The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಮಂತ್ರಿ ಒಂದು ರಾಷ್ಟ್ರೀಯ ಅಥವಾ ಪ್ರಾದೇಶಿಕ ಸರ್ಕಾರದಲ್ಲಿ ಸಾರ್ವಜನಿಕ ಪದವನ್ನು ಹೊಂದಿರುವ ಒಬ್ಬ ರಾಜಕಾರಣಿ. ಇವನು/ಇವಳು ಇತರ ಮಂತ್ರಿಗಳ ಸಂಯೋಗದೊಂದಿಗೆ ಸರ್ಕಾರದ ನೀತಿಗಳ ಮೇಲಿನ ನಿರ್ಣಯಗಳನ್ನು ಮಾಡುತ್ತಾನೆ ಮತ್ತು ಅವನ್ನು ಕಾರ್ಯಗತಗೊಳಿಸುತ್ತಾನೆ. ಕೆಲವು ಅಧಿಕಾರ ವ್ಯಾಪ್ತಿಗಳಲ್ಲಿ ಸರ್ಕಾರದ ಮುಖ್ಯಸ್ಥನೂ ಒಬ್ಬ ಮಂತ್ರಿಯಾಗಿರುತ್ತಾನೆ ಮತ್ತು ಇವನನ್ನು "ಪ್ರಧಾನ ಮಂತ್ರಿ", "ಮುಖ್ಯ ಮಂತ್ರಿ" ಅಥವಾ ಇತರ ಹೆಸರಿನಿಂದ ಕರೆಯಲಾಗುತ್ತದೆ.
ಓಣಮ್ದಕ್ಷಿಣ ಭಾರತದ ಕೇರಳರಾಜ್ಯದಲ್ಲಿ ನಡೆಯುವ ಅತಿದೊಡ್ಡ ಹಬ್ಬವಾಗಿದೆ. ಈ ಹಬ್ಬವನ್ನು ಮಲಯಾಳೀ ಪಂಚಾಂಗದ ಮೊದಲ ತಿಂಗಳು ಚಿಂಗಮ್(ಆಗಸ್ಟ್-ಸೆಪ್ಟೆಂಬರ್) ತಿಂಗಳಿನಲ್ಲಿ, ಪುರಾಣಪ್ರಸಿದ್ಧ ಸಾಮ್ರಾಟ ಮಹಾಬಲಿಯು ಮನೆಗೆ ಮರಳಿ ಬಂದ ಕುರುಹಾಗಿ ಸಂಭ್ರಮದಿಂದ ಆಚರಿಸಲಾಗುತ್ತದೆ. ಹತ್ತು ದಿನಗಳವರೆಗೆ ಸಡಗರದಿಂದ ಜರುಗುವ ಈ ಹಬ್ಬವು ಕೇರಳದ ಹಲವಾರು ಸಾಂಸ್ಕೃತಿಕ ಮತ್ತು ಸಾಂಪ್ರದಾಯಿಕತೆಯ ಎಳೆಗಳೊಂದಿಗೆ ಬೆಸೆದುಕೊಂಡಿದೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ದರ್ಶನ್ (ಜನನ ೧೬ ಫೆಬ್ರವರಿ ೧೯೭೭ ), ದರ್ಶನ್ ತೂಗುದೀಪ ಭಾರತೀಯ ಚಿತ್ರೋದ್ಯಮದಲ್ಲಿ ನಟ, ನಿರ್ಮಾಪಕ ಮತ್ತು ವಿತರಕರಾಗಿದ್ದು, ಕನ್ನಡ ಚಲನಚಿತ್ರೋದ್ಯಮದಲ್ಲಿ ಪ್ರಧಾನವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ನಟ ತೂಗುದೀಪ ಶ್ರೀನಿವಾಸ್ ಅವರ ಮಗ, ದರ್ಶನ್ ಅವರ ನಟನಾ ವೃತ್ತಿಯನ್ನು ೧೯೯೦ರ ದಶಕದ ಮಧ್ಯಭಾಗದಲ್ಲಿ ಪ್ರಾರಂಭಿಸಿದರು. ಚಿತ್ರರಂಗ ಪ್ರವೇಶಿಸುವ ಮೊದಲು ಕಿರುತೆರೆ ಧಾರಾವಾಹಿಯೊಂದರಲ್ಲಿ ಅಭಿನಯಿಸಿದ್ದರು.