The most-visited English Wikipedia articles, updated daily. Learn more...
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಆಧುನಿಕ ಕನ್ನಡ ಸಾಹಿತ್ಯದ ಕಾದಂಬರಿಕಾರರು ಮತ್ತು ಲೇಖಕರು. ಕನ್ನಡ ಭಾಷೆಯಲ್ಲಿ ಪುಸ್ತಕಗಳನ್ನು ಬರೆದಿರುವ ಇವರ ಕೃತಿಗಳು ಇಂಗ್ಲೀಷ್ ಹಾಗೂ ಭಾರತೀಯ ಭಾಷೆಗಳಿಗೆ ಅನುವಾದಗೊಂಡು ಭಾರತದ ಸಾಹಿತ್ಯವಲಯದಲ್ಲಿ ಹೆಸರಾಗಿದ್ದಾರೆ. ಇವರ ಕಾದಂಬರಿಗಳು ಹಲವಾರು ಮರುಮುದ್ರಣಗಳನ್ನು ಕಂಡು ಕನ್ನಡದ ಜನಪ್ರಿಯ ಬರಹಗಾರರಾಗಿದ್ದಾರೆ.ಇವರಿಗೆ ಭಾರತ ಸರ್ಕಾರವು ೨೦೨೩ನೇ ಸಾಲಿನಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿದೆ.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಬ್ರಿಕ್ಸ್ ಅಥವಾ ಬ್ರಿಕ್ಸ್ ಸಂಘಟನೆ – ಬ್ರೆಜಿಲ್, ರಶಿಯ, ಭಾರತ, ಚೀನಾ ಮತ್ತು ದಕ್ಷಿಣ ಆಫ್ರಿಕ ಐದು ರಾಷ್ಟ್ರಗಳನ್ನು ಒಳಗೊಂಡ ಒಂದು ಸಂಘಟನೆ. ಈ ದೇಶಗಳ ಮೊದಲಕ್ಕರಗಳಾದ (ಅಕ್ರೊನಿಮ್ ಅಥವಾ ಪ್ರಥಮಾಕ್ಷರ) B –ಬ್ರೆಜಿಲ್, R-ರಶಿಯ, I –ಭಾರತ ಅಥವಾ ಇಂಡಿಯಾ, C- ಚೀನಾ ಮತ್ತು S- ದಕ್ಷಿಣ ಆಫ್ರಿಕ (ಸೌತ್ ಆಫ್ರಿಕಾ) ಸೇರಿಸಿದ ಹೆಸರು BRICS. ಮೊದಲು ಈ ಮೊದಲಕ್ಕರವನ್ನು ಗೋಲ್ಡ್ಮನ್ ಸ್ಯಾಕ್ಸ್ (ಒಂದು ಜಾಗತಿಕ ಹಣಕಾಸು ಕಾರ್ಪರೇಶನ್) 2001ರಲ್ಲಿ (ನಾಲ್ಕು ದೇಶಗಳನ್ನು ಒಳಗೊಂಡ ಬ್ರಿಕ್ ಆಗಿ) ಬಳಸಿತು. 