The most-visited English Wikipedia articles, updated daily. Learn more...
೧೯೪೭ ಆಗಸ್ಟ್ ೧೫ರಂದು ಭಾರತ ಸ್ವತಂತ್ರವಾಯಿತು. ಆದರೆ ಆಗ ಭಾರತದೊಡನೆ ವಿಲೀನವಾಗಲು ಬಯಸಿದ ತನ್ನ ಸಂಸ್ಥಾನದ ಬಹುಜನರ ಅಭಿಪ್ರಾಯವನ್ನು ವಿರೋಧಿಸಿದ ಹೈದರಾಬಾದಿನ ನಿಜಾಮ ಮೀರ್ ಉಸ್ಮಾನ್ ಅಲಿ, "ಡೆಕ್ಕನ್ ರೇಡಿಯೋ" (ಅಥವಾ "ನಿಜಾಮ್ ರೇಡಿಯೋ") ಮೂಲಕ ಹೈದರಾಬಾದ ಸಂಸ್ಥಾನವನ್ನು ಸ್ವತಂತ್ರ ರಾಷ್ಟ್ರವೆಂದು ಘೋಷಿಸಿದ. ನಿರೀಕ್ಷೆಯಂತೆ ಪಾಕಿಸ್ತಾನವು ಹೈದರಾಬಾದ ಸ್ವತಂತ್ರ ರಾಷ್ಟ್ರವೆಂದು ಮಾನ್ಯ ಮಾಡಿದ ಮೊದಲ ದೇಶವಾಯಿತು.
ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ - ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರವು ನೀಡುವ, ವಾರ್ಷಿಕ ಪ್ರಶಸ್ತಿ. ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದ ದಾದಾಸಾಹೇಬ್ ಫಾಲ್ಕೆ, '(ದುಂಡಿರಾಜ್ ಗೋವಿಂದ ಫಾಲ್ಕೆ)' ಯವರ, 'ಜನ್ಮ ಶತಾಬ್ದಿಯ ವರ್ಷ'ವಾದ ೧೯೬೯ರಲ್ಲಿ ಈ ಪ್ರಶಸ್ತಿಯನ್ನು ನೀಡುವ ಪರಂಪರೆ, ಉಗಮಗೊಂಡಿತು. 'ಪ್ರತಿ ವರ್ಷದ ಪ್ರಶಸ್ತಿ'ಯನ್ನು ಅದರ ಮುಂದಿನ ವರ್ಷದ ಕೊನೆಯಲ್ಲಿ ನಡೆಯುವ 'ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನದ ಸಂದರ್ಭ'ದಲ್ಲಿ ನೀಡಲಾಗುತ್ತದೆ.
ವನಸ್ಪತಿ ಯು ಸಾಂಪ್ರದಾಯಿಕ ಅಥವಾ ಜಾನಪದ ಔಷಧ ಪ್ರಕಾರವಾಗಿದ್ದು, ಇದು ಸಸ್ಯ ಮತ್ತು ಸಸ್ಯಜನ್ಯ ಸಾರ, ಸತ್ವಗಳ ಬಳಕೆಯನ್ನವಲಂಭಿಸಿದೆ. ಈ ವನಸ್ಪತಿಯು ಸಸ್ಯಗಳ ಔಷಧಿ, ಔಷಧೀಯ ವನಸ್ಪತಿ, ಗಿಡಮೂಲಿಕೆಗಳ ಔಷಧಿ, ಮೂಲಿಕಾಶಾಸ್ತ್ರ ಮತ್ತು ಮೂಲಿಕಾ ಚಿಕಿತ್ಸೆ ಎಂಬ ಹೆಸರುಗಳಿಂದಲೂ ಕರೆಯಲ್ಪಡುತ್ತದೆ. ಗಿಡಮೂಲಿಕೆಗಳ ಔಷಧಿಯ ವ್ಯಾಪ್ತಿಯು ಕೆಲವೊಮ್ಮೆ ಶಿಲೀಂಧ್ರಗಳು ಮತ್ತು ಜೇನುಹುಳುಗಳ ಉತ್ಪನ್ನಗಳಿಗೂ ಹರಡಿದ್ದು, ಖನಿಜಾಂಶಗಳು, ಚಿಪ್ಪುಗಳು ಹಾಗೂ ಕೆಲವು ಪ್ರಾಣಿಗಳ ದೇಹದ ಭಾಗಗಳನ್ನೂ ಒಳಗೊಂಡಿರುತ್ತವೆ.
ವಿಶ್ವಕರ್ಮನು (ಸಂಸ್ಕೃತದಲ್ಲಿ ಈ ಶಬ್ದದ ಅರ್ಥ - ಎಲ್ಲವನ್ನು ಸಾಧಿಸುವವನು, ಎಲ್ಲದರ ಕರ್ತೃ, ಎಲ್ಲವನ್ನು ಮಾಡುವವನು) ಸೃಷ್ಟಿಯ ವ್ಯಕ್ತೀಕರಣ ಮತ್ತು ಋಗ್ವೇದದ ಪ್ರಕಾರ ಸೃಷ್ಟಿ ದೇವತೆಯ ಅಮೂರ್ತ ರೂಪ. ಇವನು ವಿಶ್ವಕರ್ಮ ಜಾತಿಯವರ, ಅಭಿಯಂತರರ, ಕುಶಲಕರ್ಮಿಗಳ ಮತ್ತು ವಾಸ್ತುಶಿಲ್ಪಿಗಳ ಪ್ರಧಾನ ದೇವತೆಯಾಗಿದ್ದಾನೆ. ಇವನು "ಬ್ರಹ್ಮಾಂಡದ ಪ್ರಧಾನ ವಾಸ್ತುಶಿಲ್ಪಿ" ಮತ್ತು ಬ್ರಹ್ಮನ್ ಹಾಗೂ ಪುರುಷರ ಮೂಲ ಪರಿಕಲ್ಪನೆ ಎಂದು ನಂಬಲಾಗಿದೆ.
ದ್ರಾವಿಡ ಭಾಷೆಗಳಲ್ಲಿ ಪ್ರಾಮುಖ್ಯವುಳ್ಳ ಭಾಷೆಯೂ ಭಾರತದ ಪುರಾತನವಾದ ಭಾಷೆಗಳಲ್ಲಿ ಒಂದೂ ಆಗಿರುವ ಕನ್ನಡ ಭಾಷೆಯನ್ನು ಅದರ ವಿವಿಧ ರೂಪಗಳಲ್ಲಿ ಸುಮಾರು ೪೫ ದಶಲಕ್ಷ (೪.೫ ಕೋಟಿ) ಜನರು ಆಡು ನುಡಿಯಾಗಿ ಬಳಸುತ್ತಲಿದ್ದಾರೆ. ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆ. ಜಗತ್ತಿನಲ್ಲಿ ಅತ್ಯಂತ ಹೆಚ್ಚು ಮಂದಿ ಮಾತನಾಡುವ ಭಾಷೆಯೆಂಬ ನೆಲೆಯಲ್ಲಿ ಇಪ್ಪತೊಂಬತ್ತನೆಯ ಸ್ಥಾನ ಕನ್ನಡಕ್ಕಿದೆ.