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಚದುರಂಗ (ಚೆಸ್) ಇಬ್ಬರು ಆಟಗಾರರಿಂದ ಆಡಲ್ಪಡುವ ಒಂದು ಆಟ - ಇದನ್ನು ೬೪ ಚೌಕಗಳಿರುವ ಮಣೆಯ ಮೇಲೆ ಆಡಲಾಗುತ್ತದೆ. ಮಣೆಯ ಮೇಲಿನ ಚೌಕಗಳು ಕಪ್ಪು ಮತ್ತು ಬಿಳುಪು ಬಣ್ಣಗಳಿಂದ ಕೂಡಿದ್ದ ಒಂದು ಕಪ್ಪು ಮತ್ತು ಒಂದು ಬಿಳಿ - ಹೀಗೆ ಜೋಡಿಸಲ್ಪಟ್ಟಿರುತ್ತವೆ. ಆಟದ ಪ್ರಾರಂಭದಲ್ಲಿ ಪ್ರತಿ ಆಟಗಾರನ ಬಳಿ ೧೬ ಕಾಯಿಗಳಿರುತ್ತವೆ - ಒಂದು ರಾಜ, ಒಂದು ರಾಣಿ, ಎರಡು ಆನೆ, ಎರಡು ಕುದುರೆ, ಎರಡು ಒಂಟೆ ಮತ್ತು ಎಂಟು ಪದಾತಿಗಳು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ರಸಾಯನಶಾಸ್ತ್ರದಲ್ಲಿ, ಮಿಶ್ರಣ ಎಂದರೆ ಭೌತಿಕವಾಗಿ ಸೇರಿಸಲಾದ ಎರಡು ಅಥವಾ ಹೆಚ್ಚು ಭಿನ್ನ ವಸ್ತುಗಳಿಂದ ತಯಾರಾದ ವಸ್ತು. ಮಿಶ್ರಣವು ಎರಡು ಅಥವಾ ಹೆಚ್ಚು ವಸ್ತುಗಳ ಭೌತಿಕ ಸಂಯೋಜನೆಯಾಗಿದ್ದು, ಸ್ವಸ್ವರೂಪಗಳು ಹಾಗೆಯೇ ಉಳಿದಿರುತ್ತವೆ ಮತ್ತು ವಸ್ತುಗಳನ್ನು ದ್ರಾವಣಗಳು, ತೇಲಣ ಹಾಗೂ ಕಲಿಲಗಳ ರೂಪದಲ್ಲಿ ಬೆರೆಸಲಾಗುತ್ತದೆ. ಮಿಶ್ರಣಗಳು ಮೂಲಧಾತುಗಳು ಹಾಗೂ ಸಂಯುಕ್ತಗಳಂತಹ ರಾಸಾಯನಿಕ ವಸ್ತುಗಳ ಯಾಂತ್ರಿಕ ಬೆರಕೆ ಅಥವಾ ಮಿಶ್ರಮಾಡುವಿಕೆಯ ಒಂದು ಉತ್ಪನ್ನವಾಗಿರುತ್ತವೆ, ಆದರೆ ರಾಸಾಯನಿಕ ಬಂಧ ಅಥವಾ ರಾಸಯನಿಕ ಬದಲಾವಣೆ ಇರುವುದಿಲ್ಲ, ಮತ್ತು ಹಾಗಾಗಿ ಪ್ರತಿಯೊಂದು ಘಟಕಾಂಶ ವಸ್ತುವು ತನ್ನ ಸ್ವಂತದ ರಾಸಾಯನಿಕ ಗುಣಗಳು ಹಾಗೂ ರಚನೆಯನ್ನು ಉಳಿಸಿಕೊಂಡಿರುತ್ತದೆ.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಚದುರಂಗದ ನಿಯಮಗಳು (ಚದುರಂಗದ ಕಾನೂನುಗಳು ಎಂದೂ ಸಹ ಇವು ಪರಿಚಿತವಾಗಿವೆ) ಚದುರಂಗದ ಆಟದ ಆಡುವಿಕೆಯನ್ನು ನಿರ್ದೇಶಿಸುವ ನಿಯಮಗಳಾಗಿವೆ. ಚದುರಂಗದ ಮೂಲಗಳು ಕರಾರುವಾಕ್ಕಾಗಿ ಯಾವುವು ಎಂಬುದು ಅಸ್ಪಷ್ಟವಾಗಿದ್ದರೂ ಸಹ, ಆಟದ ಆಧುನಿಕ ನಿಯಮಗಳು ೧೬ನೇ ಶತಮಾನದ ಅವಧಿಯಲ್ಲಿ ಇಟಲಿಯಲ್ಲಿ ಮೊದಲು ರೂಪುಗೊಂಡವು ಎನ್ನಬಹುದು. ೧೯ನೇ ಶತಮಾನದ ಆರಂಭದವರೆಗೂ ಈ ನಿಯಮಗಳಲ್ಲಿ ಕೊಂಚಮಟ್ಟಿನ ಮಾರ್ಪಾಡು ಆಗುತ್ತಲೇ ಇತ್ತು.
