The most-visited English Wikipedia articles, updated daily. Learn more...
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಭಾರತದ ರಾಷ್ತ್ರೀಯ ಧ್ವಜದ ಈಗಿನ ಅವತರಣಿಕೆಯನ್ನು ಜುಲೈ ೨೨, ೧೯೪೭ರ ಕಾನ್ಸ್ಟಿಟ್ಯುಯೆಂಟ್ ಅಸ್ಸೆಂಬ್ಲಿ ಸಭೆಯಲ್ಲಿ ಅಂಗೀಕರಿಸಲಾಯಿತು. ಬ್ರಿಟಿಷರಿಂದ ಆಗಸ್ಟ್ ೧೫, ೧೯೪೭ರಲ್ಲಿ ಸ್ವಾತಂತ್ರ್ಯ ಪಡೆಯುವ ಕೆಲವೇ ದಿನಗಳ ಮುಂಚೆ ನಡೆದದ್ದು ಈ ಸಭೆ. ಅಂದಿನಿಂದ ಜನವರಿ ೨೬ ೧೯೫೦ ರವರೆಗೆ ಸ್ವತಂತ್ರ ಭಾರತದ ಸ್ವರಾಜ್ಯಭಾರದ (dominion) ಬಾವುಟವಾಗಿಯೂ, ೨೬, ಜನವರಿ, ೧೯೫೦ರಿಂದ ಗಣರಾಜ್ಯ ಭಾರತದ ಬಾವುಟವಾಗಿಯೂ ಸಂದಿದೆ.
ಭಾರತದ ಸ್ವಾತ್ರಂತ್ರ್ಯ ಚಳುವಳಿಯು ಬ್ರಿಟಿಷ್ ಸಾಮ್ರಾಜ್ಯದಿಂದ ಸ್ವಾತ್ರಂತ್ರ್ಯವನ್ನು ಪಡೆಯಲು ಭಾರತೀಯರು ನಡೆಸಿದ ಹೋರಾಟ. ಇದು ೧೮೫೭ರಿಂದ ೧೯೪೭ರ ಆಗಸ್ಟ್ ೧೫ರವರೆಗೆ ನಡೆದ ಭಾರತದ ವಿವಿಧ ಸಂಘ-ಸಂಸ್ಥೆಗಳ ತತ್ವಗಳು, ದಂಗೆಗಳು, ಹೋರಾಟಗಳು ಮತ್ತು ಪ್ರಾಣಾಹುತಿಗಳ ಸಂಗಮ. ೧೭೫೭ರಲ್ಲಿ ವಂಗದ ನವಾಬನಾಗಿದ್ದ ಸಿರಾಜುದ್ದೌಲನನ್ನು ಪ್ಲಾಸೀ ಕದನದಲ್ಲಿ ಪರಾಜಯಗೊಳಿಸಿದ ಈಸ್ಟ್ ಇಂಡಿಯ ಕಂಪನಿಯ ಬ್ರಿಟಿಷ್ ಸೈನ್ಯ, ಇದರಲ್ಲಿ ನೆರವಾದ ಮೀರ್ ಜಾಫರನಿಗೆ ಪಟ್ಟಕಟ್ಟಿತು.
"ಬ್ರಿಟಿಷ್ ಆಡಳಿತದ ಇತಿಹಾಸ" ವು ಭಾರತದ ಉಪಖಂಡದಲ್ಲಿ ೧೮೫೮ಮತ್ತು ೧೯೪೭ರ ನಡುವೆ ಬ್ರಿಟಿಷ್ ಆಡಳಿತದ ಅವಧಿಯನ್ನು ಉಲ್ಲೇಖಿಸುತ್ತದೆ. ಬ್ರಿಟಿಷ್ ಈಸ್ಟ್ ಇಂಡಿಯ ಕಂಪೆನಿಯ ಆಡಳಿತವನ್ನು ರಾಣಿ ವಿಕ್ಟೋರಿಯ ( ೧೮೭೬ರಲ್ಲಿ ಅವರನ್ನು ಭಾರತದ ಚಕ್ರವರ್ತಿನಿ ಎಂದು ಘೋಷಿಸಲಾಯಿತು) ಆಳ್ವಿಕೆಯ ರಾಜಪ್ರಭುತ್ವಕ್ಕೆ ವರ್ಗಾಯಿಸಿದಾಗ, ೧೮೫೮ರಲ್ಲಿ ಆಡಳಿತದ ವ್ಯವಸ್ಥೆಯನ್ನು ಸ್ಥಾಪಿಸಲಾಯಿತು. ೧೯೪೭ರವರೆಗೆ ಈ ಆಡಳಿತವು ಉಳಿದುಕೊಂಡಿತು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಜಲಿಯನ್ವಾಲಾ ಬಾಗ್ ಹತ್ಯಾಕಾಂಡ (ಅಥವಾ ಅಮೃತಸರ ಹತ್ಯಾಕಾಂಡ) - ಅಮೃತಸರದಲ್ಲಿರುವ ಜಲಿಯನ್ವಾಲಾ ಬಾಗ್ ಉದ್ಯಾನದಲ್ಲಿ ಏಪ್ರಿಲ್ ೧೩, ೧೯೧೯ರಂದು ಬ್ರಿಟೀಷ್ ಭಾರತ ಸೇನೆಯಿಂದ ಅಲ್ಲಿ ನೆರೆದಿದ್ದ ಗಂಡಸರು, ಹೆಂಗಸರು, ಮಕ್ಕಳೆಲ್ಲರ ಮೇಲೆ ನಡೆಸಿದ ಗುಂಡಿನ ದಾಳಿಯ ಪರಿಣಾಮವಾಗಿ ನಡೆದ ಮಾರಣಹೋಮ. ಅಧಿಕೃತ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ೩೭೯. ಖಾಸಗಿ ಮೂಲಗಳ ಪ್ರಕಾರ ಸಾವಿಗೀಡಾದವರ ಸಂಖ್ಯೆ ಸಾವಿರಕ್ಕೂ ಹೆಚ್ಚು ಹಾಗು ಗಾಯಗೊಂಡವರ ಸಂಖ್ಯೆ ೧೨೦೦ಕ್ಕೂ ಹೆಚ್ಚು., ಮತ್ತು ಸಿವಿಲ್ ಶಸ್ತ್ರಚಿಕಿತ್ಸಾ ತಜ್ಞ ಡಾ.ಸ್ಮಿತ್ ನೀಡಿದ ಮಾಹಿತಿಯ ಪ್ರಕಾರ, ಸಾವಿಗೀಡಾದವರು ೧೮೦೦ಕ್ಕೂ ಹೆಚ್ಚು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ರಾಷ್ಟ್ರಕವಿ ಕುವೆಂಪು ವಿರಚಿತ ಜಯ ಭಾರತ ಜನನಿಯ ತನುಜಾತೆ| ಜಯ ಹೇ ಕರ್ನಾಟಕ ಮಾತೆ ಗೀತೆಯನ್ನು ಕರ್ನಾಟಕದ ನಾಡಗೀತೆಯನ್ನಾಗಿ ಕರ್ನಾಟಕ ಸರ್ಕಾರ ನಿರ್ಧರಿಸಿದೆ. ಕೆ ವಿ ಪುಟ್ಟಪ್ಪ(ಕುವೆಂಪು) ಈ ಪದ್ಯವನ್ನು ೧೯೨೪ರಲ್ಲಿ 