ಹೈದರಾಬಾದ್ ಸಂಸ್ಥಾನ ( ) ಒಂದು ಸ್ವತಂತ್ರ ರಾಜಪ್ರಭುತ್ವ / ರಾಜಕ ಸಂಸ್ಥಾನ/ ದೇಶ ಭಾರತ ಉಪಖಂಡದ ದಕ್ಷಿಣ-ಮಧ್ಯ ದಕ್ಖಿನ ಪ್ರದೇಶದಲ್ಲಿ ಹೈದರಾಬಾದ್ ನಗರದಲ್ಲಿ ಅದರ ರಾಜಧಾನಿಯನ್ನು ಹೊಂದಿದೆ. ಇದನ್ನು ಈಗ ಇಂದಿನ ತೆಲಂಗಾಣ ರಾಜ್ಯ, ಕರ್ನಾಟಕದ ಕಲ್ಯಾಣ-ಕರ್ನಾಟಕ ಪ್ರದೇಶ ಮತ್ತು ಭಾರತದಲ್ಲಿ ಮಹಾರಾಷ್ಟ್ರದ ಮರಾಠವಾಡ ಪ್ರದೇಶ ಎಂದು ವಿಂಗಡಿಸಲಾಗಿದೆ. ಈ ರಾಜ್ಯವನ್ನು 1724 ರಿಂದ 1857 ರವರೆಗೆ ನಿಜಾಮನು ಆಳಿದನು, ಅವನು ಆರಂಭದಲ್ಲಿ ದಕ್ಖನಿನಲ್ಲಿ ಮೊಘಲ್ ಸಾಮ್ರಾಜ್ಯದ ಉಪರಾಯ ಆಗಿದ್ದನು.
ಅಂತರರಾಷ್ಟ್ರೀಯ ಓಝೋನ್ ಪದರ ಸಂರಕ್ಷಣಾ ದಿನ
ಅಂತರರಾಷ್ಟ್ರೀಯ ಓಝೋನ್ ಪದರ ಸಂರಕ್ಷಣಾ ದಿನವನ್ನು (ಅನೌಪಚಾರಿಕವಾಗಿ ಮತ್ತು ಸರಳವಾಗಿ ಓಝೋನ್ ದಿನ ಎಂದು ಕರೆಯಲಾಗುತ್ತದೆ) ಸೆಪ್ಟೆಂಬರ್ 16 ರಂದು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯಿಂದ ನಿಗದಿಪಡಿಸಲಾಗಿದೆ. ಇದರ ಪ್ರಸ್ತಾಪವನ್ನು ಡಿಸೆಂಬರ್ 19, 2000 ರಂದು ಮಾಡಲಾಯಿತು(1987 ರಲ್ಲಿ ಹಲವು ರಾಷ್ಟ್ರಗಳು ಓಝೋನ್ ಪದರವನ್ನು ಸವಕಳಿಗೊಳಿಸುವ ವಸ್ತುಗಳ ಕುರಿತು ಮಾಂಟ್ರಿಯಲ್ ಪ್ರೋಟೋಕಾಲ್ಗೆ ಸಹಿ ಹಾಕಿದ ದಿನಾಂಕದ ನೆನಪಿಗಾಗಿ). 1994 ರಲ್ಲಿ, UN ಜನರಲ್ ಅಸೆಂಬ್ಲಿ ಸೆಪ್ಟೆಂಬರ್ 16 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ದಿನವನ್ನು ಘೋಷಿಸಿತು, 1987 ರಲ್ಲಿ ಓಝೋನ್ ಪದರವನ್ನು ಸವಕಳಿ ಮಾಡುವ ವಸ್ತುಗಳ ಕುರಿತ ಮಾಂಟ್ರಿಯಲ್ ಪ್ರೋಟೋಕಾಲ್ಗೆಸಹಿ ಮಾಡಿದ ದಿನಾಂಕವನ್ನು ನೆನಪಿಸುತ್ತದೆ.
(ಜನನ: ೩೦ ಏಪ್ರಿಲ್ ೧೮೯೦-ಮರಣ: ೧೬ ಫೆಬ್ರುವರಿ ೧೯೪೪) ದಾದಾ ಸಾಹೇಬ್ ಫಾಲ್ಕೆ ಯೆಂದು ಪ್ರಸಿದ್ಧರಾದ, 'ದುಂಡಿರಾಜ್ ಗೋವಿಂದ ಫಾಲ್ಕೆ'ಯವರು, ಭಾರತೀಯ ಚಿತ್ರರಂಗದ ಪಿತಾಮಹರೆಂದೇ ಹೆಸರಾದವರು. ಅವರು ಗತಿಸಿ ೧೨ ದಶಕಗಳಾದರೂ, ಮಹಾರಾಷ್ಟ್ರದ ಹಾಗೂ ಭಾರತದ ಬೆಳ್ಳಿ-ತೆರೆಯ ಇತಿಹಾಸದಲ್ಲಿ, ಎಂದೆಂದಿಗೂ ಮರೆಯಲಾರದ ವ್ಯಕ್ತಿಯಾಗಿ, ವಿಜೃಂಭಿಸುತ್ತಿದ್ದಾರೆ. ಭಾರತದಲ್ಲಿ ಚಲನಚಿತ್ರ ಲೋಕವನ್ನು ಸೃಷ್ಟಿಸಿದ ಅವರ ಮನೆಯಲ್ಲಿ ಇಟ್ಟ ಹೆಸರು, 'ಧುಂಡಿರಾಜ್ ಗೋವಿಂದ ಫಾಲ್ಕೆ'ಯೆಂದು.
ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡಿಗರು
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ.ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ 22 ಭಾಷೆಗಳಿಗೆ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಜ್ಞಾನಪೀಠ ಪ್ರಶಸ್ತಿ ಪಡೆದ ಕನ್ನಡ ಸಾಹಿತಿಗಳ ಪಟ್ಟಿ ಹೀಗಿದೆ.
ಬಸವಣ್ಣ ಬಸವಣ್ಣ ಜನಿಸಿದ್ದು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿಯಲ್ಲಿ ತಂದೆ=ಮಾದರಸ,ತಾಯಿ=ಮಾದಲಂಬಿಕೆ (ಬಸವ,ಬಸವೇಶ್ವರ ) ಭಾರತದ ೧೨ ನೇ ಶತಮಾನದ ಕನ್ನಡದ ಒಬ್ಬ ತತ್ವಜ್ಞಾನಿ,ಕಲಚೂರಿ ಅರಸನ ಬಿಜ್ಜಳ ಆಸ್ಥಾನದಲ್ಲಿ ಮಂತ್ರಿಯಾಗಿದ್ದರು ಮತ್ತು ಸಾಮಾಜಿಕ ಸುಧಾರಕರಾಗಿದ್ದರು. ಶಿವ ಕೇಂದ್ರೀಕೃತ ಭಕ್ತಿ ಚಳುವಳಿಯಲ್ಲಿ ಕನ್ನಡ ಕವಿಯಾಗಿದ್ದರು. ಬಸವಣ್ಣ ವಚನಗಳ ಮೂಲಕ ಸಾಮಾಜಿಕ ಅರಿವು ಹರಡಿದರು, ಬಸವಣ್ಣರು ಲಿಂಗ ತಾರತಮ್ಯ, ಸಾಮಾಜಿಕ ತಾರತಮ್ಯ, ಮೂಢನಂಬಿಕೆಗಳನ್ನು ನಿರಾಕರಿಸಿದರು.ಇಷ್ಟಲಿಂಗ ಹಾರವನ್ನು ಪರಿಚಯಿಸಿದರು (ಶಿವ ಲಿಂಗ) ಶಿವನ ಒಂದು ಭಕ್ತಿ ಒಂದು ನಿರಂತರ ಜ್ಞಾಪನೆ ಎಂದು.