2009ರಲ್ಲಿ ನಾಲ್ಕು ದೇಶಗಳ BRIC ಸಂಘಟನೆಯಾಗಿ ಆರಂಭಗೊಂಡ ಇದು 2010ರಲ್ಲಿ ದಕ್ಷಿಣ ಆಫ್ರಿಕವೂ ಸೇರಿದ ನಂತರ ಬ್ರಿಕ್ಸ್ ಆಯಿತು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಛತ್ರಪತಿ ಶಿವಾಜಿ ಮಹಾರಾಜ ಅಥವಾ ಶಿವಾಜಿರಾಜೆ ಶಹಾಜಿರಾಜೆ ಭೋಂಸ್ಲೆ (ಫೆಬ್ರುವರಿ ೧೯, ೧೬೩೦/ಫೆಬ್ರುವರಿ ೧೯, ೧೬೨೭ - ಏಪ್ರಿಲ್ ೩, ೧೬೮೦) ಹಿಂದೂ ಸ್ವರಾಜ್ಯದ ಸ್ಥಾಪಕರು.ಇವರು ೧೬೩೦ರಲ್ಲಿ ಮಹಾರಾಷ್ಟ್ರ ರಾಜ್ಯದ ಪುಣೆಯ ಹತ್ತಿರವಿರುವ ಶಿವನೇರಿಎಂಬಲ್ಲಿ ಜನಿಸಿದರು.ಇವರು ೧೬೭೪ ರಲ್ಲಿ ಸ್ಥಾಪಿಸಿದ ಮರಾಠಾ ರಾಜ್ಯವು ೧೮೧೮ರ ವರೆಗೂ ರಾರಾಜಿಸಿತು. ಸ್ವಾಭಿಮಾನಿ ರಾಷ್ಟ್ರನಿರ್ಮಾಣಕ್ಕೆ ಹೋರಾಡಿದ ಛತ್ರಪತಿ ಶಿವಾಜಿ ಮಹಾರಾಜರು ಹಿಂದೂಸ್ಥಾನವನ್ನು ಒಗ್ಗೂಡಿಸಲು ಬಹುವಾಗಿ ಶ್ರಮಿಸಿದರು.ಕೊಂಕಣ ಭಾಗದಲ್ಲಿದ್ದ ಅನೇಕ ಕೋಟೆಗಳನ್ನು ಗೆದ್ದು ಕ್ರಮೇಣ ಇಡೀ ಪಶ್ಚಿಮಭಾರತವನ್ನು ತಮ್ಮ ಆಳ್ವಿಕೆಗೆ ತಂದರು.ಶಿವಾಜಿಯ ಶೌರ್ಯ, ಸಾಹಸ ರಾಷ್ಟ್ರಭಕ್ತ ಆಡಳಿತಗಾರರಿಗೆ ಎಂದೆಂದಿಗೂ ಪ್ರೇರಣಾದಾಯಿ. ಛತ್ರಪತಿ ಶಿವಾಜಿ ಮಹಾರಾಜರ ಹೆಸರು ಭಾರತದ ಚರಿತ್ರೆಯಲ್ಲಿ ಅಗ್ರಪಂಕ್ತಿಯಲ್ಲಿ ನಿಲ್ಲುವಂತದ್ದು.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಕನ್ನಡಕ್ಕೆ ಐದನೆಯ ಜ್ಞಾನಪೀಠ ಪ್ರಶಸ್ತಿಯನ್ನು ೧೯೯೧ರಲ್ಲಿ ತಂದುಕೊಟ್ಟ ವಿನಾಯಕ ಕೃಷ್ಣ ಗೋಕಾಕರು ಕನ್ನಡದ ಪ್ರತಿಭಾವಂತ ಕವಿ, ಪಂಡಿತರಾಗಿದ್ದರು. ಕನ್ನಡ-ಇಂಗ್ಲೀಷ್ ಭಾಷೆಗಳಲ್ಲಿ ಸಮಾನ ಪ್ರಭುತ್ವ ಪಡೆದಿದ್ದ ಅವರು ತಮ್ಮ ಜೀವಿತ ಕಾಲದಲ್ಲೇ ಒಬ್ಬ ಪ್ರತಿಭಾವಂತ ಸಾಹಿತಿಗೆ ದೊರಕಬೇಕಾದ ಎಲ್ಲ ಸಿದ್ಧಿ, ಪ್ರಸಿದ್ಧಿಗಳನ್ನು ಪಡೆದರು. ಗೋಕಾಕರು ಇದಕ್ಕೂ ಮೊದಲು ಭಾರತೀಯ ಜ್ಞಾನಪೀಠ ಪ್ರಶಸ್ತಿ ಆಯ್ಕೆ ಸಮಿತಿಯ ಅಧ್ಯಕ್ಷರಾಗಿದ್ದರು.