'ಕಿಶೋರಚಂದ್ರವಾಣಿ' ಎಂಬ ಕಾವ್ಯನಾಮದಡಿಯಲ್ಲಿ ಬರೆದರು. ೨೦೦೪ರಲ್ಲಿ ಕುವೆಂಪು ಜನ್ಮ ಶತಮಾನೋತ್ಸವದ ಸಮಯದಲ್ಲಿ ಕರ್ನಾಟಕ ಸರ್ಕಾರ ಈ ಗೀತೆಯನ್ನು ಅಧಿಕೃತ ನಾಡ ಗೀತೆಯನ್ನಾಗಿ ಮಾಡಲು ನಿರ್ಧರಿಸಿತು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ವಿನಾಯಕ ದಾಮೋದರ ಸಾವರ್ಕರ್ ತಮ್ಮ ಸಂಪೂರ್ಣ ಜೀವನವನ್ನೇ ಭಾರತದ ಸ್ವಾತಂತ್ರ್ಯಕ್ಕಾಗಿ ಮುಡಿಪಾಗಿಟ್ಟ ಮಹಾನ್ ವಾಗ್ಮಿ, ವಿವಿಧ ವಿಷಯಗಳ ಬಗ್ಯೆ ನಿರರ್ಗಳವಾಗಿ ಬರೆಯಬಲ್ಲ ಲೇಖಕ, ಇತಿಹಾಸಕಾರ, ಕವಿ, ತತ್ವಶಾಸ್ತ್ರಜ್ಞ, ಮತ್ತು ಸಮಾಜಸೇವಕ. ಅವರನ್ನು ಕೆಲವರು ಭಾರತದ ಸ್ವಾತಂತ್ರ್ಯ ಸಂಗ್ರಾಮದ ಅತಿ ದೊಡ್ಡ ಕ್ರಾಂತಿಕಾರಿ ಎಂದು ಪರಿಗಣಿಸಿದರೆ, ಇನ್ನು ಕೆಲವರು, ಅವರನ್ನು ಕೋಮುವಾದಿಯಾಗಿಯೂ, ಚಾಣಕ್ಯನೀತಿಯವರಾಗಿಯೂ ಭಾವಿಸುತ್ತಾರೆ. ಸ್ವಾತಂತ್ರ್ಯ ಅಂದೋಲನದ ಇತಿಹಾಸದ ಅತ್ಯಂತ ವಿವಾದಾತ್ಮಕ ವ್ಯಕ್ತಿಗಳಲ್ಲಿ ಸಾವರ್ಕರ್ ಪ್ರಮುಖರು.
ಸಲಹೆಯು (ಸೂಚನೆ, ಬುದ್ಧಿವಾದ) ಯಾವುದೋ ಸಂದರ್ಭದಲ್ಲಿ ಪ್ರಸಾರಮಾಡಿದ ನಿರ್ದಿಷ್ಟ ಪರಿಸ್ಥಿತಿಗಳ ಬಗ್ಗೆ ವೈಯಕ್ತಿಕ ಅಥವಾ ಸಾಂಸ್ಥಿಕ ಅಭಿಪ್ರಾಯಗಳು, ನಂಬಿಕೆ ವ್ಯವಸ್ಥೆಗಳು, ಮೌಲ್ಯಗಳು, ಶಿಫಾರಸುಗಳು ಅಥವಾ ಮಾರ್ಗದರ್ಶನವನ್ನು ಮತ್ತೊಬ್ಬ ವ್ಯಕ್ತಿ, ಗುಂಪು ಅಥವಾ ಪಕ್ಷಕ್ಕೆ ಸಂಬಂಧಿಸುವ ಒಂದು ರೂಪ. ಹಲವುವೇಳೆ ಇದನ್ನು ಕಾರ್ಯ ಮತ್ತು/ಅಥವಾ ನಡತೆಯ ಮಾರ್ಗದರ್ಶಿಯಾಗಿ ನೀಡಲಾಗುತ್ತದೆ. ಸ್ವಲ್ಪ ಹೆಚ್ಚು ಸರಳವಾಗಿ ಹೇಳಿದರೆ, ಸಲಹಾ ಸಂದೇಶವು ಒಂದು ಸಮಸ್ಯೆಯನ್ನು ನಿಭಾಯಿಸಲು, ನಿರ್ಧಾರವನ್ನು ಮಾಡಲು, ಅಥವಾ ಒಂದು ಪರಿಸ್ಥಿತಿಯನ್ನು ನಿರ್ವಹಿಸುವ ಬಗ್ಗೆ ಯೋಚಿಸಿರಬಹುದಾದ, ಹೇಳಿರಬಹುದಾದ ಅಥವಾ ಮಾಡಬಹುದಾದ ಶಿಫಾರಸು.