ಅಶೋಕನ ಬ್ರಾಹ್ಮೀ ಲಿಪಿ ಉತ್ತರಕ್ಕೆ ಕಾಲಸಿ ಮತ್ತು ಭಾರತ-ನೇಪಾಲ ಗಡಿಯಲ್ಲಿರುವ ರುಮ್ಮಿಂದೈಯಿಂದ ದಕ್ಷಿಣಕ್ಕೆ ಮೈಸೂರುವರೆಗೂ ಪೂರ್ವಕ್ಕೆ ಒರಿಸ್ಸದಿಂದ ಪಶ್ಚಿಮಕ್ಕೆ ಜುನಾಗಢ ಮತ್ತು ಮುಂಬಯಿವರೆಗೂ ದೊರೆತ ಅಶೋಕ ಸಾಮ್ರಾಟನ ಧರ್ಮಶಾಸನಗಳಲ್ಲಿ ಕಂಡುಬರುತ್ತದೆ. ಈ ಲಿಪಿಯು ಅಶೋಕನ ಕಾಲದಲ್ಲಿ ಪ್ರಚಲಿತವಿದ್ದ ಪಾಕೃತ ಬಾಷೆಯಾಗಿ ಉಪಯೋಗಿಸಲ್ಪಟ್ಟಿದೆ. ಆ ಕಾಲಕ್ಕಾಗಲೇ ಅದು ಪರಿಪುರ್ಣತೆಯನ್ನು ಪಡೆದಿದ್ದು ಪ್ರಾಕೃತ ಭಾಷೆಯ ಪ್ರತಿಯೊಂದು ಶಬ್ದ ಅಥವಾ ಧ್ವನಿಗೆ ಪ್ರತ್ಯೇಕವಾದ ಅಕ್ಷರ ಅಥವಾ ಸಂಜ್ಞೆಯನ್ನು ಅದರಲ್ಲಿ ಕಲ್ಪಿಸಲಾಗಿದೆ.
ಓಝೋನ್ ಪದರ ಸೂರ್ಯನಿಂದ ಹೊರಸೂಸುವ ನೇರಳಾತೀತ ವಿಕಿರಣಗಳನ್ನು ಹೀರಿಕೊಳ್ಳುವ ಭೂಮಿಯ ವಾಯುಮಂಡಲದಲ್ಲಿ ಒಂದು ಪ್ರದೇಶವಾಗಿರುತ್ತದೆ. ಇದು ವಾಯುಮಂಡಲದಲ್ಲಿ ಓಝೋನ್ O3 ನ ಅನಿಲದ ಅಧಿಕ ಸಾಂದ್ರತೆಯನ್ನು ಹೊಂದಿದೆ. ಭೂಮಿಯ ಮೇಲೆ ಸುಮಾರು ೧೦ ಕಿ.ಮೀ ನಿಂದ ೪೦ ಕಿ.ಮೀ.ರ ವರೆಗೆ ವ್ಯಾಪಿಸಲ್ಪಟ್ಟಿರುವ ಈ ಪ್ರದೇಶವು ಸೂರ್ಯನಿಂದ ಬಿಡುಗಡೆಯಾಗುವ ನೇರಳಾತೀತ ವಿಕಿರಣಗಳನ್ನು ಹೀರಿಕೊಂಡು ಭೂಮಿಗೆ ಅವುಗಳು ತಲಪುವುದನ್ನು ತಡೆಗಟ್ಟುತ್ತವೆ.
ಮೋಹನ್ದಾಸ್ ಕರಮ್ ಚಂದ್ ಗಾಂಧಿಯವರು (ಗುಜರಾತಿ: મોહનદાસ કરમચંદ ગાંધી, [moːɦənˈdaːs kəɾəmˈtʂənd ˈɡaːndʱiː] ( listen) ಎಂದು ಉಚ್ಚರಿತ; ೨ನೇಯ ಅಕ್ಟೋಬರ್ ೧೮೬೯ – ೩೦ನೇಯ ಜನವರಿ ೧೯೪೮) ಭಾರತೀಯ ಸ್ವಾತಂತ್ರ್ಯ ಆಂದೋಲನದ ಕಾಲದಲ್ಲಿ ಭಾರತದ ಸರ್ವೋತ್ಕೃಷ್ಟ ರಾಜಕೀಯ ಹಾಗೂ ಅಧ್ಯಾತ್ಮಿಕ ನಾಯಕರಾಗಿದ್ದರು. ಅವರಿಗೆ ಮಹಾತ್ಮ ಎಂಬ ಬಿರುದು ಇತ್ತು ಅಲ್ಲದೇ ಭಾರತೀಯ ಜನರು ಅವರನ್ನು ಬಾಪೂಜೀ ಎಂದು ಸಂಭೋಧಿಸುತ್ತಿದ್ದರು.
ಕಸ್ತೂರಿರಂಗನ್ ವರದಿ ಮತ್ತು ಪಶ್ಚಿಮ ಘಟ್ಟ ಸಂರಕ್ಷಣೆ
"ನಾವು ಈಗಾಗಲೇ ಭೂಮಿಯ ಸಂಪನ್ಮೂಲಗಳಲ್ಲಿ ಅಗತ್ಯಕ್ಕಿಂತ 2 ರಿಂದ 3 ಪಟ್ಟು ಹೆಚ್ಚಿನ ಸಂಪನ್ಮೂಲಗಳನ್ನು ಬಳಸುತ್ತಿದ್ದೇವೆ. "ಭೂಮಿಯ ಪ್ರತಿ ವ್ಯಕ್ತಿಯ ಅಗತ್ಯಗಳನ್ನು ಪೂರೈಸಲು ಸಾಕಷ್ಟು ಒದಗಿಸುತ್ತದೆ, ಆದರೆ ಪ್ರತಿ ಮಾನವನ ದುರಾಸೆಯನ್ನಲ್ಲ " - ಎಂದು ಹೇಳಲಾಗುತ್ತದೆ (ಗಾಂಧೀಜಿ). ಈಗ ಮಾನವನ ಬದುಕಿಗೆ ಪರಿಸರ ರಕ್ಷಣೆಗೆ ಅತಿ ಸೂಕ್ಷ್ಮ ಪ್ರದೇಶವಾದ ಭಾರತದ ಪಶ್ಚಿಮ ಘಟ್ಟಗಳ ಪರಿಸರ ರಕ್ಷಣೆ ಅತಿ ಅಗತ್ಯ ಎಂಬುದ ಪರಿಸರ ತಜ್ಞರ ಅಭಿಪ್ರಾಯ.