ಭಾರತ್ ಜೋಡೋ ಯಾತ್ರೆ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಆರಂಭಿಸಿದ ನಡೆಯುತ್ತಿರುವ ಸಾಮೂಹಿಕ ಚಳುವಳಿಯಾಗಿದೆ. ಕಾಂಗ್ರೆಸ್ನ ನಾಯಕ ರಾಹುಲ್ ಗಾಂಧಿಯವರು ಪಕ್ಷದ ಕಾರ್ಯಕರ್ತರನ್ನು ಮತ್ತು ಸಾರ್ವಜನಿಕರನ್ನು ಸಜ್ಜುಗೊಳಿಸಿ, ಪರ್ಯಾಯ ದ್ವೀಪದ ದಕ್ಷಿಣ ತುದಿಯಾದ ಕನ್ಯಾಕುಮಾರಿಯಿಂದ 3,570 ಕಿಲೋಮೀಟರ್ಗಳಷ್ಟು ವ್ಯಾಪಿಸಿರುವ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದವರೆಗೆ ಕಾಲ್ನಡಿಗೆಯಲ್ಲಿ ನಡೆಯಲು ಆಂದೋಲನವನ್ನು ರೂಪಿಸುತ್ತಿದ್ದಾರೆ. ನವದೆಹಲಿಯಲ್ಲಿ ಭಾರತೀಯ ಜನತಾ ಪಕ್ಷದ ನೇತೃತ್ವದ ಕೇಂದ್ರ ಸರ್ಕಾರದ ಆಪಾದಿತ "ವಿಭಜಕ ರಾಜಕೀಯ" ವಿರುದ್ಧ ದೇಶವನ್ನು ಒಗ್ಗೂಡಿಸಲು ನಾವು ಈ ಚಳುವಳಿಯನ್ನು ಪ್ರಾರಂಭಿಸಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ .
ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ವಿಜೇತ ಕನ್ನಡ ಭಾಷಾ ಸಾಹಿತಿಗಳು
ಭಾರತ ಸರ್ಕಾರ ನೀಡುವ ಅತ್ಯುನ್ನತ ಸಾಹಿತ್ಯ ಪ್ರಶಸ್ತಿ ಎಂದರೆ ಅದು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ. ವಾರ್ಷಿಕ ಪ್ರಶಸ್ತಿಗಳ ಜೊತೆಯಲ್ಲಿಯೇ ಭಾರತದ ವಿಭಿನ್ನ ಭಾಷೆಗಳ ಹಿರಿಯ ಸಾಹಿತಿಗಳನ್ನು ಆಯ್ಕೆ ಮಾಡಿ ಅವರಿಗೆ ಸಾಹಿತ್ಯ ಅಕಾಡೆಮಿ ಫೆಲೋ ಗೌರವ ನೀಡುತ್ತದೆ. ಇದರ ಜತೆಯಲ್ಲಿ ಯುವ ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿಯ ಯುವ ಪುರಸ್ಕಾರ, ಮಕ್ಕಳ ಸಾಹಿತ್ಯ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಬಾಲ ಸಾಹಿತ್ಯ ಪುರಸ್ಕಾರ, ಅನುವಾದ ಕ್ಷೇತ್ರದ ಸಾಧನೆಗೆ ಅನುವಾದ ಬಹುಮಾನಗಳನ್ನೂ ನೀಡಿ ಗೌರವಿಸಲಾಗುತ್ತದೆ.
ಭಾರತದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು
ಭಾರತ ಒಂದು ಸಂಯುಕ್ತ ರಾಜ್ಯಗಳ ಒಕ್ಕೂಟ. ಭಾರತ ಗಣರಾಜ್ಯ ಇದರಲ್ಲಿ ಇಪ್ಪತ್ತೆಂಟು ರಾಜ್ಯಗಳು ಹಾಗು ಎಂಟು ಕೇಂದ್ರಾಡಳಿತ ಪ್ರದೇಶಗಳು ಇವೆ. ರಾಜ್ಯಗಳು ಹಾಗು ಪ್ರಾಂತ್ಯಗಳು ಮತ್ತೆ ಜಿಲ್ಲೆಗಳಾಗಿ ಉಪವಿಭಾಗಿಸಲಾಗಿದೆ.