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಜಾರಿ ನಿರ್ದೇಶನಾಲಯ(Enforcement Directorate - ED) ಭಾರತ ಸರ್ಕಾರದ ಅವಿಭಾಜ್ಯ ಸಂಸ್ಥೆಯಾಗಿದ್ದು ಆರ್ಥಿಕ ಕಾನೂನುಗಳನ್ನು ಶಿಸ್ತು ಬದ್ಧವಾಗಿ ಜಾರಿಮಾಡುವ, ಹಾಗು ಅವು ಪಾಲನೆಯಲ್ಲಿರುವಂತೆ ನಿಗಾ ವಹಿಸುವ ಕರ್ತವ್ಯದಲ್ಲಿ ತೊಡಗಿಕೊಳ್ಳುತ್ತದೆ. ದೇಶದೊಳಗೆ ನಡೆಯುವ ಆರ್ಥಿಕ ಅಪರಾಧಗಳ ಮೇಲೂ ಕಣ್ಗಾವಲು ಇಡುವ ಅಧಿಕಾರ ಜಾರಿ ನಿರ್ದೇಶನಾಲಯಕ್ಕೆ ಇದ್ದು ಇದು ಭಾರತ ಸರ್ಕಾರದ ಹಣಕಾಸು ಸಚಿವಾಲಯದ ಆದಾಯ ವಿಭಾಗದ ಒಂದು ಪ್ರಮುಖ ಭಾಗವಾಗಿದೆ. ಭಾರತೀಯ ಆಡಳಿತಾತ್ಮಕ ಸೇವಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗು ಆದಾಯ ತೆರಿಗೆ ಅಧಿಕಾರಿಗಳನ್ನು ಈ ಸಂಸ್ಥೆ ಒಳಗೊಂಡಿರುತ್ತದೆ.
ಬಿಗ್ ಬಾಸ್ ಕನ್ನಡ (ಬಿಬಿಕೆ) ರಿಯಾಲಿಟಿ ಟಿವಿ ಶೋ ಬಿಗ್ ಬಾಸ್ ನ ಕನ್ನಡ ಆವೃತ್ತಿಯಾಗಿದೆ ಇದು ಕಲರ್ಸ್ ಕನ್ನಡ ಚಾನೆಲ್ ಮೂಲಕ ಭಾರತದಲ್ಲಿ ಪ್ರಸಾರವಾಗುತ್ತದೆ. ಬಿಗ್ ಬ್ರದರ್ ನ ಜಾಗತಿಕ ಸ್ವರೂಪವನ್ನು ಹೊಂದಿರುವ ಎಂಡೆಮೊಲ್ ಶೈನ್ ಇಂಡಿಯಾ ಮತ್ತು ಬನಿಜಯ್ ಗ್ರೂಪ್ ಈ ಕಾರ್ಯಕ್ರಮವನ್ನು ನಿರ್ಮಿಸಿದೆ. ಈಟಿವಿ ಕನ್ನಡದಲ್ಲಿ (ಈಗ ಕಲರ್ಸ್ ಕನ್ನಡ ) ಮೊದಲ ಸೀಸನ್ ರಿಯಾಲಿಟಿ ಶೋ ಅನ್ನು 2013 ರಲ್ಲಿ ಹೋಸ್ಟ್ ಮಾಡಲು ಕಿಚ್ಚ ಸುದೀಪ ಅವರನ್ನು ನೇಮಿಸಲಾಯಿತು.