ಸಂಭೋಗ ಭಂಗಿ ಎಂದರೆ ಜನರು ಲೈಂಗಿಕ ಸಂಭೋಗ ಅಥವಾ ಇತರ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಬಳಸುವ ದೇಹದ ಭಂಗಿ. ಲೈಂಗಿಕ ಕ್ರಿಯೆಗಳನ್ನು ಅದರಲ್ಲಿ ಭಾಗವಹಿಸುವವರು ಆ ಕ್ರಿಯೆಗಳನ್ನು ಕೈಗೊಳ್ಳಲಿಕ್ಕೆ ಅನುಸರಿಸುವ ಭಂಗಿಗಳಿಂದ ವಿವರಿಸಲಾಗುತ್ತದೆ. ಲೈಂಗಿಕ ಸಂಭೋಗ ಎಂಬುದು ಸಾಮಾನ್ಯವಾಗಿ ಒಬ್ಬ ವ್ಯಕ್ತಿಯ ದೇಹಕ್ಕೆ ಇನ್ನೊಬ್ಬರು ತಮ್ಮ ಲೈಂಗಿಕ ಅವಯವವನ್ನು ತುರುಕಿಸುವುದೇ ಆಗಿದ್ದರೂ, ಲೈಂಗಿಕ ಅವಯವವನ್ನು ತುರುಕಿಸದೆ ಮಾಡುವ ಲೈಂಗಿಕ ಭಂಗಿಳು ಸಹ ಪ್ರಚಾರದಲ್ಲಿವೆ.
ಕರ್ನಾಟಕ : ರಾಜ್ಯವು (ಪೂರ್ವದಲ್ಲಿ ಮೈಸೂರು ರಾಜ್ಯ) ಭಾರತದಲ್ಲಿನ ರಾಜ್ಯವೊಂದು. ಕರ್ನಾಟಕವು ಭಾರತದ ಐದು ಪ್ರಮುಖ ದಕ್ಷಿಣಾತ್ಯ ರಾಜ್ಯಗಳಲ್ಲಿ ಅತಿ ದೊಡ್ಡ ರಾಜ್ಯವು ಹಾಗೂ ದೇಶದ ಆರನೆಯ ದೊಡ್ಡ ರಾಜ್ಯವು ಆಗಿದೆ. ಪಶ್ಚಿಮದಲ್ಲಿ ಅರಬ್ಬೀ ಸಮುದ್ರದಿಂದ, ವಾಯವ್ಯದಲ್ಲಿ ಗೋವದಿಂದ, ಉತ್ತರದಲ್ಲಿ ಮಹಾರಾಷ್ಟ್ರದಿಂದ, ಪೂರ್ವದಲ್ಲಿ ತೆಲಂಗಾಣ ಮತ್ತು ಆಂಧ್ರ ಪ್ರದೇಶದಿಂದ, ಆಗ್ನೇಯದಲ್ಲಿ ತಮಿಳುನಾಡಿ ನಿಂದ, ನೈಋತ್ಯದಲ್ಲಿ ಕೇರಳದಿಂದ ಸುತ್ತುವರಿಯಲ್ಪಟ್ಟಿದೆ.
ಡಾ. ಚಂದ್ರಶೇಖರ ಕಂಬಾರ ಕಥೆಗಾರ, ಕವಿ, ಕಾದಂಬರಿಕಾರ, ನಾಟಕಕಾರ, ಬೆಂಗಳೂರು ವಿಶ್ವವಿದ್ಯಾಲಯದ ಅಧ್ಯಾಪಕರು, ಕರ್ನಾಟಕ ಜನಪದ ಅಕಾಡೆಮಿಯ ಅಧ್ಯಕ್ಷರು, ನವದೆಹಲಿಯ ರಾಷ್ಟ್ರೀಯ ನಾಟಕ ಶಾಲೆಯ ನಿರ್ದೇಶಕರು, ಹಂಪಿ ಕನ್ನಡ ವಿವಿಯ ಮೊದಲ ಕುಲಪತಿಯಾಗಿ ಡಾ.ಚಂದ್ರಶೇಖರ ಕಂಬಾರ ಅವರು ಕಾರ್ಯನಿರ್ವಹಿಸಿದ್ದಾರೆ. ೧೯೬೮-೬೯ ಚಿಕಾಗೊ ವಿಶ್ವವಿದ್ಯಾನಿಲಯದಲ್ಲಿ ಕನ್ನಡ ಅಧ್ಯಾಪಕರಾಗಿ ಸೇವೆ ಸಲ್ಲಿಸಿದ್ದಾರೆ.
ಮೂಲಭೂತ ಹಕ್ಕುಗಳು ವ್ಯಕ್ತಿಗಳ, ಬೌದ್ಧಿಕ, ನೈತಿಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಅಗತ್ಯವಾದ ಹಕ್ಕುಗಳು. ಈ ಹಕ್ಕುಗಳು ವ್ಯಕ್ತಿಗಳ ಅಸ್ತಿತ್ವ ಮತ್ತು ಸರ್ವಾಂಗಿಣ ಅಭಿವೃದ್ಧಿಗೆ ಮೂಲಭೂತ ಅಥವಾ ಅವಶ್ಯಕವಾದ ಕಾರಣ, ನವದೀಪ್ ಚೌದರಿ ಅವರ ಪ್ರಕಾರ ಇದನ್ನು 'ಮೂಲಭೂತ ಹಕ್ಕು'ಗಳು ಎಂದು ಕರೆಯಲಾಗುತ್ತದೆ. ಇವುಗಳನ್ನು ಭಾರತದ ಸಂವಿಧಾನದ ಭಾಗ |||(3)(ಲೇಖನಗಳು 12 ರಿಂದ 35) ರಲ್ಲಿ ಪ್ರತಿಪಾದಿಸಲಾಗಿದೆ ಸಂವಿಧಾನದಲ್ಲಿ ೬(6) ಮೂಲಭೂತ ಹಕ್ಕುಗಳಿವೆ.
ಓಝೋನ್ ಪದರು ಸವಕಳಿ(ಸಾಮರ್ಥ್ಯ ಕುಂದು)
ಓಝೋನ್ ಸವಕಳಿ ಯು ಎರಡು ಪ್ರತ್ಯೇಕ ಆದರೆ ಪರಸ್ಪರ ಸಂಬಂಧವಿರುವ ಹೇಳಿಕೆಗಳನ್ನು ವಿವರಿಸುತ್ತದೆ: ಓಝೋನ್ ಈ ಪೃಥ್ವಿಯ ಸಂರಕ್ಷಣಾ ಕವಚ. ವಿಷಾದದ ಸಂಗತಿಯೆಂದ್ರೆ ಇದು ಸದ್ಯ ಮಾನವ ನಿರ್ಮಿತ ತಪ್ಪುಗಳಿಂದಾಗಿ ತನ್ನ ಸಾಮರ್ಥ್ಯ ಕಳೆದುಕೊಳ್ಳುತ್ತಿದೆ. ವಾಯು ಮಾಲಿನ್ಯ ಮತ್ತು ಪರಿಸರ ನಾಶದಿಂದಾಗಿ ರಕ್ಷಣಾ ಕವಚ ಕಳೆಗುಂದುತ್ತಿದೆ.
