The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಬಜೆಟ್ ಎಂದರೆ ಒಂದು ನಿರ್ದಿಷ್ಟ ಕಾಲಾವಧಿಗಾಗಿ, ಸಾಮಾನ್ಯವಾಗಿ ಒಂದು ವರ್ಷಕ್ಕಾಗಿ ಒಂದು ಹಣಕಾಸು ಯೋಜನೆ. ಇದು ಯೋಜಿತ ಮಾರಾಟದ ಪರಿಮಾಣಗಳು ಹಾಗೂ ಆದಾಯಗಳು, ಸಂಪನ್ಮೂಲ ಪ್ರಮಾಣಗಳು, ವೆಚ್ಚಗಳು ಮತ್ತು ಖರ್ಚುಗಳು, ಆಸ್ತಿಗಳು, ಹೊಣೆಗಳು ಮತ್ತು ನಗದು ಹರಿವುಗಳನ್ನೂ ಒಳಗೊಳ್ಳಬಹುದು. ಅಳೆಯಬಹುದಾದಂಥ ಪದಗಳಲ್ಲಿ ಚಟುವಟಿಕೆಗಳು ಅಥವಾ ಘಟನೆಗಳ ಕಾರ್ಯತಂತ್ರ ಯೋಜನೆಗಳನ್ನು ವ್ಯಕ್ತಪಡಿಸಲು ಕಂಪನಿಗಳು, ಸರ್ಕಾರಗಳು, ಕುಟುಂಬಗಳು ಮತ್ತು ಇತರ ಸಂಸ್ಥೆಗಳು ಇದನ್ನು ಬಳಸುತ್ತವೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
"ಹಡಪದ ಅಪ್ಪಣ್ಣ" ನವರು ಹನ್ನೆರಡನೆಯ ಶತಮಾನದ ವಚನ ಚಳುವಳಿ ಮತ್ತು ಸಾಮಾಜಿಕ ಕ್ರಾಂತಿಯ ಹರಿಕಾರರಲ್ಲಿ ಒಬ್ಬರು. ಇವರು "ಹಡಪದ" ಸಮಾಜದವರಾಗಿದ್ದು ಬಸವಣ್ಣನವರ ಬಲಗೈ ಬಂಟನೆಂದೇ ಹೆಸರು ಪಡೆದಿದ್ದರು. ಬಸವಣ್ಣನವರ ಬಾಲ್ಯದ ಒಡನಾಡಿಗಳಾಗಿದ್ದ ಇವರು ವಿಶ್ವದ ಪ್ರಪ್ರಥಮ ಪ್ರಜಾಪ್ರಭುತ್ವದ ಸಂಸತ್ತು ಎಂದೇ ಹೆಸರಾದ "ಅನುಭವ ಮಂಟಪದಲ್ಲಿ" ಬಸವಣ್ಣನವರಿಗೆ ಪ್ರಧಾನ ಕಾರ್ಯದರ್ಶಿಗಳಾಗಿ, ಬಸವಣ್ಣನವರಿಗೆ ಯಾವುದೇ ರೀತಿಯ ಮುಜುಗುರವಾಗದಂತೆ ಕಾರ್ಯನಿರ್ವಹಿಸಿದ ಹೆಗ್ಗಳಿಕೆ ಇವರ ಕಾರ್ಯಕ್ಷಮತೆಗೆ ಇಂದಿನವರಿಗೆ ಕನ್ನಡಿಯಾಗಿದೆಯೆಂದರೆ ತಪ್ಪಾಗಲಾರದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಬೆಳೆ ವಿಮೆ ಗ್ರಾಮೀಣ ವಿಮೆಯಲ್ಲಿ ಮುಖ್ಯವಾದದ್ದು, ಇದರಲ್ಲಿ ಉತ್ಪನ್ನ, ಬೆಲೆ ಮತ್ತು ಆದಾಯದ ಅಪಾಯಗಳನ್ನು ಖಚಿತಪಡಿಸಲಾಗಿದೆ. ರೈತರಿಗೆ ಗುಣಮಟ್ಟ ಪ್ರಮಾಣದ ಉತ್ಪನ್ನವನ್ನು ಪಡೆಯಲು ಹೋದರೆ, ಕೃಷಿ ಭೂಮಿಗಳ ಬೆಲೆ ಮತ್ತು ಆದಾಯದ ಅಗತ್ಯವಿದ್ದರೆ ಅವರನ್ನು ಬೆಳೆ ವಿಮೆ ಅಡ್ಡಿಯಲ್ಲಿ ವಿಮೆ ಕಂಪನಿಗಳು ಪರಿಹಾರ ಮಾಡುತ್ತದೆ. ಬೆಳೆ ವಿಮೆ ರೈತರು ಸಾಕಿರುವವರು ಮತ್ತು ಇತರ ಕ್ರ್ಷಿ ಉತ್ಪಾದಕರು, ಆಲಿಕಲ್ಲು, ಬರ ಮತ್ತು ಪ್ರವಾಹ ಮುಂತ್ತಾದ ಪ್ರಾಕ್ರುತಿಕ ವಿಕೋಪಗಳ ಮೂಲಕ ತಮ್ಮ ಬೆಳೆಗಳನ್ನು ನಷ್ಟವಾದರು ಮತ್ತು ಕೃಷಿ ಪದಾರ್ಥಗಳ ಬೆಲೆಗಳು ಕುಸಿತ ಕಾರಣ ಬರುವ ಆದಾಯದ ನಷ್ಟದಿಂದ ರಕ್ಷಿಸಿಕೊಳ್ಳಲು ಕೊಂಡುಕೊಳ್ಳುತ್ತಾರೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಗೋಲ್ ಗುಮ್ಮಟ ಆದಿಲ್ ಶಾ (ಆಳ್ವಿಕೆ: ೧೬೨೭-೧೬೫೭)ನ ಗೋರಿಯಾಗಿ ಕಟ್ಟಲಾದ ಸ್ಮಾರಕ. ಇದನ್ನು ೧೬೫೯ರಲ್ಲಿ ಪ್ರಸಿದ್ದ ವಾಸ್ತುಶಿಲ್ಪಿಗಳಾದ ಯಾಕುತ್ ಮತ್ತು ದಬೂಲ್ರವರು ನಿರ್ಮಿಸಿದ್ದಾರೆ. ಇದರ ಉದ್ದ ಮತ್ತು ಅಗಲ ೫೦ ಮೀ, ಹೊರಗಡೆ ಎತ್ತರ ೧೯೮ ಅಡಿ ಮತ್ತು ಒಳಗಡೆ ಎತ್ತರ ೧೭೫ ಅಡಿ ಇದ್ದು ಮೇಲಿನ ಗೋಲಾಕಾರದ ಗುಂಬಜ್ ೩೯ ಮೀ (೧೨೪ ಅಡಿ) ವ್ಯಾಸ ಹೊಂದಿದೆ.ಅದರಂತೆ ೮ ಅಂತಸ್ತುಗಳಿವೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಮಹರ್ಷಿ ವಾತ್ಸ್ಯಾಯನ ಕೃತವಾದ ಕಾಮಸೂತ್ರವೆಂಬ ಪ್ರಾಚೀನ ಭಾರತೀಯ ಸಂಸ್ಕೃತ ಗ್ರಂಥ ಮಾನವನ ಲೈಂಗಿಕ ವರ್ತನೆ ಮತ್ತು ಭಾರತೀಯ ಪುರುಷಾರ್ಥ ಚಿಂತನೆಯನ್ನು ಕುರಿತ ಪ್ರಮಾಣಿತ ಕೃತಿಯೆಂಬುದು ಪಂಡಿತಜನ ವೇದ್ಯವಾದ ವಿಷಯ. ವಾತ್ಸ್ಯಾಯನ ಕಾಮಸೂತ್ರವು ಪ್ರಧಾನವಾಗಿ ಸಂಭೋಗ ಭಂಗಿಗಳನ್ನು ಕುರಿತ ಲೈಂಗಿಕ ಕೈಪಿಡಿಯಲ್ಲ.