ವಿಶ್ವ ಶಿಕ್ಷಕರ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ ೫ ರಂದು ಆಚರಿಸಲಾಗುತ್ತದೆ. ೧೯೯೪ ರಲ್ಲಿ ಸ್ಥಾಪನೆಯಾದ ಇದು ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ (ಐಎಲ್ಒ) ಮತ್ತು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೋ) ಶಿಫಾರಸುಗಳಿಗೆ ಸಹಿ ಹಾಕಿದ ನೆನಪಿಗಾಗಿ ಇದೆ. ೧೯೬೬ ರ "ಶಿಕ್ಷಕರ ಸ್ಥಿತಿಗೆ ಸಂಬಂಧಿಸಿದ ಐಎಲ್ಒ / ಯುನೆಸ್ಕೋ ಶಿಫಾರಸು" ವಿಶ್ವದಾದ್ಯಂತದ ಶಿಕ್ಷಕರ ಸ್ಥಿತಿ ಮತ್ತು ಪರಿಸ್ಥಿತಿಗಳನ್ನು ಪರಿಹರಿಸುವ ಪ್ರಮಾಣಿತ ಸಾಧನವಾಗಿದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ರಾಘವಾಂಕ :-ಕವಿಯು ಕ್ರಿ.ಶ.೧೨ನೆಯ ಶತಮಾನದ ಉತ್ತರಾರ್ಧದಲ್ಲಿ ಹಾಗೂ ೧೩ನೆಯ ಶತಮಾನದ ಪೂರ್ವಾರ್ಧದಲ್ಲಿ ಜೀವಿಸಿದ್ದ ಕವಿ.(ಷಟ್ಪದಿಯ ಬ್ರಹ್ಮ ಎಂದೇ ಪ್ರಸಿದ್ಧರಾಗಿದ್ದಾರೆ) ಈತನು ಹರಿಹರನ ಸೋದರಳಿಯ.ಹರಿಹರನೂ,ರಾಘವಾಂಕನೂ ಕನ್ನಡ ಸಾಹಿತ್ಯಚರಿತ್ರೆಯಲ್ಲಿ ನೂತನ ಯುಗಪ್ರವರ್ತಕರೆಂದು ಹೆಸರಾಗಿದ್ದಾರೆ.ಕನ್ನಡ ಸಾಹಿತ್ಯದಲ್ಲಿ ಷಟ್ಪದೀ ಪ್ರಕಾರವನ್ನು ಪ್ರವರ್ತನಗೊಳಿಸಿದ ಕೀರ್ತಿ ರಾಘವಾಂಕನಿಗೆ ಸಲ್ಲುತ್ತದೆ. ಕನ್ನಡದ ಅತ್ಯಂತ ಸ್ವತಂತ್ರ ಮನೋಧರ್ಮದ ಪ್ರಯೋಗಶೀಲನಾದ ಲಿಂಗಾಯತ ಧರ್ಮದ ಕವಿ. ಹರಿಶ್ಚಂದ್ರಕಾವ್ಯ ಎಂಬ ಕಾವ್ಯದ ಕರ್ತೃ.