ಓಝೋನ್' ('O3 ), ಅಥವಾ ಟ್ರೈಆಕ್ಸಿಜನ್ ಎಂಬುದು ಒಂದು ತ್ರಿಪರಮಾಣ್ವಕ ಅಣುವಾಗಿದ್ದು, ಮೂರು ಆಮ್ಲಜನಕ ಪರಮಾಣುಗಳನ್ನು ಇದು ಒಳಗೊಂಡಿದೆ. ದ್ವಿಪರಮಾಣ್ವಕ ಭಿನ್ನರೂಪಕ್ಕಿಂತ (O2) ಸಾಕಷ್ಟು ಕಡಿಮೆ ಸ್ಥಿರವಾಗಿರುವ ಆಮ್ಲಜನಕದ ಒಂದು ಭಿನ್ನರೂಪ ಇದಾಗಿದೆ. ಕೆಳಮಟ್ಟದ ವಾತಾವರಣದಲ್ಲಿರುವ ಓಝೋನ್ ಒಂದು ವಾಯು ಮಾಲಿನ್ಯಕಾರಕವಾಗಿದ್ದು, ಪ್ರಾಣಿಗಳ ಉಸಿರಾಟದ ವ್ಯವಸ್ಥೆಗಳ ಮೇಲೆ ಇದು ಅಪಾಯಕಾರಿ ಪರಿಣಾಮಗಳನ್ನು ಬೀರುತ್ತದೆ ಮತ್ತು ಸೂಕ್ಷ್ಮ ಸ್ವಭಾವದ ಸಸ್ಯಗಳನ್ನು ಸುಡುತ್ತದೆ; ಆದಾಗ್ಯೂ, ಮೇಲುಮಟ್ಟದ ವಾತಾವರಣದಲ್ಲಿನ ಓಝೋನ್ ಪದರವು ಪ್ರಯೋಜನಕಾರಿಯಾಗಿದ್ದು, ಹಾನಿಕಾರಕ ನೇರಳಾತೀತ ಬೆಳಕು ಭೂಮಿಯ ಮೇಲ್ಮೈಯನ್ನು ತಲುಪುವುದನ್ನು ಸಮರ್ಥವಾಗಿ ತಡೆಗಟ್ಟುತ್ತದೆ.
ವಂದೇ ಮಾತರಂ ಪಶ್ಚಿಮ ಬಂಗಾಳದ ಪ್ರಮುಖ ಲೇಖಕ ಮತ್ತು ಕವಿ ಬಂಕಿಮಚಂದ್ರ ಚಟರ್ಜಿ ರಚಿಸಿದ, ಹಾಡು. ಆದರೆ ಕನ್ನಡದ ಪ್ರಮುಖ ಕಥೆಗಾರ ಶಂಕರ ಬೈಚಬಾಳ ಅವರ ವಂದೇ ಮಾತರಂ-ಸಲೀಂ- ಕೃತಿ ಬ್ರಿಟಿಷರ ಕಾಲದಲ್ಲಿ ರಾಷ್ಟ್ರದ ಜನತೆಗೆ ಸ್ವಾತಂತ್ರ್ಯದ ಜಾಗೃತಿಯನ್ನುಂಟು ಮಾಡಿದ ಕದನ ಕೃತಿಯಾಗಿದೆ. ಚಟ್ಟೊ ಉಪಾದ್ಯಾಯರ ಹಾಡು ರಾಷ್ಟ್ರಗೀತೆಯಾಗುವ ಎಲ್ಲ ಅಂಶ, ಅರ್ಹತೆಗಳಿದ್ದರೂ, ರವೀಂದ್ರನಾಥ ಟಾಗೋರ್ ರ ಜನಗಣ ಮನ ಕೃತಿಗೆ ಆ ಪಟ್ಟ ದೊರಕಿತು.
ಸಂಗಾತಿಯಿಲ್ಲದೆ ಏಕಾಂತದಲ್ಲಿ ಲೈಂಗಿಕ ಇಚ್ಛೆಗಳನ್ನು, ವಾಂಛೆಗಳನ್ನು ಈಡೇರಿಸಿಕೊಳ್ಳಲು ಸ್ವತಃ ತಮ್ಮ ಕೈಯಿಂದ ತಮ್ಮ ಜನನಾಂಗ ಉದ್ರೇಕಿಸಿ ಲೈಂಗಿಕ ಪರಾಕಾಷ್ಠೆ ತಲುಪಿ ಸ್ರವಿಸುವುದನ್ನು ಹಸ್ತಮೈಥುನ ಎನ್ನಲಾಗುತ್ತದೆ. ಒಬ್ಬ ವ್ಯಕ್ತಿ ಲೈಂಗಿಕವಾಗಿ ಉದ್ರೇಕವಾದಾಗ ಸಂಗಾತಿ ಸನಿಹದಲ್ಲಿಲ್ಲದಿದ್ದಾಗ ಅಥವಾ ಲೈಂಗಿಕ ಕ್ರಿಯೆ ನಡೆಸಲು ಅವಕಾಶವಿಲ್ಲದಿದ್ದಾಗ ಸ್ವತಃ ತಮ್ಮ ಕೈಗಳಿಂದ ಅಥವಾ ಲೈಂಗಿಕ ಆಟಿಕೆಗಳಿಂದ ತಮ್ಮ ಜನನಾಂಗಗಳನ್ನು ಮುಟ್ಟಿಕೊಳ್ಳುತ್ತಾ ಉದ್ರೇಕಿಸಿಕೊಂಡು ಸ್ರವಿಸಬಹುದು. ಹಸ್ತಮೈಥುನ ಮನುಷ್ಯರಲ್ಲಿ ಕಂಡುಬರುವ ಒಂದು ಲೈಂಗಿಕ_ಕ್ರಿಯೆ ಎನ್ನಲಾಗದು.
ಟೆಂಪ್ಲೇಟು:Infobox ಜಿಲ್ಲೆಕಲಬುರಗಿ ಜಿಲ್ಲೆ, ಹಿಂದೆ ಗುಲ್ಬರ್ಗಾ ಜಿಲ್ಲೆ ಎಂದು ಕರೆಯಲಾಗುತ್ತಿತ್ತು, ದಕ್ಷಿಣ ಭಾರತದ ಕರ್ನಾಟಕ ರಾಜ್ಯದ 31 ಜಿಲ್ಲೆಗಳಲ್ಲಿ ಒಂದಾಗಿದೆ. ಕಲಬುರಗಿ ನಗರವು ಜಿಲ್ಲೆಯ ಆಡಳಿತ ಕೇಂದ್ರವಾಗಿದೆ. ಈ ಜಿಲ್ಲೆ ಕಲಬುರಗಿ ವಿಭಾಗದ ಕೇಂದ್ರವಾಗಿದೆ.ಕಲಬುರಗಿವು ಕರ್ನಾಟಕದ ಎರಡನೇ ದೊಡ್ಡ ಜಿಲ್ಲೆ ಎಂದು ಗುರುತಿಸಿಕೊಂಡಿದೆ.ಇದು ಒಂದು ಕರ್ನಾಟಕದ ಕಂದಾಯ ವಿಭಾಗವಾಗಿದೆ.
ಕೆ.ಪಿ.ಪೂರ್ಣಚಂದ್ರ ತೇಜಸ್ವಿ(ಸೆಪ್ಟೆಂಬರ್ ೮ ೧೯೩೮ - ಏಪ್ರಿಲ್ ೫ ೨೦೦೭) - ಕನ್ನಡದ ಪ್ರಮುಖ ಸಾಹಿತಿಗಳಲ್ಲೊಬ್ಬರು. ತೇಜಸ್ವಿ ಅವರು ರಾಷ್ಟ್ರಕವಿ ಕುವೆಂಪು ಮತ್ತು ಹೇಮಾವತಿ ಅವರ ಪುತ್ರ ಹಾಗೂ ಕನ್ನಡ ನವ್ಯ ಸಾಹಿತ್ಯದ ಪ್ರಮುಖ ಲೇಖಕ ಹಾಗೂ ಸ್ವತಂತ್ರ ಪ್ರವೃತ್ತಿಯ ಬರಹಗಾರರು. ನವ್ಯ ಸಾಹಿತ್ಯದ ಕಾಲಘಟ್ಟದಲ್ಲಿ ಪ್ರಮುಖವಾಗಿ ಕೇಳಿ ಬಂದ ಹೆಸರು, ಅಬಚೂರಿನ ಪೋಸ್ಟಾಫೀಸು ಕಥಾ ಸಂಕಲನದ ಮೂಲಕ ಬಂಡಾಯ ಸಾಹಿತ್ಯವನ್ನು ಪ್ರಾರಂಭಿಸಿದರು.