ಅದು ಚೆನ್ನಾಗಿ ಬದುಕುವ ಕಲೆ, ಪ್ರೀತಿಯ ಸ್ವರೂಪ, ಸಂಗಾತಿಗಳನ್ನು ಹುಡುಕುವ ಕ್ರಮ, ಲೈಂಗಿಕ ಜೀವನವನ್ನು ಕಾಪಾಡಿಕೊಳ್ಳುವುದು ಮತ್ತು ಆನಂದ-ಆಧಾರಿತ ಸಾಮರ್ಥ್ಯಗಳಿಗೆ ಸಂಬಂಧಿಸಿದ ಇತರ ಅಂಶಗಳನ್ನು ಕುರಿತು ಮಾರ್ಗದರ್ಶಿಯಾಗಿದೆ. ಇದು ವಿಭಿನ್ನ ಭಾಷ್ಯಗಳೊಂದಿಗೆ (ವ್ಯಾಖ್ಯಾನಗಳು) ಆಧುನಿಕ ಯುಗದಲ್ಲಿ ಉಳಿದುಕೊಂಡಿರುವ ಸಂಕ್ಷಿಪ್ತ ಪೌರುಷ ಪದ್ಯಗಳನ್ನು ಹೊಂದಿರುವ ಸೂತ್ರ ವಿಭಾಗದ ಗ್ರಂಥವಾಗಿದೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಟ್ಯಾರೋ(ಭವಿಷ್ಯ ಹೇಳಲು ಬಳಸುವ ಇಸ್ಪೀಟೆಲೆಗಳ ಪ್ಯಾಕ್)
ಟ್ಯಾರೋ (ಮೊದಲಿಗೆ ಇದನ್ನು ಟ್ಯಾರೋಚಿ,/ta.ʁo/, ಟ್ಯಾರಾಕ್ ಮತ್ತು ಅದೇ ವಿಧದ ಹೆಸರುಗಳಿಂದ ಗುರುತಿಸುತ್ತಿದ್ದರು) ಒಂದು ಕಾರ್ಡ್ ಗಳ ಕಟ್ಟು(ಸಾಮಾನ್ಯವಾಗಿ ಒಂದು ಕಟ್ಟಿನಲ್ಲಿ 78 ಕಾರ್ಡ್ ಗಳಿರುತ್ತವೆ); ಇದನ್ನು ಇಟಾಲಿಯನ್ ಟ್ಯಾರೋಚಿನಿ ಮತ್ತು ಫ್ರೆಂಚ್ ಟ್ಯಾರೋ ಆಟಗಳನ್ನಾಡಲು ಯೂರೋಪ್ ನ ಹಲವಾರು ಭಾಗಗಳಲ್ಲಿ ಹದಿನೈದನೆಯ ಶತಮಾನದ ಮಧ್ಯಭಾಗದಿಂದ ಬಳಸಲಾಗುತ್ತಿದೆ. 18ನೆಯ ಶತಮಾನದಿಂದ ಇಂದಿನವರೆಗೆ ಟ್ಯಾರೋಗಳನ್ನು ಆಧ್ಯಾತ್ಮವಾದಿಗಳು ಮತ್ತು ಭವಿಷ್ಯ ನುಡಿಯುವವರು ಕಣಿ ಹೇಳಲು, ಅಥವಾ ಆಧ್ಯಾತ್ಮಿಕ ಅಥವಾ ಮಾನಸಿಕ ಮಾರ್ಗಗಳನ್ನು ರೂಪಿಸಲು ಬಳಸುವುದು ವಾಡಿಕೆಯಲ್ಲಿದೆ. ಬಳಕೆಯಲ್ಲಿರುವ ಇಸ್ಪೀಟ್ ಎಲೆಗಳಲ್ಲಿರುವಂತೆಯೇ ಟ್ಯಾರೋವಿನಲ್ಲೂ ನಾಲ್ಕು ವಿಧದ ಕಾರ್ಡುಗಳು (ಸ್ಯೂಟ್ ಗಳು) ಇವೆ.