ಸಂಗೊಳ್ಳಿ ರಾಯಣ್ಣ (೨೦೧೨ ಚಲನಚಿತ್ರ)
ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ( English: Legendary warrior Sangolli Rayanna) ನಾಗಣ್ಣ ನಿರ್ದೇಶನದ 2012ರ ಕನ್ನಡ ಭಾಷೆಯ ಐತಿಹಾಸಿಕ ಚಿತ್ರ. ಈ ಚಿತ್ರವನ್ನು ಆನಂದ್ ಅಪ್ಪುಗೋಳ್ ನಿರ್ಮಿಸಿದ್ದಾರೆ. ಮುಖ್ಯ ಪಾತ್ರಗಳಲ್ಲಿ "ಚಾಲೆಂಜಿಂಗ್ ಸ್ಟಾರ್" ದರ್ಶನ್, ಜಯಪ್ರದಾ ಮತ್ತು ನಿಖಿತಾ ತುಕ್ರಲ್ ನಟಿಸಿದ್ದಾರೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಭಾರತ ಗಣರಾಜ್ಯವು ಐತಿಹಾಸಿಕ ದಾಖಲೆ, ಧ್ವಜ, ಲಾಂಛನ, ಗೀತೆ, ಸ್ಮಾರಕ ಗೋಪುರ ಮತ್ತು ಹಲವಾರು ರಾಷ್ಟ್ರೀಯ ವೀರರು ಸೇರಿದಂತೆ ಹಲವಾರು ಅಧಿಕೃತ ರಾಷ್ಟ್ರೀಯ ಚಿಹ್ನೆಗಳನ್ನು ಹೊಂದಿದೆ. ಎಲ್ಲಾ ಚಿಹ್ನೆಗಳನ್ನು ವಿವಿಧ ಸಮಯಗಳಲ್ಲಿ ತೆಗೆದುಕೊಳ್ಳಲಾಗಿದೆ. ೧೯೪೭ ರ ಜುಲೈ ೨೨ ರಂದು ರಾಷ್ಟ್ರೀಯ ಧ್ವಜದ ವಿನ್ಯಾಸವನ್ನು ಸಂವಿಧಾನ ಸಭೆಯು ಅಧಿಕೃತವಾಗಿ ಅಂಗೀಕರಿಸಿತು ಮತ್ತು ರಾಷ್ಟ್ರೀಯ ಪ್ರಾಣಿ, ಪಕ್ಷಿ, ಹೂವು, ಹಣ್ಣು ಮತ್ತು ಮರ ಸೇರಿದಂತೆ ಇನ್ನೂ ಹಲವಾರು ಚಿಹ್ನೆಗಳು ಇವೆ.
ಭಾರತದಲ್ಲಿ ೧೮೫೭ರ ಪ್ರಥಮ ಸ್ವಾತಂತ್ರ್ಯ ಸಂಗ್ರಾಮದ ನಂತರ ಬ್ರಿಟೀಷರು ೧೮೫೮ ರಿಂದ ೧೯೪೭ ರವರಗೆ ನೇರವಾಗಿ ನೆಡೆಸಿದ ಆಳ್ವಿಕೆಯ ಕಾಲವನ್ನು "ಬ್ರಿಟೀಷ್ ಆಳ್ವಿಕೆಯ ಕಾಲ" ಎಂದು ಕರೆಯುತ್ತಾರೆ.ಈ ಕಾಲವನ್ನು ಬ್ರಿಟೀಷ್ ಅಧಿಪತ್ಯದ ಕಾಲವಂತಲೂ ಪರಿಗಣಿಸಲಾಗಿದೆ.೧೮೫೮ರ ನಂತರ ಭಾರತದ ಸಾಮ್ರಾಜ್ಯವೂ ಬ್ರಿಟೀಷ್ ಇಂಡಿಯಾ ಆಗಿ,ಇಡೀ ಭಾರತದ ಬಹುತೇಕ ಪ್ರದೇಶಗಳು ಇವರ ಆಡಳಿತಕ್ಕೆ ಒಳಪಟ್ಟಿದ್ದವು. 