ಭಾರತದ ಅವಿಭಾಜ್ಯ ಅಂಗವಾಗಿರುವ ಕರ್ನಾಟಕದಲ್ಲಿ ಭಾರತೀಯ ಸಂಸ್ಕೃತಿಯ ಪರಂಪರೆಯಲ್ಲಿರುವ ಎಲ್ಲ ಹಬ್ಬಗಳೂ ಸಾಮಾನ್ಯವಾಗಿ ಆಚರಣೆಯಲ್ಲಿವೆ. ಅಲ್ಲದೆ ಹಲವು ಮತ ಪಂಥಗಳ ಜನರು ಶತಶತಮಾನಗಳಿಂದ ಇಲ್ಲಿ ನೆಲೆಸಿರುವ ಕಾರಣ ಅವರ ಹಬ್ಬಗಳೂ ಆಚರಣೆಯಲ್ಲಿವೆ. ಮುಸಲ್ಮಾನರ ಈದ್ಮಿಲಾದ್, ಮೊಹರಂ, ರಂಜಾನ್ ಮುಂತಾದವು; ಕ್ರಿಶ್ಚಿಯನ್ನರ ಈಸ್ಟರ್ ಹಾಗೂ ಕ್ರಿಸ್ಮಸ್ ; ಜೈನರ ಮಹಾವೀರ ಜಯಂತಿ ; ಬೌದ್ಧರ ಬುದ್ಧ ಜಯಂತಿ; ಶೈವರ ಬಸವಣ್ಣನವರ ಜಯಂತಿ ; ಮಾಧ್ವರ ಮಧ್ವನವಮೀ ; ರಾಮಾನುಜರ ತಿರುನಕ್ಷತ್ರಗಳು ಕನಕದಾಸ ಜಯಂತಿ- ಮುಂತಾದುವು ಮುಖ್ಯವಾದವು.
ಶ್ರೀ ಕನಕದಾಸರು[ಮೂಲ ಹೆಸರು -ತಿಮ್ಮಪ್ಪನಾಯಕ] (1508-1606) ಕರ್ನಾಟಕದಲ್ಲಿ ೧೫-೧೬ ನೆಯ ಶತಮಾನಗಳಲ್ಲಿ ಜನಪ್ರಿಯವಾದ ಭಕ್ತಿ ಪಂಥದ ಮುಖ್ಯ ಹರಿದಾಸರಲ್ಲಿ ಒಬ್ಬರು. ದಾಸ ಪರಂಪರೆಯಲ್ಲಿ ಬರುವ 250ಕ್ಕೂ ಹೆಚ್ಚು ದಾಸರಲ್ಲಿ ಕನಕದಾಸರೊಬ್ಬರೇ ಕೆಳ ಪಂಗಡದ ದಾಸರು. ಹಾಗೆಯೇ ಕನ್ನಡ ಭಾಷೆಯ ಪ್ರಸಿದ್ಧ ಕೀರ್ತನಕಾರರು, ಮತ್ತು ಪುರಂದರದಾಸರೊಂದಿಗೆ ಕರ್ನಾಟಕ ಸಂಗೀತದ ಮೂಲಭೂತ ಸಿದ್ಧಾಂತಗಳಿಗೆ ಕಾಣಿಕೆಯನ್ನಿತ್ತವರು.
ಸ್ವಾಮಿ ವಿವೇಕಾನಂದ (ನರೇಂದ್ರನಾಥ ದತ್ತ) (ಜನವರಿ ೧೨, ೧೮೬೩ - ಜುಲೈ ೪, ೧೯೦೨) ಭಾರತದ ಅತ್ಯಂತ ಪ್ರಸಿದ್ಧ ಮತ್ತು ಪ್ರಭಾವಶಾಲಿ ತತ್ತ್ವಜ್ಞಾನಿಗಳಲ್ಲಿ ಒಬ್ಬರು. ನಿರ್ಭಯತೆ, ಆಶಾವಾದ ಮತ್ತು ಸಾಮಾಜಿಕ ಸಮಸ್ಯೆಗಳ ಬಗೆಗಿನ ವಿಶಾಲ ದೃಷ್ಟಿಯ ಸಂಕೇತವಾಗಿ ಅವರು ಪರಿಗಣಿತರಾಗಿದ್ದಾರೆ. ಸ್ವಾಮಿ ವಿವೇಕಾನಂದರ ಜನ್ಮ ದಿನವಾದ ಜನವರಿ ೧೨ ರಂದು ರಾಷ್ಟ್ರೀಯ "ಯುವದಿನ"ವೆಂದು ಆಚರಿಸಲಾಗುತ್ತದೆ.
ಇವರನ್ನು ದೇವರ ದಾಸಿಮಯ್ಯ, ಜೇಡರ ದಾಸಿಮಯ್ಯ ಎಂದು ಎರಡು ರೀತಿಯಲ್ಲಿ ಆದ್ಯಪ್ರವರ್ತಕನೆಂದು ಗುರುತಿಸಲಾಗುತ್ತದೆಯಾದರೂ, ಈ ಇಬ್ಬರು ಬೇರೆಯೇ ಎಂಬ ಅಭಿಪ್ರಾಯ, ಚರ್ಚೆಯನ್ನು ಸಾಕಷ್ಟು ವಿದ್ವಾಂಸರು ವ್ಯಕ್ತಪಡಿಸಿರುವರಾದರೂ, ಇಬ್ಬರನ್ನು ಇನ್ನು ಬೇರೆ, ಬೇರೆಯಾಗಿ ನೋಡಲು ಸಾಧ್ಯವಾಗಿಲ್ಲ. ವೃತ್ತಿಯಲ್ಲಿ ನೆಯ್ಗೆಕಾರನಾದ ದಾಸಿಮಯ್ಯನವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವಭಕ್ತಿ ಮೆರೆದಂತೆ ಐತಿಹ್ಯ ಪುರಾಣಗಳಲ್ಲಿ ಉಲ್ಲೇಖಗಳು ಸಿಗುತ್ತವೆ. ದುಗ್ಗಲೆಯೆಂಬ ಶರಣೆಯೊಂದಿಗೆ ಸಂಸಾರಿಯೂ ಆಗಿದ್ದ ಜೇಡರ ದಾಸಿಮಯ್ಯರನ್ನೇ ಮೊದಲ ವಚನಕಾರರೆಂದು ಗುರುತಿಸಲಾಗುತ್ತದೆ.
