The most-visited English Wikipedia articles, updated daily. Learn more...
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಬಸವರಾಜ ರಾಯರೆಡ್ಡಿ (ಜನನ ೬ ಸೆಪ್ಟೆಂಬರ್ ೧೯೫೬) ಒಬ್ಬ ಭಾರತೀಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದಿಂದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಸದಸ್ಯರಾಗಿದ್ದಾರೆ. ರಾಯರೆಡ್ಡಿ ಅವರು ಕರ್ನಾಟಕ ವಿಧಾನಸಭೆ ಆರು ಅವಧಿಯ ಸದಸ್ಯರಾಗಿದ್ದಾರೆ ಮತ್ತು ೧೧ನೇ ಲೋಕಸಭೆ ಒಂದು ಅವಧಿಯ ಸದಸ್ಯರಾಗಿದ್ದಾರೆ. ಜೂನ್ ೨೦೧೬ ರಲ್ಲಿ ರಾಯರೆಡ್ಡಿ ಅವರು ಕರ್ನಾಟಕದ ಸಿದ್ದರಾಮಯ್ಯ ನೇತೃತ್ವದ ಸರ್ಕಾರಕ್ಕೆ ಕ್ಯಾಬಿನೆಟ್ ಮಂತ್ರಿಯಾಗಿ ಸೇರ್ಪಡೆಗೊಂಡರು ಮತ್ತು ಉನ್ನತ ಶಿಕ್ಷಣ ಸಚಿವರಾಗಿದ್ದರು.
ಕೃಷ್ಣದೇವರಾಯ ಕ್ರಿ.ಶ.೧೫೦೯ ರಿಂದ ೧೫೨೯ ರ ವರೆಗೆ ಆಳಿದ ವಿಜಯನಗರ ಸಾಮ್ರಾಜ್ಯದ ಚಕ್ರವರ್ತಿ ಮತ್ತು ವಿಜಯನಗರದ ಅರಸರಲ್ಲಿ ಅತಿ ಪ್ರಮುಖನು. ತುಳುವ ರಾಜವಂಶದ ಮೂರನೆಯ ಅರಸ. ವಿಜಯನಗರ ಸಾಮ್ರಾಜ್ಯ ಈತನ ಆಳ್ವಿಕೆಯ ಕಾಲದಲ್ಲಿ ಉಚ್ಛ್ರಾಯಕ್ಕೇರಿತು.ಕನ್ನಡ ನಾಡಿನಲ್ಲಿ "ಮೂರುರಾಯರಗಂಡ", "ಕನ್ನಡರಾಜ್ಯ ರಮಾರಮಣ" ಎಂದೂ, ಆಂಧ್ರದಲ್ಲಿ "ಆಂಧ್ರಭೋಜ" ಎಂದೂ, ಸ್ವತಃ ಉತ್ತಮ ಬರಹಗಾರನಾಗಿದ್ದ ಕೃಷ್ಣದೇವರಾಯನು ಸಮಕಾಲೀನ ಕವಿಗಳಿಂದ "ಉರುಕಳ್ ವೈಭವ ನಿವಾಹ ನಿಧಾನ" ಎಂದೂ ಬಿರುದಾಂಕಿತನಾದ ಈತನ ಕಾಲದ ವೈಭವ ಇಂದೂ ಮನೆಮಾತಾಗಿದೆ.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಪ್ರಜಾವಾಣಿಯು (ಕನ್ನಡ:ಜನರ ಧ್ವನಿ) ಭಾರತದ ಕರ್ನಾಟಕದಲ್ಲಿ ಪ್ರಕಟವಾದ ಪ್ರಮುಖ ಕನ್ನಡ ಭಾಷೆಯ ಬ್ರಾಡ್ಶೀಟ್ ದಿನಪತ್ರಿಕೆಯಾಗಿದೆ. ೨.೧೩ ದಶಲಕ್ಷಕ್ಕೂ ಹೆಚ್ಚು ಓದುಗರನ್ನು ಹೊಂದಿರುವ ಈ ಪತ್ರಿಕೆಯು ರಾಜ್ಯದಲ್ಲಿ ಅತಿ ಹೆಚ್ಚು ಪ್ರಸಾರವಾದ ಪತ್ರಿಕೆಗಳಲ್ಲಿ ಒಂದಾಗಿದೆ. 'ಪದ ಸಂಪದ', 'ಚಿನಕುರಳಿ' ಮುಂತಾದ ಜನಪ್ರಿಯ ಅಂಕಣ/ವ್ಯಂಗ್ಯಚಿತ್ರಗಳು ಈ ಪತ್ರಿಕೆಯನ್ನು ವಿಶಿಷ್ಟಗೊಳಿಸಿದವು.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಕೇರಳರಾಜ್ಯದಲ್ಲಿ ಜಾತಿ, ಮತಭೇದಗಳು ಹೆಚ್ಚಾಗಿದ್ದ ಕಾಲದಲ್ಲಿ 'ನಾರಾಯಣ ಗುರು,' ವೆಂಬ, ಒಬ್ಬ ಸಮಾಜಕ ಸುಧಾರಕ, ಉದಯಿಸಿ, ಸಮಾಜದ ತಾರತಮ್ಯಗಳನ್ನು ಕಡಿಮೆಮಾಡಲು ಇಡೀಜೀವನವನ್ನು ಮುಡಿಪಾಗಿಟ್ಟರು. ಅವರು ಪ್ರತಿಪಾದಿಸಿದ ತತ್ವ, ಜಗತ್ತಿನಲ್ಲಿರುವುದು, " ಒಂದೇಜಾತಿ, ಒಂದೇ ಮತ, ಹಾಗೂ ಒಂದೇ ದೇವರು," ಎಂಬ ಸತ್ಯವಾಕ್ಯವನ್ನು. ಸಂಸ್ಕೃತಭಾಷೆಯಲ್ಲಿ ಅದ್ವಿತೀಯ ಪಂಡಿತರಾಗಿದ್ದ ನಾರಾಯಣ ಗುರುಗಳು, ಕೇರಳ ಸಮಾಜದಲ್ಲಿ ಅಸ್ಪೃಶ್ಯತೆಯ ಪಿಡುಗಿಗೆ ತಮ್ಮದೇ ಆದ ನಿಲುವಿನಲ್ಲಿ, ಸಮಾಧಾನಕರವಾದ ಉಪಾಯಗಳನ್ನು ಕಂಡುಕೊಂಡರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಇಸ್ಲಾಮ್ (الإسلام; [ɪsˈlaːm] ( ), ಅನುವಾದ. ದೇವರ ಇಚ್ಛೆಗೆ ಶರಣಾಗುವುದು) ಏಕದೇವತಾವಾದಿ ಧರ್ಮವಾಗಿದ್ದು, ಇದರ ಅನುಯಾಯಿಗಳು ಅಲ್ಲಾಹನಲ್ಲದೆ ಬೇರೆ ದೇವರಿಲ್ಲ ಮತ್ತು ಮುಹಮ್ಮದ್ ಅಲ್ಲಾಹನ ಸಂದೇಶವಾಹಕರು ಎಂದು ನಂಬುತ್ತಾರೆ. ಅವರನ್ನು ಮುಸ್ಲಿಮರು ಎಂದು ಕರೆಯಲಾಗುತ್ತದೆ. ಇಸ್ಲಾಂ ಧರ್ಮವು ದೇವರು (ಅಲ್ಲಾಹು) ಕರುಣಾಮಯಿ, ಸರ್ವಶಕ್ತ ಮತ್ತು ಏಕೈಕನು ಎಂದು ಬೋಧಿಸುತ್ತದೆ ಮತ್ತು ಅವನು ಪ್ರವಾದಿಗಳು, ಸಂದೇಶವಾಹಕರು ಮತ್ತು ಪವಿತ್ರ ಗ್ರಂಥಗಳ ಮೂಲಕ ಮಾನವಕುಲಕ್ಕೆ ಮಾರ್ಗದರ್ಶನ ನೀಡಿದ್ದಾನೆ ಎಂದು ಹೇಳುತ್ತದೆ.
ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಬೆಂಗಳೂರು : ಕರ್ನಾಟಕ ರಾಜ್ಯದ ಅತಿ ದೊಡ್ಡ ನಗರ ಮತ್ತು ರಾಜಧಾನಿ ಕೇಂದ್ರ ಹಾಗೂ ಬೆಂಗಳೂರು ನಗರ ಜಿಲ್ಲೆಯ ಜಿಲ್ಲಾಕೇಂದ್ರ ಮತ್ತು ತಾಲ್ಲೂಕು ಕೇಂದ್ರ ಹಾಗೂ ಕಸಬಾ ಹೋಬಳಿಯ ಕೇಂದ್ರವಾಗಿದೆ, ಪ್ರಸ್ತುತ ಬೆಂಗಳೂರು ತಾಲ್ಲೂಕು 408 ಚ.ಕಿ.ಮೀ ವಿಸ್ತೀರ್ಣ ಹೊಂದಿದೆ. ಬೆಂಗಳೂರು ನಗರವು ಕ್ರಿ.ಶ.೧೫೩೭ರಲ್ಲಿ ಯಲಹಂಕ ನಾಡಪ್ರಭು ಕೆಂಪೇಗೌಡರಿಂದ ನಿರ್ಮಾಣವಾಯಿತು. ಇದು ದಕ್ಷಿಣ ಪ್ರಸ್ಥಭೂಮಿಯ ಮೇಲಿದ್ದು, ಕರ್ನಾಟಕದ ಆಗ್ನೇಯ ದಿಕ್ಕಿನಲ್ಲಿದೆ.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಮರುಭೂಮಿ ಪರಿಸರ ವಿಜ್ಞಾನವು ಮರುಭೂಮಿ ಪರಿಸರದ ಜೈವಿಕ ಮತ್ತು ಅಜೀವಕ ಘಟಕಗಳ ನಡುವಿನ ಪರಸ್ಪರ ಕ್ರಿಯೆಗಳ ಅಧ್ಯಯನವಾಗಿದೆ. ಮರುಭೂಮಿ ಪರಿಸರ ವ್ಯವಸ್ಥೆಯನ್ನು ಜೀವಿಗಳು ಹಾಗು ಅವು ವಾಸಿಸುವ ಹವಾಮಾನ ಮತ್ತು ಆವಾಸಸ್ಥಾನದ ಮೇಲೆ ಪ್ರಭಾವ ಬೀರುವ ನಿರ್ಜೀವ ವಸ್ತುಗಳ ನಡುವಿನ ಕ್ರಿಯೆಯೆಂದು ವ್ಯಾಖ್ಯಾನಿಸಲಾಗಿದೆ. ಮರುಭೂಮಿಗಳು ಶುಷ್ಕ ಪ್ರದೇಶಗಳಾಗಿವೆ, ಅವುಗಳು ಸಾಮಾನ್ಯವಾಗಿ ಬೆಚ್ಚಗಿನ ತಾಪಮಾನದೊಂದಿಗೆ ಸಂಬಂಧ ಹೊಂದಿವೆ; ಶೀತ ಮರುಭೂಮಿಗಳು ಸಹ ಅಸ್ತಿತ್ವದಲ್ಲಿವೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.