ವಿಜಯನಗರ ಸಾಮ್ರಾಜ್ಯ:(ಕ್ರಿ.ಶ.೧೩೩೬ - ೧೬೪೬) ಕುಮಾರರಾಮ ೧೩ನೇ ಶತಮಾನದಲ್ಲಿ ಕಮ್ಮಟದುರ್ಗದ ಆಡಳಿತಕ್ಕೆ ನೆರವಾದವನು. ೧೩ನೇ ಶತಮಾನದಲ್ಲಿ ಕಂಪ್ಲಿ ರಾಜ್ಯದ (ಈ ಊರು ಬಳ್ಳಾರಿ ಜಿಲ್ಲೆಯಲ್ಲಿದೆ) ವೀರ ರಾಜಕುಮಾರನಾದ ಕುಮಾರರಾಮ (ಕ್ರಿ.ಶ ೧೨೯೦ - ೧೩೨೦) ತನ್ನ ಶೌರ್ಯ, ಪಿತೃಭಕ್ತಿ, ಶರಣಾಗತ ರಕ್ಷಣೆ ಎಂಬ ಉದಾತ್ತ ಗುಣಗಳನ್ನು ಪಾಲಿಸಿಕೊಂಡು ಬಂದು ಪರನಾರಿ ಸಹೋದರನೆಂಬ ಖ್ಯಾತಿಯನ್ನು ಹೊಂದಿದ್ದು ಕನ್ನಡಿಗರಲ್ಲಿ ಅಗ್ರಗಣ್ಯ. ಬಳ್ಳಾರಿ ಜಿಲ್ಲೆಯ ಹಂಪಿ, ಆನೆಗೊಂದಿ, ಕಂಪ್ಲಿ, ಹೊಸಪೇಟೆ ಈ ಭಾಗಗಳಲ್ಲಿ ಕುಮಾರರಾಮನ ಕಥೆ ಬಹು ಪ್ರಸಿದ್ದ.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಮಂತ್ರಿ ಒಂದು ರಾಷ್ಟ್ರೀಯ ಅಥವಾ ಪ್ರಾದೇಶಿಕ ಸರ್ಕಾರದಲ್ಲಿ ಸಾರ್ವಜನಿಕ ಪದವನ್ನು ಹೊಂದಿರುವ ಒಬ್ಬ ರಾಜಕಾರಣಿ. ಇವನು/ಇವಳು ಇತರ ಮಂತ್ರಿಗಳ ಸಂಯೋಗದೊಂದಿಗೆ ಸರ್ಕಾರದ ನೀತಿಗಳ ಮೇಲಿನ ನಿರ್ಣಯಗಳನ್ನು ಮಾಡುತ್ತಾನೆ ಮತ್ತು ಅವನ್ನು ಕಾರ್ಯಗತಗೊಳಿಸುತ್ತಾನೆ. ಕೆಲವು ಅಧಿಕಾರ ವ್ಯಾಪ್ತಿಗಳಲ್ಲಿ ಸರ್ಕಾರದ ಮುಖ್ಯಸ್ಥನೂ ಒಬ್ಬ ಮಂತ್ರಿಯಾಗಿರುತ್ತಾನೆ ಮತ್ತು ಇವನನ್ನು "ಪ್ರಧಾನ ಮಂತ್ರಿ", "ಮುಖ್ಯ ಮಂತ್ರಿ" ಅಥವಾ ಇತರ ಹೆಸರಿನಿಂದ ಕರೆಯಲಾಗುತ್ತದೆ.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಚಾರ್ಲ್ಸ್ ರಾಬರ್ಟ್ ಡಾರ್ವಿನ್ (ಫೆಬ್ರುವರಿ ೧೨ ೧೮೦೯ — ಏಪ್ರಿಲ್ ೧೯ ೧೮೮೨) ಇಂಗ್ಲೆಂಡ್ ದೇಶದ ಪ್ರಸಿದ್ಧ ಜೀವವಿಜ್ಞಾನಿ. ಈತನು ೧೮೫೮ರಲ್ಲಿ ಮಂಡಿಸಿದ ಜೀವ ವಿಕಾಸವಾದವು ಆಧುನಿಕ ಜೀವವಿಜ್ಞಾನದ ಬುನಾದಿಯಾಗಿದೆ. ಎಡಿನ್ಬ್ರೊ ಮತ್ತು ಕೇಂಬ್ರಿಡ್ಜ್ ವಿಶ್ವವಿದ್ಯಾಲಯಗಳಲ್ಲಿ ವ್ಯಾಸಂಗ ನಡಿಸಿದ ಇವರು ೧೮೩೧ರಿಂದ ೧೮೩೬ರ ಮಧ್ಯದಲ್ಲಿ ಎಚ್ ಎಮ್ ಎಸ್ ಬೀಗಲ್ ಹಡಗಿನಲ್ಲಿ ಭೂರಚನಶಾಸ್ತ್ರ ವಿಜ್ಞಾನಿಯಾಗಿ ಪ್ರವಾಸ ಕೈ ಗೊಂಡಾಗ ನಡೆಸಿದ ಸಂಶೊಧನೆಯಿಂದ ಮೊದಲು ಪ್ರಖ್ಯಾತರಾದರು.
