರ ಮತ್ತು ರಾಜ್ಯ ಸರಕಾರಗಳ ನೀತಿ ರೂಪಣೆಯಲ್ಲಿ ಬೌದ್ಧಿಕ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತದೆ.
ಸನಾತನ ಭಾರತದ ಸಂಸ್ಕೃತಿಯನ್ನು ಜಗತ್ತಿಗೆ ಸಾರಿ ಹೇಳಿದ ಆಚಾರ್ಯತ್ರಯರಲ್ಲಿ ಶಂಕರಾಚಾರ್ಯರು ಮೊದಲಿಗರು (ಆದಿ ಶಂಕರರು). ಕೇವಲ ೩೨ ವರ್ಷಗಳ ಕಾಲ ಜೀವಿಸಿದ್ದರು. ಶಂಕರಾಚಾರ್ಯರು, ಈ ಅಲ್ಪಾವಧಿಯಲ್ಲಿಯೇ ದೇಶದ ಮೂಲೆ ಮೂಲೆ ಗಳಿಗೆ ಸಂಚರಿಸಿ ಗೀತಾಚಾರ್ಯ ಶ್ರೀಕೃಷ್ಣನ ಸಿದ್ಧಾಂತ ವಾದ "ಅದ್ವೈತ" ತತ್ವವನ್ನು ಪ್ರತಿಪಾದಿಸುತ್ತ ಜಗತ್ತಿಗೆ ಸಾರಿ, ಹಲವಾರು ಮತಗಳಿಂದ ದಾಳಿಗೊಳಗಾಗುತ್ತಿದ್ದ ಸನಾತನ ಹಿಂದೂ ಧರ್ಮವನ್ನು ಪುನರುತ್ಥಾನಗೊಳಿಸಿದರು.
ಮೆಸೊಪಟ್ಯಾಮಿಯಾ ಎಂಬುದು (ಗ್ರೀಕ್ ಭಾಷೆಯ Μεσοποταμία "ನದಿಗಳ ನಡುವಿನ [ಭೂಮಿ]" ಎಂಬುದರಿಂದ ಬಂದದ್ದು, ಅರೇಬಿಕ್ ಭಾಷೆಯಲ್ಲಿ ಇದನ್ನು ....بلاد الرافدين bilād al-rāfidayn ಎಂಬುದಾಗಿ ತರ್ಜುಮೆ ಮಾಡಲಾಗುತ್ತದೆ), ಟೈಗ್ರಿಸ್ ಮತ್ತು ಯೂಫ್ರಟಿಸ್ ನದಿಗಳ ಉದ್ದಕ್ಕೂ ಇರುವ ಟೈಗ್ರಿಸ್-ಯೂಫ್ರಟಿಸ್ ನದಿಗಳ ಜಾಲದ ಪ್ರದೇಶಕ್ಕಾಗಿರುವ ಒಂದು ಅನ್ವರ್ಥ ಸ್ಥಳನಾಮವಾಗಿದೆ. ಆಧುನಿಕ ಇರಾಕ್ ಮಾತ್ರವೇ ಅಲ್ಲದೇ, ವಾಯವ್ಯ ಸಿರಿಯಾದ ಕೆಲವು ಭಾಗಗಳು, ಆಗ್ನೇಯ ಟರ್ಕಿಯ ಕೆಲ ಭಾಗಗಳು ಮತ್ತು ನೈರುತ್ಯ ಇರಾನ್ನ ಖೂಜೆಸ್ತಾನ್ ಪ್ರಾಂತ್ಯದ ಕೆಲವೊಂದು ಭಾಗಗಳಿಗೂ ಈ ಪ್ರದೇಶವು ವ್ಯಾಪಕ ದೃಷ್ಟಿಯಲ್ಲಿ ಸಂಬಂಧಪಟ್ಟಿದೆ. ನಾಗರಿಕತೆಯ ತೊಟ್ಟಿಲು ಎಂದು ವ್ಯಾಪಕವಾಗಿ ಪರಿಗಣಿಸಲ್ಪಟ್ಟಿರುವ ಕಂಚಿನ ಯುಗದ ಮೆಸೊಪಟ್ಯಾಮಿಯಾದಲ್ಲಿ ಸುಮೇರು ಮತ್ತು ಅಕ್ಕೇಡಿಯನ್, ಬ್ಯಾಬಿಲೋನಿಯಾದ ಮತ್ತು ಅಸ್ಸೀರಿಯದ ಸಾಮ್ರಾಜ್ಯಗಳು ಸೇರಿಕೊಂಡಿದ್ದವು.
