The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಸಾಮಾನ್ಯವಾಗಿ ಅಣೆಕಟ್ಟು ನಿರ್ಮಾಣದ ಉದ್ದೇಶ ನದಿ ನೀರನ್ನು ಸಂಗ್ರಹಿಸಿ ಅದನ್ನು ನೀರಾವರಿ, ಕುಡಿಯುವ ನೀರು ಪೂರೈಕೆ, ವಿದ್ಯುತ್ ಉತ್ಪಾದನೆ ಹೀಗೆ ವಿವಿಧ ಉದ್ದೇಶಗಳಿಗೆ ಬಳಸಿಕೊಳ್ಳುವುದು. ಅಣೆಕಟ್ಟು ತುಂಬಿದಾಗ ಅದರ ಕ್ರಸ್ಟ್ಗೇಟುಗಳನ್ನು ತೆರೆದು ನದಿಗೆ ನೀರು ಬಿಡಲಾಗುತ್ತದೆ. 3000 ವರ್ಷ ಹಿಂದೆ ನಿರ್ಮಿಸಿದ್ದು ಎನ್ನಲಾಗಿರುವ ಜೋರ್ಡಾನ್ನ ಜಾವಾ ಅಣೆಕಟ್ಟು ಜಗತ್ತಿನ ಅತ್ಯಂತ ಪುರಾತನ ಅಣೆಕಟ್ಟು ಎಂದು ಗುರುತಿಸಲಾಗಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಅಳೆಯುವ ಸಾಧನವು (ಮಾಪಕ) ಒಂದು ಭೌತಿಕ ಪರಿಮಾಣವನ್ನು ಅಳೆಯುವ ಉಪಕರಣ. ಭೌತಿಕ ವಿಜ್ಞಾನಗಳು, ಗುಣಮಟ್ಟದ ಆಶ್ವಾಸನೆ ಮತ್ತು ಎಂಜಿನಿಯರಿಂಗ್ನಲ್ಲಿ, ಮಾಪನವೆಂದರೆ ನೈಜ ಪ್ರಪಂಚದ ವಸ್ತುಗಳು ಮತ್ತು ಘಟನೆಗಳ ಭೌತಿಕ ಪರಿಮಾಣಗಳನ್ನು ಪಡೆದು ಹೋಲಿಸುವ ಚಟುವಟಿಕೆಯಾಗಿದೆ. ಸ್ಥಾಪಿತ ಪ್ರಮಾಣೀಕೃತ ವಸ್ತುಗಳು ಮತ್ತು ಘಟನೆಗಳನ್ನು ಏಕಮಾನಗಳಾಗಿ ಬಳಸಲಾಗುತ್ತದೆ, ಮತ್ತು ಮಾಪನದ ಪ್ರಕ್ರಿಯೆಯು ಅಧ್ಯಯನದಲ್ಲಿರುವ ವಸ್ತು ಮತ್ತು ಉಲ್ಲೇಖಿತ ಮಾಪನ ಏಕಮಾನವನ್ನು ಸಂಬಂಧಿಸುವ ಒಂದು ಸಂಖ್ಯೆಯನ್ನು ನೀಡುತ್ತದೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
"ಬ್ರಿಟಿಷ್ ಆಡಳಿತದ ಇತಿಹಾಸ" ವು ಭಾರತದ ಉಪಖಂಡದಲ್ಲಿ ೧೮೫೮ಮತ್ತು ೧೯೪೭ರ ನಡುವೆ ಬ್ರಿಟಿಷ್ ಆಡಳಿತದ ಅವಧಿಯನ್ನು ಉಲ್ಲೇಖಿಸುತ್ತದೆ. ಬ್ರಿಟಿಷ್ ಈಸ್ಟ್ ಇಂಡಿಯ ಕಂಪೆನಿಯ ಆಡಳಿತವನ್ನು ರಾಣಿ ವಿಕ್ಟೋರಿಯ ( ೧೮೭೬ರಲ್ಲಿ ಅವರನ್ನು ಭಾರತದ ಚಕ್ರವರ್ತಿನಿ ಎಂದು ಘೋಷಿಸಲಾಯಿತು) ಆಳ್ವಿಕೆಯ ರಾಜಪ್ರಭುತ್ವಕ್ಕೆ ವರ್ಗಾಯಿಸಿದಾಗ, ೧೮೫೮ರಲ್ಲಿ ಆಡಳಿತದ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು. ೧೯೪೭ರವರೆಗೆ ಈ ಆಡಳಿತವು