ಕೃತಕ ಬುದ್ಧಿಮತ್ತೆ ಅಥವಾ ಯಾಂತ್ರಿಕ ಬುದ್ಧಿಮತ್ತೆ (artificial intelligence) ಗಣಕ ವಿಜ್ಞಾನದ ಒಂದು ವಿಭಾಗ. ಪ್ರಮುಖ AI ಪಠ್ಯಪುಸ್ತಕಗಳು ಈ ಕ್ಷೇತ್ರವನ್ನು "ಬುದ್ಧಿಮತ್ತೆಯುಳ್ಳ ಯಂತ್ರಗಳ ವಿನ್ಯಾಸ ಮತ್ತು ಅಧ್ಯಯನ" ಎಂದು ಹೇಳುತ್ತವೆ. ಇದರಲ್ಲಿ ಒಂದು ಯಂತ್ರವು ತನ್ನ ಪರಿಸರವನ್ನು ಗ್ರಹಿಸಿ ತನಗೆ ಕೊಟ್ಟಿರುವ ಗುರಿಯತ್ತ ಹೆಚ್ಚು ಯಶಸ್ಸು ಪಡೆಯಲು ಅಗತ್ಯವಿರುವ ಕ್ರಮಗಳನ್ನು ತಾವೇ ಕೈಗೊಳ್ಳುತ್ತದೆ.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
404 ಅಥವಾ Not Found (ಸಿಗಲಿಲ್ಲ) ದೋಷ ಸಂದೇಶವು ಒಂದು ಎಚ್ಟಿಟಿಪಿ (HTTP) ನಿರ್ದಿಷ್ಟ ಪ್ರತಿಕ್ರಿಯಾ ಸಂಕೇತ. ಇದರ ಪ್ರಕಾರ, ಯಾವುದೇ ಅಂತರಜಾಲ ಅಥವಾ ಅಂತರ್ಜಾಲದಲ್ಲಿ ಆನುಷಂಗಿಕ ಕಂಪ್ಯೂಟರ್(client)ನಿಂದ ಕೋರಿಕೆಯ ಸಂದೇಶವು ಮುಖ್ಯ ಕಂಪ್ಯೂಟರ್(server) ತಲುಪಿತಾದರೂ, ಮುಖ್ಯ ಕಂಪ್ಯೂಟರ್, ಬೇಕಾದ ಈ ಮಾಹಿತಿಯನ್ನು ಒದಗಿಸಲಾಗದು. '404 ದೋಷ' ಹಾಗೂ 'server not found (ಮುಖ್ಯ ಕಂಪ್ಯೂಟರ್ ಅಲಭ್ಯ)' ಅಥವಾ ಇದೇ ರೀತಿಯ ದೋಷಗಳೊಂದಿಗೆ ಗೊಂದಲ ಮಾಡಿಕೊಳ್ಳಬಾರದು.