'ಲೀಗ್ ಆಫ್ ನೇಷನ್' ಪ್ರಾರಂಭವಾದಾಗ ಭಾರತವು ಇದರ ಗುರುತಿಸಲ್ಪಡುವ ರಾಷ್ಟ್ರಗಳಲ್ಲಿ ಒಂದು.ಇದು ೧೯೦೦,೧೯೨೦,೧೯೨೮,೧೯೩೨,ಮತ್ತು ೧೯೩೬ರಲ್ಲಿ ನಡೆದ ಸಮ್ಮರ್ ಒಲಂಪಿಕ್ಸ್ ಗಳಲ್ಲಿ ಪಾಲ್ಗೊಂಡಿತ್ತು. ೧೮೫೮ರಲ್ಲಿ ಆಡಳಿತ ಎಂಬುವ ಪರಿಕಲ್ಪನೆ ಮೂಲಕ ಬ್ರಿಟೀಷ್ ಈಸ್ಟ್ ಇಂಡಿಯಾ ಕಂಪನಿ ಅಂದಿನ ಬ್ರಿಟನ್ ರಾಣಿ ವಿಕ್ಟೋರಿಯಾ ಮೂಲಕ ಆಡಳಿತ ಮಾಡಲು ಪ್ರಾರಂಭಿಸಿ,೧೯೪೭ರಲ್ಲಿ ಅಂತ್ಯಗೊಂಡಿತು.ಭಾರತ ಸಾಮ್ರಾಜ್ಯವೂ ಒಡೆದು ಯೂನಿಯನ್ ಆಫ್ ಇಂಡಿಯಾ ಮತ್ತು ಡಾಮಿನಿಯನ್ ಪಾಕ್ ಎಂದು ಎರಡು ಪ್ರತ್ಯೇಕ ದೇಶಗಳಾಗಿ ವಿಭಜಿಸಲ್ಪಟ್ಟವು.ಮುಸ್ಲಿಂಮರು ಸಹ ಪಾಕ್ ಮತ್ತು ಬಾಂಗ್ಲಾ ಗಣರಾಜ್ಯಗಳಲ್ಲಿ ಹಂಚಿಹೋದರು.ಬ್ರಿಟೀಷರು ೧೮೫೮ರಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಾಗ ಉತ್ತರ ಬರ್ಮ ಮತ್ತು ದಕ್ಷಿಣ ಬರ್ಮ ಎಂಬ ಪ್ರದೇಶಗಳು ಸಹ ಇವರ ಆಳ್ವಿಕೆಗೆ ಒಳಪಟ್ಟವು.ಹಾಗೆ,ಇದು ಒಂದು ಬ್ರಿಟೀಷರ ಪ್ರತ್ಯೇಕ ವಸಹತುವಾಗಿ ನಿರ್ಮಾಣಗೂಂಡಿತು.ಆದಕಾರಣ ಇದು ೧೯೪೮ರಲ್ಲಿ ಸ್ವಾತಂತ್ರ್ಯ ಪಡೆಯಿತು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಶೇರು ಮಾರುಕಟ್ಟೆಯಲ್ಲಿ ಚಲಾವಣೆಯಲ್ಲಿ ಇರುವ ಯಾವುದೇ ಒಂದು ಒಂದು ಶೇರಿನ ಮುಖಬೆಲೆಯನ್ನು ವಿಭಜಿಸುವ ಪ್ರಕ್ರಿಯೆಗೆ ಮುಖಬೆಲೆ ಸೀಳಿಕೆ (ಆಂಗ್ಲ ಭಾಷೆಯಲ್ಲಿ-Stock split) ಎಂದು ಕರೆಯಲಾಗುತ್ತದೆ. ಮುಖಬೆಲೆ ವಿಭಜನೆ ಮಾಡುವುದರಿಂದ, ಮಾರುಕಟ್ಟೆಯಲ್ಲಿ ಆ ಶೇರಿನ ದ್ರವ್ಯತೆ(ಕೊಳ್ಳುವ ಮತ್ತು ಮಾರುವ ಪ್ರಮಾಣ) ಹೆಚ್ಚುತ್ತದೆ. ಶೇರಿನ ಮುಖಬೆಲೆಯನ್ನು ವಿಭಜಿಸುವುದರಿಂದ ಆ ಸಂಸ್ಥೆಯ ಶೇರಿನ ಬೆಲೆಯಲ್ಲಿ ವ್ಯತ್ಯಾಸವಾಗಬಹುದು ಹೊರತಾಗಿ, ಸಂಸ್ಥೆಯ ಮಾರುಕಟ್ಟೆ ಮೌಲ್ಯದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕೆಳದಿಯ ಚನ್ನಮ್ಮ ಕ್ರಿ.