ನಾಲ್ವಡಿ ಕೃಷ್ಣರಾಜ ಒಡೆಯರು (ಜೂನ್ ೪, ೧೮೮೪ - ಆಗಸ್ಟ್ ೩, ೧೯೪೦) ಮೈಸೂರು ಸಂಸ್ಥಾನದ ಒಡೆಯರ್ ರಾಜಸಂತತಿಯ ೨೪ನೇ ರಾಜರು. ಇವರ ಆಳ್ವಿಕೆ ೧೯೦೨ ರಿಂದ ೧೯೪೦ ರವರೆಗೆ ನಡೆಯಿತು. ನಾಲ್ವಡಿ ಕೃಷ್ಣರಾಜ ಒಡೆಯರು ೧೮೯೫ರಲ್ಲಿ ಪಟ್ಟಾಭಿಷಿಕ್ತರಾದರೂ ಸಹ, ಕೇವಲ ೧೦ ವರ್ಷದ ಬಾಲಕರಾಗಿದ್ದುದರಿಂದ ಅವರ ತಾಯಿಯವರಾದ, ಮಾತೃಶ್ರೀ ಮಹಾರಾಣಿ ವಾಣಿ ವಿಲಾಸ ಸನ್ನಿಧಾನ ದವರು ರೀಜೆಂಟರಾಗಿ ಆಡಳಿತ ನಿರ್ವಹಣೆ ಮಾಡಿದರು.
ಜನಪದ ಎಂಬ ಪದವು ಜನ - ಜನರು ಅಥವಾ ಬುಡಕಟ್ಟು ಪದ - ಎಂಬ ಎರಡು ಪದಗಳಿಂದ ರೂಪುಗೊಂಡಿದೆ - ಒಂದು ರೀತಿಯ ಸಣ್ಣ ಪದ್ಯವು ಸಂಧಿ - ವ್ಯಾಕರಣ ಪದವಾಗಿ ಸೇರಿಕೊಂಡಿದೆ. ಕನ್ನಡಿಗ ಮತ್ತು ಬಹುಶಃ ತೆಲುಗು ಜನರ ಜಾನಪದ ಸಂಸ್ಕೃತಿ ಮತ್ತು ಆಡುಮಾತಿನ ಭಾಷೆಯು ,ಭಾಷೆಗಳು ಅಸ್ತಿತ್ವಕ್ಕೆ ಬಂದ ಸಮಯದಿಂದ ಈ ಹೆಸರಿನಿಂದ ಕರೆಯಲ್ಪಡುತ್ತಿತ್ತು. ಜಾನಪದ : ಭಾರತ ದೇಶದಲ್ಲೇ ನಮ್ಮ ಕರ್ನಾಟಕದ ಜಾನಪದ ಸಂಸ್ಕೃತಿ ಅತ್ಯಂತ ಶ್ರೀಮಂತವಾಗಿದೆ.
ಕರ್ನಾಟಕದ ಏಕೀಕರಣ ಭಾರತದ ರಾಜ್ಯ ಕರ್ನಾಟಕವನ್ನು ರೂಪಿಸುತ್ತದೆ, ೧೯೫೬ರಲ್ಲಿ ಕನ್ನಡ ಭಾಷೆ ಮಾತನಾಡುವ ಪ್ರದೇಶಗಳನ್ನು ೪ ಭಾಗಗಳನ್ನು ಮೈಸೂರು ಸಂಸ್ಥಾನದೊಂದಿಗೆ ವಿಲೀನಗೊಳಿಸಿದ ಪ್ರಕ್ರಿಯೆ ಮತ್ತು ಮೈಸೂರು ರಾಜ್ಯ ಎಂದು ಹೆಸರಿಸಲ್ಪಟ್ಟವು. ದಶಕಗಳ ಹಿಂದೆ, ಬ್ರಿಟಿಷ್ ಆಳ್ವಿಕೆಯಲ್ಲಿ ಕನ್ನಡ ಜನಸಂಖ್ಯಾಶಾಸ್ತ್ರದ ಆಧಾರದ ಮೇಲೆ ರಾಜ್ಯದ ಮೊದಲ ಬೇಡಿಕೆಗಳನ್ನು ಮಾಡಲಾಗಿತ್ತು.
ಮಹಾಭಾರತ ಮತ್ತು ರಾಮಾಯಣ ಪ್ರಾಚೀನ ಭಾರತದ ಎರಡು ಪ್ರಮುಖ ಸಂಸ್ಕೃತ ಮಹಾಕಾವ್ಯವಾಗಿದ್ದು ಇವುಗಳನ್ನು ಹಿಂದೂ ಧರ್ಮದಲ್ಲಿ ಪೂಜಿಸುತ್ತಾರೆ. ಮಹಾಭಾರತ ಇದು ಕುರುಕ್ಷೇತ್ರ ಯುದ್ಧದ ಘಟನೆಗಳು ಮತ್ತು ನಂತರದ ಘಟನೆಗಳನ್ನು ವಿವರಿಸುತ್ತದೆ, ಇದು ರಾಜಮನೆತನದ ಸೋದರ ಸಂಬಂಧಿಗಳ ಎರಡು ಗುಂಪುಗಳಾದ ಕೌರವರು ಮತ್ತು ಪಾಂಡವರ ನಡುವಿನ ಉತ್ತರಾಧಿಕಾರದ ಯುದ್ಧವಾಗಿದೆ. ಮಹಾಭಾರತ ಭಾರತದ ಧಾರ್ಮಿಕ, ತಾತ್ವಿಕ ಹಾಗೂ ಪೌರಾಣಿಕ ಮಹಾಕಾವ್ಯಗಳಲ್ಲಿ ಒಂದು.
ಜ್ಞಾನಪೀಠ ಪ್ರಶಸ್ತಿ ಭಾರತದ ಸಾಹಿತಿಗಳಿಗೆ ಸಲ್ಲುವ ಅತ್ಯಂತ ಪ್ರತಿಷ್ಠಿತ ಪ್ರಶಸ್ತಿ. ಈ ಪ್ರಶಸ್ತಿಯು ಭಾರತದ ಸಂವಿಧಾನದ ಎಂಟನೇ ಅನುಸೂಚಿಗಳಲ್ಲಿ ಉಲ್ಲೇಖವಾಗಿರುವ ೨೨ ಭಾಷೆಗಳ ಅತ್ಯುತ್ತಮ ಸಾಹಿತ್ಯ ಕೃತಿಯನ್ನು ಅಥವಾ ಸಮಗ್ರ ಸಾಹಿತ್ಯದ ಕೊಡುಗೆಯನ್ನು ನೀಡಿದ ಭಾರತೀಯ ನಾಗರಿಕನಿಗೆ ಲಭಿಸುವುದು. ಸಾಹು ಜೈನ್ ಪರಿವಾರದವರು, ಈ ಪ್ರಶಸ್ತಿಯನ್ನು ಮೇ ೨೨, ೧೯೬೧ ರಲ್ಲಿ ಸ್ಥಾಪಿಸಿದರು.
ಗಾದೆಗಳು ಜನಜನಿತವಾದ ಅನುಭವಿಗಳಿಂದ ನುಡಿಯಲ್ಪಟ್ಟ ಸತ್ಯವಾಕ್ಯಗಳು. ಹಲವು ಬಾರಿ ಈ ವಾಕ್ಯಗಳು ರೂಪಕ, ಉಪಮೆ, ದೀಪಕ, ಅಲಂಕಾರಗಳಾಗಿರುತ್ತವೆ. ಉದಾಹರಣೆಗೆ: ಅತಿಆಸೆ ಗತಿ ಗೇಡು ಕುಂಬಾರನಿಗೆ ವರುಷ,ದೊಣ್ಣೆಗೆ ನಿಮಿಷ, ಬೆಕ್ಕಿನ ತಲೀ ಮ್ಯಾಲ ದೀಪ ಇಟ್ಹಾಂಗ, ಹೊಳೆಗೆ ಸುರಿದರೂ ಅಳೆದು ಸುರಿಯಬೇಕು, ಕೈ ಕೆಸರಾದರೆ ಬಾಯಿ ಮೊಸರು.(English translation: If you get your hands dirty in the mud, you will get food.