ದ್ರವೀಕೃತ ಪೆಟ್ರೋಲಿಯಮ್ ಅನಿಲ(ಎಲ್ಪಿಜಿ),
ದ್ರವೀಕೃತ ಪೆಟ್ರೋಲಿಯಮ್ ಅನಿಲ(LPG, GPL, LP ಗ್ಯಾಸ್, ಅಥವಾ ಆಟೋಗ್ಯಾಸ್ ಎಂದೂ ಕರೆಯಲಾದ) [[ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ. ಈ ಅನಿಲವನ್ನು ಬಿಸಿ ಮಾಡುವ ಉಪಕರಣಗಳು ಹಾಗೂ ವಾಹನಗಳಲ್ಲಿ ಇಂಧನ ರೂಪದಲ್ಲಿ ಬಳಸಲಾಗುತ್ತಿದೆ. ಇದಲ್ಲದೆ, ಓಜೋನ್ ಪದರಕ್ಕೆ ಹಾನಿಯನ್ನು ಕಡಿಮೆಗೊಳಿಸುವ ಉದ್ದೇಶದಿಂದ, ಕ್ಲೋರೋಫ್ಲೋರೋಕಾರ್ಬನ್ಗಳ ಬದಲಿಗೆ, ವಾಯುದ್ರವ ನೋದಕ (ಏರೋಸಾಲ್ ಪ್ರೊಪೆಲ್ಲಂಟ್) ಹಾಗೂ ಶೀತಕ|ಸುಲಭವಾಗಿ ಉರಿಯಬಲ್ಲ ಹೈಡ್ರೋಕಾರ್ಬನ್ ಅನಿಲಗಳ ಮಿಶ್ರಣ.
ಕೇಶಿರಾಜ:~ಕನ್ನಡದಲ್ಲಿಯೇ ರಚನೆಗೊಂಡಿರುವ ಸ್ವತಂತ್ರ ಕನ್ನಡ ವ್ಯಾಕರಣ (ಉಪಲಬ್ಧ) ಗ್ರಂಥಗಳಲ್ಲಿ ಶಬ್ದಮಣಿದರ್ಪಣವು ಮೊಟ್ಟ ಮೊದಲನೆಯದು. ಕೇಶಿರಾಜ ೨ನೇ ನಾಗವರ್ಮನ ಕೃತಿಗಳಾದ "ಕಾವ್ಯಾವಲೋಕನ"(ಶಬ್ದ ಸ್ಮೃತಿ) ಗ್ರಂಥಗಳ ಸೂತ್ರ, ವೃತ್ತಿ, ಹಾಗೂ ಪ್ರಯೋಗಗಳನ್ನು ಆಧರಿಸಿದ್ದಾನೆಂದು ವ್ಯಾಕರಣರು ಅಭಿಪ್ರಾಯಪಟ್ಟಿದ್ದಾರೆ. ಪ್ರಧಾನವಾಗಿ ಇದು ವಿಧಾತ್ಮಕ ಅಥವಾ ಆದರ್ಶ ರೀತಿಯ ವ್ಯಾಕರಣ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಹುಚ್ಚ 2001 ರ ಭಾರತೀಯ ಕನ್ನಡ ಭಾಷೆಯ ರೋಮ್ಯಾಂಟಿಕ್ ಆಕ್ಷನ್ ಡ್ರಾಮಾ ಚಿತ್ರವಾಗಿದ್ದು, ಇದನ್ನು ಓಂ ಪ್ರಕಾಶ್ ರಾವ್ ನಿರ್ದೇಶಿಸಿದ್ದಾರೆ, ಇದರಲ್ಲಿ ಸುದೀಪ್ ಮತ್ತು ರೇಖಾ ವೇದವ್ಯಾಸ್ ನಟಿಸಿದ್ದಾರೆ. ಈ ಚಿತ್ರವು 1999 ರ ತಮಿಳು ಚಲನಚಿತ್ರ ಸೇತುವಿನ ರಿಮೇಕ್ ಆಗಿದ್ದು, ಸಕಾರಾತ್ಮಕ ವಿಮರ್ಶೆಗಳೊಂದಿಗೆ ಬಿಡುಗಡೆಯಾಯಿತು ಮತ್ತು ಸುದೀಪ್ಗೆ ಸಾಕಷ್ಟು ಖ್ಯಾತಿಯನ್ನು ತಂದುಕೊಟ್ಟಿತು. ಈ ಹಿಂದೆ ಉಪೇಂದ್ರ ಮತ್ತು ಶಿವ ರಾಜ್ಕುಮಾರ್ ಸ್ಕ್ರಿಪ್ಟ್ ಅನ್ನು ತಿರಸ್ಕರಿಸಿದ್ದರು.