ಶ.೧೬೭೨ರಿಂದ ಕ್ರಿ.ಶ.೧೬೯೭ರವರೆಗೆ ಕೆಳದಿ ಸಂಸ್ಥಾನವನ್ನು ಆಳಿದ ವೀರ ಮಹಿಳೆ. ರಾಣಿ ಚೆನ್ನಮ್ಮ ಛತ್ರಪತಿ ಶಿವಾಜಿಯ ಎರಡನೆಯ ಮಗನಾದ ರಾಜರಾಮನಿಗೆ ನೀಡಿದ ಆಶ್ರಯ ಮತ್ತು ಅದರ ಪರಿಣಾಮವಾಗಿ ಯುದ್ಧಕ್ಕೆ ಬಂದ ಔರಂಗಜೇಬನ ಸೈನ್ಯವನ್ನು ಸೋಲಿಸಿದ್ದು ಅವಳ ಆಳ್ವಿಕೆಯ ಅತ್ಯಂತ ಮಹತ್ತ್ವದ ಸಂಗತಿಗಳು. ತನ್ನ ಸ್ಥಿರ ಸಂಕಲ್ಪ, ದೂರದೃಷ್ಟಿ ಹಾಗೂ ಕಲಿತನಗಳಿಂದ ಇಕ್ಕೇರಿ ಸಂಸ್ಥಾನವನ್ನು ವಿಪತ್ತಿನಿಂದ ಪಾರು ಮಾಡಿದಳೆಂದು ಚೆನ್ನಮ್ಮ ಪ್ರಸಿದ್ಧಳಾಗಿದ್ದಾಳೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಭಾರತದಲ್ಲಿ ಬ್ರಿಟಿಷ್ ಆಡಳಿತದ ವೇಳೆಯಲ್ಲಿ, ಉಪ್ಪಿನ ಮೇಲೆ ವಿಧಿಸಿದ ಕರವನ್ನು ವಿರೋಧಿಸಿ ಮಹಾತ್ಮ ಗಾಂಧಿಯವರು ನಡೆಸಿದ ಸತ್ಯಾಗ್ರಹ ಚಳುವಳಿಯನ್ನು ಉಪ್ಪಿನ ಸತ್ಯಾಗ್ರಹ ಅಥವಾ ದಾಂಡಿ ಯಾತ್ರೆ ಎನ್ನಲಾಗುತ್ತದೆ. ಉಪ್ಪಿನ ಮೇಲಿನ ಕರವನ್ನು ವಿರೋಧಿಸಿ, ಮಹಾತ್ಮ ಗಾಂಧಿಯವರು ತಮ್ಮಅನುಯಾಯಿಗಳೊಡನೆ, ಸಬರಮತಿ ಆಶ್ರಮದಿಂದ ದಾಂಡಿಯವರೆಗಿನ ೨೪೦ ಮೈಲಿಗಳನ್ನು ಕಾಲ್ನಡಿಗೆಯಲ್ಲಿ ಕ್ರಮಿಸಿದರು.ಮಾರ್ಗ ಮದ್ಯ ಆನಂದ ಆಶ್ರಮ ಸ್ಥಾಪಿಸಿದರು ಅಲ್ಲಿ ಮೋತಿಲಾಲ್ ನೆಹರು ಉದ್ಘಾಟನೆ ಮಾಡಿದರು ಇಲ್ಲಿ ಈ ಕರದ ವಿರೋಧದ ಸಂಕೇತವಾಗಿ ನಿಬಂಧನೆಯ ವಿರುದ್ಧವಾಗಿ ಉಪ್ಪನ್ನು ತಯಾರಿಸಿದರು. ಈ ಚಳುವಳಿಯು ೧೯೩೦ನೇ ಇಸವಿಯ ಮಾರ್ಚ್ ೧೨ ರಿಂದ ಏಪ್ರಿಲ್ ೬ರವರಗೆ ನಡೆಯಿತು.