ಭಾರತ ಗಣರಾಜ್ಯದ ಅಧ್ಯಕ್ಷರು ಅಥವಾ ಭಾರತದ ರಾಷ್ಟ್ರಪತಿಗಳು ಸಾಂವಿಧಾನಿಕವಾಗಿ ಭಾರತದ ಮುಖ್ಯಸ್ಥರಾಗಿರುತ್ತಾರೆ ಮತ್ತು ಭಾರತೀಯ ಸಶಸ್ತ್ರ ಪಡೆಗಳ ದಂಡನಾಯಕ (ಕಮಾಂಡರ್ ಇನ್ ಚೀಫ್). ಅಧ್ಯಕ್ಷರು ಪರೋಕ್ಷವಾಗಿ ಭಾರತ ಸಂಸತ್ತು (ಎರಡೂ ಮನೆಗಳು) ಮತ್ತು ಭಾರತದ ಎಲ್ಲ ರಾಜ್ಯಗಳ ಮತ್ತು ಪ್ರಾಂತ್ಯಗಳ ಶಾಸನಸಭೆಯ ಸಭೆಗಳನ್ನು ಒಳಗೊಂಡಿರುವ ಚುನಾವಣಾ ಪ್ರಕ್ರೀಯೆಯಿಂದ ಚುನಾಯಿತರಾಗುತ್ತಾರೆ, ಅವರು ಎಲ್ಲರೂ ನೇರವಾಗಿ ಚುನಾಯಿತರಾಗಿರುತ್ತಾರೆ. ರಾಷ್ಟ್ರಪತಿಗಳು ಐದು ವರ್ಷಗಳ ಅವಧಿಗೆ ಸೇವೆ ಸಲ್ಲಿಸುತ್ತಾರೆ.ಯಾವುದೇ ಪದ ಮಿತಿಗಳಿಲ್ಲ.
ಮಾನವ ಶಿಶ್ನವು ಪುರುಷರಿಗೆ ಮೂತ್ರ ವಿಸರ್ಜಿಸಲು ಮತ್ತು ಸ್ಖಲಿಸಲು ಸಹಕರಿಸುವ ಬಾಹ್ಯ ಲೈಂಗಿಕ ಅವಯವವಾಗಿದೆ. ವೃಷಣಗಳು ಮತ್ತು ಇತರ ಅನುಬಂಧ ರಚನೆಗಳೊಂದಿಗೆ ಶಿಶ್ನವು ಪುರುಷ ಪ್ರತ್ಯುತ್ಪಾದನಾ ವ್ಯವಸ್ಥೆಯ ಪ್ರಮುಖ ಭಾಗವಾಗಿ ಕಾರ್ಯನಿರ್ವಹಿಸುತ್ತದೆ. ಶಿಶ್ನದ ಮುಖ್ಯ ಭಾಗಗಳು ಮೂಲ, ದೇಹ, ಶಿಶ್ನದ ಎಪಿಥೀಲಿಯಂ, ಶಾಫ್ಟ್ ಚರ್ಮ ಸೇರಿದಂತೆ ಮತ್ತು ಗ್ಲಾನ್ಸ್ ಅನ್ನು ಆವರಿಸುವ ಮುಂದೊಗಲು.
ಈ ಲೇಖನವು ಆತಿಥ್ಯ/ಅತಿಥಿ ಸತ್ಕಾರದ ಅರ್ಥ ನಿರೂಪಣೆಗೆ ಸಂಬಂಧಿಸಿದುದಾಗಿದೆ. ಹೋಟೆಲ್ ನಿರ್ವಹಣೆಯ ಶೈಕ್ಷಣಿಕ ಅಧ್ಯಯನಗಳಿಗಾಗಿ, ನೋಡಿ ಆತಿಥ್ಯ/ಅತಿಥಿ ಸತ್ಕಾರ ನಿರ್ವಹಣಾ ಅಧ್ಯಯನಗಳು ಹಾಗೂ ಆತಿಥ್ಯ/ಅತಿಥಿ ಸತ್ಕಾರ ಉದ್ಯಮ. ಆತಿಥ್ಯ/ಅತಿಥಿ ಸತ್ಕಾರ ವು ಓರ್ವ ಅತಿಥಿ ಹಾಗೂ ಆತಿಥೇಯರ ನಡುವಿನ ಒಂದು ಬಾಂಧವ್ಯ/ಸಂಬಂಧ, ಅಥವಾ ಅತಿಥಿ ಸತ್ಕಾರದ ನಡೆ ಅಥವಾ ಪ್ರವೃತ್ತಿಯಾಗಿರುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.