ಜವಾಹರಲಾಲ್ ನೆಹರು (14 ನವೆಂಬರ್ 1889 - 27 ಮೇ 1964)((ನವೆಂಬರ್ ೧೪, ೧೮೮೯ - ಮೇ ೨೭, ೧೯೬೪)) ಒಬ್ಬ ಸ್ವಾತಂತ್ರ್ಯ ಹೋರಾಟಗಾರರು, ಭಾರತದ ಮೊದಲ ಪ್ರಧಾನಿ ಮತ್ತು ಭಾರತದ ಸ್ವಾತಂತ್ರ್ಯ ಮೊದಲು ಮತ್ತು ನಂತರ ರಾಜಕೀಯದಲ್ಲಿ ಕೇಂದ್ರ ವ್ಯಕ್ತಿ. ಅವರು ಮಹಾತ್ಮ ಗಾಂಧಿಯವರ ಮಾರ್ಗದರ್ಶನದಡಿಯಲ್ಲಿ ಭಾರತೀಯ ಸ್ವಾತಂತ್ರ್ಯ ಚಳವಳಿಯಲ್ಲಿ ಒಬ್ಬ ನಾಯಕನಾಗಿ ಹೊರಹೊಮ್ಮಿದರು.,ಭಾರತ ಸ್ವಾತಂತ್ರ್ಯ ಬಂದ ನಂತರ 1947ರಲ್ಲಿ ಭಾರತ ಸ್ವತಂತ್ರ ರಾಷ್ಟ್ರವಾಗಿ ಸ್ಥಾಪನೆಯಾದಂದಿನಿಂದ 1964 ರಲ್ಲಿ ಅವರ ಮರಣದವರೆಗೂ ಭಾರತದ ಪ್ರಧಾನ ಮಂತ್ರಿಯಾಗಿ ಸೇವೆ ಸಲ್ಲಿಸಿದರು. ಇವರು ಸ್ವಾತಂತ್ರ್ಯ ಹೋರಾಟಗಾರ ಮೋತಿಲಾಲ್ ನೆಹರೂ ಅವರ ಮಗ.
ಒಂದು ರಾಜಕ ಸಂಸ್ಥಾನ ಅಥವಾ ರಾಜಕ ರಾಜ್ಯ (ಆಂಗ್ಲದಲ್ಲಿ ಪ್ರಿನ್ಸ್ಲಿ ಸ್ಟೇಟ್ (Princely State)) ಅಥವಾ ಪಠ್ಯಪುಸ್ತಕಗಳಲ್ಲಿ ದೇಶೀಯ ಸಂಸ್ಥಾನವು (ಆಂಗ್ಲದಲ್ಲಿ ನೇಟಿವ್ ಸ್ಟೇಟ್ (Native State)) ಬ್ರಿಟಿಷ್ ಭಾರತೀಯ ಸಾಮ್ರಾಜ್ಯದ ನಾಮಮಾತ್ರದ ಸಾರ್ವಭೌಮ ಘಟಕವಾಗಿದ್ದ, ಮತ್ತು ಪರೋಕ್ಷವಾಗಿ ಆಳಲಾದ ಭಾರತೀಯ ಸಂಸ್ಥಾನ. ಆಡಳಿತಗಾರರಿಂದ, ಈ ಸಂಸ್ಥಾನಗಳನ್ನು ಸಹಕಾರಿ ಮಿತ್ರತ್ವ ಮತ್ತು ಬ್ರಿಟಿಷ್ ಕಿರೀಟದ ಅಧಿಪತ್ಯ ಅಥವಾ ಪರಮಾಧಿಕಾರದ ಮೂಲಕ ಬ್ರಿಟಿಷರು ಆಳುತ್ತಿದರು. ಜುಲೈ 1946 ರಲ್ಲಿ, ಪ್ರಧಾನ ಮಂತ್ರಿ ಜವಾಹರಲಾಲ್ ನೆಹರು ಅವರು ಸ್ವತಂತ್ರ ಭಾರತದ ಸೈನ್ಯದ ವಿರುದ್ಧ ಯಾವುದೇ ರಾಜಕ ಸಂಸ್ಥಾನವು ಸೇನಾಬಲದಲ್ಲಿ ಮೇಲುಗೈ ಸಾಧಿಸಲು ಸಾಧ್ಯವಿಲ್ಲ ಎಂದು ನಿಶ್ಚಿತಗೊಳಿಸಿದರು.
ಪ್ರಮುಖವಾಗಿ ಕನ್ನಡ ವ್ಯಾಕರಣವು ಕೇಶೀರಾಜನ ಶಬ್ದಮಣಿದರ್ಪಣದ (ಕ್ರಿ.ಶ. ೧೨೬೦) ಮೇಲೆ ಆಧರಿಸಿದೆ. ಈ ಗ್ರಂಥವು ಕನ್ನಡ ಭಾಷೆಯನ್ನು ಸವಿವರವಾಗಿ ಪರಿಚಯಿಸುತ್ತದೆ.(kannada vyakarana) ಈ ಗ್ರಂಥವನ್ನು ಹೊರತುಪಡಿಸಿ ಕನ್ನಡ ವ್ಯಾಕರಣದ ಬಗ್ಗೆ ೯ನೇ ಶತಮಾನದ ಕವಿರಾಜಮಾರ್ಗ (ಅಲಂಕಾರಗಳ ಬಗ್ಗೆ ಉಲ್ಲೇಖವಿದೆ) ಹಾಗೂ ೨ನೇ ನಾಗವರ್ಮನ (೧೨ನೇ ಶತಮಾನದ ಮೊದಲಾರ್ಧದಲ್ಲಿ) ಕಾವ್ಯಲೋಕನ ಹಾಗೂ ಕರ್ನಾಟಕಭಾಷಾಭೂಷಣಗಳಲ್ಲಿ ಉಲ್ಲೇಖವಿದೆ.
ಸಾಲುಮರದ ತಿಮ್ಮಕ್ಕ (೩೦ ಜೂನ್ ೧೯೧೧ – ೧೪ ನವೆಂಬರ್ ೨೦೨೫) ಇವರು ಕರ್ನಾಟಕದಲ್ಲಿ ಜನಿಸಿ ನೆಲೆಸಿದ್ದ ಒಬ್ಬ ಭಾರತೀಯ ಪರಿಸರವಾದಿ. ತಮಗೆ ಮಕ್ಕಳಿಲ್ಲದ ಕಾರಣಕ್ಕೆ ರಸ್ತೆಯ ಬದಿಯಲ್ಲಿ ನೂರಾರು ಆಲದ ಸಸಿಗಳನ್ನು ನೆಟ್ಟು ಅವುಗಳನ್ನೇ ಮಕ್ಕಳಂತೆ ಭಾವಿಸಿ ಬೆಳೆಸಿದಾಕೆ. ಅನಕ್ಷರಸ್ಥೆಯಾಗಿದ್ದರೂ ಪರಿಸರ ಸಂರಕ್ಷಣೆಯಲ್ಲಿ ಮಹತ್ತರ ಕಾರ್ಯ ಮಾಡಿದುದನ್ನು ಹಲವಾರು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳು ಗಮನಿಸಿ ಪುರಸ್ಕರಿಸಿವೆ.