ಸುಗಂಧ ದ್ರವ್ಯವು ಮಾನವ ಶರೀರ, ಪ್ರಾಣಿಗಳು, ಆಹಾರ, ವಸ್ತುಗಳು, ಇರುಜಾಗಗಳಿಗೆ ಒಂದು ಆಹ್ಲಾದಕರ ವಾಸನೆಯನ್ನು ಕೊಡಲು ಬಳಸಲಾಗುವ ಪರಿಮಳಯುಕ್ತ ಸಾರಭೂತ ತೈಲಗಳು ಅಥವಾ ಪರಿಮಳ ಸಂಯುಕ್ತಗಳು, ಸ್ಥಿರಕಾರಕಗಳು ಹಾಗೂ ದ್ರಾವಕಗಳ ಒಂದು ಮಿಶ್ರಣ. ಸುಗಂಧ ದ್ರವ್ಯಗಳು, ಪ್ರಾಚೀನ ಪಥ್ಯಗಳ ಮೂಲಕ ಅಥವಾ ಪುರಾತತ್ವ ಉತ್ಖನನಗಳಿಂದ, ಕೆಲವು ಅತ್ಯಂತ ಮುಂಚಿನ ಮಾನವ ನಾಗರಿಕತೆಗಳಲ್ಲಿ ಅಸ್ತಿತ್ವದಲ್ಲಿದ್ದವೆಂದು ತಿಳಿದುಬಂದಿದೆ. ಆಧುನಿಕ ಸುಗಂಧದ್ರವ್ಯ ತಯಾರಿಕೆಯು ಹಿಂದೆ ಕೇವಲ ನೈಸರ್ಗಿಕ ಪರಿಮಳಕಾರಕಗಳಿಂದ ಮಾತ್ರ ಪಡೆಯಲಾಗದ ವಾಸನೆಗಳಿರುವ ಸುಗಂಧ ದ್ರವ್ಯಗಳ ಸಂಯೋಜನೆಗೆ ಅವಕಾಶ ನೀಡಿದ ವನಿಲಿನ್ ಅಥವಾ ಕೂಮರಿನ್ ಅಂತಹ ಪರಿಮಳ ಸಂಯುಕ್ತಗಳ ವಾಣಿಜ್ಯ ಸಂಶ್ಲೇಷಣೆಯೊಂದಿಗೆ ೧೯ನೆಯ ಶತಮಾನದ ಉತ್ತರಾರ್ಧದಲ್ಲಿ ಆರಂಭಗೊಂಡಿತು.
ಪಶ್ಚಿಮ ಬಂಗಾಳ, ಭಾರತದ ಪೂರ್ವ ರಾಜ್ಯಗಳಲ್ಲಿ ಒಂದಾಗಿದೆ ಮತ್ತು ಭಾರತ ಗಣರಾಜ್ಯದ ಒಂದು ರಾಜ್ಯವಾಗಿದೆ. ಕರ್ಕಾಟಕ ಸಂಕ್ರಾಂತಿ ವೃತ್ತ ಪಶ್ಚಿಮ ಬಂಗಾಳದ ನಡುವೆ ಹಾದುಹೋಗುತ್ತದೆ.ಈ ರಾಜ್ಯದ ಉತ್ತರ ಭಾಗದಲ್ಲಿ ಸಿಕ್ಕಿಂ ಮತ್ತು ಭೂತಾನ್ ಬರುತ್ತದೆ, ದಕ್ಷಿಣದಲ್ಲಿ ಬಂಗಾಳ ಕೊಲ್ಲಿ ಬರುತ್ತದೆ, ಪೂರ್ವದಲ್ಲಿ ಅಸ್ಸಾಂ ಮತ್ತು ಬಾಂಗ್ಲಾದೇಶ ಬರುತ್ತದೆ. ಪಶ್ಚಿಮದಲ್ಲಿ ಒರಿಸ್ಸಾ, ಬಿಹಾರ ಮತ್ತು ನೇಪಾಲ ಇವೆ.
ಬ್ರಿಟಿಷರ ಆಕ್ರಮಣ ಕಾಲದಿಂದಲೇ ಒಂದು ದೃಷ್ಟಿಯಲ್ಲಿ ಆರಂಭವಾಗಿ, ೧೯ನೆಯ ಶತಮಾನದ ನಡುಗಾಲದಿಂದ ಕ್ರಮೇಣ ತೀವ್ರವಾಗಿ, ೨೦ನೆಯ ಶತಮಾನದಲ್ಲಿ ವ್ಯಾಪಕವಾಗಿ ಹಬ್ಬಿ, ೧೯೪೭ರಲ್ಲಿ ಯಶಸ್ವಿಯಾಗಿ ಪರ್ಯವಸಾನ ಹೊಂದಿನ ಭಾರತೀಯ ಸ್ವಾತಂತ್ರ್ಯ ಚಳವಳಿಯ ಅಂಗವಾಗಿದ್ದೂ ವಿಶಿಷ್ಟವಾಗಿ ವಿಕಾಸಗೊಂಡ ಕರ್ನಾಟಕ ಸ್ವಾತಂತ್ರ್ಯ ಚಳವಳಿಯ ಇತಿಹಾಸವನ್ನು ಸ್ಥೂಲವಾಗಿ ಮೂರು ಕಾಲಗಳಾಗಿ ವಿಂಗಡಿಸಬಹುದಾಗಿದೆ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.