ಅಶೋಕ್ ಮಹಾರುದ್ರಪ್ಪ ಖೇನ್ಯ್ ಕರ್ನಾಟಕದ ಬೀದರ್ ದಕ್ಷಿಣದ ಶಾಸಕರಾಗಿದ್ದಾರೆ ಮತ್ತು ನಂದಿ ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್ ಎಂಟರ್ಪ್ರೈಸಸ್ (ನೈಸ್) ವ್ಯವಸ್ಥಾಪಕ ನಿರ್ದೇಶಕರಾಗಿದ್ದಾರೆ, ಇದು ಬೆಂಗಳೂರು-ಮೈಸೂರು ಇನ್ಫ್ರಾಸ್ಟ್ರಕ್ಚರ್ ಕಾರಿಡಾರ್(ಬಿಎಂಐಸಿ) ಯೋಜನೆಯ ನಿರ್ಮಾಣಕ್ಕೆ ಹೆಸರುವಾಸಿಯಾಗಿದೆ. ಅವರು ಇಂಡಿಯಾ ಇಂಟರ್ನ್ಯಾಷನಲ್ ಇನ್ಫ್ರಾಸ್ಟ್ರಕ್ಚರ್ ಇಂಜಿನಿಯರ್ಸ್ ಸೀಮಿತ ನಿರ್ದೇಶಕರಾಗಿದ್ದಾರೆ.
ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ಗೋಲು ಗಳಿಸಲು ಕಾಲಿನಿಂದ ಚೆಂಡನ್ನು ಒದೆಯುವುದು, ವಿವಿಧ ಡಿಗ್ರಿಗಳಿಗೆ ಒಳಗೊಂಡ ಕ್ರೀಡಾ ಒಂದು ಸಂಖ್ಯೆಯನ್ನು ಸೂಚಿಸುತ್ತದೆ. ಈ ಕ್ರೀಡಾ ಜಗತ್ತಿನಾದ್ಯಂತ ಅತ್ಯಂತ ಜನಪ್ರಿಯವಾಗಿದೆ ಸಾಮಾನ್ಯವಾಗಿ "ಫುಟ್ಬಾಲ್" ಅಥವಾ "ಸಾಕ್ಕರ್" ಎಂದು ಕರೆಯಲಾಗುತ್ತದೆ ಅಸೋಸಿಯೇಶನ್ ಫುಟ್ಬಾಲ್,. ಅನರ್ಹ, ಫುಟ್ಬಾಲ್ ಪದವು ಫುಟ್ಬಾಲ್ನ ಯಾವುದೇ ಪ್ರಕಾರಕ್ಕೆ ಅನ್ವಯಿಸುತ್ತದೆ ಪದ ಅಸೋಸಿಯೇಷನ್ ಫುಟ್ಬಾಲ್, ಹಾಗೆಯೇ ಅಮೆರಿಕನ್ ಫುಟ್ಬಾಲ್, ಆಸ್ಟ್ರೇಲಿಯನ್ ನಿಯಮಗಳ ಫುಟ್ಬಾಲ್, ಕೆನಡಿಯನ್ ಫುಟ್ಬಾಲ್, ಗೇಲಿಕ್ ಫುಟ್ಬಾಲ್, ರಗ್ಬಿ ಲೀಗ್, ರಗ್ಬಿ ಒಕ್ಕೂಟ ಸೇರಿದಂತೆ ಕಾಣಿಸಿಕೊಳ್ಳುವ ಪ್ರಾದೇಶಿಕ ಸನ್ನಿವೇಶದಲ್ಲಿ ಅತ್ಯಂತ ಜನಪ್ರಿಯ, ಮತ್ತು ಇತರ ಸಂಬಂಧಿತ ಆಟಗಳು.