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) (ಆಂಗ್ಲ: ISRO – Indian Space Research Organisation) ಭಾರತದ ಅಂತರಿಕ್ಷ ಸಂಶೋಧನಾ ಸಂಸ್ಥೆ. ಇದು ಬೆಂಗಳೂರಿನಲ್ಲಿ ಮುಖ್ಯ ಕಛೇರಿಯನ್ನು ಹೊಂದಿದ್ದು ಸುಮಾರು ೧೭,೦೦೦ ಕೆಲಸಗಾರರನ್ನು ಹೊಂದಿದೆ. ಇಸ್ರೋದ ಮುಖ್ಯ ಕೇಂದ್ರಗಳು ಬೆಂಗಳೂರು, ತಿರುವನಂತಪುರ (ಕೇರಳ), ಅಹಮದಾಬಾದ್ (ಗುಜರಾತ್), ಮಹೇಂದ್ರಗಿರಿ(ತಮಿಳುನಾಡು), ಹಾಸನ(ಕರ್ನಾಟಕ) ಮತ್ತು ಶ್ರೀಹರಿಕೋಟ (ಆಂಧ್ರ ಪ್ರದೇಶ) ಗಳಲ್ಲಿ ಇವೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಭಾರತ, ಅಧಿಕೃತವಾಗಿ ಭಾರತ ಗಣರಾಜ್ಯ, ಅಥವಾ ಇಂಡಿಯಾ (India), ಎಂದು ಕರೆಯಲ್ಪಡುವ ದಕ್ಷಿಣ ಏಷ್ಯಾದ ಅತಿ ದೊಡ್ಡ ದೇಶ. ಭಾರತೀಯ ಉಪಖಂಡದ ಪ್ರಮುಖ ದೇಶವಾಗಿದ್ದು, ಪ್ರಪಂಚದ ಅತಿ ಹೆಚ್ಚು ಜನಸಂಖ್ಯೆ ಹೊಂದಿದ ಹಾಗೂ ಪ್ರಪಂಚದ ಅತಿ ದೊಡ್ಡ ಪ್ರಜಾಪ್ರಭುತ್ವವಿರುವ ರಾಷ್ಟ್ರವಾಗಿದೆ. ಭಾರತವು ೧೩೦ ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದು (೨೦೧೮ ಅಂದಾಜು) ಒಟ್ಟು ೮೦೦ ವಿಭಿನ್ನ ಭಾಷೆಗಳನ್ನು ಉಪಯೋಗಿಸುವ ಜನರನ್ನು ಹೊಂದಿದೆ.
ಮೋಡ ಬಿತ್ತನೆ ಒಂದು ಬಗೆಯ ಹವಾಮಾನ ಬದಲಾವಣೆ, ವಾತಾವರಣದಲ್ಲಿ ವಸ್ತುಗಳನ್ನು ಹರಡಿ ಮೋಡಗಳಿಂದ ಬೀಳುವ ಅವಕ್ಷೇಪನದ ಪ್ರಮಾಣ ಅಥವಾ ಪ್ರಕಾರವನ್ನು ಬದಲಾಯಿಸುವ ಒಂದು ರೀತಿ. ಈ ವಸ್ತುಗಳು ಮೋಡ ಘನೀಕರಣ ಅಥವಾ ಮಂಜುಗಡ್ಡೆ ನಾಭಿಗಳಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಮೋಡದೊಳಗಿನ ಸೂಕ್ಷ್ಮಭೌತಿಕ ಪ್ರಕ್ರಿಯೆಗಳನ್ನು ಮಾರ್ಪಾಡು ಮಾಡುತ್ತವೆ. ಅವಕ್ಷೇಪನವನ್ನು (ಮಳೆ ಅಥವಾ ಹಿಮ) ಹೆಚ್ಚಿಸುವುದು ಇದರ ಸಾಮಾನ್ಯ ಉದ್ದೇಶವಾಗಿದೆ, ಆದರೆ ವಿಮಾನ ನಿಲ್ದಾಣಗಳಲ್ಲಿ ಆಲಿಕಲ್ಲು ಮತ್ತು ಮಂಜಿನ ನಿರೋಧವನ್ನೂ ವ್ಯಾಪಕವಾಗಿ ನಡೆಸಲಾಗುತ್ತದೆ.
ಭಾರತದ ಪ್ರಥಮ ಸ್ವಾತಂತ್ರ್ಯ ಸಂಗ್ರಾಮ
ಭಾರತದಲ್ಲಿ ತಮ್ಮ ಅಧಿಕಾರ ವಿಸ್ತರಣೆ ಉದ್ದೇಶದಿಂದ ಇಂಗ್ಲಿಷರು ಸಹಾಯಕ ಸೈನ್ಯ ಪದ್ಧತಿ ಮತ್ತು ದತ್ತು ಮಕ್ಕಳಿಗೆ ಹಕ್ಕಿಲ್ಲ ಎಂಬ ನೀತಿಗಳನ್ನು ಜಾರಿಗೆ ತಂದಿದ್ದರು. ಈ ನೀತಿಗಳಿಂದ ಹಲವು ಸಂಸ್ಥಾನಗಳು ಬ್ರಿಟಿಷರ ವಶವಾಗಿದ್ದವು. ಇದರಿಂದಾಗಿ ಭಾರತೀಯರು ಅಸಮಾಧಾನಗೊಂಡರು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.