ಉಳಿದುಕೊಂಡಿತು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ವಿಶ್ವ ಸ್ತನ್ಯಪಾನ ವಾರ (ಡಬ್ಲ್ಯೂಬಿಡಬ್ಲ್ಯೂ) ವಾರ್ಷಿಕ ಆಚರಣೆಯಾಗಿದ್ದು , ಇದನ್ನು ಪ್ರತಿವರ್ಷ ಆಗಸ್ಟ್ 1 ರಿಂದ ಆಗಸ್ಟ್ 7 ರವರೆಗೆ 120 ಕ್ಕೂ ಹೆಚ್ಚು ದೇಶಗಳಲ್ಲಿ ನಡೆಸಲಾಗುತ್ತದೆ.WBW ವೆಬ್ಸೈಟ್ನ ಅಂಕಿಅಂಶಗಳ ಪ್ರಕಾರ, ಪ್ರಪಂಚದ ಸ್ತನ್ಯಪಾನ ಸಪ್ತಾಹ 2010 ರ ವರೆಗೆ 488 ಸಂಘಟನೆಗಳು ಮತ್ತು 406,620 ಜನ ಭಾಗವಹಿಸುವವರೊಂದಿಗೆ 79 ದೇಶಗಳಲ್ಲಿ 540 ಕಾರ್ಯಕ್ರಮಗಳು ನಡೆದಿವೆ.ಸ್ತನ್ಯಪಾನ ಕ್ರಿಯೆಗಾಗಿ ವಿಶ್ವ ಅಲೈಯನ್ಸ್ , WHO ಮತ್ತು UNICEF, WBW ಯ ಸಂಘಟಿತವಾಗಿದ್ದು, ಮಗು ಜನಿಸಿದ ಮೊದಲ ಆರು ತಿಂಗಳ ಕಾಲ ವಿಶೇಷ ಎದೆ ಹಾಲುಣಿಸುವಿಕೆಯನ್ನು ಉತ್ತೇಜಿಸುವ ಗುರಿಯೊಂದಿಗೆ 1991ರಲ್ಲಿ ಆರಂಭಿಸಲಾಯಿತು ಸ್ತನ್ಯಪಾನ ,ಮಹತ್ವದ ಪೋಷಕಾಂಶಗಳನ್ನು ಒದಗಿಸುತ್ತದೆ, ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ನ್ಯುಮೋನಿಯಾ ,ಪ್ರಾಣಾಂತಿಕ ರೋಗಗಳಿಂದ ರಕ್ಷಣೆ ಮತ್ತು ಬೆಳವಣಿಗೆಯನ್ನು ಅಭಿವೃದ್ಧಿಪಡಿಸುತ್ತದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಕಂಪ್ಯೂಟರ್ (ಗಣಕ, ಗಣಕಯಂತ್ರ) ಎನ್ನುವುದು ದತ್ತಾಂಶದ (ಡೇಟಾ) ಸಂಸ್ಕರಣೆ ಹಾಗೂ ಸಂಗ್ರಹಣೆಯನ್ನು ಸುಲಭವಾಗಿಸುವ ವಿದ್ಯುನ್ಮಾನ ಸಾಧನ. ಗಣಿತದ ಲೆಕ್ಕಾಚಾರಗಳು ಹಾಗೂ ತಾರ್ಕಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ದತ್ತಾಂಶವನ್ನು ಸಂಸ್ಕರಿಸುವುದು ಹಾಗೂ ಆ ಮೂಲಕ ದೊರಕುವ ಮಾಹಿತಿಯನ್ನು ನಂತರದ ಬಳಕೆಗಾಗಿ ಉಳಿಸಿಡಲು ಸಾಧ್ಯವಾಗಿಸುವುದು ಕಂಪ್ಯೂಟರಿನ ವೈಶಿಷ್ಟ್ಯ. ಆಧುನಿಕ ಡಿಜಿಟಲ್ ಎಲೆಕ್ಟ್ರಾನಿಕ್ ಕಂಪ್ಯೂಟರ್ಗಳು ಪ್ರೋಗ್ರಾಂಗಳು ಎಂದು ಕರೆಯಲ್ಪಡುವ ಸಾಮಾನ್ಯ ಕಾರ್ಯಾಚರಣೆಗಳ ಸೆಟ್ಗಳನ್ನು ನಿರ್ವಹಿಸಬಹುದು.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.